ಲೇಖಕ: admin

ಮಡಿಕೇರಿ ಆ.29 NEWS DESK : ಜನರಿಂದ ಬಹುಮತ ಪಡೆದು ಆಯ್ಕೆಯಾದ ಚುನಾಯಿತ ಕರ್ನಾಟಕ ರಾಜ್ಯ ಸರ್ಕಾರವನ್ನು ರಾಜ್ಯಪಾಲರ ಮೂಲಕ ಅಸ್ಥಿರಗೊಳಿಸಲು ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ಆರೋಪಿಸಿ ಭಾರತ ಕಮ್ಯೂನಿಸ್ಟ್ ಪಕ್ಷ ನಗರದಲ್ಲಿ ಪ್ರತಿಭಟನೆ ನಡೆಸಿತು. ನಗರದ ಜನರಲ್ ತಿಮ್ಮಯ್ಯ ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಸಿಪಿಐ ಪ್ರಮುಖರು ರಾಜ್ಯಪಾಲರ ಹುದ್ದೆಯನ್ನು ರದ್ದುಗೊಳಿಸಬೇಕೆಂದು ಒತ್ತಾಯಿಸಿದರು. ಪ್ರತಿಭಟನೆಯ ನೇತೃತ್ವ ವಹಿಸಿ ಮಾತನಾಡಿದ ಸಿಪಿಐ ಉಪ ಕಾರ್ಯದರ್ಶಿ ಹೆಚ್.ಎಂ.ಸೋಮಪ್ಪ ಅವರು, ರಾಜ್ಯಪಾಲರ ಹುದ್ದೆ ಭಾರತದ ಒಕ್ಕೂಟ ವ್ಯವಸ್ಥೆಯನ್ನು ಆಸ್ಥಿರಗೊಳಿಸಲು ರಾಜಕೀಯವಾಗಿ ದುರ್ಬಳಕೆಯಾಗುತ್ತಿದೆ. ರಾಜ್ಯದ ಈ ಹಿಂದಿನ ಹಲವು ಭಷ್ಟಾಚಾರ ಪ್ರಕರಣಗಳ ಬಗ್ಗೆ ರಾಜ್ಯಪಾಲರಿಗೆ ದೂರು ಸಲ್ಲಿಸಿ ತನಿಖೆಗೆ ಅನುಮತಿ ನೀಡುವಂತೆ ಕೋರಿದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿಚಾರದಲ್ಲಿ ಒಬ್ಬ ವ್ಯಕ್ತಿ ನೀಡಿದ ದೂರನ್ನಾಧರಿಸಿ ಪ್ರಾಸಿಕ್ಯೂಷನ್ ಅನುಮತಿ ನೀಡಿರುವುದನ್ನು ಗಮನಿಸಿದರೆ ರಾಜ್ಯಪಾಲರ ನಿರ್ಧಾರ ರಾಜಕೀಯ ಪ್ರೇರಿತವಾಗಿದೆ ಎನ್ನುವುದು ಸ್ಪಷ್ಟವಾಗುತ್ತದೆ ಎಂದು ಆರೋಪಿಸಿದರು. ಮೂಡ…

Read More

ಮಡಿಕೇರಿ NEWS DESK ಆ.29 : ಬಿರಿಯಾನಿ ಪ್ರಿಯರ ಅಚ್ಚುಮೆಚ್ಚಿನ “ಮಾವಳ್ಳಿ ಬಿರಿಯಾನಿ TASTE OF 1952″ ರ ಮತ್ತೊಂದು ಶಾಖೆ ಮಂಜಿನ ನಗರಿ ಮಡಿಕೇರಿಯಲ್ಲಿ ಆ.30ರಂದು ಬೆಳಿಗ್ಗೆ 10 ಗಂಟೆಗೆ ಉದ್ಘಾಟನೆಗೊಳ್ಳಲಿದೆ. ಅದ್ದೂರಿ ಪ್ರಾರಂಭೋತ್ಸವದಲ್ಲಿ ಮಡಿಕೇರಿ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕ ಡಾ.ಮಂಥರ್ ಗೌಡ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ಪ್ರತಿದಿನ ಬಿಸಿಬಿಸಿ “ಮಾವಳ್ಳಿ ಬಿರಿಯಾನಿ” ಯ ರುಚಿ ಸವಿಯಲು ಭೇಟಿ ನೀಡಿ “ಮಾವಳ್ಳಿ ಬಿರಿಯಾನಿ TASTE OF 1952″ ದಿ ಕೂರ್ಗ್ ಸೆಂಟರ್, ಬ್ಲಾಕ್ ನಂ.22, ಹಳೆ ಖಾಸಗಿ ಬಸ್ ನಿಲ್ದಾಣದ ಬಳಿ, ಮಡಿಕೇರಿ.

Read More

ಮಡಿಕೇರಿ ಆ.29 NEWS DESK : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು 2024-25ನೇ ಸಾಲಿನಲ್ಲಿ ಭಾರತ ಸರ್ಕಾರದಿಂದ ಮಾನ್ಯತೆ ಪಡೆದ ಅಧಿಕೃತ ರಾಷ್ಟ್ರೀಯ ಕ್ರೀಡಾ ಸಂಸ್ಥೆಗಳು ಆಯೋಜಿಸುವ ರಾಷ್ಟ್ರಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ಪದಕ ಪಡೆದ ಮತ್ತು ಅಂತರ್‍ರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳಿಗೆ ಭಾರತ ಸರ್ಕಾರದಿಂದ ನಿಯೋಜಿಸಲ್ಪಟ್ಟ ತಂಡದಲ್ಲಿ ಭಾಗವಹಿಸಿ ಉತ್ತಮ ಸಾಧನೆ ಮಾಡಿದ ರಾಜ್ಯದ ಕ್ರೀಡಾಪಟುಗಳ ಶೈಕ್ಷಣಿಕ ಶುಲ್ಕವನ್ನು ಮರು ಪಾವತಿಸುವ ಯೋಜನೆಯನ್ನು ಅನುಷ್ಠಾನಗೊಳಿಸಲು ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. 2024-25ನೇ ಸಾಲಿನ ಶೈಕ್ಷಣಿಕ ಶುಲ್ಕ ಮರುಪಾವತಿಗಾಗಿ ಆಸಕ್ತ ಕ್ರೀಡಾಪಟುಗಳು ಅರ್ಜಿ ನಮೂನೆಗಳನ್ನು ಸಹಾಯಕ ನಿರ್ದೇಶಕರ ಕಚೇರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣ, ಮಡಿಕೇರಿಯಲ್ಲಿ ಪಡೆದು ಸೆ.20 ರೊಳಗೆ ಕಚೇರಿಗೆ ಸಲ್ಲಿಸುವುದು. ಹೆಚ್ಚಿನ ಮಾಹಿತಿಗೆ ದೂ.ಸಂ. 08272-220986 ಮತ್ತು ತರಬೇತುದಾರರು 9480032712 ನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ. 

Read More

ವಿರಾಜಪೇಟೆ ಆ.29 NEWS DESK : ವಿರಾಜಪೇಟೆ  ಸರ್ಕಾರಿ ಪದವಿ ಕಾಲೇಜಿನ ಆಂತರಿಕ ಗುಣಮಟ್ಟ ಭರವಸೆಯ ಕೋಶ, ಅರ್ಥಶಾಸ್ತ್ರ ವಿಭಾಗ ಹಾಗೂ ವಿವೇಕ ಬಳಗದ ಸಂಯುಕ್ತ ಆಶ್ರಯದಲ್ಲಿ “ಪುಣ್ಯ ಭೂಮಿ ಭಾರತದ ಮಹಿಮೆ” ಎಂಬ ವಿಚಾರದ ಕುರಿತು ಉಪನ್ಯಾಸ ಕಾರ್ಯಕ್ರಮ ನಡೆಯಿತು.  ಉಡುಪಿ ಡಿವೈನ್ ಪಾರ್ಕ್ ನ ಡಿ.ಎಸ್.ಯಶವಂತ್ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಭವ್ಯ ಭಾರತದ ಮಹಿಮೆಯನ್ನು, ಭಾರತದ ಸಂಸ್ಕೃತಿಯನ್ನು ವಿಶ್ವ ಮಟ್ಟಕ್ಕೆ ಮುಟ್ಟಿಸಿದ ಸ್ವಾಮಿ ವಿವೇಕಾನಂದರ ದಿವ್ಯ ಆದರ್ಶಗಳನ್ನು ವಿದ್ಯಾರ್ಥಿಗಳಿಗೆ ವಿವರಿಸಿದರು. ಪ್ರತಿಯೊಬ್ಬರು ಭಾರತದ ಮಹಿಮೆಯನ್ನು ಗೌರವಿಸಬೇಕು. ಭಾರತೀಯ ಆಚಾರ ವಿಚಾರ, ಸಂಸ್ಕೃತಿಯನ್ನು ಪಾಲಿಸಬೇಕು ಎಂದು ಹೇಳಿದರು. ಕಾಲೇಜಿನ ಐಕ್ಯೂಎಸಿ ಸಂಚಾಲಕರಾದ ಡಾ.ಬಸವರಾಜು ಮಾತನಾಡಿ, ನಾವೆಲ್ಲರೂ ಭಾರತೀಯರು. ನಮ್ಮಲ್ಲಿ ಯಾವುದೇ ಜಾತಿ, ಮತ, ಪಂಥ, ಭಾಷೆಯ ಆಧಾರದ ಮೇಲೆ ಭಿನ್ನತೆ ಇರಬಾರದು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಕಾಲೇಜಿನ ಪ್ರಾಂಶುಪಾಲ ಡಾ. ಕೆ.ಸಿ.ದಯಾನಂದ ಮಾತನಾಡಿ, ಪ್ರತಿಯೊಬ್ಬ ವಿದ್ಯಾರ್ಥಿಗೂ ದೇಶದ ಮೇಲೆ ಪ್ರೀತಿ ಇರಬೇಕು. ನಮ್ಮಲ್ಲಿ ಯಾವುದೇ ಭೇದ ಭಾವಗಳು ಇರಬಾರದು.…

Read More

ಮಡಿಕೇರಿ ಆ.29 NEWS DESK : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಕ್ರೀಡಾ ಕ್ಷೇತ್ರದಲ್ಲಿ ಅಸಾಧರಣ ಪ್ರತಿಭೆಯನ್ನು ತೋರಿರುವ ರಾಜ್ಯದ ಕ್ರೀಡಾಪಟುಗಳಿಗೆ ಏಕಲವ್ಯ ಪ್ರಶಸ್ತಿಯನ್ನು ಹಾಗೂ ಜೀವಮಾನ ಸಾಧನೆ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ. ಅದರಂತೆ ಕ್ರೀಡಾ ಕ್ಷೇತ್ರದಲ್ಲಿ ಅಸಾಧಾರಣ ಪ್ರತಿಭೆ ತೋರಿರುವ ರಾಜ್ಯದ ಪ್ರತಿಭಾನ್ವಿತ ಅರ್ಹ ಕ್ರೀಡಾಪಟುಗಳು 2023ನೇ ಸಾಲಿನ ಏಕಲವ್ಯ ಪ್ರಶಸ್ತಿಗೆ ಅರ್ಜಿ ಸಲ್ಲಿಸಲು, ಅರ್ಜಿ ನಮೂನೆಗಳನ್ನು ಸಹಾಯಕ ನಿರ್ದೇಶಕರ ಕಚೇರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣ, ಮಡಿಕೇರಿ ಈ ಕಚೇರಿಯಿಂದ ಪಡೆದು ಸೆ.13 ರೊಳಗೆ ಅರ್ಜಿಯನ್ನು ಕಚೇರಿಗೆ ಸಲ್ಲಿಸುವುದು. ಹೆಚ್ಚಿನ ಮಾಹಿತಿಗೆ ದೂ.ಸಂ. 08272-220986 ನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ವಿ.ಟಿ.ವಿಸ್ಮಯಿ ತಿಳಿಸಿದ್ದಾರೆ.

Read More

ಮಡಿಕೇರಿ ಆ.29 NEWS DESK : ಭಾರತ ಸರ್ಕಾರದಿಂದ ನೀಡಲಾಗುವ ಪದ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹರು ರಾಷ್ಟ್ರೀಯ ಪುರಸ್ಕಾರ ಪೋರ್ಟಲ್ https://awards.gov.in ಇಲ್ಲಿಗೆ ಸೆಪ್ಟೆಂಬರ್, 15 ರೊಳಗೆ ಪದ್ಮ ಪ್ರಶಸ್ತಿಗಾಗಿ ಅರ್ಜಿ ಎಂದು ಅಗತ್ಯ ದಾಖಲಾತಿಗಳೊಂದಿಗೆ ಆನ್‍ಲೈನ್ ಮೂಲಕ ಸಲ್ಲಿಸುವಂತೆ ಭಾರತ ಸರ್ಕಾರದ ಜಂಟಿ ಕಾರ್ಯದರ್ಶಿ ಜಿ.ಪಾರ್ಥಸಾರಥಿ ತಿಳಿಸಿದ್ದಾರೆ.

Read More

ಮಡಿಕೇರಿ ಆ.29 NEWS DESK : ಇಂದು August  29 ರಾಷ್ಟ್ರೀಯ ಕ್ರೀಡಾ ದಿನ. ಕ್ರೀಡೆ ಇದು ಎರಡು ಅಕ್ಷರವಾದರೂ ಇದರ ಹಿನ್ನಲೆ ಮತ್ತು ಮಹತ್ವವಾದದ್ದು, ಪುರಾತನವಾದದ್ದು. ಕ್ರೀಡೆ ಮನುಷ್ಯನ ಹುಟ್ಟಿನೊಂದಿಗೆ ಹುಟ್ಟಿದೆ ಎನ್ನಬಹುದು. ಮೊದಲಿಗೆ ಸಮಯ ಕಳೆಯಲು ಕ್ರೀಡೆ ಒಂದು ಮಾರ್ಗವಾಗಿತ್ತು. ನಾಗರೀಕತೆ ಬೆಳೆದಂತೆ ಕ್ರೀಡೆ ಬಲಪ್ರದರ್ಶನದ ಒಂದು ವೇದಿಕೆಯಾಯಿತು. ಇದು ವಿವಿಧ ರೀತಿಯಲ್ಲಿ ಬೆಳವಣಿಗೆ ಕಂಡಿತು. ಪುರಾಣದಲ್ಲಿ ಕುಸ್ತಿ, ಪಗಡೆ ಆಟ, ಬಿಲ್ಲು ವಿದ್ಯೆ ಉಲ್ಲೇಖವಾಗಿದ್ದು ಅದು ಹಾಗೇ. ಮುಂದುವರಿದು ಇತಿಹಾಸದಲ್ಲೂ ರಾಜಾಮಹಾರಾಜರ ಕಾಲದಲ್ಲೂ ಉಲೇಖವಿದ್ದು, ಇಂದಿಗೂ ಕೆಲವು ಕ್ರೀಡೆಗಳನ್ನು ಆಡುವುದು ನಾವು ಕಾಣಬಹುದು. ಇಂದು ಕ್ರೀಡೆ ಮನುಕುಲದ ಒಂದು ಅವಿಭಾಜ್ಯ ಅಂಗವಾಗಿದೆ. ವಿಶ್ವದಲ್ಲಿ ಯುದ್ಧಭೂಮಿಯಲ್ಲಿ ಬಿಟ್ಟರೆ ಒಂದು ದೇಶದ ಬಲವನ್ನು ಅಳೆಯುವುದು ಕ್ರೀಡಾ ಮೈದಾನದಲ್ಲಿ. ಆರಂಭದಲ್ಲಿ ಓಲಂಪಿಕ್ಸ್ ಒಂದು ಪ್ರತಿಷ್ಠೆಯ ವೇದಿಕೆಯಾಗಿತ್ತು. ಅದಕ್ಕಾಗಿ ಯುರೋಪ್ ದೇಶಗಳಲ್ಲಿ ವರ್ಷಗಳಿಂದ ತಯಾರಿ ನಡೆಸುತ್ತಿದ್ದರು. ಆರಂಭದ ವರ್ಷಗಳಲ್ಲಿ ಪದಕ ಪಟ್ಟಿಯಲ್ಲಿ ಅಗ್ರಸ್ಥಾನ ಪಡೆಯಲು ಅಮೇರಿಕಾ ಸಂಸ್ಥಾನ ರಷ್ಯಾ ಒಕ್ಕೂಟ ನಡುವೆ ತೀವ್ರ…

Read More

ಮಡಿಕೇರಿ NEWS DESK ಆ.28 : ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳು ಯಶಸ್ವಿಯಾಗಿ ಅನುಷ್ಠಾನಗೊಳ್ಳುತ್ತಿದ್ದು, ಫಲಾನುಭವಿಗಳಿಗೆ ಎಲ್ಲಾ ಸೌಲಭ್ಯ ದೊರೆಯುತ್ತಿದೆ ಎಂದು ಮಡಿಕೇರಿ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಮಂದ್ರೀರ ಜಿ.ಮೋಹನ್ ದಾಸ್ ಅವರು ತೃಪ್ತಿ ವ್ಯಕ್ತಪಡಿಸಿದ್ದಾರೆ. ಮಡಿಕೇರಿ ತಾಲ್ಲೂಕು ಪಂಚಾಯಿತಿ ಸಾಮರ್ಥ್ಯ ಸೌಧ ಸಭಾಂಗಣದಲ್ಲಿ ನಡೆದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಸಮಿತಿಯ ಸದಸ್ಯರು ಐದು ಗ್ಯಾರಂಟಿ ಯೋಜನೆಗಳ ಸೌಲಭ್ಯ ಎಲ್ಲಾ ಅರ್ಹ ಫಲಾನುಭವಿಗಳಿಗೆ ತಲುಪುವಂತೆ ಕ್ರಮ ಕೈಗೊಳ್ಳಬೇಕೆಂದು ಸಲಹೆ ನೀಡಿದರು. ಸಂಬಂಧಪಟ್ಟ ಇಲಾಖೆಗಳಿಂದ ಅಗತ್ಯ ಮಾಹಿತಿಗಳನ್ನು ಪಡೆದುಕೊಳ್ಳಬೇಕು. ಹೋಬಳಿ ಮಟ್ಟದಲ್ಲಿ ಕುಂದುಕೊರತೆ ಸಭೆಯನ್ನು ನಡೆಸಿ ಗ್ರಾಮಸ್ಥರ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಎಲ್ಲಾ ಸದಸ್ಯರು ಮುಂದಾಗಬೇಕು. ಈ ಪ್ರಯತ್ನಕ್ಕೆ ಅಧಿಕಾರಿಗಳು ಸಂಪೂರ್ಣ ಸಹಕಾರ ನೀಡಬೇಕು. ಮುಂದಿನ ದಿನಗಳಲ್ಲಿ ನಡೆಯುವ ಜಿಲ್ಲಾ ಮಟ್ಟದ ಸಭೆಯಲ್ಲಿ ಸಮಸ್ಯೆಗಳ ಬಗ್ಗೆ ಪ್ರಸ್ತಾಪಿಸಿ ಪರಿಹಾರ ಪಡೆಯಲಾಗುವುದು ಎಂದು ತಿಳಿಸಿದರು. ::: ಗೃಹಲಕ್ಷ್ಮಿ ಯೋಜನೆ :::…

Read More

ಮಡಿಕೇರಿ ಆ.28 NEWS DESK : ಕುಶಾಲನಗರ 220/11 ಕೆವಿ, ಸುಂಟಿಕೊಪ್ಪ 66/11 ಕೆವಿ ಮತ್ತು ಸೋಮವಾರಪೇಟೆ 33/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ನಿರ್ವಹಣೆ ಕಾರ್ಯವನ್ನು ನಿರ್ವಹಿಸಬೇಕಿರುವುದರಿಂದ ಆ.29 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯ ವರೆಗೆ ವಿದ್ಯುತ್ ಉಪ ಕೇಂದ್ರಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು. ಆದ್ದರಿಂದ ಕುಶಾಲನಗರ ಪಟ್ಟಣ, ಹೆಬ್ಬಾಲೆ ಶಿರಂಗಾಲ, ಕೂಡಿಗೆ, ರಸಲ್‍ಪುರ, ಭುವನಗಿರಿ, ಬಲಮುರಿ, ಹಾರಂಗಿ, ನಂಜರಾಯಪಟ್ಟಣ, ಎಸ್.ಎಲ್.ಎನ್, ಸಿದ್ದಲಿಂಗಪುರ ಕಾವೇರಿ ನಿಸರ್ಗಧಾಮ, ಸೋಮೇಶ್ವರ, ಕೂಡುಮಂಗಳೂರು, ಸುಂಟಿಕೊಪ್ಪ, ಮಳ್ಳೂರು, ಹೊಸಕೋಟೆ, ನಾಕೂರು, ಮಾದಾಪುರ, ಸೂರ್ಲಬ್ಬಿ, ಹಟ್ಟಿಹೊಳೆ, ಕಾಂಡನಕೊಲ್ಲಿ, ಗರ್ವಾಲೆ, ಬಿಳಿಗೇರಿ, ಕಂಬಿಬಾಣೆ, ಕೊಡಗರಹಳ್ಳಿ, ಉಪ್ಪುತೋಡು, ಚೆಟ್ಟಳ್ಳಿ, ಶಿರಂಗಾಲ, ವಾಲ್ನೂರು ತ್ಯಾಗತ್ತೂರು, ಮತ್ತಿಕಾಡು, ಕೆದಕಲ್, ಸೋಮವಾರಪೇಟೆ ಟೌನ್, ಶಾಂತಳ್ಳಿ, ಗೌಡಳ್ಳಿ, ಅಬ್ಬೂರುಕಟ್ಟೆ, ಐಗೂರು, ಬಜೇಗುಂಡಿ, ದೊಡ್ಡಮಳ್ತೆ, ಮಸಗೋಡು, ಕರ್ಕಳ್ಳಿ, ಹಾನಗಲ್ಲು, ಬೇಳೂರು, ಯಡವಾರೆ, ಕುಂಬೂರು ಹಾಗೂ ಸುತ್ತಮುತ್ತಲವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಸೆಸ್ಕ್ ಇಇ ಅನಿತಾ ಬಾಯಿ  ಕೋರಿದ್ದಾರೆ.

Read More

ಮಡಿಕೇರಿ ಆ.28 NEWS DESK : ಸ್ವಂತ ಉದ್ಯಮ ಆರಂಭಿಸುವ ಮೂಲಕ ಜನತೆಯ ಆರ್ಥಿಕ ಸ್ಥಿತಿ ಸುಧಾರಣೆಯಾದರೆ ವಿಕಸಿತ ಭಾರತ ನಿರ್ಮಾಣ ಮಾಡಲು ಸಾಧ್ಯ ಎಂದು ಲೀಡ್ ಬ್ಯಾಂಕ್ ವ್ಯವಸ್ಥಾಪಕ ಪಿ.ಗಂಗಾಧರ್ ನಾಯ್ಕ್ ಅಭಿಪ್ರಾಯಪಟ್ಟರು. ನಗರದ ಗಾಂಧಿ ಭವನದಲ್ಲಿ ಖಾದಿ ಗ್ರಾಮೋದ್ಯೋಗ ಆಯೋಗ ಕರ್ನಾಟಕ ಸರ್ಕಾರ ಮತ್ತು ಮೈಸೂರಿನ ಸರ್ವೋದಯ ಚಾರಿಟೇಬಲ್ ಟ್ರಸ್ಟ್ ಸಹಯೋಗದಲ್ಲಿ ನಡೆದ ಪ್ರಧಾನಮಂತ್ರಿ ಉದ್ಯೋಗ ಸೃಜನ ಅರಿವು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸರ್ಕಾರದ ಹಲವು ಯೋಜನೆಗಳ ಸೌಲಭ್ಯ ಪಡೆಯಲು ಪ್ರತಿಯೊಬ್ಬರೂ ಮುಂದಾಗಬೇಕು. ಸ್ವ ಉದ್ಯೋಗ ಕೈಗೊಳ್ಳುವುದರಿಂದ ದೇಶಕ್ಕೂ ಲಾಭವಿದೆ, ದೇಶದ ಆರ್ಥಿಕ ಪ್ರಗತಿಗೂ ಕಾರಣವಾಗುತ್ತದೆ. ಬ್ಯಾಂಕ್ ಜೊತೆಗೆ ವ್ಯವಹಾರ ಮಾಡುವಾಗ ಆರ್ಥಿಕ ಶಿಸ್ತು ಮುಖ್ಯ, ಸ್ವ ಉದ್ಯೋಗ ಕೈಗೊಳ್ಳುವುದರಿಂದ ಉದ್ಯಮಿಯಾಗಿ ಬೆಳೆದು ಆರ್ಥಿಕವಾಗಿ ಪ್ರಗತಿ ಹೊಂದಬಹುದು. ಪ್ರತಿಯೊಬ್ಬರೂ ಸರ್ಕಾರದ ಸೌಲಭ್ಯವನ್ನು ಪಡೆದುಕೊಂಡು ಸ್ವಾವಲಂಬಿಗಳಾಗಬೇಕೆಂದು ಕರೆ ನೀಡಿದರು. ಖಾದಿ ಗ್ರಾಮೋದ್ಯೋಗ ಇಲಾಖೆಯ ಅಧಿಕಾರಿ ರಾಮಕೃಷ್ಣ ಆಚಾರ್ ಮಾತನಾಡಿ, ಸೇವಾ ವಲಯ ಮತ್ತು ಉತ್ಪಾದನಾ ವಲಯ ಎರಡು ವಿಧದಲ್ಲಿ…

Read More