ಸೋಮವಾರಪೇಟೆ ಆ.28 NEWS DESK : ಕೊಡಗು ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ 2024-25ನೇ ಸಾಲಿನ ತಾಲ್ಲೂಕು ಮತ್ತು ವಲಯ ಮಟ್ಟದ ಕ್ರೀಡಾಕೂಟವು ಆ.29 ರಂದು ಚೌಡ್ಲು ಗ್ರಾಮದಲ್ಲಿ ನಡೆಯಲಿದೆ. ಸಾಂದೀಪನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬೆಳಿಗ್ಗೆ 10 ಗಂಟೆಗೆ ನಡೆಯಲಿರುವ ಕಾರ್ಯಕ್ರಮವನ್ನು ಶಾಲಾ ಅಧ್ಯಕ್ಷ ಎಂ.ಟಿ.ದಾಮೋದರ್ ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಚೌಡ್ಲು ಗ್ರಾ.ಪಂ ಅಧ್ಯಕ್ಷೆ ಗೀತಾ ವಹಿಸಲಿದ್ದಾರೆ. ಉಪಾಧ್ಯಕ್ಷ ನತೀಶ್ ಮಂದಣ್ಣ, ಕ್ಷೇತ್ರ ಶಿಕ್ಷಣಾಧಿಕಾರಿ ಭಾಗ್ಯಮ್ಮ, ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿ ಮಂಜೇಶ್, ತಾಲ್ಲೂಕು ದೈಹಿಕ ಶಿಕ್ಷಣ ಅಧೀಕ್ಷಕರಾದ ಸುಕುಮಾರಿ, ಶಾಲಾ ಕಾರ್ಯದರ್ಶಿ ಲಿಖಿತ್ ದಾಮೋದರ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಟಿ.ಕೆ.ಬಸವರಾಜು, ವಲಯ ಕ್ರೀಡಾ ಅಧ್ಯಕ್ಷೆ ಯಶೋಧ, ನಗರ ಪತ್ರಕರ್ತರ ಸಂಘದ ಅಧ್ಯಕ್ಷ ಮಹೇಶ್ ಪಾಲ್ಗೊಳ್ಳಲಿದ್ದಾರೆ ಎಂದು ಶಾಲಾ ಮುಖ್ಯ ಶಿಕ್ಷಕಿ ರೇವತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಲೇಖಕ: admin
ಸೋಮವಾರಪೇಟೆ ಆ.28 NEWS DESK : ಸಮಾಜದಲ್ಲಿ ಸಂಘಟನೆಯೊಂದಿಗೆ ಸಾಮರಸ್ಯವು ಮುಖ್ಯವೆಂದು ಸೋಮವಾರಪೇಟೆ ವಿರಕ್ತ ಮಠದ ಶ್ರೀ ನಿಶ್ಚಲ ನಿರಂಜನ ದೇಶಿಕೇಂದ್ರ ಸ್ವಾಮೀಜಿ ಹೇಳಿದರು. ಸೋಮವಾರಪೇಟೆ ವಿರಕ್ತ ಮಠದ ಆವರಣದಲ್ಲಿ ಏರ್ಪಡಿಸಲಾಗಿದ್ದ ಸೋಮವಾರಪೇಟೆ ವೀರಶೈವ ಲಿಂಗಾಯತ ಸಮಾಜದ ವಾರ್ಷಿಕ ಮಹಾಸಭೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದ ಸಾನಿಧ್ಯ ವಹಿಸಿ ಮಾತನಾಡಿದರು. ವೀರಶೈವ ಲಿಂಗಾಯತ ಸಮಾಜಕ್ಕೆ ತನ್ನದೇ ಆದ ಇತಿಹಾಸವಿದೆ. ಆಚಾರ ವಿಚಾರಗಳಿವೆ ಅವುಗಳನ್ನು ಉಳಿಸಿ ಬೆಳೆಸುವುದರೊಂದಿಗೆ ನಮ್ಮ ಮುಂದಿನ ಪೀಳಿಗೆಗೆ ತಿಳಿಸುವ ಕಾರ್ಯಾವಾಗಬೇಕಿದೆ ಎಂದರು. ಸಮಾಜ ಸಂಘಟಿವಾದರೆ ಬಲಿಷ್ಟವಾಗುತ್ತದೆ ಅದರಂತೆ ಸಾಮರಸ್ಯವಿದ್ದರೆ ಸೌಹಾರ್ಧತೆ ನೆಲೆಸುತ್ತದೆ. ನಾವೆಲ್ಲರೂ ಒಂದೇ ಎಂಬ ಭಾವನೆ ಮೂಡುತ್ತದೆ ಎಂದರು. ವೀರಶೈವ ಲಿಂಗಾಯತ ಸಮಾಜದ ಆಸ್ತಿಪಾಸ್ತಿ ರಕ್ಷಣೆ, ಬಸವೇಶ್ವರ ಕಲ್ಯಾಣ ಮಂಟಪ ಹಾಗೂ ವಿರಕ್ತ ಮಠದ ಬಗ್ಗೆ ಮಹಾಸಭೆಯಲ್ಲಿ ಗಂಭೀರ ಚರ್ಚೆ ನಡೆಯಿತು. ಸಮಾಜದ ಯಜಮಾನ ಶಿವಕುಮಾರ್ ಮಹಾಸಭೆಯ ಅಧ್ಯಕ್ಷತೆ ವಹಿಸಿದ್ದರು. ಶೆಟ್ರು ಮೃತ್ಯುಂಜಯ, ಕಾರ್ಯದರ್ಶಿ ನಾಗರಾಜ್ ಹಾಗೂ ಸಮಿತಿಯ ನಿರ್ದೇಶಕರುಗಳು ಹಾಜರಿದ್ದರು. ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ ಪರೀಕ್ಷೆಯಲ್ಲಿ…
ಸೋಮವಾರಪೇಟೆ ಆ.28 NEWS DESK : ಶ್ರೀ ಕೃಷ್ಣ ಜನ್ಮಾಷ್ಟಮಿ ಮತ್ತು ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ವಿಶ್ವಮಾನವ ಕುವೆಂಪು ಪೂರ್ವ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಶ್ರೀ ಕೃಷ್ಣ ಹಾಗೂ ಸ್ವಾತಂತ್ರ್ಯ ಹೋರಾಟಗಾರರ ಛದ್ಮವೇಶ ಸ್ಪರ್ಧೆ ನಡೆಯಿತು. ಸ್ಪರ್ಧೆಯಲ್ಲಿ ಪುಟಾಣಿಗಳು ವಿವಿಧ ವೇಷಭೂಷಣಗಳನ್ನು ಧರಿಸಿ ಶ್ರೀಕೃಷ್ಣ ಹಾಗೂ ಸ್ವಾತಂತ್ರ್ಯ ಹೋರಾಟಗಾರರ ರೂಪದಲ್ಲಿ ಕಂಗೊಳಿಸಿದರು. ತೀರ್ಪುಗಾರರಾಗಿ ಶಿಕ್ಷಕಿ ಸುಮತಿ ಕಾರ್ಯ ನಿರ್ವಹಿಸಿದರು. ಕಾರ್ಯಕ್ರಮದಲ್ಲಿ ಆಡಳಿತ ಮಂಡಳಿ ನಿರ್ದೇಶಕಿ ಚಂದ್ರಿಕಾ ಕುಮಾರ್, ಮುಖ್ಯ ಶಿಕ್ಷಕಿ ಬೀನಾ, ಇಂದಿರಾ, ಅರುಣ ಸೇರಿದಂತೆ ಇತರರು ಇದ್ದರು.
ಸುಂಟಿಕೊಪ್ಪ ಆ.28 NEWS DESK : ಶಾಲಾ ಹಂತದಿಂದಲ್ಲೇ ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣಗಳನ್ನು ಮನವರಿಕೆಗೊಳಿಸುವ ನಿಟ್ಟಿನಲ್ಲಿ ಶಾಲಾ ಸಂಸತ್ ರಚನೆ ಮಾಡಲಾಗುತ್ತಿದೆ ಎಂದು ಸಂತ ಆಂಗ್ಲ ಮಾಧ್ಯಮ ಶಾಲೆಯ ವ್ಯವಸ್ಥಾಪಕ ರೇ.ಫಾ.ವಿಜಯ್ಕುಮಾರ್ ಹೇಳಿದರು. ಸಂತ ಮೇರಿ ಆಂಗ್ಲ ಮಾಧ್ಯಮ ವಿದ್ಯಾ ಸಂಸ್ಥೆಯ 2024-25ನೇ ಶೈಕ್ಷಣಿಕ ಸಾಲಿನ ಶಾಲಾ ಸಂಸತ್ಗೆ ಆಯ್ಕೆಗೊಂಡ ನಾಯಕ ಮತ್ತು ನಾಯಕಿಯರಿಗೆ ಪ್ರಮಾಣ ವಚನವನ್ನು ರೇ.ಫಾ.ವಿಜಯ್ಕುಮಾರ್ ಬೋಧಿಸಿ ಮಾತನಾಡಿದರು. ನಾಯಕತ್ವ ಮತ್ತು ಅದರ ಜವಾಬ್ದಾರಿಗಳನ್ನು ನಿರ್ವಹಿಸುವ ಮೂಲಕ ಇತರೆ ವಿದ್ಯಾರ್ಥಿಗಳಲ್ಲಿ ನಾಯಕತ್ವದ ಗುಣಗಳನ್ನು ಬೆಳೆಸಿಕೊಳ್ಳಲು ಪ್ರೇರಣೆಯಾಗಬೇಕೆಂದು ಅವರು ಕರೆ ನೀಡಿದರು. ಸೋಮವಾರಪೇಟೆ ಸಂತ ಜೋಸೆಫರ ವಿದ್ಯಾ ಸಂಸ್ಥೆಯ ವ್ಯವಸ್ಥಾಪಕ ರೇ.ಫಾ.ಅವಿನಾಶ್ ಮಾತನಾಡಿ, ನಾಯಕತ್ವಕ್ಕೆ ಇರಬೇಕಾದ ಮೌಲ್ಯತೆಗಳ ಪಂಚ ಸೂತ್ರಗಳ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿಯನ್ನು ನೀಡಿದರು. ಶಾಲಾ ಸಂಸತ್ತಿನ ನಾಯಕ ನಾಯಕಿಯರಿಗೆ ಬಿಲ್ಲೆಗಳನ್ನು ಹಾಕುವುದರ ಮೂಲಕ ಅವರ ನಾಯಕತ್ವಕ್ಕೆ ಮೆರುಗನ್ನು ನೀಡಲಾಯಿತು. ಶಾಲಾ ನಾಯಕರಾಗಿ ಭರತೇಶ್, ನಾಯಕಿಯಾಗಿ ಪಲ್ಲವಿ, ಪದವಿ ಪೂರ್ವ ಕಾಲೇಜಿನ ನಾಯಕನಾಗಿ ಡಿಂಪಲ್ ತಿಮ್ಮಯ್ಯ, ನಾಯಕಿಯಾಗಿ ಡಿ.ಡಿ.ಸೃಜನ್…
ಪೊನ್ನಂಪೇಟೆ ಆ.28 NEWS DESK : ಕೊಡವ ಮುಸ್ಲಿಂ ಅಸೋಸಿಯೇಷನ್ (ಕೆ.ಎಂ.ಎ.) ವತಿಯಿಂದ ಕೊಡವ ಮುಸ್ಲಿಂ ಶಿಕ್ಷಣ ನಿಧಿಯ (ಕೆ.ಎಂ.ಇ.ಎಫ್.) ಸಹಯೋಗದಲ್ಲಿ ಸಂಸ್ಥೆಯ ಸದಸ್ಯರ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿ ವರ್ಷದಂತೆ ಈ ಸಾಲಿನಲ್ಲೂ ಕೆ.ಎಂ.ಎ. ಪ್ರತಿಭಾ ಪುರಸ್ಕಾರ-2024 ಅನ್ನು ನೀಡಲು ಉದ್ದೇಶಿಸಲಾಗಿದ್ದು, ಈ ಕುರಿತು ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. 2023-24ನೇ ಶೈಕ್ಷಣಿಕ ಸಾಲಿನ ಎಸ್.ಎಸ್.ಎಲ್.ಸಿ. ಮತ್ತು ದ್ವಿತೀಯ ಪಿ.ಯು.ಸಿ. ಪರೀಕ್ಷೆಯಲ್ಲಿ ಅತೀ ಹೆಚ್ಚಿನ ಅಂಕ ಪಡೆದು ತೇರ್ಗಡೆ ಹೊಂದಿ ಇದೀಗ ವಿದ್ಯಾಭ್ಯಾಸ ಮುಂದುವರಿಸುತ್ತಿರುವ ಕೆ.ಎಂ.ಎ. ಸದಸ್ಯರ ಮಕ್ಕಳು “ಕೆ.ಎಂ.ಎ ಪ್ರತಿಭಾ ಪುರಸ್ಕಾರ-2024″ಕ್ಕಾಗಿ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಎರಡೂ ವಿಭಾಗದಲ್ಲೂ ಶೇ.75 ಕ್ಕಿಂತ ಮೇಲ್ಪಟ್ಟು ಅಂಕ ಪಡೆದ ವಿದ್ಯಾರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವ ಅರ್ಹ ವಿದ್ಯಾರ್ಥಿಗಳ ಪೋಷಕರ ಪೈಕಿ ಒಬ್ಬರು (ತಂದೆ ಅಥವಾ ತಾಯಿ) ಕೆ.ಎಂ.ಎ. ಸದಸ್ಯತ್ವ ಪಡೆದು ಕನಿಷ್ಠ ಒಂದು ವರ್ಷ ಪೂರ್ಣಗೊಂಡಿರಬೇಕು ಎಂಬುದು ಕಡ್ಡಾಯವಾಗಿರುತ್ತದೆ. ಎರಡೂ ವಿಭಾಗಗಳಲ್ಲಿ ಸಲ್ಲಿಕೆಯಾದ ಅರ್ಜಿಗಳ ಪೈಕಿ ಅತೀ ಹೆಚ್ಚು ಅಂಕ…
ವಿರಾಜಪೇಟೆ NEWS DESK ಆ.28 : ಹುಣಸೂರು-ಕುಟ್ಟ ಮುಖ್ಯ ರಸ್ತೆಯ ನಾಗರಹೊಳೆ ಪಿಕಾಕ್ ಲೈನ್ ಬಳಿಯಲ್ಲಿ ಹುಲಿ ಕಾಣಿಸಿಕೊಂಡಿದೆ. ನಾಗರಹೊಳೆ ವ್ಯಾಪ್ತಿಯಲ್ಲಿ ಹೆಚ್ಚಿನ ಸಂಖ್ಯೆಯ ಪ್ರವಾಸಿಗರಿದ್ದು, ವ್ಯಾಘ್ರ ದರ್ಶನದಿಂದ ಪುಳಕಿತಗೊಂಡರು. ಮಂಗಳವಾರ ಮಧ್ಯಾಹ್ನ ನಾಗರಹೊಳೆ ಮುಖ್ಯ ರಸ್ತೆಯ ಮೂಲಕ ರಾಜ ಗಾಂಭೀರ್ಯದಿಂದ ಹೆಜ್ಜೆ ಹಾಕಿದ ಹುಲಿಯ ಫೋಟೋ ಕ್ಲಿಕ್ಕಿಸಿ, ವಿಡಿಯೋ ಚಿತ್ರೀಕರಿಸಿ ಪ್ರವಾಸಿಗರು ಖುಷಿಪಟ್ಟರು. ಹುಲಿ ಅರಣ್ಯ ಪ್ರವೇಶಿಸಿದ ನಂತರ ಪ್ರವಾಸಿಗರು ಪ್ರಯಾಣ ಮುಂದುವರೆಸಿದರು. ಮಳೆ ಬಂದ ನಂತರ ಅರಣ್ಯ ಹಸಿರಾಗಿದೆ. ಅರಣ್ಯ ವ್ಯಾಪ್ತಿ ಮಾತ್ರವಲ್ಲದೆ ಅಕ್ಕಪಕ್ಕದ ರಸ್ತೆಗಳಲ್ಲೂ ವನ್ಯಜೀವಿಗಳ ಸಂಚಾರ ಹೆಚ್ಚಾಗಿದ್ದು, ಪ್ರವಾಸಿಗರನ್ನು ಆಕರ್ಷಿಸುತ್ತಿವೆ.
ಕುಶಾಲನಗರ ಆ.28 NEWS DESK : ಪರಂಪರಾಗತ ಸಂಸ್ಕೃತಿಯನ್ನು ಅರಿಯಲು ಜಾನಪದ ಮುಖ್ಯ ಸಾಧನವಾಗಿದೆ ಎಂದು ಕೊಡಗು ಜಿಲ್ಲಾ ಜಾನಪದ ಪರಿಷತ್ ಪ್ರಧಾನ ಕಾರ್ಯದರ್ಶಿ ಎಸ್.ಐ.ಮುನೀರ್ ಅಹಮದ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಕರ್ನಾಟಕ ಜಾನಪದ ಪರಿಷತ್ ಕುಶಾಲನಗರ ತಾಲ್ಲೂಕು ಘಟಕ ಹಾಗೂ ಕುಶಾಲನಗರ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಕುಶಾಲನಗರದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವಿಶ್ವ ಜಾನಪದ ದಿನಾಚರಣೆ ಅಂಗವಾಗಿ ನಡೆದ ‘ವಿದ್ಯಾರ್ಥಿಗಳತ್ತ ಜಾನಪದ’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಜೀವನದ ಹಾಸು ಹೊಕ್ಕಿನಲ್ಲಿ ಜಾನಪದ ಒಂದು ಸಾಮೂಹಿಕ ಸೃಷ್ಟಿಯಾಗಿದೆ. ಕಾಲಮಾನದ ಅಗತ್ಯಕ್ಕೆ ಅನುಗುಣವಾಗಿ ಮಾರ್ಪಾಡು ಹೊಂದುತ್ತಾ ತನ್ನ ಜೀವಂತಿಕೆಯನ್ನು ಜಾನಪದ ಕಾಪಾಡಿಕೊಳ್ಳುತ್ತಿದೆ. ಅನಕ್ಷರತೆಯ ನಡುವೆ ಬದುಕಿನಲ್ಲಿ ಕಂಡುಕೊಂಡ ಜೀವನವೇ ಜನಪದವಾಗಿದೆ ಎಂದ ಅವರು, ಜನಪರ ಸಾಹಿತ್ಯದಲ್ಲಿ ಅಡಕಗೊಂಡಿರುವ ಜನಪದ ನೀತಿಯ ತಿರುಳುಗಳನ್ನು ಅರಿತು ಜೀವನದಲ್ಲಿ ವಿದ್ಯಾರ್ಥಿಗಳು ಅಳವಡಿಸಿಕೊಳ್ಳಬೇಕಾಗಿದೆ ಎಂದು ಕರೆ ನೀಡಿದರು. ಮುಖ್ಯ ಅತಿಥಿಗಳಾಗಿ ಪಾಲ್ಗೊಂಡ ಉಪನ್ಯಾಸಕ ಹಾಗೂ ಜಾನಪದ ಕಲಾವಿದ ನಂಜುಂಡಸ್ವಾಮಿ ಮಾತನಾಡಿ, ಜನಪದೀಯ ವ್ಯವಸ್ಥೆ ಬಗ್ಗೆ ಸಮಗ್ರ…
ಸಿದ್ದಾಪುರ ಆ.28 NEWS DESK : ಬೆಂಗಳೂರಿನ ಪ್ರತಿಷ್ಠಿತ ಯು.ಎಸ್.ಟಿ ಸಂಸ್ಥೆ ವತಿಯಿಂದ ನೂರಕ್ಕೂ ಹೆಚ್ಚು ಗ್ರಾಮೀಣ ವಿದ್ಯಾರ್ಥಿಗಳಿಗೆ ಗುಣಮಟ್ಟದ ಉಚಿತ ಬ್ಯಾಗ್ ಮತ್ತು ಲೇಖನಿ ಸಾಮಾಗ್ರಿಗಳನ್ನು ವಿತರಣೆ ಮಾಡಲಾಗಿದೆ ಎಂದು ಬೆಂಗಳೂರಿನ ಬನವಾಸಿ ಕನ್ನಡಿಗರು ಕನ್ನಡಮಯ ಟ್ರಸ್ಟ್ ಸಂಸ್ಥಾಪಕ ಜೈ ಕಿರಣ್ ತಿಳಿಸಿದ್ದಾರೆ. ವಿರಾಜಪೇಟೆ ತಾಲೂಕಿನ ವಿ.ಬಾಡಗ ಸರ್ಕಾರಿ ಶಾಲಾ ಸಭಾಂಗಣದಲ್ಲಿ ನಡೆದ ಬ್ಯಾಗ್ ಮತ್ತು ಲೇಖನಿ ಸಾಮಾಗ್ರಿಗಳ ವಿತರಣಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಯುಎಸ್ಟಿ ಸಂಸ್ಥೆ ಕಳೆದ ಹಲವು ವರ್ಷಗಳಿಂದ ಸಂಕಷ್ಟದಲ್ಲಿರುವ ಕುಟುಂಬಗಳಿಗೆ ಕಿಟ್ ಹಾಗೂ ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಶೈಕ್ಷಣಿಕ ಸಾಮಾಗ್ರಿಗಳನ್ನು ರಾಜ್ಯಾದ್ಯಂತ ವಿತರಿಸುತ್ತಾ ಬಂದಿದೆ. ಕೊಡಗು ಜಿಲ್ಲೆಗೂ ಸಂಸ್ಥೆ ಕೊಡುಗೆಯನ್ನು ನೀಡುತ್ತಿದೆ. ಬನವಾಸಿ ಕನ್ನಡಿಗರ ಸಂಸ್ಥೆ ಮೂಲಕ ನಮ್ಮ ಕೊಡಗು ತಂಡದ ಸಹಕಾರದೊಂದಿಗೆ ಸಂಕಷ್ಟದಲ್ಲಿರುವವರು ಹಾಗೂ ವಿದ್ಯಾರ್ಥಿಗಳ ಶಿಕ್ಷಣಕ್ಕೆ ನೆರವು ನೀಡುವ ಪ್ರಯತ್ನ ಮಾಡಿದೆ ಎಂದರು. ಬನವಾಸಿ ಕನ್ನಡಿಗರು ಕನ್ನಡಮಯ ಟ್ರಸ್ಟ್ ನ ಪ್ರಮುಖರಾದ ಶಮಂತ್ ಹೊಸಹೂಳಲು ಮಾತನಾಡಿ ವಿರಾಜಪೇಟೆ ತಾಲೂಕಿನ ವಿ.ಬಾಡಗ, ಕಲ್ತೋಡು,…
ಮಡಿಕೇರಿ NEWS DESK ಆ.27 : ಕೇಶವ ಸ್ಮೃತಿ ಸಂವರ್ಧನ ಸಮಿತಿ ಮತ್ತು ಬಾಲ ಗೋಕುಲ ಮಡಿಕೇರಿ ಇವರ ವತಿಯಿಂದ ಮಡಿಕೇರಿಯ ಮಹದೇವಪೇಟೆಯಲ್ಲಿರುವ ಚೌಡೇಶ್ವರಿ ದೇವಾಲಯದ ಸಭಾಂಗಣದಲ್ಲಿ 25-08-2024ರ ಭಾನುವಾರದಂದು ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ “ಶ್ರೀ ಕೃಷ್ಣ, ರುಕ್ಮಣಿ, ರಾಧೆ, ದೇವಕಿ, ಯಶೋದೆ ಹಾಗೂ ವಸುದೇವರ” ಛದ್ಮವೇಷ ಸಮಾಗಮ ಕಾರ್ಯಕ್ರಮ ನಡೆಯಿತು. ಮುಖ್ಯ ಭಾಷಣಕಾರರಾಗಿ ಭಾಗವಹಿಸಿ ಮಾತನಾಡಿದ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮಂಗಳೂರು ವಿಭಾಗ ಸಹ ಸಂಪರ್ಕ ಪ್ರಮುಖರಾದ ಕುಟ್ಟಂಡ ಪ್ರಿನ್ಸ್ ಗಣಪತಿ “ನೈತಿಕ ವೌಲ್ಯ ಕುಸಿಯುತ್ತಿರುವ ಈ ಕಾಲಘಟ್ಟದಲ್ಲಿ ಸಾಮಾಜಿಕ ಅಧ:ಪತನ ಉಂಟಾಗುತ್ತಿದ್ದು, ಮಾನವೀಯ ವೌಲ್ಯ ಬೆಳೆಸುವ ಸಾಂಸ್ಕೃತಿಕ ಶಿಕ್ಷಣ, ಇದನ್ನು ಬೋಧಿಸುವ ವ್ಯವಸ್ಥೆಯೇ ಬಾಲಗೋಕುಲಗಳಾಗಿವೆ ಎಂದರು. ಹೆಜ್ಜೆ ಹೆಜ್ಜೆಗೂ ದೈವಿಕ ಚೈತನ್ಯದಿಂದ ಜೀವನವನ್ನು ನಡೆಸುವವರು. ಹಿರಿಯರು ಕೊಟ್ಟಿರುವ ಉತ್ತಮ ಸಂಪ್ರದಾಯ, ಜೀವನ ಪದ್ಧತಿಗಳು ಸ್ವಂತಕ್ಕೆ ಅಲ್ಲ. ಬದಲು ಲೋಕದ ಸಮಸ್ತ ಚರಾಚರಕ್ಕೆ ಸಮರ್ಪಿತ ಎಂದು ಅರಿತು, ಸಶಕ್ತ ಸಮಾಜದ ಮೂಲಾಧಾರವು ಪ್ರೀತಿ ಮತ್ತು ಸೇವೆಯಾಗಿದೆ ಎಂದರು.…
ಮಡಿಕೇರಿ NEWS DESK ಆ.27 : ಶತಮಾನೋತ್ಸವ ಸಂಭ್ರಮದಲ್ಲಿರುವ ಮೂರ್ನಾಡು ಸಹಕಾರ ಸ್ಪೋರ್ಟ್ಸ್ ಕ್ಲಬ್ನಿಂದ ಪ್ರಸಕ್ತ ಸಾಲಿನ ಸೆ.3 ರಂದು ಮೂರ್ನಾಡಿನಲ್ಲಿ ಕೈಲ್ ಪೊಳ್ದ್ ಹಬ್ಬದ ಆಟೋಟ ಸ್ಪರ್ಧೆಗಳು ನಡೆಯಲಿದೆಯೆಂದು ಕ್ಲಬ್ನ ಅಧ್ಯಕ್ಷರಾದ ಮುಂಡಂಡ ಪವಿ ಸೋಮಣ್ಣ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಅವರು 1924 ರಲ್ಲಿ ಕ್ರೀಡಾ ಚಟುವಟಿಕೆಗಳಿಗೆ ಒತ್ತು ನೀಡುವ ಪ್ರಮುಖ ಧ್ಯೇಯದೊಂದಿಗೆ ಸ್ಥಾಪನೆಯಾದ ‘ಮೂರ್ನಾಡು ಸಹಕಾರ ಸ್ಪೋರ್ಟ್ಸ್ ಕ್ಲಬ್’ ಇದೀಗ ತನ್ನ ನೂರನೇ ವರ್ಷದ ಕ್ರೀಡಾಕೂಟವನ್ನು ವಿಶೇಷವಾಗಿ ಆಯೋಜಿಸಲು ಉದ್ದೇಶಿಸಿ ಕಾರ್ಯಯೋಜನೆಗಳನ್ನು ರೂಪಿಸಿಕೊಂಡಿದೆ. ಇಡೀ ರಾಜ್ಯದಲ್ಲೆ ಕ್ರೀಡಾ ಚಟುವಟಿಕೆಗಳ ಉತ್ತೇಜನಕ್ಕಾಗಿ ಸ್ಥಾಪಿತವಾಗಿರುವ ಏಕೈಕ ಸಹಕಾರ ಸಂಘ ‘ಮೂರ್ನಾಡು ಸಹಕಾರ ಸ್ಪೋರ್ಟ್ಸ್ ಕ್ಲಬ್’ ಎಂದರು. ಕೈಲ್ ಮುಹೂರ್ತ ಕ್ರೀಡಾ ಕೂಟವನ್ನು ಸೆ.3 ರಂದು ಮಧ್ಯಾಹ್ನ 12.30 ಗಂಟೆಗೆ ಮೂರ್ನಾಡು ವಿದ್ಯಾಸಂಸ್ಥೆಯ ಬಾಚೆಟ್ಟಿರ ಲಾಲು ಮುದ್ದಯ್ಯ ಕ್ರೀಡಾಂಗಣದಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಕೆ.ಎಸ್. ಸುಂದರರಾಜ್ ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ ಅಪರ ಜಿಲ್ಲಾಧಿಕಾರಿ ಐಶ್ವರ್ಯ ಆರ್., ಕೆಡಿಸಿಸಿ ಬ್ಯಾಂಕ್…






