ಮಡಿಕೇರಿ ಮೇ 9 NEWS DESK : ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಗೆ ಶಾಸಕ ಡಾ. ಮಂತರ್ ಗೌಡ ಅವರು ಪ್ರಾಥಮಿಕ ಚಿಕಿತ್ಸೆ ನೀಡುವ ಮೂಲಕ ತಮ್ಮ ವೈದ್ಯ ಧರ್ಮ ಪಾಲಿಸಿದರು. ಹಾಸನ-ಕುಶಾಲನಗರ ಮುಖ್ಯ ರಸ್ತೆಯ ಕಣಿವೆ ಗ್ರಾಮದಲ್ಲಿ ಬೈಕ್ ಒಂದು ಸವಾರನ ನಿಯಂತ್ರಣ ಕಳೆದುಕೊಂಡು ರಸ್ತೆಗೆ ಬಿದ್ದಿತ್ತು. ಈ ವೇಳೆ ಬೈಕ್ ಸವಾರನ ಕೈ ಹಾಗೂ ಕಾಲುಗಳಿಗೆ ಗಾಯಗಳಾಗಿತ್ತು. ಕಣಿವೆ ರಾಂಪುರ ಗ್ರಾಮದಲ್ಲಿ ನೂತನ ಬಸ್ ಸ್ಟಾಪ್ ಕಾಮಗಾರಿ ನಡೆಯುತ್ತಿದ್ದ ಹಿನ್ನೆಲೆಯಲ್ಲಿ ಅತ್ತ ಕಡೆಗೆ ತೆರಳುತ್ತಿದ್ದ ಮಡಿಕೇರಿ ಕ್ಷೇತ್ರ ಶಾಸಕ ಡಾ.ಮಂತರ್ ಗೌಡ, ತಕ್ಷಣವೇ ತಮ್ಮ ವಾಹನ ನಿಲ್ಲಿಸಿ ವಾಹನದಲ್ಲಿದ್ದ ಫಸ್ಟ್ ಏಯ್ಡ್ ಕಿಟ್ ಬಳಸಿ ಗಾಯಗೊಂಡಿದ್ದ ಬೈಕ್ ಸವಾರನ ಗಾಯಗಳಿಗೆ ಬ್ಯಾಂಡೇಜ್ ಸುತ್ತಿ ಪ್ರಥಮ ಚಿಕಿತ್ಸೆ ಮೂಲಕ ಉಪಚರಿಸಿದರು. ಬಳಿಕ ಬೇರೊಂದು ವಾಹನದಲ್ಲಿ ಗಾಯಾಳುವನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಿದರು. ಶಾಸಕ ಡಾಕ್ಟರ್ ಮಂತರ್ ಗೌಡ ಅವರ ಕಾಳಜಿಗೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದರು.
ಲೇಖಕ: admin
ಮಡಿಕೇರಿ NEWS DESK ಮೇ 9 : ಕೊಡಗಿನ ಕ್ರೀಡಾಪಟುಗಳನ್ನು ಒಳಗೊಂಡ ಕರ್ನಾಟಕ ತಂಡ ರಾಷ್ಟçಮಟ್ಟದ ಸೆಸ್ಟೋಬಾಲ್ ಕ್ರೀಡೆಯಲ್ಲಿ ಇದೇ ಮೊದಲ ಬಾರಿಗೆ ಚಿನ್ನವನ್ನು ಗೆದ್ದು ಚಾಂಪಿಯನ್ ಆಗಿ ಹೊರ ಹೊಮ್ಮಿದೆ. ತೆಲಂಗಾಣದಲ್ಲಿ ನಡೆದ ಕ್ರೀಡಾಕೂಟದಲ್ಲಿ ಕರ್ನಾಟಕ ತಂಡ ಕ್ವಾಟರ್ ಫೈನಲ್ ನಲ್ಲಿ ವಿದರ್ಭ ತಂಡವನ್ನು 21-18 ರ ಅಂತರದಲ್ಲಿ ಮಣಿಸಿತು. ಸೆಮಿಫೈನಲ್ ನಲ್ಲಿ 18-40 ಭಾರೀ ಅಂತರದಿoದ ಗೆಲುವು ದಾಖಲಿಸಿತು. ನಂತರ ನಡೆದ ಅಂತಿಮ ಪಂದ್ಯದಲ್ಲಿ ಪಂಜಾಬ್ ವಿರುದ್ಧ 58-30 ಅಂತರದಲ್ಲಿ ಜಯಗಳಿಸುವ ಮೂಲಕ ಕರ್ನಾಟಕ ಬಾಲಕರ ತಂಡ 4ನೇ ಸಬ್ ಜೂನಿಯರ್ ಪಂದ್ಯಾಟದ ಚಾಂಪಿಯನ್ ಪಟ್ಟ ಮುಡಿಗೇರಿಸಿಕೊಂಡಿತು. ಬಾಲಕಿಯರ ತಂಡ ಮೊದಲಿಗೆ ಕೇರಳದ ವಿರುದ್ಧ ಎಡವಿದರೂ ನಂತರದಲ್ಲಿ ತೆಲಂಗಾಣ ತಂಡದ ಮೇಲೆ ಸಮಬಲವನ್ನು ಸಾಧಿಸಿತು. ಅಸ್ಸಾಂ, ಚಂಡೀಗಡ್ ತಂಡದ ಮೇಲೆ ಅತೀ ಹೆಚ್ಚಿನ ಅಂಕ ಪಡೆದು ಸೆಮಿಫೈನಲ್ ಪಂದ್ಯಾಟಕ್ಕೆ ಆಯ್ಕೆಯಾಗಿ ಬಲಿಷ್ಠ ತಮಿಳುನಾಡು ತಂಡವನ್ನು ಮಣಿಸಿತು. ಅಂತಿಮ ಪಂದ್ಯಾಟದಲ್ಲಿ ಆಂಧ್ರಪ್ರದೇಶ ತಂಡವನ್ನು ಸೋಲಿಸಿ 4ನೇ ಸಬ್ ಜೂನಿಯರ್ ಪಂದ್ಯಾಟದ…
ಮಡಿಕೇರಿ NEWS DESK ಮೇ 9 : ಇತ್ತೀಚೆಗೆ ನವದೆಹಲಿಯ ತ್ಯಾಗರಾಜ ಸ್ಟೇಡಿಯಂನಲ್ಲಿ ನಡೆದ “ರಾಷ್ಟ್ರಮಟ್ಟದ ಬ್ರೈನೋಬ್ರೈನ್ ಸ್ಪರ್ಧೆ : ಮಡಿಕೇರಿಯ ಅನ್ವಿತ್.ಎಸ್ ಚಾಂಪಿಯನ್ಮಟ್ಟದ 47ನೇ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿಯ ಅನ್ವಿತ್.ಎಸ್ (9) ಜೂನಿಯರ್ ವಿಭಾಗದಲ್ಲಿ ಚಾಂಪಿಯನ್ ಆಗಿ ಹೊರ ಹೊಮ್ಮಿದ್ದಾರೆ. ಸ್ಪರ್ಧೆಯಲ್ಲಿ ದೇಶದ 2000 ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಬ್ರೈನೋಬ್ರೈನ್ ಅಂತರಾಷ್ಟ್ರೀಯ ದುಬೈ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಆನಂದ್ ಸುಬ್ರಮಣ್ಯಂ, ತಾಂತ್ರಿಕ ನಿರ್ದೇಶಕ ಅರುಲ್ ಸುಬ್ರಮಣ್ಯಂ ಹಾಗೂ ರಾಜ್ಯದ ಸ್ಥಳೀಯ ವ್ಯವಸ್ಥಾಪಕ ನಿರ್ದೇಶಕರುಗಳು ಉಪಸ್ಥಿತರಿದ್ದು, ಅನ್ವಿತ್ ಜಾಣ್ಮೆಗೆ ಶ್ಲಾಘನೆ ವ್ಯಕ್ತಪಡಿಸಿದರು. ಅನ್ವಿತ್ ಎಸ್. ಮಡಿಕೇರಿಯ ಬ್ರೈನೋಬ್ರೈನ್ ಅಬಾಕಾಸ್ ಸಂಸ್ಥೆಯ ಮಾಪಂಗಡ ಕವಿತಾ ಕರುಂಬಯ್ಯ ಅವರ ಬಳಿ ತರಬೇತಿ ಪಡೆಯುತ್ತಿದ್ದಾನೆ. ಮದೆನಾಡಿನ ಬಿಜಿಎಸ್ ಶಾಲೆಯ 3ನೇ ತರಗತಿಯ ವಿದ್ಯಾರ್ಥಿಯಾಗಿರುವ ಈತ ಮದೆನಾಡಿನ ಮದೆ ಮಹೇಶ್ವರ ಪದವಿಪೂರ್ವ ಕಾಲೇಜ್ ನ ಉಪನ್ಯಾಸಕ ಶ್ರೀನಿವಾಸ ವಿ. ಹಾಗೂ ಪವಿತ್ರ ಎಂ.ಎನ್ ದಂಪತಿಯ ಪುತ್ರ. ಅನ್ವಿತ್ ಸಣ್ಣ ವಯಸ್ಸಿನಲ್ಲೇ ಈ ಮಟ್ಟದ ಯಶಸ್ಸು ಗಳಿಸಲು…
ಮಡಿಕೇರಿ NEWS DESK ಮೇ 9 : ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಕಲೆ ಸಹಕಾರಿಯಾಗಿದೆ, ಕಲೆಯ ಅನಾವರಣಕ್ಕೆ ಸೂಕ್ತ ವೇದಿಕೆ ಕಲ್ಪಿಸಿಕೊಡುವ ಕಾರ್ಯಕ್ರಮಗಳನ್ನು ವಿದ್ಯಾರ್ಥಿಗಳು ಸದುಪಯೋಗಪಡಿಸಿಕೊಳ್ಳಬೇಕು ಎಂದು ಮೇಜರ್ ಪ್ರೊ.ರಾಘವ ಬಿ. ಅವರು ಕರೆ ನೀಡಿದ್ದಾರೆ. ನಗರದ ಕೊಡಗು ವಿಶ್ವ ವಿದ್ಯಾನಿಲಯದ ಫೀ.ಮಾ.ಕೆ.ಎಂ.ಕಾರ್ಯಪ್ಪ ಕಾಲೇಜು ವತಿಯಿಂದ ಕಾಲೇಜ್ ನಲ್ಲಿ ನಡೆದ ಪ್ರತಿಭಾನ್ವೇಷಣೆಯ ಕಲೆಯ ಹಬ್ಬ “ಕಲಾ ವೈಭವ” ವನ್ನು ಉದ್ಘಾಟಿಸಿ ಅವರು ಮಾತನಾಡಿದರು. ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಕಲೆ ಸಹಕಾರಿಯಾಗಿದೆ. ಶಿಕ್ಷಣದ ಜೊತೆಯಲ್ಲಿ ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗೆ ಕಾಲೇಜು ಶ್ರಮಿಸುತ್ತಿದ್ದು, ಕಲಾ ವೈಭವ ಇದರ ಒಂದು ಭಾಗವಾಗಿದೆ. ಇಂತಹ ವೇದಿಕೆಗಳನ್ನು ಸದುಪಯೋಗಪಡಿಸಿಕೊಳ್ಳುವ ಮೂಲಕ ವಿದ್ಯಾರ್ಥಿಗಳು ತಮ್ಮ ಪ್ರತಿಭೆಯನ್ನು ಅನಾವರಣಗೊಳಿಸಬೇಕು ಎಂದು ಕಿವಿಮಾತು ಹೇಳಿದರು. ಸಮಾಜಕ್ಕೆ ಉತ್ತಮ ಪ್ರಜೆಗಳನ್ನು ವಿದ್ಯಾರ್ಥಿಗಳ ರೂಪದಲ್ಲಿ ನೀಡುವ ಕಾರ್ಯವನ್ನು ನಿಸ್ವಾರ್ಥವಾಗಿ ಕಾಲೇಜುಗಳು ಮಾಡುತ್ತಿವೆ. ಎಲ್ಲರೂ ಕೈ ಜೋಡಿಸಿದರೆ ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಕಾಲೇಜು ಕೂಡ ಅಭಿವೃದ್ಧಿ ಹೊಂದಲು ಸಾಧ್ಯವಾಗುತ್ತದೆ ಎಂದು ಮೇಜರ್ ಪ್ರೊ.ರಾಘವ ಬಿ. ತಿಳಿಸಿದರು. ಮುಖ್ಯ ಅತಿಥಿಗಳಾಗಿ…
ಮಡಿಕೇರಿ NEWS DESK ಮೇ 8 : ಮುಂಬರುವ ಮುಂಗಾರಿನಲ್ಲಿ ಜಿಲ್ಲೆಯಲ್ಲಿ ಉಂಟಾಗಬಹುದಾದ ಸಂಭವನೀಯ ಭೂಕುಸಿತ, ನದಿ ಪ್ರವಾಹದಂತಹ ವಿಕೋಪದ ಸಮಯದಲ್ಲಿ ಜನರ ಪ್ರಾಣ, ಆಸ್ತಿ ರಕ್ಷಿಸುವ ನಿಟ್ಟಿನಲ್ಲಿ ಕ್ಷಿಪ್ರವಾಗಿ ಸ್ಪಂದಿಸುವ ಸಲುವಾಗಿ ಮತ್ತು ಇತರ ಇಲಾಖೆಗಳೊಡನೆ ಸಮನ್ವಯ ಸಾಧಿಸುವ ನಿಟ್ಟಿನಲ್ಲಿ ಪೊಲೀಸ್, ಜಿಲ್ಲಾ ವಿಪತ್ತು ನಿಯಂತ್ರಣ ಕೇಂದ್ರ ಮತ್ತು ಅಗ್ನಿಶಾಮಕ ದಳದ ಅಧಿಕಾರಿಗಳ ಸಭೆ ಕರೆದು ಜಿಲ್ಲೆಯಲ್ಲಿ ತುರ್ತು ಸಂದರ್ಭದಲ್ಲಿ ಲಭ್ಯವಿರುವ ಜೀವ ರಕ್ಷಣಾ ಸಾಮಗ್ರಿಗಳು, ವಾಹನಗಳು, ಸ್ವಯಂಸೇವಕರ ಸಹಕಾರ, ಬದಲಿ ರಸ್ತೆ ಮಾರ್ಗಗಳ ಗುರುತಿಸುವಿಕೆ ಮುಂತಾದ ವಿಷಯಗಳ ಬಗ್ಗೆ ಚರ್ಚಿಸಲಾಯಿತು.
ಮಡಿಕೇರಿ ಮೇ 8 NEWS DESK : 66/11ಕೆ.ವಿ ವಿದ್ಯುತ್ ಉಪಕೇಂದ್ರದಿಂದ ಹೊರಹೊಮ್ಮುವ ಎಫ್6 ಭಾಗಮಂಡಲ ಫೀಡರ್ನಲ್ಲಿ ಮೇ, 11 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಮಳೆಗಾಲದ ಮುಂಜಾಗೃತಾ ಫೀಡರ್ ನಿರ್ವಹಣಾ ಕಾಮಗಾರಿ ನಡೆಸಬೇಕಾಗಿರುವುದರಿಂದ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಆದ್ದರಿಂದ ತಾಳತ್ಮನೆ, ಅಪ್ಪಂಗಳ, ಬೆಟ್ಟಗೇರಿ, ಚೇರಂಬಾಣೆ, ಚೆಟ್ಟಿಮಾನಿ, ಭಾಗಮಂಡಲ, ತಲಕಾವೇರಿ, ಅಯ್ಯಂಗೇರಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.
ಮಡಿಕೇರಿ ಮೇ 8 NEWS DESK : ಮೂರ್ನಾಡು 33/11 ಕೆ.ವಿ ವಿದ್ಯುತ್ ವಿತರಣಾ ಉಪಕೇಂದ್ರದ ಕೇಂದ್ರದಿಂದ ಹೊರಹೊಮ್ಮುವ ಎಫ್3 ಮೂರ್ನಾಡು ಫೀಡರ್ನಲ್ಲಿ ಮೇ, 10 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಕೊಡಗು ಜಾಲ ಬಲವರ್ಧನೆ ಕಾಮಗಾರಿ ಕೈಗೆತ್ತಿಕೊಳ್ಳುತ್ತಿರುವುದರಿಂದ ಈ ಮಾರ್ಗದಿಂದ ವಿದ್ಯುತ್ ಸರಬರಾಜಾಗುವ ಮೂರ್ನಾಡು ಟೌನ್, ಮುತ್ತಾರ್ಮುಡಿ, ಕುಂಬಳದಾಳು, ಕಿಗ್ಗಾಲು, ಕಬಡಗೇರಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.
ಮಡಿಕೇರಿ ಮೇ 8 NEWS DESK : ಬ್ರಹ್ಮಕುಮಾರೀಸ್ ಮಡಿಕೇರಿ ಶಾಖೆ ವತಿಯಿಂದ ಮಾದಾಪುರ ಸಮೀಪದ ಜಂಬೂರು ಗ್ರಾಮದ ಸಮುದಾಯ ಭವನದಲ್ಲಿ 15 ವರ್ಷದೊಳಗಿನ ಮಕ್ಕಳಿಗಾಗಿ ಸರ್ವತೋಮುಖ ವ್ಯಕ್ತಿತ್ವ ವಿಕಸನ ಶಿಬಿರ ನಡೆಯಿತು. ಐದು ದಿನಗಳ ಕಾಲ ನಡೆದ ಶಿಬಿರದಲ್ಲಿ ಧ್ಯಾನ, ಪ್ರಾಣಾಯಾಮ, ಯೋಗಾಸನ ಹಾಗೂ ಮೌಲ್ಯಾಧಾರಿತ ಕ್ರೀಡೆ ನಡೆಯಿತು. ಶಿಬಿರವನ್ನು ಬ್ರಹ್ಮಕುಮಾರೀಸ್ ಮಡಿಕೇರಿ ಶಾಖೆಯ ಜಿಲ್ಲಾ ಸಂಚಾಲಕರಾದ ರಾಜಯೋಗಿನಿ ಬಿ.ಕೆ.ಗಾಯತ್ರೀಜಿ ಅವರು ಉದ್ಘಾಟಿಸಿ, ಆಶೀರ್ವಚನ ನೀಡಿ ಮಕ್ಕಳಿಗೆ ಉತ್ತಮ ಬದುಕಿನ ದಾರಿಯ ಕುರಿತು ಪ್ರೇರಣಾದಾಯಕ ಮಾತುಗಳನ್ನಾಡಿದರು. ಆಯುರ್ವೇದ ವೈದ್ಯರಾದ ಡಾ.ರಾಜಾರಾಮ್, ಡಾ.ಜ್ಯೋತಿ ಹಾಗೂ ಡಾ.ಪುರುಷೋತ್ತಮ್ ಅವರು ಮಕ್ಕಳ ಆರೋಗ್ಯ ತಪಾಸಣೆ ನಡೆಸಿ ಅಗತ್ಯ ಔಷಧಿಗಳನ್ನು ವಿತರಿಸಿದರು. ಬಿ.ಕೆ. ಧನಲಕ್ಷ್ಮಿಯವರು ಮಕ್ಕಳಿಗೆ ರಾಜಯೋಗ ಧ್ಯಾನದ ಅಭ್ಯಾಸ ಮಾಡಿಸಿದರೆ, ಆಲಿಮಾ ಅವರು ಯೋಗಾಸನ ಹಾಗೂ ನೃತ್ಯದ ಮೂಲಕ ಮಕ್ಕಳನ್ನು ರಂಜಿಸಿದರು. ನೆನಪಿನ ಶಕ್ತಿ ಹೆಚ್ಚಿಸುವ ಆಟಗಳನ್ನು ದೀಕ್ಷಾ ನಡೆಸಿಕೊಟ್ಟರು. ಬಿಂದು, ಶರ್ಮಿಳ ಹಾಗೂ ರೇವತಿ ಅವರು ಮಕ್ಕಳಿಗೆ ಜೀವನ ಮೌಲ್ಯಗಳ ಕುರಿತು ಕಿವಿಮಾತು…
ಸೋಮವಾರಪೇಟೆ ಮೇ 8 NEWS DESK : ನಿವೇಶನ ರಹಿತ ಬಡವರಿಗೆ ನಿವೇಶನ ನೀಡುವಂತೆ ಒತ್ತಾಯಿಸಿ, ಕರ್ನಾಟಕ ಬಹುಜನ ಕಾರ್ಮಿಕ ಸಂಘಟನೆಯ ನೇತೃತ್ವದಲ್ಲಿ ಕುಂಬೂರು ಗ್ರಾಮದ ಪೈಸಾರಿ ಜಾಗದಲ್ಲಿ ವಸತಿ ರಹಿತ ಕಾರ್ಮಿಕರು ನಡೆಸುತ್ತಿರುವ ಅಹೋರಾತ್ರಿ ಧರಣಿ 8ನೇ ದಿನಕ್ಕೆ ಕಾಲಿಟ್ಟಿದೆ. 8ನೇ ದಿನವೂ ಯಾವುದೇ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಧರಣಿ ಸ್ಥಳಕ್ಕೆ ಭೇಟಿ ನೀಡಲಿಲ್ಲ. ಕಾರ್ಮಿಕ ಸಂಘಟನೆಯ ಅಧ್ಯಕ್ಷ ಕೆ.ಮೊಣ್ಣಪ್ಪ ನೇತೃತ್ವದಲ್ಲಿ ಪ್ರಮುಖರು ಮಡಿಕೇರಿಯಲ್ಲಿ ಉಪವಿಭಾಧಿಕಾರಿ ಅವರನ್ನು ಭೇಟಿಯಾಗಿ ಪೈಸಾರಿ ಜಾಗದ ಪಟ್ಟಿ ಹಾಗೂ ಸರ್ಕಾರಿ ಜಾಗ ಒತ್ತುವರಿಯ ಬಗ್ಗೆ ಮಾಹಿತಿ ನೀಡಿದರು. ಶನಿವಾರ ಸ್ಥಳಕ್ಕೆ ತಹಸೀಲ್ದಾರ್ ಅವರನ್ನು ಕಳುಹಿಸಿ, ಮಾಹಿತಿ ಪಡೆದುಕೊಂಡು ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ ಎಂದು ಮೊಣ್ಣಪ್ಪ ಹೇಳಿದರು. ಜಿಲ್ಲಾಡಳಿತ ಬಡ ಕಾರ್ಮಿಕರ ಸಮಸ್ಯೆಗೆ ಪರಿಹಾರ ನೀಡಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ಮಡಿಕೇರಿ ಮೇ 8 NEWS DESK : ಮಕ್ಕಳು ಬಾಲ್ಯಾವಸ್ಥೆಯಿಂದಲೇ ಶಿಸ್ತನ್ನು ಮೈಗೂಡಿಸಿಕೊಳ್ಳುವದರೊಂದಿಗೆ ದೇಶ ಭಕ್ತರಾಗಿ ಬಾಳಬೇಕು ಎಂದು ಮಾಜಿ ಕ್ಯಾಪ್ಟನ್, ಮ್ಯಾರಥಾನ್ ಒಟಗಾರ ಕಿಮ್ಮುಡಿರ ಶಿವಪ್ರಕಾಶ್ ಕಿವಿಮಾತು ಹೇಳಿದರು. ಮಡಿಕೇರಿಯ ವಾಂಡರ್ಸ್ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ದಿ. ಶಂಕರ್ ಸ್ವಾಮಿ ಸ್ಮರಣಾರ್ಥ ಜಿಲ್ಲಾ ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿದ್ದ ಮಕ್ಕಳ ಉಚಿತ ಬೇಸಿಗೆ ಕ್ರೀಡಾ ತರಬೇತಿ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು. ಶಿಬಿರದಲ್ಲಿ ಕಲಿತದ್ದನ್ನು ಮಕ್ಕಳು ಮೈಗೂಡಿಸಿಕೊಳ್ಳಬೇಕು. ಆಗ ಮಾತ್ರ ಶಿಬಿರ ಆಯೋಜನೆ ಮಾಡಿದವರಿಗೆ ಹಾಗೂ ತರಬೇತು ನೀಡಿದವರ ಶ್ರಮಕ್ಕೆ ಬೆಲೆ ಸಿಗಲಿದೆ. ಶಿಸ್ತನ್ನು ರೂಢಿಸಿಕೊಳ್ಳುವದರೊಂದಿಗೆ ಮಕ್ಕಳು ಈಗಿನಿಂದಲೇ ದೇಶ ಭಕ್ತರಾಗಿ ದೇಶಕ್ಕಾಗಿ ಬದುಕಬೇಕೆಂದು ಹೇಳಿದರು. ಮತ್ತೋರ್ವ ಅತಿಥಿ, ಅರಣ್ಯ ಇಲಾಖಾ ನಿವೃತ್ತ ಅಧಿಕಾರಿ ಕಿರುದಂಡ ಗಣೇಶ್ ಮಾತನಾಡಿ; ಮಕ್ಕಳಲ್ಲಿ ಶಿಸ್ತು ಅತಿ ಮುಖ್ಯ, ಶಿಬಿರದಲ್ಲಿ ಎಲ್ಲರೂ ಅದನ್ನೇ ಕಲಿಸುವದು. ಯಾವದೇ ಕೆಲಸದಲ್ಲಾಗಲೀ ಶಿಸ್ತು ಮುಖ್ಯ. ಈ ಶಿಬಿರದಲ್ಲಿ ಪ್ರತಿ ವರ್ಷ 100ರಿಂದ 125 ರಷ್ಟು ಮಕ್ಕಳು…






