ವಿರಾಜಪೇಟೆ ಸೆ.9 NEWS DESK : ವಿರಾಜಪೇಟೆ ಪಟ್ಟಣದ ಪುರಾತನ ಕ್ರೈಸ್ತ ದೇವಾಲಯವಾದ ಸಂತ ಅನ್ನಮ್ಮ ಚರ್ಚ್ ನಲ್ಲಿ ಮೇರಿ ಮಾತೆಯ ಜನ್ಮದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಸಂತ ಅನ್ನಮ್ಮ ಚರ್ಚ್ ನ ಪ್ರಧಾನ ಧರ್ಮಗುರುಗಳಾದ ರೆ.ಫಾ.ಜೇಮ್ಸ್ ಡೊಮಿನಿಕ್ ಹಾಗೂ ಸಂತ ಅನ್ನಮ್ನ ಪಿ.ಯು. ಕಾಲೇಜಿನ ಪ್ರಾಂಶುಪಾಲರು ಹಾಗೂ ಧರ್ಮಗುರುಗಳಾದ ರೆ.ಫಾ. ಮದಲೈ ಮುತ್ತು ಅವರ ನೇತೃತ್ವದಲ್ಲಿ ಮುಂಜಾನೆಯಿಂದಲೇ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಬೆಳಿಗ್ಗೆ ದಿವ್ಯ ಪ್ರಾರ್ಥನೆ ಹಾಗೂ ಧರ್ಮಗುರುಗಳಿಂದ ಪ್ರವಚನವು ನಡೆಯಿತು. ಗಾಯನ ವೃಂದದವರು ಪ್ರಾರ್ಥನೆಯನ್ನು ಮಾಡಿದರು. ಧರ್ಮಗುರುಗಳು ಲೋಕದಾದ್ಯಂತ ಸುಖ, ಶಾಂತಿ, ನೆಮ್ಮದಿ ನೆಲೆಸಲಿ ಎಂದು ಪ್ರಾರ್ಥಿಸಿದರು. ಚರ್ಚ್ ನ ಬಲಿಪೀಠದ ಬಳಿ ಹೂವುಗಳಿಂದ ಅಲಂಕರಿಸಲಾಗಿತ್ತು. ವಿಶೇಷ ಪ್ರಾರ್ಥನೆಯ ಬಳಿಕ ಧರ್ಮಗುರುಗಳ ಸಮ್ಮುಖದಲ್ಲಿ ಭಕ್ತರು ಚರ್ಚ್ ಅವರಣದಲ್ಲಿರುವ ಮೇರಿ ಮಾತೆಯ ಮೂರ್ತಿಗೆ ಪುಷ್ಪರ್ಚನೆ ಯನ್ನು ಮಾಡಿದರು. ಈ ಸಂದರ್ಭ ಚರ್ಚ್ ಪಾಲನಾ ಸಮಿತಿಯವರು, ಕನ್ಯಾ ಸ್ತ್ರೀಯರು, ಭಕ್ತಾದಿಗಳು ಉಪಸ್ಥಿತರಿದ್ದರು. ಹಬ್ಬದ ಪ್ರಯುಕ್ತ ನೆರೆದಿದ್ದ ಭಕ್ತರಿಗೆ ಅನ್ನದಾನ ಜರುಗಿತು. ಹಬ್ಬದ ಪ್ರಯುಕ್ತ…
ಲೇಖಕ: admin
ಕುಶಾಲನಗರ ಸೆ.9 NEWS DESK : ಕುಶಾಲನಗರದ ಸಾಹಿತ್ಯ ಹಾಗೂ ಸಾಂಸ್ಕೃತಿಕ ವೇದಿಕೆ ವತಿಯಿಂದ ನಾಡು ಕಂಡ ಹಿರಿಯ ಸಾಹಿತಿ, ಸಂಶೋಧಕ, ಪಕ್ಷಿ, ಪರಿಸರ ರಕ್ಷಕ, ಕೆ.ಪಿ.ಪೂರ್ಣಚಂದ್ರತೇಜಸ್ವಿ ಅವರ ಸ್ಮರಣೆ ಕಾರ್ಯಕ್ರಮ ಕೂಡ್ಲೂರು ಗ್ರಾಮದ ಟಿ.ಆರ್.ಶರವಣಕುಮಾರ್ ಅವರ ನಿವಾಸ “ಚಂದ್ರ ಕುಟೀರ” ದಲ್ಲಿ ನಡೆಯಿತು. ಈ ಸಂದರ್ಭ ವಿಚಾರವಾದಿ ಹಾಗೂ ವಾಗ್ಮಿ ವಿ.ಪಿ.ಶಶಿಧರ್ ಮಾತನಾಡಿ, ಕುವೆಂಪು ಕಾಲಘಟ್ಟದಲ್ಲಿ ಕನ್ನಡ ನಾಡು ಸಾಹಿತ್ಯಿಕವಾಗಿ ಹಾಗೂ ಸಾಂಸ್ಕೃತಿಕವಾಗಿ ಶ್ರೀಮಂತಗೊಂಡಷ್ಟು ಇತ್ತೀಚಿನ ದಶಕಗಳಲ್ಲಿ ಕಾಣುತ್ತಿಲ್ಲ. ಕುವೆಂಪು ಸಾಹಿತ್ಯಿಕವಾಗಿ ಗಗನದ ಎತ್ತರಕ್ಕೇರಿದಾಗ್ಯೂ ಅವರ ಪುತ್ರ ಪೂರ್ಣಚಂದ್ರ ತೇಜಸ್ವಿ ಅಪ್ಪನ ನೆರಳಿನಿಂದ ಹೊರಬಂದು ಸ್ವತಃ ತಾವೇ ಸಾಹಿತ್ಯ ರಚನೆಗಳಲ್ಲಿ ತೊಡಗಿಸಿಕೊಂಡು ಹೆಸರು ಮಾಡಿದವರು. ಸಾಹಿತ್ಯದಷ್ಟೇ ಪಕ್ಷಿಗಳ ವೈವಿಧ್ಯತೆ ಹಾಗೂ ಪರಿಸರದ ಬಗ್ಗೆಯೂ ತೇಜಸ್ವಿ ಹೆಚ್ಚಿನ ಒಲವು ಹೊಂದಿದ್ದರು. ತೇಜಸ್ವಿ ಒಡನಾಡಿಗಳು ಹಳ್ಳಿಗಳನ್ನು ತೊರೆದು ನಗರಗಳಿಗೆ ಆಕರ್ಷಿತರಾದರೆ ತೇಜಸ್ವಿ ನಗರ ತೊರೆದು ಹಳ್ಳಿಯ ಸುಂದರ ಪರಿಸರದತ್ತ ಒಲವು ಹೊಂದಿದ್ದರು. ತಮ್ಮ ತೋಟದಲ್ಲಿ ಬೆಳೆದ ಯಾವ ಬೆಳೆಗಳೂ ಆದಾಯ ತಂದು ಕೊಡದ್ದರಿಂದ…
ಮಡಿಕೇರಿ ಸೆ.9 NEWS DESK : ಕೊಡಗು ಜಿಲ್ಲೆಯಾದ್ಯಂತ ಮಾತೆ ಮರಿಯಮ್ಮನವರ ಜನ್ಮದಿನಾಚರಣೆಯನ್ನು ಕ್ರಿಶ್ಚಿಯನ್ ಬಾಂಧವರು ಸಂಭ್ರಮದಿಂದ ಆಚರಿಸಿದರು. ಜಿಲ್ಲೆಯ ವಿವಿಧ ಚರ್ಚ್ಗಳಲ್ಲಿ ಈ ಸಂಬಂಧ ವಿಶೇಷ ಪ್ರಾರ್ಥನೆ, ಬಲಿಪೂಜೆಗಳು ನಡೆದವು. ಕಳೆದ ಒಂದು ವಾರದಿಂದ ಪ್ರಾರ್ಥನೆಗಳ ಮೂಲಕ ವಿಶೇಷ ಸಿದ್ಧತೆಯಲ್ಲಿ ತೊಡಗಿಕೊಂಡಿದ್ದ ಜನಾಂಗ ಬಾಂಧವರು ಸಡಗರ ಸಂಭ್ರಮದಿಂದ ಆಚರಿಸಿದರು. ಮಡಿಕೇರಿಯ ಸಂತ ಮೈಕಲರ ದೇವಾಲಯದಲ್ಲಿ ಹಬ್ಬದ ಆಡಂಬರದ ಗಾಯನ, ಬಲಿಪೂಜೆ ನಡೆಯಿತು. ಫಾ.ದೀಪಕ್ ಬಲಿಪೂಜೆ ನೆರವೇರಿಸಿ ದಿನದ ಮಹತ್ವದ ಸಂದೇಶ ನೀಡಿದರು. ಬಲಿಪೂಜೆ ಬಳಿಕ ಮಾತೆ ಮರಿಯಮ್ಮನವರ ಪಲ್ಲಕ್ಕಿಯೊಂದಿಗೆ ಮೆರವಣಿಗೆ ನಡೆಯಿತು. ಭಕ್ತರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. ಬಳಿಕ ಮಾತೆ ಮಾರಿಯಮ್ಮನವರ ಪ್ರತಿಮೆಗೆ ಪುಷ್ಪಾರ್ಚನೆ ಮೂಲಕ ಆರಾಧಿಸಲಾಯಿತು. ಸುಂಟಿಕೊಪ್ಪದ ಸಂತ ಅಂತೋಣಿ ದೇವಾಲಯದಲ್ಲಿ ದಿವ್ಯ ಅಡಂಬರ ಬಲಿಪೂಜೆ ಹಾಗೂ ವಿಶೇಷ ಪ್ರಾರ್ಥನೆಯನ್ನು ಧರ್ಮಗುರುಗಳಾದ ಫಾಧರ್ ವಿಜಯಕುಮಾರ್ ನೇರವೇರಿಸಿದರು. ದೇವಾಲಯದಿಂದ ಮಾತೆ ಮರಿಯಮ್ಮನವರ ಮೂರ್ತಿಯನ್ನು ಮೆರವಣಿಗೆಯ ಮೂಲಕ ಸಂತ ಮೇರಿ ಶಾಲಾ ಆವರಣದಲ್ಲಿ ಇರಿಸಿ ಪುಷ್ಪನಮನ ಸಲ್ಲಿಸಲಾಯಿತು. ಹೆಚ್ಚಿನ ಸಂಖ್ಯೆಯಲ್ಲಿ ಕ್ರೈಸ್ತ ಬಾಂಧವರು…
ಬೆಂಗಳೂರು ಸೆ.9 NEWS DESK : ಕನ್ನಡದ ಹಿರಿಯ ಪತ್ರಕರ್ತ ಹಾಗೂ ಸಂಯುಕ್ತ ಕರ್ನಾಟಕ ಪತ್ರಿಕೆ ಸಂಪಾದಕ ವಸಂತ ನಾಡಿಗೇರ (59) ಹೃದಯಾಘಾತದಿಂದ ನಿಧನರಾಗಿದ್ದಾರೆ. ಮೃತರು ಪತ್ನಿ, ಪುತ್ರ, ಪುತ್ರಿ ಸೇರಿದಂತೆ ಅಪಾರ ಬಂಧುಗಳನ್ನು ಅಗಲಿದ್ದಾರೆ. ಮೂಲತಃ ಹಾವೇರಿ ಜಿಲ್ಲೆ ರಾಣಿಬೆನ್ನೂರಿನವರಾದ ನಾಡಿಗೇರ್ ಅವರು ಸಂಯುಕ್ತ ಕರ್ನಾಟಕ, ವಿಜಯ ಕರ್ನಾಟಕ, ವಿಶ್ವವಾಣಿ ಪತ್ರಿಕೆಗಳಲ್ಲಿ ಸೇವೆ ಸಲ್ಲಿಸಿದ್ದರು. ವಿಜಯ ಕರ್ನಾಟಕದಲ್ಲಿ ಅವರು ಶೀರ್ಷಿಕೆಗಳನ್ನು ಕೊಡುವುದರಲ್ಲಿ ಹಲವು ವಿನೂತನ ಪ್ರಯೋಗಗಳನ್ನು ಕೈಗೊಂಡು, ಕನ್ನಡ ಪತ್ರಿಕೋದ್ಯಮಕ್ಕೇ ಹೊಸ ಆಯಾಮ ನೀಡಿದ್ದರು. ಹಿಂದಿ ಚಿತ್ರರಂಗದ ಖ್ಯಾತ ಗಾಯಕಿ ಲತಾ ಮಂಗೇಶಕರ್ ಜೀವನ ಚರಿತ್ರೆಯನ್ನು ಕನ್ನಡದಲ್ಲಿ ಬರೆದಿದ್ದಾರೆ. ಸುಮಾರು ಮೂವತ್ತು ವರ್ಷಗಳಿಂದ ಕನ್ನಡ ಪತ್ರಿಕೋದ್ಯಮದಲ್ಲಿ ಕೆಲಸ ಮಾಡುತ್ತಿದ್ದ ವಸಂತ ನಾಡಿಗೇರ, ತಮ್ಮ ವಿಶಿಷ್ಟ ಮಾತಿನ ಶೈಲಿ ಹಾಗೂ ಪನ್ ಹೆಡ್ಡಿಂಗ್ಗಳ ಮೂಲಕವೇ ಕನ್ನಡ ಪತ್ರಿಕೋದ್ಯಮದಲ್ಲಿ ಖ್ಯಾತಿ ಪಡೆದಿದ್ದರು. ಸರಳ, ಸಜ್ಜನಿಕೆಯ ವಸಂತ ನಾಡಿಗೇರ ಅವರು ಕನ್ನಡ ಪ್ರಭ, ವಿಜಯಕರ್ನಾಟಕ. ವಿಶ್ವವಾಣಿ ನಂತರ ಎರಡು ವರ್ಷಗಳಿಂದ ಸಂಯುಕ್ತ ಕರ್ನಾಟಕ ಸಂಪಾದಕರಾಗಿ…
ಸುಂಟಿಕೊಪ್ಪ ಸೆ.9 NEWS DESK : ಸುಂಟಿಕೊಪ್ಪದ ವಿವಿಧೆಡೆ ಗೌರಿ-ಗಣೇಶೋತ್ಸವವು ಶ್ರದ್ಧಾಭಕ್ತಿಯಿಂದ ಜರುಗಿತು. ವಿಶ್ವ ಹಿಂದೂ ಪರಿಷತ್ ಮತ್ತು ಗೌರಿ ಗಣೇಶೋತ್ಸವ ಆಚರಣಾ ಸಮಿತಿ ವತಿಯಿಂದ ಶ್ರೀರಾಮ ಮಂದಿರದಲ್ಲಿ 60ನೇ ವರ್ಷದ ಸ್ವರ್ಣ ಗಣೇಶ ಮೂರ್ತಿ ಪ್ರತಿಷ್ಠಾಪನೆ ಹಾಗೂ ವಿವಿಧ ಧಾರ್ಮಿಕ ಕೈಂಕರ್ಯಗಳು ಜರುಗಿತು. ಹಿರಿಯ ಅರ್ಚಕರಾದ ದರ್ಶನ್ ಭಟ್, ಮನೋಜ್ ಭಟ್ ಅವರ ನೇತೃತ್ವದಲ್ಲಿ ಗಣಹೋಮ ಸೇರಿದಂತೆ ಮಹಾಪೂಜೆ, ಮಂಗಳಾರತಿ ಹಾಗೂ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳು ಜರುಗಿದವು. ಶ್ರೀ ಗೌರಿಗಣೇಶೋತ್ಸವ ಸಮಿತಿಯ ಅಧ್ಯಕ್ಷ ಎಸ್.ವಿಘ್ನೇಶ್, ಉಪಾಧ್ಯಕ್ಷ ಬಿ.ಕೆ.ಪ್ರಶಾಂತ್, ಎಂ.ಗಣೇಶ್, ಸಿ.ಸುನಿಲ್ಕುಮಾರ್, ಪ್ರಧಾನ ಕಾರ್ಯದರ್ಶಿ ಎಂ.ಹೆಚ್.ನಿಖಿಲ್, ಖಜಾಂಜಿ ಬಿ.ಡಿ.ಪದ್ಮನಾಭ, ಕಾರ್ಯದರ್ಶಿಗಳಾದ ಎಂ.ಪಾಂಡ್ಯನ್,ಹೃತೀಕ್, ನವೀನ್ ಸಹಕಾರ್ಯದರ್ಶಿಗಳಾದರ್.ಮಣಿ, ಪಿ.ಕೆ.ಸೂರ್ಯ ಆರ್.ಪ್ರಶಾಂತ್, ಸಂಘಟನಾ ಕಾರ್ಯದರ್ಶಿ ಎಸ್.ರಾಜೇಶ್, ಬಿ.ಡಿ.ಅಶ್ವತ್, ಹೆಚ್.ಸಿ.ಯೋಗೇಶ್, ಮಧು, ಚೇತನ್, ಶಿವು, ಪುನಿತ್, ಗುಣಶೇಖರ್, ತ್ರಿಜಲ್ ಮಹೇಶ, ಸಮಿತಿ ಸದಸ್ಯರುಗಳಾದ ಎಂ.ಮಹೇಂದ್ರ, ಎಸ್.ಶ್ರೀನಿವಾಸ್, ಹೆಚ್.ಎ.ಶಶಿ, ಆರ್.ವಿಶ್ವ, ಆರ್.ಪ್ರಜ್ವಲ್, ಹೆಚ್.ಎನ್.ಗಣೇಶ್, ವಿ.ದರಣೇಶ್, ಜೀವ, ಸಿ.ರಾಜೇಶ್, ಹೆಚ್.ಎ.ಚಂದ್ರ, ಹೆಚ್.ಎ.ದಿವಾಕರ,ಹೆಚ್.ಸಿ.ದಿನೇಶ್, ಎಸ್.ಗಣೇಶ್, ಆರ್.ಧರ್ಮೇಂದ್ರ, ಸಿದ್ದು, ಕೆ.ಕಾರ್ತಿಕ್, ಪವನ್,…
ಪುತ್ತೂರು ಸೆ.9 NEWS DESK : ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿ, ಐಇಇಇ ವಿದ್ಯಾರ್ಥಿ ಶಾಖೆ, ವೆನಿರ್ ಇಂಟನ್ರ್ಯಾಷನಲ್ ಕನ್ಸಲ್ಟೆನ್ಸಿ, ಕೆನರಾ ಬ್ಯಾಂಕ್, ಎಚ್.ಪಿ.ಸಿ.ಎಲ್ ಮತ್ತು ಇತರ ಪ್ರತಿಷ್ಠಿತ ಸಂಸ್ಥೆಗಳ ಸಹಯೋಗದೊಂದಿಗೆ ಅಂತರರಾಷ್ಟ್ರೀಯ ಸಮ್ಮೇಳನ “ದೃಷ್ಟಿ-2024” ನ್ನು ಸೆ.11 ರಂದು ಆಯೋಜಿಸಲಾಗಿದೆ. ಆನ್ಲೈನ್ ಹಾಗೂ ಆಫ್ಲೈನ್ ವಿಧಾನಗಳೆರಡರಲ್ಲೂ ನಡೆಸಲಾಗುವ ಈ ಸಮ್ಮೇಳನ ಶಿಕ್ಷಣ ತಜ್ಞರು ಮತ್ತು ಸಂಶೋಧಕರು ತಮ್ಮ ಸಂಶೋಧನಾ ಕಾರ್ಯಗಳನ್ನು ಪ್ರಸ್ತುತಪಡಿಸಲು ಪ್ರೇರೇಪಿಸುವ ಗುರಿಯನ್ನು ಹೊಂದಿದೆ. ನಿರ್ವಹಣೆ ಮತ್ತು ತಂತ್ರಜ್ಞಾನದಲ್ಲಿ ನಾವೀನ್ಯತೆ ಮತ್ತು ಸುಸ್ಥಿರ ಅಭಿವೃದ್ಧಿಗೆ ಪ್ರಗತಿಪರ ಮಾರ್ಗವನ್ನು ರೂಪಿಸಲು ಶೈಕ್ಷಣಿಕ ಮತ್ತು ಉದ್ಯಮದ ತಜ್ಞರನ್ನು ಒಗ್ಗೂಡಿಸಲು ಈ ಸಮ್ಮೇಳನದ ಮೂಲಕ ಪ್ರಯತ್ನಿಸಲಾಗುತ್ತದೆ. ನಿರ್ವಹಣೆ ಮತ್ತು ತಂತ್ರಜ್ಞಾನದ ಅಭ್ಯಾಸಗಳನ್ನು ಮುನ್ನಡೆಸಲು ಜಾಗತಿಕ ಸಹಯೋಗ ಮತ್ತು ಜ್ಞಾನ ವಿನಿಮಯವನ್ನು ಉತ್ತೇಜಿಸುವುದು, ಸಾಂಸ್ಥಿಕ ಸವಾಲುಗಳಿಗೆ ನವೀನ ಪರಿಹಾರಗಳನ್ನು ರಚಿಸಲು ಬೋಧಕವರ್ಗ ಮತ್ತು ವಿದ್ಯಾರ್ಥಿಗಳನ್ನು ಸಿದ್ಧಪಡಿಸುವುದು ಮತ್ತು ವಿವಿಧ ಕೈಗಾರಿಕೆಗಳಲ್ಲಿ ನಾವೀನ್ಯತೆಯನ್ನು ನಿರ್ವಹಿಸಲು ಉತ್ತಮ ಅಭ್ಯಾಸಗಳನ್ನು ಗುರುತಿಸುವುದು ಸಮ್ಮೇಳನದ ಉದ್ದೇಶವಾಗಿದೆ. ಅಮೆರಿಕ,…
ಮಡಿಕೇರಿ ಸೆ.9 NEWS DESK : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಪೊನ್ನಂಪೇಟೆ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು, ಪೊನ್ನಂಪೇಟೆ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಗೋಣಿಕೊಪ್ಪಲು ಪ್ರೌಢಶಾಲೆಯ ಸಂಯುಕ್ತ ಆಶ್ರಯದಲ್ಲಿ ಕಲಾವಿದ ದಿ. ವಿ.ಟಿ ಶ್ರೀನಿವಾಸ್ ನೆನಪು, ಗಾನ ಮತ್ತು ನುಡಿ ನಮನ ಕಾರ್ಯಕ್ರಮವು ಗೋಣಿಕೊಪ್ಪಲು ಪ್ರೌಢಶಾಲಾ ಸಭಾಂಗಣದಲ್ಲಿ ಸೆ.11 ರಂದು ನಡೆಯಲಿದೆ. ಅಂದು ಬೆಳಿಗ್ಗೆ 11 ಗಂಟೆಗೆ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಂ.ಪಿ ಕೇಶವ ಕಾಮತ್ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಪೊನ್ನಂಪೇಟೆಯ ನೀನಾದ ಸಂಗೀತ ನೃತ್ಯ ಸಂಸ್ಥೆಯ ಅಧ್ಯಕ್ಷರಾದ ಚೇಂದಿರ ನಿರ್ಮಲ ಬೋಪಣ್ಣ ಉದ್ಘಾಟಿಸಲಿದ್ದಾರೆ.ಮುಖ್ಯ ಅತಿಥಿಗಳಾಗಿ ಚಾನಲ್ ಕೂರ್ಗ್ ನ ಸಂಪಾದಕರಾದ ಶ್ರೀಧರ ನೆಲ್ಲಿತ್ತಾಯ, ಆಕಾಶವಾಣಿ ಕಲಾವಿದ ಬಿ.ಎ.ಗಣೇಶ್, ವಿರಾಜಪೇಟೆಯ ಸ್ವರಾರ್ಣವ ಸಂಗೀತ ಶಾಲೆಯ ವ್ಯವಸ್ಥಾಪಕರಾದ ವಿದ್ವಾನ್ ದಿಲಿ ಕುಮಾರ್ , ಅದ್ಯಾಪಕರು ಮತ್ತು ಕಲಾವಿದರಾದ ಕೆ ಚಂದ್ರಶೇಖರ್, ತಬಲ ಕಲಾವಿದರಾದ ಮುರ್ನಾಡಿನ ಚಂದ್ರು, ಪೊನ್ನಂಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ…
ಕುಶಾಲನಗರ, ಸೆ.9 NEWS DESK : ಕೊಡಗು ಜಿಲ್ಲೆಯಲ್ಲಿ ಗೌರಿ- ಗಣೇಶ ಹಬ್ಬದ ಸಂದರ್ಭದಲ್ಲಿ ಶಾಲಾ ಮಕ್ಕಳಿಂದ ತಯಾರಾಗುತ್ತಿರುವ ಪರಿಸರ ಸ್ನೇಹಿ ಅರಿಶಿಣ ಮತ್ತು ಜೇಡಿಮಣ್ಣಿನ ಗಣೇಶ ಮೂರ್ತಿ ತಯಾರಿಕೆಗೆ ಉತ್ತಮ ಸ್ಪಂದನೆ ದೊರೆತಿದೆ. ಕೊಡಗು ಜಿಲ್ಲೆಯಲ್ಲಿ ಶಾಲಾ ಶಿಕ್ಷಣ ಇಲಾಖೆ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಹಾಗೂ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಕೊಡಗು ಜಿಲ್ಲಾ ಸಂಸ್ಥೆಯ ವತಿಯಿಂದ ಶಾಲಾ-ಕಾಲೇಜಿನ ಇಕೋ ಕ್ಲಬ್/ಎನ್.ಎಸ್.ಎಸ್.ಘಟಕಗಳ ಮೂಲಕ ಮಕ್ಕಳು ಸಮುದಾಯದಲ್ಲಿ ರಾಸಾಯನಿಕ ಬಣ್ಣ ಮತ್ತು ಪಿ.ಓ.ಪಿ.ರಹಿತ ಪರಿಸರ ಸ್ನೇಹಿ ಅರಿಶಿಣ ಮತ್ತು ಜೇಡಿಮಣ್ಣಿನಿಂದ ಗಣೇಶ ಮೂರ್ತಿ ತಯಾರಿಕೆಯ ಪರಿಸರ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿತ್ತು. ಕೊಡಗು ಜಿಲ್ಲೆಯಲ್ಲಿ ಶಾಲಾ ಶಿಕ್ಷಣ ಇಲಾಖೆ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ವತಿಯಿಂದ ಶಾಲಾ-ಕಾಲೇಜಿನ ಇಕೋ ಕ್ಲಬ್/ಎನ್.ಎಸ್.ಎಸ್.ಘಟಕಗಳು, ಮೂಲಕ ಮಕ್ಕಳು & ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಜಿಲ್ಲಾ ಸಂಸ್ಥೆಯ ಸಹಯೋಗದೊಂದಿಗೆ…
ಮಡಿಕೇರಿ NEWS DESK ಸೆ.8 : ಹಾಕತ್ತೂರು- ತೊಂಭತ್ತಮನೆಯಲ್ಲಿ 25ನೇ ವರ್ಷದ ಗಣೇಶೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಯಿತು. ಶ್ರೀವಿನಾಯಕ ಸಮಿತಿಯ ವತಿಯಿಂದ ಭಜನಾ ಮಂದಿರದಲ್ಲಿ ವಿಶೇಷ ಪೂಜೆ, ಭಜನೆ ಹಾಗೂ ಉಪನ್ಯಾಸ ಕಾರ್ಯಕ್ರಮ ನಡೆಯಿತು. ಗಣಪನ ಮೂರ್ತಿಯನ್ನು ವಿದ್ಯುತ್ ಅಲಂಕೃತ ಮಂಟಪದಲ್ಲಿ ಮೆರವಣಿಗೆಯಲ್ಲಿ ಕೊಂಡೊಯ್ದು ಮುತ್ತಾರ್ಮುಡಿ ಹೊಳೆಯಲ್ಲಿ ವಿಸರ್ಜಿಸಲಾಯಿತು. ವಿನಾಯಕನಿಂದ ರಾಕ್ಷಸ ಸಂಹಾರದ ಕಥಾ ಭಾಗದ ಕಲಾಕೃತಿಯ ಚಲನವಲನ ಜನಸ್ತೋಮವನ್ನು ಆಕರ್ಷಿಸಿತು. ಶ್ರೀವಿನಾಯಕ ಸಮಿತಿಯ ಅಧ್ಯಕ್ಷ ರಮೇಶ್ ರೈ, ಕಾರ್ಯದರ್ಶಿ ಟಿ.ಬಿ.ಮಂಜುನಾಥ್. ಉತ್ಸವ ಸಮಿತಿ ಅಧ್ಯಕ್ಷ ಪಿ.ಇ.ದೇವಿಪ್ರಸಾದ್, ಸಮಿತಿ ಸದಸ್ಯರು, ಭಕ್ತರು ಹಾಗೂ ಗ್ರಾಮಸ್ಥರು ಹಾಜರಿದ್ದರು.
ಬೆಳಗಾವಿ NEWS DESK ಸೆ.8 : ಬೋಟ್ ಮಗುಚಿ ಇಬ್ಬರು ಯೋಧರು ಸಾವನ್ನಪ್ಪಿರುವ ಘಟನೆ ಭಾನುವಾರ ಮಹಾರಾಷ್ಟ್ರದ ಕೊಲ್ಲಾಪುರ ಜಿಲ್ಲೆಯ ಚಂದಘಡ ತಾಲ್ಲೂಕಿನ ಹಾಜಗೋಳಿ ಬಳಿ ನಡೆದಿದೆ. ರಾಜಸ್ಥಾನದ ವಿಜಯಕುಮಾರ್(28) ಹಾಗೂ ಪಶ್ಚಿಮ ಬಂಗಾಳದ ದಿವಾಕರ್ ರಾಯ್(26) ಮೃತಪಟ್ಟಿರುವ ಜೂನಿಯರ್ ಕಮಾಂಡೋಗಳು. ಭಾರತೀಯ ಸೇನೆಯ ಕಮಾಂಡೋಗಳ ತರಬೇತಿ ವೇಳೆ ದುರಂತ ಸಂಭವಿಸಿದೆ. ಬೋಟ್ ನಲ್ಲಿದ್ದ 6 ಮಂದಿಯಲ್ಲಿ ನಾಲ್ವರು ಈಜಿ ಜೀವ ಉಳಿಸಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.






