ಲೇಖಕ: admin

ಮಡಿಕೇರಿ NEWS DESK ಆ.30 : ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ ಅನುಷ್ಠಾನ ಸಂಬಂಧ ಇಲಾಖೆಯ ಜಿಲ್ಲಾ ಅಂಕಿತ ಅಧಿಕಾರಿ ಡಾ.ಅನಿಲ್ ಧಾವನ್ ಅವರು ಮಡಿಕೇರಿ, ಕುಶಾಲನಗರ ಸೇರಿದಂತೆ ವಿವಿಧ ಕಡೆಗಳ ಹೋಟೆಲ್‌ಗಳಿಗೆ ಶುಕ್ರವಾರ ಭೇಟಿ ನೀಡಿ ಪರಿಶೀಲಿಸಿದರು. ಹೋಟೆಲ್ ಮತ್ತು ರೆಸಾರ್ಟ್ಗಳಲ್ಲಿ ಶುಚಿತ್ವ ಕಾಪಾಡಿಕೊಳ್ಳಬೇಕು. ತಮ್ಮ ಆರೋಗ್ಯವು ಸಹ ಉತ್ತಮವಾಗಿರಬೇಕು ಎಂದು ಅನಿಲ್ ಧಾವನ್ ಅವರು ನಿರ್ದೇಶನ ನೀಡಿದರು. ಆಹಾರ ಪದಾರ್ಥಗಳ ತಯಾರಕರು, ಮಾರಾಟಗಾರರು, ದಾಸ್ತಾನುದಾರರು ಶುಚಿತ್ವಕ್ಕೆ ಒತ್ತು ನೀಡಬೇಕು. ಗ್ರಾಹಕರಿಗೆ ಶುದ್ಧವಾದ ಆಹಾರವನ್ನು ಪೂರೈಸಬೇಕು ಎಂದು ಸೂಚಿಸಿದರು. ಆಹಾರಕ್ಕೆ ಕೃತಕ ಬಣ್ಣಗಳನ್ನು ಬಳಸಬಾರದು. ಮೊಟ್ಟೆ, ಮೀನು, ಮಾಂಸದ ಪದಾರ್ಥಗಳನ್ನು ಸೂಕ್ತ ತಾಪಮಾನದಲ್ಲಿ ಸಂಗ್ರಹಿಸಿ ಬಳಕೆ ಮಾಡುವಂತಾಗಬೇಕು ಎಂದು ತಿಳಿಸಿದರು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ ಆಯುಕ್ತಾಲಯ ಸೂಚನೆಯಂತೆ ಎರಡು ದಿನಗಳ ಕಾಲ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ ಅನುಷ್ಠಾನ ಆಂದೋಲನ ಹಮ್ಮಿಕೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.

Read More

ಮಡಿಕೇರಿ NEWS DESK ಆ.30 : ಮಳೆಯಿಂದ ಹಾನಿಯಾಗಿರುವ ಲೋಕೋಪಯೋಗಿ, ಪಂಚಾಯತ್ ರಾಜ್ ಹಾಗೂ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ರಸ್ತೆಯನ್ನು ಸರಿಪಡಿಸುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಸೂಚಿಸಿದ್ದಾರೆ. ಮಳೆಹಾನಿ ಸಂಬಂಧಿಸಿದಂತೆ ವಿಡಿಯೋ ಸಂವಾದ ಮೂಲಕ ಮಾತನಾಡಿದ ಜಿಲ್ಲಾಧಿಕಾರಿ ಅವರು ಜಿಲ್ಲೆಯಲ್ಲಿ ಹೆಚ್ಚಿನ ಮಳೆಯಿಂದಾಗಿ ರಸ್ತೆಗಳು ಹಾನಿಯಾಗಿದ್ದು, ರಸ್ತೆ ಸರಿಪಡಿಸುವ ಕಾರ್ಯವನ್ನು ಕೈಗೊಳ್ಳಬೇಕು. ಯಾವುದೇ ಕಾರಣಕ್ಕೂ ವಿಳಂಬ ಮಾಡದಂತೆ ಸೂಚಿಸಿದರು. ಹೆಚ್ಚಿನ ಮಳೆಯಿಂದ ಮನೆಗಳು ಹಾನಿಯಾಗಿದ್ದು, ಪರಿಹಾರ ವಿತರಿಸುವುದರ ಜೊತೆಗೆ ಮನೆ ನಿರ್ಮಾಣ ಮಾಡಬೇಕು. ಈ ಸಂಬAಧ ವರದಿ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು. ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿ ವ್ಯಾಪ್ತಿಯಲ್ಲಿ ಅಲ್ಲಲ್ಲಿ ಮಳೆಯಿಂದಾಗಿ ಬರೆಕುಸಿಯುತ್ತಿದ್ದು, ಈ ಬಗ್ಗೆ ಗಮನಹರಿಸಬೇಕು. ಸಾರಿಗೆ ಸಂಚಾರಕ್ಕೆ ಯಾವುದೇ ರೀತಿಯ ವ್ಯತ್ಯಯ ಉಂಟಾಗದಂತೆ ಗಮನಹರಿಸುವಂತೆ ಜಿಲ್ಲಾಧಿಕಾರಿ ಅವರು ಹೇಳಿದರು. ಎಲ್ಲಾ ಹಂತದ ಅಧಿಕಾರಿ ತಮ್ಮ ತಮ್ಮ ವ್ಯಾಪ್ತಿಯ ಕಾರ್ಯಗಳ ಬಗ್ಗೆ ಸರಿಯಾಗಿ ನಿಭಾಯಿಸುವಂತೆ ಜಿಲ್ಲಾಧಿಕಾರಿ ಅವರು ನಿರ್ದೇಶನ ನೀಡಿದರು. ವಿಡಿಯೋ ಸಂವಾದಲ್ಲಿ ವಿವಿಧ ಇಲಾಖೆ ಅಧಿಕಾರಿಗಳು…

Read More

ಮಡಿಕೇರಿ NEWS DESK ಆ.30 : ಪ್ರಸಕ್ತ (2024-25) ಸಾಲಿನ ಆಯವ್ಯಯ ಭಾಷಣದಲ್ಲಿ ‘ಎನಿವೇರ್’ ನೋಂದಣಿ ವ್ಯವಸ್ಥೆಯನ್ನು ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ವಿಸ್ತರಿಸಲಾಗಿದ್ದು, ಕೊಡಗು ಜಿಲ್ಲೆಯಲ್ಲಿಯೂ ಸೆಪ್ಟೆಂಬರ್ 2 ರಿಂದ ಪ್ರಕ್ರಿಯೆಗಳು ಆರಂಭವಾಗಲಿದೆ ಎಂದು ಜಿಲ್ಲಾಡಳಿತ ತಿಳಿಸಿದೆ. ಈ ವ್ಯವಸ್ಥೆಯನ್ನು ಬೆಂಗಳೂರು ನಗರ ಜಿಲ್ಲೆಯಲ್ಲಿ 2011 ರಲ್ಲಿ ತುಮಕೂರು ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ ಮಾರ್ಚ್ 2024 ರಲ್ಲಿ ನೋಂದಣಿ ಕಾಯ್ದೆ 1908 ರ ಕಲಂ (5) ಹಾಗೂ ಕಲಂ(6) ರಡಿಯಲ್ಲಿ ಜಾರಿಗೆ ಅನುಷ್ಠಾನಗೊಳಿಸಲಾಗಿದೆ. ಎನಿವೇರ್ ನೋಂದಣಿ ವ್ಯವಸ್ಥೆಯು ಈ ಜಿಲ್ಲೆಗಳಲ್ಲಿ ಯಶಸ್ವಿಯಾಗಿ ಕಾರ್ಯ ನಿರ್ವಹಿಸುತ್ತಿದೆ. ಈ ಕಾರಣದಿಂದಾಗಿ ಎನಿವೇರ್ ನೋಂದಣಿಯನ್ನು ಕೊಡಗು ಜಿಲ್ಲೆಯ ಉಪನೋಂದಣಿ ಕಚೇರಿಗಳಿಗೂ ವಿಸ್ತರಿಸಲು ನಿರ್ಧರಿಸಲಾಗಿದೆ. ಪ್ರಸ್ತುತ ಸಾರ್ವಜನಿಕರು ಸ್ಥಿರಾಸ್ತಿ ಇರುವ ವ್ಯಾಪ್ತಿಯ ಉಪನೋಂದಣಿ ಕಚೇರಿಯಲ್ಲಿ ಮಾತ್ರ ದಸ್ತಾವೇಜನ್ನು ನೋಂದಣಿ ಮಾಡಲು ಅವಕಾಶವಿದ್ದು, ಆದರೆ ಎನಿವೇರ್ ನೋಂದಣಿಯಲ್ಲಿ ದಸ್ತಾವೇಜನ್ನು ಸ್ಥಿರಾಸ್ತಿ ಇರುವ ಜಿಲ್ಲೆಯ ಯಾವುದಾದರೂ ಉಪನೋಂದಣಿ ಕಚೇರಿಯಲ್ಲಿ ನೋಂದಾಯಿಸಿಕೊಳ್ಳಬಹುದು. ಎನಿವೇರ್ ನೋಂದಣಿ ವ್ಯವಸ್ಥೆಯು ಸಾರ್ವಜನಿಕರಿಗೆ ಹಲವಾರು ರೀತಿಯಲ್ಲಿ ಉಪಯುಕ್ತವಾಗಿದ್ದು,…

Read More

ಉಡುಪಿ NEWS DESK ಆ.30 : ಪೊಲೀಸ್ ಇಲಾಖೆಯ ಹೆಮ್ಮೆಯ ಶ್ವಾನ ಐಕಾನ್ ನಿವೃತ್ತಿ ಹೊಂದಿದೆ. ಕಳೆದ 10 ವರ್ಷ 25 ದಿನಗಳಿಂದ ಉಡುಪಿ ಜಿಲ್ಲೆಯ ಪೊಲೀಸ್ ಶ್ವಾನದಳದಲ್ಲಿ ಐಕಾನ್ ಸ್ಫೋಟಕ ಪತ್ತೆ ಕಾರ್ಯನಿರ್ವಹಿಸುತ್ತಿತ್ತು. ಸ್ಫೋಟಕ ಪತ್ತೆ ಬಗ್ಗೆ ಸಿ.ಎ.ಆರ್ ಸೌತ್ ಆಡುಗೋಡಿಯಲ್ಲಿ 9 ತಿಂಗಳು ಕಠಿಣ ತರಬೇತಿಯನ್ನು ಪಡೆದಿರುವ ಐಕಾನ್, ಲ್ಯಾಬ್ರಡಾರ್ ರಿಟ್ರೀವರ್ ತಳಿಯದ್ದಾಗಿದೆ. ಉಡುಪಿ ಜಿಲ್ಲ್ಲೆ ಹಾಗೂ ಅಕ್ಕಪಕ್ಕದ ಜಿಲ್ಲೆಗಳಲ್ಲಿ ಸುಮಾರು 417 ಕ್ಕಿಂತ ಹೆಚ್ಚು ವಿಶೇಷ ಕರ್ತವ್ಯ ನಿರ್ವಹಿಸಿದೆ. ರಾಷ್ಟçಪತಿಗಳು, ಪ್ರಧಾನಮಂತ್ರಿಗಳು, ಮುಖ್ಯಮಂತ್ರಿಗಳು ಸೇರಿದಂತೆ ಅನೇಕ ಗಣ್ಯರ ಆಗಮನದ ಸಂದರ್ಭ ಸ್ಫೋಟಕ ಪತ್ತೆ ಕಾರ್ಯನಿರ್ವಹಿಸಿ ದಕ್ಷತೆ ಮೆರೆದಿದೆ. 2014 ನವೆಂಬರ್ ತಿಂಗಳಿನಲ್ಲಿ ಪೊಲೀಸ್ ಇಲಾಖೆಗೆ ಸೇರ್ಪಡೆಗೊಂಡ ಐಕಾನ್ ಗೆ ಎಪಿಸಿ. ಗಣೇಶ ಎಂ. ಅವರು ಹ್ಯಾಂಡ್ಲರ್ ಆಗಿದ್ದರು. ಇಂದು ನಿವೃತ್ತಿಯಾದ ಐಕಾನ್ ನನ್ನು ಪೊಲೀಸ್ ಅಧಿಕಾರಿಗಳು ಕಚೇರಿಯಲ್ಲಿ ಸನ್ಮಾನಿಸಿ ಬೀಳ್ಕೊಟ್ಟರು.

Read More

ಮಡಿಕೇರಿ NEWS DESK ಆ.30 : “ಸಶಕ್ತ ಬಿಜೆಪಿ ವಿಕಸಿತ ಭಾರತ” ಎಂಬ ಧ್ಯೇಯ ವಾಕ್ಯದೊಂದಿಗೆ ಬಿಜೆಪಿ ಪಕ್ಷದ ಸದಸ್ಯತ್ವ ಅಭಿಯಾನಕ್ಕೆ ಸೆ.1ರಂದು ಪ್ರಧಾನಿ ನರೇಂದ್ರ ಮೋದಿ ಅವರು ಚಾಲನೆ ನೀಡಲಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಪ್ರತಿ 5 ವರ್ಷಗಳಿಗೊಮ್ಮೆ ಬಿಜೆಪಿ ತನ್ನ ಸದಸ್ಯತ್ವ ಅಭಿಯಾನ ನಡೆಸುತ್ತಿದ್ದು, ವಿಶ್ವದಲ್ಲೇ 18 ಕೋಟಿ ಸದಸ್ಯರನ್ನು ಹೊಂದಿರುವ ಏಕೈಕ ದೊಡ್ಡ ಪಕ್ಷ ಬಿಜೆಪಿ ಎಂದು ಬಣ್ಣಿಸಿದರು. ಪಕ್ಷದ ರಾಷ್ಟಿçÃಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಸೂಚನೆಯಂತೆ ಈ ಬಾರಿಯ ಸದಸ್ಯತ್ವ ಅಭಿಯಾನದಲ್ಲಿ ಶೇ.30ರಿಂದ 40ಕ್ಕೆ ಸದಸ್ಯತ್ವ ಪ್ರಮಾಣ ಏರಿಕೆ ಮಾಡುವ ಗುರಿ ಹೊಂದಲಾಗಿದೆ. ಕೊಡಗು ಜಿಲ್ಲೆಯಲ್ಲಿ ಈ ಹಿಂದೆ 60 ಸಾವಿರ ಮಂದಿ ಬಿಜೆಪಿ ಸದಸ್ಯತ್ವ ಹೊಂದಿದ್ದು, ಇದನ್ನು ದ್ವಿಗುಣ ಮಾಡುವ ಗುರಿ ಇದೆ. ಈಗಾಗಲೇ ಜಿಲ್ಲೆಯಲ್ಲಿ ಸದಸ್ಯತ್ವ ಅಭಿಯಾನಕ್ಕೆ ಜಿಲ್ಲೆ ಮತ್ತು ತಾಲ್ಲೂಕುಗಳಿಗೆ ಸಂಚಾಲಕ ಹಾಗೂ ಸಹಸಂಚಾಲಕರನ್ನು ನೇಮಿಸಲಾಗಿದೆ. ಈ ಸದಸ್ಯತ್ವ ಉಚಿತವಾಗಿದ್ದು,…

Read More

ಮಡಿಕೇರಿ NEWS DESK ಆ.30 : ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ರೈತ ವಿರೋಧಿ ನೀತಿಗಳನ್ನು ಜಾರಿಗೆ ತರುವ ಮೂಲಕ ವಿನಾಕಾರಣ ಕಿರುಕುಳ ನೀಡುತ್ತಿದೆ. ಇದರಿಂದ ಬಡ ರೈತರು ಆತಂಕ ಎದುರಿಸುತ್ತಿದ್ದಾರೆ ಎಂದು ಮಾಜಿ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಟೀಕಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದ ನಂತರ ವನ್ಯಜೀವಿಗಳ ಉತ್ಪನ್ನಗಳನ್ನು ಮರಳಿಸಬೇಕು. ತಪ್ಪಿದಲ್ಲಿ ಕೇಸ್ ದಾಖಲಿಸುವುದಾಗಿ ಸುತೋಲೆ ಹೊರಡಿಸಿತ್ತು. ನಂತರ ಖಾಸಗಿ ಜಮೀನಗಳಲ್ಲಿರುವ ಮರಗಳ ಪಟ್ಟಿ ನೀಡಬೇಕೆಂದು ಸೂಚಿಸಿತು. ಆ ಮೂಲಕ ತೋಟದ ಮಾಲೀಕರು ನೆಟ್ಟು ಬೆಳೆಸಿದ ಮರಗಳ ಮೇಲೆ ಸರ್ಕಾರ ಹಕ್ಕು ಸ್ಥಾಪಿಸುವ ಸಂಚು ನಡೆಸಿತು. ಇತ್ತೀಚೆಗೆ ಸಿ ಮತ್ತು ಡಿ ಭೂಮಿಯನ್ನು ಸರ್ಕಾರಕ್ಕೆ ಹಿಂದಿರುಗಿಸುವAತೆ ಸುತ್ತೋಲೆಗಳನ್ನು ಹೊರಡಿಸಲಾಗಿದೆ. ಈ ಭೂಮಿಯಲ್ಲಿ ಅನೇಕ ವರ್ಷಗಳಿಂದ ರೈತರು ಕಾಫಿ, ಏಲಕ್ಕಿ ಬೆಳೆಸುವ ಮೂಲಕ ತಮ್ಮ ಬದುಕು ಕಟ್ಟಿಕೊಂಡಿದ್ದಾರೆ. ಸರ್ಕಾರ ಸುತ್ತೋಲೆಗಳನ್ನು ಹೊರಡಿಸುವ ಮೂಲಕ ರೈತ ವಿರೋಧಿ ನೀತಿಗಳನ್ನು ಅನುಸರಿಸುತ್ತಿದೆ ಎಂದರು. ರಾಜ್ಯ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ…

Read More

ಮಡಿಕೇರಿ NEWS DESK ಆ.30 : ಕೈಲ್ ಮುಹೂರ್ತ ಹಬ್ಬದ ಪ್ರಯುಕ್ತ ತಣ್ಣಿಮಾನಿಯ ಶ್ರೀ ಭಗವತಿ ಯುವ ಮಂಡಳಿ ವತಿಯಿಂದ ಶ್ರೀ ಕಾವೇರಿ ಮಿನಿ ಮೆರಥಾನ್ ನಡೆಯಿತು. ಪುರುಷರ 5 ಕಿ.ಮೀ. ಮೆರಥಾನ್‌ಗೆ ಭಾಗಮಂಡಲದ ಮಾರುಕಟ್ಟೆಯ ಬಳಿಯಿಂದ ಮತ್ತು ಮಹಿಳೆಯರ ವಿಭಾಗದ 4 ಕಿ.ಮೀ. ಸ್ಪರ್ಧೆಗೆ ಪೊಲೀಸ್ ಠಾಣೆಯ ಬಳಿಯಿಂದ ಚಾಲನೆ ನೀಡಲಾಯಿತು. ಉತ್ಸಾಹಿ ಯುವಕರು ಹಾಗೂ ಯುವತಿಯರು ಮೆರಥಾನ್‌ನಲ್ಲಿ ಪಾಲ್ಗೊಂಡಿದ್ದರು. 75 ವರ್ಷದ ವೃದ್ದರೊಬ್ಬರು ಮೆರಥಾನ್ ನಲ್ಲಿ ಪಾಲ್ಗೊಂಡು ಗಮನ ಸೆಳೆದರು. ತಣ್ಣಿಮಾನಿಯಲ್ಲಿ ಮೆರಥಾನ್ ಮುಕ್ತಾಯಗೊಂಡಿತು. ತಣ್ಣಿಮಾನಿ ಗ್ರಾಮದ ಭಗವತಿ ದೇವಸ್ಥಾನ ಆವರಣದಲ್ಲಿ ವಿವಿಧ ಆಟೋಟ ಸ್ಪರ್ಧೆಗಳು ಇದೇ ಸಂದರ್ಭ ನಡೆಯಿತು. ಸ್ಪರ್ಧೆಗಳಿಗೆ ಗ್ರಾಮಸ್ಥರೆ ಬಹುಮಾನ ಪ್ರ‍್ರಾಯೋಜಕರಾಗಿ ಕ್ರೀಡಾಪಟುಗಳಿಗೆ ಸ್ಫೂರ್ತಿ ತುಂಬಿದ್ದು ವಿಶೇಷವಾಗಿತ್ತು. ಕ್ರೀಡಾಕೂಟದ ಮೆರಥಾನ್ ಸ್ಪರ್ಧೆಯನ್ನು ಪಾಂಡಿ ಭಾನುಪ್ರಕಾಶ್ ಹಾಗೂ ಕುದುಪಜೆ ಗಗನ್ ಕಟುಂಬಸ್ಥರು ಪ್ರಾಯೋಜಿಸಿದ್ದರು.

Read More

ಮಡಿಕೇರಿ NEWS DESK ಆ.30 : ಯುನೈಟೆಡ್ ಕೊಡವ ಆರ್ಗನೈಜೇಶನ್- ಯುಕೊ ಸಂಘಟನೆಯ ನಿಯೋಗವು ಇಂದು ಮೈಸೂರಿನಲ್ಲಿ ಕೊಡಗು-ಮೈಸೂರು ಸಂಸದರಾದ  ಯದುವೀರ್ ಕೃಷ್ಟದತ್ತ ಚಾಮರಾಜ ಒಡೆಯರ್ ಅವರನ್ನು ಭೇಟಿಮಾಡಿ ‘ಕೊಡವರನ್ನು ಕೇಂದ್ರದ ಹಿಂದುಳಿದ ವರ್ಗ’ಗಳ ಪಟ್ಟಿಯಲ್ಲಿ ಸೇರಿಸುವಂತೆ ಮನವಿ ಸಲ್ಲಿಸಿ ಚರ್ಚೆ ನಡೆಸಿತು. ಯುಕೊ ಅಧ್ಯಕ್ಷ, ಕೊಕ್ಕಲೆಮಾಡ ಮಂಜು ಚಿಣ್ಣಪ್ಪ ನೇತೃತ್ವದಲ್ಲಿ, ನಗರದ ‘ಕಾಡ ಕಛೇರಿ’ ಆವರಣದಲ್ಲಿರುವ ಸಂಸದರ ಕಛೇರಿಯಲ್ಲಿ ಭೇಟಿ ಮಾಡಿ ಚರ್ಚಿಸಿದ ನಿಯೋಗವು, ಕೊಡವ ಜನಾಂಗವು ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಪಟ್ಟಿಯಲ್ಲಿ ಪ್ರವರ್ಗ 3 ಎ ಅಡಿಯಲ್ಲಿ ವರ್ಗಿಕರಣಗೊಂಡು ಶೈಸ್ಕಣಿಕ ಹಾಗೂ ಔದ್ಯೋಗಿಕ ಮೀಸಲಾತಿಗೆ ಭಜನರಾಗಿರುತ್ತಾರೆ. ಆದರೆ, ಕೇಂದ್ರದ ಹಿಂದುಳಿದ ವರ್ಗಗಗಳ ಪಟ್ಟಿಯಿಂದ ಕೊಡವರನ್ನು ಕೈಬಿಡಲಾಗಿದ್ದು, ಇದರಿಂದಾಗಿ ಕೇಂದ್ರ ಸರ್ಕಾರದ ಶೈಕ್ಷಣಿಕ ಹಾಗೂ ಔದ್ಯೋಗಿಕ ಮೀಸಲಾತಿಯಲ್ಲಿ ಕೊಡವರಿಗೆ ಅನ್ಯಾಯವಾಗುತ್ತಿದೆ. ಈ ನಿಟ್ಟಿನಲ್ಲಿ ಕೊಡವರನ್ನು ಹಿಂದುಳಿದ ವರ್ಗಗಳ ಕೇಂದ್ರದ ಪಟ್ಟಿಗೆ ಸೇರ್ಪಡೆಗೊಳಿಸುವ ಕುರಿತಂತೆ ಸಂಸದರಿಗೆ ಮನವರಿಕೆ ಮಾಡಿಕೊಡಲಾಯಿತು. ಹಾಗೆಯೇ, ಕೇಂದ್ರ ಸರ್ಕಾರವು ಯು.ಜಿ.ಸಿ ( University Grants commission -UGC) ಸಹಯೋಗದಲ್ಲಿ,…

Read More

*ಸಿದ್ದಾಪುರ NEWS DESK ಆ.30 : ಕೈಲ್ ಮುಹೂರ್ತದ ಪ್ರಯುಕ್ತ ಅಭ್ಯತ್ ಮಂಗಲ ಒಂಟಿಯಂಗಡಿಯ ಶ್ರೀದಂಡಿನ ಮಾರಿಯಮ್ಮ ವಾರ್ಷಿಕ ಉತ್ಸವವು ಸೆ.2 ರಂದು ನಡೆಯಲಿದೆ. ದೇವಾಲಯದ ತಕ್ಕರಾದ ಅಂಚೆಮನೆ ಆದರ್ಶ್ ಅವರ ಮನೆಯಿಂದ ಮಧ್ಯಾಹ್ನ 12ಗಂಟೆಗೆ ಭಂಡಾರ ತಂದ ನಂತರ ವಿಶೇಷ ಪೂಜೋತ್ಸವ ಮತ್ತು ಮಹಾಮಂಗಳಾರತಿ ಜರುಗಲಿದೆ. ಅಂಚೆಮನೆ ಸತೀಶ್ ಕುಟ್ಟಪ್ಪ ಅವರು ಭಕ್ತರಿಗೆ ಅನ್ನದಾನದ ವ್ಯವಸ್ಥೆಯನ್ನು ಮಾಡಿದ್ದಾರೆ ಎಂದು ದೇವಾಲಯದ ಆಡಳಿತ ಮಂಡಳಿ ತಿಳಿಸಿದೆ.

Read More

ನಾಪೋಕ್ಲು ಆ.30 NEWS DESK : ನರಿಯಂದಡ ಕೇಂದ್ರ ಪ್ರೌಢಶಾಲೆಯಲ್ಲಿ ನಡೆದ ನಾಪೋಕ್ಲು ವಲಯ ಮಟ್ಟದ ಪ್ರೌಢಶಾಲಾ ವಿಭಾಗದ ಕ್ರೀಡಾಕೂಟದಲ್ಲಿ ನಾಪೋಕ್ಲುವಿನ ಡಾ. ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ಪ್ರಶಸ್ತಿಗಳನ್ನು ಮುಡಿಗೀರಿಸಿಕೊಂಡಿದ್ದಾರೆ. ಕಬಡ್ಡಿ ಮತ್ತು ಖೋ-ಖೋ ಬಾಲಕರ ವಿಭಾಗ ಪ್ರಥಮ, ಬಾಲಕಿಯರ ವಿಭಾಗದಲ್ಲಿ ಖೋ-ಖೋ ಪ್ರಥಮ ಮತ್ತು ಕಬಡ್ಡಿ ದ್ವಿತೀಯ ಸ್ಥಾನ ಪಡೆದಿದ್ದಾರೆ. ಬಾಲಕರ ವಿಭಾಗ ಚೆಸ್ ಆಟದಲ್ಲಿ ಚಂದನ್, ಮಹೇಂದ್ರ ಹಾಗೂ ಗೌತಮ್, ಬಾಲಕಿಯರ ವಿಭಾಗದಲ್ಲಿ ಅಮೃತ ಮತ್ತು ಯಕ್ಷಿತ ತಾಲೂಕು ಮಟ್ಟಕ್ಕೆ ಆಯ್ಕೆ ಆಗಿದ್ದಾರೆ. ಅಥ್ಲೆಟಿಕ್ಸ್ ಬಾಲಕರ ವಿಭಾಗದಲ್ಲಿ 200ಮೀ. ಮನುಗೌಡ ದ್ವಿತೀಯ, 400ಮೀ. ವಚನ್ ಪ್ರಥಮ, ಚಂದನ್ ತೃತೀಯ, 800ಮೀ. ಚೆಂಗಪ್ಪ ಪ್ರಥಮ, ದ್ವಿತೀಯ ಲಿತೇಶ್, 1500ಮೀ. ವಿಕಾಸ್ ವಿ.ಕೆ ಪ್ರಥಮ, ಕುಶಾಲ್ ದ್ವಿತೀಯ, 3000ಮೀ. ಶಶಿಕಾಂತ್ ತೃತೀಯ, ಗುಂಡು ಎಸೆತದಲ್ಲಿ ವಿನಾಯಕ್ ಎಂ.ಎ ದ್ವಿತೀಯ, ಭರ್ಜಿ ಎಸೆತದಲ್ಲಿ ಬಸವರಾಜ್ ತೃತೀಯ, ಉದ್ದ ಜಿಗಿತ ಮತ್ತು ಟ್ರಿಪಲ್ ಜಂಪ್ ಖುಶಿ ಕೆ.ಎಂ ಪ್ರಥಮ, ಟ್ರಿಪಲ್ ಜಂಪ್…

Read More