ಲೇಖಕ: admin

ಮಡಿಕೇರಿ NEWS DESK ಆ.26 : ಸಂಭವನೀಯ ಪ್ರಾಕೃತಿಕ ವಿಕೋಪದ ಪಟ್ಟಿಯಲ್ಲಿರುವ ದೊಡ್ಡಪುಲಿಕೋಟು ಗ್ರಾಮದ ನದಿ ಪಾತ್ರದಲ್ಲಿ ರೆಸಾರ್ಟ್ ನಿರ್ಮಾಣದ ಪ್ರಯತ್ನಗಳು ನಡೆಯುತ್ತಿದ್ದು, ಯಾವುದೇ ಕಾರಣಕ್ಕೂ ಇದಕ್ಕೆ ಅವಕಾಶ ನೀಡಬಾರದು ಎಂದು ದೊಡ್ಡಪುಲಿಕೋಟು ಗ್ರಾಮ ಹಿತ ರಕ್ಷಣಾ ಸಮಿತಿ ಜಿಲ್ಲಾಡಳಿತವನ್ನು ಆಗ್ರಹಿಸಿದೆ. ಸುದ್ದಿಗೋಷ್ಠಿಯಲ್ಲಿ ಬಲ್ಲಮಾವಟಿ ಗ್ರಾಮ ಪಂಚಾಯ್ತಿ ಮಾಜಿ ಸದಸ್ಯ ಕರವಂಡ ಲವ ನಾಣಯ್ಯ ಮಾತನಾಡಿ, ದೊಡ್ಡಪುಲಿಕೋಟು ಮತ್ತು ಪೇರೂರು ಗ್ರಾಮದ ಸರಹದ್ದಿನಲ್ಲಿ, ಕಾವೇರಿಯ ಉಪನದಿ “ಕಪ್ಪೊಳೆ”ಯ ಸಮೀಪದಲ್ಲೆ ರೆಸಾರ್ಟ್ ನಿರ್ಮಾಣಕ್ಕೆ ಭರದಿಂದ ಕೆಲಸ ಕಾರ್ಯಗಳು ನಡೆಯುತ್ತಿದೆ. ಇದನ್ನು ಸಂಬಂಧಪಟ್ಟ ಇಲಾಖೆ ತಕ್ಷಣ ನಿಲ್ಲಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು. ನಮ್ಮ ಬೇಡಿಕೆಗೆ ಸೂಕ್ತ ಸ್ಪಂದನ ದೊರಕದಿದ್ದಲ್ಲಿ ಸೆ.20 ರ ಬಳಿಕ ಗ್ರಾಮಸ್ಥರ ಸಹಕಾರದೊಂದಿಗೆ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದರು. ರೆಸಾರ್ಟ್ ನಿರ್ಮಾಣಕ್ಕೆ ಬಲ್ಲಮಾವಟಿ ಗ್ರಾಮ ಪಂಚಾಯ್ತಿ ಆಕ್ಷೇಪಣಾ ರಹಿತ ಪತ್ರವನ್ನು ನೀಡಿಲ್ಲ. ಹೀಗಿದ್ದೂ ಕಾಮಗಾರಿ ನಡೆಯುತ್ತಿದ್ದು, ಸಮೀಪವೇ ಗ್ರಾಮ ವ್ಯಾಪ್ತಿಯ ಸುಮಾರು 250 ಕುಟುಂಬಗಳು, ಶ್ರೀ ಕೋಟೆ ಭಗವತಿ ದೇವಸ್ಥಾನ,…

Read More

ಮಡಿಕೇರಿ NEWS DESK ಆ.26 : ರಾಷ್ಟ್ರದ ಗಡಿಗಳನ್ನು ಕಾಯುವ ಯೋಧ ಮತ್ತು ಆತನ ಮಗಳ ನಡುವಿನ ಆತ್ಮೀಯ ಸಂಬಂಧಗಳ ಹೂರಣವನ್ನು ಹೊಂದಿದ ಮಕ್ಕಳ ಚಲನಚಿತ್ರ “ದಿ ಜರ್ನಿ ಆಫ್ ಬೆಳ್ಳಿ” ರಾಜ್ಯದ ವಿವಿಧೆಡೆಗಳಲ್ಲಿ ಸೆ.13 ರಂದು ಬಿಡುಗಡೆಗೊಳ್ಳಲಿದೆ ಎಂದು ಚಿತ್ರ ನಿರ್ಮಾಪಕ ಮಹೇಂದ್ರ ಕುಮಾರ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಷ್ಟ್ರ ಸೇವೆಯಲ್ಲಿ ನಿರತ ಕೊಡಗಿನ ಯೋಧ, ಮನೆಯಲ್ಲಿ ಅಪ್ಪನ ಬರುವಿಕೆಗಾಗಿ ಕಾಯುವ ಪುಟ್ಟ ಮಗಳ ನಿರೀಕ್ಷೆ, ಬಾಂಧವ್ಯದ ಅಂಶಗಳನ್ನು ಒಳಗೊಂಡಂತೆ ದಿ ಜರ್ನಿ ಆಫ್ ಬೆಳ್ಳಿಯನ್ನು ನಿರ್ಮಿಸಲಾಗಿದೆ. ಇದು ಜಿಲ್ಲೆಯ ಕುಶಾಲನಗರ, ಸಿದ್ದಾಪುರ, ಶನಿವಾರಸಂತೆ ಸೇರಿದಂತೆ ರಾಜ್ಯದ ಸುಮಾರು 35 ಚಿತ್ರ ಮಂದಿರಗಳಲ್ಲಿ ತೆರೆ ಕಾಣಲಿದೆಯೆಂದು ಮಾಹಿತಿಯನ್ನಿತ್ತರು. ಚಲನ ಚಿತ್ರ ನಿರ್ದೇಶಕಿ ಗೌರಿ ಶ್ರೀನಿವಾಸ್ ಮಾತನಾಡಿ, ಚಲನ ಚಿತ್ರದ ಯೋಧನ ಪಾತ್ರದಲ್ಲಿ ರಂಗಕರ್ಮಿ ಮಾಲತೇಶ್ ಅವರು ಮತ್ತು ಅವರ ಮಗಳಾಗಿ ಹುಬ್ಬಳ್ಳಿಯ ಸಂಗನಗೌಡ ಮತ್ತು ನಯನಾ ಪಾಟೀಲ ಅವರ ಪುತ್ರಿ ಹತ್ತರ ಪ್ರಾಯದ ಸಮನ್ವಿ ಎಸ್. ಪಾಟೀಲ್ ಮನೋಜ್ಞವಾಗಿ…

Read More

ಮಡಿಕೇರಿ NEWS DESK ಆ.26 : ಕೊಡಗು ಜಿಲ್ಲೆಯಲ್ಲಿ ಪಾಸ್ ಪೋರ್ಟ್ ಸೇವಾ ಕೇಂದ್ರವನ್ನು ಆರಂಭಿಸಬೇಕೆಂದು ಆಮ್ ಆದ್ಮಿ ಪಾರ್ಟಿಯ ರಾಜ್ಯ ಕಾರ್ಯದರ್ಶಿ ಭೋಜಣ್ಣ ಸೋಮಯ್ಯ ಒತ್ತಾಯಿಸಿದ್ದಾರೆ. ಈ ಕುರಿತು ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕಾ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಗೃಹ ಸಚಿವ ಅಮಿತ್ ಷಾ ಅವರಿಗೆ ಪತ್ರ ಬರೆದು ಪಾಸ್ ಪೋರ್ಟ್ ಸೇವಾ ಕೇಂದ್ರದ ಅಗತ್ಯತೆಯ ಬಗ್ಗೆ ವಿವರಿಸಿದ್ದಾರೆ. ಸೇವಾ ಕೇಂದ್ರವನ್ನು ಶೀಘ್ರ ಮಂಜೂರು ಮಾಡಬೇಕೆಂದು ಕೋರಿಕೊಂಡಿದ್ದಾರೆ.

Read More

ಮಡಿಕೇರಿ NEWS DESK ಆ.26 : ಪ್ರಾಕೃತಿಕ ವಿಕೋಪ ಸಂತ್ರಸ್ತರಿಗಾಗಿ ಭಾರತ್ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್ವಾದಿ) ಪಕ್ಷದ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಜಿಲ್ಲಾದ್ಯಂತ ಒಟ್ಟು 72,750 ರೂ.ಗಳನ್ನು ಸಂಗ್ರಹಿಸಿ ರಾಜ್ಯ ಸಮಿತಿಗೆ ಕಳುಹಿಸಲಾಗಿದೆ ಎಂದು ಪಕ್ಷದ ಜಿಲ್ಲಾ ಕಾರ್ಯದರ್ಶಿ ಹೆಚ್.ಬಿ.ರಮೇಶ್ ಹಾಗೂ ಸದಸ್ಯ ಎನ್.ಡಿ.ಕುಟ್ಟಪ್ಪ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಶಿರೂರು ಗುಡ್ಡ ಕುಸಿತ, ನೆರೆಹಾವಳಿಯಿಂದ ಹಾನಿಗೀಡಾದ ಭಾಗದ ಸಂತ್ರಸ್ತರಿಗೆ ಮತ್ತು ಕೇರಳ ರಾಜ್ಯದ ವಯನಾಡಿನಲ್ಲಿ ಸಂಭವಿಸಿದ ಪ್ರಾಕೃತಿಕ ವಿಕೋಪದಿಂದ ನೊಂದಿರುವವರಿಗೆ ತುರ್ತು ಸಹಾಯಕ್ಕಾಗಿ ಪಕ್ಷದ ಕೇಂದ್ರ ಸಮಿತಿಯ ಸೂಚನೆಯಂತೆ ಜಿಲ್ಲೆಯಲ್ಲಿ ಹಣ ಸಂಗ್ರಹಿಸಲಾಯಿತು. ವಿರಾಜಪೇಟೆಯಲ್ಲಿ ರೂ.32,162, ಸಿದ್ದಾಪುರದಲ್ಲಿ ರೂ.26,210 ಮತ್ತು ನೆಲ್ಲಿಹುದಿಕೇರಿಯಲ್ಲಿ ರೂ.14,380 ಸಂಗ್ರಹಿಸಲಾಗಿದೆ. ಸಾರ್ವಜನಿಕರು, ವ್ಯಾಪಾರಿಗಳು, ಪಕ್ಷದ ಸದಸ್ಯರು, ಹಿತೈಷಿಗಳು ಸಹಾಯ ಮಾಡಿದ್ದು, ಇವರುಗಳಿಗೆ ಪಕ್ಷದ ಜಿಲ್ಲಾ ಸಮಿತಿಯಿಂದ ಧನ್ಯವಾದಗಳನ್ನು ಸಲ್ಲಿಸುವುದಾಗಿ ತಿಳಿಸಿದರು.

Read More

ಮಡಿಕೇರಿ NEWS DESK  ಆ.26 : ಮೈಸೂರು- ಕೊಡಗು ಕ್ಷೇತ್ರದ ಸಂಸದ ಯದುವೀರ್ ಒಡೆಯರ್ ಅವರು ಇಂದು  ಮೈಸೂರು ಅಗ್ನಿಶಾಮಕ ದಳದ ಕೇಂದ್ರಕ್ಕೆ ಭೇಟಿ ನೀಡಿದರು. ಅಗ್ನಿಶಾಮಕ ದಳದ ತುರ್ತು ಪ್ರಕ್ರಿಯೆಗಳ ಸಿದ್ಧತೆಗಳನ್ನು ಪರಿಶೀಲಿಸಿದ ಅವರು, ಪಾರಂಪರಿಕ ಅಗ್ನಿಶಾಮಕ ಕಟ್ಟಡದ ರಕ್ಷಣೆ ಹಾಗೂ ಅದನ್ನು ಪುನಃಸ್ಥಾಪಿಸುವ ಯೋಜನೆಗಳನ್ನು ಅಧಿಕಾರಿಗಳೊಂದಿಗೆ ಚರ್ಚಿಸಿದರು. ಎಲ್ಲರಿಗೂ ಸುರಕ್ಷಿತ ಭವಿಷ್ಯವನ್ನು ಖಚಿತಪಡಿಸಿಕೊಳ್ಳಲು ಒಟ್ಟಾಗಿ ಶ್ರಮಿಸುವುದು ನಮ್ಮ ಗುರಿ ಎಂದು ಯದುವೀರ್ ತಿಳಿಸಿದರು.

Read More

ವಿರಾಜಪೇಟೆ ಆ.26 NEWS DESK :  ರಾಜ್ಯಾದ್ಯಂತ ಪ್ರಖ್ಯಾತವಾಗಿರುವ ವಿರಾಜಪೇಟೆಯ ಐತಿಹಾಸಿಕ ಗೌರಿ- ಗಣೇಶ ಉತ್ಸವ ಕಾನೂನು ಕಟ್ಟಳೆಗಳನ್ನು ಪಾಲನೆ ಮಾಡುವುದರೊಂದಿಗೆ ವಿಜೃಂಭಣೆಯಿಂದ, ಅಹಿತಕರ ಘಟನೆಗಳಿಗೆ ಅನುವು ಮಾಡಿಕೊಡದೆ ಸಾಮರಸ್ಯದ ಹಬ್ಬವಾಗಿ ಆಚರಣೆಯಾಗಲಿ ಎಂದು ಶಾಸಕ ಎ.ಎಸ್.ಪೊನ್ನಣ್ಣ ಹೇಳಿದರು. ನಗರದ ಪುರಸಭಾಂಗಣದಲ್ಲಿ ಆಯೋಜಿತ ಸಭೆಯಲ್ಲಿ ಮಾತನಾಡಿದ ಅವರು, ಉತ್ಸವದ ಶೋಭಾಯಾತ್ರೆಯಲ್ಲಿ ಮಂಟಪಗಳು ಚಲಿಸುವ ಮುಕ್ಯ ರಸ್ತೆ ಒಳಗೊಂಡಂತೆ ಗುಂಡಿ ಬಿದ್ದ ನಗರದ ರಸ್ತೆಗಳನ್ನು ದುರಸ್ತಿ ಪಡಿಸಿವುದು ಸೇರಿದಂತೆ ಪಾದಚಾರಿ ಹಾದಿಯ ಕಾಮಗಾರಿಗಳಿಗೆ ಮಲೆಹಾನಿ ಪರಿಹಾರ ಹಣವನ್ನು ಬಳಕೆ ಮಾಡುವಂತೆ ತಹಶೀಲ್ದಾರ್ ಗೆ ಸ್ಪಷ್ಟ ಸೂಚನೆಯನ್ನು ನೀಡಿದರು. ಉತ್ಸವದ ಸಂದರ್ಭ ಯಾವುದೇ ಅಹಿತಕರ ಘಟನೆಗೆ ಅವಕಾಶ ನೀಡದೆ ಶಾಂತಿ ಸುವ್ಯವಸ್ಥೆಯೊಂದಿಗೆ ಹಬ್ಬ ಆಚರಿಸಲು ಸಹಕರಿಸಯವಂತೆ ಮನವಿ ಮಾಡಿದ ಅವರು, ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹಬ್ಬಿಸಿ ಗಲಭೆಗೆ ಕಾರಣರಾದರೆ ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸ್ಪಷ್ಟ ನಿರ್ದೇಶನ ನೀಡಿದರು. ಪುರಸಭಾ ಮುಖ್ಯಾಧಿಕಾರಿ ಚಂದ್ರ ಕುಮಾರ್ ಮಾತನಾಡಿ, ಉತ್ಸವದ ಸಂದರ್ಭ ಕರ್ನಾಟಕ ಮಾಲಿನ್ಯ…

Read More

ವಿರಾಜಪೇಟೆ ಆ.26 NEWS DESK : ನಾಟ್ಯ ಮಯೂರಿ ನೃತ್ಯ ಶಾಲೆ ಹಾಗೂ ಬೆಂಗಳೂರಿನ ಡಿವೈನ್ ಟೆಂಪಲ್ ಫೌಂಡೇಶನ್ ಸಹಯೋಗದಲ್ಲಿ ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದ ನಯನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿರಾಜಪೇಟೆಯ ಭರತನಾಟ್ಯ ಕಲಾವಿದೆ ಪಿ.ಎನ್ ಚೈತ್ರ ಅವರಿಗೆ ನೃತ್ಯ ಸಾಧನೆಗಾಗಿ ರಾಷ್ಟ್ರಮಟ್ಟದ ಮಿನುಗುತಾರೆ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ. ವಿರಾಜಪೇಟೆಯ ವಿನಾಯಕ ಶಾಲೆಯಲ್ಲಿ ಹಾಗೂ ಹೆಗ್ಗಳ ಗ್ರಾಮದಲ್ಲಿ ನೃತ್ಯ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿರುವ ಪಿ.ಎನ್ ಚೈತ ಹೆಗ್ಗಳ ಗ್ರಾಮದ ಪಿ.ಎಸ್.ನಾಣಿ ಹಾಗೂ ಪಿ.ಎನ್. ಪ್ರೇಮ ದಂಪತಿಗಳ ಪುತ್ರಿ.

Read More

ಮಡಿಕೇರಿ ಆ.26 NEWS DESK : ಜೀವನದಲ್ಲಿ ನಿಂತ ನೀರಾಗದೆ ಹರಿವ ನೀರಿನಂತೆ ಬದುಕನ್ನು ಮುನ್ನಡೆಸಬೇಕು. ಉತ್ತಮ ಬದುಕು ರೂಪಿಸಿಕೊಳ್ಳಲು ಮುಂದಾಗಬೇಕು. ಆ ನಿಟ್ಟಿನಲ್ಲಿ ಮಹಾಭಾರತದಲ್ಲಿ ಶ್ರೀಕೃಷ್ಣನ ಸಂದೇಶಗಳು ಧನಾತ್ಮಕ ಚಿಂತನೆಯನ್ನು ಒಳಗೊಂಡಿದೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಗರದ ಗಾಂಧಿ ಭವನದಲ್ಲಿ ನಡೆದ ‘ಶ್ರೀಕೃಷ್ಣ ಜನ್ಮಾಷ್ಠಮಿ’ ಕಾರ್ಯಕ್ರಮದಲ್ಲಿ ಶ್ರೀಕೃಷ್ಣ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿ ಮಾತನಾಡಿದರು. ಶ್ರೀಕೃಷ್ಣನ ಬಗ್ಗೆ ಪ್ರತಿಯೊಬ್ಬರಲ್ಲಿಯೂ ಹೆಚ್ಚಿನ ಗೌರವ ಮತ್ತು ಭಕ್ತಿ ಇದೆ. ಶ್ರೀಕೃಷ್ಷನ ವೇಷದಲ್ಲಿ ಮಕ್ಕಳನ್ನು ಕಾಣುತ್ತೇವೆ. ಜೊತೆಗೆ ಶ್ರೀಕೃಷ್ಣನನ್ನು ಮಹಾಭಾರತದಲ್ಲಿ ಸಾರಥಿಯಾಗಿ ನೋಡುತ್ತೇವೆ ಎಂದು ವರ್ಣಿಸಿದರು. ಮಹಾಭಾರತದಲ್ಲಿ ಶ್ರೀಕೃಷ್ಣನ ಬಗ್ಗೆ ಒಳ್ಳೆಯ ಸಂದೇಶ ತಿಳಿಯುತ್ತೇವೆ. ಯಾವುದೇ ಫಲಾಪೇಕ್ಷೆ ಇಲ್ಲದೆ ಕೆಲಸವನ್ನು ಶ್ರದ್ಧೆಯಿಂದ ನಿರ್ವಹಿಸಿ ಬದುಕನ್ನು ಉತ್ತಮ ಪಡಿಸಿಕೊಳ್ಳಬೇಕು ಎಂಬ ಸಂದೇಶವನ್ನು ಶ್ರೀಕೃಷ್ಣ ಸಾರಿದ್ದಾರೆ ಎಂದರು. ಶ್ರೀ ಕೃಷ್ಣ ಒಂದು ರೀತಿ ವಿಶಿಷ್ಟ ಚೇತನರಾಗಿದ್ದಾರೆ. ಅರಾಜಕತೆ, ಅಧರ್ಮ ಸಹಿಸುತ್ತಿರಲಿಲ್ಲ ಎಂದು ಅವರು ಹೇಳಿದರು.…

Read More

ಮಡಿಕೇರಿ ಆ.26 NEWS DESK : ಭಾಗಮಂಡಲದ ವಿ.ಎಸ್.ಎಸ್.ಎನ್ ಸಭಾಂಗಣದಲ್ಲಿ ಆರಂಭವಾದ ಜಾನ್ ಡಾನ್ಸ್ ಗ್ಯಾಲರಿ ನೃತ್ಯ ಸಂಸ್ಥೆಯನ್ನು ಭಾಗಮಂಡಲ ಗ್ರಾ.ಪಂ ಅಧ್ಯಕ್ಷ ಕಾಳನ ರವಿ ಉದ್ಘಾಟಿಸಿ, ಶುಭಹಾರೈಸಿದರು. ಜಾನ್ ಡಾನ್ಸ್ ಗ್ಯಾಲರಿಯ ನಿರ್ದೇಶಕ ನಾಗರಾಜ್ ಸ್ವಾಗತಿಸಿ, ನೃತ್ಯ ಹಾಗೂ ಕರಾಟೆಯ ಮಹತ್ವವವನ್ನು ವಿವರಿಸಿದರು. ಬದುಕಿಗೆ ಉತ್ತಮ ಸಂಸ್ಕಾರ ನೀಡಿ ಸಮಾಜದಲ್ಲಿ ಗೌರವವನ್ನು ತಂದುಕೊಡಬಲ್ಲ ಕಲೆಗಳು ನಮ್ಮ ಬದುಕಿನಲ್ಲಿ ಬೆರೆತಾಗ ಬದುಕಿಗೆ ಮಾನ್ಯತೆ ಬರುತ್ತದೆ. ಈ ನಿಟ್ಟಿನಲ್ಲಿ ನೃತ್ಯ ಹಾಗೂ ಕರಾಟೆಯು ಒಂದಾಗಿದ್ದು, ಇದು ಜಡತ್ವದಿಂದ ತುಂಬಿದ ವ್ಯಕ್ತಿಯ ಬದುಕಿನಲ್ಲಿ ನವಚೈತನ್ಯವನ್ನು ನೀಡಿ ಮನಸ್ಸನ್ನು ಮುದಗೊಳಿಸಿಸುತ್ತದೆ ಮತ್ತು ಮಾನವೀಯ ಮೌಲ್ಯಗಳನ್ನು ಬೆಳೆಸಲು ಸಹಕಾರಿಯಾಗುತ್ತದೆ ಎಂದರು. ಕಾರ್ಯಕ್ರಮದಲ್ಲಿ ವಿ.ಎಸ್.ಎಸ್.ಎನ್ ಅಧ್ಯಕ್ಷ ಹೊಸೂರು ಸತೀಶ್ ಕುಮಾರ್, ಕಾವೇರಿ ಪದವಿ ಪೂರ್ವ ಕಾಲೇಜಿನ ರಾಜ್ಯಶಾಸ್ತ್ರ ಉಪನ್ಯಾಸಕ ದಾಮೋದರ್ ನಾಯ್ಕ, ರಾಜರಾಜೇಶ್ವರಿ ಶಾಲೆಯ ಮುಖ್ಯ ಅಧ್ಯಾಪಕ ಕವನ್, ಕರಾಟೆ ಮಾಸ್ಟರ್ ಕೆ.ಜೆ.ಇಮ್ಮಾನುವಲ್, ನೃತ್ಯ ಸಂಯೋಜಕರಾದ ಪೃಥ್ವಿ ನಾಯ್ಕ್, ಗಾಡ್ ವಿನ್ ದಿನಕರ್, ಸಹಾಯಕ ನೃತ್ಯ ಸಂಯೋಜಕರಾದ ಬೃಂದಾ…

Read More

ಮಡಿಕೇರಿ ಆ.26 NEWS DESK : ವಿಶ್ವ ಹಿಂದು ಪರಿಷತ್ ಮಡಿಕೇರಿ ಗ್ರಾಮಾಂತರ ಘಟಕದ ವತಿಯಿಂದ ಮೂರ್ನಾಡಿನಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯನ್ನು ಸಂಭ್ರಮದಿಂದ ಆಚರಿಸಲಾಯಿತು. 6 ವರ್ಷದೊಳಗಿನ 67 ಪುಟಾಣಿಗಳು ಬಾಲಕೃಷ್ಣರಾಗಿ ಮಿಂಚಿದರು. ಮೂರ್ನಾಡಿನ ಗೌಡ ಸಮಾಜದಲ್ಲಿ ನಡೆದ ಶ್ರೀಕೃಷ್ಣ ಜನ್ಮಾಷ್ಟಮಿಯ ಛದ್ಮವೇಷ ಸ್ಪರ್ಧೆಯಲ್ಲಿ ಪುಟಾಣಿಗಳು ಅತಿ ಉತ್ಸಾಹದಿಂದ ಪಾಲ್ಗೊಂಡರು. ಮಕ್ಕಳು ಶ್ರೀಕೃಷ್ಣನ ವೇಷಧಾರಿಗಳಾಗಿ ಮಿಂಚಲು ಪೋಷಕರು ಸಹಕರಿಸಿದರು. ಬಾಲಕೃಷ್ಣರ ಕಲರವ ಕಂಡು ಪ್ರೇಕ್ಷಕರು ಚಪ್ಪಾಳೆಯ ಸುರಿಮಳೆಗೈದರು. ::: ಛದ್ಮವೇಷ ವಿಜೇತರು :::ಎರಡೂವರೆಯಿಂದ ಮೂರೂವರೆ ವರ್ಷದೊಳಗಿನ ಮಕ್ಕಳ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಅವಿಶ್ ಬಿದ್ದಪ್ಪ, ದ್ವಿತೀಯ ಅನ್ವಿಕಾ ಕಾರ್ಯಪ್ಪ, ತೃತೀಯ ಸ್ಥಾನವನ್ನು ಚಿನ್ವಿತಾ ನಂದೀಶ್ ಗಳಿಸಿದರು.ಮೂರೂವರೆಯಿಂದ ನಾಲ್ಕೂವರೆ ವರ್ಷದೊಳಗಿನ ಮಕ್ಕಳ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಸಾನ್ವಿ, ದ್ವಿತೀಯ ಧನ್ವಿಕ್ ಪೂವಯ್ಯ, ತೃತೀಯ ಧ್ವನಿ, ನಾಲ್ಕೂವರೆಯಿಂದ ಆರು ವರ್ಷದೊಳಗಿನ ಮಕ್ಕಳ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಮನಸ್ವಿ, ದ್ವಿತೀಯ ನೂತನ್ ಬಿ.ವೈ ಹಾಗೂ ತೃತೀಯ ಸ್ಥಾನ ದಿಯಾ ರೈ ಪಡೆದುಕೊಂಡರು. ಸ್ಪರ್ಧೆಯ ನಂತರ ನಡೆದ ಸಭಾ…

Read More