ಮಡಿಕೇರಿ NEWS DESK ಆ.30 : ಕಾಡಾನೆ ದಾಳಿಗೆ ಸಿಲುಕಿ ವೃದ್ದೆಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಚೆನ್ನಯ್ಯನಕೋಟೆ ಗ್ರಾಮ ವ್ಯಾಪ್ತಿಯಲ್ಲಿ ನಡೆದಿದೆ. ಕಾತಯಿ(72) ಎಂಬುವವರೇ ಮೃತ ದುರ್ದೈವಿಯಾಗಿದ್ದು, ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮಗನ ಮನೆಯಿಂದ ಹೊರ ಬರುತ್ತಿದ್ದ ಕಾತಯಿ ಅವರ ಮೇಲೆ ಕಾಡಾನೆ ಏಕಾಏಕಿ ದಾಳಿ ಮಾಡಿ ತುಳಿದಿದೆ ಎಂದು ತಿಳಿದು ಬಂದಿದೆ. ಅರಣ್ಯ ಇಲಾಖೆಯ ನಿರ್ಲಕ್ಷ್ಯದಿಂದ ಕಾಡಾನೆಗಳು ಗ್ರಾಮದಲ್ಲಿ ಉಪಟಳ ನೀಡುತ್ತಿವೆ ಎಂದು ಗ್ರಾಮಸ್ಥರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ರಾಜ್ಯ ವನ್ಯಜೀವಿ ಮಂಡಳಿಯ ಸದಸ್ಯ ಸಂಕೇತ್ ಪೂವಯ್ಯ ಅವರು ಸ್ಥಳಕ್ಕೆ ಭೇಟಿ ನೀಡಿ ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ವಿರಾಜಪೇಟೆಯ ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ ಅವರು, ಹಿರಿಯ ಅರಣ್ಯ ಅಧಿಕಾರಿಗಳನ್ನು ಸಂಪರ್ಕಿಸಿ ಘಟನೆಯ ಬಗ್ಗೆ ವಿವರ ಪಡೆದುಕೊಂಡರು.
ಲೇಖಕ: admin
ಮಡಿಕೇರಿ ಆ.30 NEWS DESK : ಕೆರೆಯ ನೀರಿನಲ್ಲಿ ಆಕಸ್ಮಿಕವಾಗಿ ಮುಳುಗಿ ಕಾಡಾನೆಯೊಂದು ದುರ್ಮರಣಕ್ಕೀಡಾಗಿರುವ ಘಟನೆ ಅಮ್ಮತ್ತಿ ಸಮೀಪದ ಕಾಫಿ ತೋಟದಲ್ಲಿ ನಡೆದಿದೆ. ಸುಮಾರು ಹತ್ತು ವರ್ಷದ ಗಂಡಾನೆಯ ಮೃತದೇಹ ಕೆರೆಯಲ್ಲಿ ಇಂದು ಪತ್ತೆಯಾಗಿದೆ. ಎರಡು ದಿನಗಳ ಹಿಂದೆ ಕಾಡಾನೆ ಮೃತಪಟ್ಟಿರಬಹುದೆಂದು ಅಂದಾಜಿಸಲಾಗಿದೆ. ಕಾಫಿ ತೋಟದ ಕೆರೆಗೆ ನೀರು ಕುಡಿಯಲೆಂದು ಬಂದಿದ್ದ ಕಾಡಾನೆ, ಆಕಸ್ಮಿಕವಾಗಿ ಬಿದ್ದು ಮೇಲೆ ಬರಲು ಸಾಧ್ಯವಾಗದೆ ಸಾವನ್ನಪ್ಪಿರುವ ಸಾಧ್ಯತೆ ಇದೆ. ಇಂದು ಬೆಳಿಗ್ಗೆ ಕಾರ್ಮಿಕರು ನೀರಿನಲ್ಲಿ ತೇಲುತ್ತಿದ್ದ ಆನೆಯ ಮೃತ ದೇಹವನ್ನು ಗಮನಿಸಿ ಮಾಹಿತಿ ನೀಡಿದರು. ಸ್ಥಳಕ್ಕೆ ಡಿಎಫ್ಓ ಜಗನ್ನಾಥ್, ಎಸಿಎಫ್ ಗೋಪಾಲ್, ಆರ್ಎಫ್ಓ ಶಿವರಾಂ, ವನ್ಯಜೀವಿ ವೈದ್ಯಾಧಿಕಾರಿ ಡಾ.ಚೆಟ್ಟಿಯಪ್ಪ ಹಾಗೂ ಸಿಬ್ಬಂದಿಗಳ ತಂಡ ಆಗಮಿಸಿ ಪರಿಶೀಲನೆ ನಡೆಸಿದರು. ಕಾಡಾನೆಯ ಮೃತದೇಹವನ್ನು ನೀರಿನಿಂದ ಹೊರ ತೆಗೆದು ಮರಣೋತ್ತರ ಪರೀಕ್ಷೆ ನಡೆಸಿ ಅಂತ್ಯಕ್ರಿಯೆ ಮಾಡಲಾಯಿತು. ಉಪವಲಯ ಅರಣ್ಯ ಅಧಿಕಾರಿಗಳಾದ ಸಂಜಿತ್ ಸೋಮಯ್ಯ, ಕನ್ನಂಡ ರಂಜನ್, ಅರಣ್ಯ ರಕ್ಷಕ ಅರುಣ, ಆರ್ಆರ್ಟಿ ಹಾಗೂ ಇಪಿಟಿ ಸಿಬ್ಬಂದಿಗಳಾದ ವಿನೋದ್, ಅಚ್ಚಯ್ಯ, ವಿನೋದ,…
ಕುಶಾಲನಗರ, ಆ.30 NEWS DESK : ಮನುಕುಲದ ಒಳಿತಿಗೆ ವಚನ ಸಾಹಿತ್ಯದ ಮಹತ್ವ ಹಾಗೂ ಜಾಗೃತಿಯನ್ನು ಮೂಡಿಸುತ್ತಿರುವ ಶರಣ ಸಾಹಿತ್ಯ ಪರಿಷತ್ತಿನ ಸಂಸ್ಥಾಪನಾ ದಿನವಾಗಿ ಸುತ್ತೂರು ಮಹಾಸಂಸ್ಥಾನದ 23ನೇ ಜಗದ್ಗುರು ಡಾ.ರಾಜೇಂದ್ರ ಸ್ವಾಮೀಜಿ ಜನ್ಮದಿನಾಚರಣೆಯನ್ನು ಆಚರಿಸುತ್ತಿರುವುದರಿಂದ ಇದು ಸರ್ಕಾರವೇ ಆಚರಿಸುವಂತಾಗಬೇಕೆಂದು ಚಿಂತಕ, ವಾಗ್ಮಿ ವಿ.ಪಿ.ಶಶಿಧರ್ ಜಿಲ್ಲಾಡಳಿತವನ್ನು ಆಗ್ರಹಿಸಿದರು. ಕೊಡಗು ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ವತಿಯಿಂದ ಕೂಡಿಗೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನಡೆದ ಸುತ್ತೂರು ಮಠದ 23ನೇ ಜಗದ್ಗುರು ಡಾ.ರಾಜೇಂದ್ರ ಸ್ವಾಮೀಜಿಯವರ 109 ನೇ ಪುಣ್ಯಸ್ಮರಣೆ ಹಾಗೂ ಶರಣ ಸಾಹಿತ್ಯ ಪರಿಷತ್ತಿನ ಸಂಸ್ಥಾಪನಾ ದಿನೋತ್ಸವವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಜನಸಾಮಾನ್ಯರ ಬದುಕು ಸಂಕೀರ್ಣವಾಗಿದ್ದಂತಹ ಕಾಲಘಟ್ಟದಲ್ಲಿ ಹೊರ ಬಂದಂತಹ ವಚನಗಳು ಹಾಗೂ ಹನ್ನೆರಡನೇ ಶತಮಾನದ ಶರಣರ ಚಿಂತನೆಗಳು ಮನುಷ್ಯರ ಉತ್ತಮ ಬದುಕಿಗೆ ಸಿಕ್ಕಂತಹ ಮುತ್ತು ರತ್ನಗಳು. ಮೂಢನಂಬಿಕೆ, ಕಂದಾಚಾರ, ಬಡವ – ಬಲ್ಲಿದ, ಮೇಲು – ಕೀಳು ಬೇಧಗಳು ಜನಸಾಮಾನ್ಯರ ಜೀವ ಹಿಂಡುತ್ತಿದ್ದ ಕಾಲದಲ್ಲಿ ಬಸವಾದಿ ಶರಣರ ವಚನಗಳು ಮನುಷ್ಯನಿಗೆ ಲೌಕಿಕ…
ಮಡಿಕೇರಿ ಆ.29 NEWS DESK : ಹಸಿರ ಪರಿಸರ, ಜಲಪ್ರದೇಶಗಳ ಸಂರಕ್ಷಣೆಗಾಗಿ ಸರ್ಕಾರ ಸೂಕ್ಷ್ಮ ಪರಿಸರ ವಲಯದ ಕಾನೂನನ್ನು ಜಾರಿಗೆ ತಂದಿದೆ. ಆದರೆ ಕೊಡಗಿನಲ್ಲಿ ಈ ಕಾನೂನು ಬಂಡವಾಳಶಾಹಿಗಳಿಗೆ ಅನ್ವಯವಾಗುತ್ತಿಲ್ಲ, ಬದಲಿಗೆ ಆದಿಮಸಂಜಾತ ಕೊಡವ ಬುಡಕಟ್ಟು ಜನಾಂಗದ ಮೇಲೆ ಹೇರಲಾಗುತ್ತಿದೆ ಎಂದು ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ಅಧ್ಯಕ್ಷ ಎನ್.ಯು.ನಾಚಪ್ಪ ಆರೋಪಿಸಿದ್ದಾರೆ. ಸಿದ್ದಾಪುರದ ಸೇರಿದಂತೆ ಕೊಡಗು ಜಿಲ್ಲೆಯ ವಿವಿಧೆಡೆ ನಡೆಯುತ್ತಿರುವ ಬೃಹತ್ ಭೂಪರಿವರ್ತನೆ ಮತ್ತು ಭೂವಿಲೇವಾರಿಯನ್ನು ಸ್ಥಗಿತಗೊಳಿಸಬೇಕೆಂದು ಒತ್ತಾಯಿಸಿ ಸಿಎನ್ಸಿ ವತಿಯಿಂದ ಮೂರ್ನಾಡಿನಲ್ಲಿ ನಡೆದ ಜನಜಾಗೃತಿ ಮಾನವ ಸರಪಳಿ ಕಾರ್ಯಕ್ರಮದ ನೇತೃತ್ವ ವಹಿಸಿ ಅವರು ಮಾತನಾಡಿದರು. ಆದಿಮಸಂಜಾತ ಕೊಡವ ಬುಡಕಟ್ಟು ಜನರು ಇಲ್ಲಿಯವರೆಗೆ ಹಸಿರಿನ ಕೊಡವ ಭೂಮಿಯನ್ನು ಉಳಿಸಿ ಬೆಳೆಸಿಕೊಂಡು ಬಂದಿದ್ದಾರೆ. ಆದರೆ ಇಂದು ಭೂಮಾಫಿಯಾ, ರೆಸಾರ್ಟ್ ಮಾಫಿಯಾ, ವಿಲ್ಲಾ, ಟೌನ್ ಶಿಪ್, ಬೃಹತ್ ಭೂಪರಿವರ್ತನೆ, ಭೂವಿಲೇವಾರಿ ಮಾಫಿಯಾಗಳು ಹಾಗೂ ಕಪ್ಪುಹಣದ ಬಂಡವಾಳಶಾಹಿಗಳು ಕೊಡವಲ್ಯಾಂಡ್ ನ್ನು ನಾಶ ಮಾಡುತ್ತಿದ್ದಾರೆ ಮತ್ತು ಕೊಡವರನ್ನು ಬಲಿಪಶು ಮಾಡುತ್ತಿದ್ದಾರೆ. ಈ ಎಲ್ಲಾ ಮಾಫಿಯಾಗಳಿಗೆ ಆಡಳಿತ ವ್ಯವಸ್ಥೆಯ…
ವಿರಾಜಪೇಟೆ ಆ.29 NEWS DESK : ಕ್ರೀಡೆಗಳಿಗೆ ತನ್ನದೆಯಾದ ರೀತಿಯಲ್ಲಿ ಕೊಡುಗೆ ನೀಡಿ ರಾಜ್ಯ ಮತ್ತು ದೇಶಕ್ಕೆ ಕೀರ್ತಿ ತಂದ ಕ್ರೀಡಾಪಟುಗಳನ್ನು ರಾಜ್ಯ ಸರ್ಕಾರ ಸನ್ಮಾನಿ ಗೌರವಿಸಿದೆ. ಕರ್ನಾಟಕ ಒಲಿಂಪಿಕ್ ಅಸೋಸಿಯೇಷನ್ ವತಿಯಿಂದ ಬೆಂಗಳೂರಿನ ಕಂಠೀರವ ಕ್ರೀಡಾಂಗಣದ ಸಭಾಂಗಣದಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ ಕಾರ್ಯಕ್ರಮ ನಡೆಯಿತು. ಕರ್ನಾಟಕ ರಾಜ್ಯದ ಗೃಹ ಮಂತ್ರಿ ಜಿ.ಪರಮೇಶ್ವರ್ ಅವರು ವಿವಿಧ ಕ್ರೀಡಾ ಕ್ಷೇತ್ರದಲ್ಲಿ ಅವಿಸ್ಮರಣೀಯ ಕೊಡುಗೆ ನೀಡಿದ ಕ್ರೀಡಾ ದೇಶೀಯ ಮತ್ತು ಅಂತರ್ ರಾಷ್ಟ್ರೀಯ ಹಾಕಿ ಕ್ಷೇತ್ರದಲ್ಲಿ ವಿಶಿಷ್ಟ ಕೊಡುಗೈ ನೀಡಿದ ಕೊಡಗು ಜಿಲ್ಲೆಯ ಹಾಕಿ ಕಲಿಗಳಾದ ಎ.ಬಿ.ಸುಬ್ಬಯ್ಯ, ಸಿ.ಎಸ್.ಪೂಣಚ್ಚ, ಕೆ.ಕೆ.ಪೂಣಚ್ಚ, ವಿ.ಎಸ್.ವಿನಯ್, ಅರ್ಜುನ್ ಹಾಲಪ್ಪ, ನಿಕಿನ್ ತಿಮ್ಮಯ್ಯ ಮತ್ತು ಬಿ.ಸಿ.ಪೂಣಚ್ಚ ಹಾಗೂ ಅನಿಲ್ ಆಡ್ರಿಯನ್ ಅವರನ್ನು ನೆನಪಿನ ಕಾಣಿಕೆ ನೀಡಿ ಗೌರವಿಸಲಾಯಿತು. ಹಾಕಿ ಕ್ಷೇತ್ರವಲ್ಲದೆ ವಿವಿಧ ಕ್ರೀಡೆಗಳಲ್ಲಿ ಸಾಧನೆಗೈದ ಕ್ರೀಡಾ ಪಟುಗಳಿಗೆ ಗೌರವಾರ್ಥ ಸ್ಮರಣಿಕೆ ನೀಡಿ ಗೌರವಿಸಲಾಯಿತು.
ಮಡಿಕೇರಿ ಆ.29 NEWS DESK : ನಮ್ಮ ರಾಜ್ಯವು ‘ಕರ್ನಾಟಕ’ ಎಂದು ನಾಮಕರಣಗೊಂಡು 50 ವರ್ಷಗಳು ತುಂಬಿವೆ. ಆ ಪ್ರಯುಕ್ತ ರಾಜ್ಯದ ನಾಲ್ಕು ಕಂದಾಯ ವಿಭಾಗಗಳಲ್ಲಿ ನಮ್ಮ ನಾಡಿನ ಬಹುಸಂಸ್ಕೃತಿ ಯನ್ನು ಸಾರುವ ‘ಕರ್ನಾಟಕ ಸುವರ್ಣ ಸಂಭ್ರಮ-50 ‘ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ’ ಎಂಬ ಘೋಷವಾಕ್ಯದಡಿ ಸೆ.24 ಮತ್ತು 25 ರಂದು ಕಾರ್ಯಕ್ರಮ ನಡೆಯಲಿದೆ. ಕೊಡಗು ಹಾಗೂ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿರುವ ಆರು ಅಕಾಡೆಮಿಗಳಾದ ಕೊಡವ, ಅರೆಭಾಷೆ, ತುಳು, ಕೊಂಕಣಿ, ಬ್ಯಾರಿ ಹಾಗೂ ಯಕ್ಷಗಾನ ಅಕಾಡೆಮಿಗಳ ಸಹಭಾಗಿತ್ವದಲ್ಲಿ ಮಂಗಳೂರಿನಲ್ಲಿ ಬಹುಸಂಸ್ಕೃತಿಯ ಕಾರ್ಯಕ್ರಮ ನಡೆಯಲಿದೆ. ಅಲ್ಲಿ ಆರು ಅಕಾಡೆಮಿಗಳಿಂದ ಸಾಂಸ್ಕೃತಿಕ ಪ್ರದರ್ಶನ, ವಿಚಾರಗೋಷ್ಠಿ, ಚಿತ್ರಕಲಾ ಸ್ಪರ್ಧೆ, ಭಾಷಣಸ್ಪರ್ಧೆ, ಕಿರುಚಿತ್ರ ಸ್ಪರ್ಧೆ, ಸಮೂಹಗಾನ ಸೇರಿದಂತೆ ಹತ್ತಾರು ಬಗೆಯ ವೈವಿಧ್ಯಮಯ ಕಾರ್ಯಕ್ರಮಗಳು ನಡೆಯಲಿದ್ದು, ರಾಜ್ಯದ ಮುಖ್ಯಮಂತ್ರಿಗಳು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರು, ರಾಜ್ಯ ವಿಧಾನ ಸಭೆಯ ಅಧ್ಯಕ್ಷರು(ಸ್ಪೀಕರ್), ಮೂರು ಜಿಲ್ಲೆಯ ಶಾಸಕರು, ಸಂಸದರು, ಜಿಲ್ಲಾಧಿಕಾರಿಗಳು, ಇಲಾಖಾಧಿಕಾರಿಗಳು, ಗಣ್ಯರು…
ಮಡಿಕೇರಿ ಆ.29 NEWS DESK : ವಿರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ, ಮಂಗಳೂರು ವಿಶ್ವವಿದ್ಯಾಲಯದ ಆರನೇ ಸೆಮಿಸ್ಟರ್ ಬಿ.ಎ, ಬಿ.ಕಾಂ ಮತ್ತು ಬಿ.ಬಿ.ಎ ಫಲಿತಾಂಶಗಳು ಪ್ರಕಟವಾಗಿದೆ. ಕಲಾ ವಿಭಾಗದಲ್ಲಿ ಶೇ.90, ವಾಣಿಜ್ಯ ವಿಭಾಗದಲ್ಲಿ ಶೇ.90 ಮತ್ತು ನಿರ್ವಹಣಾ ಶಾಸ್ತ್ರದಲ್ಲಿ ಶೇ. 80 ವಿದ್ಯಾರ್ಥಿಗಳು ಉತೀರ್ಣರಾಗಿದ್ದಾರೆ. ಕಲಾವಿಭಾಗದಲ್ಲಿ (ಹೆಚ್.ಇ) ಕುಮಾರಿ, ಪಿ.ಎ.ಅಯಿಷ ಶೇ.95.22 ಅಂಕ, ಕಲಾವಿಭಾಗದಲ್ಲಿ(ಪಿ.ಕೆ) ಕುಮಾರ ಹೆಚ್.ಎ.ಅಜಿತ್ ಶೇ.88, ವಾಣಿಜ್ಯ ಶಾಸ್ತ್ರ ವಿಭಾಗದಲ್ಲಿ ಕುಮಾರಿ ಬಿ.ಜಿ.ಲಷ್ಮೀತ ಶೇ. 92.92 ಮತ್ತು ನಿರ್ವಹಣಾಶಾಸ್ತ್ರ ವಿಭಾಗದಲ್ಲಿ ಎಸ್.ಡಿ.ವೆನಿಲ್ಲ ಶೇ.80.61 ಅಂಕಗಳನ್ನು ಪಡೆದಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಡಾ.ದಯಾನಂದ.ಕೆ.ಸಿ ಪ್ರಕಟಣೆಯಲ್ಲಿ ತಿಳಿಸಿರುವರು.
ಮಡಿಕೇರಿ ಆ.29 NEWS DESK : ಅಭಿವೃದ್ಧಿ ಹಾಗೂ ಆಧುನೀಕರಣವನ್ನಷ್ಟೆ ಕೇಂದ್ರವಾಗಿಸಿಕೊಂಡು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಪ್ರಕೃತಿಯನ್ನು ವಿವೇಚನಾರಹಿತವಾಗಿ ಬಳಸಿಕೊಳ್ಳುತ್ತಿರುವುದೇ ಪ್ರಾಕೃತಿಕ ವಿಕೋಪಗಳಿಗೆ ಕಾರಣವಾಗಿದೆ. ಮನು ಕುಲ ಉಳಿಯಬೇಕಾದರೆ ಪಶ್ಚಿಮಘಟ್ಟ ಸಾಲಿನ ಉಳಿವಿಗೆ ಅಗತ್ಯ ಕ್ರಮ ಕೈಗೊಳ್ಳಬೇಕಾಗಿದೆ ಎಂದು ಸಿಪಿಐ(ಎಂಎಲ್)ನ ಅಖಿಲ ಭಾರತ ಪ್ರಧಾನ ಕಾರ್ಯದರ್ಶಿ ಪ್ರದೀಪ್ ಸಿಂಹ ಠಾಕೂರ್ ಆಗ್ರಹಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನೆರೆಯ ಕೇರಳ ರಾಜ್ಯದ ವಯನಾಡಿನಲ್ಲಿ ನಡೆದ ಪ್ರಾಕೃತಿಕ ವಿಕೋಪದಿಂದ ನೂರಾರು ಮಂದಿಯನ್ನು ನಾವು ಕಳೆದುಕೊಂಡಿದ್ದು, ಇದಕ್ಕೆ ಪಕ್ಷ ಸಹಾನುಭೂತಿಯನ್ನು ಹೊಂದಿದೆ. ಇದೇ ಸಂದರ್ಭ ಇಂತಹ ಘಟನೆಗಳಿಗೆ ಸರ್ಕಾರಗಳ ವಿವೇಚನಾ ರಹಿತ ನಿಲುವುಗಳೇ ಕಾರಣ ಎಂದರು. ಕೊಡಗು ಜಿಲ್ಲೆ ಕೂಡ ಪಶ್ಚಿಮಘಟ್ಟಗಳ ಸಾಲಿನಲ್ಲೆ ಬರುತ್ತಿದ್ದು, ಇಲ್ಲಿನ ಪರಿಸರವನ್ನು ಕಾಯ್ದುಕೊಳ್ಳಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳುವ ಅಗತ್ಯವಿದೆ. ಈ ನಿಟ್ಟಿನಲ್ಲಿ ಸರ್ಕಾರ ಚಿಂತನೆ ಹರಿಸಬೇಕು ಎಂದು ತಿಳಿಸಿದರು. ::: ಅಸ್ಥಿರಗೊಳಿಸವ ಪ್ರಯತ್ನ ::: ಪ್ರಜಾಪ್ರಭುತ್ವ ವ್ಯವಸ್ಥೆಯಡಿ ಜನರಿಂದ ಆಯ್ಕೆಯಾದ ಕರ್ನಾಟಕ ರಾಜ್ಯದ ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸಲು…
ಮಡಿಕೇರಿ ಆ.29 NEWS DESK : ಕೈಲ್ ಪೊಳ್ದ್ ಹಬ್ಬದ ಆಚರಣೆಯ ಅಂಗವಾಗಿ ಚೆಟ್ಟಳ್ಳಿಯ ಶ್ರೀಮಂಗಲ ಭಗವತಿ ದೇವಾಲಯದಲ್ಲಿ ಕೈಲ್ ಪೊಳ್ದ್ ಧಾರೆ ಪೂಜೆ ನೆರವೇರಿತು. ಪ್ರತೀ ವರ್ಷದಂತೆ ಈ ಬಾರಿಯೂ ಗ್ರಾಮಸ್ಥರ ಸಮ್ಮುಖದಲ್ಲಿ ಶ್ರೀ ಭಗವತಿ ದೇವಿ, ಕ್ಷೇತ್ರಪಾಲಕ, ನಾಗ, ಗಣಪತಿಗೆ ಪೂಜೆ ಸಲ್ಲಿಸಿ, ಮುಂದಿನ ದಿನಗಳಲ್ಲಿಯೂ ಒಳಿತನ್ನು ಮಾಡಲೆಂದು ಊರಿನ ಹಿರಿಯರಾದ ಬಟ್ಟೀರ ಕಾವೇರಪ್ಪನ ಪ್ರಾರ್ಥಿಸಿದರು. ಮಹಾ ಮಂಗಳಾರತಿಯ ನಂತರ ಪ್ರಸಾದವಿತರಣೆ ಹಾಗೂ ಅನ್ನಸಂತರ್ಪಣೆ ನೆರವೇರಿತು.
ಕುಶಾಲನಗರ, ಆ.29 NEWS DESK : ಶಾಲಾ ಶಿಕ್ಷಣ ಇಲಾಖೆ, ಸೋಮವಾರಪೇಟೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ಕುಶಾಲನಗರ ಫಾತಿಮ ಪ್ರೌಢಶಾಲೆಯ ಸಂಯುಕ್ತಾಶ್ರಯದಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ ಹಾಗೂ ಕುಶಾಲನಗರ “ಬಿ” ವಲಯಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟದ ಉದ್ಘಾಟನಾ ಸಮಾರಂಭ ನಡೆಯಿತು. ಕುಶಾಲನಗರ ಫಾತಿಮ ಪ್ರೌಢಶಾಲಾ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲೊಂಡು ಮಾತನಾಡಿದ ರಾಷ್ಟ್ರೀಯ ಕ್ರೀಡಾ ದಿನಾಚರಣೆಯ ಮಹತ್ವ ಕುರಿತು ಮಾತನಾಡಿದ ಸರ್ಕಾರಿ ಜೂನಿಯರ್ ಕಾಲೇಜಿನ ದೈಹಿಕ ಶಿಕ್ಷಣ ಶಿಕ್ಷಕ ಡಾ.ಸದಾಶಿವಯ್ಯ ಎಸ್.ಪಲ್ಲೇದ್ , ಪ್ರತಿ ವರ್ಷ ಆ.29 ರಂದು, ಹಾಕಿ ದಂತಕಥೆ ಮೇಜರ್ ಧ್ಯಾನ್ ಚಂದ್ ಅವರ ಜನ್ಮದಿನದ ನೆನಪಿಗಾಗಿ ಭಾರತವು ರಾಷ್ಟ್ರೀಯ ಕ್ರೀಡಾ ದಿನವನ್ನು ಆಚರಿಸುತ್ತದೆ. ಈ ದಿನವನ್ನು ದೇಶದ ಕ್ರೀಡಾ ಸಾಧಕರು ಮತ್ತು ಚಾಂಪಿಯನ್ಗಳಿಗೆ ಅವರ ಕೊಡುಗೆ ಮತ್ತು ರಾಷ್ಟ್ರಕ್ಕೆ ಹೆಮ್ಮೆ ತರುವ ನಿಟ್ಟಿನಲ್ಲಿ ಸಮರ್ಪಿಸಲಾಗಿದೆ. ಇದು ಶಿಸ್ತು, ಪರಿಶ್ರಮ, ಕ್ರೀಡಾ ಮನೋಭಾವ ಮತ್ತು ತಂಡದ ಕೆಲಸ ಸೇರಿದಂತೆ ಕ್ರೀಡೆಯ ಮೌಲ್ಯಗಳ ಬಗ್ಗೆ ಅರಿವು…






