ಲೇಖಕ: admin

ಮಡಿಕೇರಿ NEWS DESK ಮಾ.19 : ರಾಷ್ಟ್ರೀಯ ಹೆದ್ದಾರಿ-275 ಕಿ.ಮೀ.71.600 ರಿಂದ ಕಿ.ಮೀ.130.21 ರವರೆಗೆ ಸಂಪಾಜೆಯಿಂದ ಕುಶಾಲನಗರ ಕಾವೇರಿ ನದಿ ಸೇತುವೆ ವರೆವಿಗೂ ಈಗಾಗಲೇ ತೆರವುಗೊಳಿಸಲಾಗಿದ್ದ ಅನಧಿಕೃತ ಜಾಹಿರಾತು ಫಲಕಗಳನ್ನು ಮತ್ತು ವ್ಯಾಪಾರಿಗಳು ಹಣ್ಣಿನ ಅಂಗಡಿ ಮತ್ತು ಗೂಡಂಗಡಿಗಳನ್ನು ರಾಷ್ಟ್ರೀಯ ಹೆದ್ದಾರಿ ವ್ಯಾಪ್ತಿಯ  ಒಳಗೆ ಪುನರ್ ಸ್ಥಾಪಿಸಿಕೊಂಡು ವ್ಯಾಪಾರ ವಹಿವಾಟು ನಡೆಸುತ್ತಿದ್ದಾರೆ. ಗ್ರಾಹಕರ ವಾಹನಗಳು ಪುಟ್‌ಪಾತಿನಲ್ಲಿ ನಿಂತು ರಸ್ತೆ ಅಪಘಾತಗಳು ಸಂಭವಿಸುತ್ತಿವೆ ಮತ್ತು ವಾಹನಗಳ ಸರಾಗ ಚಲನೆಗೆ ತೊಂದರೆಯಾಗುತ್ತಿದೆ. ಆದ್ದರಿಂದ ವ್ಯಾಪಾರಿಗಳು ತಮ್ಮ ವ್ಯಾಪಾರ ವಹಿವಾಟುಗಳನ್ನು ಮತ್ತು ಅನಧಿಕೃತ ಜಾಹಿರಾತು ಫಲಕಗಳನ್ನು ರಾಷ್ಟ್ರೀಯ ಹೆದ್ದಾರಿಯ ಫರಿದಿಯಿಂದ ಮಾರ್ಚ್ 23 ರೊಳಗೆ ತಾವೇ  ತೆರವುಗೊಳಿಸಬೇಕು. ಇಲ್ಲದಿದ್ದಲ್ಲಿ ರಾಷ್ಟ್ರೀಯ ಹೆದ್ದಾರಿ ವತಿಯಿಂದ ಮಾರ್ಚ್ 24 ರಿಂದ ಅನಧಿಕೃತ ಬೋರ್ಡ್ ಮತ್ತು ಮಳಿಗೆಗಳ ತೆರವು ಕಾರ್ಯಾಚರಣೆ ಕೈಗೊಳ್ಳಲಾಗುವುದು ಮತ್ತು ತೆರವು ಕಾರ್ಯಾಚರಣೆಯಲ್ಲಿ ವ್ಯಾಪಾರಿಗಳಿಗೆ ನಷ್ಟವಾದಲ್ಲಿ ಇಲಾಖೆಯು ಜವಾಬ್ದಾರವಲ್ಲ ಎಂದು ರಾಷ್ಟ್ರೀಯ ಹೆದ್ದಾರಿ ಉಪ ವಿಭಾಗದ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಗಿರೀಶ್ ಅವರು ತಿಳಿಸಿದ್ದಾರೆ. 

Read More

ಡಾ. ಹರ್ಷ ಪ್ರಿಯಂವದ IPS ಅವರು ಮೈಸೂರು ನಗರದ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ನೂತನ ಡಿಸಿಪಿಯಾಗಿ ಅಧಿಕಾರ ವಹಿಸಿಕೊಂಡರು. ಕೇಂದ್ರಸ್ಥಾನ, ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿ ಶ್ರೀ ಸುಂದರ್ ರಾಜ್ ಕೆ.ಎಸ್. ಅವರು ಅಧಿಕಾರ ಹಸ್ತಾಂತರಿಸಿದರು.

Read More

ಗೋಣಿಕೊಪ್ಪ ಮಾ.18 NEWS DESK : ಕೂರ್ಗ್ ಕ್ರಿಕೆಟ್ ಫೌಂಡೇಷನ್ ವತಿಯಿಂದ ಮೂರನೇ ಆವೃತ್ತಿಯ ಕೊಡವ ಲೆದರ್ ಬಾಲ್ ಕ್ರಿಕೆಟ್ ಲೀಗ್ ಏ.10 ರಿಂದ 15 ದಿನಗಳವರೆಗೆ ಟಿ20 ಮಾದರಿಯಲ್ಲಿ ಗೋಣಿಕೊಪ್ಪ ಕಾವೇರಿ ಕಾಲೇಜು ಮೈದಾನದಲ್ಲಿ ಆಯೋಜಿಸಲಾಗಿದೆ. 10 ತಂಡಗಳು ಪೈಪೋಟಿ ನಡೆಸಲಿದ್ದು, ಸುಮಾರು 160 ಆಟಗಾರರು ಪಂದ್ಯಾವಳಿಯಲ್ಲಿ ಭಾಗವಹಿಸಲಿದ್ದಾರೆ ಎಂದು ಅಧ್ಯಕ್ಷ ಪೊರುಕೊಂಡ ಸುನಿಲ್ ತಿಳಿಸಿದ್ದಾರೆ. ಸುದ್ದಿಗೋಷ್ಠೀಯಲ್ಲಿ ಮಾತನಾಡಿದ ಅವರು, ಕೊಡವ ಜನಾಂಗದ ಯುವ ಸಮೂಹದಲ್ಲಿ ಲೆದರ್ ಬಾಲ್ ಆಟಗಾರರನ್ನು ದೇಶಿಯ ತಂಡ ಪ್ರತಿನಿಧಿಸುವಂತಾಗಬೇಕು ಎಂಬ ಕನಸ್ಸಿನೊಂದಿಗೆ ಪಂದ್ಯಾವಳಿಯನ್ನು ಆಯೋಜಿಸುತ್ತಿದ್ದು, ವೃತ್ತಿಪರ ಕ್ರಿಕೆಟ್‌ಗೆ ಆದ್ಯತೆ ನೀಡಲಾಗುತ್ತಿದೆ ಎಂದು ಮಾಹಿತಿ ನೀಡಿದರು. ವಿಜೇತ ತಂಡಕ್ಕೆ 2 ಲಕ್ಷ ನಗದು, ರನ್ನರ್ ಅಪ್ ತಂಡಕ್ಕೆ 1 ಲಕ್ಷ, 3 ನೇ ತಂಡಕ್ಕೆ 50 ಸಾವಿರ ನಗದು ಬಹುಮಾನ ನೀಡಲಾಗುತ್ತದೆ. ಪ್ರತೀ ಪಂದ್ಯದಲ್ಲಿ ಪಂದ್ಯ ಶ್ರೇಷ್ಠ, ಸರಣಿ ಶ್ರೇಷ್ಠ, ಬೆಸ್ಟ್ ಬೌಲರ್, ಬೆಸ್ಟ್ ಬ್ಯಾಟರ್, ಫೀಲ್ಡರ್, ಬೆಸ್ಟ್ ಕ್ಯಾಚ್, ಬೆಸ್ಟ್ ಕೀಪರ್, ಹ್ಯಾಟ್ರಿಕ್ಸ್, ಎವ್ಮೆರ್ಜಿಂಗ್…

Read More

ಸುಂಟಿಕೊಪ್ಪ ಮಾ.18 NEWS DESK : ಹಬ್ಬದ ದಿನದಂದು ಶಾಂತಿ, ಸಾಮರಸ್ಯ ಮತ್ತು ಸೌಹಾರ್ದತೆಯನ್ನು ಕಾಪಾಡಿಕೊಳ್ಳಲು ಕುಶಾಲನಗರ ವೃತ್ತ ನಿರೀಕ್ಷಕರಾದ ದಿನೇಶ್‍ಕುಮಾರ್ ಕರೆ ನೀಡಿದರು. ಸುಂಟಿಕೊಪ್ಪ ಪೊಲೀಸ್ ಠಾಣೆಯಲ್ಲಿ ಆಯೋಜಿಸಲಾಗಿದ್ದ ರಂಜಾನ್, ರಾಮನವಮಿ, ಯುಗಾದಿ ಪ್ರಯುಕ್ತ ಆಯೋಜಿಸಲಾಗಿದ್ದ ಶಾಂತಿ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಸುಂಟಿಕೊಪ್ಪ ಪಟ್ಟಣವು ಶಾಂತಿ ಸೌಹರ್ಧತೆಯನ್ನು ಹಿಂದಿನಿಂದಿಲ್ಲೂ ಕಾಯ್ದುಕೊಂಡು ಬಂದಿದೆ. ಈ ಸೌಹಾರ್ದತೆ ತೆಯನ್ನು ಮುಂದೆಯೂ ಗಟ್ಟಿಯಾಗಿ ನೆಲೆಯೂರಬೇಕಾದರೆ ವಿವಿಧ ಧರ್ಮಗಳ ಮುಖಂಡರು ಮುಂದಾಳತ್ವ ತೆಗದುಕೊಳ್ಳುವ ಮೂಲಕ ಇಂದಿನ ಯುವ ಪೀಳಿಗೆಯು ಮಾರ್ಗದರ್ಶನ ನೀಡಬೇಕೆಂದು ಅವರು ಕಿವಿಮಾತು ಹೇಳಿದರು. ಹಬ್ಬಗಳನ್ನು ಆಚರಿಸುವ ಸಂದರ್ಭ ಇತರರಿಗೆ ಭಾವನೆಗಳನ್ನು ಗೌರವಿಸುವಂತಿರಬೇಕು. ಅವರ ಭಾವನೆಗಳಿಗೆ ಘಾಸಿ ಉಂಟಾಗದಂತೆ ಆಚರಿಸಬೇಕು ಆಗಿದ್ದಾಗ ಮಾತ್ರ ನಮ್ಮ ಹಬ್ಬ ಆಚರಣೆ ಸಂಸ್ಕøತಿಗೆ ಮಹತ್ವತೆ ಕೂಡಿ ಬರಲಿದೆ. ಅನ್ಯನೋತೆಯು ಹೆಚ್ಚಾಗಲಿದೆ ಶಾಂತಿ ಸೌಹರ್ಧತೆಯು ಕಂಡುಕೊಳ್ಳಬಹುದಾಗಿದೆ ಎಂದು ಅವರು ಹೇಳಿದರು. ಸುಂಟಿಕೊಪ್ಪ ಠಾಣಾಧಿಕಾರಿ ಮೋಹನ್‍ರಾಜ್, ಅಪರಾಧ ವಿಭಾಗ ಠಾಣಾಧಿಕಾರಿ ಗೋಪಾಲ್ ಶಾಂತಿ ಸೌಹಾರ್ದ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಸಭೆಯಲ್ಲಿ ವಿವಿಧ…

Read More

ಸೋಮವಾರಪೇಟೆ ಮಾ.18 NEWS DESK : ಕಾರ್ಮಿಕ ಇಲಾಖಾ ವತಿಯಿಂದ ಕೊಡಗು ಜಿಲ್ಲೆಯಲ್ಲಿ ನೊಂದಾಯಿತ ಕಟ್ಟಡ ಕಾರ್ಮಿಕರಿಗಾಗಿ ಪೂರ್ವಭಾವಿ ಕಲಿಕಾ ಗುರುತಿಸುವಿಕೆ ತರಬೇತಿ ಕಾರ್ಯಾಗಾರ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಅರ್ಹ ಫಲಾನುಭವಿಗಳನ್ನು ಗುರುತಿಸಿ, ಕೆಲಸದ ಸ್ಥಳಗಳಲ್ಲಿ ಪಾಲಿಸಬೇಕಾದ ಮುನ್ನೆಚ್ಚರಿಕೆ ಕ್ರಮಗಳು ಹಾಗೂ ಸುರಕ್ಷತಾ ನಿಯಮಗಳ ಬಗ್ಗೆ ತರಬೇತುದಾರರಾದ ಕಾರ್ತಿಕ್, ದರ್ಶನ್ ಮತ್ತು ಪ್ರದೀಪ್ ಅವರು ಮಾಹಿತಿ ನೀಡಿದರು. ಜೊತೆಗೆ ಕಾರ್ಮಿಕ ಇಲಾಖೆಯ ವಿವಿಧ ಯೋಜನೆಗಳು ಮತ್ತು ಸೌಲಭ್ಯಗಳ ಕುರಿತು ಅರಿವು ಮೂಡಿಸಲಾಯಿತು. ಈ ಸಂದರ್ಭ ಕಾರ್ಮಿಕರಿಗೆ ಸುರಕ್ಷತಾ ಕಿಟ್‍ಗಳನ್ನು ವಿತರಿಸಲಾಯಿತು. ಹಿರಿಯ ಕಾರ್ಮಿಕ ನಿರೀಕ್ಷಕರಾದ ಎಸ್. ಶಶಿಧರ್ ಅವರು ಮಾತನಾಡಿ, ನೈಜ ಅರ್ಹ ಕಟ್ಟಡ ಕಾರ್ಮಿಕರು ಕಡ್ಡಾಯವಾಗಿ ನೋಂದಣಿ ಮಾಡಿಕೊಂಡು ಮಂಡಳಿಯ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಕರೆ ನೀಡಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಕಾರ್ಮಿಕ ಅಧಿಕಾರಿಗಳ ಕಚೇರಿಯ ಎಕ್ಸಿಕ್ಯೂಟಿವ್ ಪ್ರಸನ್ನ, ಕಚೇರಿ ಸಿಬ್ಬಂದಿ ವಾಣಿ ಹಾಗೂ ಸೋಮವಾರಪೇಟೆ ತಾಲ್ಲೂಕು ಕಾರ್ಮಿಕ ಇಲಾಖೆಯ ಸಿಬ್ಬಂದಿಗಳು ಭಾಗವಹಿಸಿದ್ದರು.

Read More

ಸೋಮವಾರಪೇಟೆ ಮಾ.18 NEWS DESK : ಯಡೂರು ಗ್ರಾಮದ ವೈಸಿಸಿ ಕ್ರಿಕೆಟ್ ಕ್ಲಬ್ ವತಿಯಿಂದ ಯಡೂರಿನ ಬಿಟಿಸಿಜಿ ಕಾಲೇಜು ಮೈದಾನದಲ್ಲಿ ನಡೆದ 26ನೇ ವರ್ಷದ ವೈಸಿಸಿ ಕ್ರಿಕೆಟ್ ಕಪ್‍ನ್ನು ಗರಗಂದೂರಿನ ದಳಪತಿ ಕ್ರಿಕೆಟರ್ಸ್ ತಂಡ ತನ್ನದಾಗಿಸಿಕೊಂಡಿದೆ. ಸೋಮವಾರಪೇಟೆಯ ಹಿಡನ್ ಲೀಫ್ ಕೂರ್ಗ್ ತಂಡ ದ್ವಿತೀಯ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತು. ಪ್ರಥಮ ಸ್ಥಾನ ಪಡೆದ ತಂಡಕ್ಕೆ 30 ಸಾವಿರ ರೂ, ನಗದು ಹಾಗೂ ಟ್ರೋಫಿ, ದ್ವಿತೀಯ ಸ್ಥಾನ ಪಡೆದ ತಂಡಕ್ಕೆ  20 ಸಾವಿರ ರೂ, ನಗದು ಹಾಗೂ ಟ್ರೋಫಿಯನ್ನು ವಿತರಿಸಲಾಯಿತು. ಪಂದ್ಯಾವಳಿಯ ಬೆಸ್ಟ್ ಬ್ಯಾಟ್ಸ್‍ಮೆನ್ ಪ್ರಶಸ್ತಿಯನ್ನು ಹಿಡನ್‍ಲೀಫ್ ತಂಡದ ರಾಜೇಶ್, ಬೆಸ್ಟ್ ಬೌಲರ್ ಪ್ರಶಸ್ತಿಯನ್ನು ದಳಪತಿ ತಂಡದ ಕವನ್, ಬೆಸ್ಟ್ ಫೀಲ್ಡರ್ ಪ್ರಶಸ್ತಿಯನ್ನು ಹಿಡನ್ ಲೀಫ್‍ನ ಉದಯ್, ಫೈನಲ್ ಪಂದ್ಯದ ಮ್ಯಾನ್ ಆಫ್‍ದ ಮ್ಯಾಚ್ ಪ್ರಶಸ್ತಿಯನ್ನು ದಳಪತಿ ತಂಡದ ಅಭಿಷೇಕ್, ಮ್ಯಾನ್ ಆಫ್ ದ ಸೀರೀಸ್ ಪ್ರಶಸ್ತಿಯನ್ನು ದಳಪತಿ ತಂಡದ ಅನಿಲ್ ಅವರುಗಳು ಪಡೆದುಕೊಂಡರು. ಬಹುಮಾನ ವಿತರಣಾ ಸಮಾರಂಭದ ಅಧ್ಯಕ್ಷತೆಯನ್ನು ವೈಸಿಸಿ ಕ್ಲಬ್‍ನ ಅಧ್ಯಕ್ಷ…

Read More

ಕೂಡಿಗೆ ಮಾ.18 NEWS DESK : ಕುಶಾಲನಗರ ತಾಲ್ಲೂಕಿನ ಕೂಡಿಗೆ ಅಂಜೆಲಾ ವಿದ್ಯಾನಿಕೇತನ ಶಾಲೆಯಲ್ಲಿ ಆರಂಭಗೊಂಡ ಎಸ್‍ಎಸ್‍ಎಲ್‍ಸಿ ವಾರ್ಷಿಕ ಪರೀಕ್ಷೆಯು ವ್ಯವಸ್ಥಿತವಾಗಿ ಹಾಗೂ ಪಾರದರ್ಶಕವಾಗಿ ಸುಗಮವಾಗಿ ನಡೆಯಿತು. ಪರೀಕ್ಷೆಯ ಪ್ರಥಮ ದಿನವಾದ ಬುಧವಾರ ವಿದ್ಯಾರ್ಥಿಗಳು ಕನ್ನಡ ಭಾಷಾ ಪರೀಕ್ಷೆಯನ್ನು ಬರೆದು ಪರೀಕ್ಷಾ ಕೇಂದ್ರದಿಂದ ಸಂತಸದಿಂದ ಹೊರ ಬರುತ್ತಿದ್ದ ದೃಶ್ಯ ಕಂಡುಬಂತು. ಪರೀಕ್ಷೆಯು ಏ.2ರ ವರೆಗೆ ನಡೆಯಲಿದೆ. ಮೊದಲ ಕನ್ನಡ ಪರೀಕ್ಷೆಯಲ್ಲಿ ನೋಂದಾಯಿತ 259 ವಿದ್ಯಾರ್ಥಿಗಳ ಪೈಕಿ 254 ವಿದ್ಯಾರ್ಥಿಗಳು ಪರೀಕ್ಷೆ ಬರೆದರು. 5 ಮಂದಿ ಪುನಾವರ್ತಿತ ವಿದ್ಯಾರ್ಥಿಗಳು ಗೈರು ಹಾಜರಾಗಿದ್ದರು. ಕೂಡುಮಂಗಳೂರು ಸರ್ಕಾರ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್, ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರಾಗಿ ಕಾರ್ಯನಿರ್ವಹಿಸಿದರು. :: ಪೋಷಕರಲ್ಲಿ ಸಂತಸ :: ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಕೂಡಿಗೆ ಅಂಜೆಲಾ ವಿದ್ಯಾನಿಕೇತನ ಶಾಲೆಯಲ್ಲಿ ಎರಡು ವರ್ಷಗಳ ನಂತರ ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರವನ್ನು ಪುನರ್ ಆರಂಭಿಸಿದ್ದು, ಕೂಡಿಗೆ ಕ್ಲಸ್ಟರ್ ವ್ಯಾಪ್ತಿಯ ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ಸಂತಸ ತಂದಿದೆ. ಕೂಡಿಗೆ ಭಾಗದಲ್ಲಿ 8 ಪ್ರೌಢಶಾಲೆಗಳಿದ್ದು, ಪ್ರಸಕ್ತ…

Read More

ಮಡಿಕೇರಿ ಮಾ.18 NEWS DESK : ಇತಿಹಾಸ ಪ್ರಸಿದ್ಧ  ಎಮ್ಮೆಮಾಡು ಉರೂಸ್ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಆಹ್ವಾನಿಸಲಾಯಿತು.  ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರ  ನೇತೃತ್ವದಲ್ಲಿ ತಾಜಲ್ ಇಸ್ಲಾಂ ಮುಸ್ಲಿಂ ಜಮಾತ್ ಅಧ್ಯಕ್ಷರಾದ ಕೆ.ಎಂ.ಹುಸೇನ್ ಶಾಫಿ, ಮಾಜಿ ಅಧ್ಯಕ್ಷರಾದ ಅಬೂಬಕರ್ ಸಕಾಪಿ, ಆಡಳಿತ ಮಂಡಳಿ ಸದಸ್ಯರಾದ ಮೆನ್ ಮಹಮ್ಮದ್, ಎಮ್.ಎ.ಹನೀಫ್ ಹಾಗೂ ಧರ್ಮ ಗುರುಗಳು ಆಹ್ವಾನ ಪತ್ರಿಕೆಯನ್ನು ನೀಡಿ ಉರುಸ್ ಸಮಾರಂಭಕ್ಕೆ ಆಹ್ವಾನಿಸಿದರು. ಎಮ್ಮೆಮಾಡು ಉರುಸ್ ಪ್ರಾಮುಖ್ಯತೆ ಬಗ್ಗೆ ಮುಖ್ಯಮಂತ್ರಿಗಳಿಗೆ ವಿವರಿಸಿದ ಶಾಸಕರು, ಸುಮಾರು 400 ವರ್ಷಕ್ಕೂ ಅಧಿಕ ಇತಿಹಾಸ ಇರುವ ಈ ಉತ್ಸವಕ್ಕೆ, ಕರ್ನಾಟಕ ಮಾತ್ರವಲ್ಲದೇ ನೆರೆಯ ರಾಜ್ಯಗಳಿಂದ ಎಲ್ಲಾ ಧರ್ಮದ ಭಕ್ತರು ಆಗಮಿಸಿ ಪ್ರಾರ್ಥಿಸುತ್ತಾರೆ ಎಂದು ವಿವರಿಸಿದರು. ಇದೇ ಸಂದರ್ಭ ಸಭಾಪತಿಗಳಾದ ಯು.ಟಿ ಖಾದರ್, ಅಲ್ಪಸಂಖ್ಯಾತ ಸಚಿವರಾದ ಜಮೀರ್ ಅಹ್ಮದ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಝೀರ್ ಅಹಮದ್, ಶಾಂತಿನಗರ ಶಾಸಕರಾದ ಎನ್.ಎ ಹ್ಯಾರೀಸ್ ಮತ್ತು ಮಡಿಕೇರಿ ಶಾಸಕರಾದ ಡಾ. ಮಂಥರ್…

Read More

ಮಡಿಕೇರಿ ಮಾ.18 NEWS DESK : ಗ್ರಾಹಕರು ಮೋಸ, ವಂಚನೆಗೆ ಒಳಗಾಗುವುದು ತಪ್ಪಿಸುವಲ್ಲಿ ರಾಜ್ಯಾದ್ಯಂತ ಗ್ರಾಹಕರ ಕಾಯ್ದೆಗಳ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸಲಾಗುತ್ತಿದೆ ಎಂದು ಕರ್ನಾಟಕ ರಾಜ್ಯ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷರಾದ ನ್ಯಾಯಮೂರ್ತಿ ಟಿ.ಜಿ.ಶಿವಶಂಕರೇಗೌಡ ಅವರು ತಿಳಿಸಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಮತ್ತು ಜಿಲ್ಲಾ ನ್ಯಾಯವಾದಿಗಳ ಸಂಘ ಇವರ ಸಂಯುಕ್ತಾಶ್ರಯದಲ್ಲಿ ಕೊಡಗು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ನವೀಕರಣ ಕಟ್ಟಡವನ್ನು ಬುಧವಾರ ಉದ್ಘಾಟಿಸಿ ಅವರು ಮಾತನಾಡಿದರು. ಪ್ರತಿಯೊಬ್ಬರೂ ಒಂದಲ್ಲ ಒಂದು ರೀತಿಯಲ್ಲಿ ಗ್ರಾಹಕರಾಗಿದ್ದು, ವಂಚನೆಗೆ ಅಥವಾ ಮೋಸಕ್ಕೆ ತುತ್ತಾದರೆ, ಪರಿಹಾರ ಒದಗಿಸುವಲ್ಲಿ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಕ್ರಮವಹಿಸಲಿದೆ ಎಂದು ಗ್ರಾಹಕರ ವ್ಯಾಜ್ಯಗಳ ಪರಿಹಾರ ರಾಜ್ಯ ಆಯೋಗದ ಅಧ್ಯಕ್ಷರು ಹೇಳಿದರು. ಗ್ರಾಹಕರಿಗೆ ಸರಿಯಾದ ಸೇವೆ ಒದಗಿಸಬೇಕು ಎಂಬುದು ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗದ ಉದ್ದೇಶವಾಗಿದೆ. ಆ ನಿಟ್ಟಿನಲ್ಲಿ ಜಿಲ್ಲಾ ಮಟ್ಟದಲ್ಲಿ ಕಚೇರಿಗೆ ಬೇಕಾದ ಎಲ್ಲಾ ರೀತಿಯ ಮೂಲ ಸೌಲಭ್ಯವನ್ನು ಕಲ್ಪಿಸಲು ರಾಜ್ಯ ಗ್ರಾಹಕರ…

Read More

ಮಡಿಕೇರಿ NEWS DESK ಮಾ.18 : ವಿಶ್ವ ಜನಾಂಗೀಯ ತಾರತಮ್ಯ ನಿರ್ಮೂಲನಾ ದಿನವಾದ ಮಾ.21 ರಂದು ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ವತಿಯಿಂದ ಮಡಿಕೇರಿ ಹೊರ ವಲಯದ ಕ್ಯಾಪಿಟಲ್ ವಿಲೇಜ್ ನಲ್ಲಿ “ವಿಚಾರ ಸಂಕಿರಣ” ನಡೆಯಲಿದೆ. ಶನಿವಾರ ಬೆಳಿಗ್ಗೆ 10 ಗಂಟೆಗೆ ಹಮ್ಮಿಕೊಂಡಿರುವ “ಕೊಡವ ಕ್ವೆಸ್ಟ್” ವಿಚಾರ ಸಂಕಿರಣದಲ್ಲಿ ಮಾಜಿ ಸಂಸದ ಮತ್ತು ಖ್ಯಾತ ವಿದ್ವಾಂಸ ಡಾ.ಎಲ್.ಹನುಮಂತಯ್ಯ, ಖ್ಯಾತ ವಕೀಲರುಗಳಾದ ಕೆ.ಪಿ.ಬಾಲಸುಬ್ರಹ್ಮಣ್ಯ, ಎಂ.ಟಿ.ನಾಣಯ್ಯ ಹಾಗೂ ಸಂಪನ್ಮೂಲ ವ್ಯಕ್ತಿಯಾಗಿ ಪ್ರೊ.ಡಾ.ಮುಲ್ಲೇಂಗಡ ರೇವತಿ ಪೂವಯ್ಯ ಅವರುಗಳು ವಿಚಾರ ಮಂಡನೆ ಮಾಡಲಿದ್ದಾರೆ ಎಂದು ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರು ಪತ್ರಿಕಾ ಪ್ರಕಟಣೆ ನೀಡಿದ್ದಾರೆ. ಆದಿಮಸಂಜಾತ ಏಕ-ಜನಾಂಗೀಯ ಪ್ರಕೃತಿ ಆರಾಧಕ ಆನಿಮಿಸ್ಟಿಕ್ ಕೊಡವರಿಗಾಗಿ ಸಂವಿಧಾನದ ಅಡಿಯಲ್ಲಿ “ಭೂ-ರಾಜಕೀಯ ಸ್ವಾಯತ್ತತೆ” ಮತ್ತು “ವಿಶೇಷ ಸ್ಥಾನಮಾನ”ಕ್ಕಾಗಿ ವಿಚಾರ ಸಂಕಿರಣದಲ್ಲಿ ಹಕ್ಕೊತ್ತಾಯ ಮಂಡಿಸಲಾಗುವುದು. ಭಾರತದ ಈಶಾನ್ಯ ರಾಜ್ಯಗಳಿಗೆ 244 ಮತ್ತು 371 ನೇ ವಿಧಿಗಳಡಿಯಲ್ಲಿ ನೀಡಲಾಗಿರುವ ಮಾದರಿಯಲ್ಲೇ, ಅಲ್ಪಸಂಖ್ಯಾತ ಸೂಕ್ಷ್ಮ ಕೊಡವ ಜನಾಂಗದ ಭೂಮಿ, ಎಸ್‌ಟಿ ಜನಾಂಗೀಯ ವರ್ಗೀಕರಣ, ಕೊಡವರ ಧಾರ್ಮಿಕ ಸಂಸ್ಕಾರವಾದ ಸಾಂಪ್ರದಾಯಿಕ…

Read More