ಮಡಿಕೇರಿ ಸೆ.13 NEWS DESK : ಜಿಲ್ಲಾ ಪಂಚಾಯಿತಿ, ಕೊಡಗು ಪಶು ಪಲನಾ ಹಾಗೂ ಪಶು ವೈದ್ಯಕೀಯ ಇಲಾಖೆ, ಮಡಿಕೇರಿ ನೆಹರು ಯುವ ಕೇಂದ್ರ, ಮಡಿಕೇರಿ ತಾಲೂಕು ಯುವ ಒಕ್ಕೂಟ, ತಾಳತ್ತಮನೆ ನೇತಾಜಿ ಯುವತಿ ಮಂಡಳಿ ಹಾಗೂ ನೇತಾಜಿ ಯುವಕ ಮಂಡಲದ ಸಂಯುಕ್ತಶ್ರಾಯದಲ್ಲಿ ತಾಳತ್ತಮನೆಯಲ್ಲಿ ಉಚಿತ ರೇಬಿಸ್ ಲಸಿಕಾ ಶಿಬಿರ ನಡೆಯಿತು. ತಾಳತ್ತಮನೆ ಆಟದ ಮೈದಾನದಲ್ಲಿ ನಡೆದ ಶಿಬಿರದಲ್ಲಿ ಪಶುವೈದ್ಯಾಧಿಕಾರಿಗಳಾದ ಡಾ. ಎಂ.ಸಿ.ಲತಾ , ಡಾ. ಸಿ. ಎಸ್.ಶಿಲ್ಪಶ್ರೀ, ಎನ್.ಕೆ.ಮೋಹನ್ ಕುಮಾರ್, ಜಾನುವಾರು ಅಭಿವೃದ್ಧಿ ಅಧಿಕಾರಿ ಎಸ್.ನವೀನ್ ಕುಮಾರ್ ಸಾಕು ಪ್ರಾಣಿಗಳಿಗೆ ಲಸಿಕೆ ನೀಡಿ ಸಮಾಲೋಚನೆ ನೀಡಿದರು. ಮಡಿಕೇರಿ ಪಶು ಆಸ್ಪತ್ರೆಯ ಸಹಾಯಕ ನಿರ್ದೇಶಕ ಡಾ. ಕೆ.ಎ.ಪ್ರಸನ್ನ ರೇಬಿಸ್ ಕುರಿತು ಮಾಹಿತಿ ನೀಡಿದರು. ಶಿಬಿರದಲ್ಲಿ 99 ನಾಯಿ ಹಾಗೂ 11 ಬೆಕ್ಕು ಗಳಿಗೆ ಲಸಿಕೆ ಹಾಕಲಾಯಿತು.
ಲೇಖಕ: admin
ಮಡಿಕೇರಿ ಸೆ.13 NEWS DESK : ಪರಿಶಿಷ್ಟ ಜಾತಿಯೊಳಗಿನ ಉಪಜಾತಿಗಳಿಗೆ ಒಳ ಮೀಸಲಾತಿ ಕಲ್ಪಿಸಲು ರಾಜ್ಯ ಸರ್ಕಾರ ತಕ್ಷಣ ಕ್ರಮಕೈಗೊಳ್ಳಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿತ ಕರ್ನಾಟಕ ದಲಿತ ಸಂಘರ್ಷ ಸಮಿತಿ ಒತ್ತಾಯಿಸಿದೆ. ದ.ಸಂ.ಸ.ಯ ಜಿಲ್ಲಾ ಸಂಚಾಲಕಿ ಗಾಯತ್ರಿ ನರಸಿಂಹ ಅವರ ನೇತೃತ್ವದಲ್ಲಿ ಜಿಲ್ಲಾಧಿಕಾರಿ ವೆಂಕಟರಾಜಾ ಅವರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ ಸಂಘಟನೆಯ ಪ್ರಮುಖರು ಹಾಗೂ ಪದಾಧಿಕಾರಿಗಳು ಬೇಡಿಕೆಗಳನ್ನು ಶೀಘ್ರ ಈಡೇರಿಸಬೇಕೆಂದು ಆಗ್ರಹಿಸಿದರು. ಈ ಸಂದರ್ಭ ಮಾತನಾಡಿದ ಗಾಯತ್ರಿ ನರಸಿಂಹ, ಪರಿಶಿಷ್ಟ ಜಾತಿಯೊಳಗಿನ ಉಪ ಜಾತಿಗಳಿಗೆ ಒಳ ಮೀಸಲಾತಿ ಕಲ್ಪಿಸಲು ಸಂವಿಧಾನಬದ್ಧವಾದ ಅಧಿಕಾರ ಇದೆ ಮತ್ತು ಈ ಆದೇಶವನ್ನು ಅನುಷ್ಠಾನಗೊಳಿಸಲು ರಾಜ್ಯ ಸರ್ಕಾರಗಳಿಗೆ ಅಧಿಕಾರ ಇದೆ ಎಂದು ನ್ಯಾಯಾಲಯವೇ ಐತಿಹಾಸಿಕ ತೀರ್ಪು ನೀಡಿದೆ. ಇದು ಕಳೆದ 30 ವರ್ಷಗಳಿಂದ ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿತ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಹೋರಾಟಕ್ಕೆ ಸಿಕ್ಕ ಜಯವಾಗಿದೆ ಎಂದರು. ಪರಿಶಿಷ್ಟ ಜಾತಿಯ ಕೆಲವು ಉಪಜಾತಿಗಳಿಗೆ ಮೀಸಲಾತಿಯ ಪ್ರಯೋಜವನ್ನು ಪಡೆದುಕೊಳ್ಳಲು ಸಾಧ್ಯವಾಗಿಲ್ಲ. ಇಂತಹ ಉಪಜಾತಿಗಳು…
ನಾಪೋಕ್ಲು ಸೆ.13 NEWS DESK : ಗೌರಿ-ಗಣೇಶೋತ್ಸವದ ಅಂಗವಾಗಿ ಪಟ್ಟಣದ ವಿವಿಧ ಗಣೇಶ ಸೇವಾ ಸಮಿತಿಗಳ ವತಿಯಿಂದ ಪ್ರತಿಷ್ಠಾಪಿಸಲಾಗಿದ್ದ ಗೌರಿಗಣೇಶ ಮೂರ್ತಿಗಳ ವಿಸರ್ಜನೋತ್ಸವವು ಶ್ರದ್ಧಾಭಕ್ತಿಯಿಂದ ನಡೆಯಿತು. ಕಕ್ಕುಂದ ಕಾಡಿನ ವೆಂಕಟರಮಣ ದೇವಸ್ಥಾನದ ಗಣಪತಿ ಸೇವಾ ವತಿಯಿಂದ 19ನೇ ವರ್ಷದ ಅದ್ಧೂರಿ ಗೌರಿ ಗಣೇಶ ಉತ್ಸವ ಸಮಿತಿ ವತಿಯಿಂದ ಮಹಾ ಪೂಜೆಯ ಬಳಿಕ ಭಕ್ತರಿಗೆ ಅನ್ನ ಸಂತರ್ಪಣೆ ನಡೆಯಿತು. ಗದಗದ ಮಹಿಳಾ ತಂಡದಿಂದ ಡೊಳ್ಳು ಕುಣಿತ, ಉಡುಪಿಯ ಕೀಲು ಗೊಂಬೆಗಳು ಸೇರಿದಂತೆ ಇತರ ಕಲಾತಂಡದೊಂದಿಗೆ ಪಟ್ಟಣದಲ್ಲಿ ಅಲಂಕೃತ ಮಂಟಪ ದೊಂದಿಗೆ ಸಾಗಿದ ಮೆರವಣಿಗೆಯಲ್ಲಿ, ಕಲಾತಂಡಗಳ ನೃತ್ಯ ಜನಮನ ರಂಜಿಸಿತು. ಇಂದಿರಾನಗರದ ಗಣೇಶೋತ್ಸವ ಸೇವಾ ಸಮಿತಿ ವತಿಯಿಂದ 19ನೇ ವರ್ಷದ ದ್ಧೂರಿ ಗೌರಿ ಗಣೇಶ ಉತ್ಸವದಲ್ಲಿ ಸ್ಥಳೀಯರಿಂದ ಹಾಡುಗಾರಿಕೆ, ರವಿ ಬಳಗದಿಂದ ಸಂಗೀತ ಸಂಜೆ, ಸ್ಥಳೀಯರಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿತು. ಸಂಜೆ ಅತ್ಯಾಕರ್ಷಕ ಕೇರಳದ ಕೊಯ್ಕೋಡ್ ನ ಲೈಟಿಂಗ್ಸ್ ವೇಷಭೂಷಣ ತೊಟ್ಟ ದೇವಕನ್ಯೆಯರಿಂದ ನೃತ್ಯ, ಶಬರಿಮಲೆ ಅಯ್ಯಪ್ಪನ ಬೃಹತ್ ಆಕಾರದ ಪ್ರತಿರೂಪ ದೊಂದಿಗೆ ಆಕರ್ಷಕ…
ಮಡಿಕೇರಿ ಸೆ.13 NEWS DESK : ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಪ್ರಯುಕ್ತ ಬೀದರ್ನಿಂದ ಚಾಮರಾಜನಗರದವರೆಗೆ ಏಕಕಾಲದಲ್ಲಿ ಮಾನವ ಸರಪಳಿ ರಚಿಸುವ ಸಂಬಂಧ ಜಿಲ್ಲೆಯಾದ್ಯಂತ ಎಲ್ಲಾ ಶಾಲಾ-ಕಾಲೇಜಿನ ವಿದ್ಯಾರ್ಥಿಗಳು, ಶಿಕ್ಷಕರು, ಸರ್ಕಾರಿ ನೌಕರರು ಸಾರ್ವಜನಿಕರು, ಸಂಘ-ಸಂಸ್ಥೆಗಳ ಪ್ರತಿನಿಧಿಗಳು ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಮಾನವ ಬಂಧುತ್ವ ವೇದಿಕೆಯ ಜಿಲ್ಲಾಧ್ಯಕ್ಷ ಜೆ.ಎಲ್.ಜನಾರ್ಧನ್ ಹಾಗೂ ದಲಿತ ಸಂಘರ್ಷ ಸಮಿತಿಯ ಕೊಡಗು ಜಿಲ್ಲಾ ಸಂಚಾಲಕ ಎಂ.ಎಸ್.ವೀರೇಂದ್ರ ಮನವಿ ಮಾಡಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾದ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ರಾಜ್ಯ ಸರ್ಕಾರ ರಾಜ್ಯದ ಜನತೆಗೆ ಪ್ರಜಾಪ್ರಭತ್ವ ಮತ್ತು ಸಂವಿಧಾನದ ಮೌಲ್ಯಗಳನ್ನು ಮನವರಿಕೆ ಮಾಡಿಕೊಡಲು ಮುಂದಾಗಿದೆ. ಈ ಹಿಂದೆ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರು ರಚಿಸಿದ ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಮೌಲ್ಯಗಳ ಬಗ್ಗೆ ಪ್ರತಿಯೊಬ್ಬರಿಗೆ ಅರಿವಾಗುವಂತೆ “ಸಂವಿಧಾನ ಜಾಥಾ” ಕಾರ್ಯಕ್ರಮ ಮಾಡಿ ಯಶಸ್ವಿಯಾಗಿತ್ತು ಎಂದು ತಿಳಿಸಿದ್ದಾರೆ. ಸೆ.15 ರಂದು ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಆಚರಣೆ ಹಿನ್ನೆಲೆ ಸಂವಿಧಾನ ಮತ್ತು ಪ್ರಜಾಪ್ರಭುತ್ವ ಉಳಿದರೆ ದೇಶದ…
ಮಡಿಕೇರಿ ಸೆ.13 NEWS DESK : ಚೆನ್ನೈನಲ್ಲಿ ನಡೆಯುತ್ತಿರುವ ದಕ್ಷಿಣ ಏಷ್ಯ ಜೂನಿಯರ್ ಅಥ್ಲೆಟಿಕ್ ಜೂನಿಯರ್ ಚಾಂಪಿಯನ್ಶಿಪ್ ನ 100 ಮೀಟರ್ ಹರ್ಡಲ್ಸ್ ನಲ್ಲಿ ಕೊಡಗಿನ ಬೊಳ್ಳಂಡ ಉನ್ನತಿ ಅಯ್ಯಪ್ಪ ಚಿನ್ನದ ಪದಕ ಪಡೆಯುವ ಮೂಲಕ ದಾಖಲೆ ನಿರ್ಮಿಸಿದ್ದಾರೆ. ಉನ್ನತಿ ಅಯ್ಯಪ್ಪ ರಾಷ್ಟ್ರೀಯ ಅಥ್ಲೆಟ್ ಕೋಚ್ ಬೊಳ್ಳಂಡ ಅಯ್ಯಪ್ಪ ಹಾಗೂ ಮಾಜಿ ಒಲಂಪಿಯನ್ ಪ್ರಮೀಳಾ ದಂಪತಿಯ ಪುತ್ರಿ.
ಮಡಿಕೇರಿ NEWS DESK ಸೆ.13 : ಕೊಡಗು ಜಿಲ್ಲೆಯ ವಿವಿಧೆಡೆ ನಡೆಯುತ್ತಿರುವ ಬೃಹತ್ ಭೂಪರಿವರ್ತನೆ ಮತ್ತು ಭೂವಿಲೇವಾರಿಯನ್ನು ಸ್ಥಗಿತಗೊಳಿಸಬೇಕೆಂದು ಒತ್ತಾಯಿಸಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ವತಿಯಿಂದ ಸೆ.16ರಂದು ಹುದಿಕೇರಿಯಲ್ಲಿ ಜನಜಾಗೃತಿ ಮಾನವ ಸರಪಳಿ ಕಾರ್ಯಕ್ರಮ ನಡೆಯಲಿದೆ ಎಂದು ಸಿಎನ್ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಹುದಿಕೇರಿಯಲ್ಲಿ ಬೆಳಿಗ್ಗೆ 10.30 ಗಂಟೆಗೆ ಮಾನವ ಸರಪಳಿ ನಿರ್ಮಿಸಿ ಹಕ್ಕೊತ್ತಾಯ ಮಂಡಿಸಲಾಗುವುದು. ಮಾನವ ಸರಪಳಿ ಜನಜಾಗೃತಿ ಕಾರ್ಯಕ್ರಮದಲ್ಲಿ ಸರ್ವ ಕೊಡವರು ಪಾಲ್ಗೊಳ್ಳುವ ಮೂಲಕ ಬೃಹತ್ ಭೂಪರಿವರ್ತನೆ ಮತ್ತು ಭೂವಿಲೇವಾರಿಯ ವಿರುದ್ಧ ಸಿಎನ್ಸಿ ನಡೆಸುತ್ತಿರುವ ಹೋರಾಟಕ್ಕೆ ಕೈಜೋಡಿಸಬೇಕೆಂದು ಮನವಿ ಮಾಡಿದ್ದಾರೆ. ಆದಿಮಸಂಜಾತ ಕೊಡವರ ಭೂಮಿಯ ಹಕ್ಕನ್ನು ರಕ್ಷಿಸಲು ಬೃಹತ್ ಭೂಪರಿವರ್ತನೆ ಮತ್ತು ಭೂವಿಲೇವಾರಿ ವಿರುದ್ಧ ಹೋರಾಟ ಅನಿವಾರ್ಯವಾಗಿದೆ. “ಕೊಡವ ಲ್ಯಾಂಡ್” ಸ್ವಯಂ ನಿರ್ಣಯದ ಭೂರಾಜಕೀಯ ಸ್ವಾಯತ್ತತೆ ಘೋಷಣೆ ಮತ್ತು ಕೊಡವರಿಗೆ ಎಸ್ಟಿ ಟ್ಯಾಗ್ ನೀಡುವುದು ಅಗತ್ಯವಾಗಿದೆ. ಇದಕ್ಕಾಗಿ ವ್ಯಾಪಕ ಜನಜಾಗೃತಿ ಮತ್ತು ಜಿಲ್ಲೆಯಾದ್ಯಂತ ಶಾಂತಿಯುತ ಬೃಹತ್ ಮಾನವ ಸರಪಳಿ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ.…
ನಾಪೋಕ್ಲು ಸೆ.13 NEWS DESK : ಇಂಗ್ಲಿಷ್ ಉದ್ಯೋಗದ ಭಾಷೆ ಆದರೂ ಭಾವಾ ಅಭಿವ್ಯಕ್ತಿಗೆ ಹೃದ್ಯವಾದುದು ಮಾತೃಭಾಷೆ ಕನ್ನಡ ಎಂದು ಡಾ.ಬಸವರಾಜ್ ಅಭಿಪ್ರಾಯ ವ್ಯಕ್ತಪಡಿಸಿದರು. ವಿರಾಜಪೇಟೆ ಬೇಟೋಳಿ ಗ್ರಾಮದ ಗುಂಡಿಕೆರೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಭಾಂಗಣದಲ್ಲಿ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ವಿರಾಜಪೇಟೆ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಬೇಟೋಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಂಯುಕ್ತ ಆಶ್ರಯದಲ್ಲಿ ಎನ್.ಮಹಾಬಲೇಶ್ವರ ಭಟ್ ದತ್ತಿನಿಧಿ ಉಪನ್ಯಾಸ ಕಾರ್ಯಕ್ರಮದಲ್ಲಿ “ಕನ್ನಡದ ಏಳು ಬೀಳುಗಳ ಸಮೀಕ್ಷೆ” ಬಗ್ಗೆ ಉಪನ್ಯಾಸ ನೀಡಿದರು. ವಿರಾಜಪೇಟೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಡಾ. ಕೆ.ಬಸವರಾಜ್ ಮಾತನಾಡಿ, ಪಂಪ ರನ್ನ ಪೊನ್ನರು ರಚಿಸಿದ ಕಾವ್ಯಗಳು ಇಂದಿಗೂ ಜೀವಂತ ಸಾರ್ವಕಾಲಿಕ ಸಂದೇಶ ನೀಡುತ್ತವೆ. ವಚನ ಸಾಹಿತ್ಯವು ವಿಶ್ವ ಮಾನ್ಯವಾಗಿದ್ದು, ಸಾರ್ವತ್ರಿಕವಾಗಿ ಜನಮನ ಸೆಳಿದಿದೆ. ಭಕ್ತಿ ರಸ ಚೆಲ್ಲಿದ ದಾಸ ಸಾಹಿತ್ಯದ ಕೀರ್ತನೆಗಳು ಎಂದೆಂದೂ ಜನಪ್ರಿಯ ಆಗಿವೆ. ಇಷ್ಟೆಲ್ಲಾ ಶ್ರೀಮಂತಿಕೆ ಸತ್ವ ಇರುವ ಭಾಷೆಯು ಇಂದು ಅಭಿಮಾನ…
ಮಡಿಕೇರಿ NEWS DESK ಸೆ.13 : ಶ್ರೀ ಕೆಂಗಲ್ ಹನುಮಂತಯ್ಯ ಸದ್ಭಾವನಾ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ನಿವೃತ್ತ ದೈಹಿಕ ಶಿಕ್ಷಕ ಶಿವಣ್ಣ ಎಸ್. ಅವರನ್ನು ಮೈಸೂರಿನ ಗೋಕುಲಂ ವಿನಾಯಕ ಸಂಘದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಮೈಸೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ಚಿತ್ರನಟ ವಿನಯ್ ರಾಜ್ ಕುಮಾರ್ ಹಾಗೂ ಸಂಘದ ಪ್ರಮುಖರು ಶಿವಣ್ಣ ಅವರನ್ನು ಸನ್ಮಾನಿಸಿದರು. ಶಿವಣ್ಣ ಅವರು ವಿರಾಜಪೇಟೆಯ ಕುಟ್ಟಂದಿಯ ಕೆ.ಬಿ ಪ್ರೌಢಶಾಲೆಯಲ್ಲಿ ಕಳೆದ 30 ವರ್ಷಗಳಿಂದ ದೈಹಿಕ ಶಿಕ್ಷಕರಾಗಿ ಸೇವೆ ಸಲ್ಲಿಸಿದ್ದಾರೆ. ಹವ್ಯಾಸಿ ರಂಗಭೂಮಿ ಕಲಾವಿದರು, ಹಾಡುಗಾರರೂ ಆಗಿರುವ ಶಿವಣ್ಣ ಅವರು ಭಾರತ ಸೇವಾದಳ, ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯಲ್ಲೂ ಸೇವೆ ಸಲ್ಲಿಸಿದ್ದಾರೆ. ಇತ್ತೀಚೆಗಷ್ಟೇ ನಿವೃತ್ತಿ ಹೊಂದಿರುವ ಇವರು ಕಿರುತೆರೆಯ ಧಾರಾವಾಹಿಯೊಂದರಲ್ಲಿ ಅಭಿನಯಿಸುತ್ತಿದ್ದಾರೆ.
ನಾಪೋಕ್ಲು ಸೆ.13 NEWS DESK : ಚೆಂಬುವಿನ ಊರುಬೈಲು ಸ.ಹಿ.ಪ್ರಾ.ಶಾಲೆಯಲ್ಲಿ ಸಂಪಾಜೆ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ನಡೆಯಿತು. ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷ ಎಂ.ಪಿ.ಮಹೇಶ ಕಾರ್ಯಕ್ರಮವನ್ನು ಉದ್ಘಾಟಿಸಿ, ವಿದ್ಯಾರ್ಥಿಗಳಿಗೆ ಶುಭಹಾರೈಸಿದರು. ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಚೆಂಬು ಗ್ರಾ.ಪಂ ಅಧ್ಯಕ್ಷ ತೀರ್ಥರಾಮ ಪೂಜಾರಿಗದ್ದೆ, ಪ್ರತಿಭಾ ಕಾರಂಜಿ ವಿದ್ಯಾರ್ಥಿಗಳ ಪ್ರತಿಭೆಯನ್ನು ಅನಾವರಣಗೊಳಿಸುವ ಸುಂದರ ವೇದಿಕೆಯಾಗಿದೆ. ಇದು ವಿದ್ಯಾರ್ಥಿಗಳ ಉತ್ತಮ ಭವಿಷ್ಯವನ್ನು ರೂಪಿಸುವ ವೇದಿಕೆಯಾಗಲಿ ಎಂದು ಶುಭ ಹಾರೈಸಿದರು. ಗ್ರಾ.ಪಂ ಸದಸ್ಯ ರಮೇಶ ಹುಲ್ಲುಬೆಂಕಿ ಮಾತನಾಡಿ, ಆತ್ಮವಿಶ್ವಾಸವನ್ನು ಹೆಚ್ಚಿಸುವ ಮತ್ತು ವಿದ್ಯಾರ್ಥಿಗಳ ಪ್ರತಿಭೆಗಳನ್ನು ರಾಷ್ಟ್ರಮಟ್ಟಕ್ಕೆ ಗುರುತಿಸುವ ಕಾರ್ಯಕ್ರಮವಾಗಿದೆ ಎಂದರು. ಗ್ರಾ.ಪಂ ಚೆಂಬು ಸದಸ್ಯೆ ಕುಸುಮ ಮಾತನಾಡಿ, ಪ್ರತಿಭಾ ಕಾರಂಜಿ ವಿವಿಧ ಹಂತಗಳಲ್ಲಿ ವಿದ್ಯಾರ್ಥಿಗಳ ಸ್ಪರ್ಧಾ ಮನೋಭಾವವನ್ನು ಮೂಡಿಸುವ ಉತ್ತಮ ಕಾರ್ಯಕ್ರಮವಾಗಿದೆ ಎಂದರು. ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಮಡಿಕೇರಿ ತಾಲೂಕು ಅಧ್ಯಕ್ಷ ಮೋಹನ ಪೆರಾಜೆ ಮಾತನಾಡಿ, ವಿದ್ಯಾರ್ಥಿಗಳ ಪಠ್ಯೇತರ ಚಟುವಟಿಕೆಗಳಲ್ಲಿ ಒಂದಾಗಿರುವ ಪ್ರತಿಭಾ ಕಾರಂಜಿಯಲ್ಲಿ ವಿದ್ಯಾರ್ಥಿಗಳ ಭಾಗವಹಿಸುವಿಕೆ ಮುಖ್ಯ, ಸೋಲು-ಗೆಲುವು ಸಾಮಾನ್ಯ, ಅವೆರಡನ್ನೂ ವಿಮರ್ಶೆ…
ಮಡಿಕೇರಿ ಸೆ.13 NEWS DESK : ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನೆಯ 21ನೇ ವಾರ್ಷಿಕೋತ್ಸವವು ಸೆ.24 ರಿಂದ 26ರ ವರೆಗೆ ನಡೆಯಲಿದೆ. ಸೆ.24 ರಂದು ಸಂಜೆ 6 ಗಂಟೆಗೆ ಗುರು ಗಣಪತಿ ಪೂಜೆ, ಪುಣ್ಯಾಹ, ಸಂಕಲ್ಪ, ದುರ್ಗಾ ಸಪ್ತಶತಿ ಪಾರಾಯಣ, ಮಹಾಪೂಜೆ, ದೀಪರಾಧನೆ ಹಾಗೂ ತೀರ್ಥಪ್ರಸಾದ ವಿನಿಯೋಗ ನಡೆಯಲಿದೆ. ಸೆ.25 ರಂದು ಬೆಳಿಗ್ಗೆ 8 ಗಂಟೆಗೆ ಚಂಡಿಕಾ ಹೋಮ, ಮಧ್ಯಾಹ್ನ 12 ಗಂಟೆಗೆ ಪೂರ್ಣಾಹುತಿ ಹಾಗೂ ಮಹಾ ಮಂಗಳಾರತಿ ಜರುಗಲಿದ್ದು, ತೀರ್ಥಪ್ರಸಾದ ವಿನಿಯೋಗ ನೆರವೇರಲಿದೆ. ಸಂಜೆ 6 ಗಂಟೆಯಿಂದ ವಾರ್ಷಿಕೋತ್ಸವ ಕಾರ್ಯಕ್ರಮಗಳು ಆರಂಭವಾಗಲಿದ್ದು, ಗುರು ಗಣಪತಿ ಪೂಜೆ, ಪುಣ್ಯಾಹ, ಸಂಕಲ್ಪ, ಕಳಶಸ್ಥಾಪನೆ, ದೀಪಾರಾಧನೆ, ಅಷ್ಠಾವಧಾನ ಸೇವೆ ನಂತರ ತೀರ್ಥಪ್ರಸಾದ ವಿನಿಯೋಗವಾಗಲಿದೆ. ಸೆ.26 ರಂದು ಬೆಳಿಗ್ಗೆ ಗುರುಗಣಪತಿ ಪೂಜೆ, ಪುಣ್ಯಾಹ, ಗಣಪತಿ ಹೋಮ, ಕಲಾಹೋಮ, ತತ್ವಹೋಮ, ತತ್ವಶಾಂತಿ ಹೋಮ, ದುರ್ಗಾ ಹೋಮ, ತತ್ವಕಲಶಾಭಿಷೇಕ, ಮಹಾಪೂಜೆ, ತೀರ್ಥಪ್ರಸಾದ ವಿನಿಯೋಗ ನಡೆಯಲಿದೆ. ಮಧ್ಯಾಹ್ನ 12.30 ಗಂಟೆಗೆ…






