ಮಡಿಕೇರಿ ಏ.16 NEWS DESK : ಕೊಡಗು ವಿಶ್ವವಿದ್ಯಾಲಯವು 2023 ರಲ್ಲಿ ಕರ್ನಾಟಕ ರಾಜ್ಯ ವಿಶ್ವ ವಿದ್ಯಾಲಯವಾಗಿ ಕೊಡಗಿನ ಚಿಕ್ಕ ಅಳುವಾರದಲ್ಲಿ ಸ್ಥಾಪನೆಯಾಗಿದ್ದು, ವಿಶಿಷ್ಟವಾಗಿ ಗಡಿ ಮತ್ತು ಗ್ರಾಮೀಣ ಜಿಲ್ಲೆಯ ಉನ್ನತ ಶಿಕ್ಷಣ ಆಕಾಂಕ್ಷೆ ಪ್ರತಿನಿಧಿಸುತ್ತದೆ. ಕೊಡಗು ವಿಶ್ವವಿದ್ಯಾಲಯವು ಒಂಬತ್ತು ಸ್ನಾತಕೋತ್ತರ ವಿಭಾಗಗಳು ಮತ್ತು ಇಪ್ಪತ್ತೈದು ಸಂಯೋಜಿತ ಪದವಿ ಕಾಲೇಜುಗಳನ್ನು ಹೊಂದಿದ್ದು, ಅತ್ಯಲ್ಪ ಅವಧಿಯಲ್ಲಿ ಪಾರದರ್ಶಕ ಆಡಳಿತ, ಪರಿಣಾಮಕಾರಿ ಪರೀಕ್ಷಾ ನಿರ್ವಹಣೆ, ಸಂಪನ್ಮೂಲ ಕ್ರೋಢೀಕರಣ ಮತ್ತು ಆರ್ಥಿಕ ಶಿಸ್ತು ಇತ್ಯಾದಿ ಮಾನದಂಡಗಳಲ್ಲಿ ಗಮನಾರ್ಹ ಯಶಸ್ಸು ಸಾಧಿಸಿದೆ. ಕೊಡವ ಸಾಮೂದಾಯಿಕ ಅಸ್ಮಿತೆ: ಕೊಡಗು ಜಿಲ್ಲೆಯಲ್ಲಿ ಹೇರಳವಾಗಿ ಕಂಡುಬರುವ ಕೊಡವ ಸಂಸ್ಕøತಿಯು ಭಾರತದ ಇತರ ಸಂಸ್ಕೃತಿಗಳಿಗಿಂತ ಭಿನ್ನವಾಗಿರುವ ಸಾಂಸ್ಕøತಿಕ ಅಸ್ಮಿತೆಯಾಗಿದ್ದು, ವಿಶಿಷ್ಟ ಸಂಪ್ರದಾಯ ಆಚರಣೆಗಳನ್ನು ಒಳಗೊಂಡಿರುವ ಪಶ್ಚಿಮ ಘಟ್ಟ ಪ್ರದೇಶದ ಸ್ಥಳೀಯ ಕೊಡವ ಸಮುದಾಯಗಳ ಜೀವನ ಕ್ರಮವಾಗಿದೆ. ಕೊಡವ ಸಂಸ್ಕøತಿಯು ಪ್ರಾಚೀನ ಪರಂಪರೆ, ಸಮರ ಕೌಶಲ್ಯ, ಕೃಷಿ, ಪ್ರಕೃತಿ ಮತ್ತು ಕುಟುಂಬ ನೆಲೆಗಟ್ಟಿನೊಂದಿಗೆ ಸಂಯೋಜನೆ ಹೊಂದಿರುವ ಸಾಮೂದಾಯಿಕ ಜೀವನ ಪದ್ಧತಿಯಾಗಿದೆ ಮತ್ತು ಹೇರಳವಾದ ಮೌಖಿಕ…
ಲೇಖಕ: admin
ಮಡಿಕೇರಿ NEWS DESK ಏ.16 : ಕೊಡವ ಕುಟುಂಬಗಳ ನಡುವೆ ಮೂರ್ನಾಡಿನಲ್ಲಿ ನಡೆಯುತ್ತಿರುವ 24ನೇ ವರ್ಷದ ‘ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ’ ಯಲ್ಲಿ ಏ.16 ರಂದು ಗೆಲುವು ಸಾಧಿಸಿದ ತಂಡಗಳು. *ಮೈದಾನ 1* ಅಯ್ಯಮಾಡ ಮತ್ತು ಮಲ್ಲಾಜಿರ ತಂಡಗಳ ನಡುವಿನ ಪಂದ್ಯದಲ್ಲಿ ಮಲ್ಲಾಜಿರಕ್ಕೆ 8 ವಿಕೆಟ್ ಗಳ ಜಯ ಲಭಿಸಿತು. ಟಾಸ್ ಗೆದ್ದು ಬ್ಯಾಟಿಂಗ್ ಮಾಡಿದ ಅಯ್ಯಮಾಡ 6 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 43 ರನ್ ಗಳನ್ನು ಗಳಿಸಿತು. ಮಲ್ಲಾಜಿರ 6 ಓವರ್ 2 ವಿಕೆಟ್ ನಷ್ಟಕ್ಕೆ 45 ರನ್ ಗಳನ್ನು ಸೇರಿಸಿ ಗೆಲುವು ಕಂಡಿತು. ಚಾರಿಮoಡ ಮತ್ತು ಆಟ್ರಂಗಡ ನಡುವಿನ ಪಂದ್ಯದಲ್ಲಿ ಚಾರಿಮಂಡ 5 ರನ್ ಗಳ ಜಯ ಸಾಧಿಸಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಚಾರಿಮಂಡ 6 ಓವರ್ ಗಳಲ್ಲಿ 1 ವಿಕೆಟ್ ನಷ್ಟಕ್ಕೆ 84 ರನ್ ಗಳನ್ನು ಸೇರಿಸಿತು. ಆಟ್ರಂಗಡ 6 ಓವರ್ ಗಳಲ್ಲಿ ಯಾವುದೇ ವಿಕೆಟ್ ನಷ್ಟವಿಲ್ಲದೆ 79 ರನ್…
ಮಡಿಕೇರಿ NEWS DESK ಏ.16 : ಕೊಡವ ಕುಟುಂಬಗಳ ನಡುವೆ ಮೂರ್ನಾಡಿನಲ್ಲಿ ನಡೆಯುತ್ತಿರುವ 24ನೇ ವರ್ಷದ ‘ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ’ ಯಲ್ಲಿ ಏ.17 ರ ಪಂದ್ಯಗಳು. *ಮೈದಾನ 1* ಬೆಳಿಗ್ಗೆ 9 ಗಂಟೆಗೆ ಓಡಿಯಂಡ ಮತ್ತು ಅಮ್ಮುಣಿಚಂಡ, 10 ಗಂಟೆಗೆ ಕೋಚೆರ ಮತ್ತು ಚೆಯ್ಯಂಡ (ಬಲಂಬೆರಿ), 11ಕ್ಕೆ ಪಾಲಚಂಡ ಮತ್ತು ಐಚೋಡಿಯಂಡ, ಮಧ್ಯಾಹ್ನ 12ಕ್ಕೆ ಚೆರುವಾಳಂಡ (ಪಾಲೂರು) ಮತ್ತು ಚೆಕ್ಕೇರ, 1ಕ್ಕೆ ಬೋಳಕಾರಂಡ ಮತ್ತು ಅಡ್ಡೇಂಗಡ, 2ಕ್ಕೆ ಆಲೆಮಾಡ ಮತ್ತು ಚಾಮೇರಾ ಹಾಗೂ 3 ಗಂಟೆಗೆ ಕರ್ತಮಾಡ ಮತ್ತು ಮೋಟನಾಳಿರ *ಮೈದಾನ 2* ಬೆಳಿಗ್ಗೆ 9 ಗಂಟೆಗೆ ಚಂಗುಲoಡ ಮತ್ತು ಪೊನ್ನಚಂಡ, 10ಕ್ಕೆ ಮೇದೇರಿರ ಮತ್ತು ಕೋಲುಮಾದಂಡ (ರ್ವತ್ತೊಕ್ಲು), 11ಕ್ಕೆ ಮಂಡೀರ (ನೆಲಜಿ) ಮತ್ತು ಚೊಟ್ಟಂಗಡ, ಮಧ್ಯಾಹ್ನ 12ಕ್ಕೆ ಕೊಟ್ರಮಾಡ ಮತ್ತು ಮಚ್ಚಮಾಡ, 1ಕ್ಕೆ ಓಡಿಯಂಡ ಮತ್ತು ಅಮ್ಮುಣಿಚಂಡ (ವಿಜೇತರು) ಹಾಗೂ ಕೊಚೇರ ಮತ್ತು ಚೆಯ್ಯಂಡ (ವಿಜೇತರು)
ಮಡಿಕೇರಿ ಏ.16 NEWS DESK : ನಮ್ಮ ಗಣತಿ, ನಮ್ಮ ಅಭಿವೃದ್ಧಿ 2027 ರ ಜನಗಣತಿಯ ಮೊದಲ ಹಂತವು ಈಗಾಗಲೇ ಆರಂಭವಾಗಿದ್ದು, ಸ್ವಯಂ ಗಣತಿ ಕಾರ್ಯ ಪೂರ್ಣಗೊಂಡಿದೆ. ಆ ದಿಸೆಯಲ್ಲಿ ಕೊಡಗು ಜಿಲ್ಲೆಯಲ್ಲಿ ಸುಮಾರು 1,74,114 ಕುಟುಂಬಗಳಲ್ಲಿ 7,379 ಪ್ರಗತಿಯಾಗಿದೆ. ಉಳಿದಂತೆ ಏಪ್ರಿಲ್, 16 ರಿಂದ ಮೇ, 15 ರವರೆಗೆ ಗಣತಿದಾರರು ಮನೆ ಮನೆಗೆ ಭೇಟಿ ನೀಡಿ ಗಣತಿ ಕಾರ್ಯ ಕೈಗೊಳ್ಳಲಿದ್ದಾರೆ ಎಂದು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಮಾಹಿತಿ ನೀಡಿದ್ದಾರೆ. ಮನೆ ಮನೆ ಗಣತಿ ಕಾರ್ಯಕ್ಕಾಗಿ ಜಿಲ್ಲೆಯಲ್ಲಿ 999 ಗಣತಿದಾರರನ್ನು ನಿಯೋಜಿಸಲಾಗಿದೆ. ಮಡಿಕೇರಿ ತಾಲ್ಲೂಕಿಗೆ 187, ಮಡಿಕೇರಿ ನಗರಕ್ಕೆ 61, ಸೋಮವಾರಪೇಟೆ ತಾಲ್ಲೂಕಿಗೆ 186, ಸೋಮವಾರಪೇಟೆ ಪಟ್ಟಣ ಪಂಚಾಯಿತಿಗೆ 12, ವಿರಾಜಪೇಟೆ ತಾಲ್ಲೂಕಿಗೆ 133, ವಿರಾಜಪೇಟೆ ಪುರಸಭೆ ವ್ಯಾಪ್ತಿಗೆ 36, ಪೊನ್ನಂಪೇಟೆ ತಾಲ್ಲೂಕಿನಲ್ಲಿ 161, ಪೊನ್ನಂಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ 19, ಕುಶಾಲನಗರ ತಾಲ್ಲೂಕಿಗೆ 158, ಕುಶಾಲನಗರ ಪುರಸಭೆ ವ್ಯಾಪ್ತಿಯಲ್ಲಿ 46, ಒಟ್ಟು 999 ಗಣತಿದಾರರನ್ನು ನಿಯೋಜಿಸಲಾಗಿದೆ. ಜೊತೆಗೆ 172 ಮಂದಿ…
ಮಡಿಕೇರಿ NEWS DESK ಏ.15 : ಕೊಡವರ ಹೊಸ ವರ್ಷಾಚರಣೆ ಎಡ್ಮಾö್ಯರ್ 1 ರ ಪ್ರಯುಕ್ತ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ವತಿಯಿಂದ ಗೋಣಿಕೊಪ್ಪಲಿನಲ್ಲಿ ಪಂಜಿನ ಮೆರವಣಿಗೆ ಮತ್ತು ಮಾನವ ಸರಪಳಿ ನಡೆಯಿತು. ಕಾರ್ಯಕ್ರಮದ ನೇತೃತ್ವ ವಹಿಸಿದ್ದ ಸಿಎನ್ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರು ಕೊಡವರ ಹಕ್ಕುಗಳನ್ನು ಪ್ರತಿಪಾದಿಸಿದರು. 32ನೇ ವರ್ಷದ ಎಡ್ಮ್ಯಾರ್ 1 ರ ಪ್ರಯುಕ್ತ ಸಿಎನ್ಸಿಯಿಂದ ಗೋಣಿಕೊಪ್ಪಲಿನಲ್ಲಿ ಪಂಜಿನ ಮೆರವಣಿಗೆ ಮತ್ತು ಮಾನವ ಸರಪಳಿ 1 ನ್ನು ಆಚರಿಸಿದ ಸಿಎನ್ಸಿ ಸಂಘಟನೆಯ ಪ್ರಮುಖರು ಹಾಗೂ ಕೊಡವ, ಕೊಡವತಿಯರು ಕೊಡವ ಸಾಂಪ್ರದಾಯಿಕ ಉಡುಪಿನಲ್ಲಿ ದುಡಿಕೊಟ್ಟ್ ಪಾಟ್ ನೊಂದಿಗೆ ಗೋಣಿಕೊಪ್ಪಲಿನ ಆರ್ಎಂಸಿ ಯಾರ್ಡ್ ಬಳಿಯಿಂದ ಮುಖ್ಯ ಬೀದಿಯಲ್ಲಿ ಪೊಂಬೊಳ್ಕ್ ಮೆರವಣಿಗೆ ನಡೆಸಿದರು. ಮಾನವ ಸರಪಳಿ ರಚಿಸಿದ ನಂತರ ರಾಜ್ಯಾಂಗದತ್ತ ಹಕ್ಕೊತ್ತಾಯಗಳನ್ನು ಮಂಡಿಸಿ ಪ್ರತಿಜ್ಞಾ ವಿಧಿ ಸ್ವೀಕರಿಸಿದರು. ಈ ಸಂದರ್ಭ ಮಾತನಾಡಿದ ಎನ್.ಯು.ನಾಚಪ್ಪ ಅವರು ಕೊಡವರು ಪ್ರತ್ಯೇಕ ಮೂಲವಂಶಸ್ಥ ಜನಾಂಗವಾಗಿದ್ದು, ಸಂವಿಧಾನದ ಮೂಲಭೂತ ಹಕ್ಕುಗಳ 32ನೇ ವಿಧಿ ಪ್ರಕಾರ ಭಾರತ ಸರ್ಕಾರ ಸಂವಿಧಾನಿಕ ಪರಿಹಾರವಾಗಿ…
ವಿರಾಜಪೇಟೆ, NEWS DESK ಏ.15: ಪಟ್ಟಣದ ಸೆಂಟ್ ಆನ್ಸ್ ಪದವಿ ಕಾಲೇಜಿನ ಎನ್ ಎಸ್ ಎಸ್ ಘಟಕದ ವತಿಯಿಂದ ಕಾಲೇಜಿನಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ಜಯಂತಿಯನ್ನು ಆಚರಿಸಲಾಯಿತು. ಡಾ. ಬಿ. ಆರ್. ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಪುಷ್ಪ ನಮನವನ್ನು ಸಲ್ಲಿಸುವುದರ ಮೂಲಕ ಸಭಾ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಲಾಯಿತು.ಕಾರ್ಯಕ್ರಮವನ್ನು ಉದ್ದೇಶಿಸಿ ಕಾಲೇಜಿನ ಐಕ್ಯೂಎಸಿ ಸಂಚಾಲಕಿ ಹೇಮ ಬಿ. ಡಿ. ರವರು ಮಾತನಾಡಿ ಮಹನೀಯರುಗಳ ಜಯಂತಿ ಆಚರಣೆಗಳು ಅವರು ಸಮಾಜಕ್ಕೆ ಹಾಗೂ ರಾಷ್ಟ್ರಕ್ಕೆ ನೀಡಿದ ಕೊಡುಗೆಗಳ ಪ್ರತೀಕವಾಗಿದ್ದು ಅಂತೆಯೇ ರಾಷ್ಟ್ರ ಕಂಡ ಅಪ್ರತಿಮ ಮಹನೀಯ ವ್ಯಕ್ತಿ ಸಂವಿಧಾನ ಶಿಲ್ಪಿ ಡಾ ಬಿ ಆರ್ ಅಂಬೇಡ್ಕರ್ ರವರಾಗಿದ್ದು ಭಾರತದ ಸಂವಿಧಾನದ ರಚನೆಯಲ್ಲಿ ಅವರು ವಹಿಸಿದ ಪಾತ್ರ ಅಪಾರವಾಗಿದೆ ಎಂದರು.ವಿದ್ಯಾರ್ಥಿಗಳು ಮಹಾನ್ ನಾಯಕರನ್ನು ಆದರ್ಶವಾಗಿಟ್ಟು ಯಶಸ್ವಿ ಪ್ರಜೆಗಳಾಗಿ ಎಂದು ಕಿವಿಮಾತನ್ನು ಹೇಳಿದರು. ಕಾಲೇಜಿನ ಎನ್ ಎಸ್ ಎಸ್ ಘಟಕದ ನಾಯಕ ಮುತ್ತಪ್ಪ ದಿನದ ಮಹತ್ವದ ಕುರಿತು ಮಾತನಾಡಿ ಡಾ. ಬಿ ಆರ್ ಅಂಬೇಡ್ಕರ್…
ಮಡಿಕೇರಿ NEWS DESK ಏ.15 : ಮಡಿಕೇರಿ ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಶ್ರೀ ಕೋಟೆ ಮಾರಿಯಮ್ಮ ದೇವಾಲಯದಲ್ಲಿ ಏ.19 ರಿಂದ 21ರ ವರೆಗೆ ಶ್ರೀ ಕೋಟೆ ಮಾರಿಯಮ್ಮ ದೇವಿಯ ಪ್ರತಿಷ್ಠಾಪನಾ ವಾರ್ಷಿಕೋತ್ಸವ, ನಾಗ ಪ್ರತಿಷ್ಠಾಪನಾ ಮಹೋತ್ಸವ, ನಾಗದರ್ಶನ, ಪಾಷಾಣಮೂರ್ತಿ ದೈವದ ಪ್ರತಿಷ್ಠಾಪನಾ ವಾರ್ಷಿಕೋತ್ಸವ, ಕೋಲ ಹಾಗೂ ಅಗೆಲು ಸೇವೆ ನಡೆಯಲಿದೆ. ಏ.19 ರಂದು ಸಂಜೆ 6 ಗಂಟೆಗೆ ಪಯ್ಯನೂರು ಹೆಸರಾಂತ ತಂತ್ರಿಗಳಾದ ಆಚಾರ್ಯ ಈಶ್ವರನ್ ನಂಬೂದರಿರವರ ನೇತೃತ್ವದಲ್ಲಿ ದೇವಿಯ ಸನ್ನಧಿಯಲ್ಲಿ ಧಾರ್ಮಿಕ ವಿಧಿವಿಧಾನಗಳಾದ ಆಚಾರ್ಯ ವರಣಂ, ಪುಣ್ಯಾಹ ಶುದ್ದಿ, ಸುದರ್ಶನ ಹೋಮ, ದೇವಿ ಪೂಜೆ, ಲಲಿತಾ ಸಹಸ್ರನಾಮಾರ್ಚನೆ, ಪ್ರಸಾದ ವಿತರಣೆ ನೆರವೇರಲಿದೆ. ಏ.20 ರಂದು ಬೆಳಿಗ್ಗೆ 6 ಗಂಟೆಗೆ ಮಹಾಗಣಪತಿ ಹೋಮ, ನವಕ ಪಂಚಗವ್ಯ ಕಳಶ ಪೂಜೆ, ನವಕ ಪಂಚಗವ್ಯ ಕಳಶಾಭಿಷೇಕ, ಸರ್ವಾಲಂಕಾರ ಮಹಾಪೂಜೆ, ಪಾಷಾಣಮೂರ್ತಿ ದೈವದ ಕಳಶ ಪೂಜೆ, ಅಲಂಕಾರ ಪೂಜೆ ಹಾಗೂ ಮಂಗಳಾರತಿ ನಡೆಯಲಿದೆ. ನಾಗ ಪ್ರತಿಷ್ಠಾಪನೆ ವಾರ್ಷಿಕೋತ್ಸವ ಪ್ರಯುಕ್ತ ಬೆಳಿಗ್ಗೆ 8 ಗಂಟೆಗೆ ಆಶ್ಲೇಷ…
ಮಡಿಕೇರಿ NEWS DESK ಏ.15 : ರಾಜ್ಯ ಸರ್ಕಾರ ಪ್ರಸಕ್ತ ಸಾಲಿನ ಮುಂಗಡ ಪತ್ರದಲ್ಲಿ ನೂತನವಾಗಿ ಕೊಡವ ಅಭಿವೃದ್ದಿ ನಿಗಮವನ್ನು ಘೋಷಿಸಿದ ಹಿನ್ನಲೆಯಲ್ಲಿ, ಯುನೈಟೆಡ್ ಕೊಡವ ಆರ್ಗನೈಸೇಷನ್ ಸಂಘಟನೆಯ ಅಧ್ಯಕ್ಷ ಕೊಕ್ಕಲೆಮಾಡ ಮಂಜು ಚಿಣ್ಣಪ್ಪರವರನ್ನು ಪಾಡಿ ಶ್ರೀ. ಇಗ್ಗುತ್ತಪ್ಪ ದೇವಸ್ಥಾನದಲ್ಲಿ ಅಖಿಲ ಕೊಡವ ಸಮಾಜ ಹಾಗು ಇಗ್ಗುತ್ತಪ್ಪ ಭಕ್ತಜನ ಸಂಘದ ವತಿಯಿಂದ ಸ್ಮರಣಿಕೆ ನೀಡಿ ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭ ಮಾತನಾಡಿದ ಅಖಿಲ ಕೊಡವ ಸಮಾಜ ಹಾಗು ಭಕ್ತಜನ ಸಂಘದ ಅಧ್ಯಕ್ಷ ಪರದಂಡ ಸುಮನ್ ಸುಬ್ರಮಣಿ , ಕೊಡವರಿಗೆ ನೂತನವಾಗಿ ಅಭಿವೃದ್ಧಿ ನಿಗಮ ಬೇಕೆಂಬ ಮಹತ್ವದ ಪರಿಕಲ್ಪನೆಯನ್ನು ಹುಟ್ಟು ಹಾಕಿ, ಬೇಡಿಕೆಯನ್ನು ವ್ಯವಸ್ಥಿತವಾಗಿ ಸರ್ಕಾರಕ್ಕೆ ಮುಟ್ಟಿಸಿ, ಇದೀಗ ಶಾಸಕ ಎ.ಎಸ್ ಪೊನ್ನಣ್ಣನವರ ಮೂಲಕ ಸರ್ಕಾರದಿಂದ ಅಧಿಕೃತವಾಗಿ ಕೊಡವ ಅಭಿವೃದ್ಧಿ ನಿಗಮವನ್ನು ಘೋಷಣೆ ಮಾಡಿಸುವಲ್ಲಿ ಮಂಜು ಚಿಣ್ಣಪ್ಪನವರ ಶ್ರಮ ಎಷ್ಟಿದೆ ಎಂಬುವುದು ಎಲ್ಲರಿಗೂ ಗೊತ್ತಿರುವ ವಿಚಾರ. ಕೊಡವರ ಸಮಗ್ರ ಅಭಿವೃದ್ಧಿಯ ನಿಟ್ಟಿನಲ್ಲಿ ನಿಗಮ ಸ್ಥಾಪನೆಯು ಕೊಡವರ ಪಾಲಿಗೆ ಒಂದು ಐತಿಹಾಸಿಕ ಮೈಲಿಗಲ್ಲಾಗಿದ್ದು, ಇದನ್ನು ಪಡೆದುಕೊಳ್ಳುವುದು…
ಮಡಿಕೇರಿ NEWS DESK ಏ.15 : ಮಡಿಕೇರಿ ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಶ್ರೀ ಕಂಚಿಕಾಮಾಕ್ಷಿಯಮ್ಮ ದೇವಾಲಯದ 19ನೇ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ ಏ.18 ಮತ್ತು 19 ರಂದು ನಡೆಯಲಿದೆ. ಕೇರಳದ ಪಯ್ಯನೂರ್ ನ ಶ್ರೀ ಈಶ್ವರ ನಂಬೂದರಿ ಅವರ ನೇತೃತ್ವದಲ್ಲಿ ಎರಡು ದಿನಗಳ ವಿವಿಧ ಧಾರ್ಮಿಕ ವಿಧಿ ವಿಧಾನಗಳು ನೆರವೇರಲಿದೆ. ಏ.18 ರಂದು ಸಂಜೆ 6 ಗಂಟೆಗೆ ಆಚಾರ್ಯರ ಆಗಮನ, ದೇವಾಲಯದಲ್ಲಿ ಪುಣ್ಯಾಹ ಶುದ್ಧಿ, ದೇವಿ ಪೂಜೆ, ಸುದರ್ಶನ ಹೋಮ ಮತ್ತು ಪ್ರಸಾದ ವಿತರಣೆಯಾಗಲಿದೆ. ಏ.19 ರಂದು ಬೆಳಿಗ್ಗೆ 7 ಗಂಟೆಗೆ ಮಹಾ ಗಣಪತಿ ಹೋಮ, ಮಹಾ ಮೃತ್ಯುಂಜಯ ಹೋಮ, ಐಕ್ಯಮತ್ಯ ಸುಕ್ರದ ಹೋಮ ಪೂಜೆ, ಕಳಸ ಪೂಜೆ, ದೇವಿಗೆ ಅಭಿಷೇಕ, ಅಲಂಕಾರ ಪೂಜೆ ಹಾಗೂ ಮಹಾಪೂಜೆ ನೆರವೇರಲಿದೆ. ನಂತರ ಭಕ್ತರಿಗೆ ಅನ್ನಸಂತರ್ಪಣೆಯಾಗಲಿದೆ. ಅನ್ನಸoತರ್ಪಣೆಗೆ ಬೇಕಾಗುವ ಅಕ್ಕಿ, ಬೇಳೆ, ಬೆಲ್ಲ, ತರಕಾರಿ ಹಾಗೂ ಇತರ ಸಾಮಾಗ್ರಿಗಳನ್ನು ನೀಡಲಿಚ್ಛಿಸುವ ದಾನಿಗಳು 9482192248, 8095858864, 9731411523 ನ್ನು ಸಂಪರ್ಕಿಸಬಹುದಾಗಿದೆ. ಎರಡು ದಿನಗಳ…
ಮಡಿಕೇರಿ NEWS DESK ಏ.15 : ವಾರ್ಷಿಕ ಪೂಜೋತ್ಸವದಲ್ಲಿ ತೊಡಗಿದ್ದ ಭಕ್ತರ ಮೇಲೆ ಹೆಜ್ಜೇನು ಹುಳಗಳು ದಾಳಿ ಮಾಡಿರುವ ಘಟನೆ ಕಣಿವೆಯ ಹೊಸಪಟ್ಟಣ ಗ್ರಾಮದ ಶ್ರೀ ಬಸವೇಶ್ವರ ಹಾಗೂ ಕನ್ನಂಬಾಡಮ್ಮ ದೇವಾಲಯದ ಬಳಿ ನಡೆದಿದೆ. ಶ್ರೀ ಬಸವೇಶ್ವರ ಹಾಗೂ ಕನ್ನಂಬಾಡಮ್ಮ ದೇವಾಲಯದ ವಾರ್ಷಿಕೋತ್ಸವದ ಪ್ರಯುಕ್ತ ದೇವರ ಉತ್ಸವ ಮೂರ್ತಿಗಳನ್ನು ಕಾವೇರಿ ನದಿಯಲ್ಲಿ ಸ್ನಾನ ಮಾಡಿಸಿ ಗಂಗಾಪೂಜೆ ನೆರವೇರಿಸಲಾಗುತ್ತಿತ್ತು. ಈ ಸಂದರ್ಭ ಏಕಾಏಕಿ ಹೆಜ್ಜೇನು ಹುಳಗಳು ಗ್ರಾಮಸ್ಥರ ಮೇಲೆ ದಾಳಿ ಮಾಡಿತು. ಬಹುತೇಕ ಮಂದಿ ದೇವಾಲಯದತ್ತ ಮತ್ತು ತಮ್ಮ ತಮ್ಮ ಮನೆಗಳಿಗೆ ಓಡಿ ನಿಟ್ಟುಸಿರುಬಿಟ್ಟರು. ಕೆಲವರು ದೇವರಿಗೆ ತಪ್ಪು ಕಾಣಿಕೆ ಹಾಕಿ ಪ್ರಾರ್ಥಿಸಿದರು, ಅದೃಷ್ಟವಶಾತ್ ಭಕ್ತರು ಪ್ರಾಣಾಪಾಯದಿಂದ ಪಾರಾದರು.






