ಲೇಖಕ: admin

ಮಡಿಕೇರಿ ಸೆ.9 NEWS DESK : ಹಾಲು ಉತ್ಪಾದಕರಿಂದ ಸಂಗ್ರಹಿಸಿದ ಹಾಲನ್ನು ಹಾಲು ಡೈರಿಯಿಂದ ಮದರ್ ಡೈರಿಗೆ ಸಾಗಿಸುವ ಕಾಲಾವಧಿ ಹೆಚ್ಚಾಗಿದ್ದು,  ಇದರಿಂದ ಹಾಲು ಕೆಡುವ ಸಾಧ್ಯತೆಗಳು ಹೆಚ್ಚು ಆದ್ದರಿಂದ ಸಂಘದ ವತಿಯಿಂದ ಜಾಗದ ವ್ಯವಸ್ಥೆ ಮಾಡಿದರೆ, ಮಿನಿ ಹಾಲು ಶೀತಲೀಕರಣಕ್ಕೆ ವೆಚ್ಚ ಭರಿಸುವುದಾಗಿ ಹಾಲು ಒಕ್ಕೂಟದ ಕೂಡಿಗೆ ವೃತ್ತದ ವಿಸ್ತರಣಾಧಿಕಾರಿ ಬಿ.ವಿ.ವೀಣಾ ಹೇಳಿದರು. ಗುಡ್ಡೆಹೊಸೂರು ಹಾಲು ಉತ್ಪಾದಕರ ಸಹಕಾರ ಸಂಘದ  2023 -24ನೇ ಸಾಲಿನ ವಾರ್ಷಿಕ ಮಹಾಸಭೆಯಲ್ಲಿ ಭಾಗವಹಿಸಿ ಮಾತನಾಡಿದರು. ಸಭೆಯ ಅಧ್ಯಕ್ಷತೆ ವಹಿಸಿದ್ದ ಹಾಲು ಉತ್ಪಾದಕರ ಸಂಘದ ಅಧ್ಯಕ್ಷರಾದ ಬಿ.ಎಂ.ಸಾಗರ್, ಸಂಘದ ಸದಸ್ಯರ ಅಹವಾಲು ಆಲಿಸಿ ಸೂಕ್ತ ಪರಿಹಾರ ಸೂಚಿಸಿದರು. ಸಭೆಯಲ್ಲಿ  ಹಾಸನ ಹಾಲು ಒಕ್ಕೂಟದ ನಿರ್ದೇಶಕ ಹೇಮಂತ್ ಕುಮಾರ್, ಗುಡ್ಡೆಹೊಸೂರು ಹಾಲು ಒಕ್ಕೂಟದ ಉಪಾಧ್ಯಕ್ಷ ಎನ್.ಪಿ.ಸುಲೋಚನ, ನಿರ್ದೇಶಕರುಗಳಾದ  ಯತೀಶ್ ಮೋಹನ ಕುಮಾ‌ರ್, ಪಳಂಗಪ್ಪ, ಗುರುಪ್ರಸಾದ್, ಕಾಶಿ, ಶುಭಶೇಖರ, ಅಭಿಷೇಕ್, ಕಮಲ, ಕಮಲಾಕ್ಷಿ, ಬಸಮ್ಮ ಮತ್ತಿತರರು ಉಪಸ್ಥಿತರಿದ್ದರು. ಕಾರ್ಯದರ್ಶಿ ನವೀನ್ ನಿರೂಪಿಸಿದರು. ನಿರ್ದೇಶಕ  ಧನ್ ಪಾಲ್ ವಂದಿಸಿದರು.  ಸನ್ಮಾನ…

Read More

ಮಡಿಕೇರಿ ಸೆ.9 NEWS DESK : ರಾಜ್ಯವು ‘ಕರ್ನಾಟಕ’ವೆಂದು ನಾಮಕರಣಗೊಂಡು 5 ದಶಕಗಳು ಪೂರೈಸಿದ ಹಿನ್ನೆಲೆ ರಾಜ್ಯ ಸರ್ಕಾರ ಚಾಲನೆ ನೀಡಿರುವ ‘ಕರ್ನಾಟಕ ಸುವರ್ಣ ಸಂಭ್ರಮ ರಥ’ಕ್ಕೆ ಮಡಿಕೇರಿಯಲ್ಲಿ ಜಿಲ್ಲಾಡಳಿತ, ಕಸಾಪ ಹಾಗೂ ವಿವಿಧ ಸಂಘಟನೆಗಳಿಂದ ಭವ್ಯ ಸ್ವಾಗತ ಕೋರಲಾಯಿತು. ನಗರದ ಜನರಲ್ ತಿಮ್ಮಯ್ಯ ವೃತ್ತದಿಂದ ಮಂಗೇರಿರ ಮುತ್ತಣ್ಣ ವೃತ್ತದ ಮೂಲಕ ಸ್ಕ್ವಾಡರ್ನ್ ಲೀಡರ್ ಅಜ್ಜಮಾಡ ದೇವಯ್ಯ ವೃತ್ತಕ್ಕೆ ಆಗಿಮಿಸಿದ ರಥಕ್ಕೆ ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಪುಷ್ಪರ್ಚನೆ ಮಾಡಿ ಸ್ವಾಗತಿಸಿದರು. ನಂತರ ಮಾತನಾಡಿದ ಅವರು, ಕನ್ನಡ ನಾಡು ನುಡಿ, ಕನ್ನಡ ಭಾಷೆಗೆ ಇರುವ ಇತಿಹಾಸವನ್ನು ನೆನಪಿಸಿಕೊಳ್ಳಲು ಇದೊಂದು ಸುವರ್ಣ ಅವಕಾಶವಾಗಿದೆ ಎಂದು ಹೇಳಿದರು. ಕನ್ನಡ ನಾಡು-ನುಡಿ ಮತ್ತು ಸಂಸ್ಕೃತಿ ಬೆಳವಣಿಗೆಗೆ ಪ್ರತಿಯೊಬ್ಬರೂ ಶ್ರಮಿಸಬೇಕು. ‘ಕರ್ನಾಟಕ ರಾಜ್ಯವೆಂದು ನಾಮಕರಣವಾಗಿದೆ 50 ವರ್ಷ ಪೂರ್ಣಗೊಂಡ ಹಿನ್ನೆಲೆ ಸುವರ್ಣ ಸಂಭ್ರಮ ರಥಯಾತ್ರೆಯನ್ನು ರಾಜ್ಯದ್ಯಾಂತ ಹಮ್ಮಿಕೊಳ್ಳಲಾಗಿದೆ ಎಂದರು. ಸುವರ್ಣ ಸಂಭ್ರಮ 50 ರ ರಥ ಯಾತ್ರೆಯು ಗೋಣಿಕೊಪ್ಪ-ಪೊನ್ನಂಪೇಟೆ-ವಿರಾಜಪೇಟೆ ಮೂಲಕ ಮಡಿಕೇರಿಗೆ ಆಗಮಿಸಿದೆ. ಸೆಪೆಂಬರ್, 10 ರಂದು ಸೋಮವಾರಪೇಟೆ…

Read More

ನಾಪೋಕ್ಲು ಸೆ.9 NEWS DESK : ನೇಪಾಳದಲ್ಲಿ ನಡೆದ ಅಂತರಾಷ್ಟ್ರೀಯ ಮಟ್ಟದ ಥ್ರೋಬಾಲ್ ಮತ್ತು ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಬೇತು ಗ್ರಾಮದ ನಿಶಾ ಭಾವನ ಪಾಲ್ಗೊಂಡು ಚಿನ್ನದ ಪದಕವನ್ನು ತಮ್ಮದಾಗಿಸಿಕೊಂಡಿದ್ದಾರೆ. ಇವಳು ಬೇತು ಗ್ರಾಮದ ಆಲಚಂಡ ಅನಿಲ್ ತಮ್ಮಯ್ಯ ಮತ್ತು ಮೀರಾ ದಂಪತಿಗಳ ಪುತ್ರಿ. ವರದಿ : ದುಗ್ಗಳ ಸದಾನಂದ.

Read More

ನಾಪೋಕ್ಲು ಸೆ.9 NEWS DESK : ಪ್ರವಾದಿ ಮಹಮ್ಮದ್ ಪೈಗಂಬರ್ ಅವರ ಜನ್ಮದಿನಾಚರಣೆಯ ಅಂಗವಾಗಿ ಕರ್ನಾಟಕ ಮುಸ್ಲಿಂ ಜಮಾಯತ್, ಎಸ್.ಜೆ.ಎಮ್, ಎಸ್.ವೈ.ಎಸ್, ಎಸ್.ಎಸ್.ಎಫ್ ಸಂಯುಕ್ತ ಆಶ್ರಯದಲ್ಲಿ ಬೃಹತ್ ಮಿಲಾದ್ ಸಂದೇಶ ಜಾಥಾ ನಾಪೋಕ್ಲು ಪಟ್ಟಣದಲ್ಲಿ ನಡೆಯಿತು. ಪಟ್ಟಣದಸಂತೆ ಮೈದಾನದಲ್ಲಿ ಆಯೋಜಿಸಿದ ಸಭೆಯಲ್ಲಿ ಕೊಡಗು ಜಿಲ್ಲಾ ಎಸ್.ವೈ.ಎಸ್ ಮಾಧ್ಯಮ ಕಾರ್ಯದರ್ಶಿ ಶಾಫಿ ಸಹದಿ ಭಾಗ ವಹಿಸಿ ಮಾತನಾಡಿ, ನಾವು ಎಲ್ಲದಕ್ಕಿಂತ ಹೆಚ್ಚಾಗಿ ಪ್ರೀತಿಸುವುದು ಪ್ರವಾದಿಯನ್ನು. ನಾವು ಎಲ್ಲಾ ಧರ್ಮದವರೊಂದಿಗೆ ಸೌಹಾರ್ದತೆಯಿಂದ ಬಾಳಬೇಕು ಎಂಬುದನ್ನು ಅವರು ಪ್ರತಿಪಾದಿಸಿದ್ದಾರೆ. ಆದುದರಿಂದ ಪರಸ್ಪರ ಸೌಹಾರ್ದತೆ ಅಗತ್ಯ, ಮಹಮದ್ ಪೈಗಂಬರರು ಸಮಾಜಕ್ಕೆ ಉತ್ತಮ ಸಂದೇಶ ನೀಡಿದ್ದಾರೆ. ಆದರೆ ಇತ್ತೀಚಿನ ದಿನಗಳಲ್ಲಿ ಇಸ್ಲಾಂ ಬಗ್ಗೆ ತಪ್ಪು ಸಂದೇಶಗಳನ್ನು ರವಾನಿಸುತ್ತಿರುವುದು ಸರಿಯಲ್ಲ ಎಂದರು. ಕಾರ್ಯಕ್ರಮದಲ್ಲಿ ಎಸ್.ವೈ.ಎಸ್ ರಾಜ್ಯಾಧ್ಯಕ್ಷ ಅಫಿಲ್ ಸಹದಿ ಕೊಳಕೇರಿ, ಕರ್ನಾಟಕ ಮುಸ್ಲಿಂ ಜಮಾಯತ್ತಿನ ಪ್ರಧಾನ ಕಾರ್ಯದರ್ಶಿ ಮಹಮ್ಮದ್ ಹಾಜಿ ಕುಂಜಿಲ, ಕೊಡಗು ಜಿಲ್ಲಾ ಸಂಯುಕ್ತ ಜಮಾಯತ್ ಅಧ್ಯಕ್ಷ ಉಸೈನ್ ಸಖಾಫಿ ಎಮ್ಮೆಮಾಡು, ನಾಪೋಕ್ಲು ಮಸೀದಿಯ ಖತೀಬರದ ಅಬ್ದುಲ್ ಸಖಾಫಿ,…

Read More

ನಾಪೋಕ್ಲು ಸೆ.9 NEWS DESK : ನಾಪೋಕ್ಲುವಿನ ವಿವಿಧ ಗಣೇಶ ಸೇವಾ ಸಮಿತಿಗಳ ವತಿಯಿಂದ ಗೌರಿ-ಗಣೇಶೋತ್ಸವವನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ನಾಲ್ಕು ಗಣೇಶ ಸೇವಾ ಸಮಿತಿಗಳ ವತಿಯಿಂದ ಗೌರಿ ಗಣೇಶ ಮೂರ್ತಿಗಳನ್ನು ಅಲಂಕೃತ ವಾಹನಗಳಲ್ಲಿಸಿ ವಾದ್ಯದೊಂದಿಗೆ ಸಂತೆ ಮೈದಾನದಿಂದ ಪಟ್ಟಣದ ಮುಖ್ಯ ರಸ್ತೆಯಲ್ಲಿ ಮೆರವಣಿಗೆಯಲ್ಲಿ ಸಾಗಿಸಿ ವಿವಿಧ ದೇವಾಲಯಗಳಲ್ಲಿ ಪ್ರತಿಷ್ಠಾಪನೆ ಮಾಡಲಾಯಿತು. ಗಣೇಶೋತ್ಸವ ಸಮಿತಿಯ ಪ್ರಮುಖ ಕಲಿಯಂಡ ವಿಠಲ ಇಡುಗಾಯಿ ಹೊಡೆಯುವುದರ ಮೂಲಕ ಸಂತೆ ಮೈದಾನದಲ್ಲಿ ಗಣೇಶ ಮೂರ್ತಿಗಳ ಮೆರವಣಿಗೆಗೆ ಚಾಲನೆ ನೀಡಿ ಮಾತನಾಡಿ ದೇಶ ಹಾಗೂ ಧರ್ಮಕ್ಕೆ ಯಾವುದೇ ಧಕ್ಕೆ ಬಾರದಂತೆ ದೇಶದ ರಕ್ಷಣೆಗಾಗಿ ಎಲ್ಲರೂ ಒಗ್ಗಟ್ಟಿನಿಂದ ನಿಸ್ವಾರ್ಥ ಸೇವೆಯಿಂದ ಶ್ರಮಿಸುವಂತಾಗಬೇಕು. ಪಟ್ಟಣದಲ್ಲಿ 50 ವರ್ಷಗಳಿಂದ ಗಣೇಶ ಉತ್ಸವವನ್ನು ಸಂಭ್ರಮದಿಂದ ಆಚರಣೆ ಮಾಡಲಾಗುತ್ತಿದೆ. ಈ ವರ್ಷವೂ ಐದು ವಿವಿಧ ಭಾಗಗಳಲ್ಲಿ ಗೌರಿ ಗಣೇಶ ಸಮಿತಿಗಳಿಂದ ಮೂರ್ತಿಗಳನ್ನು ಪ್ರತಿಷ್ಠಾಪನೆಗೊಳಿಸಲಾಗಿದೆ. ಎಲ್ಲಾ ಗಣೇಶೋತ್ಸವ ಸಮಿತಿಗಳಿಂದ ಪ್ರತಿಷ್ಠಾಪನೆಗೊಂಡ ಗೌರಿ ಗಣೇಶ ಮೂರ್ತಿಗಳನ್ನು ಅಲಂಕೃತ ಮಂಟಪದಲ್ಲಿ ಇರಿಸಿ ವಿವಿಧ ಆಕರ್ಷಕ ಕಲಾ ತಂಡಗಳೊಂದಿಗೆ ಮೆರವಣಿಗೆ ತೆರಳಿ ಕಾವೇರಿ…

Read More

ನಾಪೋಕ್ಲು ಸೆ.9 NEWS DESK : ಚಾಲಕನ ನಿಯಂತ್ರಣ ತಪ್ಪಿದ ಜೀಪು ರಸ್ತೆಯಿಂದ ಕೆಳಗಡೆ ಉರುಳಿ ಬಿದ್ದ ಘಟನೆ ಮರಂದೋಡ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಚೋಯಮಾಡoಡ ಹರೀಶ್ ಮೊಣ್ಣಪ್ಪ ಎಂಬವರು ಮನೆ ಸಮೀಪದಲ್ಲಿ ಜೀಪು ಚಲಾಯಿಸುತ್ತಿದ್ದ ಸಂದರ್ಭ ನಿಯಂತ್ರಣ ತಪ್ಪಿ ರಸ್ತೆಯ ಕೆಳಗೆ ಉರುಳಿ ಬಿದ್ದಿದೆ. ಈ ಸಂದರ್ಭ ಜೀಪಿನಲ್ಲಿ ಹರೀಶ್ ಸಂಬಂಧಿಕರೂ ಇದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬಳಿಕ ಸ್ಥಳೀಯರ ಸಹಕಾರದೊಂದಿಗೆ ಜೀಪನ್ನು ಮೇಲೆಕೆತ್ತಲಾಯಿತು. ವರದಿ : ದುಗ್ಗಳ ಸದಾನಂದ. 

Read More

ನಾಪೋಕ್ಲು ಸೆ.9 NEWS DESK : ನಾಪೋಕ್ಲುವಿನ ಮೇರಿ ಮಾತೆಯ ದೇವಾಲಯದಲ್ಲಿ ಮೇರಿ ಮಾತೆಯ ಜನ್ಮದಿನವನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಹಬ್ಬದ ಸಲುವಾಗಿ ದೇವಾಲಯದ ಆವರಣದಲ್ಲಿ ಮೇರಿಮಾತೆಯ ಮೂರ್ತಿಯನ್ನು ಪ್ರತಿಷ್ಠಾಪಿಸಿ ನವ ದಿನದ ನೋವೆನ ಪ್ರಾರ್ಥನೆ ನೆರವೇರಿಸಿ ಹಾಡಿನೊಂದಿಗೆ ಸಮುದಾಯ ಬಾಂಧವರು ಪುಷ್ಪಾರ್ಚನೆ ಸಲ್ಲಿಸಿದರು. ಈ ಸಂದರ್ಭ ಧರ್ಮ ಗುರುಗಳಾದ ಜ್ಞಾನ್ ಪ್ರಕಾಶ್ ಮಾತನಾಡಿ, ನಮ್ಮ ಬದುಕನ್ನು ಪರಿಪೂರ್ಣತೆಯಲ್ಲಿ ರೂಪಿಸಿಕೊಳ್ಳಬೇಕು. ಕ್ರಿಸ್ತನ ಹಿಂಬಾಲಕರಾದ ನಮಗೆ ಒಂದು ಗುರಿ ಇರಬೇಕು. ಪ್ರಾರ್ಥನೆ ದಾನ, ಧರ್ಮ, ಬೇರೆಯವರ ಕಷ್ಟಗಳನ್ನು ಅರ್ಥ ಮಾಡಿಕೊಂಡು, ಸಂತರ ಪುಸ್ತಕಗಳನ್ನು ಓದಿ ಅವರ ಪ್ರೇರಣೆ ಪಡೆದು ಬದುಕಬೇಕು ಎಂದರು. ಈ ಸಂದರ್ಭ ಕ್ರೈಸ್ತ ಭಕ್ತಾದಿಗಳು , ಪಾಲನಾ ಸಮಿತಿಯ ಅಧ್ಯಕ್ಷರು, ಸದಸ್ಯರುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ವರದಿ : ದುಗ್ಗಳ ಸದಾನಂದ.

Read More

ವಿರಾಜಪೇಟೆ ಸೆ.9 NEWS DESK : ಆರ್ಜಿ ಗ್ರಾಮದ ಕಲ್ಲುಬಾಣೆಯ ದಾರುಲ್ ಇಸ್ಲಾಂ ಮದ್ರಸದ ಹಳೆಯ ಮತ್ತು ಶೈಕಣಿಕ ಸಾಲಿನ ವಿದ್ಯಾರ್ಥಿಗಳಿಂದ ಸ್ವಚ್ಛತಾ ಶ್ರಮದಾನ ನಡೆಯಿತು. ಪ್ರವಾದಿ ಮುಹಮ್ಮದ್ ಪೈಗಂಬರ್ ಅವರ 1499ನೇ ಹುಟ್ಟಿದ ದಿನದ ಈದ್ ಮಿಲಾದ್ ಅಂಗವಾಗಿ ವಿರಾಜಪೇಟೆ ಮುಖ್ಯ ರಸ್ತೆಯಿಂದ ಕಲ್ಲುಬಾಣೆಯ ಮಸೀದಿವರೆಗೆ ರಸ್ತೆಯಲ್ಲಿ ಬೆಳೆದು ನಿಂತ ಕಾಡು ಗಿಡಗಂಟಿಗಳನ್ನು ತೆಗೆದು ಪ್ಲಾಸ್ಟಿಕ್ ತ್ಯಾಜ್ಯಗಳನ್ನು ಹೆಕ್ಕಿ ಸ್ವಚ್ಛಗೊಳಿಸಿದರು. ಮಳೆಯಿಂದ ರಸ್ತೆಗಳಲ್ಲಿ ಉಂಟಾದ ಗುಂಡಿಗಳಿಗೆ ಕಲ್ಲು ಮಣ್ಣುಗಳನ್ನು ಹಾಕಿ ಮುಚ್ಚಿದರು. ಈ ಸಂದರ್ಭ ವಿದ್ಯಾರ್ಥಿಗಳಾದ ಶೀಯಾಜ್, ಅಜರುದ್ದಿನ್, ಯಾಯಿಯ, ರಷೀದ್, ಕುಟ್ಟಾಪಿ, ನಿಜಾಂ, ತಸ್ನಿಂ, ಆಲಿ, ಅಶ್ರಪ್, ಶಂಷಿರ್, ಶಮಿರ್, ಸೇರಿದಂತೆ ಅನೇಕ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

Read More

ಮಡಿಕೇರಿ ಸೆ.9 NEWS DESK : ಭಾಗಮಂಡಲ ಕೆವಿಜಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಸಂಸ್ಥೆಗೆ 2024-26 ನೇ ಶೈಕ್ಷಣಿಕ ಸಾಲಿಗೆ ದಾಖಲಾದ ನೂತನ ವಿದ್ಯಾರ್ಥಿಗಳಿಗೆ ಸ್ವಾಗತ ಕೋರುವ ಮತ್ತು ಪೋಷಕರ ಸಭೆ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲ ಕೆ.ವಿ.ಶ್ರೀಕಾಂತ್  ನೂತನ ತರಬೇತಿದಾರರಿಗೆ ಸಂಸ್ಥೆಯ ನೀತಿ ನಿಯಮಗಳ ಬಗ್ಗೆ ಮತ್ತು ಪೋಷಕರಿಗೆ ಅವರ ಜವಾಬ್ದಾರಿಯ ಬಗ್ಗೆ ಮಾರ್ಗದರ್ಶನ ನೀಡಿದರು. ಕಿರಿಯ ತರಬೇತಿ ಅಧಿಕಾರಿ ಪುನೀತ್ ಕುಮಾರ್ ಸಂಸ್ಥೆ ಮತ್ತು ತರಬೇತಿ ಬಗ್ಗೆ ಸಮಗ್ರ ಮಾಹಿತಿ ನೀಡಿದರು. ಕಿರಿಯ ತರಬೇತಿ ಅಧಿಕಾರಿ ಕೆ.ಸಿ.ಉದಯಕುಮಾರ್ ಸ್ವಾಗತಿಸಿದರು. ಕಿರಿಯ ತರಬೇತಿ ಅಧಿಕಾರಿ ಕೆ.ಜಿ.ಜಯಪ್ರಕಾಶ್ ಕಾರ್ಯಕ್ರಮ ನಿರೂಪಿಸಿದರು.

Read More

NEWS DESK :: ಕೊಡಗಿನಲ್ಲಿ ಹುಟ್ಟಿದವರಿಗೆ 3 ಗುಣಗಳು ರಕ್ತಗತವಾಗಿಯೇ ಬಂದಿರುತ್ತವೆ. ಇದರಲ್ಲಿ ಮೊದಲನೆಯದು ಸೈನ್ಯ, ಎರಡನೆಯದು ಹಾಕಿ ಹಾಗೂ ಮೂರನೆಯದು ಮದ್ಯಪಾನ. ಇದರಲ್ಲಿ ಮದ್ಯಪಾನವನ್ನು ದೂರವಿಟ್ಟು ಉಳಿದ ಎರಡರ ಮೇಲೆ ನಮ್ಮ ಗಮನವಿದ್ದರೆ ನಾವು ಅದನ್ನು ಸಾಧಿಸಬಹುದು ಎಂದು ನುಡಿಯುತ್ತಾರೆ ಅಯ್ಯುಡ ಗಣಪತಿಯವರು. ದಿವಂಗತ ಅಯ್ಯುಡ ಈರಪ್ಪ ಹಾಗೂ ಗೌರಮ್ಮ ದಂಪತಿಯರ ಪುತ್ರನಾಗಿ ಗಣಪತಿಯವರು ಬೆಟ್ಟಗೇರಿಯಲ್ಲಿ ಜನಿಸುತ್ತಾರೆ. ಇವರ ತಂದೆ ಈರಪ್ಪ ಕೊಡಗಿನ ಪ್ರಥಮ ಮಾಸ್ಟರ್ ಟೈಲರ್ ಎಂದೇ ಪ್ರಸಿದ್ಧರಾಗಿದ್ದರು. ಶಿಕ್ಷಣ ::  ಸೆಂಟ್ರಲ್ ಹೈ ಸ್ಕೂಲ್ ಮಡಿಕೇರಿಯಲ್ಲಿ ಶಿಕ್ಷಣ ಪಡೆದರು. ಓದುತ್ತಿರುವಾಗಲೇ ಕ್ರಿಕೆಟ್ ಹಾಗೂ ಅಥ್ಲೆಟಿಕ್ಸ್ ಚಾಂಪಿಯನ್ ಆಗಿದ್ದರು. 400 ಮೀಟರ್ ಓಟದಲ್ಲಿ ಚಾಂಪಿಯನ್ ಆಗಿದ್ದರು. ಇವರು ಕೊಡಗಿನ ಮಿಲ್ಕಾ ಸಿಂಗ್ ಎಂದೆ ಪ್ರಸಿದ್ಧಿ ಪಡೆದಿದ್ದರು ಅಂದಿನ ಭಾರತದ ಖ್ಯಾತ ತರಬೇತುದಾರರಾದ ಡಾ.ಕೋದಂಡ ಮುತ್ತಯ್ಯ ಅವರ ಮಾರ್ಗದರ್ಶನದಲ್ಲಿ ತರಬೇತಿ ಪಡೆದು ಶಹಭಾಶ್ ಎನಿಸಿಕೊಂಡರು. ಎನ್‌.ಸಿ.ಸಿ ಯ ಜೂನಿಯರ್ ಡಿವಿಜನ್ ಕೆಡೆಟ್ ಆಗಿ ದಿವಂಗತ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಅವರಿಂದ…

Read More