ಲೇಖಕ: admin

ಸುಂಟಿಕೊಪ್ಪ, NEWS DESK ಸೆ. 7: ಯುವ ಜನಾಂಗದ ಯಶಸ್ವಿ ಬದುಕಿಗೆ ಪೂರಕವಾಗಿ ಉತ್ತಮ ನಾಯಕತ್ವ ಹಾಗೂ ವ್ಯಕ್ತಿತ್ವ ಬೆಳವಣಿಗೆಗೆ ಶ್ರಮಿಸುತ್ತಿರುವ 18ರಿಂದ 40 ವರ್ಷದ ಯುವಕರ ವಿಶ್ವದ ಅತಿದೊಡ್ಡ ಸಂಘಟನೆಯಾದ ಅಂತರರಾಷ್ಟ್ರೀಯ ಸ್ವಯಂಸೇವಾ ಸಂಸ್ಥೆ ಜೆಸಿಐ (ಜೂನಿಯರ್ ಚೇಂಬರ್ ಆಫ್ ಇಂಟರ್‌ನ್ಯಾಷನಲ್) ಸಂಸ್ಥೆಯು ಭಾರತ ದೇಶದಲ್ಲಿ ಉತ್ತಮ ತರಬೇತಿಗಳನ್ನು ನೀಡುತ್ತಾ ಯುವ ನೇತಾರರ ಸುಭದ್ರ ಭವಿಷ್ಯ ರೂಪಿಸುವ ದಿಸೆಯಲ್ಲಿ ವಿಶ್ವಮಟ್ಟದಲ್ಲಿ ಮೊದಲನೇ ಸ್ಥಾನವನ್ನು ಗಳಿಸಿದೆ ಎಂದು ಜೆಸಿಐ ಸಂಸ್ಥೆಯ ರಾಷ್ಟ್ರೀಯ ಅಧ್ಯಕ್ಷ ಆರ್.ಪಿ.ಪಿ. ಭರತ್ ಎನ್. ಆಚಾರ್ಯ ಭಾನುವಾರ ಹೇಳಿದರು. ಜೆಸಿಐ ವಲಯ 14ರ ವತಿಯಿಂದ ಕೊಡಗಿನ ಸುಂಟಿಕೊಪ್ಪ ಜೆಸಿಐ ಸಂಸ್ಥೆಯ ಆತಿಥ್ಯದಲ್ಲಿ ಸುಂಟಿಕೊಪ್ಪ ಹೋಬಳಿಯ ಏಳನೇ ಹೊಸಕೋಟೆ ಗ್ರಾಮದ ಸಬಾಸ್ಟಿನ್ ಸಮುದಾಯ ಸಭಾಂಗಣದಲ್ಲಿ ಭಾನುವಾರ ಅಭಿವೃದ್ಧಿ ಮತ್ತು ಬೆಳವಣಿಗೆ ಕುರಿತಂತೆ ಏರ್ಪಡಿಸಿದ್ದ ‘ಪ್ರಭಾತಾ ಅಭಿವೃದ್ಧಿಯ ಸಮ್ಮೇಳನ ಸಂಭ್ರಮ 2026’ವನ್ನು ಉದ್ಘಾಟಿಸಿ ಮಾತನಾಡಿದರು. ಇಂತಹ ಯುವ ಸಮ್ಮೇಳನಗಳು ಯುವ ನಾಯಕರ ಅಭಿವೃದ್ಧಿ ಹಾಗೂ ಸಂಸ್ಥೆಯ ಬೆಳವಣಿಗೆಗೆ ಪೂರಕವಾದ ಅತ್ಯಂತ ಮಹತ್ವದ…

Read More

ಮಡಿಕೇರಿ NEWS DESK ಸೆ.7 : ಶಿಕ್ಷಕರು ಕೇವಲ ಪಾಠ ಬೋಧಿಸುವವರಲ್ಲ, ರಾಷ್ಟ್ರ ನಿರ್ಮಾಣದ ಹಾಗೂ ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸುವ ಶಿಲ್ಪಿಗಳು ಎಂದು ಮಡಿಕೇರಿ ರೋಟರಿ ಅಧ್ಯಕ್ಷ ರೋಟೇರಿಯನ್ ಮನೋಹರ್ ಕಾಮತ್ ಅವರು ಬಣ್ಣಿಸಿದ್ದಾರೆ. ಮಡಿಕೇರಿ ರೋಟರಿ ವತಿಯಿಂದ ಶಿಕ್ಷಕರ ದಿನಾಚರಣೆ ಅಂಗವಾಗಿ ರೋಟರಿ ಸಭಾಂಗಣದಲ್ಲಿ ನಡೆದ ನ್ಯಾಷನಲ್ ಬಿಲ್ಡರ್ಸ್ ಅವಾರ್ಡ್ ಪ್ರದಾನ ಕಾರ್ಯಕ್ರಮದಲ್ಲಿ ಮಾತನಾಡಿದ ರೋ. ಮನೋಹರ್ ಕಾಮತ್ ಅವರು, ಶಿಕ್ಷಕರು ಸಮಾಜದ ದಾರಿದೀಪವಾಗಿದ್ದಾರೆ ಎಂದರು. ಭಾರತದ ಪ್ರಥಮ ಉಪರಾಷ್ಟ್ರಪತಿ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನವನ್ನು ಶಿಕ್ಷಕರ ದಿನಾಚರಣೆಯನ್ನಾಗಿ ಅರ್ಥಪೂರ್ಣವಾಗಿ ಆಚರಿಸಲಾಗುತ್ತಿದೆ. ಶಿಕ್ಷಣದ ಜೊತೆಗೆ ವಿದ್ಯಾರ್ಥಿಗಳಲ್ಲಿ ಮಾನವೀಯ ಮೌಲ್ಯಗಳು, ಶಿಸ್ತು ಮತ್ತು ಸಂಸ್ಕಾರಗಳನ್ನು ಬೆಳೆಸುವಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ ಎಂದು ತಿಳಿಸಿದರು. ರೋ. ಎಂ.ಜಿ. ಡಾ. ಎ.ಜಿ. ಪಾಟ್ಕರ್ ಅವರು ಮಾತನಾಡಿ, ನಮ್ಮ ಕಾಲದಲ್ಲಿ ಸೈಕಲ್‌ನಲ್ಲಿ ಶಾಲೆಗೆ ಹೋಗಿ ಶಿಕ್ಷಕರನ್ನು ಪೋಷಕರಂತೆ ಗೌರವಿಸಿ ಆತ್ಮೀಯತೆಯಿಂದ ಶಿಕ್ಷಣ ಪಡೆಯುತ್ತಿದ್ದೆವು. ಆದರೆ ಇಂದು ವಿಜ್ಞಾನ ಮತ್ತು ತಂತ್ರಜ್ಞಾನದ ಬೆಳವಣಿಗೆಯಿಂದ ಶಿಕ್ಷಣದ ಸ್ವರೂಪ ಬದಲಾಗಿದ್ದು, ಶಿಕ್ಷಕರ ಜವಾಬ್ದಾರಿ…

Read More

ಮಡಿಕೇರಿ NEWS DESK ಸೆ.6 : ಕೊಡಗು ಗೌಡ ಸಮಾಜಗಳ ಒಕ್ಕೂಟದ ವತಿಯಿಂದ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರಿಗೆ ಅಭಿನಂದನಾ ಸಮಾರಂಭ ನಡೆಯಿತು. ಮಡಿಕೇರಿಯ ಗೌಡ ಸಮಾಜದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಶಾಸಕರು ಮುಂದಿನ ದಿನಗಳಲ್ಲಿ ಗೌಡ ಸಮಾಜದ ಚಟುವಟಿಕೆಗಳಿಗೆ ಹಾಗೂ ಅಭಿವೃದ್ಧಿ ಕಾರ್ಯಗಳಿಗೆ ಅಗತ್ಯ ಸಹಕಾರ ನೀಡುವುದಾಗಿ ಭರವಸೆ ನೀಡಿದರು. ಒಗ್ಗಟ್ಟನಿಂದ ಮಾತ್ರ ಒಂದು ಸಮಾಜದ ಏಳಿಗೆ ಸಾಧ್ಯ, ಈ ಅಭಿನಂದನಾ ಸಮಾರಂಭ ನನ್ನ ಜವಾಬ್ದಾರಿಯನ್ನು ಮತ್ತಷ್ಟು ಹೆಚ್ಚಿಸಿದೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕೊಡಗು ಗೌಡ ಸಮಾಜಗಳ ಒಕ್ಕೂಟದ ಅಧ್ಯಕ್ಷ ಆನಂದ ಕರಂದ್ಲಾಜೆ ಅವರು ಗೌಡ ಸಮಾಜದ ಪ್ರಗತಿಗೆ ಶಾಸಕ ಡಾ.ಮಂತರ್ ಗೌಡ ಅವರು ನೀಡಿದ ಸಹಕಾರವನ್ನು ಸ್ಮರಿಸಿದರು. ಒಕ್ಕೂಟದ ಒಂದು ವರ್ಷದ ಸಾಧನೆಯ ಸಂಚಿಕೆ “ಆರೋಹಣ”ವನ್ನು ಬಿಡುಗಡೆಗೊಳಿಸಿ ವಿಧಾನಸಭೆಯ ಮಾಜಿ ಅಧ್ಯಕ್ಷ ಕೊಂಬಾರನ ಜಿ.ಬೋಪಯ್ಯ ಅವರು ಮಾತನಾಡಿದರು. ಕಾರ್ಯಕ್ರಮದಲ್ಲಿ ಒಕ್ಕೂಟದ ಉಪಾಧ್ಯಕ್ಷ ಡಾ.ತೇನನ ರಾಜೇಶ್, ಕಾರ್ಯದರ್ಶಿ ಪೇರಿಯನ ಕೆ.ಉದಯ,…

Read More

ಮಡಿಕೇರಿ NEWS DESK ಸೆ.6: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಕುರಿತು ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಮಾತುಗಳನ್ನಾಡಿ ಅವಮಾನಿಸಿರುವ ವ್ಯಕ್ತಿಯನ್ನು ತಕ್ಷಣ ಬಂಧಿಸಬೇಕೆಂದು ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿತ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಕೊಡಗು ಜಿಲ್ಲಾ ಸಂಚಾಲಕಿ ಗಾಯತ್ರಿ ನರಸಿಂಹ ಆಗ್ರಹಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು ದೇಶದ ಸಂವಿಧಾನಕ್ಕೆ ಗೌರವ ನೀಡದ ವ್ಯಕ್ತಿಯೊಬ್ಬ ಸಂವಿಧಾನ ರಚನೆಯಲ್ಲಿ ಮಹತ್ವದ ಪಾತ್ರ ವಹಿಸಿದ ಮಹಾನ್ ನಾಯಕ ಡಾ.ಬಿ.ಆರ್.ಅಂಬೇಡ್ಕರ್ ಅವರ ಕುರಿತು ವಿಡಿಯೋ ಮೂಲಕ ಅಗೌರವದ ಮಾತುಗಳನ್ನಾಡಿದ್ದಾನೆ. ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಹೇಳಿಕೆಗಳನ್ನು ನೀಡಿರುವುದು ಖಂಡನೀಯ. ಇಂತಹ ಕೃತ್ಯಗಳು ಸಮಾಜದಲ್ಲಿ ಅಶಾಂತಿಗೆ ಕಾರಣವಾಗುವ ಸಾಧ್ಯತೆ ಇದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಡಾ.ಅಂಬೇಡ್ಕರ್ ಅವರ ವಿರುದ್ಧ ಕೀಳುಮಟ್ಟದ ಭಾಷೆ ಬಳಸಲಾಗಿದೆ. ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಗೆ ವಿಶೇಷ ಶಕ್ತಿ ತುಂಬಿರುವ ಡಾ.ಅಂಬೇಡ್ಕರ್ ಅವರು ರಚಿಸಿರುವ ಸಂವಿಧಾನದಲ್ಲಿ ಉಲ್ಲೇಖಿಸಿರುವ ಮೀಸಲಾತಿಯ ಅಂಶಗಳನ್ನು ಟೀಕಿಸಿರುವುದಲ್ಲದೆ, ಅಂಬೇಡ್ಕರ್ ಅವರ ಬೆಂಬಲಿಗರನ್ನು ಅವಮಾನಿಸಲಾಗಿದೆ. ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಂಡು ಮಹನೀಯರನ್ನು ಅವಮಾನಿಸುವ ಹಾಗೂ…

Read More

ಮಡಿಕೇರಿ ಸೆ.5 NEWS DESK : ಮುಂಬರುವ ಗೌರಿ ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಮಡಿಕೇರಿ ಉಪ ವಿಭಾಗದ ವತಿಯಿಂದ ನಗರದ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದ ಸಮುದ್ರ ಹೋಟೆಲ್ ಹಾಲ್‌ನಲ್ಲಿ ಗಣೇಶೋತ್ಸವ ಸಮಿತಿಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ಸಭೆ ನಡೆಯಿತು. ಸೆ.14ರಂದು ಗಣೇಶ ಚತುರ್ಥಿ ನಡೆಯಲಿರುವ ಹಿನ್ನೆಲೆಯಲ್ಲಿ ನಡೆದ ಸಭೆಯಲ್ಲಿ ಪೊಲೀಸ್ ಇಲಾಖೆ, ನಗರಸಭೆ, ಆರ್‌ಟಿಒ, ಲೋಕೋಪಯೋಗಿ, ಚೆಸ್ಕಾಂ, ಅಗ್ನಿಶಾಮಕ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಗಣೇಶೋತ್ಸವ ಸಮಿತಿಗಳ ಪ್ರತಿನಿಧಿಗಳು ಭಾಗವಹಿಸಿದ್ದರು. ಸಭೆಯಲ್ಲಿ ಮಾತನಾಡಿದ ಮಡಿಕೇರಿ ಉಪ ವಿಭಾಗದ ಪೊಲೀಸ್ ಉಪಾಧೀಕ್ಷಕರು, ಸಾರ್ವಜನಿಕ ಸ್ಥಳಗಳಲ್ಲಿ ಗೌರಿ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸುವ ಮೊದಲು ಪೊಲೀಸ್ ಇಲಾಖೆ ಸೇರಿದಂತೆ ಸಂಬಂಧಪಟ್ಟ ಎಲ್ಲಾ ಇಲಾಖೆಗಳ ಅನುಮತಿ ಪಡೆಯುವುದು ಕಡ್ಡಾಯ ಎಂದು ತಿಳಿಸಿದರು. ಗಣೇಶೋತ್ಸವ ಸ್ಥಳದಲ್ಲಿ ತಾತ್ಕಾಲಿಕ ಸಿಸಿ ಕ್ಯಾಮೆರಾಗಳನ್ನು ಅಳವಡಿಸುವುದು, 24 ಗಂಟೆಗಳ ಕಾಲ ಸ್ವಯಂಸೇವಕರನ್ನು ನಿಯೋಜಿಸುವುದು, ಅಗ್ನಿ ಅವಘಡ ತಡೆಗೆ ನೀರು, ಮರಳು ಹಾಗೂ ಅಗ್ನಿಶಾಮಕ ಸಲಕರಣೆಗಳನ್ನು ಸಿದ್ಧವಾಗಿಟ್ಟುಕೊಳ್ಳುವುದು ಸೇರಿದಂತೆ ಹಲವು ಮುನ್ನೆಚ್ಚರಿಕಾ ಕ್ರಮಗಳನ್ನು…

Read More

ವಿರಾಜಪೇಟೆ ಸೆ.5 NEWS DESK : ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ವಿರಾಜಪೇಟೆ ಸೇವಾ ಕೇಂದ್ರದಲ್ಲಿ ಪಾವನ ಪರ್ವ ರಕ್ಷಾಬಂಧನ ಹಾಗೂ ಶ್ರೀಕೃಷ್ಣ ಜನ್ಮಾಷ್ಟಮಿ ಮಹೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಮಡಿಕೇರಿ ಶಾಖೆಯ ಸಹ ಸಂಚಾಲಕಿ(ಮಾಧ್ಯಮ ವಿಭಾಗ) ಬಿ.ಕೆ. ಧನಲಕ್ಷ್ಮಿ ಅವರು ರಕ್ಷಾಬಂಧನ ಮತ್ತು ಶ್ರೀಕೃಷ್ಣ ಜನ್ಮಾಷ್ಟಮಿಯ ಆಧ್ಯಾತ್ಮಿಕ ರಹಸ್ಯವನ್ನು ತಿಳಿಸಿ ಮಾತನಾಡಿ, “ಯಾರು ಪರಮಾತ್ಮನ ನೆನಪು ಎಂಬ ಶ್ರೀರಕ್ಷೆಯಲ್ಲಿ ಬಂಧಿತರಾಗುತ್ತಾರೋ ಅವರಿಗೆ ಉಳಿದೆಲ್ಲಾ ಬಂಧನಗಳು ದೂರವಾಗುತ್ತವೆ. ಜೀವನದಲ್ಲಿ ಪವಿತ್ರ ಧಾರಣೆ ಮಾಡುವ ಪ್ರತಿಜ್ಞೆ ಮಾಡಿಕೊಂಡು ಪಾವನರಾಗುವುದೇ ನಿಜವಾದ ರಾಖಿ ಕಟ್ಟಿಕೊಳ್ಳುವುದಾಗಿದೆ. ಆಧ್ಯಾತ್ಮಿಕ ದೃಷ್ಟಿಯ ತಿಲಕವಿಟ್ಟು, ಸಿಹಿ ತಿಂದು ಬಾಯಿ ಎಷ್ಟು ಮಧುರವಾಗುತ್ತದೋ, ಹಾಗೆಯೇ ನಮ್ಮ ಮಾತು ಮಧುರವಾಗಿರಬೇಕು. ಮಾತಿನಿಂದ ಯಾರಿಗೂ ದುಃಖ ನೀಡಬಾರದು. ಶ್ರೀಕೃಷ್ಣನು ಸತ್ಯಯುಗದ ಪ್ರಥಮ ರಾಜಕುಮಾರ ಹಾಗೂ ದೇವತಾ ಪುರುಷನಾಗಿದ್ದು, ಮರ್ಯಾದಾ ಪುರುಷೋತ್ತಮನಾಗಿದ್ದಾನೆ. ಜನ್ಮಾಷ್ಟಮಿಯ ಈ ಶುಭ ಸಂದರ್ಭದಲ್ಲಿ ನಾವು ಶ್ರೀಕೃಷ್ಣನಂತೆ ದೈವಿ ಗುಣಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ರಕ್ಷಾಬಂಧನ ಎಂದರೆ ಕೇವಲ ದಾರ ಕಟ್ಟಿಕೊಳ್ಳುವುದಲ್ಲ, ಮನಸ್ಸನ್ನು…

Read More

ಮಡಿಕೇರಿ ಸೆ.5 NEWS DESK : 66/33/11 ಕೆ.ವಿ. ಎಂಯುಎಸ್‍ಎಸ್ ಮಗ್ಗುಲ ವಿದ್ಯುತ್ ವಿತರಣಾ ಉಪ ಕೇಂದ್ರದಿಂದ ಹೊರಹೊಮ್ಮುವ ಮಾರ್ಗದಲ್ಲಿ ತ್ರೈಮಾಸಿಕ ನಿರ್ವಹಣೆ ಕಾಮಗಾರಿ ನಡೆಸಬೇಕಿರುವುದರಿಂದ ಸೆ.8 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದ್ದು, ವಿರಾಜಪೇಟೆ ಪಟ್ಟಣ, ಬಿಟ್ಟಂಗಾಲ, ಬಿ.ಶೆಟ್ಟಿಗೇರಿ, ಆರ್ಜಿ, ಬೇಟೋಳಿ, ಕದನೂರು, ಕಾಕೋಟುಪರಂಬು, ಕೆದಮುಳ್ಳೂರು, ಅಮ್ಮತ್ತಿ, ಕಾರ್ಮಾಡು, ಸಿದ್ದಾಪುರ, ಮಾಲ್ದಾರೆ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.

Read More

ಮಡಿಕೇರಿ ಸೆ.5 NEWS DESK : ಕೊಡಗು ಜಿಲ್ಲಾ ಸಕಾ೯ರಿ ಆಸ್ಪತ್ರೆಯಲ್ಲಿ ಶೀಘ್ರದಲ್ಲಿಯೇ ಮಂಡಿ ಸಮಸ್ಯೆಯ ಪರಿಹಾರಕ್ಕಾಗಿ ರೋಬೋಟಿಕ್ ಸಜ೯ರಿ ಸೌಲಭ್ಯ ದೊರಕಲಿದೆ. ಇದಕ್ಕಾಗಿ 3 ಕೋಟಿ ರು. ವೆಚ್ಚದ ರೋಬೋಟಿಕ್ ಉಪಕರಣಕ್ಕಾಗಿ ಟೆಂಡರ್ ಪ್ರಕ್ರಿಯೆ ಜಾರಿಯಲ್ಲಿದೆ ಎಂದು ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಡೀನ್ ಮತ್ತು ನಿದ೯ಶಕ ಡಾ.ಎ.ಜಿ. ಲೋಕೇಶ್ ತಿಳಿಸಿದ್ದಾರೆ. ನಗರದ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಕನಾ೯ಟಕ ಆರ್ಥೋಪೆಡಿಕ್ ಅಸೋಸಿಯೇಷನ್’ ಹಾಗೂ ಸಂಸ್ಥೆಯ ಕೀಲು ಮತ್ತು ಮೂಳೆ ವಿಭಾಗ’ದ ವತಿಯಿಂದ ಇದೇ ಮೊದಲ ಬಾರಿಗೆ ಆಯೋಜಿಸಲಾಗಿದ್ದ ಮಧ್ಯವಾರ್ಷಿಕ ರಾಜ್ಯಮಟ್ಟದ ಸಮ್ಮೇಳನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಈ ಬಾರಿಯ ಸಮ್ಮೇಳನವು ಮಂಡಿ ಚಿಪ್ಪು ಮತ್ತು ಕೀಲು ಸಮಸ್ಯೆಗಳ ಸಂಪೂರ್ಣ ಅಧ್ಯಯನ ಎಂಬ ಶೀರ್ಷಿಕೆಯಡಿ ನಡೆಯಲಿದ್ದು, ಮಂಡಿ ಕೀಲು ನುಣುಪು ಸಮಸ್ಯೆಗಳು, ದಿನನಿತ್ಯದ ನಡಿಗೆ ಹಾಗೂ ಕಾರ್ಯಚಟುವಟಿಕೆಗಳಲ್ಲಿ ಎದುರಾಗುವ ತೊಂದರೆಗಳು, ಕ್ರೀಡಾಪಟುಗಳ ಮಂಡಿ ಗಾಯಗಳು ಸುಧಾರಿತ ಕೀಲು ಬದಲಿ ಶಸ್ತ್ರಚಿಕಿತ್ಸೆಗಳು ಕೀಲು ತಪಾಸಣೆ ಸೇರಿದಂತೆ ನಾನಾ ಜಟಿಲ ಸಮಸ್ಯೆಗಳ…

Read More

ಮಡಿಕೇರಿ, NEWS DESK ಸೆ.5: ಬೆಂಗಳೂರಿನಿಂದ ಮಡಿಕೇರಿಗೆ ಬರುತ್ತಿದ್ದ ಬಸ್‌ಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡು ಸಂಪೂರ್ಣ ಸುಟ್ಟುಹೋದ ಘಟನೆ ಮೈಸೂರು–ಮಂಗಳೂರು ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಹುಣಸೂರು ತಾಲೂಕಿನ ರಂಗಯ್ಯನಕೊಪ್ಪಲು ಬಳಿ ಶನಿವಾರ ಸಂಜೆ ನಡೆದಿದೆ. ಬಸ್‌ನಲ್ಲಿ ಬೆಂಕಿ ಕಾಣಿಸಿಕೊಂಡ ಕೂಡಲೇ ಪ್ರಯಾಣಿಕರು ಹಾಗೂ ಸಿಬ್ಬಂದಿ ಸುರಕ್ಷಿತವಾಗಿ ಕೆಳಗಿಳಿದಿದ್ದು, ಯಾವುದೇ ಪ್ರಾಣಹಾನಿ ಅಥವಾ ಗಾಯ ಸಂಭವಿಸಿಲ್ಲ. ಆದರೆ ಕೆಲ ಪ್ರಯಾಣಿಕರ ಲಗ್ಗೇಜ್ ಬ್ಯಾಗ್‌ಗಳನ್ನು ಬಸ್‌ನಿಂದ ಹೊರತೆಗೆಯಲು ಸಾಧ್ಯವಾಗದೆ, ಅವುಗಳಲ್ಲಿದ್ದ ವಸ್ತುಗಳು ಬೆಂಕಿಗೆ ಆಹುತಿಯಾಗಿವೆ. ಘಟನೆ ತಿಳಿಯುತ್ತಿದ್ದಂತೆ ಬಿಳಿಕೆರೆ ಠಾಣೆಯ ಇನ್ಸ್‌ಪೆಕ್ಟರ್ ಪುನೀತ್ ಹಾಗೂ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದರು. ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ವಾಹನಗಳನ್ನು ಪರ್ಯಾಯ ಮಾರ್ಗದಲ್ಲಿ ಸಂಚರಿಸಲು ಅನುವು ಮಾಡಿಕೊಟ್ಟು, ಸಂಚಾರಕ್ಕೆ ತಾತ್ಕಾಲಿಕ ವ್ಯವಸ್ಥೆ ಮಾಡಲಾಯಿತು. ಬಸ್‌ಗೆ ಬೆಂಕಿ ಹೊತ್ತಿಕೊಂಡಿದ್ದರಿಂದ ಕೆಲಹೊತ್ತು ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸಿದರು. ಇದರಿಂದ ಸಂಭವಿಸಬಹುದಾಗಿದ್ದ ಹೆಚ್ಚಿನ ಅನಾಹುತವನ್ನು ತಪ್ಪಿಸಲಾಯಿತು. ಬಸ್‌ನಲ್ಲಿ ಬೆಂಕಿ ಹೊತ್ತಿಕೊಳ್ಳಲು ಕಾರಣವೇನು ಎಂಬುದು…

Read More

ಮಡಿಕೇರಿ ಸೆ.5 NEWS DESK : ಕೊಡಗು ಜಿಲ್ಲೆಯ ಸರ್ಕಾರಿ ಶಾಲೆಗಳ ಅಭಿವೃದ್ಧಿ ಹಾಗೂ ಗುಣಮಟ್ಟದ ಶಿಕ್ಷಣ ನೀಡುವ ಉದ್ದೇಶದಿಂದ ಶಾಸಕರ ಶಾಸಕ ಪ್ರದೇಶಾಭಿವೃದ್ಧಿ ಅನುದಾನ ಮತ್ತು ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ ನಿಧಿಯನ್ನು ಕೈಜೋಡಿಸಿ ತಂತ್ರಜ್ಞಾನಾಧಾರಿತ ಶಿಕ್ಷಣ ಒದಗಿಸಲು ಯೋಜನೆ ರೂಪಿಸಲಾಗುವುದು ಎಂದು ಕೃಷಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಪಿ.ಎಂ.ನರೇಂದ್ರಸ್ವಾಮಿ ಅವರು ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿಯ ಸಂಯುಕ್ತಾಶ್ರಯದಲ್ಲಿ ನಗರದ ಸಂತ ಜೋಸೆಫರ ಪ್ರೌಢಶಾಲೆಯಲ್ಲಿ ಶನಿವಾರ ನಡೆದ ಶಿಕ್ಷಕರ ದಿನಾಚರಣೆ ಮತ್ತು ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಸಚಿವರು ಮಾತನಾಡಿದರು. ಜಿಲ್ಲೆಯ ಹಿರಿಯ ಪ್ರಾಥಮಿಕ ಶಾಲೆಗಳಿಗೆ ಟ್ಯಾಬ್ ನೀಡಲು ವೆಚ್ಚವಾಗಲಿದ್ದು, ಶಾಸಕರು ತಲಾ ರೂ.25 ಲಕ್ಷ ಹಾಗೂ ಖಾಸಗಿ ಸಂಸ್ಥೆಗಳ ಸಿಎಸ್‍ಆರ್ ನಿಧಿಯಿಂದ ಉಳಿದ ಮೊತ್ತ ಭರಿಸಿ ಯೋಜನೆಯನ್ನು ಶೇ.100 ರಷ್ಟು ಪೂರ್ಣಗೊಳಿಸಲು ಯೋಜನೆ ರೂಪಿಸಲು ಚಿಂತಿಸುವಂತೆ ಸಚಿವರು ಸಲಹೆ ಮಾಡಿದರು.…

Read More