ಲೇಖಕ: admin

ಮಡಿಕೇರಿ NEWS DESK  ಸೆ.6 : ಪ್ರತಿ ವರ್ಷ ವಿಭಿನ್ನ ಪ್ರಯತ್ನಗಳ ಮೂಲಕವೇ ಗಣೇಶೋತ್ಸವದ ಆಕರ್ಷಣೆಯನ್ನು ಹೆಚ್ಚಿಸುತ್ತಿರುವ ಮಡಿಕೇರಿ ನಗರದ ಶಾಂತಿನಿಕೇತನ ಯುವಕ ಸಂಘ, ಪ್ರಸ್ತುತ ಅಯೋಧ್ಯೆಯ ಶ್ರೀರಾಮ ಮಂದಿರದ ಒಳಾಂಗಣದ ಮಾದರಿಯನ್ನು ಸೃಷ್ಟಿಸಿದೆ. ಈ ಮಾದರಿಯಲ್ಲಿ ವಿಘ್ನ ನಿವಾರಕ ಗಣಪ ಶ್ರೀರಾಮನ ರೂಪದಲ್ಲಿ ಪ್ರತಿಷ್ಠಾಪಿಸಲ್ಪಡುತ್ತಿದ್ದಾನೆ. ಶಾಂತಿನಿಕೇತನ ಯುವಕ ಸಂಘ 46 ನೇ ವರ್ಷದ ಅದ್ದೂರಿಯ ಗಣೇಶೋತ್ಸವದ ಸಂಭ್ರಮದಲ್ಲಿದೆ. ಜನವರಿ ತಿಂಗಳಿನಲ್ಲಿ ಅಯೋಧ್ಯೆಯಲ್ಲಿ ನಡೆದ ಶ್ರೀರಾಮಲಲ್ಲಾನ ಪ್ರತಿಷ್ಠಾಪನೆಯ ಕ್ಷಣವನ್ನು ಇಡೀ ಭಾರತ ಸೇರಿ ವಿಶ್ವ ಸಂಭ್ರಮಿಸಿತ್ತು. ಶ್ರೀರಾಮನಿರುವ ಪವಿತ್ರ ಮಂದಿರವನ್ನೇ ಮುಖ್ಯ ಆಕರ್ಷಣೆ ಮಾಡುವ ಸಲುವಾಗಿ ಈ ಬಾರಿ ಶಾಂತಿನಿಕೇತನದಲ್ಲಿ ಅಯೋಧ್ಯೆ ರಾಮನ ಮಾದರಿಯಲ್ಲಿ ಗಣೇಶನ ಮೂರ್ತಿ ಹಾಗೂ ರಾಮ ಮಂದಿರದ ಒಳಾಂಗಣವನ್ನು ಹೋಲುವ ಮಾದರಿಯನ್ನು ಸುಂದರವಾಗಿ ವಿನ್ಯಾಸ ಮಾಡಲಾಗಿದೆ. ಶಾಂತಿನಿಕೇತನ ಯುವಕ ಸಂಘದ ಸದಸ್ಯರೂ ಆಗಿರುವ ಕಲಾವಿದ ಪಿ.ಎ.ರವಿ ಹಾಗೂ ಸಂಗಡಿಗರು ಈ ವಿಶೇಷ ವಿನ್ಯಾಸವನ್ನು ಆಕರ್ಷಕವಾಗಿ ರಚಿಸಿದ್ದಾರೆ. ಪ್ರತಿವರ್ಷ ವಿಶಿಷ್ಟ ಪ್ರಯತ್ನಗಳಿಗೆ ಪ್ರೇರಣೆ ನೀಡುತ್ತಾ ಬಂದಿರುವ ನಾಡಿನ ಭಕ್ತರು…

Read More

ಮಡಿಕೇರಿ ಸೆ.6 NEWS DESK : ಕಾಫಿ ಮಂಡಳಿ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಒಟ್ಟಾರೆ ಕಾಫಿ ತೋಟ ಅಭಿವೃದ್ಧಿಪಡಿಸುವ ಉದ್ದೇಶದಿಂದ ವಿವಿಧ ಕಾರ್ಯಚಟುವಟಿಗೆ ಸಹಾಯಧನಕ್ಕೆ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಕಾಫಿ ಮರುನಾಟಿ, ನೀರಾವರಿ ಯೋಜನೆಯಡಿ-ಕೆರೆ/ ತೆರೆದಬಾವಿ/ ರಿಂಗ್ ಬಾವಿ/ ತುಂತುರು/ ಹನಿ ನೀರಾವರಿ, ಕಾಫಿ ಗೋಡೌನ್/ ಕಾಫಿ ಕಣ/ ಪಲ್ಪರ್ ಯುನಿಟ್/ ಮೆಕಾನಿಕಲ್ ಡ್ರೈಯರ್/ ಸೋಲಾರ್ ಟನೆಲ್ ಡ್ರೈಯರ್, ಕಾಫಿ ತೋಟದಲ್ಲಿ ಬಳಸಬಹುದಾದ ಯಂತ್ರೋಪಕರಣಗಳು ಮತ್ತಿತರಕ್ಕೆಸಹಾಯಧನ ಕಲ್ಪಿಸಲಾಗುತ್ತದೆ. ಈ ಎಲ್ಲಾ ಚಟುವಟಿಕೆಗಳನ್ನು ತಮ್ಮ ತೋಟದಲ್ಲಿ ಅಬಿವೃದ್ಧಿ ಪಡಿಸಲು ಇಚ್ಚಿಸುವ ಅರ್ಹ ಕಾಫಿ ಬೆಳೆಗಾರರಿಂದ ಅರ್ಜಿ ಸ್ವೀಕರಿಸಲಾಗುತ್ತಿದೆ. ಅರ್ಜಿ ಸಲ್ಲಿಸಲು ಸೆಪ್ಟೆಂಬರ್, 30 ಕೊನೆಯ ದಿನವಾಗಿದೆ. 25 ಹೆಕ್ಟೇರ್ (62 ಎಕರೆ) ವರೆಗಿನ ಕಾಫಿ ತೋಟ ಹೊಂದಿರುವ ಎಲ್ಲಾ ಬೆಳೆಗಾರರು ಅರ್ಜಿ ಸಲ್ಲಿಸಬಹುದು. ದಾಖಲಾತಿಗಳ ವಿವರ: ಅರ್ಜಿದಾರರ ಫೋಟೋ, ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಬುಕ್ ಜೆರಾಕ್ಸ್. 2024-25 ನೇ ಸಾಲಿನ ಪಹಣಿಗಳು/ ಆರ್‍ಟಿಸಿ, ತೋಟದ ಅಂದಾಜು ನಕ್ಷೆ, ಕ್ವೇಟೇಷನ್/ ಪ್ಲಾನ್ ಮತ್ತು…

Read More

ಮಡಿಕೇರಿ ಸೆ.6 NEWS DESK : ಸೋಮವಾರಪೇಟೆ ತಾಲ್ಲೂಕಿನ ದೊಡ್ಡಮಳ್ತೆ ಗ್ರಾಮದ ಪುಣ್ಯಕ್ಷೇತ್ರ ಹೊನ್ನಮ್ಮನ ಕೆರೆಗೆ ಗೌರಿ ಹಬ್ಬ ಪ್ರಯುಕ್ತ ಬಾಗಿನ ಅರ್ಪಿಸಿಸಲಾಯಿತು. ಶ್ರೀ ಸಿದ್ದೇಶ್ವರ ಮತ್ತು ಬಸವೇಶ್ವರ ಹಾಗೂ ತಾಯಿ ಹೊನ್ನಮ್ಮ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಶಾಸಕ ಡಾ.ಮಂತರ್ ಗೌಡ ಬಾಗಿನ ಅರ್ಪಿಸಿದರು. ಬಳಿಕ ಮಾತನಾಡಿದ ಶಾಸಕರು ಶ್ರೀ ಸಿದ್ದೇಶ್ವರ ಮತ್ತು ಶ್ರೀ ಬಸವೇಶ್ವರ ದೇವಾಲಯಕ್ಕೆ ಪೂಜೆ ಸಲ್ಲಿಸಲು ಹಾಗೂ ತಾಯಿ ಹೊನ್ನಮ್ಮ ಕೆರೆಗೆ ಬಾಗಿನ ಸಮರ್ಪಿಸಲು ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾಧಿಗಳು ಆಗಮಿಸುತ್ತಾರೆ ಎಂದು ತಿಳಿಸಿದರು. ಸುಮಾರು ಇನ್ನೂರು-ಮುನ್ನೂರು ವರ್ಷಗಳಿಂದ ತಾಯಿ ಹೊನ್ನಮ್ಮನ ಕೆರೆಗೆ ನವ ದಂಪತಿಗಳು ಆಗಮಿಸಿ ವಿಶೇಷ ಪೂಜೆ ಸಲ್ಲಿಸಿಕೊಂಡು ಬರುತ್ತಾರೆ. ಗೌರಿ ಹಬ್ಬ ಆಚರಣೆಯಿಂದ ಕುಟುಂಬದವರೆಲ್ಲರೂ ಒಂದೆಡೆ ಸೇರುವುದು ವಿಶೇಷವಾಗಿದೆ ಎಂದರು. ಈ ಬಾರಿ ಒಳ್ಳೆಯ ಮಳೆಯಾಗಿದ್ದು, ಉತ್ತಮ ಬೆಳೆಯಾಗಲಿದೆ. ಹೆಚ್ಚಿನ ಮಳೆಯಿಂದಾಗಿ ಕೆಲವು ಕಡೆ ತೊಂದರೆಯೂ ಸಹ ಆಗಿದೆ. ಆ ನಿಟ್ಟಿನಲ್ಲಿ ಎಲ್ಲರಿಗೂ ಒಳಿತಾಗಲಿ ಎಂದು ಶಾಸಕರು ನುಡಿದರು. ಗ್ಯಾರಂಟಿ ಯೋಜನೆಗಳಿಗೂ…

Read More

ಮಡಿಕೇರಿ ಸೆ.6 NEWS DESK : ಎನ್‍ಸಿಸಿ ತರಬೇತಿ ಪಡೆದವರು ಹಾಗೂ ಸೈನಿಕರು ನಿರಂತರವಾಗಿ ದೇಶಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಂಡು ತಮ್ಮ ಹಕ್ಕುಗಳಿಗಿಂತ ಕರ್ತವ್ಯಕ್ಕೆ ಪ್ರಥಮ ಪ್ರಾಶಸ್ತ್ಯ ನೀಡಿ “ಡ್ಯೂಟಿ ಫಸ್ಟ್ ರೈಟ್ಸ್ ಲೇಟರ್” ಎನ್ನುವ ರೀತಿಯಲ್ಲಿ ತಮ್ಮ ಸೇವೆಯನ್ನು ಪೂರ್ಣಗೊಳಿಸಿ ಸಾರ್ಥಕ ಜೀವನ ಸಾಗಿಸುತ್ತಾರೆ ಎಂದು 19ನೇ ಕರ್ನಾಟಕ ಬೆಟಾಲಿಯನ್ ಎನ್‍ಸಿಸಿ ಕಮಾಂಡಿಂಗ್ ಅಧಿಕಾರಿ ಕರ್ನಲ್ ರಾಜು ಮುಕಂದನ್ ತಿಳಿಸಿದ್ದಾರೆ.  ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜ್ ನಲ್ಲಿ 2024-25ನೇ ಸಾಲಿನ ಎನ್‍ಸಿಸಿಗೆ ಕೆಡೆಟ್‍ಗಳ ಆಯ್ಕೆ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಎನ್‍ಸಿಸಿ ಶಿಸ್ತು, ಏಕತೆ, ನಾಯಕತ್ವದ ಗುಣ, ಕ್ರೀಡಾಸ್ಫೂರ್ತಿ, ಜಾತ್ಯಾತೀತ ಮನೋಭಾವ, ನಿಸ್ವಾರ್ಥ ಸೇವೆ, ದೇಶ ಸೇವೆ ಹಾಗೂ ಸಮಾಜದಲ್ಲಿ ಬೆರೆಯುವುದನ್ನು ವಿದ್ಯಾರ್ಥಿಗಳಿಗೆ ಕಲಿಸಿಕೊಡುವುದಲ್ಲದೆ ಸೈನ್ಯದ ಅವಶ್ಯಕತೆಗಳಿಗೆ ಅನುಗುಣವಾಗಿ ತರಬೇತಿಯನ್ನು ನೀಡುತ್ತದೆ ಎಂದರು. ಭಾರತ ದೇಶವು ಭಾಗಹಿಸಿದ ಯುದ್ಧಗಳಲ್ಲಿ (ಇಂಡೋ-ಪಾಕ್ ಯುದ್ಧ) ಎನ್‍ಸಿಸಿ ಯು ಸೈನ್ಯಕ್ಕೆ ಸಹಕಾರಿಯಾಗಿ ಕೆಲಸ ನಿರ್ವಹಿಸಿದೆ. ಭಾರತದ ಸೈನಿಕ ಪಡೆಯು ಪ್ರಪಂಚದ ಮೂರನೇ ಅತೀ ದೊಡ್ಡ…

Read More

ಕುಶಾಲನಗರ ಸೆ.6 NEWS DESK : ಕೊಡಗು ಶಾಲಾ ಶಿಕ್ಷಣ ಇಲಾಖೆ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಕೊಡಗು ಪ್ರಾದೇಶಿಕ ಕಛೇರಿ, ಮಡಿಕೇರಿ, ಭಾರತ್ ಸ್ಕೌಟ್ಸ್, ಗೈಡ್ಸ್ ನ ಕೊಡಗು ಜಿಲ್ಲಾ ಸಂಸ್ಥೆ ಯ ವತಿಯಿಂದ ಕುಶಾಲನಗರ ಪಟ್ಟಣದ ಬಾಲಕಿಯರ ಸರ್ಕಾರಿ ಪ್ರೌಢಶಾಲೆಯಲ್ಲಿ ಶಾಲೆಯ ಕಾವೇರಿ ಇಕೋ ಕ್ಲಬ್ ಹಾಗೂ ಪಿ.ಎಂ.ಶ್ರೀ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಇಕೋ ಕ್ಲಬ್ ಹಾಗೂ ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯ ಎನ್.ಎಸ್.ಎಸ್.ಘಟಕದ ಸಂಯುಕ್ತಾಶ್ರಯದಲ್ಲಿ  ಗೋ ಗ್ರೀನ್ ಅಭಿಯಾನದಡಿ ಪರಿಸರ ಸ್ನೇಹಿ ಮಣ್ಣಿನ ಗಣೇಶ ಮೂರ್ತಿ ಬಳಕೆಗೆ ಕುರಿತು ಜನಜಾಗೃತಿ ನಡೆಯಿತು. ಪರಿಸರ ಸ್ನೇಹಿ ಗಣೇಶೋತ್ಸವ ಆಚರಣೆಯ ಮಹತ್ವ ಕುರಿತು ಮಾಹಿತಿ ನೀಡಿದ ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲಾ ಮುಖ್ಯೋಪಾಧ್ಯಾಯ ಹಾಗೂ ಪರಿಸರ ಕಾರ್ಯಕ್ರಮಗಳ ಸಂಘಟಕ ಟಿ.ಜಿ.ಪ್ರೇಮಕುಮಾರ್ , ಈ ಗಣೇಶೋತ್ಸವದಲ್ಲಿ ಬಣ್ಣದ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸುವ ಮೂಲಕ ನಾವು ಪರಿಸರ ಮಾಲಿನ್ಯಕ್ಕೆ ನೇರವಾಗಿ ಕಾರಣರಾಗುತ್ತಿದ್ದೇವೆ. ಆಧುನಿಕತೆಯ ಭರಾಟೆ ನಡುವೆ ಮಾಲಿನ್ಯಕಾರಿ ಪಿಓಪಿ ಹಾಗೂ ರಾಸಾಯನಿಕ ಬಣ್ದ…

Read More

ಮಡಿಕೇರಿ ಸೆ.6 NEWS DESK : ಭಾಗಮಂಡಲ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರ ಕೊರತೆ ಇದ್ದು, ರೋಗಿಗಳು ಚಿಕಿತ್ಸೆಗಾಗಿ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ತಕ್ಷಣ ನುರಿತ ವೈದ್ಯರನ್ನು ನೇಮಕ ಮಾಡದಿದ್ದಲ್ಲಿ ಗ್ರಾಮಸ್ಥರ ಸಹಕಾರದೊಂದಿಗೆ ಜಿಲ್ಲಾಧಿಕಾರಿಗಳ ಕಚೇರಿ ಎದುರು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷ ಪ್ರತಿಭಟನೆ ನಡೆಸಲಿದೆ ಎಂದು ಪಕ್ಷದ ಅಯ್ಯಂಗೇರಿ ಘಟಕ ಎಚ್ಚರಿಕೆ ನೀಡಿದೆ. ನಗರದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅಯ್ಯಂಗೇರಿ ಘಟಕದ ಅಧ್ಯಕ್ಷ ಮುನೀರ್ ಭಾಗಮಂಡಲ ಆಸ್ಪತ್ರೆಯನ್ನು ವೈದ್ಯರು ಮತ್ತು ಮೂಲಭೂತ ಸೌಲಭ್ಯಗಳ ಕೊರತೆ ಕಾಡುತ್ತಿದೆ. ಭಾಗಮಂಡಲ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಜನತೆ ಇದೇ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಅಲಂಭಿಸಿದ್ದು, ಕಳೆದ 2 ವರ್ಷಗಳಿಂದ ವೈದ್ಯರಿಲ್ಲದೆ ರೋಗಿಗಳು ಕಷ್ಟ ಅನುಭವಿಸುತ್ತಿದ್ದಾರೆ. ತುರ್ತು ಚಿಕಿತ್ಸಾ ವಿಭಾಗವನ್ನು ಇಬ್ಬರು ಶುಶ್ರೂಷಕಿಯರು ನಿಭಾಯಿಸುತ್ತಿದ್ದಾರೆ. ವೈದ್ಯರ ಕೊರತೆ ಬಗ್ಗೆ ಶಾಸಕ ಎ.ಎಸ್.ಪೊನ್ನಣ್ಣ ಅವರಿಗೆ ಮನವಿ ಸಲ್ಲಿಸಿದರೂ ಯಾವುದೇ ಸ್ಪಂದನೆ ದೊರೆತ್ತಿಲ್ಲ ಎಂದು ಆರೋಪಿಸಿದರು. ಭಾಗಮಂಡಲ ಪುಣ್ಯ ಕ್ಷೇತ್ರವಾಗಿದ್ದು, ದೇಶದ ವಿವಿಧ ಕಡೆಗಳಿಂದ ಭಕ್ತರು ಹಾಗೂ ಪ್ರವಾಸಿಗರು…

Read More

ಮಡಿಕೇರಿ ಸೆ.6 NEWS DESK : ಹಾಕತ್ತೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ 2023-24ನೇ ಸಾಲಿಗೆ ರೂ.41.84 ಲಕ್ಷ ನಿವ್ವಳ ಲಾಭ ಗಳಿಸಿದ್ದು, ಸದಸ್ಯರಿಗೆ ಶೇ.11 ರಷ್ಟು ಡಿವಿಡೆಂಡ್ ನೀಡಲು ಮಹಾಸಭೆಯ ಒಪ್ಪಿಗೆಗೆ ಮಂಡಿಸಲು ತೀರ್ಮಾನಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಮಂದ್ರೀರ ಎನ್.ತೇಜಸ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಾಕತ್ತೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು ಬಿಳಿಗೇರಿ, ಹಾಕತ್ತೂರು, ಕಗ್ಗೋಡ್ಲು ಮತ್ತು ಮೇಕೇರಿ ಗ್ರಾಮಗಳ ವ್ಯಾಪ್ತಿ ಹೊಂದಿದ್ದು, 1333 ಸದಸ್ಯರನ್ನು ಒಳಗೊಂಡು ರೂ.1.69 ಕೋಟಿ ಪಾಲು ಬಂಡವಾಳ ಹಾಗೂ ರೂ.1.87 ಕೋಟಿ ಕ್ಷೇಮ ನಿಧಿಯನ್ನು, ರೂ.1.03 ಕೋಟಿ ಇತರೆ ನಿಧಿಯನ್ನು, ರೂ.14.02 ಕೋಟಿ ಠೇವಣಿಯನ್ನು ಸಂಗ್ರಹಿಸಿದೆ ಎಂದರು. ಸಂಘದ ವತಿಯಿಂದ ಸದಸ್ಯರಿಗೆ ವಿವಿಧ ರೀತಿಯ ಸಾಲವನ್ನು ವಿತರಿಸಲಾಗಿದ್ದು, 2023-24ನೇ ಸಾಲಿಗೆ ಕೆ.ಸಿ.ಸಿ.ಸಾಲ, ಮಧ್ಯಮಾವಧಿ ಸಾಲ, ಜಾಮೀನು ಸಾಲ, ವಾಹನ ಸಾಲ, ಚಿನ್ನಾಭರಣ ಸಾಲ ಹಾಗೂ ಸ್ವಸಹಾಯ ಸಾಲ ಸೇರಿದಂತೆ ಒಟ್ಟು ರೂ.17.41 ಕೋಟಿಯಷ್ಟು ಸಾಲವನ್ನು ಸದಸ್ಯರಿಗೆ ವಿತರಿಸಲಾಗಿದೆ.…

Read More

ಮಡಿಕೇರಿ ಸೆ.6 NEWS DESK : ಕೊಡಗು ಜಿಲ್ಲೆಯ ವಿವಿಧೆಡೆ ನಡೆಯುತ್ತಿರುವ ಬೃಹತ್ ಭೂಪರಿವರ್ತನೆ ಮತ್ತು ಭೂವಿಲೇವಾರಿಯನ್ನು ಸ್ಥಗಿತಗೊಳಿಸಬೇಕೆಂದು ಒತ್ತಾಯಿಸಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ವತಿಯಿಂದ ಸೆ.9 ನಾಪೋಕ್ಲು ಮತ್ತು ಸೆ.10ರಂದು ಚೇರಂಬಾಣೆಯಲ್ಲಿ ಜನಜಾಗೃತಿ ಮಾನವ ಸರಪಳಿ ಕಾರ್ಯಕ್ರಮ ನಡೆಯಲಿದೆ ಎಂದು ಸಿಎನ್‍ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ನಾಪೋಕ್ಲು ಮತ್ತು ಚೇರಂಬಾಣೆಯಲ್ಲಿ ಬೆಳಿಗ್ಗೆ 10.30 ಗಂಟೆಗೆ ಮಾನವ ಸರಪಳಿ ನಿರ್ಮಿಸಿ ಹಕ್ಕೊತ್ತಾಯ ಮಂಡಿಸಲಾಗುವುದು. ಮಾನವ ಸರಪಳಿ ಜನಜಾಗೃತಿ ಕಾರ್ಯಕ್ರಮದಲ್ಲಿ ಸರ್ವ ಕೊಡವರು ಪಾಲ್ಗೊಳ್ಳುವ ಮೂಲಕ ಬೃಹತ್ ಭೂಪರಿವರ್ತನೆ ಮತ್ತು ಭೂವಿಲೇವಾರಿಯ ವಿರುದ್ಧ ಸಿಎನ್‍ಸಿ ನಡೆಸುತ್ತಿರುವ ಹೋರಾಟಕ್ಕೆ ಕೈಜೋಡಿಸಬೇಕೆಂದು ಮನವಿ ಮಾಡಿದ್ದಾರೆ. ಆದಿಮಸಂಜಾತ ಕೊಡವರ ಭೂಮಿಯ ಹಕ್ಕನ್ನು ರಕ್ಷಿಸಲು ಬೃಹತ್ ಭೂಪರಿವರ್ತನೆ ಮತ್ತು ಭೂವಿಲೇವಾರಿ ವಿರುದ್ಧ ಹೋರಾಟ ಅನಿವಾರ್ಯವಾಗಿದೆ. “ಕೊಡವ ಲ್ಯಾಂಡ್” ಸ್ವಯಂ ನಿರ್ಣಯದ ಭೂರಾಜಕೀಯ ಸ್ವಾಯತ್ತತೆ ಘೋಷಣೆ ಮತ್ತು ಕೊಡವರಿಗೆ ಎಸ್‍ಟಿ ಟ್ಯಾಗ್ ನೀಡುವುದು ಅಗತ್ಯವಾಗಿದೆ. ಇದಕ್ಕಾಗಿ ವ್ಯಾಪಕ ಜನಜಾಗೃತಿ ಮತ್ತು ಜಿಲ್ಲೆಯಾದ್ಯಂತ ಶಾಂತಿಯುತ…

Read More

ವಿರಾಜಪೇಟೆ ಸೆ.6 NEWS DESK : ವಿರಾಜಪೇಟೆ ತಾಲ್ಲೂಕಿನ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ವತಿಯಿಂದ ಮೂರ್ನಾಡು ಕಾರ್ಯಕ್ಷೇತ್ರದ ಬೋಪಣ್ಣ ಅವರ ಗದ್ದೆಯಲ್ಲಿ ಯಂತ್ರದ ಮೂಲಕ ಭತ್ತದ ನಾಟಿಯ ಪ್ರಾತ್ಯಕ್ಷಿಕೆ ತರಬೇತಿ ಕಾರ್ಯಕ್ರಮ ನಡೆಯಿತು. ಗದ್ದೆಯ ಮಾಲೀಕರಾದ ಬೋಪಣ್ಣ ಯಂತ್ರದ ನಾಟಿಗೆ ಚಾಲನೆಯನ್ನು ನೀಡಿ ಮಾತನಾಡಿ, ಭತ್ತದ ನಾಟಿಯ ತರಬೇತಿ ಕಾರ್ಯಕ್ರಮವು ಜನರಿಗೆ ತುಂಬಾ ಸಹಕಾರಿಯಾಗಿದೆ. ಹೊಸ ಆವಿಸ್ಕಾರಗಳು ಕೃಷಿ ಕ್ಷೇತ್ರದಲ್ಲಿ ನಡೆದು ಉತ್ಪಾದಕತೆ ಹೆಚ್ಚಿಸುವ ಗುರಿಯನ್ನು ರೈತರು ಹೊಂದಬೇಕು ಎಂದರು. ಶ್ರೀ ಸಂಘದ ಮೇಲ್ವಿಚಾರಕ  ಹರೀಶ್ ಮಾತನಾಡಿ, ಪ್ರಸ್ತುತ ವರ್ಷ ವಿರಾಜಪೇಟೆ ತಾಲೂಕಿನ ರೈತರಿಗೆ ಉಪಯೋಗವಾಗುವ ದೃಷ್ಟಿಯಲ್ಲಿ ಅಮ್ಮತ್ತಿಯಲ್ಲಿ ನಾಟಿ ಯಂತ್ರ ಬ್ಯಾಂಕ್ ನ್ನು ತೆರೆದಿದ್ದು, ಯಂತ್ರಗಳ ಅನುಷ್ಠಾನ ಬಳಕೆಯನ್ನು ವಿವಿಧೆಡೆ ಮಾಡಲಾಗುತ್ತಿದೆ ಎಂದರು.  ಭತ್ತದ ನರ್ಸರಿ ವಿಧಾನ, ಭತ್ತದ ತಳಿಗಳು, ಮಣ್ಣಿನ ಸಂಗ್ರಹ ಟ್ರೇ ಗಳ ಬಳಕೆಯ ವಿಧಾನಗಳ ಬಗ್ಗೆ ಮಾಹಿತಿ ನೀಡಿದರು. ಈ ಸಂದರ್ಭ  ಮೂರ್ನಾಡು ವಲಯದ ಸಂಘದ ಮೇಲ್ವಿಚಾರಕ ಪ್ರತಾಪ್,…

Read More

ಮಡಿಕೇರಿ ಸೆ.6 NEWS DESK : ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕೊಡಗು ಜಿಲ್ಲಾ ಘಟಕದ ವತಿಯಿಂದ ಜಿಲ್ಲೆಯ ಪದವಿ ಪೂರ್ವ ಮತ್ತು ಪದವಿ ವಿದ್ಯಾರ್ಥಿಗಳಿಗೆ ಸ್ವಾತಂತ್ರ್ಯೋತ್ಸವದ ಅಂಗವಾಗಿ ಹಮ್ಮಿಕೊಂಡಿದ್ದ “ಭಾರತೀಯತೆಯ ಹಿರಿಮೆ- ಗರಿಮೆ” ವಿಷಯದ ಕುರಿತಾದ ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆಯ ಫಲಿತಾಂಶ ಪ್ರಕಟಗೊಂಡಿದೆ. ಮಡಿಕೇರಿಯ ಫೀಲ್ಡ್ ಮಾರ್ಷಲ್ ಕೆ.ಎಂ ಕಾರ್ಯಪ್ಪ ಕಾಲೇಜಿನ ಹೆಚ್.ಎನ್.ಶೃತಿ ಪ್ರಥಮ, ಮದೆನಾಡಿನ ಮದೆಮಹೇಶ್ವರ ಪದವಿ ಪೂರ್ವ ಕಾಲೇಜಿನ ಮೇಘಶ್ರೀ ದ್ವಿತೀಯ ಹಾಗೂ ಸೋಮವಾರಪೇಟೆಯ ಸಂತ ಜೋಸೆಫರ ಪದವಿ ಕಾಲೇಜಿನ ಎ.ಪಿ.ಮೋನಿಷಾ ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ. ಮಡಿಕೇರಿ ಮಹಿಳಾ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ಸಹ ಪ್ರಾದ್ಯಾಪಕಿಯಾಗಿರುವ ಹೆಚ್.ಪಿ.ನಿರ್ಮಲಾ ತೀರ್ಪುಗಾರಿಕೆಯಲ್ಲಿ ಈ ಆಯ್ಕೆ ನಡೆಸಲಾಗಿದೆ.  ಕೊಡಗಿನ ಎಲ್ಲಾ ಕಾಲೇಜಿನ ವಿದ್ಯಾರ್ಥಿಗಳ ಪಾಲ್ಗೊಳ್ಳುವಿಕೆ ಈ ಪ್ರಬಂಧ ಸ್ಪರ್ಧೆಯಲ್ಲಿ ವಿಶೇಷವಾಗಿತ್ತು. ಸ್ಪರ್ಧೆಯನ್ನು ಅ.ಭಾ.ಸಾ.ಪ ನ ಮಾಧ್ಯಮ ಪ್ರಮುಖರಾದ ವಿನೋದ್ ಮೂಡಗದ್ದೆ ನಿರ್ವಹಿಸಿರುವುದಾಗಿ ಅ.ಭಾ.ಸಾ ಪರಿಷದ್  ಜಿಲ್ಲಾ ಸಹ ಕಾರ್ಯದರ್ಶಿ ಚಂದನ್ ನಂದರಬೆಟ್ಟು ತಿಳಿಸಿದರು.

Read More