ಲೇಖಕ: admin

ಸೋಮವಾರಪೇಟೆ ಆ.26 NEWS DESK : ರಾಜ್ಯಮಟ್ಟದ ಪದವಿಪೂರ್ವ ಕಾಲೇಜುಗಳ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಸೋಮವಾರಪೇಟೆಯ ಕ್ರೀಡಾಪಟು ತರುಣ್ ಮುರಳೀಧರ್ ಪ್ರಥಮ ಸ್ಥಾನ ಪಡೆಯುವ ಮೂಲಕ ರಾಷ್ಟ್ರೀಯ ಮಟ್ಟದ ಬ್ಯಾಡ್ಮಿಂಟನ್ ಆಯ್ಕೆಯಾಗಿದ್ದು ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ಕರ್ನಾಟಕ ವಿದ್ಯಾಭಾರತಿ ಸಂಸ್ಥೆಯು ಬೆಂಗಳೂರಿನ ಜೈಗೋಪಾಲ್ ಗರೋಡಿಯ ರಾಷ್ಟೋತ್ಥಾನ ವಿದ್ಯಾಕೇಂದ್ರದಲ್ಲಿ ಆಯೋಜಿಸಿದ್ದ ರಾಜ್ಯಮಟ್ಟದ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯು ಫೈನಲ್‍ನಲ್ಲಿ ಬೆಂಗಳೂರು ಜಿಲ್ಲಾ ತಂಡವನ್ನು ಪರಾಭವಗೊಳಿಸಿ ಪ್ರಥಮ ಸ್ಥಾನವನ್ನು ತನ್ನದಾಗಿಸಿಕೊಂಡಿದೆ. ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ್ದ ಕೊಡಗಿನ ಸೋಮವಾರಪೇಟೆಯ ವಿದ್ಯಾರ್ಥಿ ತರುಣ್ ಪ್ರಥಮ ಸ್ಥಾನ ಪಡೆದುಕೊಂಡಿದ್ದು, ಸೆ.27 ರಂದು ದೆಹಲಿಯಲ್ಲಿ ಆಯೋಜಿಸಿರುವ ರಾಷ್ಟ್ರೀಯ ಮಟ್ಟದ ಬ್ಯಾಡ್ಮಿಂಟನ್ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ತಂಡದಲ್ಲಿ ಮಂಗಳೂರಿನ ಶಕ್ತಿ ಪಿಯು ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ತರುಣ್ ಮುರಳೀಧರ್, ಪುತ್ತೂರಿನ ವಿವೇಕಾನಂದ ಕಾಲೇಜಿನ ವಿದ್ಯಾರ್ಥಿಗಳಾದ ಯಶಸ್, ಯಶಸ್ವಿನ್ ಗೌಡ, ಅಕ್ಷಯ್ ನಾಯಕ್, ಧನ್ವಿತ್ ರೈ ಅವರನ್ನೊಳಗೊಂಡ ತಂಡದಲ್ಲಿ ಪಾಲ್ಗೊಂಡಿದ್ದರು. ಶಕ್ತಿ ಕಾಲೇಜಿನ ಕೋಚ್ ಮನೋಜ್ ಹಾಗೂ ವಿವೇಕಾನಂದ…

Read More

ಸೋಮವಾರಪೇಟೆ ಆ.26 NEWS DESK : ಸೋಮವಾರಪೇಟೆ ತಾಲ್ಲೂಕು ಮಳೆಯಿಂದ ಕಾಫಿ, ಕಾಳುಮೆಣಸು ಫಸಲು ಹಾನಿಯಾಗಿದ್ದು, ಸರ್ಕಾರ ಸೂಕ್ತ ಪರಿಹಾರ ನೀಡಬೇಕೆಂದು ಸೋಮವಾರಪೇಟೆ ತಾಲ್ಲೂಕು ಕಾಫಿ ಬೆಳೆಗಾರರ ಸಂಘ ಒತ್ತಾಯಿಸಿದೆ. ಸುದ್ದಿಗೋಷ್ಠಿಯಲ್ಲಿ ಸಂಘದ ಅಧ್ಯಕ್ಷ ಬಿ.ಎಂ.ಮೋಹನ್ ಬೋಪಣ್ಣ ಮಾತನಾಡಿ, 2023-24ನೇ ಸಾಲಿನಲ್ಲಿ ಕಾಫಿ ಮತ್ತು ಕಾಳುಮೆಣಸು ಶೇ.70 ರಿಂದ 80ರಷ್ಟು ಫಸಲು ಹಾನಿಯಾಗಿದೆ. ಎಸ್.ಡಿ.ಆರ್.ಎಫ್ ಮತ್ತು ಎನ್.ಡಿ.ಆರ್.ಎಫ್ ವತಿಯಿಂದ ಹೆಕ್ಟೇರ್‍ಗೆ ಕನಿಷ್ಠ 1ಲಕ್ಷ ರೂ.ಗಳ ಬೆಳೆಹಾನಿ ಪರಿಹಾರ ನೀಡಬೇಕೆಂದು ಒತ್ತಾಯಿಸಿದರು. 2022-23ನೇ ಸಾಲಿನಲ್ಲಿ ವಾಡಿಕೆ ಹಿಂಗಾರು ಮಳೆ ಕಡಿಮೆಯಾದ ಹಿನ್ನೆಲೆ ಬಿಸಿಲಿನ ತಾಪಕ್ಕೆ ಅರೇಬಿಕಾ ಕಾಫಿ ಗಿಡಗಳು ಬಿಳಿಕಾಂಡಕೊರಕ ಕೀಟಬಾಧೆಯಿಂದ ನಾಶವಾದವು. ಮಾರ್ಚ್, ಏಪ್ರಿಲ್‍ನಲ್ಲಿ ಹೂಮಳೆ ಬರಲಿಲ್ಲ. ಕಡಿಮೆ ಪ್ರಮಾಣದಲ್ಲಿ ಮಳೆಬಿದ್ದು ಬಿಸಿಲಿನ ತಾಪಕ್ಕೆ ಹೂ ಸುಟ್ಟುಹೋಗಿ ನಷ್ಟವಾಯಿತು. ಜೂನ್, ಜುಲೈ ತಿಂಗಳಲ್ಲಿ ವಾಡಿಕೆ ಮಳೆಗಿಂತ ಶೇ.70ರಷ್ಟು ಹೆಚ್ಚಿನ ಮಳೆಯಾಗಿ ಕಾಫಿ, ಕಾಳುಮೆಣಸು ಫಸಲು ಶೇ.70 ರಷ್ಟು ಹಾನಿಯಾಗಿದೆ. ಕಾಳುಮೆಣಸು ಬಳ್ಳಿಗಳು ಸೊರಗು ರೋಗಕ್ಕೆ ತುತ್ತಾಗಿ ಬಳ್ಳಿಗಳು ನಾಶವಾಗಿವೆ. ಅರೇಬಿಕಾ ಕಾಫಿ…

Read More

ಮಡಿಕೇರಿ ಆ.26 NEWS DESK : ಸಿದ್ದಾಪುರದ ಕಾಫಿ ತೋಟಗಳು ಸೇರಿದಂತೆ ಕೊಡಗು ಜಿಲ್ಲೆಯ ವಿವಿಧೆಡೆ ನಡೆಯುತ್ತಿರುವ ಬೃಹತ್ ಭೂಪರಿವರ್ತನೆ ಮತ್ತು ಭೂವಿಲೇವಾರಿಯನ್ನು ಸ್ಥಗಿತಗೊಳಿಸಬೇಕೆಂದು ಒತ್ತಾಯಿಸಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ವತಿಯಿಂದ ಆ.29 ರಂದು ಮೂರ್ನಾಡಿನಲ್ಲಿ ಜನಜಾಗೃತಿ ಮಾನವ ಸರಪಳಿ ಕಾರ್ಯಕ್ರಮ ನಡೆಯಲಿದೆ ಎಂದು ಸಿಎನ್‍ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಗುರುವಾರ ಬೆಳಿಗ್ಗೆ 10.30 ಗಂಟೆಗೆ ಮೂರ್ನಾಡು ಪಟ್ಟಣದಲ್ಲಿ ಮಾನವ ಸರಪಳಿ ನಿರ್ಮಿಸಿ ಹಕ್ಕೊತ್ತಾಯ ಮಂಡಿಸಲಾಗುವುದು. ಆದಿಮಸಂಜಾತ ಕೊಡವರ ಭೂಮಿಯ ಹಕ್ಕನ್ನು ರಕ್ಷಿಸಲು ಬೃಹತ್ ಭೂಪರಿವರ್ತನೆ ಮತ್ತು ಭೂವಿಲೇವಾರಿ ವಿರುದ್ಧ ಹೋರಾಟ ಅನಿವಾರ್ಯವಾಗಿದೆ. “ಕೊಡವ ಲ್ಯಾಂಡ್” ಸ್ವಯಂ ನಿರ್ಣಯದ ಭೂರಾಜಕೀಯ ಸ್ವಾಯತ್ತತೆ ಘೋಷಣೆ ಮತ್ತು ಕೊಡವರಿಗೆ ಎಸ್‍ಟಿ ಟ್ಯಾಗ್ ನೀಡುವುದು ಅಗತ್ಯವಾಗಿದೆ. ಇದಕ್ಕಾಗಿ ವ್ಯಾಪಕ ಜನಜಾಗೃತಿ ಮತ್ತು ಜಿಲ್ಲೆಯಾದ್ಯಂತ ಶಾಂತಿಯುತ ಬೃಹತ್ ಮಾನವ ಸರಪಳಿ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ. ಕೊಡವ ಲ್ಯಾಂಡ್ ಗೆ ಮಾರಕವಾಗಿರುವ ಭೂಮಾಫಿಯಾ, ರೆಸಾರ್ಟ್ ಮಾಫಿಯಾ, ವಿಲ್ಲಾ, ಟೌನ್ ಶಿಪ್,…

Read More

ಮಡಿಕೇರಿ ಆ.26 NEWS DESK : ಕನ್ನಡ ಸಾಹಿತ್ಯ ಪರಿಷತ್ತಿನ ಕೊಡಗು ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯೆ ಹಾಗೂ ಸಾಹಿತಿ ಹಂಚೇಟಿರ ಫ್ಯಾನ್ಸಿ ಮುತ್ತಣ್ಣ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ತಮ್ಮ ಮಾವ ಮತ್ತು ಅತ್ತೆಯವರಾದ ದಿ. ಹಂಚೇಟಿರ ಕುಟ್ಟಪ್ಪ ಮತ್ತು ಕಾಮವ್ವ ದಂಪತಿಗಳ ಜ್ಞಾಪಕಾರ್ಥ ರೂ 50,000 ಗಳ ದತ್ತಿನಿಧಿ ಸ್ಥಾಪಿಸಿದ್ದಾರೆ. ದತ್ತಿಯ ಆಶಯವು ಕೊಡಗಿನ ಜಾನಪದ ಪ್ರಕಾರಗಳ ಹಿನ್ನೆಲೆ, ಹಾಡು, ಕುಣಿತ ಗಳ ಕುರಿತು ಪದವಿ ಕಾಲೇಜಿನ ವಿದ್ಯಾರ್ಥಿಗಳಿಗೆ ಭಾಷಣ ಸ್ಪರ್ಧೆ ಏರ್ಪಡಿಸುವುದು. ಕೊಡಗಿನ ಒಂದು ಪದವಿ ಕಾಲೇಜಿನಿಂದ ಒರ್ವ ವಿದ್ಯಾರ್ಥಿಗೆ ಭಾಷಣ ಸ್ಪರ್ಧೆಯಲ್ಲಿ ಭಾಗವಹಿಸುವ ಅವಕಾಶ, ಕೊಡಗಿನ ಜಾನಪದ ಕುರಿತು ಉಪನ್ಯಾಸ ಏರ್ಪಡಿಸುವುದು ಆಗಿದೆ. ದತ್ತಿಯ ಮೊತ್ತದ ಚೆಕ್ ಅನ್ನು ಜಿಲ್ಲಾ ಕಸಾಪದ ಮಾಜಿ ಅಧ್ಯಕ್ಷ ಟಿ.ಪಿ.ರಮೇಶ್ ಅವರು ಮೂರ್ನಾಡು ಹೋಬಳಿ ಅಧ್ಯಕ್ಷರಾದ ಈರಮಂಡ ಹರಿಣಿ ವಿಜಯ್, ಸದಸ್ಯ ಬೊಳ್ಳಜಿರ ಬಿ.ಅಯ್ಯಪ್ಪ ಮತ್ತಿತರದ ಸಮ್ಮುಖದಲ್ಲಿ ಸ್ವೀಕರಿಸಿದ್ದಾರೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಕೊಡಗು ಜಿಲ್ಲಾಧ್ಯಕ್ಷ ಎಂ.ಪಿ.ಕೇಶವ ಕಾಮತ್ ಪತ್ರಿಕಾ…

Read More

ಮಡಿಕೇರಿ ಆ.26 NEWS DESK : ಇತರರಿಗೆ ಮಾದರಿಯಾಗಿರುವ “ನೊಂದವರ ಬಾಳಿನ ಆಶಾಕಿರಣ ಗೆಳೆಯರ ಬಳಗ” ಪ್ರತಿ ತಿಂಗಳ ಕೊನೆಯ ಭಾನುವಾರದಂದು ಆಶ್ರಮದಲ್ಲಿರುವ ನೊಂದ ಹಿರಿಯರಿಗೆ ಅನ್ನದಾನ ಹಾಗೂ ರಸಮಂದರಿ ಕಾರ್ಯಕ್ರಮ ನಡೆಸಿಕೊಂಡು ಬರುತ್ತಿದೆ. ಈ ಬಾರಿ ಮಡಿಕೇರಿಯ ತನಲ್, ವಿಕಾಸ್ ಮತ್ತು ಶಿವದೂತ ಆಶ್ರಮದಲ್ಲಿ ಬಳಗದ ಪ್ರಮುಖರು ಅನ್ನದಾನ ಮಾಡಿದರು. ಬಳಗದ ಕಾರ್ಯದರ್ಶಿ ಎಂ.ಎ.ಅಬ್ದುಲ್ ರಜಾಕ್ ಅವರು ಮಾತನಾಡಿ ಸದಸ್ಯ ನಾಬಿನ್ ಕೆವಿನ್ ಅವರು ಇತ್ತೀಚೆಗೆ ನಿಧನರಾದ ಹಿನ್ನೆಲೆ ರಸಮಂಜರಿ ಕಾರ್ಯಕ್ರಮವನ್ನು ರದ್ದು ಪಡಿಸಲಾಗಿದೆ ಎಂದರು. ಪ್ರತಿ ತಿಂಗಳ ಕೊನೆಯ ಭಾನುವಾರ ನೊಂದವರೊಂದಿಗೆ ಬೆರೆತು ಮನಸ್ಸಿಗೆ ಕೊಂಚ ನೆಮ್ಮದಿ ನೀಡುವ ಅಳಿಲು ಸೇವೆಯಲ್ಲಿ ಬಳಗ ತೊಡಗಿಸಿಕೊಂಡಿದೆ. ಈ ಕಾರ್ಯಕ್ರಮಕ್ಕೆ ಎಲ್ಲರೂ ಸಹಕಾರ ನೀಡುವಂತೆ ಮನವಿ ಮಾಡಿದರು. ಬಳಗದ ಅಧ್ಯಕ್ಷ ಮಹಮ್ಮದ್ ಆಲಿ, ಉಪಾಧ್ಯಕ್ಷ ಸುಲೈಮಾನ್, ಖಜಾಂಚಿ ಶಿವಣ್ಣ, ಸದಸ್ಯ ಗಿಲ್ಬರ್ಟ್ ಮತ್ತಿತರರು ಉಪಸ್ಥಿತರಿದ್ದರು. ನಾಬಿನ್ ಕೆವಿನ್ ಅವರ ನಿಧನಕ್ಕೆ ಬಳಗದ ಪ್ರಮುಖರು ಹಾಗೂ ಆಶ್ರಮವಾಸಿಗಳು ಇದೇ ಸಂದರ್ಭ ಮೌನಾಚರಣೆಯ ಮೂಲಕ…

Read More

ಕರ್ಕಾಳ ಆ.26 NEWS DESK : ಫಲವತ್ತಾದ ಮಣ್ಣೇ ಶ್ರೇಷ್ಠ ಸಂಪತ್ತು. ಆ ಮಣ್ಣಿನೊಂದಿಗೆ ನಮಗೆ ಅವಿನಾಭಾವ ಸಂಬಂಧ ಇದ್ದಾಗ ಮಾತ್ರ ಕೆಸರೆಂಬುದು ಆಪ್ತವಾಗುತ್ತಾ ಹೋಗುತ್ತದೆ. ರೈತನೇ ದೇಶವನ್ನು ಕಟ್ಟಬಲ್ಲವನು. ರೈತಾಪಿ ವರ್ಗ ನಿಷ್ಕ್ರಿಯವಾದರೆ ಬದುಕೇ ಇಲ್ಲ. ಆದ್ದರಿಂದ ವಿದ್ಯಾರ್ಥಿಗಳು ರೈತರ ಕಷ್ಟ, ಕೃಷಿಯಿಂದ ಸಿಗುವ ಆನಂದ ಅನುಭವದ ಮೂಲಕ ಪಡೆಯಬೇಕು ಎಂದು ಹಿರ್ಗಾನ ಗ್ರಾಮ ಪಂಚಾಯತ್ ನ ಮಾಜಿ ಅಧ್ಯಕ್ಷ ಸಂತೋಷ ಶೆಟ್ಟಿ ಹೇಳಿದರು. ಕಾರ್ಕಳ ಕ್ರಿಯೇಟಿವ್ ಕಾಲೇಜಿನಲ್ಲಿ ಕೆಸರುಡೊಂಜಿ ದಿನ ಕಾರ್ಯಕ್ರಮವನ್ನು ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಪಶು ವೈದ್ಯ ಸಾಣೂರಿನ ಜ್ಞಾನದೇವ ಮಾತನಾಡಿ, ಇಂದು ಜಗತ್ತೇ ವಿಷಮಯವಾಗುತ್ತಿದೆ. ಆಹಾರ ಪದಾರ್ಥಗಳೆಲ್ಲ ಕಲುಷಿತಗೊಂಡಿವೆ. ಇಂದಿನ ತುರ್ತು ಅಗತ್ಯ ಸಂಪೂರ್ಣ ಸಾವಯವ ಪ್ರಧಾನವಾದ ಕೃಷಿ ನಡೆಸುವುದಾಗಿದೆ. ಕೃಷಿ ಕಷ್ಟಕರವಾದರೂ ಅದನ್ನು ಇಷ್ಟಪಟ್ಟು ಮಾಡಬೇಕಾಗಿದೆ ಎಂದು ನುಡಿದರು.  ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಸಹ ಸಂಸ್ಥಾಪಕ ಎಸ್.ಎಲ್.ಅಶ್ವಥ್  ಮಾತನಾಡಿ, ಕೃಷಿ ಮೂಲವೇ ನಾಗರಿಕತೆಯ ಮೂಲ. ಮಣ್ಣು ಕೇವಲ ಕೆಸರಲ್ಲ. ಬದಲಾಗಿ ಅದು…

Read More

ಮಡಿಕೇರಿ ಆ.26 NEWS DESK : ಮಡಿಕೇರಿಯ ಹಿಂದೂ ಮಲಯಾಳಿ ಸಂಘದ ಮಹಿಳಾ ಘಟಕದ ಅಧ್ಯಕ್ಷರಾಗಿ ಲತಾ ರಾಜನ್ ಅವರು ಅವಿರೋಧವಾಗಿ ಪುನರ್ ಆಯ್ಕೆಯಾಗಿದ್ದು, ಪ್ರಧಾನ ಕಾರ್ಯದರ್ಶಿಯಾಗಿ ಅಂಜಲಿ ಅಶೋಕ್ ನೇಮಕಗೊಂಡಿದ್ದಾರೆ. ಸಂಘದ ಜಿಲ್ಲಾ ಕಚೇರಿಯಲ್ಲಿ ಅಧ್ಯಕ್ಷ ಕೆ.ವಿ.ಧರ್ಮೇಂದ್ರ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಕಾರ್ಯಕಾರಿಣಿ ಸದಸ್ಯರ ಆಯ್ಕೆಯ ಜವಾಬ್ದಾರಿಯನ್ನು ಅಧ್ಯಕ್ಷರು ಹಾಗೂ ಕಾರ್ಯದರ್ಶಿಗಳಿಗೆ ವಹಿಸಲಾಯಿತು. “ಓಣಾಘೋಷಂ” ಪ್ರಯುಕ್ತ ನಡೆಸಲಾಗುವ ಕ್ರೀಡಾ ಚಟುವಟಿಕೆಗಳ ಉಸ್ತುವಾರಿಯನ್ನು ಮಹಿಳಾ ಸದಸ್ಯರುಗಳಿಗೆ ನೀಡಲಾಯಿತು. ಸಭೆಯಲ್ಲಿ ಸಂಘದ ಪ್ರಧಾನ ಕಾರ್ಯದರ್ಶಿ ಎಂ.ಎಸ್.ದಿನೇಶ್, ಸಹ ಕಾರ್ಯದರ್ಶಿ ಹೆಚ್.ಪಿ.ಅಶೋಕ್, ಉಪಾಧ್ಯಕ್ಷರಾದ ಪಿ.ಟಿ.ಉತ್ತಮ್, ವಿಜಯಕುಮಾರ್, ಖಜಾಂಚಿ ಎಂ.ಪಿ.ರವಿ, ಸಹ ಖಜಾಂಚಿ ಪಿ.ವಿ.ಸುಬ್ರಮಣಿ, ಸಂಘಟನಾ ಕಾರ್ಯದರ್ಶಿ ಟಿ.ಆರ್.ಪ್ರಮೋದ್, ಯೂತ್ ವಿಂಗ್ ಅಧ್ಯಕ್ಷ ಆರ್.ಅರವಿಂದ್, ಪ್ರಚಾರ ಸಮಿತಿಯ ರವಿ ಅಪ್ಪುಕುಟ್ಟನ್ ಹಾಗೂ ಕಾರ್ಯಕಾರಿಣಿ ಸಮಿತಿ ಸದಸ್ಯರಾದ ಒ.ಎನ್.ಬಾಬು, ಮನು, ಸಿ.ಕೆ.ಪ್ರಭಾಕರ್, ಟಿ.ಬಿ.ಪ್ರಭಾಕರ್, ಎನ್.ಸಿ.ಸುನಿಲ್ ಉಪಸ್ಥಿತರಿದ್ದರು. ರಕ್ಷಾ ಬಂಧನದ ಪ್ರಯುಕ್ತ ಪರಸ್ಪರ ರಾಕಿ ಕಟ್ಟಿ ಸಿಹಿ ಹಂಚಿ ಸಭೆ ಸಂಭ್ರಮಿಸಿತು. 

Read More

ಗೋಣಿಕೊಪ್ಪ ಆ.26 NEWS DESK : ಹಿಂದುಳಿದ ಸಮುದಾಯಗಳು ಸಮಾಜದ ಮುಂದುವರಿದ ಭಾಗವಾಗಲು ಸಂಘಟನೆಯಿಂದ ಸದೃಢರಾಗಿ ವಿದ್ಯೆಯಿಂದ ಪ್ರಬಲರಾಗಬೇಕು ಎಂದು ಕೇರಳ ತಲಶೇರಿ ನಿವೃತ್ತ ಶಿಕ್ಷಕ ವಿನಯನ್ ಕರೆ ನೀಡಿದರು. ಗೋಣಿಕೊಪ್ಪ ಪಟೇಲ್ ನಗರದಲ್ಲಿರುವ ಶ್ರೀ ನಾರಾಯಣ ಗುರು ಸಭಾಂಗಣದಲ್ಲಿ ಗೋಣಿಕೊಪ್ಪಲು ಎಸ್‍ಎನ್‍ಡಿಪಿ ಶಾಖ ಯೋಗಂ ಆಯೋಜಿಸಿದ ಶ್ರೀ ನಾರಾಯಣ ಗುರುಗಳ 170ನೇ ಜಯಂತಿ ಆಚಾರಣೆಯಲ್ಲಿ ಮುಖ್ಯ ಭಾಷಣಗಾರರಾಗಿ ಮಾತನಾಡಿದರು. ಕತ್ತಲೆಯಿಂದ ಬೆಳಕಿನೆಡೆಗೆ ನಮ್ಮನ್ನು ದಾಟಿಸುವ ವ್ಯಕ್ತಿತ್ವ ಉಳ್ಳವರು ಗುರುಗಳಾಗುತ್ತಾರೆ. ಅಂತಹ ಮಹಾನ್ ಗುರು ನಾರಾಯಣ ಗುರುಗಳಾಗಿದ್ದಾರೆ. ಅವರ ಆದರ್ಶ ಪಾಲನೆ, ತತ್ವ, ಚಿಂತನೆಗಳು ನಮ್ಮೆಲ್ಲರ ಬದುಕಿನ ಬೆಳಕಾಗಬೇಕು ಎಂದು ಸಲಹೆ ನೀಡಿದರು. ದನಕನಗಳು ಬೇಕು ಎಂದು ಪ್ರಾರ್ಥಿಸುವ ಬದಲಾಗಿ ಜ್ಞಾನಕ್ಕಾಗಿ ಪ್ರಾರ್ಥಿಸುವುದರಿಂದ ಮನುಷ್ಯನಲ್ಲಿ ಶಾಂತಿ ನೆಲೆಸುತ್ತದೆ. ಜೀವನವನ್ನು ಸುಂದರವಾಗಿಸಿಕೊಳ್ಳಲು ಜ್ಞಾನದ ಬೆಳಕಿನಲ್ಲಿ ಹೊತ್ತಿಸಿಕೊಳ್ಳುವ ಪ್ರಾರ್ಥನೆಯಾಗಲಿ ಎಂದು ಅಭಿಪ್ರಾಯ ಮಂಡಿಸಿದರು. ನಂತರ ನಾರಾಯಣ ಗುರುಗಳ ಜೀವನವನ್ನು ಸಂಕ್ಷಿಪ್ತವಾಗಿ ವಿವರಿಸಿದರು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಗೋಣಿಕೊಪ್ಪಲು ಗ್ರಾಮ ಪಂಚಾಯಿತಿ ಅಧ್ಯಕ್ಷ ಪ್ರಮೋದ್ ಗಣಪತಿ,…

Read More

ಕುಶಾಲನಗರ ಆ.26 NEWS DESK : ಕುಶಾಲನಗರ ತಾಲ್ಲೂಕಿನ ತೊರೆನೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಎಸ್.ಡಿ.ಎಂ.ಸಿ ಮತ್ತು ವಿದ್ಯಾರ್ಥಿ ಸಂಘದ ವತಿಯಿಂದ ಸರ್ಕಾರದ ಮಹತ್ವಾಕಾಂಕ್ಷೆಯ “ನಾವು ಮನುಜರು” ವಿನೂತನ ಕಾರ್ಯಕ್ರಮಕ್ಕೆ‌ ಚಾಲನೆ ನೀಡಲಾಯಿತು. ‘ನಾವು ಮನುಜರು’ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಶಾಲಾ ಮುಖ್ಯೋಪಾಧ್ಯಾಯ ಬಿ.ಆರ್.ಸತ್ಯನಾರಾಯಣ ‘ನಾವು ಮನುಜರು’ ಕಾರ್ಯಕ್ರಮದಡಿ ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಸಾಮರಸ್ಯ, ವೈಜ್ಞಾನಿಕ ಮನೋಭಾವ ಮತ್ತು ಸಹಬಾಳ್ವೆಯನ್ನು ಬೆಳೆಸಲು “ನಾವು ಮನುಜರು” ಎಂಬ ವಿನೂತನ ಕಾರ್ಯಕ್ರಮವನ್ನು ಸಂಘಟಿಸಲಾಗುತ್ತಿದೆ ಎಂದರು. ಶಾಲಾ ಮಕ್ಕಳಲ್ಲಿ ಸಾಮರಸ್ಯ ಮೂಡಿಸುವ ಹಾಗೂ ಸಾಂವಿಧಾನಿಕ ಮೌಲ್ಯಗಳನ್ನು ಬಿತ್ತುವ ಮತ್ತು ವೈಜ್ಞಾನಿಕ ಮನೋಭಾವನೆ ಮೂಡಿಸಲು “ನಾವು ಮನುಜರು” ಕಾರ್ಯಕ್ರಮ ಸಹಕಾರಿಯಾಗಿದೆ ಎಂದರು. ಕನ್ನಡ ಭಾಷಾ ಶಿಕ್ಷಕ ಟಿ.ಬಿ.ಮಂಜುನಾಥ್ ಮಾತನಾಡಿ, ಶಾಲಾ ಮಕ್ಕಳಲ್ಲಿ ಸಾಮರಸ್ಯ ಮೂಡಿಸುವ ಹಾಗೂ ಸಾಂವಿಧಾನಿಕ ಮೌಲ್ಯಗಳನ್ನು ಬಿತ್ತುವ ಮತ್ತು ವೈಜ್ಞಾನಿಕ ಮನೋಭಾವನೆ ಮೂಡಿಸಲು ನಾವು ಮನುಜರು ಕಾರ್ಯಕ್ರಮ ಸಹಕಾರಿಯಾಗಿದೆ ಎಂದರು.  ಕಾರ್ಯಕ್ರಮದ ರೂಪುರೇಷೆ ಕುರಿತು ಮಾಹಿತಿ ನೀಡಿದ ತೊರೆನೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಂಪನ್ಮೂಲ…

Read More

ಕುಶಾಲನಗರ ಆ.26 NEWS DESK : ಮೈಸೂರಿನ ಜೆಎಸ್ಎಸ್ ಶಿಕ್ಷಣ ಸಂಸ್ಥೆಗಳನ್ನು ಕಟ್ಟಿ ಬೆಳೆಸುವ ಮೂಲಕ ಹನ್ನೆರಡನೇ ಶತಮಾನದ ಶರಣರ ಸಾಹಿತ್ಯ ಹಾಗೂ ಸಂಸ್ಕ್ರತಿಯನ್ನು ಉದ್ದೀಪನಗೊಳಿಸುವ ದಿಸೆಯಲ್ಲಿ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ಸಂಸ್ಥೆಯನ್ನು ಕಟ್ಟಿದ ಡಾ.ರಾಜೇಂದ್ರ ಸ್ವಾಮೀಜಿ ಸ್ಮರಣಾರ್ಥ ಶರಣ ಸಾಹಿತ್ಯ ಪರಿಷತ್ತಿನ ಸಂಸ್ಥಾಪನಾ ದಿನವಾಗಿ ಆ.29 ರಂದು ರಾಜ್ಯಾದ್ಯಂತ ಎಲ್ಲಾ ಜಿಲ್ಲೆಗಳಲ್ಲೂ ಆಚರಿಸಲಾಗುತ್ತಿದೆ. ಹಾಗೆಯೇ ಕೊಡಗು ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ವತಿಯಿಂದ ಡಾ.ರಾಜೇಂದ್ರ ಸ್ವಾಮೀಜಿ ಸ್ಮರಣೆ ಹಾಗೂ ಶಸಾಪ ಸಂಸ್ಥಾಪನಾ ಕಾರ್ಯಕ್ರಮವೂ ಕೂಡಿಗೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಹಮ್ಕಿಕೊಳ್ಳಲಾಗಿದೆ. ಅಂದು ಬೆಳಗ್ಗೆ 10.30 ಗಂಟೆಗೆ ಶಸಾಪದ ಗೌರವಾಧ್ಯಕ್ಷರೂ ಆಗಿರುವ ಕೊಡ್ಲಿಪೇಟೆಯ ಕಿರಿಕೊಡ್ಲಿ ಮಠದ ಪೀಠಾಧ್ಯಕ್ಷ ಶ್ರೀ ಸದಾಶಿವ ಸ್ವಾಮೀಜಿ ಸಾನಿಧ್ಯದಲ್ಲಿ ನಡೆಯಲಿದೆ. ಕುಶಾಲನಗರ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ.ಶಶಿಧರ್ ಉದ್ಘಾಟಿಸಲಿದ್ದು, ಅಖಿಲ ಭಾರತ ವೀರಶೈವ ಮಹಾಸಭಾದ ಕೊಡಗು ಜಿಲ್ಲಾಧ್ಯಕ್ಷ ಹೆಚ್.ವಿ.ಶಿವಪ್ಪ ಶ್ರೀ ರಾಜೇಂದ್ರ ಸ್ವಾಮೀಜಿ ಅವರ ಕುರಿತು ಮಾತನಾಡಲಿದ್ದಾರೆ. ಶರಣ…

Read More