ಮಡಿಕೇರಿ ಸೆ.2 NEWS DESK : ಎರಡು ದಿನಗಳ ಕಾಲ ಕುಶಾಲನಗರದ ಜಂಪ್ ಸ್ಮಾಶ್ ಒಳಾಂಗಣ ಕ್ರೀಡಾಂಗಣದಲ್ಲಿ ಗೌರಿ ಗಣೇಶ ಹಬ್ಬದ ಅಂಗವಾಗಿ ಹಮ್ಮಿಕೊಂಡಿದ್ದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಜಯರಾಜ್ ಹಾಗೂ ರಫೀಕ್ ಮಾಲೀಕತ್ವದ ಜಂಪ್ ಸ್ಮಾಶ್ ತಂಡ ಮೊದಲ ಬಹುಮಾನ 50 ಸಾವಿರ ಹಾಗೂ ಆಕರ್ಷಕ ಟ್ರೋಫಿಯನ್ನು ತನ್ನದಾಗಿಸಿಕೊಂಡಿತು. ಸೋಮು ಹಾಗೂ ನಿರಂಜನ್ ಮಾಲೀಕತ್ವದ ಗೋಲ್ಡನ್ ರಾಕೆಟ್ಸ್ ತಂಡ ದ್ವಿತೀಯ ಬಹುಮಾನ 30 ಸಾವಿರ ನಗದು ಹಾಗೂ ಆಕರ್ಷಕ ಟ್ರೋಫಿ ಪಡೆದರೆ, ಕಾಫಿ ಮಹೇಶ್ ಮಾಲೀಕತ್ವದ ಕಾವೇರಿ ತಂಡ 20 ಸಾವಿರ ಹಾಗೂ ಆಕರ್ಷಕ ಟ್ರೋಫಿಗೆ ತೃಪ್ತಿಪಟ್ಟಿತು. ಎರಡು ದಿನಗಳ ಕಾಲ ನಡೆದ ಪಂದ್ಯಾವಳಿಯಲ್ಲಿ ಒಟ್ಟು ಏಳು ತಂಡಗಳ 91 ಆಟಗಾರರು ಹಣಾಹಣಿಯಲ್ಲಿ ಪಾಲ್ಗೊಂಡಿದ್ದರು. ಆಟಗಾರರಾದ ಶಿವು, ಆಕಾಶ್ ತಂಡ ಪಂದ್ಯಾವಳಿಯನ್ನು ಆಯೋಜಿಸಿತ್ತು.
ಲೇಖಕ: admin
ಮಡಿಕೇರಿ ಸೆ.2 NEWS DESK : ಗೋಣಿಕೊಪ್ಪಲಿನ ವೈಸ್ ಮೆನ್ ಕ್ಲಬ್ ವತಿಯಿಂದ ಸೆ.15 ರಂದು ವಿರಾಜಪೇಟೆಯ ಸಂತ ಅನ್ನಮ್ಮ ಶಾಲಾ ಆವರಣದಲ್ಲಿ ದ್ವಿತೀಯ ವರ್ಷದ ರಾಜ್ಯ ಮಟ್ಟದ ಚದುರಂಗ ಸ್ಪರ್ಧೆಯನ್ನು ಆಯೋಜಿಸಲಾಗಿದೆ ಎಂದು ಕ್ಲಬ್ ಅಧ್ಯಕ್ಷÀ ಕಾಣತಂಡ ಜಗದೀಶ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಪಂದ್ಯಾವಳಿಯಲ್ಲಿ 300 ಕ್ಕೂ ಹೆಚ್ಚಿನ ಸ್ಪರ್ಧಿಗಳು ಪಾಲ್ಗೊಳ್ಳುವ ನಿರೀಕ್ಷೆ ಇದೆ. ಕಳೆದ ಸಾಲಿನಲ್ಲಿ 180 ಸ್ಪರ್ಧಿಗಳು ಪಾಲ್ಗೊಂಡಿದ್ದರು ಎಂದರು. ಕ್ಲಬ್ನ ಯೋಜನಾ ನಿರ್ದೇಶಕ ಬಿ.ಜೆ.ಬೋಪಣ್ಣ ಅವರು ಮಾತನಾಡಿ ಚೆಸ್ ಪಂದ್ಯಾವಳಿ 13 ವರ್ಷದೊಳಗಿನ ಮಕ್ಕಳ ಪ್ರಥಮ ವಿಭಾಗ (ಪ್ರವೇಶ ಶುಲ್ಕ 400 ರೂ.,), 13 ರಿಂದ 18 ವರ್ಷದೊಳಗಿನ ದ್ವಿತೀಯ ವಿಭಾಗ (ಪ್ರವೇಶ ಶುಲ್ಕ 500 ರೂ.) ಮತ್ತು ಮುಕ್ತ ತೃತೀಯ ವಿಭಾಗ (ಪ್ರವೇಶ ಶುಲ್ಕ 700ರೂ.) ಗಳಲ್ಲಿ ನಡೆಯಲಿದೆ ಎಂದು ತಿಳಿಸಿದರು. ಸ್ಪರ್ಧೆಯ ದಿನದಂದು ಬೆಳಗ್ಗೆ 8.30ಕ್ಕೆ ಸ್ಪರ್ಧಿಗಳು ಸಂತ ಅನ್ನಮ್ಮ ಶಾಲಾ ಆವರಣದಲ್ಲಿದ್ದು, ಶುಲ್ಕ ಪಾವತಿಸಿ ನೋಂದಾಯಿಸಿಕೊಳ್ಳಬೇಕು ಮತ್ತು ಸ್ಪರ್ಧಿಗಳು…
ಮಡಿಕೇರಿ ಸೆ.2 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕೊಡಗು ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯಿಂದ ರಾಷ್ಟ್ರೀಯ ಕ್ರೀಡಾ ದಿನಾಚರಣೆಯ ಅಂಗವಾಗಿ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಮಡಿಕೇರಿಯ ಜನರಲ್ ತಿಮ್ಮಯ್ಯ ಶಾಲೆಯ ವಿದ್ಯಾರ್ಥಿ ರಾಝಿನ್ ರುಶ್ಧಿ ಸಿಂಗಲ್ಸ್ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ಟ್ರೋಫಿಯನ್ನು ಗೆದ್ದುಕೊಂಡಿದ್ದಾನೆ. ಮಡಿಕೇರಿಯ ರಿಯಾಝ್ ಬುಶ್ರಾ ದಂಪತಿಗಳ ಪುತ್ರನಾದ ರಾಝಿನ್ ರುಶ್ಧಿ ಕ್ರೀಡಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವ ಮೂಲಕ ಹಲವು ಪ್ರಶಸ್ತಿಗಳನ್ನು ಗೆದ್ದುಕೊಂಡಿದ್ದಾನೆ.
ಕುಶಾಲನಗರ ಸೆ.2 NEWS DESK : ಮಂಡ್ಯದಲ್ಲಿ ನಡೆಯಲಿರುವ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರನ್ನಾಗಿ ಹಿರಿಯ ಸಾಹಿತಿ ಗೊ.ರು.ಚನ್ನಬಸಪ್ಪ ಅವರನ್ನು ಆಯ್ಕೆ ಮಾಡಬೇಕೆಂದು ಕೊಡಗು ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ಪದಾಧಿಕಾರಿಗಳು ಒತ್ತಾಯಿಸಿದ್ದಾರೆ. ಕನ್ನಡ ಸಾಹಿತ್ಯ, ಕಲೆ, ಪರಂಪರೆ ಹಾಗೂ ಸಂಸ್ಕೃತಿಗಳನ್ನು ಬೆಳೆಸುವಲ್ಲಿ ಮತ್ತು ವಚನ ಸಾಹಿತ್ಯವನ್ನು ಸದೃಢಗೊಳಿಸುವ ನಿಟ್ಟಿನಲ್ಲಿ ಗೊ.ರು.ಚನ್ನಬಸಪ್ಪ ಸಾಕಷ್ಟು ಶ್ರಮಿಸಿರುವ ನಾಡು ಕಂಡ ಹಿರಿಯ ಸಾಹಿತಿಯಾಗಿದ್ದಾರೆ. ಅಲ್ಲದೇ ರಾಜ್ಯದಲ್ಲಿ ಜನಪದ ಸಾಹಿತ್ಯವನ್ನು ಶ್ರೀಮಂತಗೊಳಿಸುವ ನಿಟ್ಟಿನಲ್ಲಿ ಜಾನಪದ ಪರಿಷತ್ ಅಧ್ಯಕ್ಷರಾಗಿ ದುಡಿದಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷರಾಗಿ, ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ರಾಷ್ಟ್ರಾಧ್ಯಕ್ಷರಾಗಿಯೂ ಅಪಾರ ಸೇವೆ ಸಲ್ಲಿಸಿರುವ ಹಿರಿಯ ಸಾಹಿತಿ ಗೊ.ರು.ಚನ್ನಬಸಪ್ಪ ಅವರನ್ನು ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಸರ್ವಾನುಮತದಿಂದ ಆಯ್ಕೆ ಮಾಡಬೇಕೆಂದು ಶಸಾಪ ಜಿಲ್ಲಾಧ್ಯಕ್ಷ ಕೆ.ಎಸ್.ಮೂರ್ತಿ ಒತ್ತಾಯಿಸಿದ್ದಾರೆ.
ಸಿದ್ದಾಪುರ ಸೆ.2 NEWS DESK : ನೈಮ ಎಜುಕೇಶನಲ್ & ವೆಲ್ಫೇರ್ ಚಾರಿಟಬಲ್ ಟ್ರಸ್ಟ್ ವತಿಯಿಂದ ನೆಲ್ಲಿಹುದಿಕೇರಿ ಗ್ರಂಥಾಲಯ ಹಾಗೂ ಅರಿವು ಕೇಂದ್ರದಲ್ಲಿ ಗ್ರಾಮ ಆಡಳಿತಾಧಿಕಾರಿ ಮತ್ತು ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಆಕಾಂಕ್ಷಿಗಳಿಗೆ ಪ್ರತಿ ಭಾನುವಾರಗಳಂದು ನಡೆಯುವ ತರಬೇತಿಗೆ ಚಾಲನೆ ದೊರೆಯಿತು. ಉದ್ಘಾಟನಾ ಕಾರ್ಯಕ್ರಮದಲ್ಲಿ ಕೊಡಗು ಜಿ.ಪಂ ಮುಖ್ಯಲೆಕ್ಕಾಧಿಕಾರಿ ಹಾಗೂ ಮುಖ್ಯ ಯೋಜನಾಧಿಕಾರಿಗಳಾದ ಝೀವಲ್ ಖಾನ್ ಭಾಗವಹಿಸಿ ಸ್ಪರ್ಧಾತ್ಮಕ ಪರೀಕ್ಷೆ ಎದುರಿಸಲು ಅಗತ್ಯ ಸಿದ್ಧತೆ ಕುರಿತು ತರಬೇತಿ ನೀಡಿದರು. ಸಿದ್ದಾಪುರ ಇಕ್ರ ಪಿಯು ಕಾಲೇಜಿನ ಕನ್ನಡ ಉಪನ್ಯಾಸಕ ಬಿ.ಜಾಫರ್ ಕಡ್ಡಾಯ ಕನ್ನಡ ಪತ್ರಿಕೆ ವಿಷಯದ ಕುರಿತು ತರಬೇತಿ ನೀಡಿದರು. ಕಾರ್ಯಕ್ರಮದಲ್ಲಿ ಕಲಾವಿದರಾದ ರೆಹಮತ್ ಅಲಿ ಬಾವಾ ಪ್ರಸ್ತಾವಿಕವಾಗಿ ಮಾತನಾಡಿ ಶುಭ ಕೋರಿದರು. ನೈಮಾ ಸಂಸ್ಥೆಯ ಅಧ್ಯಕ್ಷ ಒ.ಎಂ.ನೌಶಾದ್, ಪ್ರಧಾನ ಕಾರ್ಯದರ್ಶಿ ಪಿ.ಕೆ.ಮುಸ್ತಾಫಾ, ಕಾರ್ಯದರ್ಶಿ ಸಿ.ಹೆಚ್.ಜಂಶೀರ್, ಮೀಡಿಯಾ ವಿಭಾಗದ ಎಂ.ಎಂ.ಮುತ್ತಲಿಬ್, ವಿ.ಎಸ್.ಫಾಜಿಲ್, ಎಂ.ಹೆಚ್.ಸಮೀದ್, ಗ್ರಂಥಪಾಲಕರಾದ ಹೆಚ್.ಎ.ವಾಸಂತಿ ಹಾಜರಿದ್ದರು. ತರಬೇತಿ ಸಂಯೋಜಕ ಪಿ.ಇ.ರಿಯಾಸ್ ಸ್ವಾಗತಿಸಿದರು. ಪಿಡಿಓ ಅಬ್ದುಲ್ಲ ವಂದಿಸಿದರು.
ವಿರಾಜಪೇಟೆ ಸೆ.2 NEWS DESK : ವಿರಾಜಪೇಟೆಯ ಮೂರ್ನಾಡು ರಸ್ತೆಯಲ್ಲಿರುವ ಶ್ರೀ ಕಾವೇರಿ ಗಣೇಶೋತ್ಸವ ಸಮಿತಿ (ರಿ)ವತಿಯಿಂದ ಗೌರಿ ಗಣೇಶೋತ್ಸವದ ಪ್ರಯುಕ್ತ ಸೆ. 9 ರಂದು ತಾಲ್ಲೂಕು ಮಟ್ಟದ ಭಗವದ್ಗೀತೆ ಶ್ಲೋಕ ಮತ್ತು ಭಾವಾರ್ಥ ಪಠಣ ಸ್ಪರ್ಧೆ ನಡೆಯಲಿದೆ. ಬೆಳಿಗ್ಗೆ 9.30 ಗಂಟೆಗೆ ನಾಲ್ಕು ವಿಭಾಗಗಳಲ್ಲಿ ಸ್ಪರ್ಧೇಗಳು ನಡೆಯಲಿದ್ದು, ಸಬ್ ಜೂನಿಯರ್ (6 ರಿಂದ 11), ಜೂನಿಯರ್ (12 ರಿಂದ 16) ಸೀನಿಯರ್ (17 ರಿಂದ 23) ಸಾರ್ವಜನಿಕ ವಿಭಾಗ (23 ರಿಂದ ಮೇಲ್ಪಟ್ಟವರು) ಭಾಗವಹಿಸಬಹುದು. ಭಾಗವಹಿಸುವ ಸ್ಪರ್ಧಾರ್ಥಿಗಳು 9008613729 ವಿಮಲಾ ದಶರಥ್ ಅವರ ವಾಟ್ಸಾಪ್ ನಂಬರ್ಗೆ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಲು ಕೋರಿದೆ.
ವಿರಾಜಪೇಟೆ ಸೆ.2 NEWS DESK : ಪೊನ್ನಂಪೇಟೆ ಗ್ರಾ.ಪಂ ಯಲ್ಲಿ ಕಳೆದ ಏಳು ವರ್ಷಗಳಿಂದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ)ಯಾಗಿ ಕಾರ್ಯನಿರ್ವಹಿಸಿ ಪಟ್ಟಣ ಪಂಚಾಯತಿಯಾಗಿ ಮೇಲ್ದರ್ಜೆಗೇರಿದ ಕಾರಣ ವರ್ಗಾವಣೆಗೊಂಡ ಪುಟ್ಟರಾಜು ಹಾಗೂ ಕಳೆದ ಹತ್ತು ವರ್ಷಗಳಿಂದ ಪೊನ್ನಂಪೇಟೆ ಗ್ರಾ.ಪಂ ಯಲ್ಲಿ ದ್ವಿತೀಯ ದರ್ಜೆ ಸಹಾಯಕರಾಗಿ ಕಾರ್ಯನಿರ್ವಹಿಸಿ ಇದೀಗ ವರ್ಗಾವಣೆಗೊಂಡಿರುವ ಸುರೇಶ್ ಅವರಿಗೆ ಪೊನ್ನಂಪೇಟೆ ಪಟ್ಟಣ ಪಂಚಾಯಿತಿ ವತಿಯಿಂದ ಬೀಳ್ಕೊಡುಗೆ ನೀಡಲಾಯಿತು. ಪೊನ್ನಂಪೇಟೆ ಪಟ್ಟಣ ಪಂಚಾಯಿತಿ ಅಧ್ಯಕ್ಷ ಅಣ್ಣಿರ ಹರೀಶ್ ಅವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಿಡಿಒ ಪುಟ್ಟರಾಜು ದಂಪತಿಯನ್ನು ಮತ್ತು ಸುರೇಶ್ ಅವರನ್ನು ಸನ್ಮಾನಿಸಿ ಬೀಳ್ಕೊಡುಗೆ ನೀಡಲಾಯಿತು. ಈ ಸಂದರ್ಭ ಮಾತನಾಡಿದ ಅಣ್ಣಿರ ಹರೀಶ್ ಕಳೆದ 7 ವರ್ಷಗಳಿಂದ ಗ್ರಾಮ ಪಂಚಾಯಿತಿಯಲ್ಲಿ ಜನಸ್ನೇಹಿ ಅಧಿಕಾರಿಯಾಗಿ ಕಾರ್ಯನಿರ್ವಹಿಸಿದ ಪುಟ್ಟರಾಜು ಅವರು ಬಡವರ ಬಗ್ಗೆ ಹೆಚ್ಚು ಕಾಳಜಿ ವಹಿಸುತ್ತಿದ್ದರು. ವಿವಿಧ ಕೆಲಸ ಕಾರ್ಯಗಳಿಗಾಗಿ ಕಚೇರಿಗೆ ಬರುತ್ತಿದ್ದ ಅಸಹಾಯಕರಿಗೆ ಮೊದಲ ಆದ್ಯತೆ ನೀಡುತ್ತಿದ್ದ ಇವರು, ಪೊನ್ನಂಪೇಟೆ ಗ್ರಾ.ಪಂ ಯನ್ನು ಇಡೀ ಜಿಲ್ಲೆಯಲ್ಲಿ ಮಾದರಿ ಗ್ರಾ.ಪಂ ಯಾಗಿ ರೂಪಿಸುವಲ್ಲಿ…
ನಾಪೋಕ್ಲು ಸೆ.2 NEWS DESK : ಚೇರಂಬಾಣೆ ಶ್ರೀ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ಭಾಗಮಂಡಲ ವಲಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಕ್ರೀಡಾಕೂಟದಲ್ಲಿ ಕೊಟ್ಟೂರು ಶ್ರೀ ರಾಜರಾಜೇಶ್ವರಿ ಶಾಲೆಯ ವಿದ್ಯಾರ್ಥಿಗಳು ತಾಲ್ಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಬಾಲಕರ ಸಿಂಗಲ್ಸ್ ಹಾಗೂ ಡಬಲ್ಸ್ ನಲ್ಲಿ ಕೊಟ್ಟೂರು ಶ್ರೀ ರಾಜರಾಜೇಶ್ವರಿ ಶಾಲೆಯ ಪ್ರಜ್ವಲ್ ಪೂವಣ್ಣ, ಮೌರ್ಯ ಆಳ್ವ, ಪಿ.ಎಂ.ಮಿಥುನ್, ಭಜನ್ ಬೋಪಣ್ಣ ಪ್ರಥಮ, ಬಾಲಕಿಯರ ಶಟಲ್ ಬ್ಯಾಡ್ಮಿಂಟನ್ ವಿಭಾಗದಲ್ಲಿ ಮೋಕ್ಷ ಬೋಪಣ್ಣ, ಕೆ.ಕೆ.ಇಂಚರ, ಪಿ.ಎನ್.ಮಯೂರಿ ಭಾಗವಹಿಸಿ ಸಿಂಗಲ್ಸ್ ಮತ್ತು ಡಬಲ್ಸ್ ವಿಭಾಗದಲ್ಲಿ ಪ್ರಥಮ ಹಾಗೂ ಅಥ್ಲೇಟಿಕ್ಸ್ ನಲ್ಲಿ ಪ್ರಥಮ 4 ದ್ವಿತೀಯ 7 ಹಾಗೂ ತೃತೀಯ 4 ಸ್ಥಾನ ಪಡೆದು ಸಾಧನೆ ಮಾಡಿದ್ದಾರೆ. ವರದಿ : ದುಗ್ಗಳ ಸದಾನಂದ.
ಮಡಿಕೇರಿ ಸೆ.2 NEWS DESK : ಗಣೇಶೋತ್ಸವ ಆಚರಣೆಗೆ ಛಾಪಾ ಕಾಗದದಲ್ಲಿ ಮುಚ್ಚಳಿಕೆ ಬರೆದುಕೊಡಬೇಕೆನ್ನುವ ಆಡಳಿತ ವ್ಯವಸ್ಥೆಯ ನೀತಿ ಹಿಂದೂ ವಿರೋಧಿ ಧೋರಣೆಯಾಗಿದೆ ಎಂದು ಆರೋಪಿಸಿ ಹಿಂದೂ ಜಾಗರಣಾ ವೇದಿಕೆ ಮತ್ತು ವಿವಿಧ ಗಣೇಶೋತ್ಸವ ಸಮಿತಿಗಳು ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿದವು. ನಗರಸಭೆ ಎದುರು ಘೋಷಣೆಗಳೊಂದಿಗೆ ಪ್ರತಿಭಟನೆ ನಡೆಸಿ ಅಸಮಾಧಾನ ವ್ಯಕ್ತಪಡಿಸಿದ ಪ್ರಮುಖರು, ಪರಿಸರ ಮಾಲಿನ್ಯ ಮತ್ತು ಶಬ್ಧ ಮಾಲಿನ್ಯದ ನೆಪವೊಡ್ಡಿ, ಇಲ್ಲಸಲ್ಲದ ನೀತಿಗಳನ್ನು ರೂಪಿಸಿ ಗಣೇಶೋತ್ಸವ ಸಮಿತಿಗಳಿಗೆ ಕಿರುಕುಳ ನೀಡಲಾಗುತ್ತಿದೆ ಎಂದು ಆರೋಪಿಸಿದರು. ಹಿಂದೂ ಜಾಗರಣಾ ವೇದಿಕೆಯ ಪ್ರಾಂತ ಸಮಿತಿಯ ಪ್ರಮುಖ್ ಕೆ.ಟಿ.ಉಲ್ಲಾಸ್ ಮಾತನಾಡಿ ಈ ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಮಹತ್ತರವಾದ ಪಾತ್ರ ವಹಿಸಿದ್ದ ಸಾರ್ವಜನಿಕ ಗಣೇಶೋತ್ಸವಕ್ಕೆ ಪರಿಸರ ಮಾಲಿನ್ಯ ಹಾಗೂ ಕಾನೂನಿನ ನೆಪವೊಡ್ಡಿ ಅಡ್ಡಿಪಡಿಸುತ್ತಿರುವುದು ಖಂಡನೀಯವೆಂದರು. ಕಾನೂನು ಪಾಲನೆ ಕೇವಲ ಹಿಂದೂಗಳಿಗಷ್ಟೇ ಸೀಮಿತ ಎನ್ನುವ ಧೋರಣೆಯನ್ನು ಆಡಳಿತ ನಡೆಸುವವರು ಹಾಗೂ ಅಧಿಕಾರಿಗಳು ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿದ ಅವರು, ತಕ್ಷಣ ಕಠಿಣ ನೀತಿಯನ್ನು ಕೈಬಿಡಬೇಕೆಂದು ಒತ್ತಾಯಿಸಿದರು. ಗಣೇಶೋತ್ಸವ ಸಮಿತಿಗಳ ಪರವಾಗಿ ಮಾತನಾಡಿದ…
ಕುಶಾಲನಗರ ಸೆ.2 NEWS DESK : ತರಗತಿಯಲ್ಲಿ ಪಾಠ ಮಾಡುವುದಕ್ಕಿಂತ ಪ್ರಾಯೋಗಿಕವಾಗಿ ಕೃಷಿ ಕಾರ್ಯದಲ್ಲಿ ತೊಡಗಿಸಿಕೊಳ್ಳುವುದರಿಂದ ವಿದ್ಯಾರ್ಥಿಗಳಿಗೆ ಕೃಷಿ ಪಾಠದ ಬಗ್ಗೆ ಸಂಪೂರ್ಣ ಮಾಹಿತಿ ಮನದಟ್ಟು ಮಾಡಲು ಸಾಧ್ಯ ಎಂಬ ಆಶಯದೊಂದಿಗೆ ಕೂಡುಮಂಗಳೂರು (ಕೂಡ್ಲೂರು ) ಗ್ರಾಮದ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಗದ್ದೆಯಲ್ಲಿ ಭತ್ತದ ನಾಟಿ ಮಾಡಿಸುವ ಮೂಲಕ ಕೃಷಿ ಶಿಕ್ಷಣವನ್ನು ನೀಡಲಾಯಿತು. ಕೂಡುಮಂಗಳೂರು (ಕೂಡ್ಲೂರು) ಸರ್ಕಾರಿ ಪ್ರೌಢಶಾಲೆಯ ರಾಷ್ಟ್ರೀಯ ಹಸಿರು ಪಡೆ ಇಕೋ ಕ್ಲಬ್, ಸ್ಕೌಟ್ಸ್ ಮತ್ತು ಗೈಡ್ಸ್ ಘಟಕ, ರಾಷ್ಟ್ರೀಯ ಸೇವಾ ಯೋಜನೆ (ಎನ್.ಎಸ್.ಎಸ್.) ವತಿಯಿಂದ ಎಸ್.ಡಿ.ಎಂ.ಸಿ ವಿದ್ಯಾರ್ಥಿ ಸಂಘ ಹಾಗೂ ಕೂಡ್ಲೂರು ಗ್ರಾಮದ ಬಸವೇಶ್ವರ ದೇವಸ್ಥಾನ ಸಮಿತಿ ಸಂಯುಕ್ತಾಶ್ರಯದಲ್ಲಿ ಕೂಡ್ಲೂರು ಗ್ರಾಮದ ಪ್ರಗತಿಪರ ರೈತ ಕೆ.ಎಸ್.ರಾಜಾಚಾರಿ ಅವರ ಭತ್ತದ ಗದ್ದೆಯಲ್ಲಿ ಶಾಲಾ ಮಕ್ಕಳು ಕೃಷಿಕರೊಂದಿಗೆ ಸೇರಿ ಗದ್ದೆ ನಾಟಿ ಮಾಡುವ ಮೂಲಕ ಗಮನ ಸೆಳೆದರು. ಪ್ರಗತಿಪರ ಕೃಷಿಕ ಎಂ.ಎನ್.ಕಾಳಪ್ಪ ಅವರ ಮಾರ್ಗದರ್ಶನದಲ್ಲಿ ಜನಪದ ಹಾಡುಗಳನ್ನು ಹೇಳುತ್ತಾ ಸಂಭ್ರಮ- ಸಡಗರದಿಂದ ಗದ್ದೆ ನಾಟಿ ಮಾಡಿದರು. ಶಾಲಾ ಮಕ್ಕಳೊಂದಿಗೆ ಕೆಸರುಗದ್ದೆಗೆ…






