ಲೇಖಕ: admin

ಸೋಮವಾರಪೇಟೆ ಆ.30 NEWS DESK : ಭಾರತದ ವಿವಿಧೆಡೆ ನಡೆಯುತ್ತಿರುವ ಲೈಂಗಿಕ ದೌರ್ಜನ್ಯ ಖಂಡಿಸಿ ವಿವಿಧ ಮಹಿಳಾ ಸಂಘಟನೆಗಳು ಸೋಮವಾರಪೇಟೆ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿತು. ಮಹಿಳಾ ಸಂಘಟನೆಯ ಪದಾಧಿಕಾರಿಗಳು ಪಟ್ಟಣದ ಪುಟ್ಟಪ್ಪ ವೃತ್ತದಲ್ಲಿ ಸಮಾವೇಶಗೊಂಡು ಮಾನವ ಸರಪಳಿ ರಚಿಸಿ, ಸರ್ಕಾರದ ವ್ಯವಸ್ಥೆ ವಿರುದ್ಧ ಘೋಷಣೆಗಳನ್ನು ಕೂಗಿ ಅಸಮಾಧಾನ ವ್ಯಕ್ತಪಡಿಸಿದರು. ನಂತರ ಮೆರವಣಿಗೆ ಮೂಲಕ ತಾಲೂಕು ಕಛೇರಿಗೆ ತೆರಳಿ ತಹಶೀಲ್ದಾರ್ ಶ್ರೀಧರ್ ಕಂಕನವಾಡಿ ಅವರ ಮೂಲಕ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿದರು. ಪ್ರಗತಿಪರ ಮಹಿಳಾ ವೇದಿಕೆಯ ಅಧ್ಯಕ್ಷರಾದ ಪೂರ್ಣಿಮಾ ಗೋಪಾಲ್ ಮಾತನಾಡಿ, ಅತ್ಯಾಚಾರ ಪ್ರಕರಣದ ಆರೋಪಿಗಳಿಗೆ ಜಾಮೀನು ಕೊಡಬಾರದು. ಕಾನೂನು ಮತ್ತಷ್ಟು ಬಿಗಿ ಪಡಿಸಬೇಕು, ಅತ್ಯಾಚಾರಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿದರು. ಇನ್ನರ್‍ವೀಲ್ ಸಂಸ್ಥೆ, ರೋಟರಿ ಸಂಸ್ಥೆ, ಅಕ್ಕನ ಬಳಗ, ಲಯನ್ಸ್ ಸಂಸ್ಥೆ, ಒಕ್ಕಲಿಗರ ಪ್ರಗತಿಪರ ಮಹಿಳಾ ವೇದಿಕೆ, ಬಿ.ಜೆ.ಪಿ ಮಹಿಳಾಮೋರ್ಚಾ, ಲೇಖಕಿಯರ ಬಳಗ ಸೇರಿದಂತೆ ಮತ್ತಿತರ ಮಹಿಳಾ ಸಂಘಟನೆಗಳ ಪದಾಧಿಕಾರಿಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Read More

ಸೋಮವಾರಪೇಟೆ ಆ.30 NEWS DESK : ಕುಶಾಲನಗರ ಕನ್ನಡ ಭಾರತಿ ಪದವಿಪೂರ್ವ ಕಾಲೇಜಿನ ಆಶ್ರಯದಲ್ಲಿ ಜಂಪ್ ಸ್ಮಾಷ್ ಒಳಾoಗಣ ಕ್ರೀಡಾಂಗಣದಲ್ಲಿ ನಡೆದ ತಾಲ್ಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ನಲ್ಲಿ ಸೋಮವಾರಪೇಟೆ ವಿಶ್ವಮಾನವ ಕುವೆಂಪು ವಿದ್ಯಾಸಂಸ್ಥೆಯ ಬಿಟಿಸಿಜಿ ಪದವಿ ಪೂರ್ವ ಕಾಲೇಜಿ ನ ಬಾಲಕಿಯರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ. ಫೈನಲ್ ಪಂದ್ಯದಲ್ಲಿ ಕುಶಾಲನಗರ ವಿವೇಕಾನಂದ ಪದವಿ ಪೂರ್ವ ಕಾಲೇಜು ತಂಡವನ್ನು ಮಣಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಯಿತು. ತಂಡದಲ್ಲಿ ಪುಷ್ಪಾoಜಲಿ ಯಡೂರು, ಧನ್ಯ ಯಡೂರು, ಜೀವಿತಾ ಹಿರಿಕರ ತಂಡವನ್ನು ಪ್ರತಿನಿಧಿಸಿದ್ದರು. ಪ್ರಾಂಶುಪಾಲರಾದ ಮಿಲ್ ಡ್ರೆಡ್ ಗೊನ್ಸಲ್ವೇಸ್, ದೈಹಿಕ ಶಿಕ್ಷಣ ಶಿಕ್ಷಕಿ ಇಂದಿರಾ, ಉಪನ್ಯಾಸಕ ಲಾoಛನ್ ಕಾರೇಕರ್ ತರಬೇತಿ ನೀಡಿದ್ದರು.

Read More

ಸೋಮವಾರಪೇಟೆ ಆ.30 NEWS DESK : ಸತ್ಯ, ನ್ಯಾಯ, ಧರ್ಮ ಪರಿಪಾಲನೆಯ ಮೂಲಕ ಸಮಾಜ ಸುಧಾರಣೆಗೆ ಪ್ರಯತ್ನಿಸುವ ವ್ಯಕ್ತಿ ಅಥವಾ ಸಂಸ್ಥೆಯನ್ನು ಸಮಾಜವೇ ಗೌರವಿಸುತ್ತದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರಾದೇಶಿಕ ನಿರ್ದೇಶಕ ದುಗ್ಗೇಗೌಡ ಅಭಿಪ್ರಾಯಿಸಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ವತಿಯಿಂಂದ ಸೋಮವಾರಪೇಟೆಯ ಕೊಡವ ಸಮಾಜದಲ್ಲಿ ಸುಜ್ಞಾನನಿಧಿ ಶಿಷ್ಯವೇತನ ಮತ್ತು ಸಮುದಾಯ ಅಭಿವೃದ್ಧಿ ಕಾರ್ಯಕ್ರಮಗಳ ಮಂಜೂರಾತಿ ಪತ್ರಗಳನ್ನು ಫಲಾನುಭವಿಗಳಿಗೆ ವಿತರಿಸಿ ಅವರು ಮಾತನಾಡಿದರು. ಸಮಾಜಕ್ಕೆ ಸೇವೆ ಮತ್ತು ಪರಿವರ್ತನೆ ಮೂಲಕ ಉತ್ತಮ ಸಂದೇಶವನ್ನು ನೀಡುವುದರೊಂದಿಗೆ ಆರ್ಥಿಕವಾಗಿ ಸಂಕಷ್ಟದಲ್ಲಿರುವ ಕುಟುಂಬಕ್ಕೆ ಸಹಾಯ ಮಾಡುವ ಮೂಲಕ ಸಂಸ್ಥೆ ನಿರಂತರವಾಗಿ ಕೆಲಸ ಮಾಡುತ್ತಿದೆ. ಅದರಲ್ಲೂ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಕ್ಷೇತ್ರದಲ್ಲಿ ಸಹಾಯಹಸ್ತವನ್ನು ನೀಡಿದೆ ಎಂದರು. ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಮಾಜಿ ಅಧ್ಯಕ್ಷರಾದ ಕೆ.ಪಿ.ಚಂದ್ರಕಲಾ ಮಾತನಾಡಿ, ಇಂದು ಯಾವುದೇ ಸರ್ಕಾರಗಳು ಮಾಡದ ಕೆಲವೊಂದು ಯೋಜನೆಗಳನ್ನು ಗ್ರಾಮಾಭಿವೃದ್ಧಿ ಸಂಸ್ಥೆ ಮಾಡುತ್ತಿದೆ. ಅದರಲ್ಲೂ ಮಹಿಳೆಯರು ಸಮಾಜದ ಮುಖ್ಯ ವಾಹಿನಿಯಲ್ಲಿ ಗುರುತಿಸಿಕೊಳ್ಳುವ ಮೂಲಕ ಸ್ತ್ರೀ…

Read More

ಮಡಿಕೇರಿ ಆ.30 NEWS DESK : ಕೊಡವ ನ್ಯಾಷನಲ್ ಕೌನ್ಸಿಲ್ ವತಿಯಿಂದ ಸೆ.1 ರಂದು ಮಡಿಕೇರಿ ಹೊರ ವಲಯದ ಕ್ಯಾಪಿಟಲ್ ವಿಲೇಜ್ ಮಂದ್ ನಲ್ಲಿ 29ನೇ ವರ್ಷದ ಸಾರ್ವತ್ರಿಕ “ಕೈಲ್ ಪೊಳ್ದ್ ” ಹಬ್ಬವನ್ನು ಆಚರಿಸಲಾಗುವುದು ಎಂದು ಸಿಎನ್‍ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ. ಭಾನುವಾರ ಬೆಳಿಗ್ಗೆ 10 ಗಂಟೆಗೆ ಮಂದ್ ನಲ್ಲಿ ಆದಿಮಸಂಜಾತ ಬುಡಕಟ್ಟು ಜನಾಂಗ ಕೊಡವರಿಗೆ ಪ್ರಕೃತಿ ವರವಾಗಿ ನೀಡಿರುವ “ತೋಕ್ ಪೂವ್” ನಿಂದ ಬಂದೂಕುಗಳನ್ನು ಸಿಂಗರಿಸಿ ಪ್ರಾರ್ಥಿಸಲಾಗುವುದು. ನಂತರ ಪೂಜ್ಯ ಸ್ಥಾನದಲ್ಲಿರುವ ಗುರುಕಾರೋಣರಿಗೆ ಮೀದಿ ಇಟ್ಟು ಸಿಎನ್‍ಸಿ ಹೋರಾಟಕ್ಕೆ ಬೆಂಬಲ ಕೋರಲಾಗುವುದು. ಮಾಜಿ ರಾಜ್ಯಸಭಾ ಎಂ.ಪಿ, ಕರ್ನಾಟಕ ವಿಧಾನ ಪರಿಷತ್ತಿನ ವಿರೋಧ ಪಕ್ಷದ ಮಾಜಿ ನಾಯಕ ಬಿ.ಕೆ.ಹರಿಪ್ರಸಾದ್ ಹಾಗೂ ವಿರಾಜಪೇಟೆ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ ಎಂದು ಅವರು ಪತ್ರಿಕಾ ಪ್ರಕಟಣೆ ನೀಡಿದ್ದಾರೆ. ಕೊಡವ ಕುಲದ ಉದ್ಭವ, ವಿಕಾಸ ಮತ್ತು ಕೊಡವ ತಾಯಿನೆಲದ ಸೃಷ್ಟಿ ಈ ಮಣ್ಣಿನಲ್ಲಿ ಆರ್ವಿಭವಿಸಿದೆ. ಯುದ್ಧ…

Read More

ಮಡಿಕೇರಿ NEWS DESK ಆ.30 : ಐತಿಹಾಸಿಕ ಮಡಿಕೇರಿ ದಸರಾ ಜನೋತ್ಸವವನ್ನು ಅದ್ದೂರಿಯಾಗಿ ಆಚರಿಸಲು ದಸರಾ ದಶಮಂಟಪ ಸಮಿತಿ ನಿರ್ಧರಿಸಿದೆ. ಮಂಟಪಗಳಿಗೆ ಹೆಚ್ಚಿನ ಅನುದಾನ ನೀಡಬೇಕು, ಧ್ವನಿವರ್ಧಕ ಬಳಸಲು ಅವಕಾಶ ಕಲ್ಪಿಸಬೇಕು, ನಗರದ ರಸ್ತೆಗಳನ್ನು ದುರಸ್ತಿಪಡಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಮನವಿ ಪತ್ರವನ್ನು ಸಮಿತಿಯ ಪ್ರಮುಖರು ಮಡಿಕೇರಿ ಶಾಸಕ ಡಾ.ಮಂತರ್ ಗೌಡ ಅವರಿಗೆ ಇಂದು ಸಲ್ಲಿಸಿದರು. ದಶಮಂಟಪ ಸಮಿತಿಯ ಅಧ್ಯಕ್ಷ ಜಿ.ಸಿ.ಜಗದೀಶ್ ಅವರ ನೇತೃತದಲ್ಲಿ ನಗರದಲ್ಲಿ ಶಾಸಕರನ್ನು ಭೇಟಿಯಾದ ಸಮಿತಿಯ ಪದಾಧಿಕಾರಿಗಳು ಬೇಡಿಕೆಗಳನ್ನು ದಸರಾ ಉತ್ಸವಕ್ಕೂ ಮೊದಲೇ ಈಡೇರಿಸಬೇಕು ಎಂದು ಮನವಿ ಮಾಡಿದರು. ಕಳೆದ ವರ್ಷ ಶೋಭಾಯಾತ್ರೆಯ ಸಂದರ್ಭ ಕೆಲವೊಂದು ಸಮಸ್ಯೆಗಳು ಎದುರಾಗಿತ್ತು. ಈ ಬಾರಿ ಅದು ಮರುಕಳಿಸದಂತೆ ನೋಡಿಕೊಂಡು ಅಧಿಕಾರಿಗಳ ವಿಶ್ವಾಸಗಳಿಸಿ ಅದ್ದೂರಿ ಉತ್ಸವ ಆಚರಿಸಲು ನಿರ್ಧರಿಸಲಾಗಿದೆ ಎಂದು ಶಾಸಕರ ಗಮನ ಸೆಳೆದರು. ಕಳೆದ ವರ್ಷ ದಶಮಂಟಪಗಳ ಪೈಪೋಟಿ ನಡುವೆ ಅಬ್ಬರದ ಧ್ವನಿವರ್ಧಕ(ಡಿಜೆ) ಬಳಸಿದ ಕಾರಣ ಪ್ರಕರಣ ಪೊಲೀಸ್ ಇಲಾಖೆ ಮೆಟ್ಟಿಲೇರಿತ್ತು. ಈ ಬಾರಿ ಸಮಿತಿ ಸಭೆಯ ನಿರ್ಣಯದಂತೆ ಕಥಾ…

Read More

ವಿರಾಜಪೇಟೆ ಆ.30 NEWS DESK : ಸ್ವಾತಂತ್ರ್ಯೋತ್ಸವದ ಅಂಗವಾಗಿ ಗೋಣಿಕೊಪ್ಪಲು ಲಯನ್ಸ್ ಶಾಲೆ ವತಿಯಿಂದ ಆಯೋಜಿಸಲಾದ ತಾಲೂಕು ಮಟ್ಟದ ಅಂತರ ಶಾಲಾ ದೇಶಭಕ್ತಿಗೀತೆ ಮತ್ತು ಭಾಷಣ ಸ್ಪರ್ಧೆಯಲ್ಲಿ ವಿರಾಜಪೇಟೆ ಕಾವೇರಿ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ, ವಿವಿಧ ವಿಭಾಗಗಳಲ್ಲಿ ಬಹುಮಾನ ಪಡೆದುಕೊಂಡಿದ್ದಾರೆ. ಪ್ರೌಢಶಾಲಾ ವಿಭಾಗದಲ್ಲಿ ಭಾಷಣ ಸ್ಪರ್ಧೆಯಲ್ಲಿ ಹತ್ತನೇ ತರಗತಿಯ ವಿದ್ಯಾರ್ಥಿಗಳಾದ ಕ್ಷಮಾ ಪಿ.ಪಿ.ಕಾವೇರಮ್ಮ ಕನ್ನಡ ಭಾಷಣ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ, ಇಂಗ್ಲೀಷ್ ಭಾಷಣ ಸ್ಪರ್ಧೆಯಲ್ಲಿ ಎಂ.ಎನ್.ನಿಶಾನ್ ಪ್ರಥಮ, ದೇಶ ಭಕ್ತಿ ಗೀತೆಯಲ್ಲಿ ಎಂಟನೇ ತರಗತಿಯ ಎ.ಹನಿಯ ತೃತೀಯ ಹಾಗೂ ಏಳನೇ ತರಗತಿಯ ದಕ್ಷ್ ಭೋಜಣ್ಣ ತೃತೀಯ ಸ್ಥಾನವನ್ನು ಗಳಿಸಿ ಶಾಲೆಗೆ ಕೀರ್ತಿ ತಂದಿದ್ದಾರೆ. ಶಾಲಾ ಆಡಳಿತ ಮಂಡಳಿ ಹಾಗೂ ಮುಖ್ಯೋಪಾಧ್ಯಾಯರು ವಿದ್ಯಾರ್ಥಿಗಳ ಸಾಧನೆಯನ್ನು ಪ್ರಶಂಸಿಸಿದ್ದಾರೆ. ಈ ಸಂದರ್ಭ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಪಿ .ಯು.ಪಾರ್ವತಿ ಹಾಗೂ ಸಹ ಶಿಕ್ಷಕಿ ಕೆ.ಎಸ್.ನಿಶಾ ಮತ್ತು ಎಂ.ಕೆ.ಸುರಯ್ಯ ಹಾಜರಿದ್ದರು.

Read More

ಮಡಿಕೇರಿ ಆ.30 NEWS DESK : ವಿಶ್ವ ಹಿಂದೂ ಪರಿಷತ್, ರಾಷ್ಟ್ರೀಯ ಸ್ವಯಂ ಸೇವಕ ಸಂಘ ಸೇರಿದಂತೆ ವಿವಿಧ ಹಿಂದೂಪರ ಸಂಘಟನೆಗಳು ಹಿಂದುತ್ವವನ್ನು ಉಳಿಸಿ ಬೆಳೆಸಲು ಹೋರಾಡುತ್ತಿವೆಯಾದರೂ ಇವುಗಳೊಂದಿಗೆ ಹಿಂದೂಗಳು ಕೂಡ ಹಿಂದುತ್ವದ ರಕ್ಷಣೆಗಾಗಿ ಒಗ್ಗಟ್ಟಾಗಬೇಕೆಂದು ಉಕ್ಕುಡ ರಾಜರಾಜೇಶ್ವರಿ ಕ್ಷೇತ್ರದ ಧರ್ಮದರ್ಶಿ ಹೆಚ್.ಎನ್.ಗೋವಿಂದಸ್ವಾಮಿ ಕರೆ ನೀಡಿದರು. ವಿಶ್ವ ಹಿಂದೂ ಪರಿಷತ್ ಮಡಿಕೇರಿ ಪ್ರಖಂಡದ ವತಿಯಿಂದ ನಗರದ ಬಾಲಭವನದಲ್ಲಿ ನಡೆದ ವಿಶ್ವ ಹಿಂದೂ ಪರಿಷತ್ ಸ್ಥಾಪನಾ ದಿನ ಹಾಗೂ ಷಷ್ಠಿ ಪೂರ್ತಿ ಸಮಾರೋಪ ಸಂಭ್ರಮದಲ್ಲಿ ಅವರು ಕಾರ್ಯಕ್ರಮ ಉದ್ಘಾಟಿಸಿ ಆಶೀರ್ವಚನ ನೀಡಿ ಮಾತನಾಡಿದರು. ತಂದೆ, ತಾಯಿ, ಗುರು ಹಿರಿಯರಿಗೆ ಗೌರವ ಕೊಡುವುದರಿಂದ ಪ್ರತಿಯೊಬ್ಬರೂ ಬೆಳಣಿಗೆ ಹೊಂದಲು ಸಾಧ್ಯ. ದೇವರ ಬಗ್ಗೆ ಹೆಚ್ಚಿನ ಭಕ್ತಿಯನ್ನು ಬೆಳೆಸಿಕೊಳ್ಳಬೇಕು. ಇದರಿಂದಾಗಿ ಕೋಪ ಕ್ರೌರ್ಯಗಳಿಂದ ದೂರವಿರಲು ಸಾಧ್ಯವಾಗುತ್ತದೆ ಎಂದು ಗೋವಿಂದಸ್ವಾಮಿ ಸಲಹೆ ನೀಡಿದರು. ಶಕ್ತಿ ದಿನಪತ್ರಿಕೆಯ ಪ್ರಧಾನ ಸಂಪಾದಕ ಜಿ.ರಾಜೇಂದ್ರ ಮಾತನಾಡಿ, ಹಿಂದೂ ಧರ್ಮದ ಬಗ್ಗೆ ಜಾಗೃತಿ ಮೂಡಿಸುವ ಕೆಲಸಗಳು ನಡೆಯಬೇಕು. ಧರ್ಮಕ್ಕೆ ಧಕ್ಕೆಯಾದಾಗ ಎಲ್ಲರೂ ಒಗ್ಗಾಟ್ಟಾಗಬೇಕು, ಎಲ್ಲಾ…

Read More

ಮಡಿಕೇರಿ ಆ.30 NEWS DESK : ಕೊಡಗು ಜಿಲ್ಲೆಯ ಹಿಂದುಳಿದ ವರ್ಗಗಳ ಅರ್ಹ ಕಾನೂನು ಪಧವೀದರರಿಗೆ 2023-24ನೇ ಸಾಲಿಗೆ ನ್ಯಾಯಾಂಗ ಆಡಳಿತದಲ್ಲಿ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಕಾನೂನು ತರಬೇತಿ ಪಡೆಯಲು ಇರಬೇಕಾದ ಅರ್ಹತೆ ಮತ್ತು ನಿಬಂಧನೆಗಳು: ಅಭ್ಯರ್ಥಿಗಳು ಪ್ರ.ವರ್ಗ-1 ಮತ್ತು ಪ್ರ.ವರ್ಗ-2ಎ, 3ಎ, 3ಬಿ ಗೆ ಸೇರಿದವರಾಗಿರಬೇಕು. ಕುಟುಂಬದ ವಾರ್ಷಿಕ ಆದಾಯದ ಮಿತಿ ಪ್ರ.ವರ್ಗ-1 ರ ಅಭ್ಯರ್ಥಿಗಳಿಗೆ ರೂ.3.50 ಲಕ್ಷ ಹಾಗೂ ಪ್ರ.ವರ್ಗ-2ಎ, 3ಎ, 3ಬಿ ಗೆ ಸೇರಿದ ಅಭ್ಯರ್ಥಿಗಳಿಗೆ ರೂ.2.50 ಲಕ್ಷ ಒಳಪಟ್ಟಿರಬೇಕು. ಪ್ರ.ವರ್ಗ-1 ರ ಅಭ್ಯರ್ಥಿಗಳಿಗೆ ಪ್ರಥಮ ಆದ್ಯತೆ ನೀಡಲಾಗುವುದು. ಪ್ರ.ವರ್ಗ-1 ರ ಅಭ್ಯರ್ಥಿಗಳ ಕೊರತೆ ಇದ್ದಲ್ಲಿ ಸರ್ಕಾರದ ಆದೇಶದನ್ವಯ ನಿಯಮಾನುಸಾರ ಇತರೆ ವರ್ಗದ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಅರ್ಜಿಯನ್ನು ಸ್ವೀಕರಿಸುವ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಯು ಕಾನೂನು ಪದವಿ ಪಡೆದ 02 ವರ್ಷದ ಒಳಗಿರಬೇಕು. ಅರ್ಜಿ ಸಲ್ಲಿಸುವ ಕೊನೆಯ ದಿನಾಂಕಕ್ಕೆ ಅರ್ಜಿದಾರರ ವಯಸ್ಸು ಪ್ರ.ವರ್ಗ-1ರ ಅಭ್ಯರ್ಥಿಗಳಿಗೆ 31 ಮತ್ತು ಪ್ರ.ವರ್ಗ-2ಎ, 3ಎ, 3ಬಿ ಗೆ ಸೇರಿದ ಅಭ್ಯರ್ಥಿಗಳಿಗೆ…

Read More

ಮಡಿಕೇರಿ ಆ.30 NEWS DESK :  ರೋಟರಿ ಮಡಿಕೇರಿ ವುಡ್ಸ್ ಸಂಸ್ಥೆಯ ವತಿಯಿಂದ ರಾಷ್ಟ್ರೀಯ ಕ್ರೀಡಾ ದಿನಾಚರಣೆಯ ಅಂಗವಾಗಿ ಮೂವರು ಕ್ರೀಡಾಪಟುಗಳನ್ನು ಸನ್ಮಾನಿಸಲಾಯಿತು. ಹಾಕಿ ಕ್ರೀಡೆಯಲ್ಲಿ ಉದಯೋನ್ಮುಖ ಪ್ರತಿಭೆ ಎಸ್.ಕೆ.ದೇಚಕ್ಕ, ರಾಷ್ಟ್ರಿಯ ಹಾಕಿ ತೀರ್ಪುಗಾರ ಅಯ್ಯಪ್ಪ ಸೆಸ್ಟೋಬಾಲ್ ಕ್ರೀಡೆಯಲ್ಲಿ ಭಾರತದ ನಾಯಕತ್ವ ವಹಿಸಿದ ಮಹಮ್ಮದ್ ಶಾಹಿಲ್ ಸನ್ಮಾನಕ್ಕೆ ಪಾತ್ರರಾದರು. ರೋಟರಿ ವುಡ್ಸ್ ಅಧ್ಯಕ್ಷ ಹರೀಶ್ ಕಿಗ್ಗಾಲ್, ಮಾತನಾಡಿ ಕ್ರೀಡೆಯಲ್ಲಿ ಸಾಕಷ್ಟು ಸಾಧನೆ ಮಾಡಿದ ಅನೇಕ ಕ್ರೀಡಾಪಟುಗಳು ಜಿಲ್ಲೆಯಲ್ಲಿದ್ದಾರೆ. ಈ ಬಾರಿ ಎಳೆಯ ಪ್ರತಿಭೆಗಳನ್ನು ಹುಡುಕಿ ಅವರಿಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ, ಸನ್ಮಾನ ಮಾಡಲಾಗುತ್ತಿದೆ ಎಂದರು. ಸನ್ಮಾನ ಸ್ವೀಕರಿಸಿ ಮಾತನಾಡಿದ ಕ್ರೀಡಾಪಟುಗಳು ಈ ಸನ್ಮಾನ ಖುಷಿ ತಂದಿದೆ. ಭವಿಷ್ಯದಲ್ಲಿ ಇನ್ನಷ್ಟು ಸಾಧನೆ ಮಾಡಲು ಈ ಸನ್ಮಾನ ಪ್ರೋತ್ಸಾಹ ನೀಡುತ್ತಿದೆ ಎಂದು ತಮ್ಮ ಭಾವನೆಗಳನ್ನು ಹಂಚಿಕೊಂಡರು. ರೋಟರಿ ವುಡ್ಸ್ ಕಾರ್ಯದರ್ಶಿ ಕಿರಣ್ ಕುಂದರ್, ಭಗತ್ ರಾಜ್, ರಂಜಿತ್ ಕಿಗ್ಗಾಲ್, ಪ್ರದೀಪ್ ಕಿಗ್ಗಾಲ್, ಬಾಲಸುಬ್ರಹ್ಮಣ್ಯ, ಲೋಕೇಶ್, ಜಹೀರ್ ಅಹ್ಮದ್, ಪವನ್, ಧನಂಜಯ ಶಾಸ್ತ್ರಿ, ಬೋಪಣ್ಣ, ಪದ್ಮಾಗಿರಿ,…

Read More

ಮಡಿಕೇರಿ ಆ.30 NEWS DESK : ಜೀವನ ಪದ್ಧತಿಯಂತೆ ನಮ್ಮೊಳಗೆ ಹಾಸುಹೊಕ್ಕಾಗಿರುವ ಜಾನಪದ ಸಂಸ್ಕೃತಿ, ಕಲೆ, ಸಾಹಿತ್ಯಗಳನ್ನು ಉಳಿಸಿ ಮುಂದಿನ ಪೀಳಿಗೆಗೆ ಪರಿಚಯಿಸುವುದು ಅಗತ್ಯ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ವಿಶ್ವ ಜಾನಪದ ದಿನಾಚರಣೆ ಅಂಗವಾಗಿ ಕರ್ನಾಟಕ ಜಾನಪದ ಪರಿಷತ್ ಕೊಡಗು ಜಿಲ್ಲಾ ಘಟಕ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ ಸಂಯುಕ್ತ ಆಶ್ರಯದಲ್ಲಿ ನಗರದ ಜೂನಿಯರ್ ಕಾಲೇಜಿನ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಸಭಾಂಗಣದಲ್ಲಿ ನಡೆದ ‘ಜಾನಪದ ವೈವಿಧ್ಯ ಕಾರ್ಯಕ್ರಮ’ದಲ್ಲಿ ದುಡಿ ಬಾರಿಸುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು. ಜಾನಪದ ಕಲೆ, ಸಾಹಿತ್ಯ ದಿನದಿಂದ ದಿನಕ್ಕೆ ಮರೆಯಾಗುತ್ತಿದೆ. ಈ ಬಗ್ಗೆ ಗಂಭೀರ ಚಿಂತನೆ ಅಗತ್ಯವಾಗಿದೆ. ವಿವಿಧತೆಯಲ್ಲಿ ಏಕತೆ ಹೊಂದಿರುವ ದೇಶ ಭಾರತವಾಗಿದ್ದು, ಎಲ್ಲಾ ಮಾದರಿಯ ಜಾನಪದ ಕಲೆಗಳನ್ನು ಉಳಿಸಿಕೊಳ್ಳಬೇಕು ಎಂದು ಕರೆ ನೀಡಿದರು. ಜಾನಪದ ಪರಿಷತ್ ಕೇವಲ ಪಟ್ಟಣಕ್ಕೆ ಮಾತ್ರ ಸೀಮಿತವಾಗದೇ ಗ್ರಾಮೀಣ ಭಾಗದಲ್ಲೂ ಕಾರ್ಯಕ್ರಮ ಆಯೋಜಿಸುತ್ತಿರುವುದು ಶ್ಲಾಘನೀಯ. ಜಾನಪದ…

Read More