ಲೇಖಕ: admin

ನಾಪೋಕ್ಲು ಸೆ.10 NEWS DESK : ಕಕ್ಕಬ್ಬೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು 2023- 24ನೇ ಸಾಲಿನಲ್ಲಿ 25.04 ಲಕ್ಷ ರೂ ಲಾಭ ಗಳಿಸಿದೆ ಎಂದು ಸಂಘದ ಅಧ್ಯಕ್ಷ ಕಲ್ಯಾಟಂಡ ಎ.ತಮ್ಮಯ್ಯ ತಿಳಿಸಿದರು. ಕಕ್ಕಬ್ಬೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಭಾಂಗಣದಲ್ಲಿ ಆಯೋಜಿಸಿದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಸಂಘದಲ್ಲಿ 1137 ಜನ ಸದಸ್ಯರಿದ್ದು, 103.36 ಲಕ್ಷ ಪಾಲು ಹಣ ಇರುತ್ತದೆ. ಸಂಘದಲ್ಲಿ ಒಟ್ಟು ದುಡಿಯುವ ಬಂಡವಾಳ ರೂ.17 32.91 ಲಕ್ಷ ಗಳಾರುತ್ತವೆ ಎಂದ ಅವರು ಸಂಘದಿಂದ 339 ಜನ ರೈತರಿಗೆ ಕೆಸಿಸಿ ಸಾಲ 780.54 ಲಕ್ಷ ವಿತರಿಸಲಾಗಿದೆ. ಜಾಮೀನು ಸಾಲ 7450 ಲಕ್ಷ ರೂ,ಗೊಬ್ಬರ ಸಾಲ 35.66 ಲಕ್ಷ ರೂ.ಗಳನ್ನು ವಿತರಿಸಲಾಗಿದೆ. ಸಂಘದ ಸದಸ್ಯರಿಗೆ ಶೇ.12 ಡಿವಿಡೆಂಟ್ ನೀಡುವಂತೆ ಸಭೆಯಲ್ಲಿ ನಿರ್ಣಯಿಸಲಾಗಿದ್ದು ಸಂಘದಲ್ಲಿ ಗ್ರಾಹಕರಿಗೆ ಗೊಬ್ಬರ, ಕೃಷಿ ಉಪಕರಣ ಮುಂತಾದ ಸಾಮಗ್ರಿಗಳು ಲಭ್ಯವಿದೆ ಎಂದು ಮಾಹಿತಿ ನೀಡಿದರು. ಸಂಘದ ಮಹಾಸಭೆಯು ಸೆ.23 ರಂದು ಸಂಘದ ಸಭಾಂಗಣದಲ್ಲಿ ಜರುಗಲಿದ್ದು, ಸಂಘದ…

Read More

ನಾಪೋಕ್ಲು ಸೆ.10 NEWS DESK : ಭಾಗಮಂಡಲ ಸ. ಹಿ. ಪ್ರಾ. ಶಾಲೆಯಲ್ಲಿ ನಡೆದ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಭಾಗಮಂಡಲದ ಜ್ಞಾನೋದಯ ಆಂಗ್ಲ ಮಾಧ್ಯಮ ಶಾಲೆಯ (ಎಇಒS) ವಿದ್ಯಾರ್ಥಿಗಳು ಭಾಗವಹಿಸಿ ಹಲವು ಬಹುಮಾನಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. 1 ರಿಂದ 4ನೇ ತರಗತಿಯ ವಿಭಾಗದಲ್ಲಿ ಹಮ್ನ (ಮಣ್ಣಿನ ಮಾದರಿ ತಯಾರಿ ), ಹವ್ಯ (ಕಥೆ ಹೇಳುವುದು ), ಪ್ರಣಾಮ್ಯ (ಚಿತ್ರಕಲೆ ), ತನ್ವಿಕ ( ಛದ್ಮವೇಷ ), ನೆಬೀಲ್ ( ಹಿಂದಿ ಕಂಠಪಾಠ ) ದಲ್ಲಿ ಪ್ರಥಮ ಬಹುಮಾನ ಪಡೆದುಕೊಂಡಿದ್ದಾರೆ. ನಿಕ್ಕಿ ನಂಜಪ್ಪ (ಆಶುಭಾಷಣ ), ಮಿಸ್ಬ ( ಧಾರ್ಮಿಕ ಪಠಣ ಅರೇಬಿಕ್ ) ದ್ವಿತೀಯ ಬಹುಮಾನವನ್ನೂ, ಪೊನ್ನಮ್ಮ ( ಅಭಿನಯ ಗೀತೆ ), ದೀಪಾಲಿ ( ಭಕ್ತಿ ಗೀತೆ )ತೃತೀಯ ಬಹುಮಾನವನ್ನು ಪಡೆದುಕೊಂಡಿರುತ್ತಾರೆ. ಹಾಗೆಯೇ 5ರಿಂದ 7ನೇ ತರಗತಿ ವಿಭಾಗದಲ್ಲಿ ರೀತಿಶ್ರೀ ( ಭಾವಗೀತೆ ), ಯುಕ್ತ ( ಮಿಮಿಕ್ರಿ ) ಯಲ್ಲಿ ಪ್ರಥಮ ಬಹುಮಾನವನ್ನನ್ನೂ, ಮೇಘನಾ ( ಚಿತ್ರಕಲೆ…

Read More

ಮಡಿಕೇರಿ ಸೆ.10 NEWS DESK  :  ಪ್ರಸಕ್ತ (2024-25) ಸಾಲಿನ ಪರಿಶಿಷ್ಟ ಜಾತಿ ಉಪಯೋಜನೆ ಅಡಿಯಲ್ಲಿ ಪರಿಶಿಷ್ಟ ಜಾತಿ ಯುವಕ, ಯುವತಿಯರಿಗೆ  ಜಿಮ್ ಫಿಟ್ನೆಸ್, ಬ್ಯೂಟಿಷಿಯನ್, ಚಾಟ್ಸ್ ತಯಾರಿಕೆ ತರಬೇತಿ ಶಿಬಿರಗಳನ್ನು ಇಲಾಖೆ ವತಿಯಿಂದ ಆಯೋಜಿಸಲಾಗಿದೆ. ತರಬೇತಿಯ ವಿವರ ಇಂತಿದೆ. ಸೆಪ್ಟೆಂಬರ್, 19 ರಿಂದ ಅಕ್ಟೋಬರ್, 03 ರವರೆಗೆ ಜಿಮ್/ ಫಿಟ್ನೆಸ್ ತರಬೇತಿ ಶಿಬಿರ(15 ದಿನಗಳು). ಎಸ್‍ಎಸ್‍ಎಲ್‍ಸಿ ವಿದ್ಯಾರ್ಹತೆ ಹೊಂದಿರಬೇಕು. ಕನಿಷ್ಠ 18 ರಿಂದ 40 ವರ್ಷದೊಳಗಿರಬೇಕು. ತರಬೇತಿಯು ಬೆಂಗಳೂರಿನ ಕಸ್ತೂರಬಾ ರಸ್ತೆಯ ಶ್ರೀ ಕಂಠೀರವ ಕ್ರೀಡಾಂಗಣದಲ್ಲಿ ನಡೆಯಲಿದೆ. ಸೆಪ್ಟೆಂಬರ್, 21 ರಿಂದ ಅಕ್ಟೋಬರ್, 03 ರವರೆಗೆ ಬ್ಯೂಟೀಷಿಯನ್ ತರಬೇತಿ ಶಿಬಿರ(13 ದಿನಗಳು) ನಡೆಯಲಿದ್ದು, ಎಸ್‍ಎಸ್‍ಎಲ್‍ಸಿ(ಪಾಸ್/ಫೇಲ್) ಮಹಿಳೆಯರಿಗೆ ಮಾತ್ರ. ಕನಿಷ್ಠ 18 ವರ್ಷದಿಂದ 40 ವರ್ಷದೊಳಗಿರಬೇಕು. ತರಬೇತಿಯು ಬೆಂಗಳೂರಿನ ಕೋರಮಂಗಲ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯಲಿದೆ. ಅಕ್ಟೋಬರ್, 04 ರಿಂದ 09 ರವರೆಗೆ ಚಾಟ್ಸ್ ತಯಾರಿಕೆ ತರಬೇತಿ ಶಿಬಿರ ನಡೆಯಲಿದೆ. ಎಸ್‍ಎಸ್‍ಎಲ್‍ಸಿ(ಪಾಸ್/ಫೇಲ್) ಕನಿಷ್ಠ 18 ರಿಂದ 40 ವರ್ಷದೊಳಗಿರಬೇಕು. ತರಬೇತಿಯು ಬೆಂಗಳೂರಿನ ಕೋರಮಂಗಲ…

Read More

ಮಡಿಕೇರಿ ಸೆ.9 NEWS DESK  :  ಪ್ರಸಕ್ತ (2024-25) ಸಾಲಿಗೆ ಡಾ||ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆ, ಕ್ಯಾತೆ ಗ್ರಾಮ, ಕೊಡ್ಲಿಪೇಟೆ, ಸೋಮವಾರಪೇಟೆ ತಾಲ್ಲೂಕು, 2024-25 ನೇ ಸಾಲಿಗೆ 6ನೇ ತರಗತಿಯಿಂದ 10ನೇ ತರಗತಿ ವರೆಗೆ ಆಂಗ್ಲ ಭಾಷಾ ಶಿಕ್ಷಕರ ಸೇವೆಯನ್ನು ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. (ವಸತಿ ಹಾಗೂ ಊಟದ ಸೌಲಭ್ಯ ಒದಗಿಸಲಾಗುತ್ತದೆ). ಡಾ||ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆ, ಕ್ಯಾತೆ ಗ್ರಾಮ, ಕೊಡ್ಲಿಪೇಟೆ, ಸೋಮವಾರಪೇಟೆ ತಾಲ್ಲೂಕು ಶಾಲೆ ಶಾಲಾ ವಿಭಾಗ ಇಲ್ಲಿಗೆ ಆಂಗ್ಲ ಭಾಷೆ ಶಿಕ್ಷಕರು(01 ಹುದ್ದೆ) ಬಿಎ ಮತ್ತು ಬಿ.ಎಡ್ (ಇಂಗ್ಲೀಷ್) ವಿದ್ಯಾರ್ಹತೆ ಹೊಂದಿರಬೇಕು. ಹೆಚ್ಚಿನ ಮಾಹಿತಿಗೆ ಜಿಲ್ಲಾ ಕಚೇರಿ, ಅಲ್ಪಸಂಖ್ಯಾತರ ಕಲ್ಯಾಣ ಮೌಲಾನಾ ಆಜಾದ್ ಭವನ, ಎಫ್.ಎಂ.ಸಿ. ಕಾಲೇಜು ಹತ್ತಿರ, ಮಡಿಕೇರಿ, ಕಚೇರಿ ದೂರವಾಣಿ ಸಂಖ್ಯೆ 08272 225528, 9686138688 ಹಾಗೂ ಪ್ರಾಂಶುಪಾಲರು, ಡಾ. ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆ, ಖ್ಯಾತೆ ಗ್ರಾಮ,ಕೊಡ್ಲಿಪೇಟೆ, ಸೋಮವಾರಪೇಟೆ ತಾಲ್ಲೂಕು ದೂರವಾಣಿ ಸಂಖ್ಯೆ: 7676473767 ನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ…

Read More

ಕುಶಾಲನಗರ NEWS DESK  ಸೆ.9 : ಕೊಡಗು ವಿಶ್ವವಿದ್ಯಾಲಯದ ಸಂಯೋಜಿತ ಮಹಾವಿದ್ಯಾಲಯಗಳಾದ ಸರ್ವೋದಯ  ಬಿಎಡ್ ಕಾಲೇಜು ಮತ್ತು ಸಾಯಿ ಶಂಕರ ಬಿಎಡ್ ಕಾಲೇಜುಗಳಲ್ಲಿ 2024-25ನೇ ಶೈಕ್ಷಣಿಕ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿರುವ ಬಿಎಡ್ ಪ್ರಶಿಕ್ಷಣಾರ್ಥಿಗಳ ಪ್ರಥಮ ಸೆಮಿಸ್ಟರ್ ಫಲಿತಾಂಶವನ್ನು ದಿನಾಂಕ:09.09.2024ರ ಸೋಮವಾರದಂದು  ಪ್ರಕಟಿಸಲಾಗಿದೆ. ಕೊಡಗು ವಿಶ್ವವಿದ್ಯಾಲಯವು ಸ್ನಾತಕ ಪದವಿಗಳ ಫಲಿತಾಂಶವನ್ನು ಅತ್ಯಂತ ಕಡಿಮೆ ಅವಧಿಯಲ್ಲಿ ಪ್ರಕಟಿಸಿದಂತೆಯೇ ಬಿಎಡ್ ಪ್ರಶಿಕ್ಷಣಾರ್ಥಿಗಳ ಫಲಿತಾಂಶವನ್ನು ಯುಜಿಸಿ ನಿಯಮಾನುಸಾರ ಕೂಡ ಶೀಘ್ರವಾಗಿ ಪ್ರಕಟಿಸುವ ಮೂಲಕ ಪರೀಕ್ಷಾ ಮತ್ತು ಮೌಲ್ಯಮಾಪನ ಕಾರ್ಯವನ್ನು ಯಶಸ್ವಿಯಾಗಿ ನಿರ್ವಹಿಸಿದೆ‌. ಕೊಡಗು ವಿಶ್ವವಿದ್ಯಾಲಯದ ಕುಲಪತಿಗಳಾಗಿರುವ ಪ್ರೊ. ಅಶೋಕ ಸಂಗಪ್ಪ ಆಲೂರರವರು ಕೊಡಗು ವಿಶ್ವವಿದ್ಯಾಲಯದ ಚೊಚ್ಚಲ ಪ್ರಶಿಕ್ಷಣಾರ್ಥಿಗಳ ಫಲಿತಾಂಶವನ್ನು ಪ್ರಕಟಿಸಿದರು. ಇದೇ ಸಂದರ್ಭದಲ್ಲಿ ಕೊಡಗು ವಿಶ್ವವಿದ್ಯಾಲಯದ ಕುಲಸಚಿವರು (ಮೌಲ್ಯಮಾಪನ) ಆದ ಪ್ರೊ. ಸುರೇಶ್ ಎಂ ಅವರು, ಕೊಡಗು ವಿಶ್ವವಿದ್ಯಾಲಯದ ಸ್ನಾತಕ ಮತ್ತು ಸ್ನಾತಕೋತ್ತರ ಪದವಿ ಪರೀಕ್ಷೆಗಳ ಸಸಂಯೋಜಕರಾದ ಪ್ರೊ. ರವಿಶಂಕರ್ ಅವರು, ಯಯುಸಿಎಂಎಸ್ ನೋಡಲ್ ಅಧಿಕಾರಿ ಗಗನ್ ಹೆಚ್.ಎಸ್. ಅವರು ಉಪಸ್ಥಿತರಿದ್ದರು.

Read More

ಮಡಿಕೇರಿ NEWS DESK ಸೆ.9 : ವಲಸೆ ಕಾರ್ಮಿಕರಿಂದ ಇತ್ತೀಚಿನ ದಿನಗಳಲ್ಲಿ ನಡೆಯುತ್ತಿರುವ ಕಳ್ಳತನಗಳು ಮತ್ತು ಇತರ ಕಾನೂನುಬಾಹಿರ ಚಟುವಟಿಕೆಗಳನ್ನು ಗಮನದಲ್ಲಿಟ್ಟುಕೊಂಡು, ಕೊಡಗು ಜಿಲ್ಲಾ ಪೊಲೀಸ್ ಇಲಾಖೆ ಅಗತ್ಯ ಕ್ರಮಗಳನ್ನು ಕೈಗೊಂಡಿದೆ. ತೋಟದಲ್ಲಿ ಕೆಲಸ ಮಾಡುವ ವಲಸೆ ಕಾರ್ಮಿಕರ ವಿವರಗಳನ್ನು ಇಲಾಖೆಗೆ ನೀಡಲು ವಿಫಲವಾದರೆ ಮುಂದೆ ತಮ್ಮ ಕಾರ್ಮಿಕರಿಂದ ನಡೆಯಬಹುದಾದ ಯಾವುದೇ ಕಾನೂನುಬಾಹಿರ ಚಟುವಟಿಕೆಗಳಿಗೆ ಮಾಲೀಕರನ್ನೇ ಹೊಣೆಗಾರರನ್ನಾಗಿ ಮಾಡುವುದಾಗಿ ಇಲಾಖೆ ಪತ್ರಿಕಾ ಪ್ರಕಟಣೆ ಮೂಲಕ ಎಚ್ಚರಿಕೆ ನೀಡಿದೆ. ಆದ್ದರಿಂದ ಕೊಡಗಿನ  ಬೆಳೆಗಾರರು ತಮ್ಮಲ್ಲಿ ಕೆಲಸ ಮಾಡುತ್ತಿರುವ ವಲಸೆ ಕಾರ್ಮಿಕರ ವಿವರಗಳನ್ನು ತಮ್ಮ  ಹತ್ತಿರದ ಪೊಲೀಸ್ ಠಾಣೆಗೆ ಸಲ್ಲಿಸಿ ಆ ಮೂಲಕ ಜಿಲ್ಲೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವಲ್ಲಿ ಪೋಲಿಸ್  ಇಲಾಖೆಯೊಂದಿಗೆ ಸಹಕರಿಸಲು ವಿನಂತಿಸುತ್ತಿದೆ ಎಂದು ಕೊಡಗು ಪ್ಯಾಂಟರ್ಸ್ ಅಸೋಸಿಯೇಷನ್ ತಿಳಿಸಿದೆ. ನಿಗದಿತ ನಮೂನೆಯಲ್ಲಿ ಪೊಲೀಸ್  ಇಲಾಖೆಗೆ ಸಲ್ಲಿಸಬೇಕಾದ ವಿವರಗಳೆಂದರೆ, ವಲಸೆ ಕಾರ್ಮಿಕರ ಹೆಸರು ಮತ್ತು ವಿಳಾಸ, ಅವರ ವಿಳಾಸದ ಹತ್ತಿರದ ಪೊಲೀಸ್ ಠಾಣೆ, ಅವರ ಕೆಲಸದ ವಿವರಗಳು, ಕುಟುಂಬದ ಸದಸ್ಯರ ವಿವರಗಳು, ಪ್ರಸ್ತುತ…

Read More

ಸೋಮವಾರಪೇಟೆ NEWS DESK ಸೆ.9 : ರಾಷ್ಟ್ರದ ಸರ್ವೋತೋಮುಖ ಅಭಿವೃದ್ಧಿಯಲ್ಲಿ ಪತ್ರಿಕಾ ರಂಗದ ಕೊಡುಗೆ ಅಪಾರವಾಗಿದೆ ಎಂದು ಮಡಿಕೇರಿ ಶಾಸಕ ಡಾ.ಮಂತರ್‌ಗೌಡ ಅಭಿಪ್ರಾಯಿಸಿದರು. ಪತ್ರಿಕಾ ಭವನದಲ್ಲಿ ಸೋಮವಾರ ಆಯೋಜಿಸಿದ್ದ ಕೊಡಗು ಪತ್ರಕರ್ತರ ಸಂಘದ ಸೋಮವಾರಪೇಟೆ ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಪತ್ರಿಕಾಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವ ಕಷ್ಟದಲ್ಲಿರುವ ಪತ್ರಕರ್ತರನ್ನು ಕಾಪಾಡಿಕೊಳ್ಳಬೇಕಾದ ಕರ್ತವ್ಯ ಶಾಸಕಾಂಗದಲ್ಲಿ ಕೆಲಸ ಮಾಡುತ್ತಿರುವ ನಮ್ಮಂತವರ ಕರ್ತವ್ಯ ಎಂದು ಹೇಳಿದರು. ಪತ್ರಿಕೆ ಎಂದರೆ ಕೇವಲ ಸುದ್ದಿ ಸಮಾಚಾರಗಳನ್ನು ನೀಡುವ ಮಧ್ಯಮವಲ್ಲ. ತನ್ನದೆ ಆದ ಕರ್ತವ್ಯವನ್ನು ನಿಭಾಯಿಸುತ್ತಿದೆ. ಸಮಾಜದಲ್ಲಿರುವ ಅಂಕುಡೊಂಕನ್ನು ತಿದ್ದುವ ಕೆಲಸವನ್ನು ಮಾಡುತ್ತಿದೆ. ರಾಜಕಾರಣಿಗಳು ತಪ್ಪು ಮಾಡಿದಾಗ ಪತ್ರಿಕೆಗಳಲ್ಲಿ ಬರೆದು, ತಪ್ಪು ಹೆಜ್ಜೆಗಳನ್ನು ಇಡದಂತೆ ಎಚ್ಚರಿಸುವ ಕೆಲಸವನ್ನು ಮಾಡುತ್ತಿರುವುದು ನಮ್ಮ ಕಣ್ಣು ಮುಂದಿದೆ. ಪತ್ರಿಕೆ, ಮಾಧ್ಯಮಗಳ ಸಲಹೆಗಳನ್ನು ಜನಪ್ರತಿನಿಧಿಗಳು ಪಡೆದುಕೊಂಡರೆ ಉತ್ತನ ಜನಪರ ಕೆಲಸಗಳನ್ನು ಮಾಡಬಹುದು ಎಂದು ಹೇಳಿದರು. ಗ್ರಾಮೀಣ ಪತ್ರಕರ್ತರ ಬೇಡಿಕೆಗಳನ್ನು ಈಡೇರಿಸುವುದು ನಮ್ಮ ಕರ್ತವ್ಯವಾಗಿದೆ. ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್ ಕೊಡಿಸಲು ಸರ್ಕಾರದದೊಂದಿಗೆ…

Read More

ಮಡಿಕೇರಿ ಸೆ.9 NEWS DESK : ನಗರದ ಹೊಸಬಡಾವಣೆ ಅಂಗನವಾಡಿಯಲ್ಲಿ ಪ್ರಧಾನಮಂತ್ರಿ ಮಾತೃವಂದನ ವಿಶೇಷ ನೋಂದಣಿ ಅಭಿಯಾನ ಕಾರ್ಯಕ್ರಮ ಹಾಗೂ ಪೋಷಣ್ ಅಭಿಯಾನ ಯೋಜನೆಯಡಿ ಪೂರಕ ಆಹಾರದ ಮಹತ್ವದ ಬಗ್ಗೆ ಕಾರ್ಯಕ್ರಮ ನೆರವೇರಿತು. ಸಹಾಯಕ ಶಿಶು ಅಭಿವೃದ್ಧಿ ಪ್ರಭಾರ ಮೇಲ್ವಿಚಾರಕ ಯೋಜನಾಧಿಕಾರಿ ಮೇಪಾಡಂಡ ಸವಿತಾ ಕೀರ್ತನ್ ಮಾತನಾಡಿ, ಮಾತೃವಂದನಾ ಯೋಜನೆ ಅಡಿ ಮೊದಲನೇ ಮಗುವಿಗೆ ಎರಡು ಕಂತುಗಳಲ್ಲಿ 5 ಸಾವಿರ ಹಣವನ್ನು ಹಾಗೂ ಎರಡನೇ ಹೆಣ್ಣು ಮಗುವಿಗೆ ಒಂದೇ ಕಂತಿ ನಲ್ಲಿ ಆರು ಸಾವಿರ ಹಣವನ್ನು ಪಡೆಯಬಹುದಾಗಿದೆ ಎಂದರು. ತಾಯಿಯ ಆರೋಗ್ಯ ವರ್ಧನೆ ಹಾಗೂ ಪೂರಕ ಆಹಾರಕ್ಕಾಗಿ, ಆರೋಗ್ಯವಂತ ಮಗುವಿನ ಜನನಕ್ಕಾಗಿ ಸರ್ಕಾರದ ವತಿಯಿಂದ ನೀಡುವಂತಹ ಪ್ರೋತ್ಸಾಹ ಧನವಾಗಿರುತ್ತದೆ. ಈ ಮೊತ್ತವನ್ನು ನೇರ ನಗದು ವರ್ಗಾವಣೆಯ ಮೂಲಕ ಫಲಾನುಭವಿಯ ಆಧಾರ್ ನೋಂದಣಿಯಾದ ಬ್ಯಾಂಕ್ ಖಾತೆಗೆ ವರ್ಗಾವಣೆಯಾಗುವುದು ಎಂದು ಸವಿತಾ ತಿಳಿಸಿದರು. ಈ ಸೌಲಭ್ಯವನ್ನು ಪಡೆಯಲು ಸರ್ಕಾರಿ ನೌಕರರಲ್ಲದ ಗರ್ಭಿಣಿ ಮಹಿಳೆಯು ಅಂಗನವಾಡಿ ಕಾರ್ಯಕರ್ತೆಯನ್ನು 180 ದಿನಗಳೊಳಗೆ ಸಂಪರ್ಕಿಸಲು ಹಾಗೂ ಎರಡನೇ ಹೆಣ್ಣು…

Read More

ಮಡಿಕೇರಿ ಸೆ.9 NEWS DESK : ಗೃಹರಕ್ಷಕ ದಳದ ಮಹಿಳಾ ಸಿಬ್ಬಂದಿಗಳಿಗಾಗಿ ಬೆಂಗಳೂರಿನಲ್ಲಿ ಆಯೋಜಿಸಲಾಗಿದ್ದ ವಿಶೇಷ ತರಬೇತಿ ಶಿಬಿರದಲ್ಲಿ ಮಡಿಕೇರಿಯ ಗೃಹ ರಕ್ಷಕ ದಳದ ಸಿಬ್ಬಂದಿ ಲವಿ ಅವರು ಬೆಳ್ಳಿ ಪದಕ ಪಡೆದಿದ್ದಾರೆ. ಪ್ರಸ್ತುತ ಇವರು ಮಡಿಕೇರಿ ನಗರ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಲವಿ ಅವರ ಪ್ರಾಮಾಣಿಕ ಸೇವೆಯನ್ನು ಪರಿಗಣಿಸಿ ನಗರ ಸಂಚಾರಿ ಠಾಣೆ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭ ಸಂಚಾರಿ ಠಾಣಾಧಿಕಾರಿ ಶ್ರೀಧರ್, ತಮ್ಮಯ್ಯ, ಎಎಸ್‍ಐ ನಂದ ಐ.ಪಿ ಹಾಗೂ ಸಂಚಾರಿ ಠಾಣೆ ಸಿಬ್ಬಂದಿಗಳು ಹಾಜರಿದ್ದರು.

Read More

ಮಡಿಕೇರಿ ಸೆ.9 NEWS DESK : ಸ್ಥಳೀಯ ಕೊಡವತಿಯರು ನಡೆಸುವ ಪರಿಸರ ಸ್ನೇಹಿ, ಜನಪದ ಸ್ನೇಹಿ ಹೋಂಸ್ಟೇ ಗಳನ್ನು ಧಮನಿಸಲು ಮತ್ತು ಕೊಡವ ರೈತರನ್ನು ಹಣಿಯಲು ಸಂಚು ರೂಪಿಸಲಾಗುತ್ತಿದೆ. ಹೊರಗಿನ ಬಂಡವಾಳಶಾಹಿಗಳ ಪ್ರಕೃತಿ ವಿನಾಶಕ ರೆಸಾರ್ಟ್‍ಗಳಿಗೆ, ದೊಡ್ಡ ದೊಡ್ಡ ಕಂಪೆನಿಗಳ ಯೋಜನೆಗಳಿಗೆ ಅನುಮತಿ ನೀಡುವ ಮೂಲಕ ಸರ್ಕಾರ ಕುಮ್ಮಕ್ಕು ನೀಡುತ್ತಿದೆ ಎಂದು ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ಅಧ್ಯಕ್ಷ ಎನ್.ಯು.ನಾಚಪ್ಪ ಆರೋಪಿಸಿದ್ದಾರೆ. ಸಿದ್ದಾಪುರದ ಕಾಫಿ ತೋಟಗಳು ಸೇರಿದಂತೆ ಕೊಡಗು ಜಿಲ್ಲೆಯ ವಿವಿಧೆಡೆ ನಡೆಯುತ್ತಿರುವ ಬೃಹತ್ ಭೂಪರಿವರ್ತನೆ ಮತ್ತು ಭೂವಿಲೇವಾರಿಯನ್ನು ಸ್ಥಗಿತಗೊಳಿಸಬೇಕೆಂದು ಒತ್ತಾಯಿಸಿ ಸಿಎನ್‍ಸಿ ವತಿಯಿಂದ ನಾಪೋಕ್ಲುವಿನಲ್ಲ್ಲಿ ನಡೆದ ಜನಜಾಗೃತಿ ಮಾನವ ಸರಪಳಿ ಕಾರ್ಯಕ್ರಮದ ನೇತೃತ್ವ ವಹಿಸಿ ಅವರು ಮಾತನಾಡಿದರು. ಆದಿಮಸಂಜಾತ ಕೊಡವ ಬುಡಕಟ್ಟು ಜನರು ಇಲ್ಲಿಯವರೆಗೆ ಹಸಿರಿನ ಕೊಡವ ಭೂಮಿಯನ್ನು ಉಳಿಸಿ ಬೆಳೆಸಿಕೊಂಡು ಬಂದಿದ್ದಾರೆ. ಆದರೆ ಇಂದು ಭೂಮಾಫಿಯಾ, ರೆಸಾರ್ಟ್ ಮಾಫಿಯಾ, ವಿಲ್ಲಾ, ಟೌನ್ ಶಿಪ್, ಬೃಹತ್ ಭೂಪರಿವರ್ತನೆ, ಭೂವಿಲೇವಾರಿ ಮಾಫಿಯಾಗಳು ಹಾಗೂ ಕಪ್ಪುಹಣದ ಬಂಡವಾಳಶಾಹಿಗಳು ಕೊಡವಲ್ಯಾಂಡ್ ನ್ನು ನಾಶ ಮಾಡುತ್ತಿದ್ದಾರೆ…

Read More