ಮಡಿಕೇರಿ ಏ.28 NEWS DESK : ಕೊಡವ ಕುಟುಂಬಗಳ ನಡುವೆ ಮೂರ್ನಾಡಿನಲ್ಲಿ ನಡೆಯುತ್ತಿರುವ 24ನೇ ವರ್ಷದ ‘ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ’ ಯಲ್ಲಿ ಏ.28 ರಂದು ನಡೆದ ಪುರುಷರ ಕ್ವಾರ್ಟರ್ ಫೈನಲ್ಸ್ ನಲ್ಲಿ ಗೆಲುವು ಸಾಧಿಸಿದ ತಂಡಗಳು *ಮೈದಾನ 1* (ಲಾಲು ಮುದ್ದಯ್ಯ ಮೈದಾನ) ಚೆಕ್ಕೇರ ಮತ್ತು ಮಲ್ಲಜ್ಜಿರ ತಂಡಗಳ ನಡುವಿನ ಪಂದ್ಯದಲ್ಲಿ ಚೆಕ್ಕೇರ 64 ರನ್ ಗಳಿಂದ ಗೆಲುವು ಸಾಧಿಸಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಚೆಕ್ಕೇರ 8 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 100 ರನ್ ಗಳ ಸಾಧನೆ ಮಾಡಿತು. ಮಲ್ಲಜ್ಜಿರ 8 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ ಕೇವಲ 36 ರನ್ ಗಳನ್ನಷ್ಟೇ ಸೇರಿಸಿ ಸೋಲೊಪ್ಪಿಕೊಂಡಿತು. ಚೆಕ್ಕೇರ ಆಕರ್ಷ್ 47 ರನ್ ಗಳನ್ನು ಗಳಿಸಿ ತಂಡದ ಗೆಲುವಿಗೆ ಸಹಕಾರಿಯಾದರು. ಮಲ್ಲಜ್ಜಿರ ಪರ ರೋಷನ್ 2 ವಿಕೆಟ್ ಪಡೆದು ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು. ಮೋಟನಾಳಿರ ಮತ್ತು ಪಂದ್ಯಂಡ ನಡುವಿನ ಪಂದ್ಯದಲ್ಲಿ ಪಂದ್ಯಂಡ…
ಲೇಖಕ: admin
ಮಡಿಕೇರಿ ಏ.28 NEWS DESK : ಕಾಡಾನೆ ದಾಳಿಯಿಂದ ಗಬ್ಬದ ಹಸುವೊಂದು ಸಾವನ್ನಪ್ಪಿರುವ ಘಟನೆ ನೆಲ್ಯಹುದಿಕೇರಿ ಗ್ರಾಮದ ನಾಲ್ಕನೇ ವಿಭಾಗದಲ್ಲಿ ನಡೆದಿದೆ. ಸ್ಥಳೀಯ ನಿವಾಸಿ ಶೇಖರ್ ಅವರ ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿದ್ದ ಹಸುವನ್ನು ಸೋಮವಾರ ಮಧ್ಯರಾತ್ರಿ ಕಾಡಾನೆ ತುಳಿದು ಕೊಂದು ಹಾಕಿದೆ ಎಂದು ತಿಳಿದು ಬಂದಿದೆ. ಮಾಹಿತಿ ತಿಳಿದ ತಕ್ಷಣ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ. ಹೈನುಗಾರಿಕೆಯನ್ನು ನಂಬಿ ಜೀವನ ಸಾಗಿಸುತ್ತಿರುವ ರೈತ ಕುಟುಂಬಕ್ಕೆ ತಕ್ಷಣ ಸೂಕ್ತ ಪರಿಹಾರ ನೀಡಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ. ಕಾಡಾನೆ ಸಂಚಾರದಿಂದ ಗ್ರಾಮದಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ತಕ್ಷಣ ಕಾಡಾನೆಗಳನ್ನು ಅರಣ್ಯ ಪ್ರದೇಶಕ್ಕೆ ಅಟ್ಟಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ.
ಮಡಿಕೇರಿ NEWS DESK ಏ.28 : ಕ್ಷೇತ್ರ ಪುನರ್ ವಿಂಗಡಣೆಯ ಸಂದರ್ಭ ಕೊಡವರಿಗೆ ಪ್ರತ್ಯೇಕ ಲೋಕಸಭಾ ಕ್ಷೇತ್ರ ಮತ್ತು ವಿಧಾನಸಭಾ ಕ್ಷೇತ್ರವನ್ನು ಘೋಷಿಸಬೇಕೆಂದು ಒತ್ತಾಯಿಸಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ವತಿಯಿಂದ ಮೇ 1 ರಿಂದ ಅಭಿಯಾನವನ್ನು ಆರಂಭಿಸಲಾಗುವುದು ಎಂದು ಸಿಎನ್ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಮೇ 1 ರಂದು ಬೆಳಿಗ್ಗೆ 9 ಗಂಟೆಗೆ ಕೊಡವರ ಪುಣ್ಯಕ್ಷೇತ್ರ ತಲಕಾವೇರಿಯಲ್ಲಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ಅಭಿಯಾನವನ್ನು ಆರಂಭಿಸಲಾಗುವುದು ಎಂದು ಹೇಳಿದ್ದಾರೆ. ಆದಿಮಸಂಜಾತ ಮೂಲನಿವಾಸಿ, ಏಕ-ಜನಾಂಗೀಯ, ಪ್ರಕೃತಿ ಆರಾಧಕ-ಅನಿಮಿಸ್ಟಿಕ್ ಕೊಡವರಿಗಾಗಿ ಕೊಡವ ಪ್ರದೇಶದ ಗಡಿಗಳನ್ನು ಬದಲಾಯಿಸದೆ ಕೊಡವ ಸಾಂಪ್ರದಾಯಿಕ ನೆಲೆಯಲ್ಲೇ ಪ್ರತ್ಯೇಕ ಕೊಡವ ವಿಧಾನಸಭಾ ಮತ್ತು ಲೋಕಸಭಾ ಕ್ಷೇತ್ರಗಳನ್ನು ರಚಿಸಬೇಕು ಎಂದು ಒತ್ತಾಯಿಸಿದ್ದಾರೆ. ಕೊಡವಲ್ಯಾಂಡ್ ನ ಭೌಗೋಳಿಕ-ರಾಜಕೀಯ ಸ್ವಾಯತ್ತತೆ, ಸ್ವಯಂ-ಆಡಳಿತ, ಆಂತರಿಕ ಸ್ವಯಂ-ನಿರ್ಣಯದ ಹಕ್ಕುಗಳು, ಕೊಡವರನ್ನು ಬುಡಕಟ್ಟು ಪಟ್ಟಿಗೆ ವರ್ಗೀಕರಿಸುವುದು, ವಿಧಾನಸಭೆ ಮತ್ತು ಸಂಸತ್ತಿನಲ್ಲಿ ವಿಶೇಷ ರಾಜಕೀಯ ಪ್ರಾತಿನಿಧ್ಯ ನೀಡುವುದು, ವಿಶ್ವಸಂಸ್ಥೆಯಿoದ ಆದಿಮಸಂಜಾತ ನಿವಾಸಿಗಳೆಂದು ಮಾನ್ಯತೆ ಪಡೆಯಲು…
ಮಡಿಕೇರಿ ಏ.27 NEWS DESK : ಮಹಿಳಾ ಮೀಸಲಾತಿಯ “ನಾರಿ ಶಕ್ತಿ ವಂದನ್” ವಿಧೇಯಕವನ್ನು ಪ್ರಸ್ತುತ ಇರುವ ಲೋಕಸಭಾ ಸ್ಥಾನಗಳಿಗೆ ಅನ್ವಯಿಸಿ ಜಾರಿಗೊಳಿಸುವಂತೆ ಕೇಂದ್ರ ಸರ್ಕಾರವನ್ನು ಆಗ್ರಹಿಸುವ ಸಹಿ ಅಭಿಯಾನಕ್ಕೆ ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಚಾಲನೆ ನೀಡಲಾಯಿತು. ಕೊಡಗು ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪಲತಾ ಅವರು, ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಆಯೋಜಿತ ಸರಳ ಕಾರ್ಯಕ್ರಮದಲ್ಲಿ, ಬೋರ್ಡ್ನಲ್ಲಿ ಸಹಿ ಮಾಡುವ ಮೂಲಕ ಅಭಿüಯಾನಕ್ಕೆ ಚಾಲನೆಯನ್ನಿತ್ತರು. ಕೇಂದ್ರದ ಮೋದಿ ನೇತೃತ್ವದ ಎನ್ಡಿಎ ಸರ್ಕಾರವು ಮಹಿಳೆಯರಿಗೆ ಮೀಸಲಾತಿ ನೀಡುವ ವಿಧೇಯಕದೊಂದಿಗೆ ಕ್ಷೇತ್ರ ಪುನರ್ವಿಂಗಡಣೆಯನ್ನು ಸೇರ್ಪಡೆಮಾಡಿರುವುದನ್ನು ವಿರೋಧಿಸಿದ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪಲತಾ, ಪ್ರಸ್ತುತ ಇರುವ 543 ಲೋಕಸಭಾ ಸ್ಥಾನಗಳಿಗೆ ಸಂಬಂಧಿಸಿದಂತೆ ಮಹಿಳಾ ಮೀಸಲಾತಿಯನ್ನು ಅನ್ವಯಿಸಿ ಜಾರಿಗೆ ತರುವಂತೆ ಕೇಂದ್ರವನ್ನು ಒತ್ತಾಯಿಸಿದರು. ಸಹಿ ಅಭಿಯಾನದಲ್ಲಿ ಮಹಿಳಾ ಕಾಂಗ್ರೆಸ್ ಜಿಲ್ಲಾ ಉಪಾಧ್ಯಕ್ಷರಾದ ಶೀಲಾ ಡಿಸೋಜ, ಮಹಿಳಾ ಕಾಂಗ್ರೆಸ್ ಸದಸ್ಯರು ಹಾಗೂ ಜಿಪಂ ಮಾಜಿ ಸದಸ್ಯರಾದ ಸುನೀತ, ಮಹಿಳಾ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರುಬೀನಾ…
ವಿರಾಜಪೇಟೆ ಏ.27 NEWS DESK : ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಾಂಸ್ಕೃತಿಕ ಮತ್ತು ಸಾಹಿತ್ಯ ಪರಿಷತ್ತು ರಾಜ್ಯ ಘಟಕ ಬೆಂಗಳೂರು ಇದರ ರಾಜ್ಯ ಮಟ್ಟದ ಪದಗ್ರಹಣ ಸಮಾರಂಭ ಧಾರವಾಡದ ವಿದ್ಯಾವರ್ಧಕ ಸಂಘ ಪಾಟೀಲ್ ಪುಟ್ಟಪ್ಪ ಭವನದಲ್ಲಿ ಜರುಗಿತು. ಸಮಾರಂಭದಲ್ಲಿ ಕೊಡಗು ಜಿಲ್ಲೆಯ ಉಪನಿರ್ದೆೇಶಕರ ಕಛೇರಿಯ ಸೂಪರಿಡೆಂಟ್ ಹಾಗೂ ಭರತನಾಟ್ಯ ಕಲಾವಿದ ಎಸ್.ಕೆ.ಕಿರಣ್ ಅವರಿಗೆ ಕಾಯಕ ರತ್ನ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಈ ಸಂದರ್ಭ ರಾಜ್ಯ ಅಧ್ಯಕ್ಷರಾದ ರಮಾ , ಬಸವರಾಜು ಗುರಿಕಾರ್ , ಮೇಲ್ಮನೆ ಸಭಾಪತಿ ಬಸವರಾಜ್ ಹೊರಟ್ಟಿ, ರಾಜ್ಯ ಕಾರ್ಯದರ್ಶಿ ಪರ್ವಿನ್ ಬಾನು ಬೊಳ್ಳಣ್ಣವರ್ ಹಾಗೂ ರಾಜ್ಯದ ಎಲ್ಲ ಪದಾಧಿಕಾರಿಗಳು ಮತ್ತು ರಾಜ್ಯದ ಪ್ರತಿಯೊಂದು ಜಿಲ್ಲೆಯ ಅಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳು ಹಾಜರಿದ್ದರು. ವೇದಿಕೆಯಲ್ಲಿ ಎಸ್.ಕೆ.ಕಿರಣ್ ಅವರಿಂದ ಭರತನಾಟ್ಯ ಪ್ರದರ್ಶನ ಮೂಡಿ ಬಂದಿತು. ಕರ್ನಾಟಕ ಸರ್ಕಾರಿ ನೌಕರರ ಸಾಂಸ್ಕೃತಿಕ ಮತ್ತು ಸಾಹಿತ್ಯ ಪರಿಷತ್ತಿನ ಕೊಡಗು ಜಿಲ್ಲಾಧ್ಯಕ್ಷರಾದ ಕಮಲಮ್ಮ ಕೆ. ಎನ್ ಹಾಗೂ ಪ್ರಧಾನ ಕಾರ್ಯದ ರ್ಶಿ ನೀಲಮ್ಮ ಕೆ.ಪಿ.…
ವಿರಾಜಪೇಟೆ ಏ.27 NEWS DESK : ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಸ್ಕೃತಿ ಹಾಗೂ ಸಾಹಿತ್ಯ ಪರಿಷತ್ತುನ ರಾಜ್ಯ ಹಾಗೂ ಜಿಲ್ಲಾ ಘಟಕದ ಪದಗ್ರಹಣ ಕಾರ್ಯಕ್ರಮವು ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಪಾಟೀಲ್ ಪುಟ್ಟಪ್ಪ ಸಭಾಂಗಣದಲ್ಲಿ ಜರುಗಿತು. ಕಾರ್ಯಕ್ರಮದಲ್ಲಿ ಪರಿಷತ್ತಿನ ರಾಜ್ಯ ಉಪಾಧ್ಯಕ್ಷರಾಗಿ ವಿರಾಜಪೇಟೆ ಉಪ ಖಜಾನೆಯ ಅಧೀಕ್ಷಕ ಗಣೇಶ್ ನಿಲವಾಗಿಲು ಅವರು ಅಧಿಕಾರ ಸ್ವೀಕರಿಸಿದರು. ಸಾಹಿತ್ಯ, ಚಿತ್ರಕಲೆ, ಸಂಗೀತ, ನಾಟಕ, ನೃತ್ಯ ಹಾಗೂ ಮೊದಲಾದ ಲಲಿತ ಕಲೆಗಳ ಸಮಾರಂಭ, ಕಾರ್ಯಾಗಾರ ಹಾಗೂ ಸಾಂಸ್ಕೃತಿಕ ಸಮ್ಮೇಳನಗಳನ್ನು ರಾಜ್ಯವಾರು ಹಮ್ಮಿಕೊಳ್ಳಲು ಮತ್ತು ಸಮಾಜಮುಖಿ ಕಾರ್ಯನಿರ್ವಹಣೆಗೆ ಆದೇಶದಲ್ಲಿ ಸೂಚಿಸಲಾಗಿದೆ. ಈ ಸಂದರ್ಭದಲ್ಲಿ ಗಣೇಶ್ ಅವರನ್ನು ಉಪಸ್ಥಿತರಿದ್ದ ಗಣ್ಯರು ಅಭಿನಂದಿಸಿದರು.
ವಿರಾಜಪೇಟೆ ಏ.27 NEWS DESK : ಹೆಗ್ಗಳ ಗ್ರಾಮದ ಬೂದಿಮಾಳ ಶ್ರೀ ಕಿರಾತೇಶ್ವರ ದೇವಾಲಯದ ವಾರ್ಷಿಕ ಉತ್ಸವ ಹಾಗೂ ಮಹಾಪೂಜೆಯು ಶ್ರದ್ಧಾಭಕ್ತಿಯಿಂದ ಜರುಗಿತು. ಹಬ್ಬದ ಪ್ರಯುಕ್ತ ಮುಂಜಾನೆಯಿಂದಲೇ ಧಾರ್ಮಿಕ ಕಾರ್ಯಕ್ರಮಗಳು ಆರಂಭವಾದವು. ಅರ್ಚಕರು ಕ್ಷೇತ್ರದ ಶ್ರೀ ಮಹಾಗಣಪತಿಗೆ ಹಾಗೂ ವನದುರ್ಗೆ ದೇವರುಗಳಿಗೆ ವಿಶೇಷ ಪೂಜೆಯನ್ನು ಸಲ್ಲಿಸಿ ಪ್ರಾರ್ಥನೆಯನ್ನು ಸಲ್ಲಿಸದರು. ನಂತರ ಶ್ರೀ ಕಿರಾತೇಶ್ವರ ದೇವರಿಗೆ ವಿಶೇಷ ಪೂಜೆಯನ್ನು ಸಲ್ಲಿಸಲಾಯಿತು. ಮೊದಲಿಗೆ ಅರ್ಚಕರು ಸಂಕಲ್ಪ ಪೂಜೆ, ಪ್ರಾರ್ಥನೆ ಹಾಗೂ ಪಂಚಾಮೃತ ಅಭಿಷೇಕವನ್ನು ನೆರವೇರಿಸಿದರು. ಎಳನೀರು ಅಭಿಷೇಕ, ಅಲಂಕಾರ ಪೂಜೆಯನ್ನು ಮಾಡಿದರು. ತದನಂತರ ವಿಶೇಷ ಅರ್ಚನೆಯನ್ನು ಮಾಡಿ ವಿವಿಧ ಸೇವೆಗಳನ್ನು ನೆರವೇರಿಸಲಾಯಿತು. ಬಳಿಕ ಮಹಾ ಮಂಗಳಾರತಿ, ತೀರ್ಥ ಪ್ರಸಾದ ವಿತರಣೆಯು ಜರುಗಿತು. ಕೇರಳದ ಚಂಡೆ ಬಳಗದವರಿಂದ ಚಂಡೆ ಸೇವೆಯು ಈ ಸಂದರ್ಭದಲ್ಲಿ ನಡೆಯಿತು. ಭಕ್ತಾದಿಗಳಿಗೆ ಅನ್ನ ಸಂತರ್ಪಣೆಯು ಜರುಗಿತು. ಧಾರ್ಮಿಕ ಕಾರ್ಯಕ್ರಮಗಳು ಅರ್ಚಕರಾದ ವಿಶ್ವನಾಥ್ ಭಟ್ ಹಾಗೂ ವಾಮನಮೂರ್ತಿ ಭಟ್ ರವರ ನೇತೃತ್ವದಲ್ಲಿ ಜರುಗಿತು. ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪಕರಾದ ದೇವಪ್ಪ ಪೂಜಾರಿ ಹಾಗೂ…
ವಿರಾಜಪೇಟೆ NEWS DESK ಏ.27 : ಸಮೀಪದ ಬೇಟೋಳಿ ರಾಮನಗರದ ಶ್ರೀ ಪುದುಪಾಡಿ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಸಭಾಂಗಣದಲ್ಲಿ ಮೂರು ದಿವಸಗಳ ಕಾಲ ಜರುಗಿದ ಮಕ್ಕಳ ವೈದಿಕ ಶಿಬಿರವು ಯಶಸ್ವಿಯಾಗಿ ಸಂಪನ್ನಗೊಂಡಿತು. ಮೊದಲ ದಿವಸ ಈ ಶಿಬಿರಕ್ಕೆ ಶ್ರೀ ಪುದುಪಾಡಿ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಉಪಾಧ್ಯಕ್ಷರಾದ ನಂದ ಬೋರ್ಕರ್ ರವರು ಚಾಲನೆಯನ್ನು ನೀಡಿದರು. ದೇವಸ್ಥಾನದ ಪ್ರಧಾನ ಅರ್ಚಕರಾದ ವಿಶ್ವನಾಥ್ ಭಟ್ ಹಾಗೂ ಕಳತ್ಮಾಡು ವಿನ ಅರ್ಚಕ ಶ್ರೇಯಸ್ ಭಟ್ ರವರು ವೈದಿಕ ಶಿಬಿರದ ಪ್ರಯುಕ್ತ ಮಕ್ಕಳಿಗೆ ವಿವಿಧ ತರಬೇತಿಯನ್ನು ನೀಡಿದರು.ಅರ್ಚಕರು ವಟುಗಳಿಗೆ ಸಂಧ್ಯಾ ವಂದನೆ, ಕುಲದೇವರ ಪೂಜಾ ವಿಧಾನಗಳು, ಮಂತ್ರ ಪಠಣೆ, ಶ್ಲೋಕ ಪಠಣ, ಜನಿವಾರ ಧರಿಸುವ ವಿಧಾನಗಳು, ಶ್ರೀ ಸತ್ಯನಾರಾಯಣ ಪೂಜೆಯ ಮಂತ್ರಗಳು, ಪಂಚಗವ್ಯದ ಪೂಜಾ ವಿಧಾನ ಇನ್ನೂ ಮುಂತಾದ ಪೂಜಾ ವಿಧಾನಗಳ ಕುರಿತು ತರಬೇತಿಯನ್ನು ನೀಡಿದರು. ದೇವಸ್ಥಾನದ ಆಡಳಿತ ಮಂಡಳಿಯ ಸದಸ್ಯೆ ಸಂಗೀತ ರವರು ಮಕ್ಕಳಿಗೆ ಯೋಗಾಭ್ಯಾಸವನ್ನು ಮಾಡಿಸಿದರು. ಹೆಗ್ಗಳ ಗ್ರಾಮದ ಸುರೇಶ್ ರವರು ಧರ್ಮ ಶಿಕ್ಷಣದ ಮಹತ್ವವನ್ನು ವಿವರಿಸಿದರು.…
ಮಡಿಕೇರಿ ಏ.27 NEWS DESK : ನಮ್ಮ ಗಣತಿ ನಮ್ಮ ಅಭಿವೃದ್ಧಿ 2027 ರ ಜನಗಣತಿ ಸಂಬಂಧ ಗಣತಿದಾರರು ಮನೆ ಮನೆಗೆ ಭೇಟಿ ನೀಡಿ ಗಣತಿ ಕಾರ್ಯ ಕೈಗೊಂಡಿದ್ದು, ಈ ತಿಂಗಳ ಅಂತ್ಯದೊಳಗೆ ಶೇಕಡಾವಾರು ಪ್ರಗತಿ ಸಾಧಿಸುವಂತೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಸ್ಪಷ್ಟ ನಿರ್ದೇಶನ ನೀಡಿದ್ದಾರೆ. ಕೊಡಗು ಜಿಲ್ಲೆಯಲ್ಲಿ ಮನೆ ಮನೆಗೆ ಭೇಟಿ ನೀಡಿ ಗಣತಿ ಕಾರ್ಯ ಪ್ರಗತಿಯಲ್ಲಿ ಕೊಡಗು ಜಿಲ್ಲೆ 15ನೇ ಸ್ಥಾನದಲ್ಲಿದ್ದು, ಆದಷ್ಟು ಶೀಘ್ರ ಗಣತಿ ಕಾರ್ಯವನ್ನು ಪೂರ್ಣಗೊಳಿಸಬೇಕು ಎಂದು ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ತಹಶೀಲ್ದಾರರು, ತಾ.ಪಂ.ಇಒಗಳು, ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಪುರಸಭೆ ಮತ್ತು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿಗಳು ಸೇರಿದಂತೆ ನೋಡಲ್ ಅಧಿಕಾರಿಗಳನ್ನು ನಿಯೋಜಿಸಲಾಗಿದ್ದು, ತಮ್ಮ ತಮ್ಮ ವ್ಯಾಪ್ತಿಯಲ್ಲಿ ಯಾವುದೇ ಮನೆ ಬಿಟ್ಟು ಹೋಗದಂತೆ ಗಣತಿ ಕಾರ್ಯವನ್ನು ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದರು. ಮನೆ ಮನೆ ಗಣತಿ ಕಾರ್ಯಕ್ಕಾಗಿ ಈಗಾಗಲೇ ಜಿಲ್ಲೆಯಲ್ಲಿ 999 ಗಣತಿದಾರರನ್ನು ನಿಯೋಜಿಸಲಾಗಿದೆ. ಮಡಿಕೇರಿ ತಾಲ್ಲೂಕಿಗೆ 187, ಮಡಿಕೇರಿ ನಗರಕ್ಕೆ 61, ಸೋಮವಾರಪೇಟೆ…
ಮಡಿಕೇರಿ ಏ.27 NEWS DESK : ಮಹಿಳೆಯರ ಬಗ್ಗೆ ನೈಜ ಕಾಳಜಿ ಇಲ್ಲದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರಕಾರ ಮಹಿಳೆಯರಿಗೆ ಶೇ.33 ರಷ್ಟು ಮೀಸಲಾತಿ ನೀಡುವಲ್ಲಿ ವಿಫಲವಾಗಿದೆ. ಈ ವಿಚಾರದಲ್ಲಿ ಸುಳ್ಳು ಹೇಳುತ್ತಿರುವ ಕೇಂದ್ರ ಸರಕಾರ ಕಾಂಗ್ರೆಸ್ ವಿರುದ್ಧ ಗೂಬೆ ಕೂರಿಸುವ ಯತ್ನ ಮಾಡುತ್ತಿದೆ ಎಂದು ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಹಾಗೂ ಮಹಿಳಾ ಕಾಂಗ್ರೆಸ್ ನ ಕೊಡಗು ಉಸ್ತುವಾರಿ ಮಮತಾ ಗಟ್ಟಿ ಅವರು ಆರೋಪಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಮಹಿಳಾ ಮೀಸಲಾತಿ ಪರ ಸುಮಾರು 10ಲಕ್ಷ ಸಹಿ ಸಂಗ್ರಹದ ಗುರಿಯೊಂದಿಗೆ ಮಹಿಳಾ ಕಾಂಗ್ರೆಸ್ ರಾಜ್ಯವ್ಯಾಪಿ ಅಭಿಯಾನ ನಡೆಸುತ್ತಿದೆ ಎಂದರು. ಭಾರತದ ರಾಜಕೀಯ ಮತ್ತು ಸಾಮಾಜಿಕ ಇತಿಹಾಸದಲ್ಲಿ ಮಹಿಳೆಯರಿಗೆ ಸಮಾನ ಅವಕಾಶಗಳನ್ನು ನೀಡುವಲ್ಲಿ ಕಾಂಗ್ರೆಸ್ ಪಕ್ಷವು ಮಹತ್ತರ ಪಾತ್ರ ವಹಿಸಿದೆ. ಆದರೆ ಮಹಿಳಾ ಸಬಲೀಕರಣಕ್ಕೆ ಯಾವುದೇ ಕೊಡುಗೆ ನೀಡದ ಪ್ರಧಾನಿ ಮೋದಿ ನೇತೃತ್ವದ ಸರಕಾರ ಸುಳ್ಳು ಹೇಳುತ್ತಾ ಕಾಲಹರಣ ಮಾಡುತ್ತಿದೆ ಎಂದು ಟೀಕಿಸಿದರು. ಮಾಜಿ ಪ್ರಧಾನಿಗಳಾದ…






