ಲೇಖಕ: admin

ಅಬುಧಾಬಿ NEWS DESK ಆ.25 : ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ಕಳೆದ 9 ವರ್ಷಗಳ ಹಿಂದೆ ಸಮಾನ ಮನಸ್ಕ ಯುವ ಸಮೂಹದಿಂದ ಕೊಡಗು ಹಳೆ ವಿದ್ಯಾಥಿಗಳ ಸಂಘವು  ದುಬೈ ಕೇಂದ್ರೀಕರಿಸಿ ಸಂಯುಕ್ತ ಅರಬ್ ಸಂಸ್ಥಾನದಲ್ಲಿರುವ  ಕೊಡಗಿನ ಹಳೆ ವಿದ್ಯಾರ್ಥಿಗಳನ್ನು ಒಳಗೊಂಡು ರೂಪುಗೊಂಡಿತು. ಇದರ 2024-25ನೇ ಸಾಲಿನ ಕಾರ್ಯಕಾರಿ ಮಂಡಳಿಯ ಆಯ್ಕೆ ನಡೆದಿದ್ದು, ಅಸೋಸಿಯೇಷನ್ ಅಧ್ಯಕ್ಷರಾಗಿ ಅಬ್ದುಲ್ಲಾ ಕೊಂಡಂಗೇರಿ, ಉಪಾಧ್ಯಕ್ಷರಾಗಿ ಸೌರಭ್ ಗೋಣಿಕೊಪ್ಪ, ಮುಖ್ಯ ಕಾರ್ಯದರ್ಶಿಗಳಾಗಿ ರಫೀಕಲಿ ಕುಂಜಿಲ ಹಾಗೂ ಶಾಫಿ ಕೊಟ್ಟಮುಡಿ ಆಯ್ಕೆಯಾದರು. ಖಜಾಂಚಿಯಾಗಿ ಸಾದಿಕ್ ಕೊಳಕೇರಿ, ಸದಸ್ಯರುಗಳಾಗಿ ಆಗಿ ಇರ್ಫಾನ್ ಮೂರ್ನಾಡು, ಕವನ್ ಗೋಣಿಕೊಪ್ಪ, ಮುಜೀಬ್ ಕೊಂಡಂಗೇರಿ, ಪ್ರತಾಪ್ ಮಡಿಕೇರಿ, ಝಿಯಾ ಚೋಕಂಡಳ್ಳಿ, ಅಕ್ರಮ್ ಸೋಮವಾರಪೇಟೆ, ಶರತ್ ಮಡಿಕೇರಿ, ಗೌತಮ್ ವಿರಾಜಪೇಟೆ, ಸಲಹಾ ಸಮಿತಿಗೆ ಅಶ್ರಫ್ ಮಡಿಕೇರಿ, ಹಮೀದ್ ವಿರಾಜಪೇಟೆ ಹಾಗೂ ಸಲೀಂ ಮೂರ್ನಾಡು ನೇಮಕಗೊಂಡರು. ಕೊಡಗು ಹಳೆ ವಿಧ್ಯಾರ್ಥಿಗಳ ಸಂಘವು ಕಳೆದ ಹಲವು ವರ್ಷಗಳಿಂದ ಅನೇಕ ಮಾನವೀಯ, ಶೆಕ್ಷಣಿಕ ಮತ್ತು ಸಾಮಾಜಿಕ ಕಾರ್ಯಗಳನ್ನು ಮಾಡಿಕೊಂಡು ಬರುತ್ತಿದೆ. ಎಸ್ ಎಸ್…

Read More

ಗುಡ್ಡೆಹೊಸೂರು NEWS DESK ಆ.24 : ಲಾರಿ ಮತ್ತು ಟ್ಯಾಂಕರ್ ನಡುವೆ ಡಿಕ್ಕಿ ಸಂಭವಿಸಿ ಓರ್ವ ಸಾನ್ನಪ್ಪಿರುವ ಘಟನೆ ಗುಡ್ಡೆಹೊಸೂರುವಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಲಾರಿಯಲ್ಲಿದ್ದ ಸುಂಟಿಕೊಪ್ಪದ ಕಾರ್ಮಿಕ ರಾಜು ಎಂಬುವವರೇ ಮೃತ ದುರ್ದೈವಿ. ಲಾರಿ ಚಾಲಕ 7ನೇ ಹೊಸಕೋಟೆಯ ಜಬ್ಬರ್ ಅವರಿಗೂ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕುಶಾಲನಗರದಿಂದ ಸುಂಟಿಕೊಪ್ಪಕ್ಕೆ ಬರುತ್ತಿದ್ದ ಲಾರಿ ಮತ್ತು ಕುಶಾಲನಗರದ ಕಡೆ ತೆರಳುತ್ತಿದ್ದ ಟ್ಯಾಂಕರ್ ನಡುವೆ ಡಿಕ್ಕಿ ಸಂಭವಿಸಿತು. ಪೊಲೀಸರು ಸ್ಥಳಕ್ಕೆ ಭೇಟಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Read More

ಮೈಸೂರುNEWS DESK ಆ.24 : ಸಾವಿನಲ್ಲೂ ದಂಪತಿ ಒಂದಾದ ಘಟನೆ ಕೊಳ್ಳೆಗಾಲದ ಹಾನೂರುವಿನ ಮಂಗಲ ಗ್ರಾಮದ ರಾಮನಗುಡ್ಡದಲ್ಲಿ ನಡೆದಿದೆ. ರಾಜಶೇಖರ ವೀರಣ್ಣರಾಧ್ಯ (68) ಹಾಗೂ ಪತ್ನಿ ಸುಮಿತ್ರ (60)ಮೃತ ದುರ್ದೈವಿಗಳಾಗಿದ್ದಾರೆ. ಸುಮಿತ್ರ ಅವರಿಗೆ ಹೃದಯಾಘಾತವಾಗಿ ಆಸ್ಪತ್ರೆಗೆ ಸೇರಿಸಲಾಯಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು. ಈ ವಿಷಯ ತಿಳಿದ ಕೆಲವೇ ಕ್ಷಣಗಳಲ್ಲಿ ಪತಿ ರಾಜಶೇಖರ ವೀರಣ್ಣರಾಧ್ಯ ಅವರಿಗೂ ಹೃದಯಾಘಾತವಾಗಿದೆ. ಇವರು ಕೂಡ ಚಿಕಿತ್ಸೆ ಫಲಿಸದೆ ನಿಧನ ಹೊಂದಿದರು. ಮೃತರು ಇಬ್ಬರು ಪುತ್ರಿಯರು ಹಾಗೂ ಓರ್ವ ಪುತ್ರನನ್ನು ಅಗಲಿದ್ದಾರೆ.

Read More

ಮಡಿಕೇರಿ NEWS DESK ಆ.24 : ಆಡಳಿತ ವ್ಯವಸ್ಥೆಯ ನಿರ್ಲಕ್ಷ್ಯದಿಂದ ಬೇಸತ್ತ ಗ್ರಾಮಸ್ಥರು ತಮ್ಮ ಸ್ವಂತ ಖರ್ಚಿನಿಂದ ತಾವೇ ಸೇತುವೆ ನಿರ್ಮಿಸಿಕೊಂಡ ಅಪರೂಪದ ಬೆಳವಣಿಗೆ ಹಾರಂಗಿ ಸಮೀಪದ ಮಾವಿನಹಳ್ಳ ಗ್ರಾಮದಲ್ಲಿ ನಡೆದಿದೆ. ಈ ಗ್ರಾಮದಲ್ಲಿದ್ದ ಕಿರು ಸೇತುವೆ ಮೂರು ವರ್ಷಗಳ ಹಿಂದೆ ಸುರಿದ ಅಧಿಕ ಮಳೆಯಿಂದಾಗಿ ನೀರಿನ ರಭಸಕ್ಕೆ ಕುಸಿದು ಹೋಗಿತ್ತು. ಸಂಪರ್ಕ ಕಡಿತಗೊಂಡ ಕಾರಣ ಮಾವಿನಹಳ್ಳ, ಯಡವನಾಡು, ಐಗೂರು, ಹಾರಂಗಿ ಸೇರಿದಂತೆ ಐದು ಗ್ರಾಮಗಳ ಗ್ರಾಮಸ್ಥರು, ವಿದಾರ್ಥಿಗಳು ಹಾಗೂ ಉದ್ಯೋಗಿಗಳು ಮುಖ್ಯ ರಸ್ತೆಯನ್ನು ಸೇರಲು ಐದು ಕಿ.ಮೀ ದೂರ ಬಳಸಿ ಬರಬೇಕಾಗಿತ್ತು. ಸೇತುವೆಯ ಕೊರತೆ ಮತ್ತು ಸಂಚಾರದ ಸಂಕಷ್ಟದ ಕುರಿತು ಹಿರಿಯ ಅಧಿಕಾರಿಗಳ ಗಮನ ಸೆಳೆದು ಮೂರು ವರ್ಷ ಕಳೆದರೂ ಯಾವುದೇ ಸ್ಪಂದನೆ ದೊರೆತ್ತಿರಲಿಲ್ಲ. ಎಂಜಿನಿಯರ್ ಗಳು ಸ್ಥಳ ಪರಿಶೀಲನೆ ಮಾತ್ರ ಮಾಡಿದರು, ಆದರೆ ಇಲ್ಲಿಯವರೆಗೆ ಯಾರೂ ಸೇತುವೆ ನಿರ್ಮಿಸಿಕೊಡುವ ಇಚ್ಛಾಶಕ್ತಿಯನ್ನು ಪ್ರದರ್ಶಿಸಿಲ್ಲ. ಇದರಿಂದ ಅಸಮಾಧಾನಗೊಂಡ ಗ್ರಾಮಸ್ಥರು ತಾವೇ ಸೇತುವೆ ನಿರ್ಮಿಸಿಕೊಳ್ಳಲು ಮುಂದಾದರು. ಗ್ರಾಮಸ್ಥರೆಲ್ಲರು ಒಗ್ಗೂಡಿ ಹಣ ಸಂಗ್ರಹಿಸಿ ಅಡಿಕೆ…

Read More

ಪುತ್ತೂರು NEWS DESK ಆ.24 : ಜೀವನದಲ್ಲಿ ನಾವು ಇಷ್ಟಪಟ್ಟಪಡುವಂತಹ ಕೆಲಸಗಳೇ ನಮ್ಮ ಪಾಲಿಗೆ ಸಿಗುತ್ತದೆ ಎನ್ನುವಂತಿಲ್ಲ. ಆದರೂ ನಾವು ಮಾಡುವ ಕೆಲಸವನ್ನು ಪ್ರಮಾಣಿಕವಾಗಿ ಪ್ರೀತಿಸಿ ಅದರ ಬಗ್ಗೆ ಅಭಿರುಚಿಯನ್ನು ಬೆಳೆಸಿಕೊಳ್ಳಬೇಕು ಎಂದು ಪುತ್ತೂರು ಲೋಕೋಪಯೋಗಿ ಇಲಾಖೆಯ ಸಹಾಯಕ ಇಂಜಿನಿಯರ್, ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಹಿರಿಯ ವಿದ್ಯಾರ್ಥಿ ಕನಿಷ್ಕ.ಎಸ್.ಚಂದ್ರ ಹೇಳಿದರು. ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯಲ್ಲಿ 2023-24ನೇ ಸಾಲಿನಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯವು ನಡೆಸಿದ ಇಂಜಿನಿಯರಿಂಗ್ ವಿಭಾಗಗಳ ಅಂತಿಮ ವರ್ಷದ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿ ಪದವೀಧರರಾದ ಅರ್ಹ ವಿದ್ಯಾರ್ಥಿಗಳ ಪದವಿ ಪ್ರದಾನ ಕಾರ್ಯಕ್ರಮ ಸಮಾವರ್ತನ ಸಮಾರಂಭದ ಮುಖ್ಯ ಅತಿಥಿಗಳಾಗಿ ಮಾತಾಡಿದರು. ನಿಮ್ಮ ಇದುವರೆಗಿನ ಓದು ಸೀಮಿತ ಅವಧಿಯ ನಿರ್ಧಿಷ್ಟ ವಿಷಯದ ಮೇಲಿನ ಪ್ರಶ್ನೆಗಳನ್ನು ಉತ್ತರಿಸುವುದು ಆಗಿತ್ತು. ಆದರೆ ಜೀವನದಲ್ಲಿ ಹಾಗಲ್ಲ ಹೆಜ್ಜೆ ಹೆಜ್ಜೆಗೂ ಎದುರಾಗುವ ಸಮಸ್ಯೆಗಳನ್ನು ಪರಿಹರಿಸುತ್ತಾ ಮುಂದುವರಿಯಬೇಕು. ಅದಕ್ಕಾಗಿ ಸವಾಲುಗಳನ್ನು ಮೆಟ್ಟಿ ನಿಲ್ಲುವ ಛಾತಿಯನ್ನು ಬೆಳೆಸಿಕೊಳ್ಳಬೇಕು ಎಂದರು. ಜೀವನದಲ್ಲಿ ಉತ್ತಮ…

Read More

ಬೆಂಗಳೂರು ಆ.24 NEWS DESK : ಧರ್ಮ-ಜಾತಿ ಹೆಸರಲ್ಲಿ ಸಮಾಜವನ್ನು ಒಡೆಯುತ್ತಾ ಹೋದಂತೆ ಅಸಮಾನತೆ ಹೆಚ್ಚುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಗಾಂಧಿ ಸ್ಮಾರಕ ನಿಧಿಯ 75ನೇ ವರ್ಷದ ಸಂಸ್ಮರಣೆಗಾಗಿ ಗಾಂಧಿ ಭವನದಲ್ಲಿ ಆಯೋಜಿಸಲಾಗಿದ್ದ “21ನೇ ಶತಮಾನಕ್ಕೆ ಮಹಾತ್ಮಗಾಂಧೀಜಿ” ಅಂತಾರಾಷ್ಟ್ರೀಯ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಮಾತನಾಡಿದರು.  ಜಾತಿ ವ್ಯವಸ್ಥೆ ಕಾರಣದಿಂದ ಬಹು ಜನರು ಶಿಕ್ಷಣದಿಂದ ವಂಚಿತರಾದರು. ಈ ಕಾರಣಕ್ಕೆ ಅಸಮಾನತೆ ಹೆಚ್ಚಾಯಿತು. ವಿದ್ಯಾವಂತರೇ ಹೆಚ್ಚೆಚ್ಚು ಜಾತಿವಾದಿಗಳಾಗುತ್ತಿರುವುದು ದುರಂತ. ಜಾತಿ ಅಸಮಾನತೆಯ ಪೋಷಕರೇ ಮಹಾತ್ಮಗಾಂಧಿಯವರನ್ನು ಕೊಂದರು ಎಂದು ಸಿಎಂ ಆಕ್ರೋಶ ವ್ಯಕ್ತಪಡಿಸಿದರು. ಗಾಂಧೀಜಿ ವಿಚಾರಗಳು, ಸಮಾಜಕ್ಕೆ ನೀಡಿದ ಮಾರ್ಗದರ್ಶನಗಳು 20ನೇ ಶತಮನಕ್ಕೆ ಮಾತ್ರ ಸೀಮಿತವಾಗಿಲ್ಲ. ಈಗಿನ ಕಾಲಕ್ಕೂ ಪ್ರಸ್ತುತವಾಗಿವೆ.‌ ಗಾಂಧೀಜಿಯವರು ಶಾಂತಿ, ಸತ್ಯ, ನ್ಯಾಯ ಮತ್ತು ಭ್ರಾತೃತ್ವವನ್ನು ಬದುಕಿನುದ್ದಕ್ಕೂ ಆಚರಿಸಿಕೊಂಡು ಬಂದಿದ್ದಾರೆ. ಇಡೀ ವಿಶ್ವವೇ ಪರಸ್ಪರ ಪ್ರೀತಿಸುವ ಗುಣವನ್ನು ರೂಢಿಸಿಕೊಂಡರೆ ಇಡೀ ಸಮಾಜ ನೆಮ್ಮದಿಯಿಂದ ಇರಬಹುದು ಎಂದರು. ಮನುಷ್ಯ ತನ್ನ ನೆಮ್ಮದಿಗಾಗಿ ಬೇರೆ ಗ್ರಹಗಳನ್ನು ಹುಡುಕಿಕೊಂಡು ಹೋಗುವಂತಾಗಬಾರದು ಎನ್ನುವ ಸ್ಟೀಫನ್ ಹಾಕಿಂಗ್ ಅವರ…

Read More

ಮಡಿಕೇರಿ ಆ.24 NEWS DESK : ಬೆಂಗಳೂರಿನ ಪ್ರಣವ್ ಫೌಂಡೇಶನ್‍ನ ಗ್ರಾಮೀಣಾಭಿವೃದ್ಧಿ ಯೋಜನೆಯಡಿ ಮಡಿಕೇರಿ ತಾಲ್ಲೂಕಿನ ಚೆಂಬು ಪಂಚಾಯ್ತಿಯ ಅತ್ಯಾಡಿ ಗ್ರಾಮದ ಜನರಿಗೆ ಉಂಬಾಳೆ ಹೊಳೆ ದಾಟಲು ನೂತನ ತೂಗು ಸೇತುವೆ ‘ಪ್ರಣವ ಸೇತು’ವನ್ನು ನಿರ್ಮಿಸಿಕೊಡಲಾಗಿದ್ದು, ಆ.25 ರಂದು ಸೇತುವೆ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ ಎಂದು ಸಂಸ್ಥೆಯ ಪ್ರಮುಖರು ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಫೌಂಡೇಶನ್‍ನ ಮಾಧ್ಯಮ ಸಂಚಾಲಕ ಕಾರ್ತಿಕ್ ಭಟ್, ಕೊಡಗು ಯಂಗ್ ಇಂಡಿಯನ್ ಫಾರ್ಮರ್ಸ್ ಅಸೋಸಿಯೇಶನ್, ಟೀಮ್ 12 ಆಫ್ ರೋಡರ್ಸ್, ಬೆಂಗಳೂರಿನ ಮಲ್ನಾಡ್ ಯೂತ್ ಅಸೋಸಿಯೇಶನ್‍ನ ಸಹಯೋಗದಲ್ಲಿ ಪ್ರಣವ್ ಫೌಂಡೇಶನ್‍ನ ಗ್ರಾಮೀಣಾಭಿವೃದ್ಧಿ ಯೋಜನೆಯಲ್ಲಿ ಅತ್ಯಾಡಿ ಗ್ರಾಮದ ಜನರಿಗೆ ಉಂಬಾಳೆ ಹೊಳೆ ದಾಟಲು ನೂತನ ಕಾಲು ಸೇತುವೆಯನ್ನು ನಿರ್ಮಿಸಿಕೊಡಲಾಗಿದ್ದು, ಅಂದು ಬೆಳಿಗ್ಗೆ 11.30 ಗಂಟೆಗೆ ಹಸ್ತಾಂತರ ಕಾರ್ಯಕ್ರಮ ನಡೆಯಲಿದೆ. ಮುಖ್ಯ ಅತಿಥಿಗಳಾಗಿ ಅತ್ಯಾಡಿ ಗ್ರಾಮಸ್ಥರು ಪಾಲ್ಗೊಳ್ಳಲಿದ್ದಾರೆ ಎಂದು ಮಾಹಿತಿ ನೀಡಿದರು. ತೂಗು ಸೇತುವೆಯನ್ನು ಮೈಸೂರು ಲೋಕಸಭಾ ಕೇತ್ರದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ವಿರಾಜಪೇಟೆ ಕ್ಷೇತ್ರದ ಶಾಸಕ…

Read More

ಕುಶಾಲನಗರ ಆ.24 NEWS DESK : ಕೂಡುಮಂಗಳೂರು (ಕೂಡ್ಲೂರು) ಸರ್ಕಾರಿ ಪ್ರೌಢಶಾಲೆಯ ವತಿಯಿಂದ ಕೂಡುಮಂಗಳೂರು ಗ್ರಾ.ಪಂ, ಕೂಡ್ಲೂರು ದೇವಾಲಯ ಸಮಿತಿ ಹಾಗೂ ವಿವಿಧ ಸಮಿತಿಗಳ ಆಶ್ರಯದಲ್ಲಿ ವಿದ್ಯಾರ್ಥಿಗಳ ಮೂರನೇ ವರ್ಷದ ಜನಪದಶೈಲಿಯ ಗ್ರಾಮೀಣ ಕೆಸರುಗದ್ದೆ ಕ್ರೀಡಾಕೂಟ ಸಂಭ್ರಮದಿಂದ ನಡೆಯಿತು. ಶಾಲೆಯ ರಾಷ್ಟ್ರೀಯ ಹಸಿರು ಪಡೆ ಇಕೋ ಕ್ಲಬ್, ರಾಷ್ಟ್ರೀಯ ಸೇವಾ ಯೋಜನಾ (ಎನ್.ಎಸ್.ಎಸ್.), ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಕುಶಾಲನಗರ ಸ್ಥಳೀಯ ಸಂಸ್ಥೆ, ಶಾಲಾ ವಿದ್ಯಾರ್ಥಿ ಸಂಘ, ಎಸ್.ಡಿ.ಎಂ.ಸಿ., ಶಾಲೆಯ ಸ್ಕೌಟ್ಸ್ ಮತ್ತು ಗೈಡ್ಸ್ ಘಟಕ, ಗ್ರಾಮದ ಬಸವೇಶ್ವರ ಸಮಿತಿ, ಕುಶಾಲನಗರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು, ಸುಂಟಿಕೊಪ್ಪ ಜೆ.ಸಿ.ಐ.ಸಂಸ್ಥೆ ಹಾಗೂ ಕುಶಾಲನಗರ ಕಾವೇರಿ ಜೆ.ಸಿ.ಐ.ಸಂಸ್ಥೆಯ ಸಂಯುಕ್ತಾಶ್ರಯದಲ್ಲಿ 78ನೇ ಸ್ವಾತಂತ್ರ್ಯೋತ್ಸವ-2024 : ಗೋ ಗ್ರೀನ್ ಅಭಿಯಾನದ ಅಂಗವಾಗಿ ಕೂಡ್ಲೂರು ಗ್ರಾಮದ ಪ್ರಗತಿಪರ ರೈತ ಕೆ.ಎಸ್.ರಾಜಾಚಾರಿ ಅವರ ಗದ್ದೆಯಲ್ಲಿ ನಡೆದ ಗ್ರಾಮೀಣ ಕೆಸರು ಗದ್ದೆ ಕ್ರೀಡಾಕೂಟವು ಗ್ರಾಮಸ್ಥರ ಗಮನ ಸೆಳೆಯಿತು. ಕ್ರೀಡಾಕೂಟದಲ್ಲಿ ಶಾಲಾ ವಿದ್ಯಾರ್ಥಿಗಳು ಕೆಸರು ಗದ್ದೆಯಲ್ಲಿ ಮಿಂದೆದ್ದು, ಕುಣಿದು ಕುಪ್ಪಳಿಸಿದರು.…

Read More

ಮಡಿಕೇರಿ ಆ.24 NEWS DESK : ಯೂತ್ ಹಾಸ್ಟೇಲ್ಸ್ ಅಸೋಸಿಯೇಷನ್ ಆಫ್ ಇಂಡಿಯಾ ಮಡಿಕೇರಿ ಘಟಕ ಹಾಗೂ ವಿಶ್ವಕರ್ಮ ಸಂಗಡಿಗರ ವತಿಯಿಂದ ಗಿಡನೆಡುವ ಕಾರ್ಯಕ್ರಮ ನಡೆಯಿತು. ನಗರದ ವಿಶ್ವಕರ್ಮ ಸಮುದಾಯದ ಜಾಗದಲ್ಲಿ ಘಟಕದ ಪ್ರಮುಖರು ಗಿಡಗಳನ್ನು ನೆಟ್ಟು ಪರಿಸರ ಜಾಗೃತಿ ಮೂಡಿಸಿದರು. ಕಾರ್ಯಕ್ರಮದಲ್ಲಿ ಘಟಕದ ಪದಾಧಿಕಾರಿಗಳು ಹಾಗೂ ವಿಶ್ವಕರ್ಮ ಸಂಗಡಿಗರು ಹಾಜರಿದ್ದರು.

Read More

ಮಡಿಕೇರಿ NEWS DESK ಆ.24 : ಕಟ್ಟಡ ಕಾಮಗಾರಿಗಾಗಿ ಬಳಸುವ ಯಂತ್ರಗಳನ್ನು ಕಳ್ಳತನ ಮಾಡಿದ ಆರೋಪದಡಿ ನಾಲ್ವರು ಆರೋಪಿಗಳನ್ನು ಕೊಡಗು ಪೊಲೀಸರು ಬಂಧಿಸಿದ್ದಾರೆ. ಬಂಧಿತರ ಬಳಿಯಿಂದ ಯಂತ್ರಗಳು ಸೇರಿದಂತೆ ಪ್ರತ್ಯೇಕ ಪ್ರಕರಣಗಳಲ್ಲಿ ಕಳ್ಳತನ ಮಾಡಿದ್ದ 8 ಬೈಕ್ ಗಳನ್ನು ವಶಪಡಿಸಿಕೊಳ್ಳಲಾಗಿದೆ. ಕುಶಾಲನಗರದ ಗೋಪಾಲ ಸರ್ಕಲ್ ನ ಮಹಮ್ಮದ್ ಆಸೀಫ್ (19), ಹೆಚ್.ಆರ್.ಪಿ ಕಾಲೋನಿಯ ಕೀರ್ತನ್ ವಿ.ಬಿ (26), ಚೌಡೇಶ್ವರಿ ಬಡಾವಣೆಯ ವಿಶ್ವತ್ (18) ಹಾಗೂ ಟೌನ್ ಕಾಲೋನಿಯ ಜಯಪ್ರಕಾಶ್ ಹೆಚ್.(22) ಬಂಧಿತ ಆರೋಪಿಗಳು. ಬಂಧಿತರ ಬಳಿಯಿಂದ ಕಟ್ಟಡ ಕಾಮಗಾರಿಯ ಯಂತ್ರಗಳು ಹಾಗೂ 8 ಬೈಕ್ ಗಳನ್ನು ವಶಪಡಿಸಿಕೊಳ್ಳಲಾಗಿದೆ. ::: ಪ್ರಕರಣದ ಹಿನ್ನೆಲೆ ::: ಕುಶಾಲನಗರ ಪೊಲೀಸ್ ಠಾಣಾ ವ್ಯಾಪ್ತಿಯ ಮಾದಾಪಟ್ಟಣ ಗ್ರಾಮದ ಆರ್.ಕೆ ಲೇಔಟ್ ನಲ್ಲಿರುವ ಈಶ್ವರ್ ಎಂಬುವವರ ಹೊಸ ಮನೆ ಕಟ್ಟಡ ಕಾಮಗಾರಿಗಾಗಿ ನಿರ್ಮಿಸಿದ್ದ ತಾತ್ಕಾಲಿಕ ಶೆಡ್‌ನಲ್ಲಿ ಇಡಲಾಗಿದ್ದ ವಿವಿಧ ಮಾದರಿಯ ಕಟ್ಟಿಂಗ್ ಮಿಷನ್, ಡೀಲಿಂಗ್ ಮಿಷನ್, ಏರ್‌ಬೋವರ್, ವ್ಯಾಕ್ಯೂಮ್ ಕ್ಲೀನರ್, ಗ್ರೇಂಡಿಂಗ್ ಮಿಷನ್ ಸೇರಿದಂತೆ ಒಟ್ಟು 11 ಯಂತ್ರಗಳು…

Read More