ಲೇಖಕ: admin

ಮಡಿಕೇರಿ NEWS DESK ಏ.15 : ವಾರ್ಷಿಕ ಪೂಜೋತ್ಸವದಲ್ಲಿ ತೊಡಗಿದ್ದ ಭಕ್ತರ ಮೇಲೆ ಹೆಜ್ಜೇನು ಹುಳಗಳು ದಾಳಿ ಮಾಡಿರುವ ಘಟನೆ ಕಣಿವೆಯ ಹೊಸಪಟ್ಟಣ ಗ್ರಾಮದ ಶ್ರೀ ಬಸವೇಶ್ವರ ಹಾಗೂ ಕನ್ನಂಬಾಡಮ್ಮ ದೇವಾಲಯದ ಬಳಿ ನಡೆದಿದೆ. ಶ್ರೀ ಬಸವೇಶ್ವರ ಹಾಗೂ ಕನ್ನಂಬಾಡಮ್ಮ ದೇವಾಲಯದ ವಾರ್ಷಿಕೋತ್ಸವದ ಪ್ರಯುಕ್ತ ದೇವರ ಉತ್ಸವ ಮೂರ್ತಿಗಳನ್ನು ಕಾವೇರಿ ನದಿಯಲ್ಲಿ ಸ್ನಾನ ಮಾಡಿಸಿ ಗಂಗಾಪೂಜೆ ನೆರವೇರಿಸಲಾಗುತ್ತಿತ್ತು. ಈ ಸಂದರ್ಭ ಏಕಾಏಕಿ ಹೆಜ್ಜೇನು ಹುಳಗಳು ಗ್ರಾಮಸ್ಥರ ಮೇಲೆ ದಾಳಿ ಮಾಡಿತು. ಬಹುತೇಕ ಮಂದಿ ದೇವಾಲಯದತ್ತ ಮತ್ತು ತಮ್ಮ ತಮ್ಮ ಮನೆಗಳಿಗೆ ಓಡಿ ನಿಟ್ಟುಸಿರುಬಿಟ್ಟರು. ಕೆಲವರು ದೇವರಿಗೆ ತಪ್ಪು ಕಾಣಿಕೆ ಹಾಕಿ ಪ್ರಾರ್ಥಿಸಿದರು, ಅದೃಷ್ಟವಶಾತ್ ಭಕ್ತರು ಪ್ರಾಣಾಪಾಯದಿಂದ ಪಾರಾದರು.

Read More

ಮಡಿಕೇರಿ NEWS DESK ಏ.15 : ಕರ್ನಾಟಕದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರಕಾರ ಸ್ಥಳೀಯ ಸಂಸ್ಥೆಗಳಾದ ಜಿ.ಪಂ, ತಾ.ಪಂ ಮತ್ತು ಗ್ರಾ.ಪಂ ಚುನಾವಣೆಯನ್ನು ನಡೆಸದೆ ಪ್ರಜಾಪ್ರಭುತ್ವ ವಿರೋಧಿ ನೀತಿಯನ್ನು ಅನುಸರಿಸುತ್ತಿದೆ ಎಂದು ಕೊಡಗು ಜಿಲ್ಲಾ ಬಿಜೆಪಿ ಆರೋಪಿಸಿದೆ. ಪತ್ರಿಕಾ ಪ್ರಕಟಣೆ ನೀಡಿರುವ ಜಿಲ್ಲಾ ಬಿಜೆಪಿ ವಕ್ತಾರ ತಳೂರು ಎ.ಕಿಶೋರ್ ಕುಮಾರ್ ಅವರು ಚುನಾವಣೆ ನಡೆಸದ ಕಾಂಗ್ರೆಸ್ ಸರಕಾರ ಆಡಳಿತದಲ್ಲಿ ನಿಷ್ಕ್ರಿಯವಾಗಿದೆ. ಪಂಚಾಯಿತಿಗಳ ಅಧಿಕಾರ ಅಧಿಕಾರಿಗಳ ಕಪಿಮುಷ್ಟಿಯಲ್ಲಿರುವುದರಿಂದ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ ಎಂದು ಟೀಕಿಸಿದ್ದಾರೆ. ಸರಕಾರದ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ಮತ್ತು ಶೀಘ್ರ ಚುನಾವಣೆ ನಡೆಸುವಂತೆ ಆಗ್ರಹಿಸಿ ಬಿಜೆಪಿ ವತಿಯಿಂದ ಕೊಡಗು ಜಿಲ್ಲೆಯ ತಾಲ್ಲೂಕು ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳ ಕಛೇರಿ ಎದುರು ಬೃಹತ್ ಪ್ರತಿಭಟನೆ ನಡೆಯಲಿದೆ. ಏ.24 ರಂದು ಬೆಳಿಗ್ಗೆ 11 ಗಂಟೆಗೆ ಮಡಿಕೇರಿಯಲ್ಲಿ ಹಾಗೂ ಏ.27 ರಂದು ಬೆಳಿಗ್ಗೆ 11 ಗಂಟೆಗೆ ಪೊನ್ನಂಪೇಟೆ ಮತ್ತು ಸೋಮವಾರಪೇಟೆ ತಾಲ್ಲೂಕು ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳ ಕಛೇರಿ ಎದುರು ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ತಳೂರು ಎ.ಕಿಶೋರ್ ಕುಮಾರ್ ತಿಳಿಸಿದ್ದಾರೆ.…

Read More

ಮಡಿಕೇರಿ NEWS DESK ಏ.14 : ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ಆದಿಮಸಂಜಾತ ಏಕ-ಜನಾಂಗೀಯ ಪ್ರಕೃತಿ ಆರಾಧಕ ಕೊಡವರ ಹೊಸ ವರ್ಷದ ದಿನ ಎಡ್ಮ್ಯಾರ್ 1 ನ್ನು ಸಂಭ್ರಮದಿoದ ಆಚರಿಸಿತು. ಇಂದು ಮುಂಜಾನೆ ಬೆಂಗ್ನಾಡು ಗ್ರಾಮದ ಬೆಟ್ಟತ್ತೂರಿನಲ್ಲಿರುವ ಕುಪದೀರ ಎನ್.ಮೋಹನ್ ಅವರ ಭತ್ತದ ಗದ್ದೆಯಲ್ಲಿ ಭೂಮಿ ತಾಯಿಗೆ ಧಾರ್ಮಿಕ ಪೂಜೆಯನ್ನು ಸಲ್ಲಿಸಲಾಯಿತು. ಕೆಂಪಯ್ಯ ಹಾಗೂ ಕರಿಯ ಎಂಬ ಹೆಸರಿನ ಜೋಡೆತ್ತುಗಳ ಸಹಾಯದಿಂದ ಸಿ.ಎನ್.ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರು ಸಾಂಪ್ರದಾಯಿಕ ಉಳುಮೆ, ನೇಗಿಲು ಹೊಡೆಯುವ ವಿಧಿಯನ್ನು ನೆರವೇರಿಸಿದರು. ಭೂತಾಯಿಗೆ ನಮಸ್ಕರಿಸುವ ಮೂಲಕ ಗೌರವ ಸಲ್ಲಿಸಿದರು. ಈ ಧಾರ್ಮಿಕ ಆಚರಣೆಗಳು ಕೊಡವ ಬುಡಕಟ್ಟು ಜನಾಂಗಕ್ಕೆ ಮಣ್ಣಿನೊಂದಿಗಿರುವ ಅವಿನಾಭಾವ ಸಂಬoಧವನ್ನು ಸಾಕ್ಷೀಕರಿಸುತ್ತದೆ ಎಂದು ಎನ್.ಯು.ನಾಚಪ್ಪ ತಿಳಿಸಿದರು. ಕೊಡವ ಕ್ಯಾಲೆಂಡರ್ ಪಂಚಾoಗದ ಪ್ರಕಾರ ಕೊಡವರ ಹೊಸ ವರ್ಷದ ದಿನವನ್ನು ಎಡ್ಮ್ಯಾರ್ 1 ರಂದು ಅಂದರೆ ಗ್ರೆಗೋರಿಯನ್ ಕ್ಯಾಲೆಂಡರ್ ನ ಏಪ್ರಿಲ್ 14 ರಂದು ಆಚರಿಸಲಾಗುತ್ತದೆ. ಕೊಡವರು ತಮ್ಮ ಸಾಂಪ್ರದಾಯಿಕ ಪದ್ಧತಿಗಳನ್ನು ಪಾಲಿಸುತ್ತಾರೆ, ಎತ್ತುಗಳ ಮೂಲಕ ಭತ್ತದ ಗದ್ದೆಯನ್ನು…

Read More

ಮಡಿಕೇರಿ ಏ.14  NEWS DESK  :  66/33/11 ಕೆ.ವಿ MUSS ಮಗ್ಗುಲ, ವಿರಾಜಪೇಟೆ ವಿದ್ಯುತ್ ವಿತರಣಾ ಉಪಕೇಂದ್ರದಿಂದ ಹೊರಹೊಮ್ಮುವ 33ಏಗಿ ಮೂರ್ನಾಡು ಫೀಡರ್ ನಲ್ಲಿ ದಿನಾಂಕ 15.04.2026 ರಂದು ಬೆಳಿಗ್ಗೆ 10.00ರಿಂದ ಸಂಜೆ 5.00 ಗಂಟೆಯವರೆಗೆ ಮಳೆಗಾಲದ ಮುಂಜಾಗೃತ ನಿರ್ವಹಣೆ ಕಾಮಗಾರಿಯನ್ನು ಕೈಗೆತ್ತಿಕೊಳ್ಳುತ್ತಿರುವುದರಿಂದ ಸದರಿ ಮಾರ್ಗದಿಂದ ವಿದ್ಯುತ್ ಸರಬರಾಜಾಗುವ 33/11 ಕೆ.ವಿ MUSS ಮೂರ್ನಾಡು ವಿದ್ಯುತ್ ವಿತರಣಾ ಉಪಕೇಂದ್ರದಿಂದ ಹೊರಹೊಮ್ಮುವ ಪಾರಾಣೆ, ನಾಪೋಕ್ಲು, ಮೂರ್ನಾಡು, ಹೊದ್ದೂರು ಹಾಗೂ ಮರಗೋಡು ಫೀಡರ್ ನಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.ಸದರಿ ಮಾರ್ಗದಿಂದ ವಿದ್ಯುತ್ ಸರಬರಾಜಾಗುವ ಮೂರ್ನಾಡು, ಮರಗೋಡು, ಹಾಕತ್ತೂರು, ಹೊಸ್ಕೇರಿ, ಹೊದ್ದೂರು, ನರಿಯಂದಡ, ನಾಪೋಕ್ಲು, ಕುಂಜಿಲ, ಎಮ್ಮೆಮಾಡು, ಬಲ್ಲಮಾವಟಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಈ ಮೇಲೆ ತಿಳಿಸಿರುವ ಸಮಯದಲ್ಲಿ ಹಾಗೂ ಸ್ಥಳದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಕೋರಲಾಗಿದೆ.

Read More

ಮಡಿಕೇರಿ ಏ.14 NEWS DESK : ಶನಿವಾರಸಂತೆ ಅಂಬೇಡ್ಕರ್ ಭವನ ನಿರ್ಮಾಣ ಸಮಿತಿ ವತಿಯಿಂದ ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜಯಂತಿಯನ್ನು ಇಂದು ಅರ್ಥಪೂರ್ಣವಾಗಿ ಆಚರಿಸಲಾಯಿತು. ಶನಿವಾರಸಂತೆಯ ಕೆಆರ್‍ಸಿ ವೃತ್ತದಲ್ಲಿ ಡಾ.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಅಂಬೇಡ್ಕರ್ ಭವನ ನಿರ್ಮಾಣ ಸಮಿತಿಯ ಪ್ರಮುಖರು ಪುಷ್ಪ ನಮನ ಸಲ್ಲಿಸಿದರು. ಬಾಬಾ ಸಾಹೇಬ್ ಡಾ.ಅಂಬೇಡ್ಕರ್ ಅವರನ್ನು ವಿಶ್ವಜ್ಞಾನಿ ಹಾಗೂ ಸಮಾನತೆಯನ್ನು ಸಾರಿದ ಮಹಾ ನಾಯಕ ಎಂದು ಬಣ್ಣಿಸಿದರು. ಕಾರ್ಯಕ್ರಮದಲ್ಲಿ ಸಮಿತಿಯ ಅಧ್ಯಕ್ಷ ಜೆ.ಆರ್.ಪಾಲಾಕ್ಷ, ಪ್ರಧಾನ ಕಾರ್ಯದರ್ಶಿ ಎಂ.ಎಸ್.ವೀರೇಂದ್ರ, ಅಕ್ರಮ ಸಕ್ರಮ ಸಮಿತಿಯ ಸದಸ್ಯ ಜೆ.ಎಲ್.ಜನಾರ್ಧನ್, ಸದಸ್ಯರುಗಳಾದ ನವೀನ್, ಎಡೆಹಳ್ಳಿ ಬಸಪ್ಪ, ತವ್ಹಿದ್ ಮತ್ತಿತರರು ಹಾಜರಿದ್ದು ಸಿಹಿ ಹಂಚಿ ಸಂಭ್ರಮಸಿದರು.

Read More

ಮಡಿಕೇರಿ ಏ.14 NEWS DESK : ಕೊಡವ ಕುಟುಂಬಗಳ ನಡುವೆ ಮೂರ್ನಾಡಿನಲ್ಲಿ ನಡೆಯುತ್ತಿರುವ 24ನೇ ವರ್ಷದ ‘ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ’ ಯಲ್ಲಿ ಏ.15ರ ಪಂದ್ಯಗಳು *ಮೈದಾನ 1* ಬೆಳಿಗ್ಗೆ 9 ಗಂಟೆಗೆ ಮುಕ್ಕಾಟಿರ (ಕುಂಬಳದಾಳು) ಮತ್ತು ಕಲ್ಲುಮಾಡಂಡ (ಚೇರಂಬಾಣೆ), 10ಕ್ಕೆ ಚೋವಂಡ ಮತ್ತು ಮೊಣ್ಣಂಡ, 11ಕ್ಕೆ ಅಪ್ಪುಡ ಮತ್ತು ತೀತರಮಾಡ, ಮಧ್ಯಾಹ್ನ 12ಕ್ಕೆ ಬಡುಮಂಡ ಮತ್ತು ಕಬ್ಬಚ್ಚಿರ, 1ಕ್ಕೆ ಪೊನ್ನಿಮಾಡ ಮತ್ತು ಚೆಂಬಂಡ, 2ಕ್ಕೆ ಚೊಟ್ಟೆಯಂಡಮಾಡ ಮತ್ತು ಮಲ್ಲಂಗಡ ಹಾಗೂ 3 ಗಂಟೆಗೆ ಅಯ್ಯಕುಟ್ಟಿರ ಮತ್ತು ಮುಂಡ್ಯೋಳಂಡ *ಮೈದಾನ 2* ಬೆಳಿಗ್ಗೆ 9 ಗಂಟೆಗೆ ಬಲ್ಲಚಂಡ ಮತ್ತು ನಾಟೋಳಂಡ, 10ಕ್ಕೆ ಚಿಯನಮಾಡ ಮತ್ತು ಮುಕ್ಕಾಟಿರ (ಬೆಳ್ಳೂರು-ಹರಿಹರ), 11ಕ್ಕೆ ಬಡಲೇರ ಮತ್ತು ಚಿರಿಯಪಂಡ, ಮಧ್ಯಾಹ್ನ 12ಕ್ಕೆ ಕುಪ್ಪನಮಾಡ ಮತ್ತು ನಂದೀರ, 1ಕ್ಕೆ ದಾಸಂಡ ಮತ್ತು ಕೊಡೇಂಗಡ, 2ಕ್ಕೆ ಚೀಕಂಡ ಮತ್ತು ಪಾರುವಂಗಡ ಹಾಗೂ 3 ಗಂಟೆಗೆ ಚೇರುವಾಳಂಡ (ಪುಲ್ಲಿಮಕ್ಕಿ) ಮತ್ತು ಅರಮಣಮಾಡ (ಬೆಸಗೂರು)

Read More

ಮಡಿಕೇರಿ NEWS DESK ಏ.14 : ಕೊಡಗು ಮಹಿಳಾ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ಉಮೇಶ್ ಕುಮಾರ್ ಎಂ.ಎನ್ ಅವರಿಗೆ ಹೆಚ್ಚುವರಿಯಾಗಿ ಮಡಿಕೇರಿ ಗ್ರಾಮಾಂತರ ವೃತ್ತದ ಜವಾಬ್ದಾರಿಯನ್ನು ನೀಡಲಾಗಿದೆ. ಇವರು ಹೆಚ್ಚುವರಿಯಾಗಿ ಮಡಿಕೇರಿ ಗ್ರಾಮಾಂತರ ವೃತ್ತದ ನಾಪೋಕ್ಲು ಪೊಲೀಸ್ ಠಾಣೆ ಹಾಗೂ ಭಾಗಮಂಡಲ ಪೊಲೀಸ್ ಠಾಣೆಯ ಅಧಿಕಾರವನ್ನು ವಹಿಸಿಕೊಂಡಿದ್ದಾರೆ.

Read More

ಮಡಿಕೇರಿ ಏ.14 NEWS DESK : ಪಿ.ಕೃಷ್ಣೇ ಗೌಡ ನೇತೃತ್ವದ ಕರ್ನಾಟಕ ರಕ್ಷಣಾ ವೇದಿಕೆಯ ಸ್ವಾಭಿಮಾನಿ ಬಣದ ಕೊಡಗು ಜಿಲ್ಲಾ ಘಟಕ ಪಿಯುಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ಮಡಿಕೇರಿ ತಾಲ್ಲೂಕಿನ ನಾಲ್ವರು ವಿದ್ಯಾರ್ಥಿಗಳನ್ನು ಸನ್ಮಾನಿಸಿ ಪ್ರೋತ್ಸಾಹಿಸಿತು. ನಗರ ಖಾಸಗಿ ಹೊಟೇಲ್ ಸಮುದ್ರ ಸಭಾಂಗಣದಲ್ಲಿ ನಡೆದ ಸನ್ಮಾನ ಕಾರ್ಯಕ್ರಮವನ್ನು ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ದೀಪ ಬೆಳಗುವ ಮೂಲಕ ಕರವೇ ಸ್ವಾಭಿಮಾನಿ ಬಣದ ಪ್ರಮುಖರು ಉದ್ಘಾಟಿಸಿದರು. *ಶಿಕ್ಷಣ ಕ್ಷೇತ್ರದಲ್ಲೂ ಬದಲಾವಣೆ* ಕ.ರ.ವೇ ಸ್ವಾಭಿಮಾನಿ ಬಣದ ಕೊಡಗು ಜಿಲ್ಲಾ ಉಸ್ತುವಾರಿ ತನು ಕಿಶೋರ್ ಅವರು ಮಾತನಾಡಿ, 25 ವರ್ಷಗಳಿಂದ ರಾಜ್ಯಾದ್ಯಂತ ಘಟಕಗಳನ್ನು ಹೊಂದಿರುವ ಕರವೇ ಸ್ವಾಭಿಮಾನಿ ಬಣ, ಸಾಮಾಜಿಕ ಕಳಕಳಿಯ ಕೆಲಸಗಳನ್ನು ಮಾಡಿಕೊಂಡು ಬರುತ್ತಿದೆ. ಕೊಡಗು ಜಿಲ್ಲೆಯಲ್ಲಿಯೂ ಸಮಾಜಿಕ ಸಮಸ್ಯೆಗಳ ಬಗ್ಗೆ ಹಲವು ಹೋರಾಟಗಳನ್ನು ರೂಪಿಸಿದ್ದು, ಇದು ಮುಂದೆಯೂ ನಡೆಯಲಿದೆ ಎಂದರು. ಸಂಘಟನೆ ಶಿಕ್ಷಣ ಕ್ಷೇತ್ರದಲ್ಲೂ ಬದಲಾವಣೆಗೆ ಮುಂದಾಗಿದ್ದು, ಅದರ ಅಂಗವಾಗಿ ದ್ವಿತೀಯ ಪಿಯುಸಿ…

Read More

ಕುಶಾಲನಗರ ಏ.14 NEWS DESK : ದೇವಾಲಯ ಹಾಗೂ ಮಠ ಮಂದಿರಗಳು ಮನುಷ್ಯನ ಅಂತರಂಗ ಶುದ್ದಿಯ ಆಲಯಗಳು ಎಂದು ಅರಮೇರಿ ಕಳಂಚೇರಿ ಮಠದ ಪೀಠಾಧಿಪತಿ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಹೇಳಿದರು.  ಹೊಸಪಟ್ಟಣ ಗ್ರಾಮದ ಶ್ರೀ ಬಸವೇಶ್ವರ ಹಾಗೂ ಕನ್ನಂಬಾಡಮ್ಮ ದೇವರ ವಾರ್ಷಿಕ ಪೂಜೋತ್ಸವ ದಲ್ಲಿ ಭಾಗಿಯಾಗಿ ಭಕ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ಮನುಷ್ಯ ಏನೆಲ್ಲಾ ಗಳಿಸಿದರೂ ಕೂಡ ಮಾನಸಿಕ ಶಾಂತಿ ನೆಮ್ಮದಿ ಪಡೆಯಲು ದೇವಾಲಯಗಳಿಗೆ ಬರಬೇಕಿದೆ. ಪೂರ್ವಜರು ಆಚರಿಸಿಕೊಂಡು ಬಂದ ಗ್ರಾಮೀಣ ಹಬ್ಬಗಳು, ದೇವರ ಪೂಜೋತ್ಸವಗಳನ್ನು ಮುಂದಿನ ಪೀಳಿಗೆಗೂ ಜತನದಿಂದ ಒಯ್ಯುವುದೇ ಭಾರತೀಯ ಸಂಸ್ಕೃತಿಯ ಸೌಂದರ್ಯ ಎಂದು ಶ್ರೀಗಳು ಹೇಳಿದರು. ಸೋಮವಾರ ಸಂಜೆಯಿಂದ ಆರಂಭವಾದ ದೇವತಾ ಪೂಜೋತ್ಸವ ಮಂಗಳವಾರ ಮಧ್ಯಾಹ್ನ ಸಮಾಪ್ತಿಗೊಂಡಿತು. ಮಂಗಳವಾರ ಬೆಳಗ್ಗೆ ವಾದ್ಯಮೇಳ, ಅಲಂಕೃತ ದೇವರುಗಳ ಪಲ್ಲಕ್ಕಿಯೊಂದಿಗೆ ಗ್ರಾಮದ ಕಾವೇರಿ ನದಿಗೆ ತೆರಳಿ ಗಂಗಾ ಸ್ನಾನ ನೆರವೇರಿಸಲಾಯಿತು. ಇದೇ ಸಂದರ್ಭ ಹೊಳೆನರಸೀಪುರ ತಾಲ್ಲೂಕಿನ ಉದ್ದೂರು ಗ್ರಾಮದ ವೀರಗಾಸೆ ಕಲಾವಿದ ರಾದ ರವಿಕುಮಾರ ತಂಡದಿಂದ ಆಕರ್ಷಕವಾದ ವೀರಭದ್ರ ನೃತ್ಯ ಭಕ್ತರನ್ನು…

Read More

ಕುಶಾಲನಗರ ಏ.14 NEWS DESK : ಹೆಬ್ಬಾಲೆ ಗ್ರಾಮ ಪಂಚಾಯತಿ ಸಭಾಂಗಣದಲ್ಲಿ ಸಾರ್ವಜನಿಕರಿಗಾಗಿ ಉಚಿತ ಫುಟ್ ಪಲ್ಸ್ ಥೆರಪಿ ಉಚಿತಾ ಚಿಕಿತ್ಸಾ ಶಿಬಿರ ಆಯೋಜಿಸಲಾಗಿದೆ. ಹದಿನೈದು ದಿನಗಳ ಅವಧಿ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಶಿಬಿರ ನಡೆಯಲಿದ್ದು 8 ವರ್ಷದ ಮೇಲ್ಪಟ್ಟು ವಯೋವೃದ್ಧರವರೆಗೂ ಥೆರಪಿಯ ಪ್ರಯೋಜನ ಪಡೆದುಕೊಳ್ಳಬಹುದು ಎಂದು ತರಬೇತಿ ಶಿಬಿರದ ಆಯೋಜಕರಾದ ಕಂಪಾನಿಯೋ ಸಂಸ್ಥೆಯ ಥೆರಪಿಯನ್ ಶಶಿಕಾಂತ ಪೂಜಾರಿ ಹೇಳಿದರು. ಅರ್ಧ ಗಂಟೆ ಕಾಲ ನಡೆಸುವ ಥೆರಪಿಯಲ್ಲಿ ಓರ್ವ ಆರೋಗ್ಯವಂತ ಮನುಷ್ಯ 5 ಕಿಮೀ ವೇಗದ ನಡಿಗೆ ಮಾಡಿದಷ್ಟು ಪ್ರಯೋಜನವಾಗಲಿದೆ. ಥೆರಪಿಯಿಂದಾಗಿ ದೇಹದ ನರನಾಡಿಗಳಲ್ಲಿ ಸುಗಮ ರಕ್ತ ಸಂಚಾರವಾಗುತ್ತದೆ. ದೇಹದಲ್ಲಿನ ಅಶುದ್ಧ ರಕ್ತ ಶುದ್ಧವಾಗುತ್ತದೆ. ಹೃದಯಸಂಬಂಧಿ ಕಾಯಿಲೆಗಳು ಸೇರಿದಂತೆ ಸೊಂಟ ನೋವು, ಹಿಂಬದಿ ನೋವು, ಬೆನ್ನು ನೋವು ಮೊದಲಾದ ನರ ದೌರ್ಬಲ್ಯಗಳ ನೋವುಗಳು ನಿವಾರಣೆಯಾಗಲಿವೆ. ಕಂಪಾನಿಯೋ ಸಂಸ್ಥೆ 2014 ರಿಂದ ಆರಂಭವಾಗಿದ್ದು ದೇಶಾದ್ಯಂತ 15 ಲಕ್ಷಕ್ಕೂ ಹೆಚ್ಚು ಮಂದಿಗೆ ಪ್ರಯೋಜನವಾಗಲಿದೆ ಎಂದು ಶಶಿಕಾಂತ ಪೂಜಾರಿ ಹೇಳಿದರು. ಶಿಬಿರದಲ್ಲಿ…

Read More