ಸಿದ್ದಾಪುರ ಸೆ.11 NEWS DESK : ಪುಲಿಯೇರಿ ಗ್ರಾಮದ ಇಂಜಿಲಗೆರೆಯಲ್ಲಿ ಶ್ರೀ ವಿನಾಯಕ ಮಿತ್ರ ಮಂಡಳಿ ವತಿಯಿಂದ ದ್ವಿತೀಯ ವರ್ಷದ ಗೌರಿ-ಗಣೇಶ ವಿಸರ್ಜನೋತ್ಸವವು ಸಂಭ್ರಮದಿಂದ ನಡೆಯಿತು. ಉತ್ಸವದ ಅಂಗವಾಗಿ ಮಹಾಪೂಜೆ, ಮಹಾ ಮಂಗಳಾರತಿ ನಡೆಯಿತು. ನೆರದಿದ್ದ ಭಕ್ತಾದಿಗಳಿಗೆ ಪ್ರಸಾದ ವಿತರಣೆ ಹಾಗೂ ಅನ್ನದಾನ ನೆರವೇರಿತು. ನಂತರ ಗೌರಿ ಗಣೇಶ ಮೂರ್ತಿಯನ್ನು ಅಲಂಕೃತ ಮಂಟಪದಲ್ಲಿ ಕುಳ್ಳಿರಿಸಿ ವಾದ್ಯ ಮೇಳದೊಂದಿಗೆ ಇಂಜಿಲಗೆರೆ ಹಾಗೂ ಪುಲಿಯೇರಿ ಮುಖ್ಯ ಬೀದಿಗಳಲ್ಲಿ ಮೆರವಣಿಗೆ ಸಾಗಿ ಬಳಿಕ ಗ್ರಾಮದ ಕೆರೆಯಲ್ಲಿ ವಿಸರ್ಜಿಸಲಾಯಿತು. ಈ ಸಂದರ್ಭ ವಿನಾಯಕ ಮಿತ್ರ ಮಂಡಳಿಯ ಪದಾಧಿಕಾರಿಗಳಾದ ರತೀಶ್, ಶಶಿಕುಮಾರ್, ಸುದೀಶ್, ಮನೀಶ್, ರಜೀಶ್ ನೂತನ್ ಮತ್ತು ಶರತ್ ಸೇರಿದಂತೆ ಸುತ್ತಮುತ್ತಲ ಗ್ರಾಮದ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ಸೌಹಾರ್ದತೆಗೆ ಸಾಕ್ಷಿಯಾದ ಇಂಜಲಗೆರೆ : : ಗೌರಿ-ಗಣೇಶ ವಿಸರ್ಜನೋತ್ಸವ ಸಂದರ್ಭ ಹಿಂಜಲಗೆರೆ ಕಲ್ಲುಕೋರೆ ಬಳಿಯ ಬದ್ರಿಯಾ ಮಸೀದಿ ಕಮಿಟಿ ವತಿಯಿಂದ ಭಕ್ತಾದಿಗಳಿಗೆ ಬಾದಾಮಿ ಹಾಲು ಬಿಸ್ಕೆಟ್ ಗಳನ್ನು ವಿತರಿಸಿ ಪರಸ್ಪರ ಸೌಹಾರ್ದತೆ ಮೆರೆದರು.
ಲೇಖಕ: admin
ಮಂಗಳೂರು NEWS DESK ಸೆ.11 : ಚಾಲಕನ ನಿಯಂತ್ರಣ ತಪ್ಪಿ ರಸ್ತೆಗೆ ಮಗುಚಿದ ಆಟೋರಿಕ್ಷಾವನ್ನು ಮೇಲೆತ್ತಿ ತಾಯಿಯನ್ನು ರಕ್ಷಿಸಿದ 7ನೇ ತರಗತಿಯ ವಿದ್ಯಾರ್ಥಿನಿ ವೈಭವಿಯನ್ನು ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಸನ್ಮಾನಿಸಿ ಪ್ರಶಂಸೆ ವ್ಯಕ್ತಪಡಿಸಿದೆ. ಕಿನ್ನಿಗೋಳಿಯಲ್ಲಿ ರಸ್ತೆ ದಾಟುತ್ತಿದ್ದ ಸಂದರ್ಭ ರಿಕ್ಷಾ ಡಿಕ್ಕಿಯಾಗಿ ಅದರಡಿಗೆ ಬಿದ್ದ ತಾಯಿಯನ್ನು ತಕ್ಷಣವೇ ಧಾವಿಸಿ ಬಂದು ರಕ್ಷಿಸಿದ ಬಾಲಕಿ ವೈಭವಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡ ಶ್ಲಾಘಿಸಿದ್ದರು. ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಷೈ ಮುಗಿಲನ್ ಅವರು ವೈಭವಿಯನ್ನು ತಮ್ಮ ಕಚೇರಿಗೆ ಕರೆಸಿ ಸನ್ಮಾನಿಸಿದರು. ಧೈರ್ಯ ಮೆರೆದ ಬಾಲಕಿಗೆ ಪೇಟ, ಹಾರ ಹಾಕಿದ ಡಿಸಿ ಸಮಯಪ್ರಜ್ಞೆಯ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದರು. “ವೈಭವಿಯ ಈ ಸಾಹಸ ಎಲ್ಲರಿಗೂ ಮಾದರಿಯಾಗಿದೆ. ಶಾಲಾ ಹಂತದಲ್ಲಿ ಮಕ್ಕಳಿಗೆ ಇಂತಹ ಸಮಯಪ್ರಜ್ಞೆ ಮತ್ತು ಧೈರ್ಯ ಮೂಡಿ ಬರಬೇಕಿದೆ” ಎಂದು ಹೇಳಿದರು. ಅಪರ ಜಿಲ್ಲಾಧಿಕಾರಿ ಡಾ.ಜಿ.ಸಂತೋಷ್ ಕುಮಾರ್, ಸಮಾಜ ಕಲ್ಯಾಣ ಉಪನಿರ್ದೇಶಕ ಹೇಮಲತಾ, ಸಹಾಯಕ ನಿರ್ದೇಶಕ ಸುರೇಶ್ ಅಡಿಗ ಹಾಗೂ ವೈಭವಿ ಪಾಲಕರು ಉಪಸ್ಥಿತರಿದ್ದರು. ಮಂಗಳೂರು…
ಮಡಿಕೇರಿ ಸೆ.11 NEWS DESK : ತಾಲ್ಲೂಕು ಮಟ್ಟದ ಕಾಲ್ಚೆಂಡು ಪಂದ್ಯಾವಳಿಯಲ್ಲಿ ನೆಲ್ಲಿಹುದಿಕೇರಿ ಕರ್ನಾಟಕ ಪಬ್ಲಿಕ್ ಶಾಲೆಯ ಪ್ರಾಥಮಿಕ ವಿದ್ಯಾರ್ಥಿಗಳು ಗೆಲುವು ಸಾಧಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಬಸವನಹಳ್ಳಿ ಸರಕಾರಿ ಪ್ರೌಢಶಾಲಾ ಮೈದಾನದಲ್ಲಿ ನಡೆದ ಪಂದ್ಯಾವಳಿಯಲ್ಲಿ ಕಾಜೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿರುದ್ಧ 4-0 ಗೋಲುಗಳ ಗೆಲುವು ದಾಖಲಿಸಿದರು.
ಮಡಿಕೇರಿ ಸೆ.11 NEWS DESK : ಮಡಿಕೇರಿ ಕೊಡವ ಸಮಾಜದ ವತಿಯಿಂದ ಕೈಲ್ ಪೊಳ್ದ್ ಹಬ್ಬದ ಪ್ರಯುಕ್ತ ಸಾಂಕೇತಿಕ ಆಯುಧ ಪೂಜೆಯನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಸಮಾಜದ ಸಭಾಂಗಣದಲ್ಲಿ ಕೋವಿ, ಕತ್ತಿಗೆ ಸಮಾಜದ ಅಧ್ಯಕ್ಷ ಮಂಡುವಂಡ ಪಿ.ಮುತ್ತಪ್ಪ ಪೂಜೆಸಲ್ಲಿಸಿದರು. ನಂತರ ತೆಂಗಿನ ಕಾಯಿಗೆ ಗುಂಡುಹೊಡೆಯಲಾಯಿತು. ಈ ಸಂದರ್ಭ ಸಮಾಜದ ಉಪಾಧ್ಯಕ್ಷ ಕೇಕಡ ವಿಜುದೇವಯ್ಯ, ಕಾರ್ಯದರ್ಶಿ ಕನ್ನಂಡ ಸಂಪತ್ ಕುಮಾರ್, ಜಂಟಿ ಕಾರ್ಯದರ್ಶಿ ನಂದಿನೆರವಂಡ ದಿನೇಶ್, ನಿರ್ದೇಶಕರಾದ ಕನ್ನಂಡ ಕವಿತ ಬೊಳ್ಳಪ್ಪ, ಬೊಪ್ಪಂಡ ಸರಳಾ ಕರುಂಬಯ್ಯ, ಕಾಂಡೇರ ಲಲ್ಲು ಕುಟ್ಟಪ್ಪ, ನಂದಿನೆರವಂಡ ರವಿ ಬಸಪ್ಪ, ಕಾಳಚಂಡ ಅಪ್ಪಣ್ಣ, ಶಾಂತೆಯಂಡ ವಿಶಾಲ್ ಕಾರ್ಯಪ್ಪ, ಮೂವೇರ ಜಯರಾಂ, ಪುತ್ತರಿರ ಕರುಣ್ ಕಾಳಯ್ಯ, ಕೊಡವ ಸಮಾಜ, ಕೊಡವ ಸೌಹಾರ್ದ ಪತ್ತಿನ ಸಹಕಾರ ಸಂಘ ಹಾಗೂ ಕೊಡವ ವಿದ್ಯಾಧಿಯ ವ್ಯವಸ್ಥಾಪಕರು, ಸಿಬ್ಬಂದಿ ವರ್ಗ ಹಾಜರಿದ್ದರು.
ಕಾರ್ಕಳ ಸೆ.11 NEWS DESK : ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ಸಪ್ತಸ್ವರ ಸಭಾಂಗಣದಲ್ಲಿ ವಿಶ್ವ ಆತ್ಮಹತ್ಯೆ ವಿರೋಧಿ ದಿನಾಚರಣೆಯ ಕುರಿತು ಮಾಹಿತಿ ಕಾರ್ಯಗಾರ ನಡೆಯಿತು. ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮದ ಕ್ಲಿನಿಕಲ್ ಸೈಕಾಲಜಿಸ್ಟ್ ಕ್ಯಾಥರೀನ್ ಜೆನ್ನಿಫರ್ ಮಾತನಾಡಿ ಸ್ಪರ್ಧಾತ್ಮಕ ಯುಗದಲ್ಲಿ ನಮ್ಮ ಸಾಮರ್ಥ್ಯವೇನು ಎಂಬುದನ್ನು ಅರಿತು ಅದರಂತೆ ಜೀವಿಸಬೇಕು. ಬೇರೆಯವರ ಜೀವನಶೈಲಿ ನಮ್ಮದಾಗದಿರಲಿ. ಸಕಾರಾತ್ಮಕ ಮನೋಭಾವ, ಚಿಂತನೆಗಳನ್ನು ಅನುಸರಿಸಬೇಕು ಎಂದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಕಾರ್ಕಳ ತಾಲ್ಲೂಕು ಆರೋಗ್ಯಾಧಿಕಾರಿಗಳಾದ ಡಾ.ಸಂದೀಪ್ ಕುದ್ವ ಪ್ರಾಸ್ತಾವಿಕ ನುಡಿಗಳನ್ನಾಡುತ್ತಾ ‘ಮಾನಸಿಕ ಸಮತೋಲನ ಕಾಯ್ದುಕೊಳ್ಳುವಿಕೆಯಿಂದ ಆತ್ಮಹತ್ಯೆಯಂತಹ ಘಟನೆಗಳನ್ನು ತಡೆಗಟ್ಟಲು ಸಾಧ್ಯ’ ಎಂದರು. ಪ್ರಭಾರ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಹೆಚ್.ಶಶಿಧರ್, ‘ವೈಜ್ಞಾನಿಕ ಚಿಕಿತ್ಸಾ ಪದ್ಧತಿಗಳಿಗೆ ಹೊಂದಿಕೊಂಡು ಉತ್ತಮ ಜೀವನ ರೂಪಿಸಿಕೊಳ್ಳಬೇಕು’ ಎಂದರು. ಪ್ರಾಂಶುಪಾಲರಾದ ವಿದ್ವಾನ್ ಗಣಪತಿ ಭಟ್ ಕಾರ್ಯಕ್ರಮದ ಕುರಿತು ಅಧ್ಯಕ್ಷೀಯ ನುಡಿಗಳನ್ನಾಡುತ್ತಾ ‘ಪ್ರತಿಯೊಂದು ಸಮಸ್ಯೆಗೂ ಪರಿಹಾರ ಎಂಬುವುದಿದೆ. ಆತ್ಮಹತ್ಯೆ ಪರಿಹಾರವಲ್ಲ. ಆತ್ಮಹತ್ಯೆ ಎಂಬ ಸಾವು ಸಾಧನೆಯಲ್ಲ. ಬದುಕಿ ಬದುಕನ್ನು ಗೆದ್ದು ಸಾಧಿಸಿ ತೋರಿಸಬೇಕು’…
ಸುಳ್ಯ NEWS DESK ಸೆ.11 : ದಕ್ಷಿಣ ಕನ್ನಡ ಜಿಲ್ಲಾ ಒಕ್ಕೂಟ ಸೌಹಾರ್ದ ಸಹಕಾರಿಯ ನೂತನ ಅಧ್ಯಕ್ಷರಾಗಿ ಭಾಸ್ಕರ ದೇವಸ್ಯ ಆಯ್ಕೆಯಾಗಿದ್ದಾರೆ.
ವಿರಾಜಪೇಟೆ ಸೆ.11 NEWS DESK : ಕೆದಮುಳ್ಳೂರು ಗ್ರಾಮದ ತೆರ್ಮೆಮೊಟ್ಟೆಯ ಶ್ರೀ ವಿನಾಯಕ ಸೇವಾ ಸಮಿತಿ ವತಿಯಿಂದ 19ನೇ ವರ್ಷದ ಗಣೇಶೋತ್ಸವವನ್ನು ಮೂರು ದಿನಗಳ ಕಾಲ ಸಂಭ್ರಮದಿಂದ ಆಚರಿಸಲಾಯಿತು. ಉತ್ಸವದ ಪ್ರಯುಕ್ತ ಗಣಪತಿ ಹೋಮ, ಮಹಾ ಪೂಜೆ, ಪ್ರಸಾದ ವಿನಿಯೋಗ ಮತ್ತು ಅನ್ನ ಸಂತರ್ಪಣೆ ನಡೆಸಲಾಯಿತು. ಗ್ರಾಮಸ್ಥರಿಗಾಗಿ ವಿವಿಧ ಆಟೋಟಗಳ ಸ್ಪರ್ಧೆ ಹಾಗೂ ಮನರಂಜನೆಯ ಕಾರ್ಯಕ್ರಮ ಮತ್ತು ಬಹುಮಾನ ವಿತರಣೆ ಮಾಡಲಾಯಿತು.ಮೂರನೇ ದಿನ ರಾತ್ರಿ ಮಹಾ ಪೂಜೆಯ ನಂತರ ವಿದ್ಯುತ್ ಅಲಂಕಾರ ಮಂಟಪ ದಲ್ಲಿ ಗಣೇಶ ಮೂರ್ತಿಯನ್ನು ಕುಳ್ಳಿರಿಸಿ ಮೆರವಣಿಗೆ ನಡೆಸಿ ಮಹಾದೇವರ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಕೀರ್ತಿ ಹೊಳೆಯಲ್ಲಿ ಗಣೇಶ ಮೂರ್ತಿಯನ್ನು ವಿಸರ್ಜಿಸಲಾಯಿತು.
ದೇವರಪಲ್ಲಿ NEWS DESK ಸೆ.11 : ಲಾರಿ ಪಲ್ಟಿಯಾಗಿ ಸ್ಥಳದಲ್ಲೇ 7 ಕೂಲಿ ಕಾರ್ಮಿಕರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದ ಪೂರ್ವ ಗೋದಾವರಿ ಜಿಲ್ಲೆಯ ದೇವರಪಲ್ಲಿ ತಾಲ್ಲೂಕಿನ ಚಿಲಕವಾರಿಪಾಕಲ ಎಂಬ ಗ್ರಾಮದಲ್ಲಿ ನಡೆದಿದೆ. ಗೋಡಂಬಿ ತುಂಬಿಕೊAಡು ತೆರಳುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಈ ಭೀಕರ ಅಪಘಾತದಲ್ಲಿ ಏಳು ಮಂದಿ ಸ್ಥಳದಲ್ಲೇ ಮೃತಪಟ್ಟರು. ಮೃತರ ಪೈಕಿ 6 ಕಾರ್ಮಿಕರು ತಾಡಿಮಳ್ಳ ಗ್ರಾಮದ ನಿವಾಸಿಗಳು. ಘಟನೆಯಲ್ಲಿ ಹಲವರಿಗೆ ಗಾಯಗಳಾಗಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಸುಂಟಿಕೊಪ್ಪ ಸೆ.11 NEWS DESK : ಸಂತ ಮೇರಿ ಆಂಗ್ಲ ಮಾಧ್ಯಮ ವಿದ್ಯಾ ಸಂಸ್ಥೆಯ ಪ್ರೌಢಶಾಲಾ ಬಾಲಕರ ತಂಡ ಫುಟ್ಬಾಲ್ ವಿಭಾಗದಲ್ಲಿ ವಿಭಾಗೀಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಅಮ್ಮತ್ತಿ ಸರಕಾರಿ ಪ್ರೌಢಶಾಲಾ ಮೈದಾನದಲ್ಲಿ ನಡೆದ ಪೈನಲ್ ಪಂದ್ಯಾವಳಿಯಲ್ಲಿ ಸಂತ ಮೇರಿ ಆಂಗ್ಲ ಮಾಧ್ಯಮ ವಿದ್ಯಾ ಸಂಸ್ಥೆಯ ಬಾಲಕರ ತಂಡವು ಪಾಲಿಬೆಟ್ಟ ತಂಡವನ್ನು 5-4 ಗೋಲುಗಳನ್ನು ಗಳಿಸುವ ಮೂಲಕ ಗೆಲುವು ಸಾಧಿಸಿ ವಿಭಾಗೀಯ ಮಟ್ಟಕ್ಕೆ ಪ್ರವೇಶ ಪಡೆದುಕೊಂಡಿದೆ. ಸೆ.12 ರಿಂದ ದಕ್ಷಿಣ ಕನ್ನಡದಲ್ಲಿ ಆರಂಭಗೊಳ್ಳಲಿರುವ ಪಂದ್ಯಾವಳಿಯಲ್ಲಿ ಪ್ರೌಢಶಾಲಾ ಬಾಲಕರ ತಂಡ ಪಾಲ್ಗೊಳ್ಳಲಿದೆ. ಬಾಲಕರ ತಂಡದ ಸಾಧನೆಗೆ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರುಗಳಾದ ಸುನಿಲ್, ಶುೃತಿ, ಚಂದ್ರಶೇಖರ್ ತರಬೇತಿ ನೀಡಿರುತ್ತಾರೆ. ಬಾಲಕರ ತಂಡದ ಕ್ರೀಡಾ ಸಾಧನೆಯನ್ನು ಶಾಲೆಯ ವ್ಯವಸ್ಥಾಪಕರಾದ ರೇ.ಫಾ.ವಿಜಯಕುಮಾರ್, ಸಂತ ಮೇರಿ ಆಂಗ್ಲ ವಿದ್ಯಾ ಸಂಸ್ಥೆಯ ಪ್ರಾಂಶುಪಾಲÀ ಸೇಲ್ವರಾಜ್ ಅಭಿನಂದಿಸಿ ಶುಭ ಹಾರೈಸಿದ್ದಾರೆ.
ಮಡಿಕೇರಿ NEWS DESK ಸೆ.11 : ಗೋಣಿಕೊಪ್ಪಲು ನಿವಾಸಿ ವಿನಾಯಕ ಪ್ರಿಂಟರ್ಸ್ ಮಾಲೀಕ ರಾಮಕೃಷ್ಣ ಅವರ ಪತ್ನಿ ಹಾಗೂ ಗೋಣಿಕೊಪ್ಪಲು ಎಸ್ ಎನ್ ಡಿ ಪಿ ಕಾರ್ಯಕಾರಿ ಸಮಿತಿ ಸದಸ್ಯರಾದ ವತ್ಸಲ (66) ಇಂದು ಬೆಳಿಗ್ಗೆ 6.30 ಗಂಟೆಗೆ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಇವರ ಅಂತ್ಯಕ್ರಿಯೆ ಇಂದು ಸಾಯಂಕಾಲ ಕೇರಳ ಮಟ್ಟನೂರ್ ನ ಸ್ವಗೃಹದಲ್ಲಿ ನಡೆಯಲಿದೆ ಎಂದು ಕುಟುಂಬ ವರ್ಗ ತಿಳಿಸಿದೆ.






