ಲೇಖಕ: admin

ಮಡಿಕೇರಿ ಆ.24 NEWS DESK : ಓಂ ಯುವಕ ಸಂಘದ ವತಿಯಿಂದ ಮೂರನೇ ವರ್ಷದ ಹಿಂದೂ ಕಪ್ ಕೆಸರುಗದ್ದೆ ಕ್ರೀಡಾಕೂಟವು ಸಂಭ್ರಮದಿಂದ ನಡೆಯಿತು. ಅರ್ವತೋಕ್ಲು ಅಪ್ಪಂಗಳದ ಕೆ.ಕೆ.ಶ್ರೀಪತಿ ಹೆಬ್ಬಾರ್ ಅವರ ಗದ್ದೆಯಲ್ಲಿ ನಡೆದ ಕ್ರೀಡಾಕೂಟವನ್ನು ಊರಿನ ಹಿರಿಯರು ಹಾಗೂ ದಾನಿಗಳಾದ ಶಂಕರ ನಾರಾಯಣ ಭಟ್ ಉದ್ಘಾಟಿಸಿದರು. ಕ್ರಿಕೆಟ್, ಹಗ್ಗಜಗ್ಗಾಟ, ರಿಲೆ ಓಟದ ಸ್ಪರ್ಧೆಗಳಲ್ಲಿ ಹಿರಿಯರು ಹಾಗೂ ಕಿರಿಯರು ಮಿಂಚಿದರು. ಕ್ರಿಕೆಟ್‍ನಲ್ಲಿ ಟೀಮ್ ಭಗವತಿ ಪ್ರಥಮ, ಓಂ ಯುವಕ ಸಂಘ ದ್ವಿತೀಯ ಬಹುಮಾನ ಪಡೆದುಕೊಂಡಿತು. ಹಗ್ಗಜಗ್ಗಾಟದಲ್ಲಿ ಹೆರವನಾಡು ತಂಡ ಪ್ರಥಮ, ಅರ್ವತೋಕ್ಲು ತಂಡ ದ್ವಿತೀಯ ಸ್ಥಾನ ಪಡೆದುಕೊಂಡಿತು. ಸಾರ್ವಜನಿಕರ ಓಟದಲ್ಲಿ ವಿಕ್ರಮ್ ಪ್ರಥಮ ಸ್ಥಾನ ಪಡೆದುಕೊಂಡರು. ತಳೂರು ಅಪ್ಪದೊರೆ ವೇದಿಕೆಯಲ್ಲಿ ನಡೆದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಓಂ ಯುವಕ ಸಂಘದ ಅಧ್ಯಕ್ಷ, ಮಾಜಿ ಸೈನಿಕ ಕಂಬಳ್ಳಿ ಸುದೀಪ್ ಗೌಡ ವಹಿಸಿದ್ದರು. ಸ್ಥಳದಾನಿಗಳಾದ ಶಂಕರನಾರಾಯಣ ಹೆಬ್ಬಾರ್, ತಳೂರು ಬೋಜಪ್ಪ, ಮಚಂಡ ಲಾಲು, ಪಡಂಡ ಡಾಲಿ ಭೀಮಯ್ಯ, ಚಳಿಯಂಡ ಯತೀಶ್, ಕಟ್ರತಂಡ ಮನು, ಜಬ್ಬಂಡ ಮನು, ಕೊಪ್ಪಡ…

Read More

ಮಡಿಕೇರಿ ಆ.24 NEWS DESK : ಕೊಡವಾಮೆರ ಕೊಂಡಾಟ ಸಂಘಟನೆಯ ಐದನೇ ವಾರ್ಷಿಕೋತ್ಸವದ ಅಂಗವಾಗಿ ಕವಿವೊರ್ಮೆ ಕಾರ್ಯಕ್ರಮ ನಡೆಯಿತು. ಗೂಗಲ್ ಮೀಟ್‌‌ ವೆಬಿನಾರ್‌‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಹಿರಿಕಿರಿಯ ಕವಿಗಳು  ಭಾಗವಹಿಸಿ ಸಂಭ್ರಮಿಸಿದರು. ಮುಖ್ಯ ಅಥಿತಿಯಾಗಿ ಭಾಗವಹಿಸಿದ್ದ ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಅಜ್ಜಿನಿಕಂಡ ಮಹೇಶ್ ನಾಚಯ್ಯ ಮಾತನಾಡಿ, ಸರ್ಕಾರ ದೂರದೃಷ್ಟಿಯಿಂದ ಭಾಷೆಗಳ ಅಭಿವೃದ್ಧಿಗಾಗಿ ಅಕಾಡೆಮಿಗಳನ್ನು ರಚಿಸಿದೆ. ಇದರ ಸದ್ಬಳಕೆಯನ್ನು ನಾವೆಲ್ಲ ಮಾಡಿಕೊಳ್ಳುವ ಮೂಲಕ, ಸಾಹಿತ್ಯ ಸೇವೆಯಲ್ಲಿ ತೊಡಗಿಕೊಂಡಿದೆ. ಈ ನಿಟ್ಟಿನಲ್ಲಿ ಕೊಡವಾಮೆರ ಕೊಂಡಾಟ ಸಂಘಟನೆ ಕಳೆದ ಐದು ವರ್ಷಗಳಿಂದ ದುಡಿಯುತ್ತಿದ್ದು, ಎಲ್ಲಾ ಸಂಘ ಸಂಸ್ಥೆಗಳು ಸಾಹಿತ್ಯ ಮತ್ತು ಭಾಷೆಯ ಬೆಳವಣಿಗೆಗೆ ಸಾಹಿತ್ಯ ಅಕಾಡೆಮಿಯ ಜೊತೆ ಎಲ್ಲರೂ ಸಹಕರಿಸಬೇಕೆಂದು ಕೋರಿದರು. ಭೂ ಸೇನಾಧಿಕಾರಿ ಹಾಗೂ ಕೊಡವಾಮೆರ ಕೊಂಡಾಟ ಸಂಘಟನೆಯ ಸದಸ್ಯ ಕ್ಯಾಪ್ಟನ್ ಬಿದ್ದಂಡ ನಾಣಿ ದೇವಯ್ಯ ಮಾತನಾಡಿ, ಜನಾಂಗ ಮತ್ತು ಭಾಷೆಯ ಬೆಳವಣಿಗೆಗೆ ದುಡಿಯುವ ಕೈಗಳು ಬೇಕಾಗಿವೆ. ಆ ಕೆಲಸವನ್ನ ಕೊಡವಾಮೆರ ಕೊಂಡಾಟ ಸಂಘಟನೆ ಕಳೆದ ಐದು ವರ್ಷಗಳಿಂದ ನಿರಂತರ ಮಾಡುತ್ತಿದ್ದು,…

Read More

ಮಡಿಕೇರಿ ಆ.24 NEWS DESK : ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಸಂಗ್ರಹವಾಗುವ ರಾಶಿ ರಾಶಿ ತ್ಯಾಜ್ಯವನ್ನು ಕಳೆದ ಅನೇಕ ವರ್ಷಗಳಿಂದ ಜ್ಯೋತಿ ನಗರದ ಸ್ಟೋನ್ ಹಿಲ್ ವ್ಯಾಪ್ತಿಯಲ್ಲಿ ಅವೈಜ್ಞಾನಿಕವಾಗಿ ಸುರಿಯಲಾಗುತ್ತಿದೆ. ಇದು ಮುಂದೊಂದು ದಿನ ನಗರಕ್ಕೆ ಅಪಾಯವನ್ನು ತಂದೊಡ್ಡಲ್ಲಿದ್ದು, ನಗರಸಭೆ ತಕ್ಷಣ ಎಚ್ಚೆತ್ತುಕೊಂಡು ಜನವಸತಿಯಿಲ್ಲದ ಪ್ರದೇಶದಲ್ಲಿ ಕಸ ವಿಲೇವಾರಿಗೆ ಕ್ರಮ ಕೈಗೊಳ್ಳಬೇಕೆಂದು ನಗರದ ಸಾಮಾಜಿಕ ಚಿಂತಕ ಹೆಚ್.ಎಂ.ಕೃಷ್ಣ ಒತ್ತಾಯಿಸಿದ್ದಾರೆ. ಈ ಬಗ್ಗೆ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಪುರಸಭೆಯಾಗಿದ್ದ ಮಡಿಕೇರಿ, ನಗರಸಭೆಯಾಗಿ ಮೇಲ್ದರ್ಜೆಗೇರಿದರೂ ಇಲ್ಲಿಯವರೆಗೆ ಕಸ ವಿಲೇವಾರಿ ಸಮಸ್ಯೆಯನ್ನು ಬಗೆಹರಿಸಲು ಸಾಧ್ಯವಾಗಿಲ್ಲ. ನಗರದಲ್ಲಿ ಸಂಗ್ರಹವಾಗುವ ಟನ್ ಗಟ್ಟಲೆ ಕಸವನ್ನು ಕುಡಿಯುವ ನೀರಿನ ಟ್ಯಾಂಕ್ ಇರುವ ಸ್ಟೋಲ್ ಹಿಲ್ ಪ್ರದೇಶದಲ್ಲಿ ಅವೈಜ್ಞಾನಿಕವಾಗಿ ವಿಲೇವಾರಿ ಮಾಡಲಾಗುತ್ತಿದೆ. ಇದು ಸುತ್ತಲಿನ ಪರಿಸರವನ್ನು ಕಲುಷಿಗೊಳಿಸಿದೆಯಲ್ಲದೆ, ನಿವಾಸಿಗಳು ಸಾಂಕ್ರಾಮಿಕ ರೋಗದ ಭೀತಿಯನ್ನು ಎದುರಿಸುತ್ತಿದ್ದಾರೆ ಎಂದರು. ಕಸದ ರಾಶಿಯ ಪರಿಣಾಮ ಮುಂದೊಂದು ದಿನ ಈ ಬೆಟ್ಟ ಪ್ರದೇಶ ಕುಸಿಯಲೂಬಹುದು. ಅನಾಹುತ ಎದುರಾಗುವ ಮೊದಲು ನಗರಸಭೆ…

Read More

ನಾಪೋಕ್ಲು ಆ.24 NEWS DESK : ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆಯ ಬದಿಗೆ ಸರಿದು ಕೂದಲೆಳೆಯ ಅಂತರದಲ್ಲಿ ಪ್ರಯಾಣಿಕರು ಪಾರಾದ ಘಟನೆ ಮರಂದೋಡ ಗ್ರಾಮದಲ್ಲಿ ನಡೆದಿದೆ. ಕುಂಜಿಲ ಗ್ರಾಮದ ಸಂಬಂಧಿಕರ ಮನೆಗೆ ಕೇರಳದಿಂದ ಬಂದ ಕುಟುಂಬ ಒಂದು ಭೇಟಿ ನೀಡಿ ಹಿಂತಿರುಗುವ ಸಂದರ್ಭ ಕಕ್ಕಬ್ಬೆಯ ಮರಂದೋಡ ಗ್ರಾಮದ ಕಬ್ಬಿನ ಕಾಡು ತಿರುವಿನಲ್ಲಿ ಅಪಘಾತ ಸಂಭವಿಸಿದ್ದು, ಯಾವುದೇ ಅನಾಹುತ ಸಂಭವಿಸಿಲ್ಲ. ಬಳಿಕ ಗ್ರಾಮಸ್ಥರ ಸಹಕಾರದಿಂದ ಕಾರನ್ನು ಮೇಲಕ್ಕೆತ್ತಲಾಯಿತು. ವರದಿ : ದುಗ್ಗಳ ಸದಾನಂದ. 

Read More

ನಾಪೋಕ್ಲು ಆ.24 NEWS DESK : ತಮಿಳುನಾಡಿನ ಕೊಯಂಬತ್ತೂರಿನಲ್ಲಿ ನಡೆದ 17ನೇ ನ್ಯಾಷನಲ್ ಓಪನ್ ಕರಾಟೆ ಚಾಂಪಿಯನ್ ಶಿಪ್ ನಲ್ಲಿ ಕಕ್ಕಬೆ-ಕುಂಜಿಲದ ಕೆ.ಎಸ್.ಆಯಿಷಾ ಚಿನ್ನ ಬೆಳ್ಳಿ ಮತ್ತು ಕಂಚಿನ ಪದಕ ಗೆದ್ದುಕೊಂಡಿದ್ದಾಳೆ. ಕೊಯಂಬತ್ತೂರಿನ ಶ್ರೀ ಕೃಷ್ಣ ಗೌಂಡರ್ ಮಂಟಪದಲ್ಲಿ ನಡೆದ ನ್ಯಾಷನಲ್ ಕರಾಟೆ ಚಾಂಪಿಯನ್ ಶಿಪ್ ನ ಕತಾ, ಕುಮಿತೆ ಮತ್ತು ಟೀಮ್ ಕತಾ ವಿಭಾಗದಲ್ಲಿ ಭಾಗವಹಿಸಿ ಚಿನ್ನ, ಬೆಳ್ಳಿ ಮತ್ತು ಕಂಚಿನ ಪದಕ ಪಡೆದು ಸಾಧನೆ ಮಾಡಿದ್ದಾಳೆ. ಈಕೆ ಕುಂಜಿಲ ಗ್ರಾಮದ ಕೆ.ಎಂ.ಸಮೀರ್ ಮತ್ತು ಖೈರುನ್ನಿಸ ದಂಪತಿ ಪುತ್ರಿ. ನಾಪೋಕ್ಲುವಿನ ರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದು, ವಿರಾಜಪೇಟೆಯ ಕರಾಟೆ ಮಾಸ್ಟರ್ ಸೆನ್ ಸಾಯಿ ಎಂ.ಬಿ ಚಂದ್ರನ್ ಅವರಲ್ಲಿ ತರಬೇತಿ ಪಡೆಯುತ್ತಿದ್ದಾಳೆ. ವರದಿ : ದುಗ್ಗಳ ಸದಾನಂದ.

Read More

ನಾಪೋಕ್ಲು ಆ.24 NEWS DESK : ನೆಲಜಿ ಗ್ರಾಮದ ಶ್ರೀ ಇಗ್ಗುತ್ತಪ್ಪ ದೇವಾಲಯದಲ್ಲಿ ಆ.26 ರಂದು ಉತ್ಸವ ನಡೆಯಲಿದೆ. ಉತ್ಸವದ ಅಂಗವಾಗಿ ತುಲಾಭಾರ ಸೇವೆ, ಎತ್ತೊಪೋರಾಟ, ಮಹಾಪೂಜೆ, ದೇವರ ನೃತ್ಯಬಲಿ, ಅನ್ನಸಂತರ್ಪಣೆ ನಡೆಯಲಿದ್ದು ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಉತ್ಸವದಲ್ಲಿ ಪಾಲ್ಗೊಳ್ಳುವಂತೆ ಕೋರಿದೆ. ತುಲಾಭಾರ ಸೇವೆ ಮಾಡುವ ಭಕ್ತರು ಮುಂಚಿತವಾಗಿ ದೇವಸ್ಥಾನದ ತಕ್ಕ ಮುಖ್ಯಸ್ಥರನ್ನು ಸಂಪರ್ಕಿಸಬಹುದಾಗಿದೆ ಎಂದು ದೇವಸ್ಥಾನದ ತಕ್ಕ ಮುಖ್ಯಸ್ಥರು, ಆಡಳಿತ ಮಂಡಳಿ ತಿಳಿಸಿದೆ. ಹೆಚ್ಚಿನ ಮಾಹಿತಿಗೆ ಅಧ್ಯಕ್ಷರು ಮುಂಡಂಡ ಎಂ.ನಾಣಯ್ಯ-9341421666, ಕಾರ್ಯದರ್ಶಿ ಮುಕ್ಕಾಟಿರ ಎಂ.ವಿನಯ್-9449554997 ಸಂಪರ್ಕಿಸಬಹುದಾಗಿದೆ. ವರದಿ : ದುಗ್ಗಳ ಸದಾನಂದ.

Read More

ನಾಪೋಕ್ಲು ಆ.24 NEWS DESK : ವಿದ್ಯಾರ್ಥಿಗಳು ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಗಳಲ್ಲೂ ಪಾಲ್ಗೊಳ್ಳುವುದರಿಂದ ತಮ್ಮ ದೈಹಿಕ ಮತ್ತು ಮಾನಸಿಕ ಸದೃಢತೆಗೆ ಸಹಕಾರಿ ಎಂದು ನಾಪೋಕ್ಲು ಪೊಲೀಸ್ ಠಾಣೆಯ ಠಾಣಾಧಿಕಾರಿ ಮಂಜುನಾಥ್ ಹೇಳಿದರು. ನರಿಯಂದಡ ಕೇಂದ್ರ ಪ್ರೌಢಶಾಲೆಯಲ್ಲಿ ಆಯೋಜಿಸಲಾಗಿದ್ದ ನಾಪೋಕ್ಲು ವಲಯ ಮಟ್ಟದ ಪ್ರೌಢಶಾಲಾ ವಿಭಾಗದ ಕ್ರೀಡಾಕೂಟದ ಸಮಾರೋಪ ಸಮಾರಂಭದಲ್ಲಿ ವಿಜೇತರಿಗೆ ಬಹುಮಾನಗಳನ್ನು ವಿತರಿಸಿ ಅವರು ಮಾತನಾಡಿದರು. ಗ್ರಾಮೀಣ ಮಟ್ಟದಲ್ಲಿ ಕ್ರೀಡೆಗಳಿಗೆ ಉತ್ತೇಜನ ನೀಡಲಾಗುತ್ತಿದೆ. ಕ್ರೀಡಾ ಚಟುವಟಿಕೆಗಳಲ್ಲಿ ಸೋಲು, ಗೆಲುವು ಮುಖ್ಯವಲ್ಲ ಪಾಲ್ಗೊಳ್ಳುವುದು ಮುಖ್ಯ..ಕ್ರೀಡೆಗಳಲ್ಲಿ ಪಾಲ್ಗೊಳ್ಳುವುದರಿಂದ ದೈಹಿಕ ಸಾಮರ್ಥ್ಯ ವೃದ್ಧಿಸುವುದಲ್ಲದೇ ಶೈಕ್ಷಣಿಕವಾಗಿಯೂ ಮುಂದುವರಿಯಲು ಸಾಧ್ಯ ಎಂದರು. ಈಗ ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲೂ ಕ್ರೀಡೆಗೆ ಪ್ರಾಮುಖ್ಯತೆ ನೀಡಲಾಗುತ್ತಿದೆ ಎಂದರು. ಈ ಸಂದರ್ಭ ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ಗಿರೀಶ್ ಪೂಣಚ್ಚ, ಕಾರ್ಯದರ್ಶಿ ಬಿದ್ದಂಡ ಎಂ.ರಾಜೇಶ್ ಅಚ್ಚಯ್ಯ, ವಿವಿಧ ಶಾಲೆಗಳ ದೈಹಿಕ ಶಿಕ್ಷಣ ಶಿಕ್ಷಕರು, ವ್ಯವಸ್ಥಾಪಕರು, ಶಿಕ್ಷಕರು, ಸಿಬ್ಬಂದಿ ವರ್ಗ ಪಾಲ್ಗೊಂಡಿದ್ದರು. ಕ್ರೀಡಾಕೂಟದ ಉಸ್ತುವಾರಿಯನ್ನುನರಿಯಂದಡ ಕೇಂದ್ರ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಬಿ.ಎಸ್.ಭವ್ಯ, ದೈಹಿಕ ಶಿಕ್ಷಣ ಶಿಕ್ಷಕ…

Read More

ವಿರಾಜಪೇಟೆ NEWS DESK ಆ.24 : ಕೊಲ್ಕೊತ್ತದಲ್ಲಿ ನಡೆದ ವೈದ್ಯಕೀಯ ವಿದ್ಯಾರ್ಥಿನಿಯ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವಿರಾಜಪೇಟೆಯಲ್ಲಿ ಪ್ರತಿಭಟನೆ ನಡೆಸಿತು. ಪಟ್ಟಣದ ಗಡಿಯಾರ ಕಂಬದ ಬಳಿ ಜಮಾಯಿಸಿದ ಪ್ರತಿಭಟನಾಕಾರರು ಅತ್ಯಾಚಾರ ಮತ್ತು ಕೊಲೆ ಆರೋಪಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ಒತ್ತಾಯಿಸಿದರು. ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನ ಮಂಗಳೂರು ವಿಭಾಗದ ಸಂಘಟನಾ ಕಾರ್ಯದರ್ಶಿ ಚಂದ್ರಶೇಖರ್ ಮಾರಾಟಿ ಮಾತನಾಡಿ ಕೊಲ್ಕೊತ್ತ ಸರ್ಕಾರ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು ಎಂದರು. ದೇಶದಲ್ಲಿ ಯುವತಿಯರು ಹಾಗೂ ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು ಹೆಚ್ಚಾಗುತ್ತಿದ್ದು, ಇಡೀ ಸಮಾಜ ತಲೆ ತಗ್ಗಿಸುವಂತ್ತಾಗಿದೆ. ಇನ್ನು ಮುಂದೆ ಈ ರೀತಿಯ ಕೃತ್ಯಗಳು ನಡೆಯದಂತೆ ಸರ್ಕಾರ ಎಚ್ಚರ ವಹಿಸಬೇಕು ಮತ್ತು ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಎಬಿವಿಪಿ ಜಿಲ್ಲಾ ಪ್ರಮುಖ್ ಕೌಶಲ್ಯ ಕೆ.ಹೆಚ್ ಮಾತನಾಡಿ ಕೊಲ್ಕೊತ್ತ ಘಟನೆಯನ್ನು ತೀವ್ರವಾಗಿ ಖಂಡಿಸಿದರು. ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನ ಜಿಲ್ಲಾ…

Read More

ಮಡಿಕೇರಿ ಆ.24 NEWS DESK : ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯು ಭಾರತ ಸರ್ಕಾರದ ರಾಷ್ಟ್ರೀಯ ಮೀನುಗಾರಿಕಾ ಅಭಿವೃದ್ಧಿ ಮಂಡಳಿ, ಹೈದ್ರಾಬಾದ್ ಮತ್ತು ಮೀನುಗಾರಿಕಾ ಇಲಾಖೆ, ಕರ್ನಾಟಕ ಸರ್ಕಾರದ ಸಹಭಾಗಿತ್ವದಲ್ಲಿ ಬ್ಲೂ ರೆವಲೂಷನ್ ಫಾರ್ ಸಸ್ಟೈನೇಬಲ್ ಫಿಶರಿಸ್ ಡೆವಲಪ್‍ಮೆಂಟ್ ವಿಷಯದ ಮೇಲೆ ಸೆಪ್ಟೆಂಬರ್, 25 ರಿಂದ 27 ರವರೆಗೆ ಮೂರು ದಿನಗಳ ರಾಷ್ಟ್ರೀಯ ಸಮ್ಮೇಳನ ಅಕಾಡೆಮಿ ಕಚೇರಿಯಲ್ಲಿ ನಡೆಯಲಿದೆ. ಈ ಸಮ್ಮೇಳನದಲ್ಲಿ ವಿವಿಧ ಪ್ರತಿಷ್ಠಿತ ಸಂಸ್ಥೆಗಳ ನುರಿತ ವಿಜ್ಞಾನಿಗಳಿಂದ ತಾಂತ್ರಿಕ ಉಪನ್ಯಾಸಗಳು ನಡೆಯಲಿದ್ದು, ಮೀನುಗಾರಿಕಾ ಉದ್ಯಮಗಳಿಂದ ಪ್ರದರ್ಶನ ಮಳಿಗೆಯನ್ನು ಸಹ ಏರ್ಪಡಿಸಲಾಗಿದೆ. ಈ ಸಮ್ಮೇಳನದಲ್ಲಿ ಯುವ ವಿಜ್ಞಾನಿಗಳು ಮತ್ತು ಸಂಶೋಧನಾ ವಿದ್ಯಾರ್ಥಿಗಳು ರಿಸರ್ಚ್ ಪೇಪರ್ ಪ್ರೆಸೆಂಟೇಷನ್ ಸಹ ಮಂಡಿಸಲು ಅವಕಾಶ ಕಲ್ಪಿಸಲಾಗಿದ್ದು, ಆಯ್ಕೆಯಾದ ರಿಸರ್ಚ್ ಪೇಪರ್‍ಗಳಿಗೆ ನಗದು ಬಹುಮಾನ ನೀಡಲಾಗುವುದು. ಈ ಸಮ್ಮೇಳನದಲ್ಲಿ ಸ್ನಾತಕೋತ್ತರ ವಿಜ್ಞಾನ ವಿದ್ಯಾರ್ಥಿಗಳು, ಸಂಶೋಧನಾ ವಿದ್ಯಾರ್ಥಿಗಳು, ಪ್ರಾಧ್ಯಾಪಕರು, ಯುವ ವಿಜ್ಞಾನಿಗಳು, ಶೈಕ್ಷಣಿಕ ತಜ್ಞರು, ಮೀನುಗಾರಿಕಾ ಉದ್ಯಮಿಗಳು ಭಾಗವಹಿಸಬಹುದು. ಆಸಕ್ತ ಪ್ರತಿನಿಧಿಗಳು ಸೆಪ್ಟೆಂಬರ್, 10 ರೊಳಗೆ (Google…

Read More

ಮಡಿಕೇರಿ ಆ.24 NEWS DESK : ಪ್ರಸಕ್ತ (2024-25) ಸಾಲಿನ ಕೃಷಿ ಯಾಂತ್ರೀಕರಣ ಮತ್ತು ಕೃಷಿ ಉತ್ಪನ್ನಗಳ ಸಂಸ್ಕರಣೆ ಕಾರ್ಯಕ್ರಮದಲ್ಲಿ ಸಾಮಾನ್ಯ ವರ್ಗದ ರೈತರಿಗೆ ಶೇ.50ರ ರಿಯಾಯಿತಿಯಲ್ಲಿ ಮತ್ತು ಪರಿಶಿಷ್ಟ ಜಾತಿ ಮತ್ತು ವರ್ಗದ ರೈತರಿಗೆ ಶೇ.90ರ ರಿಯಾಯ್ತಿಯಲ್ಲಿ ಮಿನಿ ಟ್ರ್ಯಾಕ್ಟರ್, ಪವರ್ ಟಿಲ್ಲರ್, ರೋಟೋವೇಟರ್, ಕಳೆ ಕೊಚ್ಚುವ ಯಂತ್ರಗಳು (ಪವರ್ ವೀಡರ್), ಪವರ್ ಸ್ಪ್ರೇಯರ್ಸ್, ಡೀಸೆಲ್ ಪಂಪ್‍ಸೆಟ್, ಪ್ಲೋರ್ ಮಿಲ್, ಮೊಟೋಕಾರ್ಟ್, ಮೋಟಾರ್ ಚಾಲಿತ ಸಣ್ಣ ಎಣ್ಣೆಗಾಣಗಳು ಮತ್ತು ಇತರೆ ಹೈಟೆಕ್ ಕೃಷಿ ಉಪಕರಣಗಳನ್ನು ವಿತರಿಸಲಾಗುತ್ತಿದೆ. ಆಸಕ್ತ ಮಡಿಕೇರಿ ತಾಲ್ಲೂಕು ವ್ಯಾಪ್ತಿಯ ರೈತರು ಪಹಣಿ (ಆರ್.ಟಿ.ಸಿ), ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಪುಸ್ತಕ ಜೆರಾಕ್ಸ್, ಒಂದು ಬಾವಚಿತ್ರ, ರೂ.100ರ ಛಾಪಾ ಕಾಗದದೊಂದಿಗೆ ಹೋಬಳಿಯಲ್ಲಿರುವ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ ಅರ್ಜಿ ನೀಡುವಂತೆ ಮಡಿಕೇರಿ ತಾಲ್ಲೂಕು ಕೃಷಿ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

Read More