ಲೇಖಕ: admin

ನಾಪೋಕ್ಲು ಸೆ.2 NEWS DESK : ಭಾಗಮಂಡಲ ಕಾವೇರಿ ಕಾಲೇಜಿನ ಮೈದಾನದಲ್ಲಿ ನಡೆದ ಭಾಗಮಂಡಲ ವಲಯ ಮಟ್ಟ ಕ್ರೀಡಾಕೂಟದಲ್ಲಿ ಚೇರಂಬಾಣೆಯ ಶ್ರೀ ರಾಜರಾಜೇಶ್ವರಿ ಶಾಲೆಯ ಬಾಲಕರ ತಂಡ ಕಾಲ್ಚೆಂಡು ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ತಾಲ್ಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವರದಿ : ದುಗ್ಗಳ ಸದಾನಂದ.

Read More

ನಾಪೋಕ್ಲು ಸೆ.2 NEWS DESK : ಕಕ್ಕುಂದಕಾಡು ಶ್ರೀ ಲಕ್ಷ್ಮಿ ವೆಂಕಟೇಶ್ವರ ದೇವಾಲಯದಲ್ಲಿ ವರ್ಷದ ಕೊನೆಯ ಶ್ರಾವಣ ಶನಿವಾರದ ವಿಶೇಷ ಪೂಜೆಯನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಶ್ರಾವಣ ಶನಿವಾರ ಪ್ರಯುಕ್ತ ದೇವಾಲಯದಲ್ಲಿ ಮುಂಜಾನೆಯಿಂದಲೇ ಅಭಿಷೇಕ, ಸಂಕಲ್ಪ, ವೆಂಕಟೇಶ್ವರನಿಗೆ ವಿಶೇಷ ಮಹಾಪೂಜೆ, ಮಹಾಮಂಗಳಾರತಿ ಸೇರಿದಂತೆ ವಿವಿಧ ಪೂಜಾ ಕೈಂಕರ್ಯಗಳು ನಡೆಯಿತು. ನಂತರ ಭಕ್ತಾಧಿಗಳಿಗೆ ತೀರ್ಥ ಪ್ರಸಾದ ಹಾಗೂ ಅನ್ನ ಸಂತರ್ಪಣೆ ನೆರವೇರಿತು. ದೇವಾಲಯದ ಮುಖ್ಯ ಅರ್ಚಕ ಸುಧೀರ್ ಪೂಜಾ ಕೈಂಕರ್ಯಗಳು ನೆರವೇರಿಸಿಕೊಟ್ಟರು. ದೇವಾಲಯದಲ್ಲಿ ಶ್ರಾವಣ ಶನಿವಾರ ಪೂಜಾ ಕಾರ್ಯಕ್ರಮಗಳು ಆ.10 ರಿಂದ ಪ್ರಾರಂಭಗೊಂಡು ನಾಲ್ಕು ಶ್ರಾವಣ ಶನಿವಾರ ಆಚರಣೆ ಮಾಡಲಾಯಿತು. ಅನ್ನದಾನದ ಸೇವಾಕರ್ತರಾಗಿ ಕಕ್ಕುಂದಕಾಡು ಸುಮ ಶ್ರೀನಿವಾಸ್ ಮತ್ತು ಮಕ್ಕಳು, ಹೈದರಾಬಾದ್ ದಿವ್ಯ ಲೋಕೇಶ್ ದಂಪತಿಗಳು ಮತ್ತು ಮಕ್ಕಳು, ಶ್ರೀ ಲಕ್ಷ್ಮಿ ವೆಂಕಟೇಶ್ವರ ಭಕ್ತ ವೃಂದ ಹಾಗೂ ನಾಪೋಕ್ಲು ವಿನ ಡಾ.ದೇವದಾಸ್ ಭಕ್ತಾದಿಗಳಿಗೆ ಅನ್ನದಾನವನ್ನು ನಡೆಸಿದರು. ಈ ಸಂದರ್ಭ ದೇವಾಲಯ ಆಡಳಿತ ಮಂಡಳಿ ಉಪಾಧ್ಯಕ್ಷ ಟಿ.ಕೆ.ಸೂರ್ಯ ಕುಮಾರ್, ಕಾರ್ಯದರ್ಶಿ ಸುಜಿ ಕುಮಾರ್, ಖಜಾಂಚಿ ಎಂ.ಪಿ.ಗೋಪಾಲ,…

Read More

ನಾಪೋಕ್ಲು ಸೆ.2 NEWS DESK : ಚೆಯ್ಯಂಡಾಣೆಯ ನರಿಯಂದಡ ಕೇಂದ್ರ ಪ್ರೌಢಶಾಲೆಯಲ್ಲಿ ನಡೆದ ನಾಪೋಕ್ಲು ವಲಯ ಮಟ್ಟದ ಪ್ರೌಢಶಾಲಾ ವಿಭಾಗ ಹಾಗೂ ಪ್ರಾಥಮಿಕ ಶಾಲಾ ವಿಭಾಗದ ಕ್ರೀಡಾಕೂಟದಲ್ಲಿ ಸೆಕ್ರೆಟ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳ ವೈಯಕ್ತಿಕ ವಿಭಾಗದ ಕ್ರೀಡಾಕೂಟದಲ್ಲಿ ಭಾಗವಹಿಸಿ ತಾಲ್ಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಶಾಟ್ ಪುಟ್‍ನಲ್ಲಿ 10ನೇ ತರಗತಿ ವಿದ್ಯಾರ್ಥಿ ತನ್ವೀರ್ ಪ್ರಥಮ, ಚೆಸ್ ನಲ್ಲಿ 9ನೇ ತರಗತಿ ವಿದ್ಯಾರ್ಥಿ ಕೆ.ಎಂ.ತೌಶೀಫ್ ಪ್ರಥಮ, ಡಿಸ್ಕಸ್ ಥ್ರೋನಲ್ಲಿ 8ನೇ ತರಗತಿ ವಿದ್ಯಾರ್ಥಿ ಕೆ.ಹೆಚ್. ನಶ್ರೀನಾ ದ್ವಿತೀಯ, ಎತ್ತರ ಜಿಗಿತ ಇಂಚರ ದ್ವಿತೀಯ ಹಾಗೂ ಪ್ರೌಢಶಾಲಾ ವಿಭಾಗದ ಬಾಲಕರ ತಂಡ ಶಾರ್ಟ್ ಪುಟ್ ಹಾಗೂ ವಾಲಿಬಾಲ್ ತಂಡ ದ್ವಿತೀಯ ಸ್ಥಾನ ಪಡೆದುಕೊಂಡಿತು. ಶಾಲೆ ಆಡಳಿತ ಮಂಡಳಿ ಹಾಗೂ ಶಿಕ್ಷಕ ವೃಂದದವರ ಕಠಿಣ ಪರಿಶ್ರಮ ಶಾಲೆಗೆ ಕೀರ್ತಿಯನ್ನು ತಂದುಕೊಟ್ಟಿದ್ದಾರೆ. ವರದಿ : ದುಗ್ಗಳ ಸದಾನಂದ.

Read More

ಮಡಿಕೇರಿ NEWS DESK ಸೆ.2 : ಮೈಸೂರಿನಲ್ಲಿ ನಡೆದ ರಾಜ್ಯ ಮಟ್ಟದ ನೃತ್ಯ ಸ್ಪರ್ಧೆಯಲ್ಲಿ ಮಡಿಕೇರಿಯ ವಿಂಗ್ಸ್ ಆಫ್ ಪ್ಯಾಶನ್ ಡ್ಯಾನ್ಸ್ ಸ್ಟುಡಿಯೋದ ನೃತ್ಯ ಸಂಯೋಜಕಿ ಪ್ರೀತಾ ಕೃಷ್ಣ ಅವರ ಪುತ್ರಿ ಎಂ.ಎನ್.ರಿಶಿಕಾ ದ್ವಿತೀಯ ಸ್ಥಾನ ಗಳಿಸಿದ್ದಾಳೆ. ಈಕೆ ನಗರದ ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯ 10 ನೇ ತರಗತಿಯ ವಿದ್ಯಾರ್ಥಿನಿ.

Read More

ನಾಪೋಕ್ಲು ಸೆ.2 NEWS DESK : ಚೆಯ್ಯಂಡಾಣೆಯ ನರಿಯಂದಡ ಕೇಂದ್ರ ಪ್ರೌಢಶಾಲೆಯಲ್ಲಿ ನಾಪೋಕ್ಲು ವಲಯ ಮಟ್ಟದ ಪ್ರೌಢಶಾಲಾ ವಿಭಾಗ ಹಾಗೂ ಪ್ರಾಥಮಿಕ ಶಾಲಾ ವಿಭಾಗದ ಕ್ರೀಡಾಕೂಟದಲ್ಲಿ ಶ್ರೀ ರಾಮ ಟ್ರಸ್ಟ್ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ವಿವಿಧ ಹಲವು ಬಹುಮಾನವನ್ನು ತಮ್ಮದಾಗಿಸಿಕೊಂಡಿದ್ದಾರೆ. ಬಾಲಕರ ವಿಭಾಗದ ಹಾಕಿ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ್ದು, ಬಾಲಕ ಮತ್ತು ಬಾಲಕಿಯರ ವಿಭಾಗದ ಶಟಲ್ ಬ್ಯಾಡ್ಮಿಂಟನ್ ಹಾಗೂ ಟೇಬಲ್ ಟೆನ್ನಿಸ್ ಸ್ಪರ್ಧೆಯಲ್ಲಿ ಗೆಲುವು ಸಾಧಿಸಿದ್ದಾರೆ. ಬಾಲ್ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡಿದ್ದು, ಬಾಲಕರ ವಿಭಾಗದ ವಾಲಿಬಾಲ್ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ. ಚೆಸ್ ನಲ್ಲಿ ಮಿಶ ಬಾ ಮತ್ತು ಸಿಂಚನ ಪೂವಯ್ಯ ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ. ಅಥ್ಲೆಟಿಕ್ಸ್ ನಲ್ಲಿ ಕಿರೀತ್ ಸೋಮಯ್ಯ1500 ಮೀಟರ್ ದ್ವಿತೀಯ ಸ್ಥಾನ, ಜಾವೆಲಿನ್ತ್ರೋ ಪ್ರಥಮ ಸ್ಥಾನ, ತ್ರಿಪಲ್ ಜಂಪ್ ದ್ವಿತೀಯ ಸ್ಥಾನ ಪಡೆದಿದ್ದರೆ ಕೇತನ್ ಕರುಂಬಯ್ಯ 3000 ಮೀ.ಓಟದ ಸ್ಪರ್ಧೆಯಲ್ಲಿ ಪ್ರಥಮ, 100 ಮೀಟರ್ ದ್ವಿತೀಯ, ಹೈಜಂಪ್ ದ್ವಿತೀಯ ಸ್ಥಾನ ಪಡೆದಿದ್ದಾರೆ. ಕೆ.ಎ.ಆಕಾಶ್ 100 ಮೀಟರ್…

Read More

ಬೆಂಗಳೂರು NEWS DESK ಸೆ.2 : ಕೆಪಿಎಸ್‌ಸಿ ಗೆಜೆಟೆಡ್‌ ಪ್ರೊಬೆಷನರಿ ಹುದ್ದೆಗಳ ಪರೀಕ್ಷೆಯಲ್ಲಿ ಕನ್ನಡಕ್ಕೆ ಅನುವಾದ ಮಾಡಲ್ಪಟ್ಟ ಪ್ರಶ್ನೆಗಳು ಅಸಮರ್ಪಕವಾಗಿದ್ದವೆಂಬ ವಿಚಾರ ನನ್ನ ಗಮನಕ್ಕೆ ಬಂದ ತಕ್ಷಣ, ಪರೀಕ್ಷಾರ್ಥಿಗಳಿಗೆ ಅನ್ಯಾಯವಾಗಬಾರದೆಂಬ ಉದ್ದೇಶದಿಂದ ಮುಂದಿನ ಎರಡು ತಿಂಗಳುಗಳ ಒಳಗೆ ಮರುಪರೀಕ್ಷೆ ಮಾಡುವಂತೆ ಕೆಪಿಎಸ್‌ಸಿಗೆ ಸೂಚನೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಕರ್ತವ್ಯ ಲೋಪವೆಸಗಿದ ಅಧಿಕಾರಿಗಳನ್ನು ಸೇವೆಯನ್ನು ಅಮಾನತು ಮಾಡಲಾಗಿದೆ. ಮುಂಬರುವ ಪರೀಕ್ಷೆಗಳನ್ನು ಅತ್ಯಂತ ಜವಾಬ್ದಾರಿಯುತವಾಗಿ, ಸಮರ್ಪಕವಾಗಿ ನಡೆಸಲು ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು. ನಾವು ನೇಮಕಾತಿ ಪ್ರಕ್ರಿಯೆಗಳ ಸಮಗ್ರತೆ ಮತ್ತು ನಂಬಿಕಾರ್ಹತೆಯನ್ನು ಎತ್ತಿಹಿಡಿದು, ಪರೀಕ್ಷಾರ್ಥಿಗಳ ಹಿತರಕ್ಷಿಸಲು ಬದ್ಧರಾಗಿದ್ದೇವೆ.

Read More

ನಾಪೋಕ್ಲು ಸೆ.2 NEWS DESK : ಬಲ್ಲಮಾವಟಿಯ ನೇತಾಜಿ ಪ್ರೌಢಶಾಲೆಯಲ್ಲಿ 18 ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಸಹ ಶಿಕ್ಷಕಿ ಎಂ.ಎ.ಕಾವೇರಿಯಮ್ಮ ಅವರನ್ನು ಆಡಳಿತ ಮಂಡಳಿ ವತಿಯಿಂದ ಆತ್ಮೀಯವಾಗಿ ಬೀಳ್ಕೊಡಲಾಯಿತು. ಸಂಸ್ಥೆಯ ಅಧ್ಯಕ್ಷ ಎ.ಕೆ.ಮನುಮುತ್ತಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಆಡಳಿತ ಮಂಡಳಿ ಪ್ರಮುಖರು ಹಾಗೂ ಶಿಕ್ಷಕರು ಸನ್ಮಾನಿಸಿ, ಗೌರಿವಿಸದರು. ಕಾರ್ಯದರ್ಶಿ ಚಂಗೇಟಿರ ಅಚ್ಚಯ್ಯ ಮಾತನಾಡಿ, ಸಮಾಜದ ಉತ್ತಮ ಪ್ರಜೆಗಳನ್ನು ರೂಪಿಸುವ ಜವಾಬ್ದಾರಿ ಶಿಕ್ಷಕರದ್ದು. ಸಮಾಜ ವಿಜ್ಞಾನ ಶಿಕ್ಷಕಿಯಾಗಿ ಕಾವೇರಿಯಮ್ಮ ಉತ್ತಮ ಸೇವಾ ಮನೋಭಾವನೆಯನ್ನು ಹೊಂದಿದ್ದರು ಎಂದರು. ನಿರ್ದೇಶಕ ಮುಕ್ಕಾಟಿರ ವಿನಯ್ ಮಾತನಾಡಿ, ಸಹನೆ, ವಿನಯತೆ, ಸರಳ ಜೀವನ, ಕ್ಷಮಾ ಗುಣ ಸೇರಿದಂತೆ ಉತ್ತಮ ಶಿಕ್ಷಕರಲ್ಲಿ ಇರಬೇಕಾದ ಗುಣಗಳನ್ನು ಕಾವೇರಿಯಮ್ಮ ಹೊಂದಿದ್ದರು. ಅವರ ನಿವೃತ್ತಿ ಜೀವನ ಸುಖಮಯವಾಗಿರಲಿ ಎಂದು ಹಾರೈಸಿದರು. ಆಡಳಿತ ಮಂಡಳಿ ಅಧ್ಯಕ್ಷ ಮನು ಮುತ್ತಪ್ಪ ಮಾತನಾಡಿ, ಗ್ರಾಮೀಣ ಪ್ರದೇಶದ ಪ್ರೌಢಶಾಲೆ ಹಲವು ವಿದ್ಯಾರ್ಥಿಗಳನ್ನು ಉತ್ತಮ ಪ್ರಜೆಗಳನ್ನಾಗಿ ರೂಪಿಸಿದೆ. ಉತ್ತಮ ಆಡಳಿತ ಮಂಡಳಿ ಹಾಗೂ ಶಿಕ್ಷಕರಿಂದ…

Read More

ಮಡಿಕೇರಿ NEWS DESK  ಸೆ.2 : ಮೈಸೂರು ಮಿರಾಕಲ್ಸ್ ಡ್ಯಾನ್ಸ್ ಸ್ಟುಡಿಯೋ ಸಂಸ್ಥೆಯ 21ನೇ ವಾರ್ಷಿಕೋತ್ಸವದ ಅಂಗವಾಗಿ ನಡೆದ ರಾಜ್ಯ ಮಟ್ಟದ ನೃತ್ಯ ಸ್ಪರ್ಧೆಯಲ್ಲಿ ಮಡಿಕೇರಿಯ ವಿಂಗ್ಸ್ ಆಫ್ ಪ್ಯಾಷನ್ ಡ್ಯಾನ್ಸ್ ಸ್ಟುಡಿಯೋ ದ್ವಿತೀಯ ಸ್ಥಾನ ಗೆದ್ದುಕೊಂಡಿದೆ. ಮೈಸೂರಿನ ಜಗನ್ ಮೋಹನ್ ಪ್ಯಾಲೇಸ್ ನಲ್ಲಿ ನಡೆದ ನೃತ್ಯ ಸ್ಪರ್ಧೆಯಲ್ಲಿ ಸೋಲೋ ಮತ್ತು ಕಪಲ್ ಡ್ಯಾನ್ಸ್ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡಿತು. ವಿಂಗ್ಸ್ ಆಫ್ ಪ್ಯಾಷನ್ ಡ್ಯಾನ್ಸ್ ಸ್ಟುಡಿಯೋದ ನೃತ್ಯ ಸಂಯೋಜಕಿ ಹಾಗೂ ನಿರ್ದೇಶಕಿ ಪ್ರೀತ ಕೃಷ್ಣಾ ವಿದ್ಯಾರ್ಥಿಗಳಿಗೆ ತರಬೇತಿ ನೀಡಿದರು.

Read More

ನಾಪೋಕ್ಲು ಸೆ.2 NEWS DESK : ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಮಹತ್ವವನ್ನು ವಿದ್ಯಾರ್ಥಿಗಳಿಗೆ ತಿಳಿಸಿ, ಕೌಶಲ್ಯಗಳನ್ನು ಕಲಿಸಿ ಉತ್ತಮ ಪ್ರಜೆಗಳನ್ನಾಗಿ ರೂಪಿಸುವ ಜವಬ್ದಾರಿ ಶಿಕ್ಷಕರ ಮೇಲಿದೆ ಎಂದು ಸಂಸ್ಥೆಯ ಅಧ್ಯಕ್ಷ ಎಂ.ಧನಂಜಯ ಹೇಳಿದರು. ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಸಂಪಾಜೆ ವತಿಯಿಂದ ನಾಪೋಕ್ಲುವಿನ ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಯಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಬೇಸಿಗೆ ಶಿಬಿರ, ಗೀತಗಾಯನ, ಮಕ್ಕಳ ಮೇಳಗಳಲ್ಲಿ ಎಲ್ಲರ ಸಲಹೆ ಸಹಕಾರಬೇಕು. ವಿದ್ಯಾರ್ಥಿನಿಯರು ಅಧಿಕ ಸಂಖ್ಯೆಯಲ್ಲಿ ಭಾಗವಹಿಸುವಂತಾಗಬೇಕು. ಇದು ಒಂದು ಸ್ವಯಂ ಸೇವಾ ಸಂಸ್ಥೆ ಎಂಬುದು ಎಲ್ಲರ ಚಿತ್ತದಲ್ಲಿದ್ದು ಅರ್ಪಣಾ ಭಾವದಿಂದ ಕಾರ್ಯಪ್ರವೃತ್ತರಾಗಬೇಕು ಎಂದರು. ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಯ ಪ್ರಾಂಶುಪಾಲರಾದ ಕೆ.ಡಿ.ನೀತಾ ಮಾತನಾಡಿ, ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆ ಶಿಸ್ತಿಗೆ ಹೆಸರಾದ ಸಂಸ್ಥೆಯಾಗಿದೆ ಎಂದರು. ಜಿಲ್ಲಾ ಸಂಸ್ಥೆಯ ಪ್ರಧಾನ ಆಯುಕ್ತ ಕೆ.ಟಿ.ಬೇಬಿ ಮ್ಯಾಥ್ಯು ಮಾತನಾಡಿ, ಸ್ಥಳೀಯ ಸಂಸ್ಥೆಯಲ್ಲಿ ರಾಜ್ಯ ಸಂಸ್ಥೆಯ ನಿಗದಿತ ಕಾರ್ಯಕ್ರಮಗಳಲ್ಲದೆ ಹಲವಾರು ವಿನೂತನ ಕಾರ್ಯಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಮಕ್ಕಳನ್ನು…

Read More

ನಾಪೋಕ್ಲು ಸೆ.2 NEWS DESK  : ಕೊಡಗು ನೆಹರು ಯುವ ಕೇಂದ್ರ, ಯುವಜನ ವ್ಯವಹಾರ ಹಾಗೂ ಕ್ರೀಡಾ ಸಚಿವಾಲಯ, ಜಿಲ್ಲಾ ಯುವ ಒಕ್ಕೂಟ ಮಡಿಕೇರಿ ಹಾಗೂ ಸಂಪಾಜೆಯ ಪಯಸ್ವಿನಿ ಯುವಕ ಸಂಘದ ವತಿಯಿಂದ ಸಂಪಾಜೆಯ ಶ್ರೀ ಪಂಚಲಿಂಗೇಶ್ವರ ದೇವಾಲಯದ ಆವರಣದಲ್ಲಿ ಪ್ರಥಮ ವರ್ಷದ ಕೆಸರು ಗದ್ದೆ ಗ್ರಾಮೀಣ ಕ್ರೀಡಾಕೂಟ ಸಂಭ್ರಮದಿಂದ ನಡೆಯಿತು. ಕೀಲಾರು ಗದ್ದೆಯಲ್ಲಿ ನಡೆದ ಕೆಸರು ಗದ್ದೆ ಕ್ರೀಡಾಕೂಟವನ್ನು ಶ್ರೀ ಪಂಚಲಿಂಗೇಶ್ವರ ದೇವಾಲಯದ ಪ್ರಧಾನ ಅರ್ಚಕ ಸತ್ಯ ನಾರಾಯಣ ಭಟ್ ನೆರವೇರಿಸಿದರು. ಪುರುಷರ ಹಗ್ಗಜಗ್ಗಾಟ ಸ್ಪರ್ಧೆಯಲ್ಲಿ ಚೆಡವು ಆದರ್ಶ್ ಫ್ರೆಂಡ್ಸ್ ತಂಡವು ಪ್ರಥಮ ಸ್ಥಾನ ಪಡೆದುಕೊಂಡದ್ದು, ಸಂಪಾಜೆ ಶ್ರೀ ಮಹಾ ವಿಷ್ಣು ಬಳಗ ಸಂಪಾಜೆ ದ್ವಿತೀಯ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತು. ಮುಕ್ತ 510 ಕೆಜಿ ವಿಭಾಗ ದ ಹಗ್ಗಜಗ್ಗಾಟ ಸ್ಪರ್ಧೆಯಲ್ಲಿ ಶ್ರೀ ವಿಷ್ಣು ಅಡ್ಕ ಪ್ರಥಮ ಸ್ಥಾನ ಗಳಿಸಿದರೆ, ಶ್ರೀ ವಿಷ್ಣು ಸಂಪ್ಯಾ ದ್ವಿತೀಯ ಸ್ಥಾನಗಳಿಸಿತು. ಅಡೂರು ಪ್ರೆಂಡ್ಸ್ ತಂಡ ತೃತೀಯ ಸ್ಥಾನವನ್ನು ಹಾಗೂ ಶ್ರೀ ಮಹಾ ವಿಷ್ಣು ಬಳಗ ಸಂಪಾಜೆ…

Read More