ಸುಂಟಿಕೊಪ್ಪ NEWS DESK ಸೆ.1: ಯಾವುದೇ ಹಬ್ಬವನ್ನು ಆಚರಿಸುವ ಸಂದರ್ಭದಲ್ಲಿ ಧಾರ್ಮಿಕ ಮೌಲ್ಯತೆಗೆ ದಕ್ಕೆ ಉಂಟಾಗದಂತೆ ಮೂಲತೆಯನ್ನು ಗಮನದಲ್ಲಿರಿಸಿಕೊಂಡರೇ ಹಬ್ಬದ ಆಚರಣೆಗೆ ಅರ್ಥ ಬರುತ್ತದೆ. ನಾವು ಆಚರಿಸುವ ಹಬ್ಬದ ವಿಶೇಷತೆ ಹರುಷದಲ್ಲಿ ಇತರರಿಗೆ ನೋವು ಸಂಕಷ್ಟಗಳನ್ನು ತಂದಿಡುತ್ತಿರುವುದು ವಿಷಾದ ಸಂಗತಿ ಡಿ.ಜೆ. ಹಿರಿಯ ಮತ್ತು ಪುಟ್ಟ ಕಂದಮ್ಮಗಳ ಜೀವಕ್ಕೆ ಮಾರಕವಾಗುತ್ತಿದೆ. ಗೃಹೋಪಯೋಗಿ ವಸ್ತು, ಮನೆಗಳಿಗೆ ಹಾನಿಗೊಳ್ಳಗಾಗುತ್ತಿರುವುದು ವಿಷಾದದ ಸಂಗತಿ. ಆಯೋಜಕರು ಇದರ ಗಮನಹರಿಸಿ ಡಿ.ಜೆ.ಗಳಿಗೆ ಆದ್ಯತೆ ನೀಡದಿರುವಂತೆ ಗೌರಿ ಗಣೇಶ ಆಚರಣಾ ಪೂರ್ವ ನಿಯೋಜಿತ ಸಭೆಯಲ್ಲಿ ಶನಿವಾರ ಸಂಜೆ ಕುಶಾಲನಗರ ವೃತ್ತನಿರೀಕ್ಷಕರಾದ ರಾಜೇಶ್ಕೋಟ್ಯಾನ್ ಹೇಳಿದರು. ಇಲ್ಲಿನ ಗುಂಡುಗುಟ್ಟಿ ಮಂಜನಾಥಯ್ಯ ಮೀನಾಕ್ಷಮ್ಮ ಕಲ್ಯಾಣ ಮಂಟಪದಲ್ಲಿ ಸಂಜೆ 6 ಗಂಟೆಗೆ ಸುಂಟಿಕೊಪ್ಪ ಹೋಬಳಿ ವ್ಯಾಪ್ತಿಯ ಶ್ರೀ.ಗೌರಿ ಗಣೇಶ ಆಚರಣಾ ಸಮಿತಿಗಳ ಪೂರ್ವನಿಯೋಜಿತ ಸಭೆಯಲ್ಲಿ ರಾಜೇಶ್ಕೋಟ್ಯಾನ್ ಮಾತನಾಡಿದ ಅವರು, ಸರಕಾರವು ನೀಡಿರುವ ಮಾರ್ಗಸೂಚಿಗಳನ್ನು ಗ್ರಾಮಗಳಲ್ಲಿ ಶ್ರೀ ಗೌರಿ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸುವ ಆಯೋಜಕ ಸಮಿತಿಗಳವರು ಪೊಲೀಸ್ಠಾಣೆ ಸೇರಿದಂತೆ ವಿವಿಧ ಇಲಾಖೆಗಳಿಂದ ಅನುಮತಿಯನ್ನು ಕಡ್ಡಾಯವಾಗಿ ಪಡೆದುಕೊಂಡಿರಬೇಕು. ಮುಂಜಾಗೃತ…
ಲೇಖಕ: admin
ಮಡಿಕೇರಿ NEWS DESK ಸೆ.1 : ಕೊಡವ ಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆ ಪಡೆಯುವುದು ಕೊಡವರ ಸಂವಿಧಾನಬದ್ಧ ಹಕ್ಕಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಪ್ರತಿಪಾದಿಸಿದ್ದಾರೆ. ಮಡಿಕೇರಿಯ ಹೊರ ವಲಯದ ಕ್ಯಾಪಿಟಲ್ ವಿಲೇಜ್ ನಲ್ಲಿ ಕೊಡವ ನ್ಯಾಷನಲ್ ಕೌನ್ಸಿಲ್ ವತಿಯಿಂದ ನಡೆದ 29ನೇ ವರ್ಷದ ಸಾರ್ವತ್ರಿಕ “ಕೈಲ್ ಪೊಳ್ದ್” ಹಬ್ಬ ಆಚರಣೆಯಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಅವರು ಮಾತನಾಡಿದರು. ಕೊಡವ ಲ್ಯಾಂಡ್ ಭೂರಾಜಕೀಯ ಸ್ವಾಯತ್ತತೆ ಮತ್ತು ಕಲಂ 244 ರ ಅಡಿಯಲ್ಲಿ ಕೊಡವರಿಗೆ ಸ್ವಯಂ ಆಡಳಿತದ ಅಗತ್ಯವನ್ನು ತಿಳಿಸಿದರು. ಕೊಡವರು ಕೊಡವಸೀಮೆಯ ಪುರಾತನ ಬುಡಕಟ್ಟು ಜನರಾಗಿರುವುದರಿಂದ, ಸಂವಿಧಾನದ ಖಾತರಿಗಳ ಮೂಲಕ ಈ ಮಣ್ಣಿನ ರಾಜಕೀಯ ಬಲ, ನೆಲ, ಜಲ ಮತ್ತು ನೈಸರ್ಗಿಕ ಸಂಪನ್ಮೂಲಗಳನ್ನು ನಿರ್ಧರಿಸುವ ಹಕ್ಕನ್ನು ಅವರು ಹೊಂದಿರಬೇಕು. ಕೇಂದ್ರ ಮತ್ತು ರಾಜ್ಯ ಸರ್ಕಾರ ಕೊಡವರ ಅಮೋಘ ಸೇವೆಗಾಗಿ ಮತ್ತು ರಾಷ್ಟ್ರ ನಿರ್ಮಾಣದ ಅಪಾರ ಕೊಡುಗೆಗಾಗಿ ಋಣಿಯಾಗಿರಬೇಕು ಎಂದು ಅಭಿಪ್ರಾಯಪಟ್ಟರು. ಅಸಹಾಯಕ ಕೊಡವರ ಶಕ್ತಿಯಂತಿರುವ ಸಿಎನ್ಸಿಯ ಬಹುಕಾಲದ ಬೇಡಿಕೆಯನ್ನು ಈಡೇರಿಸುವುದು ಸಾಂವಿಧಾನಿಕ…
ಮಡಿಕೇರಿ NEWS DESK ಸೆ.1 : ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ಕೊಡವರ ಪರವಾಗಿ ನಡೆಸುತ್ತಿರುವ ಹೋರಾಟದ ಕುರಿತು ದೇಶದ ಆಡಳಿತ ವ್ಯವಸ್ಥೆ ಮತ್ತು ವಿಶ್ವದ ಗಮನ ಸೆಳೆಯಲು ನ.1 ರಂದು ದೆಹಲಿ ಚಲೋ ರ್ಯಾಲಿ ನಡೆಸಲು ನಿರ್ಧರಿಸಿರುವುದಾಗಿ ಸಿಎನ್ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ. ಮಡಿಕೇರಿಯ ಹೊರ ವಲಯದ ಕ್ಯಾಪಿಟಲ್ ವಿಲೇಜ್ ನಲ್ಲಿ ಕೊಡವ ನ್ಯಾಷನಲ್ ಕೌನ್ಸಿಲ್ ವತಿಯಿಂದ ನಡೆದ 29ನೇ ವರ್ಷದ ಸಾರ್ವತ್ರಿಕ “ಕೈಲ್ ಪೊಳ್ದ್” ಹಬ್ಬ ಆಚರಣೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕೊಡವ ಲ್ಯಾಂಡ್ ಭೌಗೋಳಿಕ ರಾಜಕೀಯ ಸ್ವಾಯತ್ತತೆ ಸೇರಿದಂತೆ ವಿವಿಧ ಬೇಡಿಕೆಗಳ ಹಕ್ಕೊತ್ತಾಯಗಳನ್ನು ಮಂಡಿಸುವ 34ನೇ ವರ್ಷದ “ಕೊಡವ ನ್ಯಾಷನಲ್ ಡೇ” ಕಾರ್ಯಕ್ರಮವನ್ನು ಇದೇ ನ.26 ರಂದು ಕ್ಯಾಪಿಟಲ್ ವಿಲೇಜ್ನಲ್ಲಿ ಆಚರಿಸಲಾಗುವುದು ಎಂದು ಘೋಷಿಸಿದರು. ಕೊಡವ ಕುಲದ ಉದ್ಭವ, ವಿಕಾಸ ಮತ್ತು ಕೊಡವ ತಾಯಿನೆಲದ ಸೃಷ್ಟಿ ಈ ಮಣ್ಣಿನಲ್ಲಿ ಆರ್ವಿಭವಿಸಿದೆ. ಯುದ್ಧ ಮತ್ತು ಬೇಟೆಯ ಕೌಶಲ್ಯಗಳು ಬುಡಕಟ್ಟು ಜನಾಂಗದ ಕೊಡವರಲ್ಲಿ ಹುಟ್ಟಿನಿಂದಲೂ ಅಂತರ್ಗತವಾಗಿದೆ. ಶಸ್ತ್ರಾಸ್ತ್ರಗಳನ್ನು ಹೊಂದುವುದು…
ಮಡಿಕೇರಿ NEWS DESK ಸೆ.1 : ಜಿಲ್ಲೆಯ ಹಿರಿಯ ದಾನಿಗಳಾದ ಕೈಬಿಲಿರ ಪಾರ್ವತಿ ಬೋಪಯ್ಯ ಅವರು ತಮ್ಮ ಪತಿ ದಿ.ಕೈಬಿಲಿರ ಬೋಪಯ್ಯ ಅವರ ಜ್ಞಾಪಕಾರ್ಥ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ರೂ.50 ಸಾವಿರಗಳ ದತ್ತಿನಿಧಿ ಸ್ಥಾಪಿಸಿದ್ದಾರೆ. 10ನೇ ತರಗತಿ ಪರೀಕ್ಷೆಯಲ್ಲಿ ಕನ್ನಡ ವಿಷಯದಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಗಳಿಸುವ ವಿದ್ಯಾರ್ಥಿಗೆ ಬಹುಮಾನ ನೀಡುವುದು ಈ ದತ್ತಿನಿಧಿಯ ಉದ್ದೇಶವೆಂದು ಕಸಾಪ ಜಿಲ್ಲಾಧ್ಯಕ್ಷ ಎಂ.ಪಿ.ಕೇಶವ ಕಾಮತ್ ತಿಳಿಸಿದ್ದಾರೆ.
ಭಾಗಮಂಡಲ NEWS DESK ಸೆ.1 : ಭಾಗಮಂಡಲ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಯ ವಿದ್ಯಾರ್ಥಿಗಳು ನಾಪೋಕ್ಲು ವಲಯ ಮಟ್ಟದ ಕ್ರೀಡಾಕೂಟದಲ್ಲಿ ಅತ್ಯುತ್ತಮ ಸಾಧನೆ ತೋರುವ ಮೂಲಕ ಗಮನ ಸೆಳೆದಿದ್ದಾರೆ. ಪ್ರಾಥಮಿಕ ಶಾಲಾ ವಿಭಾಗದ ಬಾಲಕರ ವಿಭಾಗದ ಕಬಡ್ಡಿಯಲ್ಲಿ ಪ್ರಥಮ ಸ್ಥಾನ, ಹ್ಯಾಂಡ್ ಬಾಲ್ನಲ್ಲಿ ಪ್ರಥಮ, ವಾಲಿಬಾಲ್ನಲ್ಲಿ ದ್ವಿತೀಯ ಸ್ಥಾನ, ಬಾಲಕಿಯರ ವಿಭಾಗದ ಕಬಡ್ಡಿಯಲ್ಲಿ ಪ್ರಥಮ, ಹ್ಯಾಂಡ್ ಬಾಲ್ ಪ್ರಥಮ. ಥ್ರೋ ಬಾಲ್ ನಲ್ಲಿ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಅಥ್ಲೆಟಿಕ್ಸ್ ನಲ್ಲಿ ವಸತಿ ಶಾಲೆಯ ಬಾಲಕಿಯರ ರಿಲೇ ಪ್ರಥಮ. ಬಾಲಕಿಯರ ಲಾಂಗ್ ಜಂಪ್ನಲ್ಲಿ ಕೀರ್ತನ ಪ್ರಥಮ, ಬಾಲಕರ ಲಾಂಗ್ ಜಂಪ್ ಆಶಿಕ್ ದ್ವಿತೀಯ, ಹೈಜಂಪ್ ಆಶಿಕ್ ಪ್ರಥಮ, 400 ಮೀ. ಓಟ ಪ್ರಧಾನ್ ಪ್ರಥಮ, ಭಾರದ ಗುಂಡು ಎಸೆತ ಲಿವಿನ ದ್ವಿತೀಯ, 200 ಮೀ. ಓಟ ಮನೋಜ್ ದ್ವಿತೀಯ, 600 ಮೀ. ಮಿಥುನ್ ತೃತೀಯ ಸ್ಥಾನ, 100ಮೀ. ಓಟ ಆಶಿಕ್ ದ್ವಿತೀಯ ಸ್ಥಾನ ಪಡೆದು ತಾಲ್ಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಪ್ರೌಢಶಾಲಾ ವಿಭಾಗ-…
ಮಡಿಕೇರಿ NEWS DESK ಸೆ.1 : ಕೆದಮುಳ್ಳೂರು ಗ್ರಾ.ಪಂ ವ್ಯಾಪ್ತಿಯ ಪಾಲಂಗಾಲ ಕಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳು ಮತ್ತು ಅಂಗನವಾಡಿ ಮಕ್ಕಳಿಗೆ ವಿರಾಜಪೇಟೆಯ ಜೈ ಭಾರತ್ ಆಟೋ ಚಾಲಕರು ಹಾಗೂ ಮಾಲೀಕರ ಸಂಘ ಪುಸ್ತಕ ಮತ್ತಿತರ ಸಾಮಾಗ್ರಿಗಳನ್ನು ವಿತರಿಸಿತು. ಈ ಸಂದರ್ಭ ಮಾತನಾಡಿದ ಸಂಘದ ಅಧ್ಯಕ್ಷ ಎಂ.ಎನ್.ಶಿವು ನಮ್ಮ ಸಂಘ ನಿರಂತರವಾಗಿ ಸಾಮಾಜಿಕ ಕಳಕಳಿಯ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಬರುತ್ತಿದೆ. ರಕ್ತದಾನ ಶಿಬಿರ ನಡೆಸಿದೆ, ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕ, ಲೇಖನಿ ಮತ್ತಿತರ ಶೈಕ್ಷಣಿಕ ಸಾಮಾಗ್ರಿಗಳನ್ನು ವಿತರಿಸುವ ಕಾರ್ಯ ಮಾಡಿದೆ. ಈ ಎಲ್ಲಾ ಸಮಾಜಮುಖಿ ಕಾರ್ಯಕ್ರಮಗಳಿಗೆ ಆಟೋ ಚಾಲಕರು ಹಾಗೂ ಮಾಲೀಕರು ನೀಡುತ್ತಿರುವ ಸಂಪೂರ್ಣ ಸಹಕಾರವೇ ಕಾರಣವಾಗಿದೆ. ಇನ್ನು ಮುಂದೆಯೂ ಸಂಘ ಇದೇ ರೀತಿಯ ಹೆಚ್ಚು ಹೆಚ್ಚು ಕಾರ್ಯಕ್ರಮಗಳನ್ನು ನಡೆಸಲಾಗುವುದು ಎಂದರು. ಗ್ರಾ.ಪಂ ಉಪಾಧ್ಯಕ್ಷ ಎಂ.ಎಂ.ಪರಮೇಶ್ವರ್ ಅವರು ಮಾತನಾಡಿ ಆಟೋ ಚಾಲಕರು ಹಾಗೂ ಮಾಲೀಕರ ಸಮಾಜಮುಖಿ ಕಾರ್ಯಗಳು ಇತರರಿಗೆ ಮಾದರಿಯಾಗಿದೆ. ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಸಹಕರಿಸುತ್ತಿರುವುದು ಶ್ಲಾಘನೀಯ. ಸಂಘದ ಅಧ್ಯಕ್ಷರು ಹಾಗೂ…
ಸುಂಟಿಕೊಪ್ಪ NEWS DESK ಆ.31: ಗದ್ದೆಯಲ್ಲಿ ಮೇಯುತ್ತಿದ್ದ ಗಬ್ಬದ ಹಸುವೊಂದರ ಮೇಲೆ ಕಾಡಾನೆ ದಾಳಿ ಮಾಡಿ ಗಾಯಗೊಳಿಸಿದ ಘಟನೆ ಕೆದಕಲ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊರೂರು ಗ್ರಾಮದಲ್ಲಿ ಶನಿವಾರ ಮಧ್ಯಾಹ್ನ ನಡೆದಿದೆ. ಹೊರೂರು ಗ್ರಾಮದ ಕಾಫಿ ಬೆಳೆಗಾರರಾದ ದೇವಿ ಪ್ರಸಾದ್ ಕಾಯರ್ ಮಾರ್ ಅವರಿಗೆ ಸೇರಿದ ಹಸುವನ್ನು ಗದ್ದೆಯಲ್ಲಿ ಹುಲ್ಲು ಮೇಯಲು ಬಿಟ್ಟಿದ್ದರು. ಈ ಸಂದರ್ಭ ಹಸುವಿನ ಮೇಲೆ ಕಾಡಾನೆ ದಾಳಿ ಮಾಡಿದೆ. ಹಸು ಗಂಭೀರವಾಗಿ ಗಾಯಗೊಂಡಿದ್ದು, ತುರ್ತು ಚಿಕಿತ್ಸೆ ನೀಡಲಾಯಿತು. ಕಾಡಾನೆ ಉಪಟಳದಿಂದ ಗ್ರಾಮಸ್ಥರು ಆತಂಕಗೊಂಡಿದ್ದು, ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಮಡಿಕೇರಿ NEWS DESK ಆ.31 : 2024-25 ನೇ ಸಾಲಿನ ಯುವಜನೋತ್ಸವ ಎಚ್.ಐ.ವಿ/ಏಡ್ಸ್ ಅರಿವು ಆಂದೋಲನ-ಕಾರ್ಯಕ್ರಮದ ಅಂಗವಾಗಿ (ರೆಡ್ ರಿಬ್ಬನ್ ಓಟ, ಎಚ್.ಐ.ವಿ/ಏಡ್ಸ್ ನಿಯಂತ್ರಣಕ್ಕಾಗಿ ಯುವಜನತೆ) ಎಚ್.ಐ.ವಿ/ಏಡ್ಸ್ ಜಾಗೃತಿಗಾಗಿ ಮ್ಯಾರಾಥಾನ್ ಸ್ಪರ್ಧೆಯು ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಶನಿವಾರ ನಡೆಯಿತು. ಈ ಸ್ಪರ್ಧೆಯ ಮುಖ್ಯ ಉದ್ದೇಶ ಎಚ್.ಐ.ವಿ/ಏಡ್ಸ್ ಬಗ್ಗೆ ಅರಿವು, ಸೇವಾ ಸೌಲಭ್ಯಗಳ ಮಾಹಿತಿ, ಕಳಂಕ ಮತ್ತು ತಾರತಮ್ಯವನ್ನು ತಡೆಗಟ್ಟುವುದು, ಉಚಿತ ರಾಷ್ಟ್ರೀಯ ಸಹಾಯವಾಣಿ 1097, ಹೆಚ್.ಐ.ವಿ/ಎಡ್ಸ್ (ತಡೆಗಟ್ಟುವಿಕೆ ಹಾಗೂ ನಿಯಂತ್ರಣ) ಕಾಯಿದೆ 2017 ಇತ್ಯಾದಿ ಕುರಿತು ಅರಿವು ಮೂಡಿಸುವುದು. ಅದರಂತೆ ಕೊಡಗು ಜಿಲ್ಲೆಯಲ್ಲಿ ಜಿಲ್ಲಾ ಮಟ್ಟದ ಯುವ ಜನೋತ್ಸವ- ಎಚ್.ಐ.ವಿ/ಏಡ್ಸ್ ಅರಿವು ಆಂದೋಲನ 2024-25ರ ಕಾರ್ಯಕ್ರಮದ ಅಂಗವಾಗಿ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಘಟಕ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಭಾರತೀಯ ರೆಡ್ಕ್ರಾಸ್ ಸಂಸ್ಥೆ ಇವರ ಸಹಯೋಗದೊಂದಿಗೆ…
ವಿರಾಜಪೇಟೆ NEWS DESK ಆ.31 : ಕೊಯಮತ್ತೂರಿನಲ್ಲಿ ನಡೆದ ರಾಷ್ಟ್ರಮಟ್ಟದ ಕರಾಟೆ ಚಾಂಪಿಯನ್ ಶಿಪ್ ನಲ್ಲಿ ವಿರಾಜಪೇಟೆ ಕಾವೇರಿ ಶಾಲೆಯ 10ನೇ ತರಗತಿಯ ವಿದ್ಯಾರ್ಥಿನಿ ಅಪ್ಸರ ಜಯನ್ ಬಾಲಕಿಯರ ವಿಭಾಗದ ಕತಾದಲ್ಲಿ ಪ್ರಥಮ ಸ್ಥಾನ ಪಡೆದು ಚಿನ್ನ ಗೆದ್ದಿದ್ದಾಳೆ. ಬಾಲಕಿಯರ 18 ವಯೋಮಾನದೊಳಗಿನ ವಿಭಾಗದ ಟೀಮ್ ಕತಾದಲ್ಲಿ ಎರಡನೇ ಸ್ಥಾನ ಪಡೆದು ಎರಡು ಬೆಳ್ಳಿ ಪದಕ ತಮ್ಮದಾಗಿಸಿಕೊಂಡು ಶಾಲೆಗೆ ಕೀರ್ತಿ ತಂದಿದ್ದಾಳೆ. ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ಸುದೇಶ್ ಬಿ.ಎಸ್, ಕಾರ್ಯದರ್ಶಿ ವಿನೋದ್ ಪಿ.ಎನ್, ಫ್ರೌಢಶಾಲಾ ಮುಖ್ಯ ಶಿಕ್ಷಕಿ ಜ್ಯೋತಿ ಬಿ.ಎಸ್, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಪರ್ವತಿ ಪಿ.ಯು, ಶಿಕ್ಷಕ ವೃಂದ ಹಾಗೂ ಪೋಷಕರು ಸಾಧಕಿ ಅಪ್ಸರ ಜಯನ್ ಗೆ ಅಭಿನಂದನೆ ಸಲ್ಲಿಸಿದ್ದಾರೆ.
ವಿರಾಜಪೇಟೆ NEWS DESK ಆ.31 : ಇತ್ತೀಚೆಗೆ ಮೈಸೂರು ವಿಜಯನಗರದ ಕೊಡವ ಸಮಾಜದ ಸಭಾಂಗಣದಲ್ಲಿ ನಡೆದ 27 ನೇ ಶಿಟೋ ರಿಯೋ ಕರಾಟೆ ಡೋ ನ್ಯಾಷನಲ್ ಚಾಂಪಿಯನ್ ಶಿಪ್ 2024 ಪಂದ್ಯಾವಳಿಯಲ್ಲಿ ವಿರಾಜಪೇಟೆ ಸೆಂಟ್ ಆನ್ಸ್ ಪದವಿ ಕಾಲೇಜಿನ ಪ್ರಥಮ ಬಿ. ಎಸ್. ಸಿ ವಿದ್ಯಾರ್ಥಿನಿ ಟಿ. ಪಿ. ಭವ್ಯ ಕುಮಿಟೆ (ಫೈಟಿಂಗ್ )ಸ್ಪರ್ಧೆಯಲ್ಲಿ ತೃತೀಯ ಸ್ಥಾನದೊಂದಿಗೆ ಕಂಚಿನ ಪದಕವನ್ನು ಗೆದ್ದಿದ್ದಾರೆ. ಈ ಮೂಲಕ ಅಂತರರಾಷ್ಟ್ರೀಯ ಮಟ್ಟ ಹಾಗೂ 16 ನೇ ಏಷ್ಯಾ ಫೆಸಿಫಿಕ್ ಶಿಟೋರಿಯೋ ಕರಾಟೆ ಚಾಂಪಿಯನ್ ಶಿಪ್ ಗೆ ಆಯ್ಕೆಯಾಗಿದ್ದಾರೆ. ಭವ್ಯ ಇಂಜಿಲಗೆರೆ ನಿವಾಸಿ ನಿವೃತ ಯೋಧ ಪ್ರಕಾಶ್ ಹಾಗೂ ಟಿ.ಪಿ.ದಿವ್ಯ ದಂಪತಿ ಪುತ್ರಿ ಹಾಗೂ ಅಮ್ಮತ್ತಿಯ ಝೆನ್ ಶಿಟೋರಿಯೋ ಕರಾಟೆ ಫೆಡರೇಷನ್ ತರಭೇತುದಾರ ವಿ.ಎನ್.ಪ್ರಸನ್ನ ಅವರ ಶಿಷ್ಯೆ.






