ಲೇಖಕ: admin

ಬೆಂಗಳೂರು, ಫೆಬ್ರವರಿ 24, 2026: ದೇಶದ ಗಡಿ ಕಾಯ್ದು ನಿವೃತ್ತರಾದ ಮಾಜಿ ಸೈನಿಕರನ್ನು ನಾಗರಿಕ ಕಾರ್ಯಪಡೆಯಲ್ಲಿ ಮರುಸೇರ್ಪಡೆಗೊಳಿಸುವ ಮಹತ್ವದ ಉದ್ದೇಶದಿಂದ, ರಕ್ಷಣಾ ಸಚಿವಾಲಯದ ಅಡಿಯಲ್ಲಿರುವ ‘ಡೈರೆಕ್ಟರೇಟ್ ಜನರಲ್ ರಿಸೆಟಲ್‌ಮೆಂಟ್’ (DGR) ವತಿಯಿಂದ ಫೆಬ್ರವರಿ 27ರಂದು ಬೆಂಗಳೂರಿನಲ್ಲಿ ವಿಶೇಷ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. ಉದ್ಯೋಗ ಮೇಳದ ಉದ್ದೇಶ ಭಾರತೀಯ ಭೂಸೇನೆ, ನೌಕಾಪಡೆ ಮತ್ತು ವಾಯುಪಡೆಯ ನಿವೃತ್ತ ಯೋಧರನ್ನು ಕಾರ್ಪೊರೇಟ್ ಮತ್ತು ಕೈಗಾರಿಕಾ ಕ್ಷೇತ್ರದ ಪ್ರಮುಖ ಕಂಪನಿಗಳೊಂದಿಗೆ ಸಂಪರ್ಕಿಸಲು ಈ ಮೇಳವು ಒಂದು ವೇದಿಕೆಯಾಗಿ ಕಾರ್ಯನಿರ್ವಹಿಸುತ್ತದೆ. ಸೈನಿಕರಲ್ಲಿರುವ ಶಿಸ್ತು, ನಾಯಕತ್ವದ ಗುಣ ಮತ್ತು ತಾಂತ್ರಿಕ ನೈಪುಣ್ಯತೆಯನ್ನು ಗುರುತಿಸಿ ಅವರಿಗೆ ಸೂಕ್ತವಾದ ಉದ್ಯೋಗಾವಕಾಶ ಕಲ್ಪಿಸುವುದು ಈ ಉಪಕ್ರಮದ ಮುಖ್ಯ ಗುರಿಯಾಗಿದೆ. ಯಾವೆಲ್ಲಾ ಕ್ಷೇತ್ರಗಳಲ್ಲಿ ಅವಕಾಶ? ಈ ಉದ್ಯೋಗ ಮೇಳದಲ್ಲಿ ಐಟಿ (IT), ಭದ್ರತೆ (Security), ಆಡಳಿತ (Administration), ಲಾಜಿಸ್ಟಿಕ್ಸ್, ಆರೋಗ್ಯ ಸೇವೆ (Healthcare) ಮತ್ತು ಎಂಜಿನಿಯರಿಂಗ್ ಸೇರಿದಂತೆ ವಿವಿಧ ಕ್ಷೇತ್ರಗಳ ಖಾಸಗಿ ಕಂಪನಿಗಳು ಪಾಲ್ಗೊಳ್ಳಲಿವೆ. ಮೇಳದ ಪ್ರಮುಖ ವಿವರಗಳು ದಿನಾಂಕ ಮತ್ತು ಸಮಯ: ಫೆಬ್ರವರಿ 27,…

Read More

ಮಡಿಕೇರಿ, NEWS DESK ಫೆ.24:-ಲೋಕಸಭಾ ಸದಸ್ಯರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಫೆಬ್ರವರಿ, 25 ರಂದು ಮಧ್ಯಾಹ್ನ 12.30 ಗಂಟೆಗೆ ರಾಷ್ಟ್ರೀಯ ಹೆದ್ದಾರಿ-275 ರ ಸರಪಳಿ 78 ಕಿ.ಮೀ. ರಿಂದ 125 ಕಿ.ಮೀ ವರೆಗಿನ ಆಯ್ದ 21 ಭಾಗಗಳಲ್ಲಿ ನಿರ್ಮಿಸಲು ಉದ್ದೇಶಿಸಿರುವ ರಕ್ಷಣಾ ತಡೆಗೋಡೆಗಳ ಭೂಮಿ ಪೂಜೆ ನೆರವೇರಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Read More

ಮಡಿಕೇರಿ ಫೆ.24 : ಗುತ್ತಿಗೆದಾರರಿಗೆ ಪೂರ್ಣಗೊಳಿಸಿದ ಕಾಮಗಾರಿಗಳಿಗೆ ನೀಡಲು ಬಾಕಿ ಇರುವ ಹಣವನ್ನು ಸರಕಾರ ತಕ್ಷಣ ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿ ಮಾ.6ರಂದು ರಾಜ್ಯವ್ಯಾಪಿ ಕಾಮಗಾರಿ ಸ್ಥಗಿತಗೊಳಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಕೊಡಗು ಜಿಲ್ಲಾ ಲೋಕೋಪಯೋಗಿ ಗುತ್ತಿಗೆದಾರರ ಸಂಘ ತಿಳಿಸಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಗುತ್ತಿಗೆದಾರರ ಸಂಘದ ಜಿಲ್ಲಾಧ್ಯಕ್ಷ ಕಿಮ್ಮುಡಿರ ರವಿ ಚಂಗಪ್ಪ ಅವರು ರಾಜ್ಯ ಸರಕಾರ ಗುತ್ತಿಗೆದಾರರಿಗೆ ಸುಮಾರು 37 ಸಾವಿರ ಕೋಟಿ ರೂ.ಗಳನ್ನು ನೀಡಲು ಬಾಕಿ ಇದೆ. ಕೊಡಗು ಜಿಲ್ಲೆಯ ಗುತ್ತಿಗೆದಾರರಿಗೆ 195.26 ಕೋಟಿ ರೂ. ನೀಡಬೇಕಾಗಿದೆ. ಕಳೆದ ಮೂರು ವರ್ಷಗಳಿಂದ ಹಣ ನೀಡದೆ ಬಾಕಿ ಉಳಿಸಿಕೊಂಡಿದ್ದು, ಗುತ್ತಿಗೆದಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಆದ್ದರಿಂದ ಪ್ರತಿಭಟನೆಯ ನಿರ್ಧಾರ ಕೈಗೊಂಡಿದ್ದು, ಕೊಡಗು ಜಿಲ್ಲೆ ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲೆಗಳ ಗುತ್ತಿಗೆದಾರರು ಬೆಳಿಗ್ಗೆ 10ಗಂಟೆಗೆ ಹೋರಾಟದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದರು. ಕೊಡಗಿನಲ್ಲಿ ಕೈಗೊಂಡ ಮಳೆಹಾನಿ ಕಾಮಗಾರಿ 18 ಕೋಟಿ ರೂ., ಟಾಸ್ಕ್ ಫೋರ್ಸ್ 2.39 ಕೋಟಿ, ವಿಶೇಷ ಅನುದಾನದ ಕಾಮಗಾರಿ…

Read More

ಮಡಿಕೇರಿ, NEWS DESK ಫೆ.24:-ಕೇಂದ್ರ ಸರ್ಕಾರದ ಸವಲತ್ತುಗಳನ್ನು ಪಡೆಯಲು ಈಗಾಗಲೇ ರೈತರು ಇ-ಕೆವೈಸಿ ಯನ್ನು ಮಾಡಿಸಿ ಫ್ರೂಟ್ಸ್ ಐಡಿ ಮುಖಾಂತರ ಸವಲತ್ತುಗಳನ್ನು ಪಡೆಯುತ್ತಿರುತ್ತಾರೆ, ಆದರೆ ಈ ರೈತ ಬಾಂಧವರಿಗೆ ಕೇಂದ್ರ ಸರ್ಕಾರವು ಏಕೀಕೃತ ಫ್ರೂಟ್ಸ್ ಐಡಿ ಗಳನ್ನು ಸೃಜನೆ ಮಾಡುತ್ತಿದ್ದು ಸದರಿ ಫ್ರೂಟ್ಸ್ ಐಡಿ ಗಳನ್ನು ಕೇಂದ್ರ ಸರ್ಕಾರದ ಆ್ಯಪ್‍ನೊಂದಿಗೆ ಹೊಂದಾಣಿಕೆ ಮಾಡಲಾಗುವುದು. ಆದ್ದರಿಂದ ರೈತರು ತಮ್ಮ ಹೆಸರಿಗಿರುವ ಎಲ್ಲಾ ಸರ್ವೆ ನಂಬರ್‍ವಾರು ವಿಸ್ತೀರ್ಣದ ಮಾಹಿತಿಯನ್ನು ಫ್ರೂಟ್ಸ್ ಐಡಿ ಯಲ್ಲಿ ಸೇರಿಸುವುದು. ಫ್ರೂಟ್ಸ್ ಐಡಿ ಸೃಜಿಸುವ ಸಂಬಂದ ರೈತರು ಡಿಜಿಟಲ್ ಕನ್‍ಸೆಂಟ್ ನೀಡಬೇಕಾಗಿದ್ದು ತಮ್ಮ ಮೊಬೈಲ್‍ಗೆ ಬರುವ ಒಟಿಪಿ ಯನ್ನು ರೈತ ಸಂಪರ್ಕ ಕೇಂದ್ರ, ತೋಟಕಾರಿಕೆ, ಪಶು ಸಂಗೋಪನ ಇಲಾಖೆ ಹಾಗೂ ಗ್ರಾಮ ಒನ್ ಕೇಂದ್ರದ ಕಚೇರಿಗಳಿಗೆ ಭೇಟಿ ನೀಡಿ ನೊಂದಾಯಿಸಿಕೊಳ್ಳಬಹುದಾಗಿದೆ. ಫ್ರೂಟ್ಸ್ ಐಡಿ ಇಲ್ಲದ ರೈತರು ನಿಮ್ಮ ಹೆಸರಿಗೆ ಇರುವ ಎಲ್ಲಾ ಜಮೀನಿನ ಪಹಣೀಯೋಂದಿಗೆ ಬ್ಯಾಂಕ್ ಖಾತೆ ಸಂಖ್ಯೆ, ಐಎಫ್‍ಎಸ್‍ಸಿ ಸಂಖ್ಯೆ ಮತ್ತು ಆಧಾರ್ ಲಿಂಕ್ ಇರುವ ಮೊಬೈಲ್ ನೊಂದಿಗೆ…

Read More

ಮಡಿಕೇರಿ, NEWS DESK ಫೆ.24 : ಮಡಿಕೇರಿ ನಗರದ ಜ್ಯೋತಿ ನಗರ ಬಡಾವಣೆಯ ಶ್ರೀ ವನಚಾಮುಂಡೇಶ್ವರಿ ಕ್ಷೇತ್ರದಲ್ಲಿ ಫೆ.26 ಮತ್ತು 27ರಂದು ಬಹ್ಮಕಳಶ ಅಷ್ಟಬಂಧ ಪುನರ್ ಪ್ರತಿಷ್ಠಾಪನಾ ಮಹೋತ್ಸವ ನಡೆಯಲಿದೆ. ಈ ಕುರಿತು ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ದೇವಾಲಯದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಟಿ.ಕೆ.ಸುಧೀರ್ ಜ್ಯೋತಿನಗರದಲ್ಲಿ ಸುಮಾರು 426 ವರ್ಷಗಳಿಂದ ಶ್ರೀ ವನಚಾಮುಂಡೇಶ್ವರಿಯ ಆರಾಧನೆ ನಡೆಯುತ್ತಿದೆ. ತಂತ್ರಿ ಬ್ರಹ್ಮಶ್ರಿ ಶ್ರೀಕಾಂತ್ ಭಟ್ಟತಿರಿ ಚಾಲೋಡ್ ಅವರ ನೇತೃತ್ವದಲ್ಲಿ ಬ್ರಹ್ಮಕಳಶ ಅಷ್ಟಬಂಧ ಪುನರ್ ಪ್ರತಿಷ್ಠಾಪನಾ ಮಹೋತ್ಸವದ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಲಿವೆ ಎಂದರು. ಫೆ.26ರಂದು ಸಂಜೆ 4ಗಂಟೆಗೆ ನಗರದ ಗಾಂಧಿ ಮೈದಾನದಿಂದ ದೇವಾಲಯದವರೆಗೆ ದೀಪಾಲಂಕೃತ ಮಂಟಪದಲ್ಲಿ ಭವ್ಯ ಕಳಸ ಮೆರವಣಿಗೆ ಸಾಗಲಿದೆ. ಚಿಂಗಾರಿಮೇಳ ಮತ್ತು ಮಂಗಳೂರಿನ ಭಜನಾ ಕುಣಿತ ತಂಡಗಳು ಮೆರಗು ನೀಡಲಿವೆ. ಮಹಿಳೆಯರು ಹಾಗೂ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಅಂದು ಸಂಜೆ 7 ಗಂಟೆಗೆ ಸಾಮೂಹಿಕ ಪ್ರಾರ್ಥನೆ, 7.15 ರಿಂದ ಆಚಾರ್ಯಾವರಣ, ಗಣಪತಿ ಪೂಜೆ, ಪ್ರಸಾದ ಶುದ್ಧಿ, ವಾಸ್ತುಬಲಿ, ಭಗವತಿ…

Read More

ಮಡಿಕೇರಿ, NEWS DESK ಫೆ.24 : ಮಡಿಕೇರಿ ಪ್ರವಾಸಿ ವಾಹನಗಳು ಯಾವುದೇ ನಿಯಮಗಳನ್ನು ಉಲ್ಲಂಘಿಸಿಲ್ಲ ಮತ್ತು ಪ್ರವಾಸಿಗರಿಂದ ಅಧಿಕ ದರ ಪಡೆಯುತ್ತಿಲ್ಲವೆಂದು ಮಡಿಕೇರಿ ಪ್ರವಾಸಿ ವಾಹನ ಮಾಲೀಕ ಚಾಲಕರ ಸಂಘ ಸ್ಪಷ್ಟಪಡಿಸಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ಸಂತು ಕಾರ್ಯಪ್ಪ ವಿನಾಕಾರಣ ಕೆಲವರು ಪ್ರವಾಸಿ ವಾಹನಗಳ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ತಪ್ಪು ಮಾಹಿತಿ ರವಾನಿಸುತ್ತಿದ್ದು, ಇದು ಖಂಡನೀಯ ಎಂದರು. ಜೀಪ್ ಚಾಲಕರ ಸಂಘ ಮತ್ತು ಆಟೋ ಚಾಲಕರ ಸಂಘದ ಪ್ರಮುಖರೆನಿಸಿಕೊಂಡವರು ಪ್ರವಾಸಿ ವಾಹನಗಳ ವಿರುದ್ಧ ಸುಳ್ಳು ಆರೋಪ ಮಾಡಿದ್ದಾರೆ. ಪ್ರವಾಸಿ ವಾಹನಗಳು ನಿಗಧಿತ ದರವನ್ನು ಮಾತ್ರ ಪ್ರವಾಸಿಗರಿಂದ ಪಡೆಯುತ್ತಿದ್ದು, ಅಧಿಕ ದರ ವಸೂಲಿ ಮಾಡುತ್ತಿಲ್ಲ. ಕೆಲವು ಜೀಪು ಚಾಲಕರು ಹಾಗೂ ಆಟೋ ಚಾಲಕರು ನಿಯಮ ಉಲ್ಲಂಘಿಸಿದಾಗ ಆಯಾ ಸಂಘಗಳ ಅಧ್ಯಕ್ಷರುಗಳು ಏನು ಕ್ರಮ ಕೈಗೊಂಡಿದ್ದಾರೆ ಎಂದು ಪ್ರಶ್ನಿಸಿದರು. ಜಿಲ್ಲೆಯ ಪ್ರವಾಸೋದ್ಯಮದ ಬೆಳವಣಿಗೆಗೆ ಪ್ರವಾಸಿ ವಾಹನಗಳು ತಮ್ಮದೇ ಆದ ಕೊಡುಗೆಯನ್ನು ನೀಡುತ್ತಾ ಬಂದಿದ್ದಾರೆ ಎಂದು ತಿಳಿಸಿದರು. *ಬೇಡಿಕೆ* ಜಿಲ್ಲೆಯ ವಿವಿಧ ಪ್ರವಾಸಿತಾಣಗಳಿಗೆ…

Read More

ಬೆಂಗಳೂರು, ಫೆಬ್ರವರಿ 24, 2026: ಭಾರತೀಯ ಭೂಸೇನೆಯು 2027ನೇ ಸಾಲಿನ ‘ಅಗ್ನಿಪಥ್’ ಯೋಜನೆಯಡಿ ಅಗ್ನಿವೀರ್ ಹುದ್ದೆಗಳ ನೇಮಕಾತಿಗಾಗಿ ಸಾಮಾನ್ಯ ಪ್ರವೇಶ ಪರೀಕ್ಷೆಗೆ (CEE) ಆನ್‌ಲೈನ್ ನೋಂದಣಿ ಪ್ರಕ್ರಿಯೆಯನ್ನು ಆರಂಭಿಸಿದೆ. ಕರ್ನಾಟಕದ ಎಲ್ಲಾ ಜಿಲ್ಲೆಗಳ ಅರ್ಹ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಈ ನೇಮಕಾತಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಯ ವೇಳಾಪಟ್ಟಿ ನೋಂದಣಿ ಪ್ರಾರಂಭ: 13 ಫೆಬ್ರವರಿ 2026 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 01 ಏಪ್ರಿಲ್ 2026 ನೇಮಕಾತಿ ನಡೆಯಲಿರುವ ಹುದ್ದೆಗಳ ವರ್ಗಗಳು ಈ ಕೆಳಗಿನ ವಿವಿಧ ವಿಭಾಗಗಳಲ್ಲಿ ಅಗ್ನಿವೀರ್ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ: ಅಗ್ನಿವೀರ್ ಜನರಲ್ ಡ್ಯೂಟಿ (GD) ಅಗ್ನಿವೀರ್ ಟೆಕ್ನಿಕಲ್ ಅಗ್ನಿವೀರ್ ಆಫೀಸ್ ಅಸಿಸ್ಟೆಂಟ್/ಸ್ಟೋರ್ ಕೀಪರ್ ಟೆಕ್ನಿಕಲ್ ಅಗ್ನಿವೀರ್ ಟ್ರೇಡ್ಸ್‌ಮನ್ (10ನೇ ತರಗತಿ ಪಾಸಾದವರಿಗೆ) ಅಗ್ನಿವೀರ್ ಟ್ರೇಡ್ಸ್‌ಮನ್ (8ನೇ ತರಗತಿ ಪಾಸಾದವರಿಗೆ) ಅಗ್ನಿವೀರ್ ಜನರಲ್ ಡ್ಯೂಟಿ (ಮಹಿಳಾ ಮಿಲಿಟರಿ ಪೊಲೀಸ್) ನರ್ಸಿಂಗ್ ಅಸಿಸ್ಟೆಂಟ್ ಮತ್ತು ನರ್ಸಿಂಗ್ ಅಸಿಸ್ಟೆಂಟ್ ವೆಟರ್ನರಿ ಸಿಪಾಯಿ ಫಾರ್ಮಾ ಅರ್ಹತೆ ಮತ್ತು ಹೆಚ್ಚಿನ ಮಾಹಿತಿ ವಯೋಮಿತಿ,…

Read More

*ಮಂಜಿನ ನಗರಿ ಮಡಿಕೇರಿಯ ಹೃದಯ ಭಾಗದಲ್ಲಿ SANEE GRACE : ನಿಮಗಿದು ಸುವರ್ಣಾವಕಾಶ >>> READY TO MOVE LUXURY FLAT FIRST TIME IN MADIKERI >>> BOOK & RENT TO US SCHEME >>> BYE A FLAT & GET ASSURED RENTAL INCOME* FLATS AVAILABLE : 1 BHK : 2 BHK : 3 BHK >>> ABBEY FALLS ROAD, BHAGAVATHI NAGAR, MADIKERI. 571201 >>> MORE INFORMATION CALL US : 9448549141, 9167790888, 9945779353

Read More

ರಾಂಚಿ, ಫೆಬ್ರವರಿ 24: ಒಂದು ಜೀವವನ್ನು ಉಳಿಸಲು ಸಾಲಸೋಲ ಮಾಡಿ ಲಕ್ಷಾಂತರ ರೂಪಾಯಿ ತೆತ್ತು ಹಾರಿದ ಏರ್ ಆಂಬ್ಯುಲೆನ್ಸ್ ವಿಧಿಯ ಅಟ್ಟಹಾಸಕ್ಕೆ ಬಲಿಯಾಗಿದೆ. ಜಾರ್ಖಂಡ್‌ನ ರಾಂಚಿಯಿಂದ ದೆಹಲಿಗೆ ಹೊರಟಿದ್ದ ರೆಡ್‌ಬರ್ಡ್ ಏರ್‌ವೇಸ್‌ನ ಏರ್ ಆಂಬ್ಯುಲೆನ್ಸ್ ಪತನಗೊಂಡಿದ್ದು, ವಿಮಾನದಲ್ಲಿದ್ದ ಏಳೂ ಮಂದಿ ಮೃತಪಟ್ಟಿದ್ದಾರೆ. ಒಂದು ಉಸಿರು ಉಳಿಸಲು ಹೋದ ಪ್ರಯತ್ನದಲ್ಲಿ ಏಳು ಪ್ರಾಣಗಳು ಮಸಣ ಸೇರಿದ ಈ ಘಟನೆ ಇಡೀ ದೇಶವನ್ನೇ ಬೆಚ್ಚಿಬೀಳಿಸಿದೆ. ದುರಂತ ಸಂಭವಿಸಿದ್ದು ಹೇಗೆ? ರಾಂಚಿಯ ಹೋಟೆಲ್ ಒಂದರಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಶೇ.65 ರಷ್ಟು ಸುಟ್ಟುಹೋಗಿದ್ದ ಸಂಜಯ್ ಶಾ ಎಂಬುವವರನ್ನು ಹೆಚ್ಚಿನ ಚಿಕಿತ್ಸೆಗಾಗಿ ದೆಹಲಿಯ ಶ್ರೀ ಗಂಗಾ ರಾಮ್ ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿತ್ತು. ರೆಡ್‌ಬರ್ಡ್ ಏರ್‌ವೇಸ್‌ನ ಬೀಚ್‌ಕ್ರಾಫ್ಟ್ ಸಿ90 ವಿಮಾನವು ಸಂಜೆ 7.11 ಕ್ಕೆ ರಾಂಚಿಯಿಂದ ಟೇಕಾಫ್ ಆಗಿತ್ತು. ಆದರೆ, ಹಾರಾಟ ನಡೆಸಿದ ಕೇವಲ 20 ನಿಮಿಷಗಳಲ್ಲೇ ವಾಯು ಸಂಚಾರ ನಿಯಂತ್ರಣದೊಂದಿಗೆ (ATC) ಸಂಪರ್ಕ ಕಳೆದುಕೊಂಡ ವಿಮಾನವು, ಹವಾಮಾನ ವೈಪರೀತ್ಯದಿಂದಾಗಿ ಚತ್ರಾ ಜಿಲ್ಲೆಯ ದಟ್ಟ ಅರಣ್ಯ ಪ್ರದೇಶದಲ್ಲಿ ಪತನಗೊಂಡಿದೆ. ಮೃತಪಟ್ಟವರ…

Read More

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರು ಮತ್ತು ಪ್ರವಾಸಿಗರ ಸ್ವರ್ಗ ಗೋವಾ ನಡುವೆ ವೇಗದ ಸಂಪರ್ಕ ಕಲ್ಪಿಸುವ ದಿಸೆಯಲ್ಲಿ ನೈಋತ್ಯ ರೈಲ್ವೆಯು ‘ವಂದೇ ಭಾರತ್ ಎಕ್ಸ್‌ಪ್ರೆಸ್’ ರೈಲಿನ ಪ್ರಸ್ತಾವನೆಯನ್ನು ಸಿದ್ಧಪಡಿಸಿದೆ. ಈ ಯೋಜನೆಗೆ ರೈಲ್ವೆ ಮಂಡಳಿಯಿಂದ ಅಂತಿಮ ಅನುಮೋದನೆ ಸಿಕ್ಕರೆ, ಗೋವಾ ಕಡಲತೀರಕ್ಕೆ ತೆರಳುವ ಪ್ರವಾಸಿಗರಿಗೆ ಇದೊಂದು ದೊಡ್ಡ ಕೊಡುಗೆಯಾಗಲಿದೆ. ವಾರದಲ್ಲಿ 6 ದಿನ ಸಂಚಾರ; 12 ಗಂಟೆಗಳ ಪಯಣ ಪ್ರಸ್ತುತ ಬೆಂಗಳೂರಿನಿಂದ ಗೋವಾಕ್ಕೆ ಸಂಚರಿಸುವ ವಾಸ್ಕೋ ಡಿ ಗಾಮಾ ಎಕ್ಸ್‌ಪ್ರೆಸ್ ಸುಮಾರು 15 ಗಂಟೆಗಳನ್ನು ತೆಗೆದುಕೊಳ್ಳುತ್ತಿದೆ. ಆದರೆ, ವಂದೇ ಭಾರತ್ ರೈಲು ಈ 700 ಕಿಲೋಮೀಟರ್ ದೂರವನ್ನು ಸುಮಾರು 12 ರಿಂದ 12:05 ಗಂಟೆಗಳಲ್ಲಿ ಕ್ರಮಿಸುವ ನಿರೀಕ್ಷೆ ಇದೆ. ಇದು ವಾರದಲ್ಲಿ ಆರು ದಿನಗಳ ಕಾಲ ಸಂಚರಿಸುವ ಸಾಧ್ಯತೆಯಿದೆ. ಘಾಟ್ ಪ್ರದೇಶದಲ್ಲಿ ವೇಗಕ್ಕೆ ಮಿತಿ ವಂದೇ ಭಾರತ್ ರೈಲು 160 ಕಿ.ಮೀ ಗಿಂತಲೂ ಹೆಚ್ಚು ವೇಗವಾಗಿ ಸಂಚರಿಸುವ ಸಾಮರ್ಥ್ಯ ಹೊಂದಿದ್ದರೂ, ಈ ಮಾರ್ಗದಲ್ಲಿ ಅಷ್ಟು ವೇಗವಾಗಿ ಚಲಿಸಲು ಸಾಧ್ಯವಿಲ್ಲ. ಕೊಂಕಣ ಭಾಗದ…

Read More