ಲೇಖಕ: admin

ಮಡಿಕೇರಿ NEWS DESK ಡಿ.28 : ಕೊಡವ ಹಾಕಿ ಅಕಾಡೆಮಿ ವತಿಯಿಂದ ಮೂರ್ನಾಡಿನಲ್ಲಿ ನಡೆಯುತ್ತಿರುವ ಲೆವಿಸ್ಟಾ ಕೊಡವ ಹಾಕಿ ಚಾಂಪಿಯನ್ಸ್ ಟ್ರೋಫಿ ಪಂದ್ಯಾವಳಿಯ ಸೆಮಿಫೈನಲ್ ಡಿ.29 ರಂದು ಬೆಳಿಗ್ಗೆ 10.30 ಗಂಟೆಗೆ ಚೆಪ್ಪುಡಿರ ಮತ್ತು ಮಂಡೇಪಂಡ ಹಾಗೂ 12.30 ಗಂಟೆಗೆ ಕುಲ್ಲೇಟಿರ ಮತ್ತು ಕುಪ್ಪಂಡ (ಕೈಕೇರಿ) ತಂಡಗಳ ನಡುವೆ ನಡೆಯಲಿದೆ. ಮೊದಲ ಪಂದ್ಯದ ಉದ್ಘಾಟನೆಯ ಸಂದರ್ಭ ಮುಖ್ಯ ಅತಿಥಿಗಳಾಗಿ ಬೆಂಗಳೂರು ಕೊಡವ ಸಮಾಜದ ಅಧ್ಯಕ್ಷ ಚೆರಿಯಪಂಡ ಸುರೇಶ್ ನಂಜಪ್ಪ ಹಾಗೂ ಬಾಡಗ ಸ್ಪೋರ್ಟ್ಸ್ ಹಾಗೂ ಕಲ್ಚರಲ್ ಅಸೋಸಿಯೇಷನ್ ಅಧ್ಯಕ್ಷ ಕಂಬೀರಂಡ ಸತೀಶ್ ಮುತ್ತಪ್ಪ ಪಾಲ್ಗೊಳ್ಳಿದ್ದಾರೆ. ಎರಡನೇ ಪಂದ್ಯದ ಉದ್ಘಾಟನೆಯ ಸಂದರ್ಭ ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಅಜ್ಜಿನಿಕಂಡ ಮಹೇಶ್ ನಾಚಯ್ಯ, ಮೂರ್ನಾಡು ಎಜುಕೇಷನ್ ಸೊಸೈಟಿಯ ಅಧ್ಯಕ್ಷ ಡಾ.ಚೌರಿರ ಜಗತ್ ತಿಮ್ಮಯ್ಯ ಹಾಗೂ ಕಾರ್ಯದರ್ಶಿ ಪೆಮ್ಮುಡಿಯಂಡ ಅಪ್ಪಣ್ಣ ಉಪಸ್ಥಿತರಿರುವರು. ಕೊಡವ ಹಾಕಿ ಅಕಾಡೆಮಿಯ ಅಧ್ಯಕ್ಷ ಪಾಂಡಂಡ ಕೆ.ಬೋಪಣ್ಣ ಅಧ್ಯಕ್ಷತೆ ವಹಿಸಲಿದ್ದಾರೆ.

Read More

ಮಡಿಕೇರಿ NEWS DESK ಡಿ.28 : ಕೊಡವ ಕೌಟುಂಬಿಕ ಹಾಕಿ ಉತ್ಸವ ಬೆಳ್ಳಿ ಮಹೋತ್ಸವವನ್ನು ಆಚರಿಸಿಕೊಂಡ ಹಿನ್ನೆಲೆಯಲ್ಲಿ ಕೊಡವ ಹಾಕಿ ಅಕಾಡೆಮಿ ವತಿಯಿಂದ ಆಯೋಜನೆಗೊಂಡಿರುವ ‘ಲೆವಿಸ್ಟಾ ಕೊಡವ ಹಾಕಿ ಚಾಂಪಿಯನ್ಸ್ ಟ್ರೋಫಿ ಪಂದ್ಯಾವಳಿ’ಯ ಮೂರನೇ ದಿನದ ಪಂದ್ಯದಲ್ಲಿ ಮಂಡೇಪಂಡ ಮತ್ತು ಕೋಣೇರಿರ ನಡುವಿನ ಪಂದ್ಯದಲ್ಲಿ 5-0 ಗೋಲುಗಳ ಅಂತರದಲ್ಲಿ ಮಂಡೇಪಂಡ ತಂಡ ಜಯ ಸಾಧಿಸಿತು. ಮಂಡೇಪಂಡ ಚಂಗಪ್ಪ ತಲಾ ಎರಡು, ಮುತ್ತಪ್ಪ, ಕಾಳಪ್ಪ ಹಾಗೂ ಕರುಂಬಯ್ಯ ತಲಾ ಒಂದು ಗೋಲು ದಾಖಲಿಸಿದರು. ಮುಕ್ಕಾಟೀರ ಮತ್ತು ಪಳಂಗಂಡ ನಡುವಿನ ಪಂದ್ಯದಲ್ಲಿ 6-0 ಗೋಲುಗಳ ಅಂತರದಲ್ಲಿ ಪಳಂಗಂಡ ತಂಡ ಗೆಲುವು ದಾಖಲಿಸಿತು. ಪಳಂಗಂಡ ಪೊನ್ನಪ್ಪ ಭರ್ಜರಿ ನಾಲ್ಕು ಹಾಗೂ ಅಮರ್ ಎರಡು ಗೋಲು ಬಾರಿಸಿದರು. ಕುಲ್ಲೇಟಿರ ಮತ್ತು ನೆಲ್ಲಮಕ್ಕಡ ನಡುವಿನ ಪಂದ್ಯದಲ್ಲಿ 1-0 ಗೋಲಿನ ಅಂತರದಲ್ಲಿ ಕುಲ್ಲೇಟಿರ ತಂಡ ಗೆಲುವು ಸಾಧಿಸಿತು. ಕುಲ್ಲೇಟಿರ ಮುತ್ತಣ್ಣ ಒಂದು ಗೋಲು ದಾಖಲಿಸಿದರು. ಶೂನ್ಯ ಸಾಧನೆಯ ಹಿನ್ನೆಲೆ ಕೂತಂಡ ಮತ್ತು ಕಲಿಯಂಡ ನಡುವಿನ ಪಂದ್ಯ ಡ್ರಾದಲ್ಲಿ ಅಂತ್ಯಗೊಂಡಿತು.

Read More

ಮಡಿಕೇರಿ NEWS DESK ಡಿ.28 : ಇತಿಹಾಸವನ್ನು ಮರೆತು ಇತಿಹಾಸ ನಿರ್ಮಿಸುವುದು ಅಸಾಧ್ಯ ಎಂದು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣನವರು ಭಾರತದ ಸಂವಿಧಾನ ಶಿಲ್ಪಿ ಡಾ ಬಿ.ಆರ್.ಅಂಬೇಡ್ಕರ್ ರವರ ಘೋಷವಾಕ್ಯ ವನ್ನು ಪುನರುಚ್ಚರಿಸಿದ್ದಾರೆ. ಸ್ವಾತಂತ್ರ್ಯ ಹೋರಾಟಗಾರ ದಿವಂಗತ ಪೂಜಾರಿರ ರಾಮಪ್ಪ ಅವರ ಹೆಸರಿನಲ್ಲಿ ಮೇಕೇರಿ ಬಿಳಿಗೇರಿ, ಅರ್ವತ್ತೋಕ್ಲು ಲಿಂಕ್ ರಸ್ತೆಗೆ ನಾಮಕರಣ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಕೊಡಗಿನ ಅನೇಕ ಮಹನೀಯರು ತಮ್ಮ ಬದುಕನ್ನು ತ್ಯಾಗ ಮಾಡಿ ಪಾಲ್ಗೊಳ್ಳುವ ಮೂಲಕ ತಮ್ಮ ದೇಶ ಪ್ರೇಮದ ಬದ್ದತೆಯನ್ನು ಮೆರೆದಿದ್ದಾರೆ. ಅಂತಹ ಮಹಾನ್ ವ್ಯಕ್ತಿಗಳಲ್ಲಿ ದಿವಂಗತ  ಪೂಜಾರಿ ರಾಮಪ್ಪ ನವರು ಒಬ್ಬರಾಗಿದ್ದು ಅವರ ಹೆಸರನ್ನು ರಸ್ತೆಗೆ ನಾಮಕರಣ ಮಾಡುವ ಮೂಲಕ ಸ್ವಾತಂತ್ರ್ಯ  ಹೋರಾಟಗಾರರಿಗೆ ಗೌರವ ಸಂದಿಸುವ ಅವಕಾಶ ದೊರಕಿದ್ದು ಸಂತಸದ ಕ್ಷಣವಾಗಿದೆ ಎಂದು ಹೇಳಿದರು. ಇಂತಹ ಒಂದು ಐತಿಹಾಸಿಕ ಕಾರ್ಯಕ್ಕೆ ಪ್ರಯತ್ನ ಪಟ್ಟು ಯಶಸ್ವಿಯಾದ ಅರ್ವತ್ತೋಕ್ಲು, ಮೇಕೇರಿ ಮತ್ತು ಬಿಳಿಗೇರಿ ಹಾಗೂ ಕೊಡಗಿನಾದ್ಯಂತ ನೆಲಸಿರುವ…

Read More

ಮಡಿಕೇರಿ NEWS DESK ಡಿ.28 : ಶ್ರೀ ಅಯ್ಯಪ್ಪ ದೀಪಾರಾಧನಾ ಸಮಿತಿ ವತಿಯಿಂದ ಮಡಿಕೇರಿಯ ಶ್ರೀ ಮುತ್ತಪ್ಪ ದೇವಾಲಯದ ಆವರಣದಲ್ಲಿ ಶ್ರೀ ಅಯ್ಯಪ್ಪ ದೀಪಾರಾಧನಾ ಉತ್ಸವ ಶ್ರದ್ಧಾಭಕ್ತಿಯಿಂದ ನಡೆಯಿತು. ನಗರದ ಶ್ರೀ ಮುತ್ತಪ್ಪ ದೇವಾಲಯದ ಆವರಣದಲ್ಲಿರುವ ಶ್ರೀಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ ಮುಂಜಾನೆಯಿಂದಲೇ ವಿವಿಧ ಪೂಜಾ ಕೈಂಕರ್ಯಗಳು ಜರುಗಿದವು. ನಡೆ ತೆಗೆಯುವುದು, ನಿರ್ಮಲ್ಯ ಪೂಜೆ, ಗಣಪತಿ ಹೋಮ, ಅಷ್ಟಾಭಿಷೇಕ ಸೇವೆ, ತುಳಸಿ ಸಹಸ್ರನಾಮಾರ್ಚನೆ, ಮಹಾಪೂಜೆ, ಪಾಲಕೊಂಬು ಪ್ರತಿಷ್ಠಾಪನೆ ಹಾಗೂ ತಾಯಂಬಕಂ (ಚಂಡೆಸೇವೆ) ನಡೆಯಿತು. ಅಲಂಕೃತ ಮಂಟಪದಲ್ಲಿ ಚಂಡೆ ಮೇಳದೊಂದಿಗೆ ನಗರದ ಅಶ್ವಿನಿ ಗಣಪತಿ ದೇವಾಯಲಯದಿಂದ ಮುಖ್ಯಬೀದಿಗಳಲ್ಲಿ ಶ್ರೀ ಅಯ್ಯಪ್ಪ ಸ್ವಾಮಿಯ ಉತ್ಸವ ಮೂರ್ತಿ ಮತ್ತು ಪಾಲಕೊಂಬು ಮೆರವಣಿಗೆ ಸಾಗಿತು. ನಂತರ ದೀಪಾರಾಧನೆ, ಅಲಂಕಾರ ಪೂಜೆ, ಪಡಿ ರಂಗಪೂಜೆ, ದುರ್ಗಾಪೂಜೆ ಹಾಗೂ ಸುಬ್ರಹ್ಮಣ್ಯ ಪೂಜೆ ಜರುಗಿತು. ಮಹಾಪೂಜೆಯ ನಂತರ ತೀರ್ಥ ಪ್ರಸಾದ ವಿತರಣೆಯೊಂದಿಗೆ ಭಕ್ತರಿಗೆ ಅನ್ನ ಸಂತರ್ಪಣೆಯಾಯಿತು. ರಾತ್ರಿ ಅಗ್ನಿಪೂಜೆ, ಪೊಲಿಪಾಟ್, ಪಾಲ್ಕಿಂಡಿ ತಿರಿ ಉಳಿಚಲ್, ವೆಟ್ಟುಂತಡವುಂ ನಡೆಯಿತು. ಭಾನುವಾರ ಬೆಳಿಗ್ಗೆ ಅಗ್ನಿ ಕೊಂಡ…

Read More

ಮಡಿಕೇರಿ NEWS DESK ಡಿ.28 : “ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಪ್ರತಿಬಂಧಕ ವಿಧೇಯಕ 2025” ನ್ನು ವಿರೋಧಿಸಿ ಡಿ.29 ರಂದು ಸೋಮವಾರಪೇಟೆ ಬಿಜೆಪಿ ಮಂಡಲದ ವತಿಯಿಂದ ಪ್ರತಿಭಟನೆ ನಡೆಸಲಾಗುವುದು ಎಂದು ಸೋಮವಾರಪೇಟೆ ಬಿಜೆಪಿಯ ವಕ್ತಾರ ಬಲ್ಲಾರಂಡ ಕಂಠಿ ಕಾರ್ಯಪ್ಪ ತಿಳಿಸಿದ್ದಾರೆ. ಸೋಮವಾರಪೇಟೆ ಪಟ್ಟಣದಲ್ಲಿ ಬೆಳಿಗ್ಗೆ 10.30 ಗಂಟೆಗೆ ಪ್ರತಿಭಟನೆ ನಡೆಸಿ ಕಾಂಗ್ರೆಸ್ ಸರಕಾರದ ನಿರ್ಧಾರವನ್ನು ಖಂಡಿಸುವುದಾಗಿ ಅವರು ಪತ್ರಿಕಾ ಪ್ರಕಟಣೆ ನೀಡಿದ್ದಾರೆ. ಸರಕಾರದ ಜನವಿರೋಧಿ ನೀತಿಗಳ ವಿರುದ್ಧ ಟೀಕೆ ಮತ್ತು ಚರ್ಚೆ ಮಾಡುವುದನ್ನು ಅಥವಾ ಸತ್ಯವನ್ನು ಬಹಿರಂಗ ಪಡಿಸುವುದನ್ನು ಕೂಡ ದ್ವೇಷ ಎಂದು ಪರಿಗಣಿಸುವ ಹುನ್ನಾರ ಈ ವಿಧೇಯಕದ ಹಿಂದೆ ಇದೆ ಎನ್ನುವ ಸಂಶಯ ಮೂಡುತ್ತಿದೆ. ಡಾ.ಬಿ.ಆರ್.ಅಂಬೇಡ್ಕರ್ ಅವರು ಸಂವಿಧಾನದಡಿ ನೀಡಿರುವ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಕಾಂಗ್ರೆಸ್ ಸರಕಾರ ಕಿತ್ತುಕೊಳ್ಳುವ ಪ್ರಯತ್ನ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.

Read More

ಮಡಿಕೇರಿ NEWS DESK ಡಿ.27 : ಕೊಡವ ಹಾಕಿ ಅಕಾಡೆಮಿ ವತಿಯಿಂದ ಮೂರ್ನಾಡಿನ ಬಾಚೆಟ್ಟೀರ ಲಾಲು ಮುದ್ದಯ್ಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ‘ಲೆವಿಸ್ಟಾ ಕೊಡವ ಹಾಕಿ ಚಾಂಪಿಯನ್ಸ್ ಟ್ರೋಫಿ ಪಂದ್ಯಾವಳಿ’ ಯ ಎರಡನೇ ದಿನದ ಪಂದ್ಯಾಟದಲ್ಲಿ ಚೆಪ್ಪುಡಿರ, ಪರದಂಡ, ಕುಪ್ಪಂಡ ಹಾಗೂ ಕುಲ್ಲೇಟಿರ ಗೆಲುವು ದಾಖಲಿಸಿದವು. ಚೆಪ್ಪುಡಿರ ಮತ್ತು ಮುಕ್ಕಾಟಿರ ತಂಡಗಳ ನಡುವಿನ ಪಂದ್ಯದಲ್ಲಿ ಚೆಪ್ಪುಡಿರ ತಂಡ 9-0 ಗೋಲುಗಳ ಅಂತರದಲ್ಲಿ ಭರ್ಜರಿ ಗೆಲುವು ದಾಖಲಿಸಿತು. ಚೆಪ್ಪುಡಿರ ಪ್ರಣವ್ ಹಾಗೂ ನರೇನ್ ತಲಾ ಎರಡು, ಸೋಮಣ್ಣ, ಚೇತನ್, ಅಯ್ಯಪ್ಪ, ನಾಚಪ್ಪ, ದಿವನ್ ತಲಾ ಒಂದು ಗೋಲು ಬಾರಿಸಿದರು. ಕೋಣೇರಿರ ಮತ್ತು ಪರದಂಡ ನಡುವಿನ ಪಂದ್ಯದಲ್ಲಿ ಪರದಂಡ ತಂಡ 6-0 ಗೋಲುಗಳ ಅಂತರದಲ್ಲಿ ಜಯ ಸಾಧಿಸಿತು. ಪರದಂಡ ಚೆಶ್ವಿನ್ ಹಾಗೂ ರಂಜನ್ ಅಯ್ಯಪ್ಪ ತಲಾ ಎರಡು, ಪ್ರಧಾನ್, ಧೀರಜ್ ಮುತ್ತಣ್ಣ ತಲಾ ಒಂದು ಗೋಲು ದಾಖಲಿಸಿದರು. ಕೂತಂಡ ಮತ್ತು ಕುಪ್ಪಂಡ ನಡುವಿನ ಪಂದ್ಯದಲ್ಲಿ ಕುಪ್ಪಂಡ ತಂಡ 3-2 ಗೋಲುಗಳ ಅಂತರದಲ್ಲಿ ಗೆಲುವು ದಾಖಲಿಸಿತು. ಕುಪ್ಪಂಡ…

Read More

ಸೋಮವಾರಪೇಟೆ NEWS DESK ಡಿ.27 : ರೈಲು ಡಿಕ್ಕಿಯಾಗಿ ಸೋಮವಾರಪೇಟೆ ತಾಲ್ಲೂಕಿನ ಬಾಣಾವಾರ ಗ್ರಾಮದ ನಿವಾಸಿಯೊಬ್ಬರು ಮೃತಪಟ್ಟ ಘಟನೆ ಕಾಸರಗೋಡು ರೈಲು ನಿಲ್ದಾಣದಲ್ಲಿ ನಡೆದಿದೆ. ಸೋಮವಾರಪೇಟೆ ಕಂದಾಯ ಇಲಾಖೆಯ ಹೊರಗುತ್ತಿಗೆ ನೌಕರ ರಾಜೇಶ್ (35) ಮೃತಪಟ್ಟವರಾಗಿದ್ದಾರೆ. ರೈಲಿನಿಂದ ಇಳಿದು ಮತ್ತೊಂದು ಫ್ಲಾಟ್‌ಫಾರ್ಮ್ಗೆ ಏರಲು ಯತ್ನಿಸುತ್ತಿದ್ದ ಸಂದರ್ಭ ಗೂಡ್ಸ್ ರೈಲು ಡಿಕ್ಕಿಯಾಗಿದೆ ಎಂದು ತಿಳಿದು ಬಂದಿದೆ. ಅಪಘಾತದ ತೀವ್ರತೆಗೆ ರಾಜೇಶ್ ಸ್ಥಳದಲ್ಲೇ ಮೃತಪಟ್ಟಿದ್ದು, ಇಂದು ಮೃತದೇಹವನ್ನು ಕಾಸರಗೋಡಿನಿಂದ ಬಾಣಾವಾರ ಗ್ರಾಮಕ್ಕೆ ತಂದು ಅಂತ್ಯಕ್ರಿಯೆ ನಡೆಸಲಾಯಿತು.

Read More

ಮಡಿಕೇರಿ ಡಿ.27 NEWS DESK : ಕುಶಾಲನಗರದ ಶ್ರೀ ವಾಸವಿ ಕನ್ನಿಕಾ ಪರಮೇಶ್ವರಿ ದೇವಸ್ಥಾನದ ಬ್ರಹ್ಮ ಕಳಶೋತ್ಸವದ ಅಂಗವಾಗಿ ‘ವಾಸವಿ ಸಪ್ತಾಹ-2026’ ಜ.2 ರಿಂದ 8ರವರೆಗೆ ವಿವಿಧ ಸಾಮಾಜಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಶ್ರೀ ವಾಸವಿ ಕನ್ನಿಕಾ ಪರಮೇಶ್ವರಿ ಟ್ರಸ್ಟ್ ಮತ್ತು ಆರ್ಯವೈಶ್ಯ ಮಂಡಳಿ ಅಧ್ಯಕ್ಷರಾದ ಬಿ.ಆರ್. ನಾಗೇಂದ್ರ ಪ್ರಸಾದ್ ಅವರು ಈ ಕುರಿತು ಮಾಹಿತಿ ನೀಡಿ, 1947ರಲ್ಲಿ ಶ್ರೀ ಮೈಲಾರ ಶೆಟ್ಟರ ಅಧ್ಯಕ್ಷತೆಯಲ್ಲಿ ಪ್ರತಿಷ್ಠಾನಪನೆಗೊಂಡ ಶ್ರೀ ವಾಸವಿ ಕನ್ನಿಕಾ ಪರಮೇಶ್ವರಿ ದೇವಸ್ಥಾನದ ಪುನರ್ ಪ್ರತಿಷ್ಠಾಪನಾ ಕಾರ್ಯ 2014ರಲ್ಲಿ ನಡೆಯಿತು. ಪುನರ್ ಪ್ರತಿಷ್ಠಾಪನೆಗೊಂಡ ದೇವಸ್ಥಾನದಲ್ಲಿ 12 ವರ್ಷಗಳಿಗೊಮ್ಮೆ ನಡೆಯಬೇಕಾದ ಪೂಜಾ ಕಾರ್ಯಗಳು, ಕುಂಬಾಭಿಷೇಕ, ಬ್ರಹ್ಮ ಕಳಶೋತ್ಸವ ಶ್ರೀ ಸಚ್ಚಿದಾನಂದ ಸರಸ್ವತಿ ಸ್ವಾಮೀಜಿಗಳ ಉಪಸ್ಥಿತಿಯಲ್ಲಿ ಜ.29 ರಿಂದ 2ರವರೆಗೆ ಜರುಗಲಿದೆಯೆಂದು ತಿಳಿಸಿದರು. :: ವಾಸವಿ ಸಪ್ತಾಹ :: ಬ್ರಹ್ಮ ಕಳಶೋತ್ಸವದ ಹಿನ್ನೆಲೆಯಲ್ಲಿ ‘ವಾಸವಿ ಸಪ್ತಾಹ’ವನ್ನು ಕುಶಾಲನಗರದ ವಿವಿಧ ಸಂಘಟನೆಗಳ ಸಹಯೋಗದಲ್ಲಿ ಆಯೋಜಿಸಲಾಗುತ್ತಿದೆ. ಸಪ್ತಾಹದ ಆರಂಭಿಕ ದಿನವಾದ ಜ.2 ರಂದು ಬೆಳಿಗ್ಗೆ ‘ಮಾದಕ ವ್ಯಸನ ಮುಕ್ತ…

Read More

ಮಡಿಕೇರಿ ಡಿ.27 NEWS DESK : ಮಡಿಕೇರಿಯ ಕೊಡಗು ವಿದ್ಯಾಲಯ ಶಾಲೆಯಲ್ಲಿ ಕ್ರಿಸ್ಮಸ್ ಹಬ್ಬವನ್ನು ಸಂಭ್ರಮದಿಂದ  ಆಚರಿಸಲಾಯಿತು. ಕಾರ್ಯಕ್ರಮವನ್ನು 5ನೇ ತರಗತಿಯ ಮಕ್ಕಳು ಉತ್ಸಾಹದಿಂದ ನಡೆಸಿಕೊಟ್ಟರು. ಪ್ರಾರ್ಥನೆಯೊಂದಿಗೆ ಪ್ರಾಂಶುಪಾಲರಾದ ಸುಮಿತ್ರ ಕೆ.ಎಸ್., ಆಡಳಿತ ನಿರ್ವಹಣಾ ಅಧಿಕಾರಿ ರವಿ ಪಿ., ಕೋ-ಆರ್ಡಿನೇಟರ್ ಸುಮಂತ್ ಹಾಗೂ ಶಿಕ್ಷಕರು ಕ್ಯಾಂಡಲ್ ಹಚ್ಚುವ ಮೂಲಕ ಕ್ರಿಸ್ಮಸ್ ಸಂದೇಶವನ್ನು ಸಾರಿದರು. ಮಕ್ಕಳಿಂದ ಮನಮೋಹಕ ಸ್ವಾಗತ ನೃತ್ಯ ಪ್ರದರ್ಶನ ನಡೆಯಿತು. ಫ್ರೀ ಸ್ಟೈಲ್ ಡಾನ್ಸ್ ಅನ್ನು ಮಕ್ಕಳು ಕೊರಿಯೋಗ್ರಾಫರ್ ಅಭಿಷೇಕ್ ಮತ್ತು ಅವರ ತಂಡದ ಮಾರ್ಗದರ್ಶನದಲ್ಲಿ ಪ್ರದರ್ಶಿಸಿದರು. ಈ ಸಂದರ್ಭದಲ್ಲಿ ವಿದ್ಯಾರ್ಥಿನಿ ಸುದೀಪ್ತ ಕ್ರಿಸ್ಮಸ್ ದಿನದ ಮಹತ್ವದ ಬಗ್ಗೆ ಮಾತನಾಡಿ, ಯೇಸು ಕ್ರಿಸ್ತರ ಜನನವು ಪ್ರೀತಿ, ಶಾಂತಿ ಹಾಗೂ ಮಾನವೀಯ ಮೌಲ್ಯಗಳ ಪ್ರತೀಕವಾಗಿದ್ದು, ಅವುಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂಬ ಸಂದೇಶವನ್ನು ನೀಡಿದರು. ಕ್ರಿಸ್ಮಸ್ ಹಬ್ಬದ ಮಹತ್ವವನ್ನು ಸಾರುವಂತೆ ಮಕ್ಕಳಿಂದ ಯೇಸು ವಿನ ಜನನದ ಕಥೆಯನ್ನು ಆಧರಿಸಿದ ನಾಟಕ ಪ್ರದರ್ಶನ ನಡೆಯಿತು. ಕ್ರಿಸ್ಮಸ್ ಹಾಡುಗಳನ್ನು ಹಾಡುವ ಮೂಲಕ ಹಬ್ಬದ ಸಂಭ್ರಮವನ್ನು…

Read More

ಮಡಿಕೇರಿ ಡಿ.27 NEWS DESK : ಬೆಂಗಳೂರಿನ ಸಮಥ೯ ಸಾಹಿತ್ಯ ಮತ್ತು ಸಾಂಸ್ಕೃತಿಕ ಪ್ರತಿಷ್ಠಾನವು ನೀಡುವ ವಾಷಿ೯ಕ ಪ್ರಶಸ್ತಿಗೆ ಪತ್ರಿಕೋಧ್ಯಮ ಕ್ಷೇತ್ರದಿಂದ ಮಡಿಕೇರಿಯ ಅನಿಲ್ ಹೆಚ್.ಟಿ. ಆಯ್ಕೆಯಾಗಿದ್ದಾರೆ.  ಸಮಥ೯ ಸಾಹಿತ್ಯ ಮತ್ತು ಸಾಂಸ್ಕೃತಿಕ ಪ್ರತಿಷ್ಟಾನವು ವಾಷಿ೯ಕವಾಗಿ ಪತ್ರಿಕೋದ್ಯಮ, ಸಮಾಜಸೇವೆ, ಆರೋಗ್ಯ, ಶಿಕ್ಷಣ, ಸಾಹಿತ್ಯ, ಉದ್ಯಮ, ಸಂಗೀತ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿನ ಸಾಧಕರನ್ನು ಗುರುತಿಸಿ ಗಾಂಧಿ ಪ್ರಿಯ ಹೆಸರಿನ ಪ್ರಶಸ್ತಿ ನೀಡುತ್ತಿದೆ. ಈ ವಷ೯ದ ಗಾಂಧಿ ಪ್ರಿಯ ಪ್ರಶಸ್ತಿಗೆ ಪತ್ರಿಕೋದ್ಯಮ ಕ್ಷೇತ್ರದಿಂದ ಅನಿಲ್ ಹೆಚ್.ಟಿ. ಆಯ್ಕೆಯಾಗಿದ್ದಾರೆ. ಪತ್ರಿಕೋದ್ಯಮ, ವಿದ್ಯುನ್ಮಾನ, ಬಾನುಲಿ ಮಾಧ್ಯಮಗಳಲ್ಲಿ ಹಾಗೂ ಸಾಮಾಜಿಕ ಸೇವೆಗಳಲ್ಲಿ ಅನಿಲ್ ಸಾಧನೆಯನ್ನು ಪರಿಗಣಿಸಿ ಈ ಪ್ರಶಸ್ತಿ ನೀಡಲಾಗುತ್ತಿದೆ ಎಂದು ಪ್ರತಿಷ್ಟಾನದ ಅಧ್ಯಕ್ಷ ಎಸ್.ಆರ್. ವಿಜಯಸಮಥ್೯ ತಿಳಿಸಿದ್ದಾರೆ.  ಪ್ರಶಸ್ತಿ ಪ್ರದಾನ ಸಮಾರಂಭವು ಡಿ. 28 ರಂದು  ಬೆಳಗ್ಗೆ 10 ಗಂಟೆಗೆ ಬೆಂಗಳೂರಿನ ಚಾಮರಾಜಪೇಟೆಯ ಕುವೆಂಪು ಸಭಾಂಗಣದಲ್ಲಿ ಆಯೋಜಿತವಾಗಿದ್ದು ವಿಶ್ರಾಂತ ನ್ಯಾಯಮೂತಿ೯ ಪಾಲಾಕ್ಷಪ್ಪ ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ.

Read More