ಲೇಖಕ: admin

ವಿರಾಜಪೇಟೆ ಆ.13 NEWS DESK : ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಸ್ಕೃತಿ ಮತ್ತು ಸಾಹಿತ್ಯ ಪರಿಷತ್ತಿನ ಕೊಡಗು ಜಿಲ್ಲಾ ಘಟಕದ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದ ಅಂಗವಾಗಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ 11 ಸಾಧಕರಿಗೆ ‘ಆದರ್ಶ ಸೇವಾ ರತ್ನ’ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ರಾಜ್ಯ ಉಪಾಧ್ಯಕ್ಷ ಗಣೇಶ್ ನಿಲವಾಗಿಲು ತಿಳಿಸಿದ್ದಾರೆ. ಆ.16 ರಂದು ವಿರಾಜಪೇಟೆಯ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಸಂಘಟನಾ, ಸಾಹಿತ್ಯ, ಮಾಧ್ಯಮ, ಸಮಾಜ ಸೇವೆ, ಕಲೆ ಹಾಗೂ ಶಿಕ್ಷಣ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಸಾಧಕರನ್ನು ಗೌರವಿಸಲಾಗುವುದು. ಸಂಘಟನಾ ಕ್ಷೇತ್ರದಲ್ಲಿ ದೇವರಾಜ್ ಬಿ.ಟಿ., ಸಾಹಿತ್ಯ ಕ್ಷೇತ್ರದಲ್ಲಿ ಕುಮಾರಿ ಮನ ಕೆ.ಆರ್., ಮಾಧ್ಯಮ ಕ್ಷೇತ್ರದಲ್ಲಿ ಶಶಿ ಅಚ್ಚಪ್ಪ ಹಾಗೂ ಶಾಂತಿ ಭೂಷಣ್, ಸಮಾಜ ಸೇವಾ ಕ್ಷೇತ್ರದಲ್ಲಿ ಎಂ. ಸಾದಿಕ್ ಅಹಮ್ಮದ್, ಪೂಜಾ ರವೀಂದ್ ಹಾಗೂ ಕುಂಞ್ಞಂಡ ಮಹೇಶ್ ಅಪ್ಪಯ್ಯ, ಕಲಾ ಕ್ಷೇತ್ರದಲ್ಲಿ ಮೀನಾಕ್ಷಿ ಹಾಗೂ ಪ್ರೇಮಾಂಜಲಿ ಆಚಾರ್ಯ ಎಸ್., ಶಿಕ್ಷಣ ಕ್ಷೇತ್ರದಲ್ಲಿ ಕೆ.ಆರ್. ವಿಶಾಲಾಕ್ಷಮ್ಮ ಹಾಗೂ…

Read More

ಚೆಟ್ಟಳ್ಳಿ ಆ.13 NEWS DESK : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಸೋಮವಾರಪೇಟೆ ತಾಲ್ಲೂಕಿನ ಗರ್ವಾಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸೂರ್ಲಬ್ಬಿ ಗ್ರಾಮದ 113 ವರ್ಷಗಳ ಇತಿಹಾಸ ಹೊಂದಿರುವ ಸರ್ಕಾರಿ ಪ್ರಾಥಮಿಕ ಶಾಲೆಯ ಆವರಣದಲ್ಲಿ ಗ್ರಾಮದ ಹಿರಿಯರು, ಹಳೆ ವಿದ್ಯಾರ್ಥಿ ಸಂಘದ ಸದಸ್ಯರು, ಮಾಜಿ ಸೈನಿಕರು, ಮಹಿಳೆಯರು ಹಾಗೂ ಶಿಕ್ಷಕಿಯರು ಸ್ವಚ್ಛತಾ ಶ್ರಮದಾನ ನಡೆಸಿದರು. ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಲವು ಶಾಲೆಗಳು ಮುಚ್ಚುವ ಪರಿಸ್ಥಿತಿ ಎದುರಾಗಿದೆ. ಇಂತಹ ಸಂದರ್ಭದಲ್ಲಿ 113 ವರ್ಷಗಳ ಇತಿಹಾಸ ಹೊಂದಿರುವ ಸೂರ್ಲಬ್ಬಿ ಸರ್ಕಾರಿ ಪ್ರಾಥಮಿಕ ಶಾಲೆಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಗ್ರಾಮಸ್ಥರು ಹಾಗೂ ಹಳೆ ವಿದ್ಯಾರ್ಥಿಗಳು ನಿರಂತರವಾಗಿ ಶ್ರಮಿಸುತ್ತಿರುವುದು ಗಮನಾರ್ಹವಾಗಿದೆ. ಮಳೆಯನ್ನು ಲೆಕ್ಕಿಸದೆ 86 ವರ್ಷದ ಹಿರಿಯರಿಂದ ಹಿಡಿದು ಕಿರಿಯರವರೆಗೆ ಹಲವರು ಉತ್ಸಾಹದಿಂದ ಶ್ರಮದಾನದಲ್ಲಿ ಪಾಲ್ಗೊಂಡರು. ಶಾಲಾ ಆವರಣವನ್ನು ಸ್ವಚ್ಛಗೊಳಿಸುವ ಮೂಲಕ ಸ್ವಾತಂತ್ರ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಿದರು. ಶ್ರಮದಾನದಲ್ಲಿ ಮುದ್ದಂಡ ತಿಮ್ಮಯ್ಯ, ನಾಣ್ಯಪ್ಪ, ಪಟ್ಟು ಸೋಮಯ್ಯ, ಓಡಿಯಂಡ ಶಿವಯ್ಯ, ಗೌಡಂಡ ಕಾರ್ಯಪ್ಪ, ತಂಬುಕುತ್ತೀರ ರೇಖಾ ಸೋಮಯ್ಯ,…

Read More

ಕುಶಾಲನಗರ ಆ.13 NEWS DESK : ಸಾರ್ವಜನಿಕರಿಗೆ ಸೇವೆ ನೀಡುವಲ್ಲಿ ವಿಳಂಬ ನೀತಿ ಅನುಸರಿಸುತ್ತಿರುವುದು, ಪುರಸಭೆ ವ್ಯಾಪ್ತಿಯಲ್ಲಿ ನಡೆಯುತ್ತಿರುವ ವಿವಿಧ ಅಕ್ರಮಗಳು, ಬೀದಿ ವ್ಯಾಪಾರಿಗಳಿಗೆ ಕಿರುಕುಳ ನೀಡುತ್ತಿರುವುದು ಸೇರಿದಂತೆ ಹಲವು ಆರೋಪಗಳನ್ನು ಮುಂದಿಟ್ಟುಕೊಂಡು ಕುಶಾಲನಗರ ತಾಲೂಕು ಬಿಜೆಪಿ ಕಾರ್ಯಕರ್ತರು ಪುರಸಭೆ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಪುರಸಭೆಯ ಮುಖ್ಯಾಧಿಕಾರಿ ಹಾಗೂ ಸಿಬ್ಬಂದಿಯ ಕಾರ್ಯವೈಖರಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು, ಸಾರ್ವಜನಿಕರ ಹಿತಾಸಕ್ತಿಗೆ ವಿರುದ್ಧವಾಗಿ ಅಧಿಕಾರಿಗಳು ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಆರೋಪಿಸಿದರು. ಪ್ರತಿಭಟನೆಯಲ್ಲಿ ನೂರಾರು ಬಿಜೆಪಿ ಕಾರ್ಯಕರ್ತರು ಪಾಲ್ಗೊಂಡು, ಅಧಿಕಾರಿಗಳ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಪುರಸಭೆ ಕಚೇರಿಯಲ್ಲಿ ಕೆಲವು ಮಾಜಿ ಜನಪ್ರತಿನಿಧಿಗಳು ಮಧ್ಯವರ್ತಿಗಳಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪಟ್ಟಭದ್ರ ಹಿತಾಸಕ್ತಿಗಳು ಅಧಿಕಾರಿಗಳೊಂದಿಗೆ ಕೈಜೋಡಿಸಿ ಕಚೇರಿಯ ಆಡಳಿತದ ಮೇಲೆ ಪ್ರಭಾವ ಬೀರುತ್ತಿದ್ದಾರೆ. ಮಧ್ಯವರ್ತಿಗಳ ಮೂಲಕ ಲಂಚ ಪಡೆದು ಸಾರ್ವಜನಿಕರ ಕೆಲಸಗಳನ್ನು ಮಾಡಿಸಿಕೊಳ್ಳುವ ಪ್ರಯತ್ನ ನಡೆಯುತ್ತಿದ್ದು, ಪುರಸಭೆಯಲ್ಲಿ ಬ್ರೋಕರ್‌ಗಳ ಹಾವಳಿ ಹೆಚ್ಚಾಗಿದೆ ಎಂದು ಬಿಜೆಪಿ ಪ್ರಮುಖರು ಆರೋಪಿಸಿದರು. ಹಲವು ವರ್ಷಗಳಿಂದ ಮೀನು ಮಾರಾಟ ಮಾಡಿಕೊಂಡು ಜೀವನ ಸಾಗಿಸುತ್ತಿರುವ…

Read More

ಮಡಿಕೇರಿ,ಆ.13 NEWS DESK : ಆಹಾರ ಅರಸಿಕೊಂಡು ಪಟ್ಟಣಕ್ಕೆ ಬಂದಿದ್ದ ಜಿಂಕೆಯೊಂದನ್ನು ಸೆರೆ ಹಿಡಿದು ಅರಣ್ಯ ಬಿಟ್ಟಿರುವ ಘಟನೆ ವಿರಾಜಪೇಟೆಯಲ್ಲಿ ನಡೆದಿದೆ. ಗೋಣಿಕೊಪ್ಪ ಮುಖ್ಯ ರಸ್ತೆಯ ಕಟ್ಟಡ ಒಂದರ ಹಿಂಭಾಗ ಬೆಳಗ್ಗಿನ ಜಾವ ಜಿಂಕೆ ಸಿಲುಕಿಕೊಂಡಿತ್ತು. ಮಾಕುಟ್ಟ ಅಭಯಾರಣ್ಯದಿಂದ ಆಹಾರ ಅರಸಿಕೊಂಡು ಬಂದು ಕಟ್ಟಡದ ಹಿಂದೆ ಸಿಲುಕಿದ್ದ ಜಿಂಕೆಯನ್ನು ಗಮನಿಸಿದ ಕಟ್ಟಡದ ಕಾವಲುಗಾರ ಈ ಕುರಿತು ವಿರಾಜಪೇಟೆ ವೃತ್ತ ನಿರೀಕ್ಷಕ ಅನುಪ್ ಮಾದಪ್ಪ ಅವರಿಗೆ ಮಾಹಿತಿ ನೀಡಿದ್ದರು. ವಿರಾಜಪೇಟೆ ನಗರ ಪೊಲೀಸ್ ಠಾಣೆ ಅಧಿಕಾರಿಗಳು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿ ಅರಣ್ಯ ಇಲಾಖೆಯ ಗಮನಕ್ಕೆ ತಂದರು. ಬಳಿಕ ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಸ್ಥಳಕ್ಕಾಗಮಿಸಿ ಕಾರ್ಯಾಚರಣೆ ಮೂಲಕ ಜಿಂಕೆಯನ್ನು ಸುರಕ್ಷಿತವಾಗಿ ಸೆರೆಹಿಡಿದರು. ಬಳಿಕ ಚುಕ್ಕಿ ಜಿಂಕೆಯನ್ನು ಮಾಕುಟ್ಟ ಅರಣ್ಯಕ್ಕೆ ಬಿಡಲಾಯಿತು. ಅರಣ್ಯಾಧಿಕಾರಿಗಳಾದ ಶಿವರಾಮ್.ಕೆ.ವಿ, ರಾಘವ ಪಿಜೆ, ಶ್ರೀನಿವಾಸ್, ಲೋಕೇಶ್ ನಂದೀಶ ಎ.ಎಸ್, ಗಸ್ತು ಅರಣ್ಯ ಪಾಲಕರು, ಆರ್‍ಆರ್‍ಟಿ ಹಾಗೂ ಇಟಿಎಫ್ ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

Read More

ಮಡಿಕೇರಿ ಆ.13 NEWS DESK : ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗಾಗಿ ಮೀಸಲಿರುವ ಅನುದಾನ ದುರುಪಯೋಗವಾಗುತ್ತಿದೆ. ನಡೆಯದೇ ಇರುವ ಕಾಮಗಾರಿಗಳ ಬಿಲ್ ಗೆ ಹಣ ಪಾವತಿಯಾಗುತ್ತಿದೆ ಎಂದು ಕೊಡಗು ಜಿಲ್ಲಾ ಜೇನು ಕುರುಬ ಅಭಿವೃದ್ಧಿ ಸಂಘ ಆರೋಪಿಸಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ಜೆ.ಟಿ.ಕಾಳಿಂಗ ಅವರು ಸೋಮವಾರಪೇಟೆ ತಾಲ್ಲೂಕಿನ ನಂಜರಾಯಪಟ್ಟಣ ಗ್ರಾ.ಪಂ ವ್ಯಾಪ್ತಿಯಲ್ಲಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗಾಗಿ ನೀಡಲಾಗಿರುವ ಅನುದಾನದ ಕಾಮಗಾರಿಗಳ ಕುರಿತು ಹಲವು ಸಂಶಯಗಳು ಮೂಡುತ್ತಿದ್ದು, ತಕ್ಷಣ ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ನಮಗೆ ಲಭ್ಯವಾಗಿರುವ ದಾಖಲೆಗಳ ಪ್ರಕಾರ, ಸುಮಾರು ರೂ.15 ಲಕ್ಷ ಅನುದಾನದಲ್ಲಿ ಕೈಗೊಳ್ಳಲಾಗಿರುವ ಕಾಮಗಾರಿಗಳ ಪೈಕಿ ಎರಡು ಕಾಮಗಾರಿಗಳಲ್ಲಿ ನಮೂದಿಸಿರುವ ವ್ಯಕ್ತಿಗಳು ಸಂಬಂಧಿಸಿದ ಗ್ರಾ.ಪಂ ವ್ಯಾಪ್ತಿಯಲ್ಲಿ ವಾಸಿಸುತ್ತಿಲ್ಲ ಎಂಬ ಅಂಶ ಬೆಳಕಿಗೆ ಬಂದಿದೆ. ಈ ಕಾಮಗಾರಿಗಳು ನಿಜವಾಗಿ ನಡೆದಿವೆಯೇ ? ಕಾಮಗಾರಿಗಳ ಗುಣಮಟ್ಟ ಮತ್ತು ಸ್ಥಳ ಯಾವುದು ? ಯಾರ ಹೆಸರಿನಲ್ಲಿ ಕಾಮಗಾರಿ ಮಾಡಲಾಗಿದೆ ? ಯಾರಿಗೆ ಹಣ ಪಾವತಿಸಲಾಗಿದೆ ? ಎಂಬ…

Read More

ಮಡಿಕೇರಿ ಆ.13 NEWS DESK : ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ 187 ಕೋಟಿ ರೂ. ಅವ್ಯವಹಾರ ನಡೆದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪ ಎದುರಿಸುತ್ತಿರುವ ನಾಗೇಂದ್ರ ಅವರನ್ನು ಸಚಿವ ಸಂಪುಟದಿಂದ ಕೈಬಿಡುವಂತೆ ಕೊಡಗು ಜಿಲ್ಲಾ ಬಿಜೆಪಿ ಒತ್ತಾಯಿಸಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾ ಬಿಜೆಪಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ ಅವರು ಅವ್ಯವಹಾರದ ಆರೋಪದಿಂದ ಮುಕ್ತರಾಗದ ನಾಗೇಂದ್ರ ಅವರಿಗೆ ಸಚಿವ ಸ್ಥಾನವನ್ನು ನೀಡುವ ಮೂಲಕ ಪರಿಶಿಷ್ಟರಿಗೆ ದ್ರೋಹ ಮಾಡಲಾಗಿದೆ ಎಂದು ಆರೋಪಿಸಿದರು. ಈ ಹಿಂದೆ ಸಿದ್ದರಾಮಯ್ಯ ಅವರ ನೇತೃತ್ವದ ಸರಕಾರದಲ್ಲಿ ಸಚಿವರಾಗಿದ್ದ ನಾಗೇಂದ್ರ ಅವರು ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅವ್ಯವಹಾರ ನಡೆಸಿರುವ ಆರೋಪಕ್ಕೆ ಗುರಿಯಾಗಿದ್ದರು. ನಂತರ ಒತ್ತಡಕ್ಕೆ ಮಣಿದ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಅಮಾಯಕ ಅಧಿಕಾರಿಯೊಬ್ಬರು ಆತ್ಮಹತ್ಯೆ ಕೂಡ ಮಾಡಿಕೊಂಡಿದ್ದರು. ಆದರೆ ಇದೀಗ ಪ್ರಕರಣದ ತನಿಖೆ ಪೂರ್ಣಗೊಳ್ಳುವ ಮೊದಲೇ ಮುಖ್ಯಮಂತ್ರಿಗಳು ನಾಗೇಂದ್ರ ಅವರಿಗೆ ಸಚಿವ ಸ್ಥಾನವನ್ನು ನೀಡಿದ್ದಾರೆ. ಮುಖ್ಯಮಂತ್ರಿಗಳಿಗೆ ಏನಾದರೂ ಭಯವಿತ್ತೇ ಅಥವಾ ಹೈಕಮಾಂಡ್ ಒತ್ತಡವಿತ್ತೇ…

Read More

ಮಡಿಕೇರಿ ಆ.13 NEWS DESK : ಪಶ್ಚಿಮ ಘಟ್ಟಗಳ ಸಂರಕ್ಷಣೆಯ ಡಾ.ಕಸ್ತೂರಿ ರಂಗನ್ ವರದಿಯನ್ನು ವಿರೋಧಿಸಿ ಕುಂದಚೇರಿ ಮತ್ತು ಕೋಪಟ್ಟಿ ಗ್ರಾಮ ವ್ಯಾಪ್ತಿಯ ಎರಡು ಸಾವಿರಕ್ಕೂ ಅಧಿಕ ಮಂದಿ ವೈಯುಕ್ತಿಕವಾಗಿ ಹಾಗೂ ವಿವಿಧ ಸಂಘ ಸಂಸ್ಥೆಗಳ ಪರವಾಗಿ ಆಕ್ಷೇಪಣೆಗಳನ್ನು ಸಲ್ಲಿಸಲಿದ್ದಾರೆ ಎಂದು ಚೆಟ್ಟಿಮಾನಿ(ಕುಂದಚೇರಿ) ಕಸ್ತೂರಿ ರಂಗನ್ ವಿರೋಧಿ ಹೋರಾಟ ಸಮಿತಿ ತಿಳಿಸಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಿತಿಯ ಪ್ರಮುಖ ಹಾಗೂ ಕುಂದಚೇರಿ ಪಂಚಾಯ್ತಿ ಮಾಜಿ ಉಪಾಧ್ಯಕ್ಷ ಕೆ.ಯು.ಹ್ಯಾರೀಸ್ ಅವರು, ಕೇಂದ್ರ ಸರಕಾರ ಇತ್ತೀಚೆಗೆ ಕಸ್ತೂರಿ ರಂಗನ್ ವರದಿಯ ಏಳನೇ ಕರಡು ಅಧಿಸೂಚನೆಯನ್ನು ಹೊರಡಿಸಿದೆ. ಕೊಡಗು ಜಿಲ್ಲಾ ವ್ಯಾಪ್ತಿಯ 55 ಗ್ರಾಮಗಳನ್ನು ಪರಿಸರ ಸೂಕ್ಷ್ಮ ಪ್ರದೇಶಗಳೆಂದು ಗುರುತಿಸಲಾಗಿದೆ. ಈ ಗ್ರಾಮಗಳಲ್ಲಿ ಕುಂದಚೇರಿ ಪಂಚಾಯ್ತಿಯ ಕುಂದಚೇರಿ ಮತ್ತು ಕೋಪಟ್ಟಿ ಗ್ರಾಮಗಳು ಒಳಪಡುತ್ತದೆ. ಈ ಎರಡು ಗ್ರಾಮಗಳಲ್ಲಿ ಸರಿ ಸುಮಾರು 4 ಸಾವಿರ ಜನರು ವಾಸವಿದ್ದು, ಬಹುತೇಕ ಬಡವರ್ಗದ ಮಂದಿಯೇ ಆಗಿದ್ದಾರೆ. ವರದಿ ಜಾರಿಯಾದಲ್ಲಿ ಇವರೆಲ್ಲರು ಸಂಕಷ್ಟಕ್ಕೆ ಸಿಲುಕುತ್ತಾರೆ ಎಂದು ಆತಂಕ ವ್ಯಕ್ತಪಡಿಸಿದರು. ಕಸ್ತೂರಿ ರಂಗನ್…

Read More

ಮಡಿಕೇರಿ NEWS DESK ಆ.13 : ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರಿಗೆ ರಾಜ್ಯ ಸರಕಾರ ನಿಗಮ ಮಂಡಳಿಯಲ್ಲಿ ಅಧ್ಯಕ್ಷ ಸ್ಥಾನ ನೀಡಬೇಕೆಂದು ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ಕಾರ್ಯದರ್ಶಿ, ಬಗರ್ ಹುಕುಂ ಸಮಿತಿಯ ಸದಸ್ಯ ಹಾಗೂ ಕೊಡಗು ಜಿಲ್ಲಾ ಬುಡಕಟ್ಟು ದೌರ್ಜನ್ಯ ನಿಯಂತ್ರಣ ಸಮಿತಿಯ ಸದಸ್ಯ ಜೆ.ಎಲ್.ಜನಾರ್ಧನ್ ಅವರು ಒತ್ತಾಯಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಸಚಿವ ಸ್ಥಾನವನ್ನು ಹೊಂದಲು ಸಂಪೂರ್ಣ ಅರ್ಹತೆಯನ್ನು ಹೊಂದಿದ್ದ ಡಾ.ಮಂತರ್ ಗೌಡ ಅವರಿಗೆ ಸಚಿವ ಸ್ಥಾನ ಸಿಗದೆ ಇರುವುದರಿಂದ ಕ್ಷೇತ್ರದ ಜನತೆಗೆ ಹಾಗೂ ಕಾಂಗ್ರೆಸ್ ಕಾರ್ಯಕರ್ತರಿಗೆ ನಿರಾಶೆಯಾಗಿದೆ. ಆದ್ದರಿಂದ ಉನ್ನತ ಮಟ್ಟದ ನಿಗಮ ಮಂಡಳಿಯಲ್ಲಾದರೂ ಅಧ್ಯಕ್ಷ ಸ್ಥಾನವನ್ನು ನೀಡಿ ನ್ಯಾಯ ಒದಗಿಸಬೇಕು ಎಂದು ಮನವಿ ಮಾಡಿದ್ದಾರೆ. ವಿದ್ಯಾವಂತರಾಗಿರುವ ಯುವ ಶಾಸಕ ಡಾ.ಮಂತರ್ ಗೌಡ ಅವರು ಆಡಳಿತದ ಪ್ರತಿ ಕ್ಷೇತ್ರದ ಅನುಭವವನ್ನು ಹೊಂದಿದ್ದಾರೆ. ಅಭಿವೃದ್ಧಿ ಕಾರ್ಯಗಳ ಮೂಲಕವೇ ಜನಪ್ರಿಯತೆಯನ್ನು ಗಳಿಸಿದ್ದಾರೆ. ಸಚಿವ ಸ್ಥಾನವನ್ನು ಸಮರ್ಥವಾಗಿ ನಿಭಾಯಿಸುವ ಅರ್ಹತೆ ಇದ್ದರೂ ಸಚಿವ ಸ್ಥಾನ ದೊರೆಯಲಿಲ್ಲ. ಮುಂದಿನ…

Read More

ವಿರಾಜಪೇಟೆ ಆ.12 NEWS DESK : ತಾಲೂಕಿನ ಮಗ್ಗುಲ ಗ್ರಾಮದಲ್ಲಿರುವ ಶ್ರೀ ಶನೇಶ್ವರ ಮತ್ತು ನವಗ್ರಹ ದೇವಾಲಯದಲ್ಲಿ ವರ್ಷಂಪ್ರತಿ ನಡೆಯುವಂತೆ ಈ ಬಾರಿಯೂ ಶ್ರಾವಣ ಮಾಸದ ಅಂಗವಾಗಿ ಶ್ರಾವಣ ಶನಿವಾರದ ವಿವಿಧ ವಿಶೇಷ ಪೂಜಾ ಕಾರ್ಯಕ್ರಮಗಳು ನಡೆಯಲಿದೆ ಎಂದು ದೇವಾಲಯದ ಆಡಳಿತ ಮಂಡಳಿಯವರಾದ ಚೋಕಂಡ ರಮೇಶ್ ಅವರು ತಿಳಿಸಿದ್ದಾರೆ. ಶ್ರಾವಣ ಮಾಸದ ಒಟ್ಟು 4 ಶನಿವಾರಗಳಂದು ದೇವಾಲಯದಲ್ಲಿ ವಿಶೇಷ ಪೂಜೆ, ಹೋಮ ಹಾಗೂ ಭಕ್ತಾದಿಗಳಿಗೆ ಅನ್ನ ಸಂತರ್ಪಣೆ ಕಾರ್ಯಕ್ರಮಗಳು ನೆರವೇರಲಿವೆ. ಆಗಸ್ಟ್ 15ರ 1ನೇ ಶನಿವಾರ ಬೆಳಿಗ್ಗೆ 7 ಗಂಟೆಗೆ ಗಣಪತಿ ಹೋಮದೊಂದಿಗೆ ಶ್ರಾವಣ ಮಾಸದ ಪೂಜಾ ಮಹೋತ್ಸವಕ್ಕೆ ಚಾಲನೆ ಸಿಗಲಿದೆ. ಆಗಸ್ಟ್ 22, ಎರಡನೇ ಶನಿವಾರ, ಆಗಸ್ಟ್ 29 3ನೇ ಶನಿವಾರ, ಸೆಪ್ಟೆಂಬರ್ 5 ರಂದು 4ನೇ ಶನಿವಾರ, ಶ್ರಾವಣ ಮಾಸದ ವಿಶೇಷ ಪೂಜಾ ಕಾರ್ಯಕ್ರಮಗಳು ನಡೆಯಲಿದೆ. ಶ್ರಾವಣ ಶನಿವಾರಗಳಂದು ದೇವಾಲಯದಲ್ಲಿ ನವಗ್ರಹ ಪೂಜೆ, ಶನಿ ಶಾಂತಿ ಪೂಜೆ, ಶನಿ ಜಪ ಹಾಗೂ ವಿವಿಧ ವಿಶೇಷ ಪೂಜೆಗಳು ಜರುಗಲಿವೆ. ಪ್ರತಿಯೊಂದು…

Read More

ಕೊಡ್ಲಿಪೇಟೆ ಆ.12 NEWS DESK : ಇಂದಿನ ವಿದ್ಯಾರ್ಥಿಗಳನ್ನು ಸಾತ್ವಿಕರಾಗಿ ಹಾಗೂ ಸಂಸ್ಕಾರವಂತರಾಗಿ ಬೆಳೆಸಬೇಕಾದ ತುರ್ತು ಅಗತ್ಯ ಇದೆ. ಸಾತ್ವಿಕ ಬದುಕಿಗೆ ಶರಣರ ವಚನಗಳು ದಾರಿ ದೀಪ. ತಾಯಂದಿರು ಎಳೆಯ ಹಂತದಲ್ಲಿಯೇ ವಚನಗಳ ಸಾರವನ್ನು ಹೇಳಿಕೊಡುವ ಮೂಲಕ ಬೆಳೆಸಿದರೆ ಮುಂದೆ ಆ ಮಗು ಹೆತ್ತವರು ಹಾಗೂ ಹಿರಿಯರ ಬಗ್ಗೆ ಎಂದೂ ತಿರಸ್ಕಾರ ಮನೋಭಾವ ಹೊಂದುವುದಿಲ್ಲ ಎಂದು ಕೊಡ್ಲಿಪೇಟೆ ಮುದ್ದಿನಕಟ್ಟೆ ಮಠದ ಶ್ರೀ ಅಭಿನವ ಸಿದ್ದಲಿಂಗ ಶಿವಾಚಾರ್ಯ ಸ್ವಾಮೀಜಿ ಕರೆಕೊಟ್ಟರು. ಕೊಡಗು ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ಹಾಗೂ ಕೊಡ್ಲಿಪೇಟೆಯ ಗಂಗಾ ವೀರಶೈವ ಮಹಿಳಾ ಸಮಾಜದ ವತಿಯಿಂದ ಕೊಡ್ಲಿಪೇಟೆಯ ಸಮಾಜ ಸೇವಕರಾದ ಮಂಜುಳಾ ಸುರೇಶ್ ಅವರ ಮನೆಯಂಗಳದಲ್ಲಿ ಹಮ್ಮಿಕೊಂಡಿದ್ದ ” ಮನೆಯಂಗಳದತ್ತ ಶರಣ ಸಾಹಿತ್ಯ ” ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ನಾವುಗಳು ಮಣ್ಣು ಹಾಗೂ ಜಲಮೂಲಗಳನ್ನು ಮನಬಂದಂತೆ ದುರ್ಬಳಕೆ ಮಾಡಿಕೊಂಡ ಪರಿಣಾಮ ಗಾಳಿಯೊಂದಿಗೆ ಎಲ್ಲವೂ ವಿಷಮಯವಾಗುತ್ತಿವೆ. ಹಿಂದಿನ ನಮ್ಮ ಪೂರ್ವಜರು ಮನೆತುಂಬಾ ಮಕ್ಕಳು ಹಡೆದಿದ್ದರು. ರಸಾಯನಿಕ ಮುಕ್ತ ದವಸಗಳನ್ನು ಬೆಳೆದು…

Read More