ಗೋಣಿಕೊಪ್ಪ NEWS DESK ಆ.31 : ಹರಿಶ್ಚಂದ್ರಪುರ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಸಭಾಂಗಣದಲ್ಲಿ ವಿರಾಜಪೇಟೆ ಮಂಡಲ ಭಾರತೀಯ ಜನತಾ ಪಾರ್ಟಿ ಆಯೋಜಿಸಿದ ಸದಸ್ಯತ್ವ ಅಭಿಯಾನ ಕಾರ್ಯಗಾರದಲ್ಲಿ ಹುದಿಕೇರಿ ಫ್ಯಾಕ್ಸ್ ಚುನಾವಣೆಯಲ್ಲಿ ಜಯಗಳಿಸಿದ ಬಿಜೆಪಿ ಬೆಂಬಲಿತ ಪದಾಧಿಕಾರಿಗಳನ್ನು ಸನ್ಮಾನಿಸಲಾಯಿತು. ಭಾರತೀಯ ಜನತಾ ಪಾರ್ಟಿ ವಿರಾಜಪೇಟೆ ಮಂಡಲ ಅಧ್ಯಕ್ಷ ಮಾಚಿಮಂಡ ಸುವಿನ್ ಗಣಪತಿ ಅಧ್ಯಕ್ಷತೆಯಲ್ಲಿ ಮಾಜಿ ಶಾಸಕ ಕೆಜಿ ಬೋಪಯ್ಯ, ಪ್ರಧಾನ ಕಾರ್ಯದರ್ಶಿ ನಲ್ಲಿರ ಚಲನ್ ಕುಮಾರ್, ಕಾರ್ಯದರ್ಶಿ ಗೊಮ್ಮಟಿರ ಕಿಲನ್ ಗಣಪತಿ, ಉಪಾಧ್ಯಕ್ಷ ಅರುಣ್ ಭೀಮಯ್ಯ, ತಾಲೂಕು ಮಂಡಲ ಪ್ರಧಾನ ಕಾರ್ಯದರ್ಶಿ ಮುದ್ದಿಯಡ ಮಂಜುಗಣಪತಿ, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಕೊಡಂದೆರ ಬಾಂಡ್ ಗಣಪತಿ, ತಾಲೂಕು ಮಂಡಲ ಕಾರ್ಯದರ್ಶಿ ಕುಟ್ಟಂಡ ಅಜಿತ್ ಕರುಬಯ್ಯ ಇವರುಗಳು, ಹುದಿಕೇರಿ ಪ್ಯಾಕ್ಸ್ ಚುನಾವಣೆಯಲ್ಲಿ ಜಯಗಳಿಸಿದ ಅಜ್ಜಿಕುಟ್ಟೀರ ಪ್ರವೀನ್, ಚೇಂದಿರ ರಘು ತಿಮ್ಮಯ್ಯ, ಬಿ.ಎಸ್ ರಮೇಶ್, ಕೋಳೇರ ನರೇಂದ್ರ, ಮತ್ರಂಡ ಬೋಪಣ್ಣ, ಕಿರಿಯಮಡÀ ಈಶ ಮಂದಣ್ಣ, ಅಜ್ಜಿಕುಟ್ಟೀರ ಬೋಪಣ್ಣ, ತೀತಿರ ಊರ್ಮಿಳ, ಕಳ್ಳೇಂಗಡ ಗಾಯಿತ್ರಿ, ಕಾಳಿಮಾಡ ನರೇಂದ್ರ, ರಾಜಪ್ಪ…
ಲೇಖಕ: admin
ಮಡಿಕೇರಿ NEWS DESK ಆ.31 : ವಾಹನಗಳ ಕಳ್ಳತನ ಮತ್ತು ಗಾಂಜಾ ಮಾರಾಟ ಯತ್ನ ಪ್ರಕರಣಗಳಿಗೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಕೊಡಗು ಪೊಲೀಸರು ಬಂಧಿಸಿದ್ದಾರೆ. ವಿರಾಜಪೇಟೆಯ ಪೆರುಂಬಾಡಿಯ ಆರ್ಜಿ ಗ್ರಾಮದ ಕೆ.ಬಿ.ಶಫೀಕ್ (26), ವಿರಾಜಪೇಟೆಯ ಚಿಕ್ಕಪೇಟೆಯ ಮೊಹಮ್ಮದ್ ಆಸೀಂ (21), ಆರ್ಜಿ ಗ್ರಾಮದವರುಗಳಾದ ಸಮೀರ್ ಕೆ.ಎಸ್ (26), ಮುನೀರ್ ಟಿ.ಐ (30), ಎಸ್.ದರ್ಶನ್ (25) ಬಂಧಿತ ಆರೋಪಿಗಳಾಗಿದ್ದಾರೆ. ಇವರ ಬಳಿಯಿಂದ 1 ಕೆ.ಜಿ 83 ಗ್ರಾಂ ಗಾಂಜಾ, 10 ದ್ವಿಚಕ್ರ ವಾಹನಗಳು ಮತ್ತು ಎರಡು ಕಾರುಗಳನ್ನು ವಶಪಡಿಸಿಕೊಳ್ಳಲಾಗಿದೆ. ವಾಹನಗಳ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಪಿರಿಯಾಪಟ್ಟಣ, ಬಿಳಿಕೆರೆ ಮತ್ತು ಹುಣಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಂದರ್ ರಾಜ್ ಅವರುಗಳ ನಿರ್ದೇಶನದ ಮೇರೆಗೆ ವಿರಾಜಪೇಟೆ ಡಿವೈಎಸ್ಪಿ ಮೋಹನ್ ಕುಮಾರ್ ಅವರ ಮಾರ್ಗದರ್ಶನದಲ್ಲಿ ಸಿಪಿಐ ಶಿವರುದ್ರ, ಪಿಎಸ್ಐಗಳಾದ ರವೀಂದ್ರ, ಪ್ರಮೋದ್ ಹಾಗೂ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿದರು. ಅಧಿಕಾರಿಗಳು ಹಾಗೂ ಸಿಬ್ಬಂದಿಗಳ…
ಮಡಿಕೇರಿ NEWS DESK ಆ.31 : ವಿರಾಜಪೇಟೆ ತಾಲ್ಲೂಕಿನ ಬೇತ್ರಿಯ ಸೂಪರ್ ಮಾರ್ಕೆಟ್ನಲ್ಲಿ ಕಳ್ಳತನ ಮಾಡಿದ ಇಬ್ಬರು ಅಂತರರಾಜ್ಯ ಆರೋಪಿಗಳನ್ನು ಬಂಧಿಸುವಲ್ಲಿ ಕೊಡಗು ಜಿಲ್ಲಾ ಪೊಲಿಸರು ಯಶಸ್ವಿಯಾಗಿದ್ದಾರೆ. ಕೇರಳದ ಇರ್ಟ್ಟಿ ತಾಲ್ಲೂಕಿನ ಮಂಟಪ ಪರಂಬುವಿನ ಸಲೀಂ ಟಿ.ಎ.(42) ಹಾಗೂ ಸೋಮವಾರಪೇಟೆ ತಾಲ್ಲೂಕಿನ ಚೌಡ್ಲು ಗ್ರಾಮದ ಗಾಂಧಿ ನಗರದ ಸಂಜಯ್ ಕುಮಾರ್ ಅಲಿಯಾಸ್ ಸಂಜು(30) ಬಂಧಿತ ಆರೋಪಿಗಳು. ಬೇತ್ರಿಯಲ್ಲಿರುವ ನಾಸರ್ ಕೂರನ್ ಎಂಬುವವರ ಸೂಪರ್ ಮಾರ್ಕೆಟ್ ಅಂಗಡಿ ಮಳಿಗೆಯಿಂದ, ಬೀಗ ಒಡೆದು 25 ಸಾವಿರ ನಗದು ಸೇರಿದಂತೆ ಸಿಗರೇಟ್ ಪ್ಯಾಕ್ಗಳನ್ನು ಇದೇ ಆ.28 ರಂದು ಕಳವು ಮಾಡಲಾಗಿತ್ತು. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಕ್ಷಿಪ್ರ ತನಿಖೆÉ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದರು. ವಿಚಾರಣೆಗೆ ಒಳಪಡಿಸಿದಾಗ ಆರೋಪಿಗಳು ರಾಜ್ಯ ಮತ್ತು ಹೊರ ರಾಜ್ಯಗಳಲ್ಲಿ 11 ಅಪರಾಧ ಪ್ರಕರಣಗಳಲ್ಲಿ ಪಾಲ್ಗೊಂಡಿರುವುದು ಬೆಳಕಿಗೆ ಬಂದಿದೆ. ಬಂಧಿತರಿಂದ ಕಳ್ಳತನ ಮಾಡಿ ಕೃತ್ಯಕ್ಕೆ ಬಳಸುತ್ತಿದ್ದ ಸುಮಾರು 1.50ಲಕ್ಷ ಮೌಲ್ಯದ 3 ದ್ವಿಚಕ್ರ ವಾಹನಗಳು ಮತ್ತು 9050 ರೂ. ನಗದನ್ನು…
ಗೋಣಿಕೊಪ್ಪ NEWS DESK ಆ.31 : ವಿರಾಜಪೇಟೆ ಮಂಡಲ ಭಾರತೀಯ ಜನತಾ ಪಾರ್ಟಿ ಆಯೋಜಿಸಿದ ಸದಸ್ಯತ್ವ ಅಭಿಯಾನ ಕಾರ್ಯಗಾರದಲ್ಲಿ ಡಿ.ಸಿ.ಸಿ. ಬ್ಯಾಂಕ್ ಚುನಾವಣೆಯಲ್ಲಿ ಜಯಗಳಿಸಿದ ಬಿಜೆಪಿ ಬೆಂಬಲಿತ ಪದಾಧಿಕಾರಿಗಳನ್ನು ಸನ್ಮಾನಿಸಲಾಯಿತು. ಹರಿಶ್ಚಂದ್ರಪುರ ಕೃಷಿ ಉತ್ಪನ್ನ ಮಾರುಕಟ್ಟೆ ಸಭಾಂಗಣದಲ್ಲಿ ಕೊಡೆಂದೇರ ಬಾಂಡ್ ಗಣಪತಿ, ಕುಂಞಂಗಡ ಅರುಣ್ ಭೀಮಯ್ಯ, ಗುಮ್ಮಟೀರ ಕಿಲನ್ ಗಣಪತಿ, ಹೊಟ್ಟೆಂಗಡ ರಮೇಶ್ ಇವರುಗಳನ್ನು ಭಾರತೀಯ ಜನತಾ ಪಾರ್ಟಿ ವಿರಾಜಪೇಟೆ ಮಂಡಲ ಅಧ್ಯಕ್ಷ ಮಾಚಿಮಂಡ ಸುವಿನ್ ಗಣಪತಿ ಅಧ್ಯಕ್ಷತೆಯಲ್ಲಿ ಸನ್ಮಾನಿಸಲಾಯಿತು. ವಿಧಾನ ಪರಿಷತ್ ಸದಸ್ಯ ಮಂಡೇಪಂಡ ಸುಜಾ ಕುಶಾಲಪ್ಪ, ಮಾಜಿ ಶಾಸಕ ಕೆ.ಜಿ.ಬೋಪಯ್ಯ, ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಪಳೆಯಂಡ ರಾಬಿನ್ ದೇವಯ್ಯ, ಪ್ರಧಾನ ಕಾರ್ಯದರ್ಶಿ ನೆಲ್ಲಿರ ಚಲನ್ ಕುಮಾರ್, ತಾಲೂಕು ಮಂಡಲ ಪ್ರಧಾನ ಕಾರ್ಯದರ್ಶಿ ಮುದ್ದಿಯಡ ಮಂಜುಗಣಪತಿ, ತಾಲೂಕು ಮಂಡಲ ಕಾರ್ಯದರ್ಶಿ ಕುಟ್ಟಂಡ ಅಜಿತ್ ಕರುಬಯ್ಯ ಸೇರಿದಂತೆ ಜಿಲ್ಲಾ ಸಮಿತಿ, ತಾಲೂಕು ಸಮಿತಿ ಪದಾಧಿಕಾರಿಗಳು, ಬೂತ್ ಅಧ್ಯಕ್ಷರು ಮತ್ತು ಕಾರ್ಯಕರ್ತರು ಇದ್ದರು.
ಮಡಿಕೇರಿ NEWS DESK ಆ.31 : ಭ್ರಷ್ಟಾಚಾರವನ್ನು ಹೆಗಲಿನಲ್ಲಿ ಹೊತ್ತುಕೊಂಡು ತೆವಳುತ್ತಾ ಸಾಗುತ್ತಿರುವ ರಾಜ್ಯ ಸರ್ಕಾರ, ಈ ಭಾರವನ್ನು ಹೊತ್ತುಕೊಳ್ಳಲಾಗದೆ ಕೆಲವೇ ದಿನಗಳಲ್ಲಿ ಉರುಳಿ ಬೀಳುವ ಸಂಭವ ಹೆಚ್ಚಿದೆ ಎಂದು ಮಾಜಿ ಶಾಸಕ ಕೆ.ಜಿ.ಬೋಪಯ್ಯ ಭವಿಷ್ಯ ನುಡಿದಿದ್ದಾರೆ. ಗೋಣಿಕೊಪ್ಪಲಿನ ಹರಿಶ್ಚಂದ್ರಪುರ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಸಭಾಂಗಣದಲ್ಲಿ ವಿರಾಜಪೇಟೆ ಮಂಡಲ ಭಾರತೀಯ ಜನತಾ ಪಾರ್ಟಿ ಆಯೋಜಿಸಿದ್ದ ‘ಸದಸ್ಯತ್ವ ಅಭಿಯಾನ’ ಕಾರ್ಯಾಗಾರದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಉಚಿತ ಯೋಜನೆಗಳ ಮೂಲಕ ಸರ್ಕಾರ ಶೂನ್ಯ ಪ್ರಗತಿಯನ್ನು ಕಾಣುತ್ತಿದ್ದು, ಜನರ ಸಮಸ್ಯೆಗಳಿಗೆ ಸ್ಪಂದಿಸುವ ಶಕ್ತಿಯನ್ನು ಕಳೆದುಕೊಂಡಿದೆ. ಬಿಜೆಪಿ ದೇಶ ಕಟ್ಟಲು ಹೊರಟಿದೆ, ದೇಶವನ್ನು ಆರ್ಥಿಕ ಪ್ರಗತಿಯ ಮೂಲಕ ಅಭಿವೃದ್ಧಿಯತ್ತ ಕೊಂಡೊಯ್ಯಲು ಕೇಂದ್ರ ಸರ್ಕಾರ ಪಣತೊಟ್ಟಿದೆ. ರಾಜ್ಯ ಸರ್ಕಾರ ಇಂತಹ ಜನಪರ ಚಟುವಟಿಕೆಗಳಿಗೆ ಸ್ಪಂದಿಸದೆ, ಈ ಹಿಂದೆ ಬಿಜೆಪಿ ಸರ್ಕಾರ ಅಭಿವೃದ್ಧಿ ಕಾರ್ಯಗಳಿಗಾಗಿ ಮೀಸಲಿಟ್ಟಿದ್ದ ಅನುದಾನವನ್ನೆ ಬಳಸಿಕೊಳ್ಳುತ್ತಿದೆ ಎಂದು ಟೀಕಿಸಿದರು. ಕೊಡಗು ಜಿಲ್ಲೆಯಲ್ಲಿ ಯಾವುದೇ ಪ್ರಗತಿಪರ ಚಟುವಟಿಕೆ ಕಾಣಿಸುತ್ತಿಲ್ಲ. ಬದಲಾಗಿ ಹಳ್ಳಿಗೊಂದು ಇಸ್ಪೇಟ್ ಕ್ಲಬ್ಗಳು, ಮರಳು ದಂಧೆ,…
ಮಡಿಕೇರಿ NEWS DESK ಆ.31 : ಕೊಡಗು ಜಿಲ್ಲೆಯಾದ್ಯಂತ ಮಳೆ ಬಿರುಸುಗೊಂಡಿದೆ. ಹವಮಾನ ಇಲಾಖೆ ಸೆ.1 ರ ಬೆಳಗ್ಗೆ 8.30 ರವರೆಗೆ ಆರೆಂಜ್ ಅಲರ್ಟ್ ಮತ್ತು ನಂತರ ಯೆಲ್ಲೋ ಅಲರ್ಟ್ ಘೋಷಿಸಿದೆ.
ಮಡಿಕೇರಿ NEWS DESK ಆ.31 : ಪುಸ್ತಕ ಮತ್ತು ಲೇಖನಿ ಹಿಡಿದು ಶೈಕ್ಷಣಿಕ ಗುರಿ ಸಾಧನೆಯಲ್ಲಿ ತೊಡಗಿರುವ ವಿದ್ಯಾರ್ಥಿಗಳು ಕೆಸರು ಗದ್ದೆಗಿಳಿದು ಆಹಾರದ ಮಹತ್ವ ಮತ್ತು ಉತ್ಪಾದನೆಯ ಶ್ರಮದ ಕುರಿತು ತಿಳಿದುಕೊಂಡರು. ಶಾಲೆಯ ಪಾಠಕ್ಕಿಂತ ಗದ್ದೆಯಲ್ಲಿ ಮಾಡುವ ಪ್ರಾಯೋಗಿಕ ನಾಟಿ ಕಾರ್ಯದ ಪ್ರಯತ್ನ ವಿದ್ಯಾರ್ಥಿಗಳಲ್ಲಿ ಬೇಸಾಯದ ಕುರಿತು ಮನದಟ್ಟು ಮಾಡಿಕೊಡಲು ಸಹಕಾರಿಯಾಗುತ್ತದೆ. ಈ ಕಾರಣದಿಂದ ಕನೆಕ್ಟಿಂಗ್ ಕೊಡವಾಸ್ ಸಂಘಟನೆ ವಿದ್ಯಾರ್ಥಿಗಳಿಗಾಗಿಯೇ ವಿರಾಜಪೇಟೆಯ ಬೊಳ್ಳರಿಮಾಡು ಗ್ರಾಮದ ಕೆಸರು ಗದ್ದೆಯಲ್ಲಿ “ನಾಟಿಪಣಿ” ಎಂಬ ಬೇಸಾಯ ಕಾರ್ಯಕ್ರಮವನ್ನು ಹಮ್ಮಿಕೊಂಡಿತ್ತು. ವಿರಾಜಪೇಟೆಯ ಕಾವೇರಿ ಶಾಲೆಯ 7 ಮತ್ತು 8ನೇ ತರಗತಿಯ ವಿದ್ಯಾರ್ಥಿಗಳು ಸಂಭ್ರಮದಿಂದ ನಾಟಿ ಮಾಡಿದರು. ಕೈಕೆಸರಾದರೆ ಬಾಯಿ ಮೊಸರು ಎಂಬAತೆ ವಿದ್ಯಾರ್ಥಿಗಳು ಅತಿ ಉತ್ಸಾಹದಿಂದ ನಾಟಿ ಕಾರ್ಯದಲ್ಲಿ ಪಾಲ್ಗೊಂಡರು. ಆಯೋಜಕ ಪುದಿಯೊಕ್ಕಡ ಸೂರಜ್ ಹಾಗೂ ಪಾಲೆಂಗಡ ಅಮಿತ್ ಅವರು ನಾಟಿ ಹೇಗೆ ಮಾಡಬೇಕು ಎಂಬುವುದನ್ನು ವಿವರಿಸಿದರು. ವಿದ್ಯಾರ್ಥಿಗಳನ್ನು ಉತ್ತೇಜಿಸಿ ಪ್ರಾಯೋಗಿಕ ನಾಟಿ ಕಾರ್ಯಕ್ಕೆ ಹುರಿದುಂಬಿಸಿದರು. ಕಾವೇರಿ ಶಾಲೆಯ ಪೂರ್ವ ಪ್ರಾಥಮಿಕ ವಿಭಾಗದ ಸಂಯೋಜಕಿ ಅಮೃತ ಅರ್ಜುನ್…
ವಿರಾಜಪೇಟೆ NEWS DESK ಆ.31 : ಕೊಡಗು ಜಿಲ್ಲಾ ಪದವಿ ಪೂರ್ವ ಅನುದಾನಿತ ನೌಕರರ ಸಂಘದ ಪದಾಧಿಕಾರಿಗಳು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ ಅವರನ್ನು ವಿಧಾನಸೌಧದಲ್ಲಿ ಭೇಟಿ ಮಾಡಿ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಮನವಿ ಸಲ್ಲಿಸಿದರು. ಪದವಿ ಪೂರ್ವ ಅನುದಾನಿತ ಕಾಲೇಜುಗಳಲ್ಲಿ ತರಗತಿವಾರು ವಿದ್ಯಾರ್ಥಿಗಳ ಸಂಖ್ಯೆಯನ್ನು ಕನಿಷ್ಠ 40 ಕ್ಕೆ ನಿಗದಿಪಡಿಸಿದ್ದು, ಕೊಡಗು ಜಿಲ್ಲೆ ಗುಡ್ಡಗಾಡು ಪ್ರದೇಶವಾಗಿರುವುದರಿಂದ ಕನಿಷ್ಠ ವಿದ್ಯಾರ್ಥಿಗಳ ಸಂಖ್ಯೆಯನ್ನು 40 ರಿಂದ 20ಕ್ಕೆ ಇಳಿಸಬೇಕು. ವಿದ್ಯಾರ್ಥಿಗಳ ಸಂಖ್ಯೆಯ ಆಧಾರದ ಮೇಲೆ ಉಪನ್ಯಾಸಕರ ವೇತನವನ್ನು ತಡೆಹಿಡಿಯಬಾರದು. ಪ್ರಜಾ ಪ್ರತಿನಿಧಿ ಕಾಯ್ದೆಯ ತಿದ್ದುಪಡಿ ಅನ್ವಯ ಮಲೆನಾಡು ಜಿಲ್ಲೆಗಳಿಗೆ ರಿಯಾಯಿತಿಯನ್ನು ನೀಡಲಾಗಿದೆ. ಆದ್ದರಿಂದ ಕೊಡಗು ಸೇರಿದಂತೆ ಇತರ ಮಲೆನಾಡಿನ ಜಿಲ್ಲೆಗಳನ್ನು ವಿಶೇಷವಾಗಿ ಪರಿಗಣಿಸಬೇಕು. ಕಾರ್ಯಭಾರವಿಲ್ಲದ ಅನುದಾನಿತ ಕಾಲೇಜುಗಳ ಉಪನ್ಯಾಸಕರನ್ನು ನಿಯೋಜನೆ ಮಾಡುವುದಾದಲ್ಲಿ ಸಮೀಪದ ಸರ್ಕಾರಿ ಕಾಲೇಜುಗಳಿಗೂ ನಿಯೋಜನೆ ಮಾಡಬೇಕು. ಈ ಬೇಡಿಕೆಗಳನ್ನು ಇಲಾಖೆ ಮತ್ತು ಸರ್ಕಾರದ ಮಟ್ಟದಲ್ಲಿ ಈಡೇರಿಸಲು ಸಹಕಾರ ನೀಡಬೇಕೆಂದು ಸಂಘದ ಪ್ರಮುಖರು ಮನವಿ ಮಾಡಿದರು. ಮನವಿ…
ವಿರಾಜಪೇಟೆ NEWS DESK ಆ.31 : ಬಂಡವಾಳಶಾಹಿ ಶಕ್ತಿಗಳ ಯೋಜನೆಗಳು ಆಧುನಿಕ ಯುಗವನ್ನು ದಾರಿ ತಪ್ಪಿಸಿದೆ. ಸಾಮಾಜಿಕ ಜಾಲತಾಣಗಳ ಮೂಲಕ ಯುವ ಜನಾಂಗ ಹಾದಿ ತಪ್ಪುತ್ತಿದೆ ಎಂದು ಜಮಾಅತೆ ಇಸ್ಲಾಮೀ ಹಿಂದ್ ಮಹಿಳಾ ವಿಭಾಗದ ಕೊಡಗು ಜಿಲ್ಲಾ ಸಂಚಾಲಕಿ ಪಿ.ಎ.ಝೈನಬಾ ರೆಹೆಮಾನ್ ಬೇಸರ ವ್ಯಕ್ತಪಡಿಸಿದ್ದಾರೆ. ವಿರಾಜಪೇಟೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಸಕ್ತ ಸಮಾಜವು ಎದುರಿಸುತ್ತಿರುವ ಸಮಸ್ಯೆಗಳು ಮತ್ತು ಸವಾಲುಗಳು ಬಹಳ ಕಳವಳಕಾರಿಯಾಗಿವೆ. ಸಮಾಜದಲ್ಲಿ ಹೆಚ್ಚುತ್ತಿರುವ ನಗ್ನತೆ, ಜೂಜು, ಮದ್ಯಪಾನ, ಮಾದಕ ವ್ಯಸನ, ವಿವಾಹೇತರ ಸಂಬAಧಗಳು ಸೇರಿದಂತೆ ಸಮಾಜಿಕ ಪಿಡುಗುಗಳು ಅನೇಕ ಸಮಸ್ಯೆಗಳನ್ನು ಹುಟ್ಟುಹಾಕುತ್ತಿವೆ. ಕುಟುಂಬಗಳು ಛಿದ್ರಗೊಳ್ಳುತ್ತಿವೆ, ಸಮಾಜದ ಸ್ಥಿತಿ ಅತ್ಯಂತ ಚಿಂತಾಜನಕವಾಗಿದೆ ಎಂದರು. ಈ ಸಂದಿಗ್ಧ ಪರಿಸ್ಥಿತಿಯನ್ನು ಗಮನದಲ್ಲಿರಿಸಿ ಸಮಾಜದಲ್ಲಿ ಜಾಗೃತಿ ಮೂಡಿಸಲು ಮತ್ತು ಪ್ರಸಕ್ತ ಸ್ಥಿತಿಯಲ್ಲಿ ಸುಧಾರಣೆ ತರಲು ಜಮಾಅತೆ ಇಸ್ಲಾಮಿ ಹಿಂದ್ ಮಹಿಳಾ ವಿಭಾಗವು ದೇಶದಾದ್ಯಂತ ಸೆ.1ರಿಂದ 30ರ ವರೆಗೆ ನೈತಿಕತೆಯೇ ಸ್ವಾತಂತ್ರö್ಯ ಎಂಬ ಧ್ಯೇಯ ವಾಕ್ಯದಡಿ ಒಂದು ತಿಂಗಳ ಅಭಿಯಾನವನ್ನು ನಡೆಸಲು ತೀರ್ಮಾನಿಸಿದೆ ಎಂದು ತಿಳಿಸಿದರು. ಸ್ಥಾನೀಯ…
ಬೆಂಗಳೂರು NEWS DESK ಆ.31 : ಪ್ರಜಾತಾಂತ್ರಿಕವಾಗಿ ಚುನಾಯಿತವಾದ ಸರ್ಕಾರಗಳನ್ನು ವಾಮಮಾರ್ಗದಲ್ಲಿ ಅಸ್ಥಿರಗೊಳಿಸಲು ಕೇಂದ್ರ ಸರ್ಕಾರ ಷಡ್ಯಂತ್ರ ರೂಪಿಸುತ್ತಿದೆ ಎಂದು ಆರೋಪಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಪ್ರಮುಖರು ರಾಜಭವನ ಚಲೋ ಪ್ರತಿಭಟನೆ ನಡೆಸಿದರು. ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಮಾಜಿ ಸಚಿವ ಮುರುಗೇಶ್ ನಿರಾಣಿ, ಶಶಿಕಲಾ ಜೊಲ್ಲೆ ಹಾಗೂ ಜನಾರ್ಧನ ರೆಡ್ಡಿ ಅವರ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡದ ರಾಜ್ಯಪಾಲರು ತಾರತಮ್ಯ ನೀತಿ ಅನುಸರಿಸುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದರು. ಗಾಂಧಿ ಪ್ರತಿಮೆಯ ಎದುರು ಕಾಂಗ್ರೆಸ್ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್, ಸಚಿವರು, ಶಾಸಕರು, ಸಂಸದರು ಹಾಗೂ ಕಾಂಗ್ರೆಸ್ ಪದಾಧಿಕಾರಿಗಳು ಪ್ರತಿಭಟನೆ ನಡೆಸಿ ಬಿಜೆಪಿ ಮತ್ತು ಜೆಡಿಎಸ್ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.






