ಮಡಿಕೇರಿ ಆ.24 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದೊಂದಿಗೆ ಶ್ರೀಕೃಷ್ಣ ಜನ್ಮಾಷ್ಠಮಿ 2024 ಆಗಸ್ಟ್, 26 ರಂದು ಬೆಳಗ್ಗೆ 10.30 ಗಂಟೆಗೆ ನಗರದ ಗಾಂಧಿ ಭವನದಲ್ಲಿ ನಡೆಯಲಿದೆ. ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು, ಶಾಸಕರಾದ ಡಾ.ಮಂತರ್ ಗೌಡ, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ಶಾಸಕರಾದ ಎ.ಎಸ್.ಪೊನ್ನಣ್ಣ, ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ಡಾ.ಧನಂಜಯ ಸರ್ಜಿ, ಕಂಚಿ ಕಾಮಾಕ್ಷಿಯಮ್ಮ ದೇವಾಲಯ ಸಮಿತಿಯ ಅಧ್ಯಕ್ಷರಾದ ಪವನ್ ಜಿ.ಬಿ, ಗೌರವಾಧ್ಯಕ್ಷರಾದ ಜಿ.ಜಿ.ಬಾಲಕೃಷ್ಣ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕುಮಾರ ಇತರರು ಪಾಲ್ಗೊಳ್ಳಲಿದ್ದಾರೆ. ಚಿ.ನಾ.ಸೋಮೇಶ್ ಉಪನ್ಯಾಸ ನೀಡಲಿದ್ದಾರೆ.
ಲೇಖಕ: admin
ಮಡಿಕೇರಿ ಆ.24 NEWS DESK : ಕೇಂದ್ರ ಬುಡಕಟ್ಟು ವ್ಯವಹಾರಗಳ ಮಂತ್ರಾಲಯ, ನವದೆಹಲಿ ಅವರು ಪ್ರಧಾನಮಂತ್ರಿ ಜನಜಾತಿಯ ಆದಿವಾಸಿ ನ್ಯಾಯ ಮಹಾ ಯೋಜನೆಯಡಿ(ಪಿಎಂ-ಜನ್ಮನ್) ಕಾರ್ಯಕ್ರಮಗಳನ್ನು ಪಿವಿಟಿಜಿ ಸಮುದಾಯವರಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಯೋಜನೆಗಳ ಪ್ರಯೋಜನ ಪಡೆಯಲು ದೇಶದಾದ್ಯಂತ ಪಿಎಂ-ಜನ್ಮನ್ ಪೇಸ್ 2 (PM-JANMAN phase II) ಕಾರ್ಯಕ್ರಮದಡಿ ಅರಿವು ಮೂಡಿಸುವ ಶಿಬಿರ/ಫಲಾನುಭವಿಗಳ ಸ್ಯಾಚುರೇಷನ್ ಕ್ಯಾಂಪ್ಗಳನ್ನು ಸೆಪ್ಟೆಂಬರ್, 10 ರವರೆಗೆ ವಿಸ್ತರಿಸಲಾಗಿದೆ. ಕೊಡಗು ಜಿಲ್ಲೆಯ ಬುಡಕಟ್ಟು ಸಮುದಾಯವಾದ ಜೇನುಕುರುಬ ಸಮುದಾಯದವರಿಗೆ ಪಿಎಂ-ಜನ್ಮನ್ ಪೇಸ್ 2 (PMJANMAN Phase-II) ರಲ್ಲಿ ಕೇಂದ್ರ ಹಾಗೂ ರಾಜ್ಯ ಸರಕಾರದ ಯೋಜನೆಗಳನ್ನು ತಲುಪಿಸುವ ನಿಟ್ಟಿನಲ್ಲಿ ಜಿಲ್ಲಾ ಮತ್ತು ತಾಲ್ಲೂಕು/ ಬ್ಲಾಕ್ ನೋಡೆಲ್ ಅಧಿಕಾರಿಗಳ ತಂಡ ರಚಿಸಲಾಗಿದೆ. ಆಗಸ್ಟ್, 23 ರಿಂದ ಸೆಪ್ಟೆಂಬರ್, 10 ರ ಅವಧಿಯಲ್ಲಿ ಜೇನುಕುರುಬ ಜನಾಂಗದವರಿಗೆ ಆಧಾರ್ ಕಾರ್ಡ್ ನೋಂದಣಿ, ಪಿ.ಎಂ ಜನ್ಧನ್ ಬ್ಯಾಂಕ್ ಖಾತೆ, ಆಯುಷ್ಮಾನ್ ಭಾರತ್ ಕಾರ್ಡ್, ಸಿಕೆಲ್ಸೆಲ್ ಅನೆಮಿಯಾ ಖಾಯಿಲೆ ಸ್ಕ್ರೀನಿಂಗ್ ಪರೀಕ್ಷೆ, ಜಾತಿ ಪ್ರಮಾಣ ಪತ್ರ, ಪಡಿತರ ಚೀಟಿ…
ಮಡಿಕೇರಿ NEWS DESK ಆ.23 : ಜಿಲ್ಲಾ ಕೇಂದ್ರ ಮಡಿಕೇರಿ ನಗರ ವ್ಯಾಪ್ತಿಯಲ್ಲಿ ಸಂಚಾರದ ಸಂಕಷ್ಟ, ವಾಹನ ನಿಲುಗಡೆ, ಏಕಮುಖ ಸಂಚಾರ, ವಾಹನದಟ್ಟಣೆ ಮತ್ತಿತರ ವ್ಯವಸ್ಥೆಗಳಲ್ಲಿನ ಲೋಪಗಳ ಬಗ್ಗೆ ಪೊಲೀಸರು ಹಾಗೂ ನಾಗರೀಕರ “ಜನ ಸಂಪರ್ಕ” ಸಭೆ ನಗರದಲ್ಲಿ ಇಂದು ನಡೆಯಿತು. ನಗರದ ರೆಡ್ ಬ್ರಿಕ್ಸ್ನ “ಸತ್ಕಾರ್ ಸಭಾಂಗಣ”ದಲ್ಲಿ ಡಿವೈಎಸ್ಪಿ ಮಹೇಶ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನಗರ ವ್ಯಾಪ್ತಿಯಲ್ಲಿನ ವಾಹನ ಸಂಚಾರ ಮತ್ತು ನಿಲುಗಡೆಗಳಿಗೆ ಸಂಬಂಧಿಸಿದಂತೆ ಮುಕ್ತವಾಗಿ ಚರ್ಚಿಸಲಾಯಿತು. ಶಕ್ತಿ ಪತ್ರಿಕೆಯ ಸಂಪಾದಕ ಜಿ.ಚಿದ್ವಿಲಾಸ್ ಅವರು ಮಾತನಾಡಿ, ಮಡಿಕೇರಿ ನಗರ ವ್ಯಾಪ್ತಿಯಲ್ಲಿ ಇತ್ತೀಚಿನ ದಿನಗಳಲ್ಲಿ ಜನ ಮತ್ತು ವಾಹನ ದಟ್ಟಣೆೆಯಿಂದ ಸಂಚಾರ ಸಮಸ್ಯೆಗಳು ನಿರ್ಮಾಣವಾಗುತ್ತಿದೆ. ಇಕ್ಕಟ್ಟಿನ ರಸ್ತೆಗಳು, ವಾಹನ ನಿಲುಗಡೆಗೆ ಅಗತ್ಯ ಜಾಗದ ಕೊರತೆ ಎದ್ದು ಕಾಣುತ್ತಿದೆ. ಮಾರುಕಟ್ಟೆ ವಿಭಾಗದಲ್ಲಿನ ವಾಹನ ದಟ್ಟಣೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಮಾರುಕಟ್ಟೆ ಬಳಿಯಿಂದ ಸಿ.ವಿ.ಶಂಕರ್ ರಸ್ತೆಯವರೆಗೆ ಏಕಮುಖ ಮಾರ್ಗದ ಬದಲಾಗಿ ದ್ವಿಪಥ ವಾಹನ ಸಂಚಾರಕ್ಕೆ ಅವಕಾಶ ಒದಗಿಸಿದಲ್ಲಿ ಸಂಚಾರದ ಒತ್ತಡವನ್ನು ಕಡಿಮೆಗೊಳಿಸಬಹುದೆನ್ನುವ…
ಮಡಿಕೇರಿ NEWS DESK ಆ.23 : ಹಾಡಹಗಲೇ ಚೇರಂಬಾಣೆ ಗ್ರಾಮದ ಮನೆಯೊಂದಕ್ಕೆ ನುಗ್ಗಿ ಮಹಿಳೆಯೊಬ್ಬರನ್ನು ಬೆದರಿಸಿ ಚಿನ್ನಾಭರಣಗಳನ್ನು ದರೋಡೆ ಮಾಡಿದ ಆರೋಪಿಯನ್ನು ಪ್ರಕರಣ ನಡೆದ ಕೇವಲ 6 ಗಂಟೆಗಳಲ್ಲಿ ಬಂಧಿಸುವಲ್ಲಿ ಮಡಿಕೇರಿ ಗ್ರಾಮಾಂತರ, ಭಾಗಮಂಡಲ ಮತ್ತು ನಾಪೋಕ್ಲು ಪೊಲೀಸರು ಯಶಸ್ವಿಯಾಗಿದ್ದಾರೆ. ಚೇರಂಬಾಣೆ ನಿವಾಸಿ ಸುದರ್ಶನ್ (24) ಎಂಬಾತನೇ ಬಂಧಿತ ಆರೋಪಿ. ಸಣ್ಣಪಲಿಕೋಟು ಬಸ್ ನಿಲ್ದಾಣದ ಬಳಿ ಈತನನ್ನು ಪೊಲೀಸರು ಬಂಧಿಸಿದ್ದು, ಕಳವು ಮಾಡಿದ್ದ 60 ಗ್ರಾಂ 530 ಮಿಲಿ ಚಿನ್ನಾಭರಣ, ರೂ.620 ನಗದು ಮತ್ತು ಕೃತ್ಯಕ್ಕೆ ಬಳಸಿದ್ದ ಚಾಕುವನ್ನು ವಶಪಡಿಸಿಕೊಂಡಿದ್ದಾರೆ. ::: ಪ್ರಕರಣದ ಹಿನ್ನೆಲೆ ::: ಆ.22 ರಂದು ಭಾಗಮಂಡಲ ಪೊಲೀಸ್ ಠಾಣಾ ವ್ಯಾಪ್ತಿಯ ಚೇರಂಬಾಣೆ ಗ್ರಾಮದ ನಿವಾಸಿ ಗೋಪಾಲಕೃಷ್ಣ ಕೆ.ಕೆ ಅವರ ತಾಯಿ ಮನೆಯಲ್ಲಿ ಒಬ್ಬರೇ ಇದ್ದ ಸಂದರ್ಭ ಬೆಳಿಗ್ಗೆ ಸುಮಾರು 11.30 ಗಂಟೆಗೆ ಆರೋಪಿ ಮನೆಗೆ ನುಗ್ಗಿದ್ದಾನೆ. ಚಾಕು ತೋರಿಸಿ, ಬೆದರಿಸಿ, ಹಲ್ಲೆ ಮಾಡಿ ಕುತ್ತಿಗೆಯಲ್ಲಿದ್ದ ಚಿನ್ನದ ಸರ ಮತ್ತು ಮನೆಯ ಗಾಡ್ರೇಜ್ನಲ್ಲಿದ್ದ ಚಿನಾಭರಣಗಳನ್ನು ದೋಚಿದ್ದಾನೆ ಎಂದು ಭಾಗಮಂಡಲ…
ಮಡಿಕೇರಿ NEWS DESK ಆ.23 : ಕೊಡವರ ಹತ್ಯೆಯಾದ ದೇವಟ್ ಪರಂಬು ಸ್ಮಾರಕ ಪ್ರದೇಶದಲ್ಲಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ಮಾಸಿಕ ಶ್ರದ್ಧಾಂಜಲಿ ಕಾರ್ಯಕ್ರಮ ನಡೆಸಿತು. ಸಿಎನ್ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಹಾಗೂ ಪ್ರಮುಖರು ಹಿರಿಯರಿಗೆ ಪುಷ್ಪನಮನ ಸಲ್ಲಿಸಿ ಕೊಡವಲ್ಯಾಂಡ್ ಪರ ಹಕ್ಕೊತ್ತಾಯ ಮಂಡಿಸಿದರು. ವಿಶ್ವಾಸಘಾತುಕ “ಕೆಳದಿ/ಪಾಲೇರಿ ರಾಜ ಪರಿವಾರದ ಅಧೀನದಲ್ಲಿದ್ದ ಕೊಡಗು ರಾಜ್ಯವನ್ನು ಪರಾಕ್ರಮಿ ಕೊಡವರು ಹೈದರ್ ಮತ್ತು ಟಿಪ್ಪುವಿನ ಆಕ್ರಮಣದಿಂದ 32 ಕ್ಕೂ ಹೆಚ್ಚು ಬಾರಿ ಕಾಪಾಡಿದರು. ಈ ಸೋಲಿನ ಸೇಡು ತೀರಿಸಿಕೊಳ್ಳಲು, ಟಿಪ್ಪು ಕೊಡವ ಬುಡಕಟ್ಟು ಜನಾಂಗವನ್ನು ವಂಚನೆಯ ಮೂಲಕ ಸಂಪೂರ್ಣವಾಗಿ ನಾಶಮಾಡಲು ಸಂಚು ಹೂಡಿದನು. ಟಿಪ್ಪು ಸಂಚಿನಿAದ ದೇವಟ್ ಪರಂಬುವಿನಲ್ಲಿ ನಡೆದ ನರಮೇಧದ ಸ್ಮರಣಾರ್ಥ ಅಂತರರಾಷ್ಟ್ರೀಯ ಸ್ಮಾರಕ ನಿರ್ಮಾಣ ಮಾಡಬೇಕು ಮತ್ತು ಕೊಡವರ ನರಮೇಧವನ್ನು ವಿಶ್ವ ರಾಷ್ಟçಸಂಸ್ಥೆ ಯುಎನ್ಒ ಅಂತರರಾಷ್ಟ್ರೀಯ ಹತ್ಯಾಕಾಂಡದ ನೆನಪಿನ ಪಟ್ಟಿಯಲ್ಲಿ ಸೇರಿಸಬೇಕು ಎಂದು ನಾಚಪ್ಪ ಇದೇ ಸಂದರ್ಭ ಒತ್ತಾಯಿಸಿದರು. ಕೊಡವಲ್ಯಾಂಡ್ ಭೂ-ರಾಜಕೀಯ ಸ್ವಾಯತ್ತತೆ ನೀಡಬೇಕು, ಆದಿಮಸಂಜಾತ ಕೊಡವ ಜನಾಂಗೀಯ ಬುಡಕಟ್ಟು ಜನಾಂಗಕ್ಕೆ ಎಸ್ಟಿ…
ಮಡಿಕೇರಿ ಆ.23 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ನಗರಸಭೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತೆ, ಪದವಿ ಪೂರ್ವ ಶಿಕ್ಷಣ, ಕಾಲೇಜು ಶಿಕ್ಷಣ ಇಲಾಖೆ ಹಾಗೂ ಸರ್ವೋದಯ ಸಮಿತಿ ಇವರ ಸಹಕಾರದಲ್ಲಿ ಆಚರಿಸುತ್ತಿರುವ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 155 ನೇ ಜಯಂತಿಯ ದಿನಾಚರಣೆ ಅಂಗವಾಗಿ ವಿದ್ಯಾರ್ಥಿ ಹಾಗೂ ಯುವಜನರಲ್ಲಿ ಮಹಾತ್ಮ ಗಾಂಧೀಜಿಯವರ ಬದುಕು, ಸ್ವಾತಂತ್ರ್ಯ ಚಳುವಳಿ, ಸರಳತೆ, ಅಹಿಂಸಾ ಮಾರ್ಗ, ಅಸ್ಪೃಶ್ಯತೆ ನಿವಾರಣೆಗಾಗಿ ನಡೆಸಿದ ಪ್ರಯೋಗಗಳು ಮತ್ತಿತರ ವಿಚಾರಗಳ ಬಗ್ಗೆ ಪ್ರೌಢಶಾಲೆ, ಪದವಿ ಪೂರ್ವ ಹಾಗೂ ಪದವಿ/ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಬಾಪೂಜಿ ಪ್ರಬಂಧ ಸ್ಪರ್ಧೆಯು ಜಿಲ್ಲಾ ಮತ್ತು ರಾಜ್ಯ ಮಟ್ಟದಲ್ಲಿ ನಡೆಯಲಿದೆ. ವಿವಿಧ ವಿಷಯಗಳ ಕುರಿತು ಪ್ರೌಢಶಾಲೆ, ಪದವಿ ಪೂರ್ವ ಶಿಕ್ಷಣ ಹಾಗೂ ಪದವಿ-ಸ್ನಾತಕೋತ್ತರ ಪದವಿಗಳ ಹಂತದ ವಿದ್ಯಾರ್ಥಿಗಳಿಗೆ ಒಟ್ಟು 3 ವಿಭಾಗಗಳಲ್ಲಿ ಬಾಪೂಜಿ ಪ್ರಬಂಧ ಸ್ಪರ್ಧೆಯನ್ನು ವಿವಿಧ ಇಲಾಖೆಗಳ ಸಹಕಾರದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಆಯೋಜಿಸಲಾಗಿದೆ. ವಿಜೇತರಿಗೆ…
ಕುಶಾಲನಗರ ಆ.23 NEWS DESK : ಕೂಡುಮಂಗಳೂರು(ಕೂಡ್ಲೂರು) ಸರ್ಕಾರಿ ಪ್ರೌಢಶಾಲೆಯಲ್ಲಿ ವಿಜ್ಞಾನ ಸಂಘ, ಎಸ್.ಡಿ.ಎಂ.ಸಿ. ಮತ್ತು ಎನ್.ಎಸ್.ಎಸ್.ಘಟಕದ ಆಶ್ರಯದಲ್ಲಿ ರಾಷ್ಟ್ರೀಯ ಅಂತರಿಕ್ಷ ದಿನಾಚರಣೆಯನ್ನು ಆಚರಿಸುವ ಮೂಲಕ ಚಂದ್ರಯಾನ ಯಶಸ್ವಿ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಲಾಯಿತು. ರಾಷ್ಟ್ರೀಯ ಅಂತರಿಕ್ಷ ದಿನಾಚರಣೆಯ ಮಹತ್ವ ಕುರಿತು ಮಾಹಿತಿ ನೀಡಿದ ಶಾಲಾ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್, ಚಂದ್ರಯಾನ-3 ರ ಯಶಸ್ಸಿನ ಸ್ಮರಣಾರ್ಥವಾಗಿ ಆಗಸ್ಟ್ 23ರಂದು ಬಾಹ್ಯಾಕಾಶ ದಿನ ಆಚರಿಸಲಾಗುತ್ತಿದೆ. ಇಂತಹ ದಿನಗಳು ವಿದ್ಯಾರ್ಥಿಗಳಲ್ಲಿ ಬಾಹ್ಯಾಕಾಶದ ಕುರಿತು ವೈಜ್ಞಾನಿಕ ಸಂಶೋಧನೆಗಳನ್ನು ಮತ್ತು ಸಾಹಸಗಳನ್ನು ಕೈಗೊಳ್ಳಲು ಪ್ರೇರೇಪಣೆ ಸಿಗುತ್ತದೆ ಎಂದರು. ಅಂತರಿಕ್ಷ ಕ್ಷೇತ್ರದಲ್ಲಿ ನಮ್ಮ ದೇಶವನ್ನು ಮತ್ತಷ್ಟು ಉನ್ನತ ಸ್ಥಾನಕ್ಕೇರಿಸಲು ಈ ದಿನ ಸಹಕಾರಿಯಾಗಿದೆ ಎಂದು ಪ್ರೇಮಕುಮಾರ್ ತಿಳಿಸಿದರು. ಭಾರತದ ಬಾಹ್ಯಾಕಾಶ ಸಾಧನೆಗಳ ಕುರಿತು ಮಾಹಿತಿ ನೀಡಿದ ಶಾಲೆಯ ವಿಜ್ಞಾನ ಸಂಘದ ಉಸ್ತುವಾರಿ ಶಿಕ್ಷಕಿ ಬಿ.ಡಿ.ರಮ್ಯ ಮಾತನಾಡಿ, ಬಾಹ್ಯಾಕಾಶ ಸಾಧನೆಗಳ ಪೈಕಿ ಚಂದ್ರಯಾನ-3 ಯೋಜನೆಗೆ ವಿಶೇಷ ಸ್ಥಾನವಿದೆ. ಕಳೆದ ವರ್ಷ ಆ.23ರಂದು ಚಂದ್ರಯಾನ-3 ಮಿಷನ್ನ ವಿಕ್ರಮ್ ಲ್ಯಾಂಡರ್ ಚಂದ್ರನ ದಕ್ಷಿಣ…
ಮಡಿಕೇರಿ NEWS DESK ಆ.23 : ಮಹಿಳೆಯರು ಶಿಕ್ಷಣದಿಂದ ವಂಚಿತರಾಗಬಾರದು, ಸಾಮಾಜಿಕ ಪಿಡುಗಿನಿಂದ ನೊಂದಿರುವ ಮಹಿಳೆಗೆ ನೆರವು ಮತ್ತು ಸೌಲಭ್ಯ ಕಲ್ಪಿಸಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶುಭ ಅವರು ತಿಳಿಸಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಪೊಲೀಸ್ ಇಲಾಖೆ, ಶಿಕ್ಷಣ ಇಲಾಖೆ, ಇವರ ಸಹಯೋಗದೊಂದಿಗೆ 2024-25 ನೇ ಸಾಲಿನ ಮಿಷನ್ ಶಕ್ತಿ ಯೋಜನೆಯಡಿ “ಬೇಟಿ ಪಡಾವೋ-ಬೇಟಿ ಬಚಾವೋ” ಜಿಲ್ಲಾ ಮಟ್ಟದ ಕಾರ್ಯಕ್ರಮದ ಪ್ರಯುಕ್ತ ನಗರದ ಶಿಶು ಕಲ್ಯಾಣ ಸಂಸ್ಥೆಯಲ್ಲಿ ಕಟ್ಟಡ ಕಾರ್ಮಿಕರಿಗೆ “ವಿಶ್ವ ಮಾನವ ಕಳ್ಳ ಸಾಗಾಣಿಕೆ’ ತಡೆ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಮಾನವ ಕಳ್ಳ ಸಾಗಾಣಿಕೆಯ ಸಮಸ್ಯೆ ಮಹಿಳೆಯರನ್ನು ಹೆಚ್ಚಾಗಿ ಕಾಡುತ್ತಿದೆ. ಸಾಮಾನ್ಯರಂತೆ ಜೀವನ ನಡೆಸಲು ಸಾಧ್ಯವಾಗುತ್ತಿಲ್ಲ, ಬೇರೆ ಬೇರೆ ಕೆಲಸ ಕಾರ್ಯಗಳಿಗೆ ಬಳಸಿಕೊಳ್ಳಲಾಗುತ್ತಿದೆ. ಸಾಮಾಜಿಕ ಪಿಡುಗಿನಿಂದ ನೊಂದಿರುವ…
ಮಡಿಕೇರಿ ಆ.23 NEWS DESK : ವಿರಾಜಪೇಟೆಯ ಕುಟ್ಟಂದಿಯ ಕೆ.ಬಿ ಪ್ರೌಢಶಾಲೆಯಲ್ಲಿ ಕಳೆದ 30 ವರ್ಷಗಳಿಂದ ದೈಹಿಕ ಶಿಕ್ಷಕರಾಗಿ ಸೇವೆ ಸಲ್ಲಿಸಿರುವ ಶಿವಣ್ಣ ಎಸ್. ಅವರಿಗೆ ಶ್ರೀ ಕೆಂಗಲ್ ಹನುಮಂತಯ್ಯ ಸದ್ಭಾವನಾ ರಾಷ್ಟ್ರ ಪ್ರಶಸ್ತಿ ಪ್ರದಾನ ಮಾಡಲಾಯಿತು. ಪ್ರತಿ ವರ್ಷ ವಿರಾಜಪೇಟೆಯ ನಾಟ್ಯ ಮಯೂರಿ ನೃತ್ಯ ಟ್ರಸ್ಟ್ ರಾಜ್ಯದ ಎಲ್ಲಾ ಜಿಲ್ಲೆಗಳ ಸಾಧಕರನ್ನು ಗುರುತಿಸಿ ನೀಡುತ್ತಿರುವ ಪ್ರಶಸ್ತಿಗೆ ಈ ಬಾರಿ ಕೊಡಗು ಜಿಲ್ಲೆಯಿಂದ ಶಿವಣ್ಣ ಅವರನ್ನು ಆಯ್ಕೆ ಮಾಡಲಾಗಿತ್ತು. ವಿಧಾನಸೌಧದ ಕಲಾಕ್ಷೇತ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಟ್ರಸ್ಟ್ ನ ಪ್ರಮುಖರು ಹಾಗೂ ಮುಖ್ಯ ಅತಿಥಿಗಳು ಪ್ರಶಸ್ತಿ ಪ್ರದಾನ ಮಾಡಿದರು. ಹವ್ಯಾಸಿ ರಂಗಭೂಮಿ ಕಲಾವಿದರು, ಹಾಡುಗಾರರೂ ಆಗಿರುವ ಶಿವಣ್ಣ ಅವರು ಭಾರತ ಸೇವಾದಳ, ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯಲ್ಲೂ ಸೇವೆ ಸಲ್ಲಿಸಿದ್ದಾರೆ. ಇತ್ತೀಚೆಗಷ್ಟೇ ನಿವೃತ್ತಿ ಹೊಂದಿರುವ ಇವರು ಕಿರುತೆರೆಯ ಧಾರಾವಾಹಿಯೊಂದರಲ್ಲಿ ಅಭಿನಯಿಸುವ ತಯಾರಿಯಲ್ಲಿದ್ದಾರೆ.
ಮಡಿಕೇರಿ ಆ.23 NEWS DESK : ಐತಿಹಾಸಿಕ ಮಡಿಕೇರಿ ದಸರಾ ಜನೋತ್ಸವದ ಪೂರ್ವ ಸಿದ್ಧತೆಗಾಗಿ ನಗರದ ಶ್ರೀಪೇಟೆ ರಾಮಮಂದಿರದಲ್ಲಿ ದಸರಾ ಸಮಿತಿ ವತಿಯಿಂದ ವಿಶೇಷ ಪೂಜೆ ಸಲ್ಲಿಸಲಾಯಿತು. ಸಮಿತಿಯ ಕಾರ್ಯಾಧ್ಯಕ್ಷ ಪ್ರಕಾಶ್ ಆಚಾರ್ಯ, ಮೂಡ ಅಧ್ಯಕ್ಷ ಹಾಗೂ ನಗರಸಭಾ ಸದಸ್ಯ ಬಿ.ವೈ.ರಾಜೇಶ್, ನಗರಸಭೆ ಅಧ್ಯಕ್ಷೆ ಅನಿತಾ ಪೂವಯ್ಯ, ಸದಸ್ಯ ಅರುಣ್ ಶೆಟ್ಟಿ, ಮೂಡ ಸದಸ್ಯ ಕಾನೆಹಿತ್ಲು ಮೊಣ್ಣಪ್ಪ, ಮಡಿಕೇರಿ ದಸರಾ ಸಾಂಸ್ಕೃತಿಕ ಸಮಿತಿಯ ಅಧ್ಯಕ್ಷ ಅನಿಲ್ ಹೆಚ್.ಟಿ, ಪ್ರಮುಖರಾದ ಸತೀಶ್ ಪೈ, ಸದಾ ಮುದ್ದಪ್ಪ, ಬೊಳ್ಳಜಿರ ಬಿ.ಅಯ್ಯಪ್ಪ ಹಾಗೂ ಸಮಿತಿಯ ಪದಾಧಿಕಾರಿಗಳು ದಸರಾ ಉತ್ಸವದ ಯಶಸ್ಸಿಗೆ ಪ್ರಾರ್ಥನೆ ಸಲ್ಲಿಸಿದರು. ನಗರಸಭೆ ಸದಸ್ಯರು, ದಶಮಂಟಪ ಸಮಿತಿಯ ಪದಾಧಿಕಾರಿಗಳು, ದಸರಾ ಉತ್ಸವ ಸಮಿತಿಯ ಪದಾಧಿಕಾರಿಗಳು ಹಾಗೂ ಸದಸ್ಯರು ಹಾಜರಿದ್ದರು.






