ಮಡಿಕೇರಿ ಜೂ.6 NEWS DESK : ಭಾರತ ಚುನಾವಣಾ ಆಯೋಗವು ದಿನಾಂಕ:14-05-2026ರ ಪತ್ರಿಕಾ ಪ್ರಕಟಣೆಯ ಮೂಲಕ ಕರ್ನಾಟಕ ರಾಜ್ಯದಲ್ಲಿ ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ (Special Intensive Revision) ಕಾರ್ಯ ಕೈಗೊಳ್ಳಲು ಕಾರ್ಯಕ್ರಮ ವೇಳಾಪಟ್ಟಿ ಹೊರಡಿಸಿದ್ದು, ಈ ಕಾರ್ಯಕ್ರಮಕ್ಕೆ ಎಲ್ಲರೂ ಕೈಜೋಡಿಸುವಂತೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಕೋರಿದ್ದಾರೆ. ಭಾರತ ಚುನಾವಣಾ ಆಯೋಗವು ವಿಶೇಷ ಸಮಗ್ರ ಪರಿಷ್ಕರಣೆಗೆ ಅರ್ಹತಾ ದಿನಾಂಕ 2026 ಅಕ್ಟೋಬರ್ 1 ನ್ನು ಘೋಷಿಸಿದ್ದು, ಜೂ.20 ರಿಂದ 29ರ ವರೆಗೆ ಪೂರ್ವತಯಾರಿ, ತರಬೇತಿ ಮತ್ತು ಮುದ್ರಣಕ್ಕೆ ಅವಕಾಶ ಕಲ್ಪಿಸಿದೆ. ಜೂ.30 ರಿಂದ ಜು.29ರ ವರೆಗೆ ಮತಗಟ್ಟೆ ಅಧಿಕಾರಿಯಿಂದ ಮನೆಮನೆ ಭೇಟಿ ಹಾಗೂ ಮತಗಟ್ಟೆಗಳ ಪುನರ್ ವಿಂಗಡಣೆ ಕಾರ್ಯ, ಆಗಸ್ಟ್, 5 ರಂದು ಕರಡು ಮತದಾರರ ಪಟ್ಟಿ ಪ್ರಕಟಗೊಳ್ಳಲಿದೆ. ಆ.5 ರಿಂದ ಸೆ.4ರ ವರೆಗೆ ಹಕ್ಕು ಮತ್ತು ಆಕ್ಷೇಪಗಳನ್ನು ಸಲ್ಲಿಸಲು ಅವಕಾಶ ಕಲ್ಪಿಸಿದೆ. ಜೊತೆಗೆ ಆ.5 ರಿಂದ ಅಕ್ಟೋಬರ್, 3 ರವರೆಗೆ ಸೂಚನೆ ಹಂತ/ ಹಕ್ಕು ಮತ್ತು ಆಕ್ಷೇಪಣೆಗಳ ವಿಲೇವಾರಿ…
ಲೇಖಕ: admin
ಮಡಿಕೇರಿ ಜೂ.6 NEWS DESK : ಕರ್ನಾಟಕ ರಾಜ್ಯ ಸರ್ಕಾರ ಬಡವರ ಪರವಾಗಿದ್ದು, ಸಮಾಜದ ಕಟ್ಟ ಕಡೆಯ ವ್ಯಕ್ತಿಯು ಗೌರವಯುತವಾಗಿ ಬಾಳ್ವೆ ನಡೆಸಲು ಬೇಕಾದ ಎಲ್ಲಾ ಸವಲತ್ತುಗಳನ್ನು ಆದ್ಯತೆ ಮೇರೆಗೆ ಒದಗಿಸುತ್ತಾ ಬಂದಿದೆ ಎಂದು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ಹೇಳಿದರು. ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ವಿರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಡಿಕೇರಿ ತಾಲ್ಲೂಕು 18 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬಸವ ಮತ್ತು ಅಂಬೇಡ್ಕರ್ ವಸತಿ ಯೋಜನೆಯಡಿಯಲ್ಲಿ ಆಯ್ಕೆ ಆಗಿರುವ ಅರ್ಹ ಫಲಾನುಭವಿಗಳಿಗೆ ನೂತನ ಮನೆ ನಿರ್ಮಾಣ ಕಾಮಗಾರಿ ಆದೇಶ ಪ್ರತಿ ವಿತರಣಾ ಕಾರ್ಯಕ್ರಮದಲ್ಲಿ ಸುಮಾರು 400 ಕ್ಕೂ ಅಧಿಕ ಫಲಾನುಭವಿಗಳಿಗೆ ಆದೇಶ ಪತ್ರವನ್ನು ವಿತರಿಸಿ ಮಾತನಾಡಿದರು. ನಿವೇಶನ ಮತ್ತು ವಸತಿ ರಹಿತರಿಗೆ ವಸತಿ ನೀಡುವುದು ಸರ್ಕಾರದ ಕರ್ತವ್ಯ. ಹಲವು ವರ್ಷಗಳಿಂದ ಸರ್ಕಾರದಿಂದ ಮನೆ ನಿರ್ಮಿಸಬೇಕು, ನಿವೇಶನ ರಹಿತರು, ವಸತಿ ರಹಿತರಿಗೆ ಆದ್ಯತೆ ಮೇರೆಗೆ ಸ್ವಂತ ಸೂರು ಕಲ್ಪಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ, ಹಲವಾರು ಜನಪರ…
ಮಡಿಕೇರಿ NEWS DESK ಜೂ.6 : ಸಹಕಾರ ಕ್ಷೇತ್ರ ರೈತರ ಬೆನ್ನುಲುಬಾಗಿದ್ದು, ಇಂತಹ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳು ತಮ್ಮ ಕೆಲಸವನ್ನು ದೇಶ ಸೇವೆ ಎಂದು ಅರಿತುಕೊಂಡು ತೃಪ್ತಿದಾಯಕವಾಗಿ ಕರ್ತವ್ಯ ನಿರ್ವಹಿಸಬೇಕು ಎಂದು ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಪಿ.ಯು.ರಾಬಿನ್ ದೇವಯ್ಯ ಕರೆ ನೀಡಿದರು. ಕರ್ನಾಟಕ ರಾಜ್ಯ ಸಹಕಾರ ಮಾಹಾ ಮಂಡಳ ಬೆಂಗಳೂರು, ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಇವರ ಸಂಯುಕ್ತ ಆಶ್ರಯದಲ್ಲಿ ಜಿಲ್ಲೆಯ ಪ್ಯಾಕ್ಸ್, ಪಿಕಾರ್ಡ್ ಬ್ಯಾಂಕ್, ಎಪಿಸಿಎಂಎಸ್, ಜೇನು ಸಹಕಾರ ಸಂಘ, ಪತ್ತಿನ ಹಾಗೂ ಮಾರಾಟ ಸಹಕಾರ ಸಂಘಗಳ ಲೆಕ್ಕಿಗರು, ಸಹಾಯಕ ಸಿಬ್ಬಂದಿಗಳಿಗೆ ಜಿಎಸ್ಟಿ ಮತ್ತು ಆದಾಯ ತೆರಿಗೆ ಕುರಿತು ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಸಭಾಂಗಣದಲ್ಲಿ ಶಿಕ್ಷಣ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸಿ ಉದ್ಘಾಟಿಸಿ ಮಾತನಾಡಿದ ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಪಿಯು.ರಾಬಿನ್ ದೇವಯ್ಯ, ಮೊಟ್ಟ ಮೊದಲು ಗದಗ ಜಿಲ್ಲೆಯಲ್ಲಿ ಆರಂಭ ಕಂಡ ಸಹಕಾರ ಕ್ಷೇತ್ರ ಇಂದು ಬೃಹತ್ತಾಗಿ ಬೆಳೆದಿದ್ದು, ದೇಶ ವ್ಯಾಪಿ…
ಮಡಿಕೇರಿ NEWS DESK ಜೂ.6 : ನಗರದ ಐಟಿಐ ಸಮೀಪ ನಿರ್ಮಾಣಗೊಳ್ಳಲಿರುವ ಅಮ್ಮ ಕೊಡವ ಸಮಾಜದ ಕಾಮಗಾರಿಗೆ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರು ಭೂಮಿಪೂಜೆ ನೆರವೇರಿಸಿದರು. ಎಲ್ಲಾ ಸಮುದಾಯಗಳ ಪ್ರಗತಿಗೆ ಸರಕಾರ ಬದ್ಧವಾಗಿದೆ. ಗುಣಮಟ್ಟದ ಕಾಮಗಾರಿ ಶೀಘ್ರ ಪೂರ್ಣಗೊಳ್ಳಲಿದೆ ಎಂದು ಶಾಸಕರು ತಿಳಿಸಿದರು. ಅಮ್ಮ ಕೊಡವ ಸಮಾಜದ ಮಾಚಮಂಡ ಬಿ.ಮಾದಮ್ಮಯ್ಯ, ಗೌರಮ್ಮ ಮಾದಮ್ಮಯ್ಯ, ನಾರಿಮಂಡ ಬಿ.ಪಾಲಾಕ್ಷ, ರೇವತಿ ಪಾಲಾಕ್ಷ, ಕೊಂಡಿಯಮ್ಮಂಡ ಕಿಶೋರ್ ಕುಮಾರ್, ಇಂದಿರಾ ಕಿಶೋರ್ ಕುಮಾರ್, ನೆರಿಯಂಡಮ್ಮನ ಜನಾರ್ಧನ ಹಾಗೂ ಸಮಿತಿಯ ಸದಸ್ಯರು, ಮಡಿಕೇರಿ ನಗರ ಕಾಂಗ್ರೆಸ್ ಅಧ್ಯಕ್ಷ ಪ್ರಕಾಶ್ ಆಚಾರ್ಯ, ಮಹಿಳಾ ಕಾಂಗ್ರೆಸ್ ನಗರ ಅಧ್ಯಕ್ಷೆ ಶಶಿಕಲಾ, ಬ್ಲಾಕ್ ಅಧ್ಯಕ್ಷ ಹೆಚ್.ಎ.ಹಂಸ, ಪ್ರಮುಖರಾದ ವಿ.ಜಿ.ಮೋಹನ್, ಹರಿಪ್ರಸಾದ್, ಯಶ್, ಪವಿತ್ರ, ಲೀಲಾ ಶೇಷಮ್ಮ, ಸೂರಿ, ಸುಬ್ರಮಣಿ, ವಸಂತ ಭಟ್, ಹಬೀಬ್, ಶರಣು, ಮಂಜುನಾಥ್, ಕೋಚನ ಚೇತನ್ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ವಿರಾಜಪೇಟೆ ಜೂ.5 NEWS DESK : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ವಿರಾಜಪೇಟೆ ವಲಯದ ಹೆಗ್ಗಳ ಕಾರ್ಯಕ್ಷೇತ್ರದ ನಂದಾದೀಪ ಹಾಗೂ ಧರ್ಮಶಾಸ್ತ್ರ ಸಂಘದ 16ನೇ ವರ್ಷದ ವಾರ್ಷಿಕೋತ್ಸವವನ್ನು ಬೇಟೋಳಿಯಲ್ಲಿರುವ ಶ್ರೀ ಶಕ್ತಿ ವೃದ್ಧಾಶ್ರಮದಲ್ಲಿ ಆಚರಿಸಲಾಯಿತು. ವಾರ್ಷಿಕೋತ್ಸವದ ಪ್ರಯುಕ್ತ ಶ್ರೀ ಶಕ್ತಿ ವೃದ್ಧಾಶ್ರಮದ 25 ವೃದ್ಧರಿಗೆ ಒಂದು ವಾರಕ್ಕೆ ಬೇಕಾದ ಅಕ್ಕಿ, ದಿನಸಿ ಸಾಮಾಗ್ರಿಗಳನ್ನು ವಿತರಣೆ ಮಾಡುವ ಮುಖಾಂತರ ಒಕ್ಕೂಟದ ಸದಸ್ಯರು ಮಾನವೀಯ ಸೇವೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಒಕ್ಕೂಟ ಉಪಾಧ್ಯಕ್ಷರಾದ ಮಲ್ಲಿಗೆ, ಹೆಗ್ಗಳ ಕಾರ್ಯಕ್ಷೇತ್ರದ ಸೇವಾಪ್ರತಿನಿಧಿ ಶಿಲ್ಪಾ, ವಿರಾಜಪೇಟೆ ವಲಯದ ಮೇಲ್ವಿಚಾರಕರಾದ ಶಿವಕುಮಾರ್, ಸಂಘದ ಎಲ್ಲಾ ಸದಸ್ಯರು ಭಾಗವಹಿಸಿದರು.
ಮಡಿಕೇರಿ ಜೂ.5 NEWS DESK : ಶ್ರೀಮಂಗಲ 66/11 ಕೆ.ವಿ ವಿದ್ಯುತ್ ವಿತರಣಾ ಉಪ ಕೇಂದ್ರದಿಂದ ಹೊರಹೊಮ್ಮುವ ಎಫ್2-ಕುಟ್ಟ, ಫೀಡರ್ನಲ್ಲಿ ಜೂನ್, 06 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ತುರ್ತು ನಿರ್ವಹಣೆ ಕಾಮಗಾರಿಯನ್ನು ಕೈಗೆತ್ತಿಕೊಳ್ಳುತ್ತಿರುವುದರಿಂದ ಈ ಮಾರ್ಗದಿಂದ ವಿದ್ಯುತ್ ಸರಬರಾಜಾಗುವ ಕುಟ್ಟ, ನಾತಂಗಾಲ, ಸಿಂಕೋನ, ನಲ್ಲೂರು, ಮಂಚಳ್ಳಿ, ಕಾಯಿಮನೆ, ಕೆ.ಎಂ.ಕೊಲ್ಲಿ, ನಾಣಾಚಿ, ನಾಗರಹೊಳೆ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.
ಮಡಿಕೇರಿ ಜೂ.5 NEWS DESK : ಪ್ರತಿಯೊಬ್ಬರೂ ಪರಿಸರ ಸಂರಕ್ಷಣೆ ಕುರಿತು ಹೆಚ್ಚಿನ ಕಾಳಜಿ ವಹಿಸಬೇಕು, ಭವ್ಯ ಭವಿಷ್ಯದ ದೃಷ್ಟಿಯಿಂದ ಮುಂದಿನ ಪೀಳಿಗೆಗೆ ಉತ್ತಮ ಪರಿಸರವನ್ನು ಉಡುಗೊರೆಯಾಗಿ ನೀಡಬೇಕಾಗಿರುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶುಭ ಅವರು ಸಲಹೆ ನೀಡಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಪೊಲೀಸ್ ಇಲಾಖೆ, ಅರಣ್ಯ ಇಲಾಖೆ, ಜಿಲ್ಲಾ ನಗರಾಭಿವೃದ್ಧಿ ಕೋಶ, ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆ ಕೊಡಗು, ವಕೀಲರ ಸಂಘ ಮಡಿಕೇರಿ, ಸರ್ಕಾರಿ ಪದವಿ ಪೂರ್ವ ಕಾಲೇಜು, ಉದ್ದಿಮೆದಾರರು ಹಾಗೂ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಸಂಯುಕ್ತ ಆಶ್ರಯದಲ್ಲಿ “ಪ್ರಕೃತಿಯಿಂದ ಸ್ಪೂರ್ತಿ, ಹವಾಮಾನಕ್ಕಾಗಿ, ನಮ್ಮ ಭವಿಷ್ಯಕ್ಕಾಗಿ ಎಂಬ ಧ್ಯೇಯವಾಕ್ಯದೊಂದಿಗೆ ಶುಕ್ರವಾರ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಜಿಮ್ನಾಸ್ಟಿಕ್ ಸಭಾಂಗಣದಲ್ಲಿ ನಡೆದ ವಿಶ್ವ ಪರಿಸರ ದಿನಾಚರಣೆ…
ಮಡಿಕೇರಿ ಜೂ.5 NEWS DESK : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಸಂಬಂಧಿಸಿದಂತೆ ರಾಜಕೀಯ ಪಕ್ಷಗಳ ಮುಖಂಡರ ಜೊತೆ ಜಿಲ್ಲಾ ಚುನಾವಣಾಧಿಕಾರಿ ಮತ್ತು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇರ್ ಅವರು ಸಭೆ ನಡೆಸಿದರು. ನಗರದ ಜಿಲ್ಲಾಧಿಕಾರಿ ಅವರ ಕಚೇರಿಯಲಿ ನಡೆದ ಸಭೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆಯನ್ನು ಜಿಲ್ಲೆಯಲ್ಲಿ ವ್ಯವಸ್ಥಿತವಾಗಿ ಮತ್ತು ಪಾರದರ್ಶಕವಾಗಿ ಪೂರ್ಣಗೊಳಿಸಲು ಪಕ್ಷದ ಮುಖಂಡರುಗಳು ಸಹಕಾರ ನೀಡುವಂತೆ ಕೋರಿದರು. ಭಾರತ ಚುನಾವಣಾ ಆಯೋಗವು ವಿಶೇಷ ಸಮಗ್ರ ಪರಿಷ್ಕರಣೆಗೆ ಅರ್ಹತಾ ದಿನಾಂಕ 2026 ಅಕ್ಟೋಬರ್ 1 ನ್ನು ಘೋಷಿಸಿದ್ದು, ಜೂ.20 ರಿಂದ 29ರ ವರೆಗೆ ಪೂರ್ವತಯಾರಿ, ತರಬೇತಿ ಮತ್ತು ಮುದ್ರಣಕ್ಕೆ ಅವಕಾಶ ಕಲ್ಪಿಸಿದೆ. ಜೂ.30 ರಿಂದ ಜು.29ರ ವರೆಗೆ ಮತಗಟ್ಟೆ ಅಧಿಕಾರಿಯಿಂದ ಮನೆಮನೆ ಭೇಟಿ ಹಾಗೂ ಮತಗಟ್ಟೆಗಳ ಪುನರ್ ವಿಂಗಡಣೆ ಕಾರ್ಯ, ಆಗಸ್ಟ್, 5 ರಂದು ಕರಡು ಮತದಾರರ ಪಟ್ಟಿ ಪ್ರಕಟಗೊಳ್ಳಲಿದೆ. ಆ.5 ರಿಂದ ಸೆ.4ರ ವರೆಗೆ ಹಕ್ಕು ಮತ್ತು ಆಕ್ಷೇಪಗಳನ್ನು ಸಲ್ಲಿಸಲು ಅವಕಾಶ ಕಲ್ಪಿಸಿದೆ. ಜೊತೆಗೆ ಆ.5 ರಿಂದ ಅಕ್ಟೋಬರ್,…
ಕುಶಾಲನಗರ ಜೂ.5 NEWS DESK : ಕುಶಾಲನಗರ ತಾಲ್ಲೂಕಿನ ಕೂಡುಮಂಗಳೂರು(ಕೂಡ್ಲೂರು) ಸರ್ಕಾರಿ ಪ್ರೌಢಶಾಲೆಯಲ್ಲಿ ಅರಣ್ಯ ಇಲಾಖೆ, ಶಾಲೆಯ ಇಕೋ ಕ್ಲಬ್ ಹಾಗೂ ಭಾರತ್ ಸ್ಕೌಟ್ಸ್, ಗೈಡ್ಸ್ ಸಂಸ್ಥೆಯ ಕುಶಾಲನಗರ ಸ್ಥಳೀಯ ಸಂಸ್ಥೆಯ ವತಿಯಿಂದ ಎನ್.ಎಸ್.ಎಸ್., ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ ನ ಜಿಲ್ಲಾ ಸಂಘಟನೆ, ಎಸ್ ಡಿ ಎಂ ಸಿ. ಆಶ್ರಯದಲ್ಲಿ “ನಮ್ಮ ನಡೆ ಹಸಿರೆಡೆಗೆ” ದಡಿ ಶುಕ್ರವಾರ( ಜೂ.5 ರಂದು)ಪ್ರಕೃತಿಯಿಂದ ಪ್ರೇರಿತ, ಹವಾಮಾನಕ್ಕಾಗಿ, ನಮ್ಮ ಭವಿಷ್ಯಕ್ಕಾಗಿ’; ಎಂಬ ಘೋಷವಾಕ್ಯದೊಂದಿಗೆ ವಿಶ್ವ ಪರಿಸರ ದಿನಾಚರಣೆ: 2026 ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಪರಿಸರ ಕಾರ್ಯಕ್ರಮದಲ್ಲಿ ಶಾಲಾವರಣದಲ್ಲಿ ಅರಣ್ಯ ಗಿಡ ನೆಟ್ಟು ಪರಿಸರ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಭಾರತ್ ಸ್ಕೌಟ್ಸ್, ಗೈಡ್ಸ್ ಸಂಸ್ಥೆಯ ಕುಶಾಲನಗರ ಸ್ಥಳೀಯ ಸಂಸ್ಥೆಯ ಅಧ್ಯಕ್ಷ ಡಾ ಪ್ರವೀಣ್ ದೇವರಗುಂಡ ಸೋಮಪ್ಪ ಮಾತನಾಡಿ, ಪ್ರತಿಯೊಬ್ಬರೂ ಅರಣ್ಯ ಮತ್ತು ಪರಿಸರ ಸಂರಕ್ಷಣೆಗೆ ತೊಡಗಿದಾಗ ಮಾತ್ರ ಮುಂದಿನ ಪೀಳಿಗೆಗೆ ಉತ್ತಮ ಪರಿಸರ ನೀಡಲು ಸಾಧ್ಯವಾಗುತ್ತದೆ ಎಂದು ಹೇಳಿದರು. ಪರಿಸರಕ್ಕೆ ಧಕ್ಕೆ : ಪ್ರಸ್ತುತ ಜಗತ್ತಿನಲ್ಲಿ ಆಧುನಿಕತೆ,…
ಮಡಿಕೇರಿ ಜೂ.5 NEWS DESK : ಕೆದಮುಳ್ಳೂರು ಗ್ರಾಮದಲ್ಲಿ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ನೂತನವಾಗಿ ನಿರ್ಮಿಸಿರುವ 43 ಮನೆಗಳ ಬೀಗದ ಕೀ ಯನ್ನು ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ಆದಿವಾಸಿ ಯರವ ಮತ್ತಿತರ ಕುಟುಂಬಗಳಿಗೆ ನೀಡುವ ಮೂಲಕ ಹಸ್ತಾಂತರಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಕೆದಮುಳ್ಳೂರು ಗ್ರಾ.ಪಂ.ವ್ಯಾಪ್ತಿಯ ಸರ್ವೆ ನಂ.370/1 ರ 7.50 ಎಕರೆ ಜಾಗದ ಬಡಾವಣೆಯಲ್ಲಿ ನಿರ್ಮಿಸಿರುವ ಮನೆಗಳು ಹಾಗೂ ಮೂಲ ಸೌಕರ್ಯ ಕಾಮಗಾರಿ ಉದ್ಘಾಟಿಸಿ, ಶಾಸಕರು ಮಾತನಾಡಿದರು. ಪರಿಶಿಷ್ಟ ಪಂಗಡದ ಆದಿವಾಸಿ ಯರವ, ಜೇನುಕುರುಬ, ಬೆಟ್ಟಕುರುಬ ಸಮಾಜಗಳ ಮನೆ ನಿರ್ಮಾಣದ ಕಾಮಗಾರಿ ಯೋಜನೆ ಪೂರ್ಣಗೊಳಿಸುವಲ್ಲಿ ಹಲವು ಪ್ರಯತ್ನ ನಡೆದಿದೆ ಎಂದು ಹೇಳಿದರು. ಯೋಜನೆ ಅರ್ಧಕ್ಕೆ ಸ್ಥಗಿತಗೊಂಡಿತ್ತು, ಆ ನಿಟ್ಟಿನಲ್ಲಿ ಬೆಂಗಳೂರಿನ ನೀರು ಸರಬರಾಜು ವಿಭಾಗದಿಂದ ಸಿಎಸ್ಆರ್ ನಿಧಿಯಡಿ 1.60 ಲಕ್ಷ ರೂ. ಹೆಚ್ಚುವರಿ ಹಣ ಬಿಡುಗಡೆ ಮಾಡಿಸಿ ಮನೆ ಕಾಮಗಾರಿ ಪೂರ್ಣಗೊಳಿಸಲಾಗಿದೆ ಎಂದು ಎ.ಎಸ್.ಪೊನ್ನಣ್ಣ ಅವರು ತಿಳಿಸಿದರು. ಈ ಹಿಂದೆ ಮನೆ…






