ಪುತ್ತೂರು ಆ.23 NEWS DESK : ಅಧ್ಯಾಪನ ಎನ್ನುವುದು ವೃತ್ತಿಯಲ್ಲ ಒಂದು ಜವಾಬ್ದಾರಿ, ಇದನ್ನು ಅರಿತುಕೊಂಡು ಕಾರ್ಯ ನಿರ್ವಹಿಸಿದರೆ ಮಾತ್ರ ಆತನೊಬ್ಬ ಉತ್ತಮ ಅಧ್ಯಾಪಕನಾಗಬಲ್ಲ ಎಂದು ಐಐಐಟಿ ಧಾರವಾಡದ ಪೂರ್ವ ರಿಜಿಸ್ಟ್ರಾರ್ ಡಾ.ಚನ್ನಪ್ಪ.ಬಿ.ಅಕ್ಕಿ ಹೇಳಿದರು. ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಕಂಪ್ಯೂಟರ್ ಸೈನ್ಸ್ ವಿಭಾಗದ ಆಶ್ರಯದಲ್ಲಿ ನಡೆಯುತ್ತಿರುವ ಅತ್ಯುತ್ತಮ ಸಂಶೋಧನಾ ವಿಧಾನಗಳನ್ನು ಅಳವಡಿಸಿಕೊಳ್ಳುವುದು ಎನ್ನುವ ವಿಷಯದ ಬಗ್ಗೆ 3 ದಿನಗಳ ಅಧ್ಯಾಪಕರ ಜ್ಞಾನಾಭಿವೃದ್ಧಿ ಕಾರ್ಯಾಗಾರಕ್ಕೆ ಚಾಲನೆ ನೀಡಿ ಮಾತಾಡಿದರು. ನಮ್ಮ ವಿದ್ಯಾರ್ಹತೆ, ಡಿಗ್ರಿಗಳು ನಮಗೆ ಅವಕಾಶಗಳನ್ನು ಒದಗಿಸಿಕೊಡುತ್ತವೆ. ಆದರೆ ಅದನ್ನು ಗಳಿಸಿ ಉಳಿಸಿಕೊಳ್ಳುವಲ್ಲಿ ನಮ್ಮ ಗುಣನಡತೆ ಮತ್ತು ವರ್ತನೆಗಳು ಮುಖ್ಯ ಪಾತ್ರವನ್ನು ವಹಿಸುತ್ತವೆ ಎಂದರು. ಒಂದು ವಿಷಯವನ್ನು ಒಪ್ಪಿಕೊಂಡ ನಂತರ ಅದನ್ನು ಪೂರ್ಣಗೊಳಿಸುವ ಜವಾಬ್ಧಾರಿ ನಮ್ಮ ಮೇಲಿರುತ್ತದೆ ಇಲ್ಲವಾದರೆ ಇತರರು ನಮ್ಮ ಮೇಲಿಟ್ಟಿರುವ ನಂಬಿಕೆ ಮತ್ತು ಭರವಸೆಗಳನ್ನು ಕಳೆದುಕೊಳ್ಳುತ್ತೇವೆ ಎಂದರು. ಸಮಾರಂಭದ ಅಧ್ಯಕ್ಷತೆ ವಹಿಸಿದ ಕಾಲೇಜು ಆಡಳಿತ ಮಂಡಳಿಯ ನಿರ್ದೇಶಕ ಶ್ರೀ.ರವಿಕೃಷ್ಣ.ಡಿ.ಕಲ್ಲಾಜೆ ಮಾತನಾಡಿ ನಿರೀಕ್ಷೆ ಮತ್ತು ವಾಸ್ತವಕ್ಕೆ…
ಲೇಖಕ: admin
ಮಡಿಕೇರಿ NEWS DESK ಆ.23 : ಕುಶಾಲನಗರದ ವಿವಿಧ ಬಡಾವಣೆಗಳು, ಕೊಪ್ಪ ಮತ್ತು ಬೈಲುಕೊಪ್ಪ ಭಾಗದಲ್ಲಿ ಭೂಕಂಪನದ ಅನುಭವವಾಗಿದೆ. ಇಂದು ಬೆಳಿಗ್ಗೆ 6.25 ಗಂಟೆ ಸುಮಾರಿಗೆ 2 ರಿಂದ 3 ಸೆಕೆಂಡ್ ಗಳ ಕಾಲ ಭಾರೀ ಶಬ್ಧ ಕೇಳಿಸಿದೆ. ಕೆಲವರು ಇದು ಗುಡುಗಿನ ಶಬ್ಧ ಎಂದು ಭಾವಿಸಿದ್ದರಾದರೂ ಶಬ್ಧದ ತೀವ್ರತೆ ಮತ್ತು ಎಲ್ಲಾ ಭಾಗದಲ್ಲೂ ಒಂದೇ ರೀತಿಯ ಅನುಭವವಾದ ಕಾರಣ ಇದು ಭೂಕಂಪನದ ಶಬ್ಧ ಎಂದು ಚರ್ಚೆಯಾಗುತ್ತಿದೆ. ವಿಜ್ಞಾನಿಗಳು ಇನ್ನಷ್ಟೇ ನಿಖರವಾದ ಮಾಹಿತಿ ನೀಡಬೇಕಾಗಿದೆ.
ಮಡಿಕೇರಿ NEWS DESK ಆ.25 : ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಮತ್ತು ದಲಿತ ಸಂಘಟನೆಗಳ ಐಕ್ಯ ಹೋರಾಟ ಚಾಲನಾ ಸಮಿತಿ ವತಿಯಿಂದ ಮಾಜಿ ಮುಖ್ಯಮಂತ್ರಿ ದಿವಂಗತ ದೇವರಾಜ ಅರಸು ಅವರ 109ನೇ ಜನ್ಮದಿನಾಚರಣೆಯನ್ನು ಶನಿವಾರಸಂತೆಯ ದೇವರಾಜ ಅರಸು ಹಿಂದುಳಿದ ವರ್ಗಗಳ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಯಿತು. ಸಂಘಟನೆಯ ಪ್ರಮುಖರು ಹಾಗೂ ಪದಾಧಿಕಾರಿಗಳು ದಿ.ದೇವರಾಜು ಅರಸು ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಗೌರವ ಅರ್ಪಿಸಿದರು. ನಂತರ ಮಾತನಾಡಿದ ಹೋರಾಟ ಚಾಲನಾ ಸಮಿತಿಯ ಜಿಲ್ಲಾಧ್ಯಕ್ಷ ಜೆ.ಆರ್.ಪಾಲಾಕ್ಷ ಅವರು ವಿದ್ಯಾರ್ಥಿಗಳಿಗೆ ದೇವರಾಜ ಅರಸು ಅವರ ಹುಟ್ಟು, ಶಿಕ್ಷಣ, ರಾಜಕೀಯ ಜೀವನ ಹಾಗೂ ಮುಖ್ಯಮಂತ್ರಿಗಳಾಗಿದ್ದಾಗ ಈ ರಾಜ್ಯಕ್ಕೆ ನೀಡಿದ ಕೊಡುಗೆಗಳ ಬಗ್ಗೆ ವಿವರಿಸಿದರು. ವಿದ್ಯಾರ್ಥಿ ನಿಲಯದ ಮೇಲ್ವಿಚಾರಕ ಆನಂದ್ ಮಾತನಾಡಿ ದೇವರಾಜ ಅರಸು ಅವರ 20 ಅಂಶಗಳ ಕಾರ್ಯಕ್ರಮ ಹಾಗೂ ಜನಪರ ಕಾರ್ಯಗಳ ಬಗ್ಗೆ ಮಾಹಿತಿ ನೀಡಿದರು. ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ತಾಲ್ಲೂಕು ಅಧ್ಯಕ್ಷ ಶಿವಾನಂದ ಮಾತನಾಡಿ, ವಿದ್ಯಾರ್ಥಿಗಳು…
ಮಡಿಕೇರಿ ಆ.23 NEWS DESK : ಕೊಡಗಿನ ಆದಿಕವಿ, ಹರದಾಸ ಅಪ್ಪನೆರವಂಡ ಅಪ್ಪಚ್ಚ ಕವಿಗಳು ಜನ್ಮತಾಳಿ ಇದೇ ಸೆಪ್ಟೆಂಬರ್ 21 ಕ್ಕೆ 157 ವರ್ಷಗಳು. ಅಪ್ಪಚ್ಚ ಕವಿಗಳ ಜನ್ಮೋತ್ಸವವನ್ನು ‘ಕೊಡವ ಸಾಹಿತ್ಯ ನಾಳ್’ ಹೆಸರಿನಲ್ಲಿ ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಆಚರಿಸಲು ತೀರ್ಮಾನಿಸಿದೆ. ಇದರ ಪ್ರಯುಕ್ತ ಹೊರ ತರಲಾಗುವ ಕವನ ಪುಸ್ತಕವನ್ನು ‘ಕೊಡವ ಕವನ ಮೊತ್ತೆ’ ಎಂದು ಹೆಸರಿಡಲಾಗಿದೆ. ಈ ‘ಕವನ ಮೊತ್ತೆ’ಯು 157 ವಿವಿಧ ಕವಿಗಳ ಭಾವನೆಯ ಕವನಗಳಿಂದ ಅಲಂಕೃತಗೊಂಡಿರುವಂತೆ ಅಕಾಡೆಮಿ ಬಯಸಿದೆ. ಕವಿಯ ಮನಸ್ಸಿಗೆ ಜಾತಿ-ಭೇದಗಳಿರದು. ಅಂತೆಯೇ, ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಅಪ್ಪಚ್ಚಕವಿಗಳ ಸ್ಮರಣಾರ್ಥ ಹೊರತರಲಾಗುವ ಕೊಡವ ಕವನ ಮೊತ್ತೆಗೆ ಯಾವುದೇ ಜಾತಿ-ಮತ-ಭೇದವಿಲ್ಲದ ಮನಸ್ಸುಗಳಿಂದ ಕೊಡವ ಭಾಷೆಯಲ್ಲಿ ಕವನಗಳನ್ನು ಆಹ್ವಾನಿಸಲಾಗಿದೆ. 20 ಗೆರೆಗಳಿಗೆ ಮೀರದ, ಪ್ರತೀ ಗೆರೆಗಳು 6-7 ಶಬ್ಧಗಳಿಗೆ ಸೀಮಿತವಾಗಿರುವ, ನಾಡು-ನುಡಿ, ಸಾಮರಸ್ಯ, ಸಹಬಾಳ್ವೆ, ಪ್ರಕೃತಿ, ಆಧುನಿಕತೆ, ಇತಿಹಾಸ, ಪುರಾಣಕ್ಕೆ ಸಂಬಂಧಿತವಾಗಿರುವ, ಯಾರದ್ದು ಭಾವನೆಗಳಿಗೆ, ಮತ-ಧರ್ಮಗಳಿಗೆ ಘಾಸಿಉಂಟು ಮಾಡದಿರುವ ಕವಿ ಮನಸ್ಸುಗಳು ತಮ್ಮ ಕವನಗಳನ್ನು ಅಕಾಡೆಮಿ…
ಮಡಿಕೇರಿ NEWS DESK ಆ.22 : ವಿದ್ಯಾರ್ಥಿ ದಿನಗಳಲ್ಲಿಯೇ ಪರಿಸರದ ಮಹತ್ವ ಮತ್ತು ಅದರ ರಕ್ಷಣೆಯ ಕುರಿತು ಅರಿವು ಬೆಳೆಸಿಕೊಳ್ಳಬೇಕು ಎಂದು ಕೊಡಗು ಜಿಲ್ಲಾ ಪಂಚಾಯತ್ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆನಂದ್ ಪ್ರಕಾಶ್ ಮೀನಾ ಅವರು ತಿಳಿಸಿದರು. ತಾಲೂಕಿನ ಗಾಳೀಬೀಡು ಗ್ರಾ.ಪಂ ನ ಚಪ್ಪಂಡ ಕೆರೆ ಅಮೃತ ಸರೋವರದಲ್ಲಿ ನಡೆದ ತಾಯಿಯ ಹೆಸರಲ್ಲಿ ಒಂದು ವೃಕ್ಷ (ಏಕ್ ಪೇಡ್ ಮಾ ಕೇ ನಾಮ್) ಅಭಿಯಾನವನ್ನು ಗಿಡ ನೆಡುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು. ಪ್ರತಿ ವ್ಯಕ್ತಿಗೂ ಇಬ್ಬರು ತಾಯಂದಿರು ಇರುತ್ತಾರೆ. ಒಬ್ಬರು ಜನ್ಮ ನೀಡಿದ ತಾಯಿ ಮತ್ತೊಬ್ಬರು ಪ್ರಕೃತಿ ಮಾತೆ. ಈ ನಿಟ್ಟಿನಲ್ಲಿ ಗಿಡ ನೆಟ್ಟು ಅದನ್ನು ರಕ್ಷಣೆ ಮಾಡುವ ಮೂಲಕ ಉತ್ತಮ ಪರಿಸರವನ್ನು ನಿರ್ಮಾಣ ಮಾಡಬೇಕು ಎಂದು ಅವರು ತಿಳಿಸಿದರು. ವಿಶ್ವ ಪರಿಸರ ದಿನದ ಅಂಗವಾಗಿ “ತಾಯಿಯ ಹೆಸರಲ್ಲಿ ಒಂದು ವೃಕ್ಷ (ಏಕ್ ಪೇಡ್ ಮಾ ಕೇ ನಾಮ್)” ಅಭಿಯಾನವನ್ನು ಹಮ್ಮಿಕೊಳ್ಳಲಾಗಿದ್ದು, ಈ ನಿಟ್ಟಿನಲ್ಲಿ ಮಹಾತ್ಮಗಾಂಧಿ ನರೇಗಾ ಯೋಜನೆಯಡಿಯಲ್ಲಿ ಜಿಲ್ಲೆಯ…
ಮಡಿಕೇರಿ NEWS DESK ಆ.22 : ಪ್ರಸ್ತುತ ಸಂದರ್ಭದಲ್ಲಿ ಮಾಧ್ಯಮ ಕ್ಷೇತ್ರಕ್ಕೂ ಸಹ ಕೃತಕ ಬುದ್ದಿಮತ್ತೆ (ಆರ್ಟಿಪೀಸಿಯಲ್ ಇಂಟಲಿಜೆಂಟ್) ಹೆಜ್ಜೆ ಇಟ್ಟಿದ್ದು, ಈ ಬಗ್ಗೆ ಅವಲೋಕನಗಳು ನಡೆಯಬೇಕಿದೆ ಎಂದು ಶಕ್ತಿ ದಿನಪತ್ರಿಕೆಯ ಪ್ರಧಾನ ಸಂಪಾದಕರಾದ ಜಿ.ರಾಜೇಂದ್ರ ಅವರು ತಿಳಿಸಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಕೊಡಗು ವಿಶ್ವವಿದ್ಯಾನಿಲಯ ಹಾಗೂ ಸ್ಥಳೀಯ ಪತ್ರಿಕಾ ಸಂಘಟನೆಗಳ ಸಹಕಾರದಲ್ಲಿ ನಗರದ ಗಾಂಧಿ ಭವನದಲ್ಲಿ ಗುರುವಾರ ನಡೆದ ‘ಪತ್ರಿಕಾ ದಿನಾಚರಣೆ’ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಕೃತಕ ಬುದ್ದಿಮತ್ತೆ ತಂತ್ರಜ್ಞಾನದಿAದ ಸುದ್ದಿ ಸಂಪಾದನೆ, ವಿಶ್ಲೇಷಣೆ, ವಿವರಣೆ, ವಿಮರ್ಶೆ ಹೀಗೆ ವಿವಿಧ ರೀತಿಯಲ್ಲಿ ಅವಲೋಕನ ಮಾಡುವಲ್ಲಿ ಕೃತಕ ಬುದ್ದಿಮತ್ತೆ ತಂತ್ರಜ್ಞಾನ ಉಪಯುಕ್ತವಾಗಿದ್ದರೂ ಸಹ, ಉದ್ಯೋಗಕ್ಕೆ ಕುತ್ತು ತರುವ ಸಾಧ್ಯತೆ ಇದೆ ಎಂದು ಅವರು ಅಭಿಪ್ರಾಯಪಟ್ಟರು. ಆಧುನಿಕ ಜಗತ್ತು ಬೆಳೆದಂತೆ ಮಾಧ್ಯಮ ಕ್ಷೇತ್ರದಲ್ಲಿ ಹೊಸ ಹೊಸ ಆವಿಷ್ಕಾರಗಳು ಬರುತ್ತಿದ್ದು, ಈ ಕುರಿತು ಸಾಧಕ ಬಾದಕಗಳ ಬಗ್ಗೆ ಅವಲೋಕಿಸಿ ಮಾಧ್ಯಮ ಕ್ಷೇತ್ರವನ್ನು ಮತ್ತಷ್ಟು ಬಲಪಡಿಸಬೇಕಿದೆ…
ಮಡಿಕೇರಿ NEWS DESK ಆ.22 : ಮಡಿಕೇರಿ ದಸರಾ ಸಮಿತಿಯ ಸಭೆ ಆ.23 ರಂದು ಮಧ್ಯಾಹ್ನ 3.30 ಗಂಟೆಗೆ ನಗರದ ಕಾವೇರಿ ಕಲಾಕ್ಷೇತ್ರದಲ್ಲಿ ನಡೆಯಲಿದೆ. ಸಭೆಯ ಅಧ್ಯಕ್ಷತೆ ವಹಿಸಲಿರುವ ನಗರಸಭೆಯ ಮಾಜಿ ಅಧ್ಯಕ್ಷೆ ಅನಿತಾ ಪೂವಯ್ಯ ಅವರು ಲೆಕ್ಕಪತ್ರ ಮಂಡಿಸಲಿದ್ದಾರೆ.
ಮಡಿಕೇರಿ NEWS DESK ಆ.22 : ಚಾಲಕನ ನಿಯಂತ್ರಣ ಕಳೆದುಕೊಂಡ ಕಾರು ರಬ್ಬರ್ ತೋಟಕ್ಕೆ ಪಲ್ಟಿಯಾಗಿ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸಂಪಾಜೆ ಗ್ರಾಮದ ದೊಡ್ಡಡ್ಕ ಬಳಿ ನಡೆದಿದೆ. ವಿರಾಜಪೇಟೆ ಪೆರುಂಬಾಡಿ ನಿವಾಸಿ, ಕೊಡಗು ಜಿಲ್ಲಾ ಖಾಸಗಿ ಬಸ್ ಕಾರ್ಮಿಕರ ಸಂಘದ ಗೌರವಾಧ್ಯಕ್ಷ ಗಣೇಶ್(64) ಎಂಬುವವರೇ ಮೃತ ದುರ್ದೈವಿಯಾಗಿದ್ದಾರೆ. ಗಣೇಶ್ ಅವರು ತಮ್ಮ ಪುತ್ರನನ್ನು ಮಂಗಳೂರಿನ ವಿಮಾನ ನಿಲ್ದಾಣಕ್ಕೆ ಬಿಟ್ಟು ಹಿಂತಿರುಗಿ ಬರುತ್ತಿದ್ದ ಸಂದರ್ಭ ಸಂಪಾಜೆ ದೊಡ್ಡಡ್ಕ ಬಳಿ ಕಾರು ಅಪಘಾತಕ್ಕೀಡಾಗಿದೆ. ಎದೆಯ ಭಾಗಕ್ಕೆ ಗಂಭೀರವಾಗಿ ಗಾಯವಾಗಿದ್ದ ಗಣೇಶ್ ಅವರನ್ನು ಸುಳ್ಯದ ಕೆವಿಜಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದರು ಎಂದು ತಿಳಿದು ಬಂದಿದೆ. ಕಾರಿನಲ್ಲಿದ್ದ ಗಣೇಶ್ ಅವರ ಪುತ್ರಿ, ಅಳಿಯ ಹಾಗೂ ಮರ್ತೋವರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಣೇಶ್ ಅವರು ವಿರಾಜಪೇಟೆ ಕರ್ನಾಟಕ ಸಂಘದ ಸದಸ್ಯರಾಗಿಯೂ ಸೇವೆ ಸಲ್ಲಿಸುತ್ತಿದ್ದರು.
ಮಡಿಕೇರಿ NEWS DESK ಆ.22 : ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರ ರಾಜಕೀಯ ಜೀವನದ ಬಗ್ಗೆ “ಯೋಗ ಮತ್ತು ಯೋಗ್ಯತೆ” ಎನ್ನುವ ಪದಗಳನ್ನು ಬಳಕೆ ಮಾಡಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆಯ ಶಾಸಕ ಎ.ಎಸ್.ಪೊನ್ನಣ್ಣ ಅವರು ನೀಡಿರುವ ಹೇಳಿಕೆ ಖಂಡನೀಯವೆಂದು ಯುವ ಜಾತ್ಯತೀತ ಜನತಾದಳದ ಕೊಡಗು ಜಿಲ್ಲಾಧ್ಯಕ್ಷ ಸಿ.ಎಲ್.ವಿಶ್ವ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಜೆಡಿಎಸ್ ವರಿಷ್ಠ ಹಾಗೂ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ “ಯೋಗ ಮತ್ತು ಯೋಗ್ಯತೆ” ಎರಡೂ ಇದ್ದ ಕಾರಣ ಎರಡು ಬಾರಿ ಈ ರಾಜ್ಯದ ಮುಖ್ಯಮಂತ್ರಿಯಾಗಿ ಉತ್ತಮ ಆಡಳಿತ ನೀಡಿದ್ದಾರೆ. ಪ್ರಸ್ತುತ ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕಾ ಮಂತ್ರಿಯಾಗಿ ರಾಷ್ಟçದ ಗಮನ ಸೆಳೆದಿದ್ದಾರೆ. ಮಾನವೀಯ ಮೌಲ್ಯಗಳನ್ನು ಹೊಂದಿರುವ ಜನಪರ ಕಾಳಜಿಯ ರಾಜಕಾರಣಿ ಎಂದೇ ಖ್ಯಾತಿ ಗಳಿಸಿರುವ ಕುಮಾರಸ್ವಾಮಿ ಅವರನ್ನು ಅವಹೇಳನ ಮಾಡುವ ನೈತಿಕತೆ ಯಾರಿಗೂ ಇಲ್ಲವೆಂದು ತಿಳಿಸಿದ್ದಾರೆ. ಕಳೆದ 35 ವರ್ಷಗಳ ಸುದೀರ್ಘ ರಾಜಕೀಯ ಜೀವನದಲ್ಲಿ ಜನರ ಹಿತವನ್ನಷ್ಟೇ ಕೇಂದ್ರೀಕರಿಸಿ ರಾಜಕಾರಣ ಮಾಡಿದ…
ಕುಶಾಲನಗರ ಆ.22 NEWS DESK : ನಾಡು ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ದಿ.ಆರ್.ಗುಂಡೂರಾವ್ ಅವರ ಪರಿಶ್ರಮದ ಫಲವಾಗಿ ಕುಶಾಲನಗರ ಅಭಿವೃದ್ದಿಯ ನಾಗಾಲೋಟದಲ್ಲಿ ಬೆಳೆಯಲು ಸಾಧ್ಯವಾಯಿತು ಎಂದು ಕುಶಾಲನಗರ ತಾಲ್ಲೂಕು ಹೋರಾಟ ಸಮಿತಿಯ ರೂವಾರಿ ವಿ.ಪಿ.ಶಶಿಧರ್ ಹೇಳಿದರು. ಕುಶಾಲನಗರದ ಸಮಾನ ಮನಸ್ಕರ ವೇದಿಕೆ ವತಿಯಿಂದ ಗುರುವಾರ ಹಮ್ಮಿಕೊಂಡಿದ್ದ ” ಗುಂಡೂರಾವ್ ಪುಣ್ಯ ಸ್ಮರಣೆ ” ಕಾರ್ಯಕ್ರಮದಲ್ಲಿ ಗುಂಡೂರಾವ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದ ಅವರು, ಕಳೆದ ಮೂರು ದಶಕಗಳ ಹಿಂದೆಯೇ ಮುಂದಿನ ಮುವತ್ತು ವರ್ಷಗಳ ದೂರದೃಷ್ಟಿ ಹೊಂದುವ ಮೂಲಕ ಸಾಕಷ್ಟು ಅಭಿವೃದ್ದಿಯ ಪರ್ವವನ್ನು ಆರಂಭಿಸಿದ ಗುಂಡೂರಾವ್ ಅವರನ್ನು ಊರು ನಿತ್ಯವೂ ಸ್ಮರಿಸುವಂತಹ ಅವರ ಪ್ರತಿಮೆಯನ್ನು ಕುಶಾಲನಗರದ ಆಯಕಟ್ಟಿನ ಸ್ಥಳದಲ್ಲಿ ಸ್ಥಾಪಿಸಲೇಬೇಕಿದೆ. ನಾವುಗಳು ಇನ್ನು ಹೇಳುವುದು ಬಿಟ್ಟು ಮಾಡಿ ತೋರಿಸುವತ್ತ ಮಗ್ನರಾಗುತ್ತೇವೆ. ಗುಂಡೂರಾವ್ ಪ್ರತಿಮೆ ಮಾಡಲು ಹೊರಟರೆ ಅವರ ಶಿಷ್ಯಂದಿರಾದ ಸಚಿವ ಕೆ.ಜೆ.ಜಾರ್ಜ್, ಕಾಂಗೈ ಧುರೀಣ ಹರಿಪ್ರಸಾದ್ ಮೊದಲಾದ ಘಟಾನುಘಟಿಗಳು ಅಗತ್ಯವಿರುವ ಎಲ್ಲಾ ಸಹಕಾರ ನೀಡಲಿದ್ದಾರೆ ಎಂದು ಶಶಿಧರ್ ಆಶಿಸಿದರು. ಕುಶಾಲನಗರದ…






