ಮಡಿಕೇರಿ NEWS DESK ಆ.27 : ಪ್ರತಿಯೊಬ್ಬ ವಿದ್ಯಾರ್ಥಿ ತಮ್ಮ ಜೀವನದಲ್ಲಿ ಉದಾತ್ತವಾದ ಗುರಿ ಹೊಂದುವುದು ಮುಖ್ಯ. ವಿದ್ಯಾಭ್ಯಾಸದೊಂದಿಗೆ ತಾನು ಮಾಡುವ ಉದ್ಯೋಗದ ಬಗ್ಗೆ ಅಭಿಮಾನವಿರಿಸಿಕೊಳ್ಳಬೇಕು ಎಂದು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ ಅವರು ತಿಳಿಸಿದ್ದಾರೆ. ನಾಡು ಕಂಡ ಧೀಮಂತ ರಾಜಕಾರಣಿ “ದಿ.ಎ.ಕೆ.ಸುಬ್ಬಯ್ಯ ಮತ್ತು ಪೊನ್ನಮ್ಮ ದತ್ತಿನಿಧಿ ಚಾರಿಟೇಬಲ್ ಟ್ರಸ್ಟ್” ವತಿಯಿಂದ ನಾಲ್ಕನೇ ವರ್ಷದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ವಿತರಣಾ ಸಮಾರಂಭ ಶಾಸಕರ ಗೃಹ ಕಚೇರಿ ಆವರಣದಲ್ಲಿ ನಡೆಯಿತು. ಎ.ಕೆ.ಸುಬ್ಬಯ್ಯ ಅವರ ಪುತ್ರರಾಗಿರುವ ಶಾಸಕ ಪೊನ್ನಣ್ಣ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಅನೇಕ ವಿದ್ಯಾರ್ಥಿಗಳು ತಮ್ಮ ಪೋಷಕರ ಅರ್ಥಿಕ ಸಂಕಷ್ಟ ಮತ್ತು ಅಸಹಾಯಕತೆಗಳಿಂದಾಗಿ ವಿದ್ಯಾಭ್ಯಾಸವನ್ನು ಮೊಟುಕುಗಳಿಸುತ್ತಾರೆ. ಈ ಹಿನ್ನೆಲೆಯಲ್ಲಿ ತಮ್ಮ ಪೋಷಕರ ಹೆಸರಿನಲ್ಲಿ ಕುಟುಂಬ ವರ್ಗದ ಸಹಕಾರದಿಂದ ದತ್ತಿ ನಿಧಿ ಸ್ಥಾಪಿಸಿ, ಬಡ ವಿದ್ಯಾರ್ಥಿಗಳು ಹಾಗೂ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣಗೊಂಡ ವಿದ್ಯಾರ್ಥಿನಿಯರನ್ನು ಗುರುತಿಸಿ ಪದವಿ ಮಟ್ಟದಲ್ಲಿ ಪ್ರೋತ್ಸಾಹ ನೀಡುತ್ತಾ ಬರಲಾಗಿದೆ. ಪದವಿ ಪಡೆದ ವಿದ್ಯಾರ್ಥಿಗಳು…
ಲೇಖಕ: admin
ಮಡಿಕೇರಿ NEWS DESK ಆ.27 : ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಶುಭ ಅವರು ಕೊಡಗು ಜಿಲ್ಲೆಯ ವಿವಿಧ ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ಇಂದಿನ ಮಕ್ಕಳೇ ನಾಳಿನ ಪ್ರಜೆಗಳಾಗಿದ್ದು, ಮಕ್ಕಳ ಆರೋಗ್ಯ ಕಡೆ ಹೆಚ್ಚಿನ ಗಮನಹರಿಸಬೇಕು. ದೇಶದ ಅಭಿವೃದ್ಧಿಯಲ್ಲಿ ಮಕ್ಕಳ ಆರೋಗ್ಯ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಅವರು ಹೇಳಿದ್ದಾರೆ. ಯಾವುದೇ ಮಗು ಅಪೌಷ್ಠಿಕತೆಯಿಂದ ಬಳಲಬಾರದು. ಆ ನಿಟ್ಟಿನಲ್ಲಿ ಪ್ರತಿದಿನ ಪೌಷ್ಠಿಕ ಆಹಾರವನ್ನು ನೀಡುವಂತಾಗಬೇಕು ಎಂದು ತಿಳಿಸಿದರು. ವಿವಿಧ ಅಂಗನವಾಡಿಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಕೆಲವು ಅಂಗನವಾಡಿ ಕೇಂದ್ರಗಳಲ್ಲಿ ತಡೆಗೋಡೆ ಇಲ್ಲದಿರುವುದು, ಸೂಕ್ತ ಕಿಟಕಿ ವ್ಯವಸ್ಥೆ ಇಲ್ಲದಿರುವುದು, ಮಕ್ಕಳಿಗೆ ಒಳಾಂಗಣ ಮತ್ತು ಹೊರಾಂಗಣ ಮೈದಾನದಲ್ಲಿ ಆಟವಾಡಲು ಸೂಕ್ತ ಸ್ಥಳದ ಅಭಾವ ಕಂಡುಬಂದಿದೆ ಎಂದು ಇದೇ ಸಂದರ್ಭದಲ್ಲಿ ತಿಳಿಸಿದ್ದಾರೆ. ಕೆಲವೊಂದು ಅಂಗನವಾಡಿ ಕೇಂದ್ರಗಳಲ್ಲಿ ಉತ್ತಮವಾಗಿ ಅಡುಗೆ ಕೋಣೆ ಇದ್ದು, ಶುಚಿತ್ವಕ್ಕೆ ಒತ್ತು ನೀಡುವುದು ಶ್ಲಾಘನೀಯವಾಗಿದೆ ಎಂದು ಶುಭ ಹೇಳಿದರು. ಅಂಗನವಾಡಿ ವ್ಯಾಪ್ತಿಯ ಗರ್ಭಿಣೀಯರು, ಬಾಣಂತಿಯರು, ಮಕ್ಕಳಿಗೆ ಸಮರ್ಪಕವಾಗಿ ಪೌಷ್ಠಿಕ…
ಸುಂಟಿಕೊಪ್ಪ NEWS DESK ಆ.27 : ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಹೋಟೆಲ್ ಮುಂಭಾಗದಲ್ಲಿ ನಿಲ್ಲಿಸಿದ್ದ 3 ದ್ವಿಚಕ್ರ ವಾಹನಗಳಿಗೆ ಡಿಕ್ಕಿ ಹೊಡೆದ ಘಟನೆ ಸುಂಟಿಕೊಪ್ಪ ಸಮೀಪ ಕೊಡಗರಹಳ್ಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಘಟನೆಯಿಂದ ಮೂವರು ಗಾಯಗೊಂಡಿದ್ದು, ಬೈಕ್ ಗಳಿಗೆ ಹಾನಿಯಾಗಿದೆ. ಮೈಸೂರು ಕಡೆಯಿಂದ ಮಡಿಕೇರಿಗೆ ಬರುತ್ತಿದ್ದ ವೈದ್ಯರೊಬ್ಬರಿಗೆ ಸೇರಿದ ಇನೋವ ಚಾಲಕನ ನಿಯಂತ್ರಣ ತಪ್ಪಿ ಏಕಾಏಕಿ ನಿಲ್ಲಿಸಿದ್ದ ದ್ವಿಚಕ್ರ ವಾಹನಗಳಿಗೆ ಡಿಕ್ಕಿ ಹೊಡೆದಿದೆ. ರಸ್ತೆ ಬದಿಯಲ್ಲಿ ನಿಂತಿದ್ದ ಮೂವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ. ಸುಂಟಿಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿರಾಜಪೇಟೆ NEWS DESK ಆ.27 : ಯು ಎಸ್ ಎ ಡ್ಯಾನ್ಸ್ ಸ್ಟುಡಿಯೋ ಅವರ ಅಪ್ಪು ಫಾರೆವರ್ ರಾಜ್ಯಮಟ್ಟದ ನೃತ್ಯ ಸ್ಪರ್ಧೆಯ ಆಶ್ರಯದಲ್ಲಿ ನಡೆದ ಸ್ಪರ್ಧಾ ಕಾರ್ಯಕ್ರಮದಲ್ಲಿ ವಿರಾಜಪೇಟೆಯ ತನ್ವಿ ದೇಚಮ್ಮ ಕೆ.ಸಿ ಅವರು ಸೋಲೊ ವಿಭಾಗದಲ್ಲಿ ದ್ವಿತೀಯ ಸ್ಥಾನ ಗಳಿಸಿದ್ದಾರೆ. ತನ್ವಿ ದೇಚಮ್ಮ ವಿರಾಜಪೇಟೆಯ ಕೋರಂಡ ಆಶಾ ಅವರ ಪುತ್ರಿಯಾಗಿದ್ದು, ಎಸ್ಎಂಎಸ್ ಅಕಾಡೆಮಿ ಆಫ್ ಸೆಂಟ್ರಲ್ ಎಜುಕೇಶನ್ ಅರಮೇರಿ ಶಾಲೆಯಲ್ಲಿ ಎಂಟನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಇವರು ಇಂಟೋಪೀಸ್ ಡಾನ್ಸ್ ಸ್ಟುಡಿಯೋ ನೃತ್ಯ ಶಾಲೆಯಲ್ಲಿ ನೃತ್ಯ ಅಭ್ಯಾಸ ಮಾಡುತ್ತಿದ್ದು, ನೃತ್ಯ ಸಂಯೋಜಕ ವಿಷ್ಣು ಅವರು ತರಬೇತಿ ನೀಡುತ್ತಿದ್ದಾರೆ.
ವಿರಾಜಪೇಟೆ NEWS DESK ಆ.27 : ಹಿರಿಯ ಪತ್ರಕರ್ತ ಮತ್ತು ಕಿತ್ತಳೆ ನಾಡು ಕನ್ನಡ ವಾರಪತ್ರಿಕೆಯ ಪ್ರಧಾನ ಸಂಪಾದಕರೂ ಆಗಿರುವ ಕೊಡವ ಮುಸ್ಲಿಂ ಅಸೋಸಿಯೇಷನ್ (ಕೆ.ಎಂ.ಎ.) ನ ಸ್ಥಾಪಕ ಅಧ್ಯಕ್ಷ ಕುವೇಂಡ ವೈ.ಹಂಝತುಲ್ಲಾ ಅವರು 2022ನೇ ಸಾಲಿನ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಗೌರವ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಯು.ಎಚ್.ಉಮರ್, ಕುವೇಂಡ ವೈ. ಹಂಝತುಲ್ಲಾ ಅವರು ಬ್ಯಾರಿ ಟೈಮ್ಸ್ ಮತ್ತು ಕಿತ್ತಳೆ ನಾಡು ಕನ್ನಡ ವಾರಪತ್ರಿಕೆಯ ಪ್ರಧಾನ ಸಂಪಾದಕರಾಗಿ ಕನ್ನಡ ಪತ್ರಿಕೋದ್ಯಮಕ್ಕೆ ಮತ್ತು ಬ್ಯಾರಿ ಸಾಹಿತ್ಯಕ್ಕೆ ಕಳೆದ ನಾಲ್ಕು ದಶಕಗಳಿಂದ ನೀಡಿದ ಕೊಡುಗೆಯನ್ನು ಪರಿಗಣಿಸಿ ಅಕಾಡೆಮಿಯ ಗೌರವ ಪ್ರಶಸ್ತಿಗೆ ಆಯ್ಕೆಗೊಳಿಸಲಾಗಿದೆ. ಚಿಂತನಾಶೀಲಾ ವ್ಯಕ್ತಿತ್ವ, ಸಾಮಾಜಿಕ ಮತ್ತು ಶೈಕ್ಷಣಿಕ ಕ್ಷೇತ್ರಗಳಲ್ಲಿ ಅವರ ರಚನಾತ್ಮಕ ಸಮಾಜಮುಖಿ ಕಾರ್ಯ ಚಟುವಟಿಕೆಗಳು, ಕನ್ನಡಪರ ಕಾಳಜಿ ಮತ್ತು ಅವರ ಸಂವೇದನಾಶೀಲತೆ ಮೊದಲಾದವುಗಳನ್ನು ಅಕಾಡೆಮಿಯ ಪ್ರಶಸ್ತಿ ಆಯ್ಕೆ ಸಮಿತಿ ಅಂಗೀಕರಿಸಿದ್ದು, ಈ ಎಲ್ಲಾ ಮಾನದಂಡದಲ್ಲಿ ಅಕಾಡೆಮಿಯ ಗೌರವ…
ವಿರಾಜಪೇಟೆ NEWS DESK ಆ.27 : ವಿರಾಜಪೇಟೆ ಕಾವೇರಿ ಪದವಿಪೂರ್ವ ಕಾಲೇಜು 2024-25ನೇ ಶೈಕ್ಷಣಿಕ ಸಾಲಿನ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಸಂಘ ಹಾಗೂ ರಾಷ್ಟ್ರೀಯ ಸೇವಾ ಯೋಜನೆ ಘಟಕದ ಉದ್ಘಾಟನಾ ಸಮಾರಂಭ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡ ಪೊನ್ನಂಪೇಟೆ ಕೊಡವ ಸಮಾಜದ ಅಧ್ಯಕ್ಷ ಕಾಳಿಮಾಡ ಮೋಟಯ್ಯ ಅವರು ಆಯ್ಕೆಯಾದ ಪದಾಧಿಕಾರಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ನಂತರ ಮಾತನಾಡಿದ ಅವರು ವಿದ್ಯಾರ್ಥಿಗಳು ನೈತಿಕ ಮೌಲ್ಯಗಳ ಜೊತೆಯಲ್ಲಿ ಮಾನವೀಯ ಗುಣಗಳನ್ನು ಮೈಗೂಡಿಸಿಕೊಳ್ಳಬೇಕು. ಯೋಗ, ಜ್ಞಾನ, ಏಕಾಗ್ರತೆಯ ಮೂಲಕ ಜೀವನದ ಗುರಿ ಸಾಧಿಸಬೇಕು. ಸಮಾಜಮುಖಿಗಳಾಗಿ ಸಮಾಜಸೇವೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಕರೆ ನೀಡಿದರು. ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜ್ ನ ಪ್ರಾಂಶುಪಾಲ ಎನ್.ಎಂ.ನಾಣಯ್ಯ ಅವರು ವಿದ್ಯಾರ್ಥಿಗಳು ಜೀವನದಲ್ಲಿ ನಾಯಕತ್ವ ಮತ್ತು ಸೇವಾ ಮನೋಭಾವನೆಯನ್ನು ಬೆಳೆಸಿಕೊಳ್ಳಬೇಕೆಂದು ಸಲಹೆ ನೀಡಿದರು. ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಸಂಘದ ಸಂಚಾಲಕಿ ಎಂ.ಪಿ.ದಮಯಂತಿ, ಪದವಿ ಕಾಲೇಜಿನ ಪ್ರಾಂಶುಪಾಲರಾದ ಬೆನಡಿಕ್ ಸಾಲ್ಡಾನ, ರಾಷ್ಟ್ರೀಯ ಸೇವಾ ಯೋಜನೆ ಘಟಕದ ಅಧಿಕಾರಿ ಪಮಿತ, ಉಪನ್ಯಾಸಕ ವೃಂದ ಹಾಗೂ ವಿದ್ಯಾರ್ಥಿಗಳು…
ಮಡಿಕೇರಿ NEWS DESK ಆ.27 : ಕರ್ನಾಟಕ ಜಾನಪದ ಪರಿಷತ್ ಕೊಡಗು ಜಿಲ್ಲಾ ಘಟಕ,ಕನ್ನಡ ಮತ್ತು ಸಂಸ್ಕೃತಿ ಇಲಾಖೆ ,ಮಡಿಕೇರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕನ್ನಡ ವಿಭಾಗ ಇವುಗಳ ಸಂಯುಕ್ತಾಶ್ರಯದಲ್ಲಿ ದಿನಾಂಕ 29-8-2024 ರಂದು ವಿಶ್ವ ಜಾನಪದ ದಿನಾಚಣೆ ಅಂಗವಾಗಿ ಜಾನಪದ ವೈವಿಧ್ಯ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.ನಗರದ ಜೂನಿಯರ್ ಕಾಲೇಜಿನ ಆವರಣದಲ್ಲಿರುವ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಸಭಾಂಗಣದಲ್ಲಿ ಬೆಳಿಗ್ಗೆ 10.30 ಗಂಟೆಗೆ ನಡೆಯುವ ಕಾರ್ಯಕ್ರಮವನ್ನು ಕೊಡಗು ಜಿಲ್ಲಾಧಿಕಾರಿ ವೆಂಕಟ್ ರಾಜಾ ಉದ್ಘಾಟಿಸಲಿದ್ದಾರೆ.ಅಧ್ಯಕ್ಷತೆಯನ್ನು ಜಾನಪದ ಪರಿಷತ್ನ ಕೊಡಗು ಘಟಕದ ಅಧ್ಯಕ್ಷರಾದ ಬಿ.ಜಿ.ಅನಂತಶಯನ ವಹಿಸಲಿದ್ದು,ಮುಖ್ಯ ಅತಿಥಿಗಳಾಗಿ ಮಡಿಕೇರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಪಿ.ಕೆ.ವೆಂಕಟೇಶ್ ಪ್ರಸನ್ನ ಪಾಲ್ಗೊಳ್ಳಲಿದ್ದಾರೆ.ಅತಿಥಿಗಳಾಗಿ ಜಾನಪದ ಪರಿಷತ್ ಕೊಡಗು ಘಟಕದ ಪ್ರಧಾನ ಕಾರ್ಯದರ್ಶಿ ಮುನೀರ್ ಅಹ್ಮದ್,ಖಜಾಂಚಿ ಸಂಪತ್ ಕುಮಾರ್,ಕಾರ್ಯದರ್ಶಿ ಉಜ್ವಲ್ ರಂಜಿತ್, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕರು,ಕೊಡಗು ವಿವಿ ಸಿಂಡಿಕೇಟ್ ಸದಸ್ಯರಾದ ಡಾ.ಕಾವೇರಿ ಪ್ರಕಾಶ್,ಮಡಿಕೇರಿ ತಾಲೂಕು ಜಾನಪದ ಪರಿಷತ್ ಅಧ್ಯಕ್ಷ ಎಚ್.ಟಿ.ಅನಿಲ್ ಭಾಗವಹಿಸಲಿದ್ದಾರೆ.ಶನಿವಾರ ಸಂತೆಯ ಕಲಾವಿದ ಮೊಗೆರ ಸುರೇಶ್,ಮಡಿಕೇರಿಯ…
ನಂಜರಾಯಪಟ್ಟಣ NEWS DESK ಆ.27 : ನಂಜರಾಯಪಟ್ಟಣ ಮುಸ್ಲಿಂ ಜಮಾಅತ್ ಕಮಿಟಿ, ರಕ್ತ ನಿಧಿ ಕೇಂದ್ರ ಜಿಲ್ಲಾಸ್ಪತ್ರೆ ಹಾಗೂ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಮಡಿಕೇರಿ ಇದರ ಸಹಭಾಗಿತ್ವದಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ 2ನೇ ವರ್ಷದ ಸಾರ್ವಜನಿಕ ಬೃಹತ್ ರಕ್ತದಾನ ಶಿಬಿರ ನಂಜರಾಯಪಟ್ಟಣ ನೂರುಲ್ ಇಸ್ಲಾಂ ಮದರಸದಲ್ಲಿ ನಡೆಯಿತು. ನಂಜರಾಯಪಟ್ಟಣ ಮಹಲ್ ಖತೀಬ ಮಹಮ್ಮದ್ ಸಹದಿ ಉಸ್ತಾದ್ ಅವರು ಪ್ರಾರ್ಥನೆ ಮಾಡುವ ಮೂಲಕ ರಕ್ತದಾನ ಶಿಬಿರಕ್ಕೆ ಚಾಲನೆ ನೀಡಿದರು. ನಂಜರಾಯಪಟ್ಟಣ ಗ್ರಾಮ ಪಂಚಾಯತಿ ಅಧ್ಯಕ್ಷ ಸಿ.ಎಲ್.ವಿಶ್ವ ಅವರು ಮಾತನಾಡಿ ನಂಜರಾಯಪಟ್ಟಣ ಮುಸ್ಲಿಂ ಜಮಾಅತ್ ವತಿಯಿಂದ ಈ ರೀತಿಯ ಸಮಾಜಮುಖಿ ಕಾರ್ಯ ನಡೆಯುತ್ತಿರುವುದು ಶ್ಲಾಘನೀಯ. ಜನಪರ ಕಾರ್ಯಕ್ರಮಗಳಿಗೆ ಗ್ರಾ.ಪಂ ಸಂಪೂರ್ಣ ಸಹಕಾರ ನೀಡಲಿದೆ ಎಂದರು. ರಕ್ತನಿಧಿ ಕೇಂದ್ರದ ವೈದ್ಯಾಧಿಕಾರಿ ಡಾ.ಕರುಂಬಯ್ಯ ಅವರು ಮಾತನಾಡಿ ಗ್ರಾಮೀಣ ಭಾಗದಲ್ಲಿ ರಕ್ತದಾನ ಶಿಬಿರ ನಡೆಯುತ್ತಿರುವುದು ಸ್ವಾಗತಾರ್ಹ. ಇನ್ನು ಮುಂದೆಯೂ ಹೆಚ್ಚು ಹೆಚ್ಚು ಶಿಬಿರಗಳು ನಡೆಯಲಿ, ಜಮಾಅತ್ ಕಮಿಟಿಯಿಂದ ರೋಗಿಗಳಿಗೆ ಸಹಾಯ ಹಸ್ತ ಸಿಗಲಿ ಎಂದು ತಿಳಿಸಿದರು. ಜಮಾಅತ್ ಅಧ್ಯಕ್ಷ…
ಮಡಿಕೇರಿ NEWS DESK ಆ.27 : ನಾಗರಹೊಳೆ ಭಾಗದ ವೀರನಹೊಸಹಳ್ಳಿ ಪ್ರಾದೇಶಿಕ ಅರಣ್ಯದಲ್ಲಿ ಜಿಂಕೆ ಭೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪದಡಿ ಕಿರಂಗೂರು ಗೇಟ್ ಬಳಿ ಓರ್ವ ಆರೋಪಿಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ. ಪ್ರಕರಣದಲ್ಲಿ ಭಾಗಿಯಾಗಿದ್ದ ಮತ್ತಿಬ್ಬರು ಆರೋಪಿಗಳು ತಲೆ ಮರೆಸಿಕೊಂಡಿದ್ದಾರೆ. ಹನಗೋಡು ಹೋಬಳಿಯ ಭರತವಾಡಿ ಹಾಡಿಯ ರುದ್ರ ಎಂಬಾತ ಬಂಧಿತ ಆರೋಪಿಯಾಗಿದ್ದಾನೆ. ಈತನ ಬಳಿಯಿಂದ 2ಕೆ.ಜಿಯಷ್ಟು ಜಿಂಕೆ ಮಾಂಸ, ಜಿಂಕೆ ಚರ್ಮ, ಕೃತ್ಯಕ್ಕೆ ಬಳಸಿದ್ದ ಬೈಕ್ ಮತ್ತು ಒಂದು ಮೊಬೈಲ್ ಫೋನ್ ವಶಕ್ಕೆ ಪಡೆಯಲಾಗಿದೆ. ತಲೆಮರೆಸಿಕೊಂಡ ಆರೋಪಿಗಳನ್ನು ಕಪ್ಪನಕಟ್ಟೆ ಹಾಡಿಯ ರಾಮು ಹಾಗೂ ಅವ್ವು ಎಂದು ಗುರುತಿಸಲಾಗಿದೆ. ಜಿಂಕೆಯನ್ನು ಭೇಟೆಯಾಡಿರುವ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ಹುಣಸೂರು ವನ್ಯಜೀವಿ ವಿಭಾಗದ ಆರ್.ಎಫ್.ಓ.ಸುಬ್ರಮಣ್ಯ ಕೆ.ಇ, ಆನೆಚೌಕೂರು ವಲಯದ ಡಿಆರ್ಎಫ್ಓ ಶಿವಕುಮಾರ್, ಗಸ್ತು ಅರಣ್ಯ ಪಾಲಕರು ಹಾಗೂ ಸಿಬ್ಬಂದಿಗಳು ಹನಗೋಡಿಗೆ ಸಮೀಪದ ಕಿರಂಗೂರು ಗೇಟ್ ಬಳಿ ದಾಳಿ ನಡೆಸಿದರು. ತಲೆ ಮರೆಸಿಕೊಂಡ ಆರೋಪಿಗಳ ಪತ್ತೆಗೆ ಕಾರ್ಯಾಚರಣೆ ಚುರುಕುಗೊಂಡಿದೆ.
ಬೆಳಗಾವಿ NEWS DESK ಆ.26 : ನಾಡಿಗೆ ಅನ್ನ ಕೊಡೋ ದೊರೆ ನಿನ್ನ ಕೈ ಮೇಲಾಗ್ಲಿ ಎಂದು ರಾಯಬಾಗ್ ತಾಲ್ಲೂಕಿನ ಸುಟ್ಟಟ್ಟಿ ಗ್ರಾಮದ ಅಕ್ಕಾತಾಯಿ ಮುಖ್ಯಮಂತ್ರಿಗಳಿಗೆ ಆಶೀರ್ವಾದ ಮಾಡಿದರು. ಗೃಹಲಕ್ಷ್ಮಿ ಹಣದಲ್ಲಿ ಗ್ರಾಮಕ್ಕೇ ಹೋಳಿಗೆ ಊಟ ಹಾಕಿದ ಅಕ್ಕಾತಾಯಿ ಲಂಗೂಟಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಳಗಾವಿ ವಿಮಾನನಿಲ್ದಾಣದಲ್ಲಿ ಸನ್ಮಾನಿಸಿದರು. ಸನ್ಮಾನ ಸ್ವೀಕರಿಸಿದ ಬಳಿಕ ಅಕ್ಕಾತಾಯಿ ಸಿಎಂಗೆ ತುಂಬು ಹೃದಯದಿಂದ ಆಶೀರ್ವದಿಸಿದರು. *ಕೈ ಮೇಲಾಗ್ಲಿ-ದೇಶ ಆಳು ದೊರೆಯೇ* ನಾಡಿಗೆ ಅನ್ನ ಕೊಡೋ ದೊರೆ ನೀನು. ನಿಮ್ಮ ಕೈ ಇನ್ನೂ ಮೇಲಾಗ್ಲಿ. ನಾಡ ಆಳುವ ದೊರೆ ನೀನು ದೇಶ ಆಳ್ಬೇಕು. ಹಿಂಗಾ ಆಳ್ಕೊತಾ ಹೋಗ್ತಾ ಇರ್ಬೇಕು. ನಾಡಿಗೆ ಒಳ್ಳೇದಾಗೈತ್ರಿ ಎಂದರು. ಅಕ್ಕಾತಾಯಿ ಜೊತೆ ಬಂದಿದ್ದ ಮುತ್ತೈದೆಯರು ಒಟ್ಟಾಗಿ ಮುಖ್ಯಮಂತ್ರಿಗಳಿಗೆ, ನಾವು ಲಕ್ಷ್ಮೀದೇವಿಗೆ ಪೂಜೆ ಮಾಡೀವಿ. ಕಂಟಕ ನಾಶ ಆಗ್ಲಿ ಅಂತ ದೇವಿಗೆ ಕೈಮುಗಿದೀವಿ ಎಂದು ಹಾರೈಸಿದರು. *ನಿಮ್ಮ ಆಶೀರ್ವಾದ ಹೀಗೇ ಇರಲಿ* ಅಕ್ಕಾತಾಯಿ ಮತ್ತು ಮುತ್ತೈದೆಯರ ಆಶೀರ್ವಾದ ಸ್ವೀಕರಿಸಿದ ಮುಖ್ಯಮಂತ್ರಿಗಳು ನಿಮ್ಮ ಆಶೀರ್ವಾದ ಹೀಗೇ ಇರಲಿ. ನಮ್ಮ ಸರ್ಕಾರ ಇರುವವರೆಗೂ ಗೃಹಲಕ್ಷ್ಮಿ ಯೋಜನೆ…






