ಲೇಖಕ: admin

ಮಡಿಕೇರಿ ಜೂ.9 NEWS DESK : ವಿರಾಜಪೇಟೆ ಕಾವೇರಿ ಪದವಿ ಪೂರ್ವ ಕಾಲೇಜಿನಲ್ಲಿ “ಅಂತರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ದಿನವನ್ನು ಆಚರಿಸಲಾಯಿತು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾದ  ವಿರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯ ಉಪ ನಿರೀಕ್ಷಕರಾದ ಎನ್.ಜೆ.ಲತಾ ಅವರು ವಿದ್ಯಾರ್ಥಿಗಳಿಗೆ ಮಾದಕ ವ್ಯಸನ ಮತ್ತು ಮಾದಕ ವಸ್ತುಗಳ ಕುರಿತು ವಿದ್ಯಾರ್ಥಿಗಳಿಗೆ ಅರಿವು ಮೂಡಿಸಿದರು. ಮಾದಕ ವಸ್ತುಗಳ ಸೇವನೆಯು ಇಂದಿನ ಸಮಾಜದ ಒಂದು ಗಂಭೀರ ಸಮಸ್ಯೆಯಾಗಿದೆ. ಯುವಜನತೆ ಕುತೂಹಲ, ಸ್ನೇಹಿತರ ಒತ್ತಡ ಹಾಗೂ ತಪ್ಪು ಅಭ್ಯಾಸಗಳಿಂದ ಮಾದಕ ವಸ್ತುಗಳ ವ್ಯಸನಕ್ಕೆ ಒಳಗಾಗುತ್ತಿದ್ದಾರೆ. ಆರಂಭದಲ್ಲಿ ಇದು ತಾತ್ಕಾಲಿಕ ಸಂತೋಷವನ್ನು ನೀಡಿದರೂ, ನಂತರ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಹಾಳುಮಾಡುತ್ತದೆ ಎಂದರು. ಮಾದಕ ವಸ್ತುಗಳ ವ್ಯಸನದಿಂದ ಶಿಕ್ಷಣ, ಉದ್ಯೋಗ, ಕುಟುಂಬ ಮತ್ತು ಸಾಮಾಜಿಕ ಜೀವನದ ಮೇಲೆ ದುಷ್ಪರಿಣಾಮ ಉಂಟಾಗುತ್ತದೆ. ವ್ಯಸನಿಗಳು ಅನೇಕ ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಾರೆ ಮತ್ತು ಕೆಲವೊಮ್ಮೆ ಅಪರಾಧ ಚಟುವಟಿಕೆಗಳತ್ತವೂ ತಿರುಗುವ ಸಾಧ್ಯತೆ ಇರುತ್ತದೆ. ಈ ಸಮಸ್ಯೆಯನ್ನು ತಡೆಗಟ್ಟಲು ಪೋಷಕರು, ಶಿಕ್ಷಕರು, ಸರ್ಕಾರ ಮತ್ತು ಸಮಾಜ…

Read More

ಸೋಮವಾರಪೇಟೆ ಜೂ.9 NEWS DESK : ನಗರ ಕಾಂಗ್ರೆಸ್ ಸಮಿತಿ ವತಿಯಿಂದ ನಗರ ಕಾರ್ಯಕರ್ತರ ಕುಂದುಕೊರತೆ ಸಭೆ ನಗರ ಅಧ್ಯಕ್ಷ ಮಂಜುನಾಥ್ ಅವರ ನೇತೃತ್ವದಲ್ಲಿ ಪಟ್ಟಣದ ಮಹಿಳಾ ಸಮಾಜದಲ್ಲಿ ನಡೆಯಿತು. ಸಭೆಯಲ್ಲಿ ಶಾಸಕ ಡಾ. ಮಂತರ್ ಗೌಡ ಭಾಗವಹಿಸಿ, ಮೊದಲಿಗೆ ಕಾರ್ಯಕರ್ತರ ಬೇಡಿಕೆಗಳು ಹಾಗೂ ಸಮಸ್ಯೆಗಳನ್ನು ಆಲಿಸಿದರು. ನಂತರ ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು ಎದುರಾಗಲಿರುವುದರಿಂದ ಕಾರ್ಯಕರ್ತರು ಈಗಿನಿಂದಲೇ ಸನ್ನದ್ಧರಾಗಬೇಕು ಎಂದು ಕರೆ ನೀಡಿದರು. ಎಸ್‍ಐಆರ್ ಕುರಿತು ಹೆಚ್ಚು ಗಮನ ಹರಿಸಿ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕೆಲಸ ಮಾಡಬೇಕು ಎಂದರು. ಇದಲ್ಲದೆ, ತಮ್ಮ ತಮ್ಮ ಪ್ರದೇಶಗಳಲ್ಲಿ ಸಮಸ್ಯೆಗೀಡಾದವರು ಹಾಗೂ ಅನಾರೋಗ್ಯಕ್ಕೆ ತುತ್ತಾದವರ ಬಗ್ಗೆ ಕಾಳಜಿ ವಹಿಸಿ ಸಾಧ್ಯವಾದಷ್ಟು ಸಹಾಯ ಮಾಡಬೇಕು. ಇಂತಹ ವಿಷಯಗಳನ್ನು ನನ್ನ ಗಮನಕ್ಕೂ ತರಬೇಕೆಂದು ತಿಳಿಸಿದರು. ಸ್ಥಳೀಯ ಬೂತ್ ಮಟ್ಟದಿಂದ ತಾಲೂಕು ಮಟ್ಟದವರೆಗೆ ಸಕ್ರಿಯ ಕಾರ್ಯಕರ್ತರನ್ನು ಗುರುತಿಸಿ ಅಧ್ಯಕ್ಷರ ನೇಮಕಾತಿ ಪ್ರಕ್ರಿಯೆಯನ್ನು ಶೀಘ್ರ ಪೂರ್ಣಗೊಳಿಸಬೇಕಾಗಿದೆ ಎಂದು ಹೇಳಿದರು. ನಗರದ ಸ್ವಚ್ಛತೆ ವಿಚಾರದಲ್ಲಿಯೂ ಎಲ್ಲರೂ ಹೆಚ್ಚಿನ…

Read More

ಸೋಮವಾರಪೇಟೆ ಜೂ.9 NEWS DESK : ಪಾಠದ ಜೊತೆಗೆ ಕೈತೋಟದಂತಹ ಕೃಷಿ ಚಟುವಟಿಕೆಯನ್ನು ಶಾಲೆಯಲ್ಲಿ ಕೈಗೊಂಡರೆ ರಸಾಯನಮುಕ್ತ ಆಹಾರ ಪದಾರ್ಥಗಳು ವಿದ್ಯಾರ್ಥಿಗಳಿಗೆ ದೊರಕುತ್ತದೆ ಎಂದು ಚೌಡ್ಲು ಗ್ರಾಮ ಪಂಚಾಯಿತಿ ಮಾಜಿ ಸದಸ್ಯ, ಸಮಾಜ ಸೇವಕ ಸಿ.ಬಿ.ಸುರೇಶ್ ಶೆಟ್ಟಿ ಅಭಿಪ್ರಾಯಿಸಿದರು. ಐಗೂರು ಪ್ರೌಢಶಾಲೆಯ ಭುವನಕ್ಕೊಂದು ಸದನ ಇಕೋ ಕ್ಲಬ್ ವತಿಯಿಂದ ನೂತನವಾಗಿ ಶಾಲಾ ಆವರಣದಲ್ಲಿ ನಿರ್ಮಿಸಲಾದ ಕೈದೋಟಕ್ಕೆ ಉದಾರವಾಗಿ ಗೇಟ್ ಹಸ್ತಾಂತರಿಸಿ, ವಿದ್ಯಾರ್ಥಿಗಳಿಗೆ ಸಿಹಿ ವಿತರಿಸಿ ಅವರು ಮಾತನಾಡಿದರು. ವಿದ್ಯಾರ್ಥಿಗಳಿಗೆ ತಾಜಾ ತರಕಾರಿಗಳು, ಸೊಪ್ಪುಗಳ ಅಗತ್ಯತೆ ಇದೆ. ವಿದ್ಯಾರ್ಥಿಗಳು ಸ್ವತ: ಶಾಲಾ ಕೈತೋಟದಲ್ಲಿ ಇಂತಹುಗಳನ್ನು ಬೆಳೆಯುವ ಮೂಲಕ ತಮ್ಮ ಆರೋಗ್ಯವನ್ನು ಉತ್ತಮವಾಗಿ ಕಾಪಾಡಿಕೊಳ್ಳಬಹುದು. ವಿದ್ಯಾರ್ಥಿಗಳು ಆರ್ಥಿಕ ಸಮಸ್ಯೆಯಿಂದ ಎಂದಿಗೂ ವಿದ್ಯಾಭ್ಯಾಸವನ್ನು ಮೊಟಕುಗೊಳಿಸಬಾರದು. ಪುಸ್ತಕಗಳು ಅಥವಾ ಶಾಲಾ ಶುಲ್ಕಗಳಿಗೆ ತಾನು ಸಹಾಯಹಸ್ತ ನೀಡುವುದಾಗಿ ಭರವಸೆ ನೀಡಿದರು. ಈ ಸಂದರ್ಭ ಶಾಲಾ ಮುಖ್ಯ ಶಿಕ್ಷಕ ಎಂ.ಎಂ.ಯಶ್ವಂತ್ ಕುಮಾರ್, ಸಹ ಶಿಕ್ಷಕರು ಇದ್ದರು.

Read More

ಮಡಿಕೇರಿ ಜೂ.9 NEWS DESK : ನಗರದ ಜಿಲ್ಲಾ ಸಹಕಾರ ತರಬೇತಿ ಸಂಸ್ಥೆಯ ವಸತಿ ನಿಲಯದಲ್ಲಿ ವ್ಯಾಸ್ತವ್ಯ ಹೂಡಿರುವ ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡದ(ಎನ್‍ಡಿಆರ್‍ಎಫ್) ಅಧಿಕಾರಿಗಳು ಹಾಗೂ ಸಿಬ್ಬಂಧಿಯನ್ನು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಭೇಟಿ ಮಾಡಿ ಮಾಹಿತಿ ಪಡೆದರು. ಜಿಲ್ಲೆಯ ಸೂಕ್ಷ್ಮ ಹಾಗೂ ಪ್ರವಾಹ ಪೀಡಿತ ಪ್ರದೇಶಗಳನ್ನು ವೀಕ್ಷಿಸಿ, ತುರ್ತು ಸಂದರ್ಭದಲ್ಲಿ ಜನ-ಜಾನುವಾರು ರಕ್ಷಣೆ ಮಾಡುವಲ್ಲಿ ಎನ್‍ಡಿಆರ್‍ಎಫ್ ತಂಡ ಕರ್ತವ್ಯ ನಿರ್ವಹಿಸಲಿದೆ. ಬೆಂಗಳೂರಿನ ರೀಜನಲ್ ರೆಸ್ಪಾನ್ಸ್ ಸೆಂಟರ್(ಆರ್‍ಆರ್‍ಸಿ) 10ನೇ ಬೆಟಾಲಿಯನ್‍ನ ಇನ್ಸ್‍ಪೆಕ್ಟರ್ ರಾಮ್ ಭಜ್ ಅವರ ನೇತೃತ್ವದಲ್ಲಿ ಎನ್‍ಡಿಆರ್‍ಎಫ್ ತಂಡ ಆಗಮಿಸಿದ್ದು, ಬೋಟ್‍ಗಳು, ಮರ ಕತ್ತರಿಸುವ ಯಂತ್ರ, ರ್ಯಾಪ್ಟ್, ಹಗ್ಗ, ಟೆಂಟ್, ಜೀವರಕ್ಷಕ ಜಾಕೆಟ್, ಸರ್ಚ್ ಲೈಟ್, ಆಕ್ಸಿಜನ್ ಜನರೇಟರ್, ಜೀವರಕ್ಷಕ ಔಷಧಗಳ ಸಿಗ್ನಲ್ ಯೂನಿಟ್‍ಗಳು ಹೀಗೆ ಪರಿಕರಗಳ ಜೊತೆ ಎನ್‍ಡಿಆರ್‍ಎಫ್ ತಂಡ ಒಳಗೊಂಡಿದೆ. ಈಗಾಗಲೇ ಜಿಲ್ಲೆಯಲ್ಲಿ ಮುಂಗಾರು ಆರಂಭವಾಗಿದ್ದು, ಸಾಧಾರಣ ಮಳೆಯಾಗುತ್ತಿದೆ. ಈ ಹಿನ್ನೆಲೆ ಮುಂದಿನ ದಿನಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದ್ದು, ಪ್ರತೀ ವರ್ಷದಂತೆ ಈ ವರ್ಷವೂ ಎನ್‍ಡಿಆರ್‍ಎಫ್…

Read More

ಮಡಿಕೇರಿ ಜೂ.9 NEWS DESK : ಕೊಡಗು ಜಿಲ್ಲೆಯಲ್ಲಿ ಮುಂಗಾರು ಆರಂಭವಾಗಿದ್ದು, ಮುಂದಿನ ದಿನಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ. ಆದ್ದರಿಂದ ಕುಡಿಯುವ ನೀರನ್ನು ಆಗಾಗ ಪರೀಕ್ಷೆ ಮಾಡಿ, ಶುದ್ಧ ಕುಡಿಯುವ ನೀರು ಪೂರೈಕೆಗೆ ಗಮನ ಹರಿಸಬೇಕು ಎಂದು ಶಾಸಕರಾದ ಡಾ. ಮಂತರ್ ಗೌಡ ಅವರು ಸಲಹೆ ಮಾಡಿದ್ದಾರೆ. ನಗರದ ತಹಶೀಲ್ದಾರ್ ಅವರ ಕಚೇರಿಯಲ್ಲಿ ಮಡಿಕೇರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ತಾಲ್ಲೂಕು ಮಟ್ಟದ ಅಧಿಕಾರಿಗಳು, ಪಿಡಿಒಗಳು, ಕಂದಾಯ ಇಲಾಖೆ ಅಧಿಕಾರಿಗಳು, ಪೊಲೀಸರು ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳ ಜೊತೆ ‘ಕಾರ್ಯಪಡೆ ಸಮಿತಿ ಸಭೆ’ ನಡೆಸಿ ಅವರು ಮಾತನಾಡಿದರು. ಮಳೆಗಾಲದಲ್ಲಿ ಸಾಂಕ್ರಾಮಿಕ ರೋಗ ಹರಡದಂತೆ ಎಚ್ಚರವಹಿಸಬೇಕು. ತೆಂಗಿನ ಚಿಪ್ಪು, ಟೈರು ಮತ್ತಿತರ ವಸ್ತುಗಳಲ್ಲಿ ನೀರು ನಿಲ್ಲದಂತೆ ಗಮನಹರಿಸಬೇಕು. ಮಳೆ ನೀರು ಸರಾಗವಾಗಿ ಹರಿಯುವಂತಾಗಲು ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಕಾಲುವೆ, ಚರಂಡಿಗಳನ್ನು ಸ್ವಚ್ಛಗೊಳಿಸುವ ಕಾರ್ಯ ಆಗಬೇಕು. ರಸ್ತೆ ಬದಿ ಚರಂಡಿಯಲ್ಲಿ ಸರಾಗವಾಗಿ ನೀರು ಹರಿಯುವಂತಾಗಲು ಶುಚಿಗೊಳಿಸುವ ಕಾರ್ಯ ಆಗಬೇಕು ಎಂದು ಸಂಬಂಧಪಟ್ಟ ಎಂಜಿನಿಯರ್‍ಗಳಿಗೆ…

Read More

ಮಡಿಕೇರಿ ಜೂ.9 NEWS DESK : ಕೊಡಗು ಪತ್ರಿಕಾ ಭವನ ಟ್ರಸ್ಟ್(ರಿ) ವತಿಯಿಂದ ಜೂ.13 ರಂದು ಮಧ್ಯಾಹ್ನ 3 ಗಂಟೆಗೆ ಪತ್ರಕರ್ತರ ಮಕ್ಕಳಿಗೆ ವಿದ್ಯಾನಿಧಿ ವಿತರಣಾ ಕಾರ್ಯಕ್ರಮ ನಗರದ ಪತ್ರಿಕಾ ಭವನದ ಸಭಾಂಗಣದಲ್ಲಿ ನಡೆಯಲಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೊಡಗು ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ಎಂ.ಪಿ.ಕೇಶವ ಕಾಮತ್ ವಹಿಸಲಿದ್ದಾರೆ. ಕಲ್ಲಡ್ಕದ ನಿವೃತ್ತ ಉಪನ್ಯಾಸಕರಾದ ನಾರಾಯಣ ಗೌಡ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಟ್ರಸ್ಟ್‍ನ ಪ್ರಧಾನ ಕಾರ್ಯದರ್ಶಿ ಎಸ್.ಜಿ.ಉಮೇಶ್, ಕೋಶಾಧಿಕಾರಿ ಕೆ. ತಿಮ್ಮಪ್ಪ, ಟ್ರಸ್ಟಿಗಳಾದ ಟಿ.ಪಿ.ರಮೇಶ್, ಜಿ.ಚಿದ್ವಿಲಾಸ್, ಜೀವನ್ ಚಿಣ್ಣಪ್ಪ, ಅನಿಲ್ ಎಚ್.ಟಿ., ವಿ.ಪಿ.ಸುರೇಶ್, ಶ್ರೀಧರ್ ಹೂವಲ್ಲಿ, ಮಧೋಶ್ ಪೂವಯ್ಯ ಅವರುಗಳ ಗೌರವ ಉಪಸ್ಥಿತಿಯಲ್ಲಿ ಕಾರ್ಯಕ್ರಮ ನಡೆಯಲಿದೆ.

Read More

ಮಡಿಕೇರಿ NEWS DESK ಜೂ.9 : ಮುಂಬೈನ ಎನ್‌ಎಫ್‌ಡಿಸಿ-ಎಫ್‌ಡಿ ಕ್ಯಾಂಪಸ್‌ನಲ್ಲಿ ಜೂ.15 ರಿಂದ ಜೂ.21 ರವರೆಗೆ ನಡೆಯುವ 19ನೇ ಮುಂಬೈ  ಅಂತರಾಷ್ಟ್ರೀಯ  ಚಲನಚಿತ್ರೋತ್ಸವಕ್ಕೆ ‘ಉಮ್ಮತ್ತಾಟ್’ ಕೊಡವ ಸಾಕ್ಷ್ಯಚಿತ್ರ ಆಯ್ಕೆಯಾಗಿದೆ. ದಕ್ಷಿಣ ಏಷ್ಯಾದ ಸಾಕ್ಷ್ಯಚಿತ್ರಗಳು, ಕಿರುಚಿತ್ರಗಳು ಮತ್ತು ಅನಿಮೇಷನ್ ಚಿತ್ರಗಳಿಗಾಗಿ ಮೀಸಲಾದ ಅತ್ಯಂತ ದೊಡ್ಡ ಚಲನಚಿತ್ರೋತ್ಸವ ಇದಾಗಿದೆ. ರಾಷ್ಟ್ರ ಮತ್ತು ರಾಜ್ಯ ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿರುವ ಕೊಟ್ಟುಕತ್ತೀರ ಪ್ರಕಾಶ್ ಕಾರ್ಯಪ್ಪ ಹಾಗೂ ಕೊಟ್ಟುಕತ್ತೀರ ಯಶೋಧ ಪ್ರಕಾಶ್ ದಂಪತಿಗೆ ಮುಂಬೈ  ಅಂತರಾಷ್ಟ್ರೀಯ   ಚಲನಚಿತ್ರೋತ್ಸವದಲ್ಲಿ ‘ಉಮ್ಮತ್ತಾಟ್’ ಪ್ರದರ್ಶನಗೊಳ್ಳುತ್ತಿರುವುದು ಮತ್ತೊಂದು ಹೆಗ್ಗಳಿಕೆಯಾಗಿದೆ. ಕೊಡವ ಚಿತ್ರರಂಗದ ಖ್ಯಾತಿಯನ್ನು ಅಂತರಾಷ್ಟ್ರೀಯ  ಮಟ್ಟಕ್ಕೆ ಕೊಂಡೊಯ್ದ ಹೆಗ್ಗಳಿಕೆಯ ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕಿ ಕೊಟ್ಟುಕತ್ತೀರ ಯಶೋಧ ಪ್ರಕಾಶ್ ಅವರು ಸ್ವಸ್ತಿಕ್ ಎಂಟರ್ಟೈನ್ಮೆoಟ್ ಬ್ಯಾನರ್ ಅಡಿಯಲ್ಲಿ ನಿರ್ಮಿಸಿ, ಕೊಟ್ಟುಕತ್ತೀರ ಪ್ರಕಾಶ್ ಕಾರ್ಯಪ್ಪ ಅವರು ನಿರ್ದೇಶಿಸಿರುವ ‘ಉಮ್ಮತ್ತಾಟ್’ ಕೊಡವ ಜಾನಪದ ನೃತ್ಯ ಪ್ರಕಾರದ ಮೇಲೆ ಬೆಳಕು ಚೆಲ್ಲಿದೆ. ಹಲವು ವರ್ಷಗಳ ಇತಿಹಾಸ ಹೊಂದಿರುವ ಈ ಕಲೆಯ ಒಟ್ಟು 13 ನೃತ್ಯ ಪ್ರಕಾರಗಳನ್ನು ಚಿತ್ರೀಕರಿಸಲಾಗಿದ್ದು, 153 ಕಲಾವಿದರು ನೃತ್ಯ ಮಾಡಿದ್ದಾರೆ. ‘ಯೂ’ ಅರ್ಹತಾಪತ್ರ ಪಡೆದಿರುವ ‘ಉಮ್ಮತ್ತಾಟ್’…

Read More

ಮಡಿಕೇರಿ NEWS DESK ಜೂ.9 : ಮಡಿಕೇರಿ ನಗರದ ಮಹದೇವಪೇಟೆಯ ಎಸ್.ಎಸ್ ಆಸ್ಪತ್ರೆಯ 5ನೇ ವಾರ್ಷಿಕೋತ್ಸವವನ್ನು ಸಂಭ್ರಮದಿoದ ನಡೆಯಿತು.  ಆಸ್ಪತ್ರೆಯಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ನಗರಸಭಾ ಅಧ್ಯಕ್ಷೆ ಪಿ.ಕಲಾವತಿ ಅವರು, ಇಬ್ಬರು ವಿಶೇಷ ಚೇತನ ಮಕ್ಕಳ ಪೋಷಕರಿಗೆ ಆರ್ಥಿಕ ನೆರವು ನೀಡುವ ಮೂಲಕ ಎಸ್.ಎಸ್ ಆಸ್ಪತ್ರೆಯ ಆಡಳಿತ ಮಂಡಳಿ 5ನೇ ವಾರ್ಷಿಕೋತ್ಸವವನ್ನು ಆಚರಿಸುತ್ತಿರುವುದು ಶ್ಲಾಘನೀಯ. ಈ ಕಾರ್ಯ ಇತರರಿಗೂ ಮಾದರಿಯಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ನಗರಸಭೆಯ ಉಪಾಧ್ಯಕ್ಷ ಮಹೇಶ್ ಜೈನಿ ಅವರು ಮಾತನಾಡಿ, ಎಸ್.ಎಸ್ ಆಸ್ಪತ್ರೆ ಪ್ರತಿವರ್ಷ ಸಮಾಜಮುಖಿ ಕಾರ್ಯದೊಂದಿಗೆ ವಾರ್ಷಿಕೋತ್ಸವವನ್ನು ವಿಭಿನ್ನ ರೀತಿಯಲ್ಲಿ ಆಚರಿಸಿಕೊಂಡು ಬರುತ್ತಿದೆ. ವೈದ್ಯಕೀಯ ಸೇವೆಯೊಂದಿಗೆ ಸಮಾಜಕ್ಕೆ ಮಾದರಿಯಾದ ಕಾರ್ಯವನ್ನು ಮಾಡಿರುವುದು ಹೆಮ್ಮೆಯ ವಿಚಾರ. ಮುಂದಿನ ದಿನಗಳಲ್ಲಿ ಸುಸಜ್ಜಿತ ಆಸ್ಪತ್ರೆಯನ್ನು ನಿರ್ಮಾಣ ಮಾಡಿ ಕೊಡಗಿನ ಜನತೆಗೆ ಹೆಚ್ಚಿನ ವೈದ್ಯಕೀಯ ಸೇವೆಯನ್ನು ನೀಡುವಂತಾಗಲಿ ಎಂದು ಶುಭ ಹಾರೈಸಿದರು. ನಗರಸಭೆಯ ಮಾಜಿ ಅಧ್ಯಕ್ಷ ಹೆಚ್.ಎಂ.ನoದಕುಮಾರ್ ಅವರು ಮಾತನಾಡಿ   ಎಸ್.ಎಸ್ ಆಸ್ಪತ್ರೆ ಸೇವಾ ಮನೋಭಾವನೆಯೊಂದಿಗೆ ಕಾರ್ಯನಿರ್ವಹಿಸುತ್ತಿದ್ದು,…

Read More

ಮಡಿಕೇರಿ NEWS DESK ಜೂ.9 : ಮಡಿಕೇರಿ ನಗರ ಬಿಜೆಪಿ ಮಂಡಲದ ಪ್ರಧಾನ ಕಾರ್ಯದರ್ಶಿಯಾಗಿ ಬಿ.ಎಸ್.ಪ್ರಶಾಂತ್ ಕುಮಾರ್ ಆಯ್ಕೆಯಾಗಿದ್ದಾರೆ. ಪಕ್ಷ ಸಂಘಟನೆಯ ಹಿನ್ನೆಲೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ ಅವರ ಶಿಫಾರಸ್ಸಿನ ಮೇರೆಗೆ ಪ್ರಶಾಂತ್ ಕುಮಾರ್ ಅವರನ್ನು ಆಯ್ಕೆ ಮಾಡಿರುವುದಾಗಿ ನಗರಾಧ್ಯಕ್ಷ ಉಮೇಶ್ ಸುಬ್ರಮಣಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಮಡಿಕೇರಿ ಜೂ.8 NEWS DESK : ತುಮಕೂರಿನಲ್ಲಿ ನಡೆದ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆಯ ರಾಜ್ಯ ಮಟ್ಟದ ಸಮ್ಮೇಳನದಲ್ಲಿ “ಶಕ್ತಿ ಪತ್ರಿಕೆಯ ಸೇವೆಯನ್ನು ಪ್ರಶಂಸಿಸಿ ಸನ್ಮಾನಿಸಲಾಯಿತು. ಗಂಗಾಧರಯ್ಯ ಮೆಮೋರಿಯಲ್ ಹಾಲ್ ನಲ್ಲಿ ನಡೆದ ರಾಜ್ಯ ಸಮ್ಮೇಳನ ಹಾಗೂ ತುಮಕೂರು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಬೆಳ್ಳಿ ಮಹೋತ್ಸವ ಆಚರಣೆ ಸಂದರ್ಭ ಶಾಸಕ ಜ್ಯೋತಿ ಗಣೇಶ್ ಅವರು ಸಾಧಕರಿಗೆ ಗೌರವ ಸಲ್ಲಿಸಿದರು. “ಶಕ್ತಿ”ಯ ಪರವಾಗಿ ಸಂಪಾದಕ ಜಿ ಚಿದ್ವಿಲಾಸ್ ಸಮ್ಮೇಳನದಲ್ಲಿ ಸನ್ಮಾನ ಸ್ವೀಕರಿಸಿದರು. ಈ ಸಂದರ್ಭ ಎಫ್.ಕೆ.ಸಿ.ಸಿ.ಐ. ನ ಅಧ್ಯಕ್ಷೆ ಉಮಾರೆಡ್ಡಿ, ಹಿರಿಯ ಉಪಾಧ್ಯಕ್ಷ ಸಾಯಿ ರಾಮ್ ಪ್ರಸಾದ್,ಉಪಾಧ್ಯಕ್ಷ ಶಶಿಧರ್, ಮಾಜಿ ಅಧ್ಯಕ್ಷ ಶಿವಕುಮಾರ್, ತುಮಕೂರು ಚೇಂಬರ್ ಅಧ್ಯಕ್ಷ ಪಾಂಡುರಂಗ, ತುಮಕೂರು ಚೇಂಬರ್ ಪದಾಧಿಕಾರಿ ಹಾಗೂ ಎಫ್.ಕೆ.ಸಿ.ಸಿ.ಐ. ನ ಜಿಲ್ಲಾ ಸಮನ್ವಯ ಸಮಿತಿಯ ಅಧ್ಯಕ್ಷ ಸುಬ್ನನ್ ಹಿರೇಮಠ್ ಹಾಗೂ ಇತರರು ವೇದಿಕೆಯಲ್ಲಿದ್ದರು. ಇದೇ ಸಂದರ್ಭ ಎಲ್ಲಾ ಜಿಲ್ಲಾ ಚೇಂಬರ್ ಅಧ್ಯಕ್ಷರನ್ನು ಗೌರವಿಸಲಾಯಿತು. ಕೊಡಗು ಜಿಲ್ಲಾ ಚೇಂಬರ್ ಆಫ್ ಕಾಮರ್ಸ್ ಅಧ್ಯಕ್ಷ…

Read More