ಮಡಿಕೇರಿ ಆ.23 NEWS DESK : ಪ್ರಸಕ್ತ (2024-25) ಸಾಲಿನಲ್ಲಿ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಯೋಜನೆಗಳಾದ ಉದ್ಯೋಗಿನಿ ಯೋಜನೆ, ಧನಶ್ರೀ ಯೋಜನೆ, ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆ, ಚೇತನ ಯೋಜನೆಗಳಿಗೆ ಸೇವಾ ಸಿಂಧು ಪೋರ್ಟಲ್ನಲ್ಲಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿದಾರರು ಹತ್ತಿರದ ಬಾಪೂಜಿ ಸೇವಾ ಕೇಂದ್ರ, ಗ್ರಾಮ ಒನ್, ಕರ್ನಾಟಕ ಒನ್ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸುವುದು, ಅರ್ಜಿ ಸಲ್ಲಿಸಲು ಸೆಪ್ಟೆಂಬರ್, 21 ರ ಸಂಜೆ 5.30 ರವರೆಗೆ ಅವಕಾಶ ಕಲ್ಪಿಸಲಾಗಿದೆ. ಹೆಚ್ಚಿನ ಮಾಹಿತಿಗೆ ಉಪ ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕೊಡಗು ಜಿಲ್ಲೆ ಹಾಗೂ ಜಿಲ್ಲಾ ಅಭಿವೃದ್ಧಿ ನಿರೀಕ್ಷಕರು, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಕಚೇರಿ, ಕೊಡಗು ಜಿಲ್ಲೆ ಇವರನ್ನು ಹಾಗೂ ದೂ.ಸಂ.08272-228010, 9482194105 ನ್ನು ಸಂಪರ್ಕಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.
ಲೇಖಕ: admin
ಮಡಿಕೇರಿ ಆ.23 NEWS DESK : ನೆಲ್ಲಿಹುದಿಕೇರಿಯ ನೈಮ ಎಜುಕೇಷನಲ್ ಮತ್ತು ವೆಲ್ಫೇರ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಆ.27 ರಿಂದ ನೆಲ್ಲಿಹುದಿಕೇರಿಯಲ್ಲಿ ‘ಸ್ವಾಭಿಮಾನದ ಬದುಕಿಗೆ ಶಿಕ್ಷಣ’ ಎಂಬ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ನಡೆಯಲಿದೆ ಎಂದು ಟ್ರಸ್ಟ್ನ ಅಧ್ಯಕ್ಷ ಒ.ಎಂ.ನೌಷದ್ ತಿಳಿಸಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಸಕ್ತ ಸಾಲಿನ ಅಕ್ಟೋಬರ್ ಕೊನೆಯ ವಾರದಲ್ಲಿ ಬರಲಿರುವ ಕಂದಾಯ ಪರಿವೀಕ್ಷಕರ ಹುದ್ದೆ, ಎಎಸ್ಐ ಮತ್ತು ಪಿಡಿಒ ಆಯ್ಕೆಯ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪೂರ್ವ ತಯಾರಿ ನಡೆಸುವ ಅಭ್ಯರ್ಥಿಗಳಿಗೆ ಅಗತ್ಯ ತರಬೇತಿಯಲ್ಲಿ ನೀಡುವ ಉದ್ದೇಶದಿಂದ ನೆಲ್ಲಿಹುದಿಕೇರಿಯ ಶಾದಿ ಮಹಲ್ನಲ್ಲಿ ತರಬೇತಿ ಆಯೋಜಿಸಲಾಗಿದೆ. ಈಗಾಗಲೆ ಸುಮಾರು 64 ವಿದ್ಯಾರ್ಥಿಗಳಿಗೆ ಆನ್ ಲೈನ್ ಮೂಲಕ ತರಬೇತಿ ನೀಡುತ್ತಿದ್ದು, ಆ.27ರ ಬಳಿಕ ಪ್ರತಿ ಭಾನುವಾರ ನುರಿತ ವಿಷಯ ತಜ್ಞರಿಂದ ತರಬೇತಿಯನ್ನು ನೀಡಲಾಗುತ್ತದೆಂದು ತಿಳಿಸಿದರು. ತರಬೇತಿ ಶಿಬಿರವನ್ನು ಅಂದು ಬೆಳಿಗ್ಗೆ 10.30 ಗಂಟೆಗೆ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಉದ್ಘಾಟಿಸಲಿದ್ದಾರೆ ಎಂದು ಮಾಹಿತಿ ನೀಡಿದರು. ಜಿಲ್ಲೆಯ ಶೈಕ್ಷಣಿಕ ಮತ್ತು ಸಮಾಜ ಸೇವಾ…
ಮಡಿಕೇರಿ ಆ.23 NEWS DESK : ನಾಲಡಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಿಸಲಾಯಿತು. ದಾನಿಗಳಾದ ಕೋಡಿಮಣಿಯಂಡ ಶರಣ್ ಕುಟ್ಟಪ್ಪ ವಿದ್ಯಾರ್ಥಿಗಳಿಗೆ ಸಮವಸ್ತ್ರ ವನ್ನು ಕೊಡುಗೆಯಾಗಿ ನೀಡಿದ್ದು, ಶಾಲೆಯ ಮುಖ್ಯ ಶಿಕ್ಷಕರು, ಶಿಕ್ಷಕರು ಎಸ್.ಡಿ.ಎಂ.ಸಿ ಸದಸ್ಯರು ಶ್ಲಾಘನೆ ವ್ಯಕ್ತಪಡಿಸಿದರು.
ಮಡಿಕೇರಿ NEWS DESK ಆ.23 : ನಗರದ ಶ್ರೀಕೋಟೆ ಮಾರಿಯಮ್ಮ ದೇವಾಲಯದಲ್ಲಿ ಆ.16ರ ಮಧ್ಯರಾತ್ರಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅಸ್ಸಾಂ ಮೂಲದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕಾಂತೂರು-ಮೂರ್ನಾಡು ಗ್ರಾಮದ ತೋಟದ ಲೈನ್ಮನೆಯಲ್ಲಿ ವಾಸವಿದ್ದ ಅಲ್ತಾಬ್ ಆಲಿ (27) ಹಾಗೂ ಕೃತ್ಯ ನಡೆಸುವ ಉದ್ದೇಶದಿಂದ ಅಸ್ಸಾಂನಿಂದ ಬಂದಿದ್ದ ಮೀರ್ ಹುಸೇನ್ (ನೂರ್ ಹುಸೇನ್)(36) ಎಂಬುವವರನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಆರೋಪಿಗಳ ಬಳಿ ಇದ್ದ ಕಳವು ಮಾಡಿ 3 ಗ್ರಾಂ ಚಿನ್ನದ ಮಾಂಗಲ್ಯ, 111 ಗ್ರಾಂ ಬೆಳ್ಳಿಯ ಕಿರೀಟ, 59 ಗ್ರಾಂ ಬೆಳ್ಳಿಯ ದೃಷ್ಟಿ ಬೊಟ್ಟು ಮತ್ತು ರೂ.95,501 ನಗದನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಅಪರಿಚಿತ ವ್ಯಕ್ತಿಗಳು ದೇವಸ್ಥಾನದ ಮುಖ್ಯ ದ್ವಾರದ ಬೀಗವನ್ನು ಮುರಿದು 2 ಹುಂಡಿಗಳನ್ನು ಒಡೆದು ಅಂದಾಜು ರೂ.2.50 ಲಕ್ಷ ನಗದನ್ನು ಹಾಗೂ ದೇವಿಯ ಮೂರ್ತಿಗೆ ಅಳವಡಿಸಿದ್ದ ಸುಮಾರು ರೂ.1.16 ಲಕ್ಷ ಮೌಲ್ಯದ ಚಿನ್ನ ಮತ್ತು ಬೆಳ್ಳಿಯ ಆಭರಣಗಳನ್ನು…
ಮಡಿಕೇರಿ ಆ.23 NEWS DESK : ನಗರದ ಶ್ರೀ ಕಂಚಿ ಕಾಮಾಕ್ಷಿಯಮ್ಮ ದೇವಾಲಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಆ.26 ರಂದು ರಾತ್ರಿ ವಿಶೇಷ ಪೂಜೆ ಹಾಗೂ ಶ್ರೀ ರಾಮಾಂಜನೇಯ ಭಜನಾ ಮಂಡಳಿಯಿಂದ ಭಜನಾ ಕಾರ್ಯಕ್ರಮ ನಡೆಯಲಿದೆ. ಮೊಸರು ಕುಡಿಕೆ ಸ್ಪರ್ಧೆ: ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಸೆ.1 ರಂದು ಸಂಜೆ 4 ಗಂಟೆಗೆ ಮೊಸರು ಕುಡಿಕೆ ಒಡೆಯುವ ಸ್ಪರ್ಧೆ ಹಾಗೂ 6 ವರ್ಷದೊಳಗಿನ ಮಕ್ಕಳ ಶ್ರೀ ಕೃಷ್ಣ ಛದ್ಮ ವೇಷ ಸ್ಪರ್ಧೆ ನಡೆಯಲಿದೆ. ಛದ್ಮ ವೇಷ ಸ್ಪರ್ಧೆ :: ಛದ್ಮ ವೇಷ ಸ್ಪರ್ಧೆಯಲ್ಲಿ ಭಾಗವಹಿಸುವ ಮಕ್ಕಳು ತಮ್ಮ ಹೆಸರುಗಳನ್ನು ಪವನ್ 9900667686, ರಘು 9844290058, ಅರುಣ್ 7022790974 ಸಂಪರ್ಕಿಸಿ ನೋಂದಾಯಿಸಿಕೊಳ್ಳಬಹುದು. ಶ್ರೀ ಕೃಷ್ಣ ದೇವರನ್ನು ವಿಶೇಷವಾಗಿ ಆರಾಧಿಸುವ ಸಾಂಪ್ರದಾಯಕ ಆಚರಣೆಯಲ್ಲಿ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಶ್ರೀ ಕಂಚಿ ಕಾಮಾಕ್ಷಿಯಮ್ಮ ಆಡಳಿತ ಮಂಡಳಿ ಕೋರಿದೆ.
ಸುಂಟಿಕೊಪ್ಪ NEWS DESK ಆ.23 : ಆದಾಯ ಕುಸಿತವಾಗಿರುವ ಹಿನ್ನೆಲೆ ಸುಂಟಿಕೊಪ್ಪ ಗ್ರಾಮ ಪಂಚಾಯಿತಿ ನೀರಿನ ದರ ಮತ್ತು ಕರ ವಸೂಲಾತಿ ಅಭಿಯಾನವನ್ನು ಆರಂಭಿಸಿದೆ. ಹಣದ ಕೊರತೆಯಿಂದ ಸಿಬ್ಬಂದಿಗಳಿಗೆ ವೇತನ ನೀಡಲು ಸಾಧ್ಯವಾಗುತ್ತಿರಲಿಲ್ಲ ಮತ್ತು ಅಭಿವೃದ್ಧಿ ಕಾರ್ಯಗಳಿಗೂ ಹಿನ್ನಡೆಯಾಗಿತ್ತು. ದರ, ಕರ ವಸೂಲಾತಿ ಅಭಿಯಾನಕ್ಕೆ ಗ್ರಾ.ಪಂ ಅಧ್ಯಕ್ಷ ಪಿ.ಆರ್.ಸುನಿಲ್ಕುಮಾರ್ ಹಾಗೂ ಪಿಡಿಓ ವಿ.ಜಿ.ಲೋಕೇಶ್ ಚಾಲನೆ ನೀಡಿದರು. ಬಹಳ ಹಿಂದಿನಿಂದಲೂ ಅನೇಕರು ನೀರಿನ ತೆರಿಗೆ ಮತ್ತು ಮನೆಯ ಕಂದಾಯ ಪಾವತಿಸದೆ ಸಾವಿರಾರು ರೂಪಾಯಿ ಬಾಕಿ ಉಳಿಸಿಕೊಂಡಿದ್ದಾರೆ. ಪಂಚಾಯಿತಿ ಸಿಬ್ಬಂದಿಗಳಿಗೆ ವೇತನ ನೀಡಲು ಮತ್ತು ವಿವಿಧ ವಾರ್ಡ್ ಗಳ ಅಭಿವೃದ್ಧಿ ಕಾರ್ಯಕ್ಕೆ ಹಣದ ಕೊರತೆ ಎದುರಾಗಿದೆ. ಚೆಸ್ಕಾಂ ಇಲಾಖೆಗೆ ಬೀದಿ ದೀಪ, ನೀರು ಸರಬರಾಜು ವಿದ್ಯುತ್ ಬಿಲ್ ವಾರ್ಷಿಕವಾಗಿ ಲಕ್ಷಾಂತರ ರೂ. ಪಾವತಿಸಬೇಕಿದೆ. ಆದಾಯ ಕುಸಿತ ಒಂದೆಡೆಯಾದರೆ ಮೂಲಭೂತ ಸೌಲಭ್ಯಗಳಿಗೆ ಬೇಕಾಗಿರುವ ಸಂಪನ್ಮೂಲದ ಕೊರತೆಯು ಬಹಳವಾಗಿ ಕಾಡುತ್ತಿದೆ. ಈ ಹಿನ್ನೆಲೆಯಲ್ಲಿ ಸಂಪನ್ಮೂಲವನ್ನು ಕ್ರೋಢೀಕರಿಸಲು ಅಭಿಯಾನ ಆರಂಭಗೊಂಡಿದೆ. ಮನೆ ಹಾಗೂ ನೀರಿನ ತೆರಿಗೆಯನ್ನು ಪಾತಿಸುವಂತೆ ಮನವಿ…
ಮೈಸೂರು NEWS DESK ಆ.23 : ಮೇಘಾಲಯದ ರಾಜ್ಯಪಾಲ ಸಿ.ಎಚ್.ವಿಜಯಶಂಕರ್ ಅವರು ರಾಜ್ಯಪಾಲರಾಗಿ ಅಧಿಕಾರ ವಹಿಸಿಕೊಂಡ ನಂತರ ಇದೇ ಮೊದಲ ಬಾರಿಗೆ ಸ್ವಕ್ಷೇತ್ರ ಹುಣಸೂರಿಗೆ ಭೇಟಿ ನೀಡಿದರು. ಹುಣುಸೂರು ತಾಲ್ಲೂಕಿನ ಗದ್ದಿಗೆಯ ಕೆಂಡಗಣ್ಣಸ್ವಾಮಿ ದೇವಾಲಯ, ಮೈಸೂರು ರಸ್ತೆಯ ಸಾಯಿಬಾಬ ಮಂದಿರ, ಕಲ್ಕುಣಿಕೆ ವೃತ್ತದ ಈಶ್ವರ ದೇವಾಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಧರ್ಮಾಪುರ, ರತ್ನಪುರಿ, ಕೊಯಮುತ್ತೂರು ಕಾಲೋನಿ, ಸುಭಾಷ್ನಗರ ಮತ್ತು ಹುಣಸೂರಿನ ವಿಜಯನಗರ ಬಡಾವಣೆಯಲ್ಲಿ ಜನರಿಂದ ಸನ್ಮಾನ ಸ್ವೀಕರಿಸಿದರು. ಶ್ರೀ ರಾಘವೇಂದ್ರಸ್ವಾಮಿ ಮಠದಲ್ಲಿ ನಡೆದ ಆರಾಧನಾ ಮಹೋತ್ಸವ ಮತ್ತು ಅನ್ನಸಂತರ್ಪಣೆಯಲ್ಲಿ ಭಾಗಿಯಾಗಿದ್ದರು. ರಾಘವೇಂದ್ರಸ್ವಾಮಿಗಳ ಮಠದ ವತಿಯಿಂದ ರಾಜ್ಯಪಾಲ ಸಿ.ಎಚ್.ವಿಜಯಶಂಕರ್ ಹಾಗೂ ಶಾಸಕ ಹರೀಶ್ ಗೌಡರನ್ನು ಸನ್ಮಾನಿಸಲಾಯಿತು.
ಮಡಿಕೇರಿ ಆ.23 NEWS DESK : ಅತ್ಯಂತ ವಿಶಿಷ್ಟ ಸಂಸ್ಕೃತಿ, ಪರಂಪರೆಗಳನ್ನು ಹೊಂದಿರುವ ಕೊಡಗಿನಲ್ಲಿ ಜನಪದ ಎನ್ನುವುದು ಜ್ಞಾನಪದವಾಗಿದ್ದು, ಇಲ್ಲಿನ ಬದುಕಿನ ಒಂದೊಂದು ಹಂತವನ್ನು ಜನಪದದಲ್ಲಿ ಮಿಳಿತ ಗೊಳಿಸಲಾಗಿದೆಯೆಂದು ಸಂತ ಅನ್ನಮ್ಮ ಪದವಿ ಕಾಲೇಜಿನ ಅರ್ಥ ಶಾಸ್ತ್ರ ಉಪನ್ಯಾಸಕರಾದ ಬಿ.ಎನ್. ಶಾಂತಿಭೂಷಣ್ ಅನಿಸಿಕೆ ವ್ಯಕ್ತಪಡಿಸಿದರು. ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ವಿರಾಜಪೇಟೆ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು, ಅಮ್ಮತ್ತಿ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಪಾಲಿಬೆಟ್ಟದ ಸರ್ಕಾರಿ ಪ್ರೌಢಶಾಲೆಯ ಸಂಯುಕ್ತ ಆಶ್ರಯದಲ್ಲಿ ಶಾಲೆಯಲ್ಲಿ ಆಯೋಜಿತ ದಿ.ಡಿ.ಜೆ ಪದ್ಮನಾಭ ಮತ್ತು ಬಿ.ಆರ್. ಸಾಯಿನಾಥ್ ದತ್ತಿ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕೊಡಗು ಜಿಲ್ಲೆಯಲ್ಲಿ ಹಲವು ಬಗೆಗಳ ಜಾನಪದ ಕಲೆಗಳಿವೆ. ಕರ್ನಾಟಕ ರಾಜ್ಯದ ಜಾನಪದ ಶೈಲಿಗೆ ಹೋಲಿಸಿದರೆ ಅದು ವಿಭಿನ್ನ ಮತ್ತು ವೈಶಿಷ್ಟ ಪೂರ್ಣವಾಗಿದೆ ಎಂದರು. ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಂ.ಪಿ ಕೇಶವ ಕಾಮತ್ ಮಾತನಾಡಿ, ಕೊಡಗಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತನ್ನು ಕಟ್ಟಿ ಬೆಳೆಸಿ ಅದರ ಬೆಳವಣಿಗೆಗೆ…
ಮಡಿಕೇರಿ ಆ.23 NEWS DESK : ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ಡಾ.ಬಿ.ಆರ್.ಅಂಬೇಡ್ಕರ್ ಅನುಯಾಯಿಗಳಿಂದ ಮಹಾರಾಷ್ಟ್ರದ ನಾಗಪುರದ ದೀಕ್ಷಾಭೂಮಿ ಯಾತ್ರೆಗೆ ಅರ್ಜಿ ಆಹ್ವಾನಿಸಲಾಗಿದೆ. ಯಾತ್ರೆಗೆ ತೆರಳುವ ಅರ್ಹ ಯಾತ್ರಾರ್ಥಿಗಳು ಇಲಾಖಾ ವೆಬ್ಸೈಟ್ www.sw.kar.nic.in ನಲ್ಲಿ ಆನ್ಲೈನ್ ಮೂಲಕ ಆಗಸ್ಟ್, 31 ರವರೆಗೆ ಅರ್ಜಿ ಸಲ್ಲಿಸಬಹುದು. ದಾಖಲಾತಿಗಳನ್ನು ಉಪನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಮಡಿಕೇರಿ ಇಲ್ಲಿಗೆ ಆಗಸ್ಟ್, 31 ರ ಸಂಜೆ 5.30 ಗಂಟೆಯೊಳಗೆ ಸಲ್ಲಿಸುವುದು. ನಂತರ ಬಂದ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ. ದೀಕ್ಷಾಭೂಮಿ ನಾಗಪುರಕ್ಕೆ ಹೋಗ ಬಯಸುವ ಯಾತ್ರಾರ್ಥಿಗಳು ಉಪ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಕೊಡಗು ಜಿಲ್ಲೆ ಇವರಿಗೆ ಆಗಸ್ಟ್ 31 ರೊಳಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವುದು. ಜಿಲ್ಲಾವಾರು ನಿಗದಿತ ಗುರಿಗಿಂತ ಹೆಚ್ಚು ಅರ್ಜಿಗಳು ಸ್ವೀಕೃತಗೊಂಡಲ್ಲಿ ವಯಸ್ಸಿನ ಶ್ರೇಷ್ಠತೆ ಆಧಾರದ ಮೇಲೆ ಆಯ್ಕೆ ಮಾಡುವುದು. ಯಾತ್ರಾರ್ಥಿಗಳು ಕನಿಷ್ಠ 18 ವರ್ಷ ಮೇಲ್ಪಟ್ಟವರಾಗಿಬೇಕು. ಯಾತ್ರಾರ್ಥಿಗಳು ಬಿಪಿಎಲ್ ಕಾರ್ಡ್ ಹೊಂದಿರಬೇಕು ಯಾತ್ರಾರ್ಥಿಗಳು ಸಮಾಜ ಕಲ್ಯಾಣ ಇಲಾಖಾ ವೆಬ್ಸೈಟ್ www.sw.kar.nic.in ನಲ್ಲಿ ಆನ್ಲೈನ್…
ನಾಪೋಕ್ಲು ಆ.23 NEWS DESK : ಕಕ್ಕಬೆ ಗ್ರಾ.ಪಂ ವ್ಯಾಪ್ತಿಯ ಗ್ರಾಮಕ್ಕೆ ಒಳಪಡುವ ಅರಣ್ಯ ಹಕ್ಕು ಗ್ರಾಮ ಸಭೆಯು ಕಕ್ಕಬ್ಬೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕಟ್ಟಡದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಕುಡಿಯರ ಮುತ್ತಪ್ಪ ವಹಿಸಿ ಅರಣ್ಯ ಹಕ್ಕುಗಳ ಬಗ್ಗೆ ತಮ್ಮ ಅನಿಸಿಕೆ ವ್ಯಕ್ತಪಡಿಸಿರು. ಸಭೆಯಲ್ಲಿ ಪಂಚಾಯಿತಿ ಚುನಾಯಿತ ಪ್ರತಿನಿಧಿಗಳು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ಭಾಗಮಂಡಲ ವಲಯ ಅಧಿಕಾರಿ, ವಿರಾಜಪೇಟೆ ಹಾಗೂ ಮಾಕುಟ್ಟ ಅರಣ್ಯ ಸಿಬ್ಬಂದಿಗಳು ಮತ್ತು ಗ್ರಾಮಸ್ಥರು ಪಾಲ್ಗೊಂಡಿದ್ದರು. ವರದಿ : ದುಗ್ಗಳ ಸದಾನಂದ.






