ಮಡಿಕೇರಿ ಆ.22 NEWS DESK : ಕೊಡವಾಮೆರ ಕೊಂಡಾಟ ಸಂಘಟನೆಗೆ ಐದನೇ ವಾರ್ಷಿಕೋತ್ಸವದ ಅಂಗವಾಗಿ ಆ.23 ರಂದು ಕವಿವೊರ್ಮೆ ನಡೆಯಲಿದೆ. ಸಂಜೆ 7 ಗಂಟೆಗೆ ಗೂಗಲ್ ಮೀಟ್ ವೆಬಿನಾರ್ನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಸಂಘಟನೆಯ ಸಂಸ್ಥಾಪಕ ಹಾಗೂ ಅಧ್ಯಕ್ಷ ಚಾಮೆರ ದಿನೇಶ್ ಬೆಳ್ಯಪ್ಪ ಅವರ ಅಧ್ಯಕ್ಷತೆ ವಹಿಸಲಿದ್ದು, ಮುಖ್ಯ ಅಥಿತಿಗಳಾಗಿ, ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಹಾಗೂ ಪೂಮಾಲೆ ಪತ್ರಿಕೆ ಸಂಪಾದಕ ಅಜ್ಜಿನಿಕಂಡ ಮಹೇಶ್ ನಾಚಯ್ಯ, ಭೂಸೇನಾಧಿಕಾರಿ ಹಾಗೂ ಕೊಡವಾಮೆರ ಕೊಂಡಾಟ ಸಂಘಟನೆಯ ಸದಸ್ಯ ಕ್ಯಾಟ್ಪನ್ ಬಿದ್ದಂಡ ನಾಣಿ ದೇವಯ್ಯ, ಆಕಾಶವಾಣಿಯ ನಿವೃತ್ತ ಉದ್ಘೋಷಕಿ ಮತ್ತು ಕೊಡವಾಮೆರ ಕೊಂಡಾಟ ಸಂಘಟನೆಯ ಸದಸ್ಯೆ, ಕೂಪದಿರ ಶಾರದನಂಜಪ್ಪ ಅವರುಗಳು ಪಾಲ್ಗೊಳ್ಳಲಿದ್ದಾರೆ. ಕವಿಗೋಷ್ಠಿಯಲ್ಲಿ ಹಿರಿಯ ಕವಿಗಳಾದ, ನೆರವಂಡ ಉಮೇಶ್, ಉಳುವಂಗಡ ಕಾವೇರಿ ಉದಯ, ಬಿ.ಜಿ.ಅನಂತಶಯನ, ಡಾ. ಮೇಚಿರ ಶುಭಾಶ್ ನಾಣಯ್ಯ, ಮಹದೇವಸ್ವಾಮಿ ಮೈಸೂರು, ಪುಟ್ಟಿಚಂಡ ಡಾನ್ ದೇವಯ್ಯ, ಚಂಗಚಂಡ ರಶ್ಮಿ ನಿತಿನ್, ಕರವಂಡ ಸೀಮಾ ಗಣಪತಿ, ಕುಂಞಿರ ಗಿರೀಶ್ ಭೀಮಯ್ಯ, ಚಾಮೆರ ನಕ್ಷಾದೇಚಮ್ಮ, ಉಳುವಂಗಡ ಲೋಹಿತ್…
ಲೇಖಕ: admin
ಮಡಿಕೇರಿ ಆ.22 NEWS DESK : ರಾಜ್ಯದ ಭೂಪಟದಲ್ಲಿ ತನ್ನದೇ ಆದ ಜೀವವೈವಿಧ್ಯತೆಯನ್ನು ಹೊಂದಿರುವ ಕೊಡಗು ಜಿಲ್ಲೆಗೆ ಪ್ರತ್ಯೇಕವಾದ ವನ್ಯಜೀವಿ ಮತ್ತು ಭೂ ಹಿಡುವಳಿ ದಾಖಲೀಕರಣಕ್ಕೆ ಪೂರಕವಾಗಿ ಪ್ರತ್ಯೇಕ ಯೋಜನೆಯೊಂದನ್ನು ರೂಪಿಸುವಂತೆ, ರಾಜ್ಯ ವನ್ಯಜೀವಿ ಮಂಡಳಿಯ ಸದಸ್ಯ ಮೇರಿಯಂಡ ಸಂಕೇತ್ ಪೂವಯ್ಯ ಅವರಿಗೆ ಕೊಡವಾಮೆರ ಕೊಂಡಾ ಸಂಘಟನೆ ಮನವಿ ಸಲ್ಲಿಸಿದೆ. ಸಂಕೇತ್ ಪೂವಯ್ಯ ಅವರ ವಿರಾಜಪೇಟೆ ನಿವಾಸದಲ್ಲಿ ಕೊಡವಾಮೆರ ಕೊಂಡಾಟ ಸಂಘಟನೆಯ ಅದ್ಯಕ್ಷ ಚಾಮೆರ ದಿನೇಶ್ ಬೆಳ್ಯಪ್ಪ ಅವರ ನೇತೃತ್ವದಲ್ಲಿ ಸಂಕೇತ್ ಪೂವಯ್ಯ ಅವರನ್ನು ಪುಸ್ತಕ ನೀಡುವ ಮೂಲಕ ಅಭಿನಂದಿಸಿ ಮನವಿ ಸಲ್ಲಿಸಲಾಯಿತು. ಮನವಿ ಸ್ವೀಕರಿಸಿದ ಸಂಕೇತ್ ಪೂವಯ್ಯ ಅವರು, ಸಂಘಟನೆಯೊಂದಿಗೆ ಚರ್ಚೆ ನಡೆಸಿದರು. ಸಭೆಯಲ್ಲಿ ಮಾತನಾಡಿದ ಸಂಘಟನೆಯ ಅಧ್ಯಕ್ಷ ಚಾಮೆರ ದಿನೇಶ್ ಬೆಳ್ಯಪ್ಪ, ಕರ್ನಾಟಕದಲ್ಲಿ ವಿಭಿನ್ನ ಮೇಲ್ಮೈ ಲಕ್ಷಣ ಹೊಂದಿರುವ ಕೊಡಗು, ಪ್ರಾಕೃತಿಕವಾಗಿ, ಬೌಗೋಳಿಕವಾಗಿಯೂ ಇತರ ಎಲ್ಲಾ ಜಿಲ್ಲೆಗಳಿಗಿಂತಲೂ ಭಿನ್ನ. ಹಾಗೇ ಇಲ್ಲಿಯ ಜನ, ಜಾನುವಾರು, ಕೃಷಿ, ತೋಟಗಾರಿಕೆ ಮತ್ತು ವನ್ಯ ಜೀವ ಸಂಕುಲವೂ ವಿಭಿನ್ನವೇ. ಕೊಡಗಿನ ಮೂಲ ನಿವಾಸಿಗಳು…
ಶ್ರೀಮಂಗಲ ಆ.22 NEWS DESK : ಪೊನ್ನಂಪೇಟೆ ತಾಲ್ಲೂಕು ಬಾಡಗರಕೇರಿ ಮೃತ್ಯುಂಜಯ ದೇವಾಲಯದ ಹೊಸ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಚೋನಿರ ಸುಬ್ರಮಣಿ, ಕಾರ್ಯದರ್ಶಿಯಾಗಿ ಬಲ್ಯಮೀದೇರಿರ ಸಂಪತ್ ಆಯ್ಕೆಯಾಗಿದ್ದಾರೆ. ಈ ಬಗ್ಗೆ ಆಡಳಿತ ಮಂಡಳಿ ಪತ್ರಿಕೆ ಪ್ರಕಟಣೆ ನೀಡಿದ್ದು, ಉಪಾಧ್ಯಕ್ಷರಾಗಿ ಕಾಯಪಂಡ ಸ್ಟಾಲಿನ್ ಗಣಪತಿ, ಖಜಾಂಚಿಯಾಗಿ ಬಲ್ಯಮೀದೇರಿರ ಚೇತನ್ ಸೋಮಣ್ಣ, ಸದಸ್ಯರಾಗಿ ಬಲ್ಯಮೀದೇರಿರ ರನ್ನು, ಕಾಯಪಂಡ ಸುನಿಲ್ ಚಂಗಪ್ಪ, ಕಾಯಪಂಡ, ಸುರೇಂದ್ರ, ಕಾಯಪಂಡ ಕಾವೇರಪ್ಪ, ಅಮ್ಮತ್ತಿರ ಪರಮೇಶ್ವರ್, ಮಲ್ಲೇಂಗಡ ನರೇಂದ್ರ, ಅಣ್ಣೀರ ಮಂಜುನಾಥ್, ಮೀದೇರಿರ ಗಣಪತಿ, ಅಣ್ಣೀರ ಲೋಕೇಶ್ ನೇಮಕಗೊಂಡಿದ್ದಾರೆ.
ಮಡಿಕೇರಿ ಆ.22 NEWS DESK : ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಶ್ರೀಕೃಷ್ಣ ಗೌಂಡರ್ ಮಂಟಪದಲ್ಲಿ ನಡೆದ 17ನೇ ಐಎಂಜಿಕೆಎ ರಾಷ್ಟ್ರೀಯ ಮುಕ್ತ ಕರಾಟೆ ಚಾಂಪಿಯನ್ಶಿಪ್ನಲ್ಲಿ ಕೊಡಗಿನ ವಿ.ವೈ.ಮಿಲನ್ ಕುಮಾರ್ ಭಾಗವಹಿಸಿ ಚಿನ್ನ, ಬೆಳ್ಳಿ ಮತ್ತು ಕಂಚಿನ ಪದಕವನ್ನು ಗೆದ್ದುಕೊಂಡಿದ್ದಾನೆ. ಟೀಮ್ ಕಥಾ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ಚಿನ್ನ, ಕಥಾ ವಿಭಾಗದಲ್ಲಿ ದ್ವಿತೀಯ ಸ್ಥಾನದೊಂದಿಗೆ ಬೆಳ್ಳಿ ಹಾಗೂ ಕುಮಿತೆ ವಿಭಾಗದಲ್ಲಿ ತೃತೀಯ ಸ್ಥಾನ ಗಳಿಸಿ ಕಂಚಿನ ಪದಕವನ್ನು ತನ್ನದಾಗಿಸಿಕೊಂಡಿದ್ದಾನೆ. ಮಡಿಕೇರಿಯ ಶಾಸ್ತ್ರೀ ನಗರದ ನಿವಾಸಿ ವಿ.ಆರ್.ಯೋಗೇಶ್ ಕುಮಾರ್ ಹಾಗೂ ರೇಖಾ ದಂಪತಿಯ ಪುತ್ರ ವಿ.ವೈ.ಮಿಲನ್ ಕುಮಾರ್ ಮಡಿಕೇರಿಯ ಸಂತಮೈಕಲರ ಶಾಲೆಯಲ್ಲಿ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾನೆ. ಈತ ವಿರಾಜಪೇಟೆಯ ಕರಾಟೆ ಶಿಕ್ಷಕ ಸೆನ್ಸಾಯಿ ಎಂ.ಬಿ.ಚಂದ್ರನ್ ಅವರಲ್ಲಿ ತರಬೇತಿ ಪಡೆಯುತ್ತಿದ್ದಾನೆ.
ಮಡಿಕೇರಿ ಆ.22 NEWS DESK : ಮುಡಾ ಪ್ರಕರಣ ಮತ್ತು ವಾಲ್ಮೀಕಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ಕೊಡಗು ಜಿಲ್ಲಾ ಬಿಜೆಪಿ ನಗರದಲ್ಲಿ ಮಾನವ ಸರಪಳಿ ಸಹಿತ ಪ್ರತಿಭಟನೆ ನಡೆಸಿತು. ನಗರದ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಬಿಜೆಪಿ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಮಾನವ ಸರಪಳಿ ರಚಿಸಿ, ರಸ್ತೆ ತಡೆ ನಡೆಸಿ ಅಸಮಾಧಾನ ವ್ಯಕ್ತಪಡಿಸಿದರು. ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ತನಿಖೆÉಗೆ ಸಹಕರಿಸಬೇಕೆಂದು ಒತ್ತಾಯಿಸಿದರು. ಜಿಲ್ಲಾ ಬಿಜೆಪಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ ಮಾತನಾಡಿ, ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರದಲ್ಲಿ ಸಿಲುಕಿಕೊಂಡಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿದ್ದ ಹಣ ಅಕ್ರಮವಾಗಿ ವರ್ಗಾವಣೆಯಾಗಿದೆ. ಮುಡಾದಿಂದ ಸಿದ್ದರಾಮಯ್ಯ ಅವರು ತಮ್ಮ ಪತ್ನಿಯ ಹೆಸರಿನಲ್ಲಿ ನಿವೇಶನಗಳನ್ನು ಪಡೆದುಕೊಂಡು ನಿಯಮ ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿದರು. ಮುಡಾದಿಂದ ನಿವೇಶನ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ನ್ಯಾಯಯುತವಾಗಿ ಪ್ರಾಸಿಕ್ಯೂಶನ್ಗೆ…
ಸುಂಟಿಕೊಪ್ಪ ಆ.22 NEWS DESK : ಪ್ರತಿಯೊಬ್ಬ ಚಾಲಕರು ವಾಹನಗಳನ್ನು ಚಲಾಯಿಸುವಾಗ ಸಂಚಾರ ನಿಯಮಗಳನ್ನು ಪಾಲಿಸುವಂತೆ ಜಿಲ್ಲಾ ರಸ್ತೆ ಸಾರಿಗೆ ಇಲಾಖೆ ಅಧಿಕಾರಿ ಶಿವರಾಮ್ ತಿಳಿಸಿದರು. ಜಿಲ್ಲಾ ರಸ್ತೆ ಸಾರಿಗೆ ಇಲಾಖೆ ಅಧಿಕಾರಿ ಶಿವರಾಮ್ ಸುಂಟಿಕೊಪ್ಪ ಆಟೋ ಚಾಲಕರ ನಿಲ್ದಾಣಕ್ಕೆ ದಿಡೀರ್ ಭೇಟಿ ನೀಡಿ ಪರಿಶೀಲನೆ ನಡೆಸಿ ಮಾತನಾಡಿದ ಅವರು, ಸುಂಟಿಕೊಪ್ಪ ಪಂಚಾಯಿತಿ ವ್ಯಾಪ್ತಿಯಲ್ಲಿ 250ಕ್ಕೂ ಮಿಕ್ಕಿ ಆಟೋಗಳು ಸಂಚರಿಸುತ್ತಿವೆ. ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲಿಸುವ ಬಗ್ಗೆ ಮಾಹಿತಿ ನೀಡಿದರು. ಪ್ರತಿಯೊಬ್ಬರೂ ರಸ್ತೆ ಸಂಚಾರ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ತಿಳಿಸಿದರು. ಪಟ್ಟಣದಲ್ಲಿ ಸಂಚರಿಸುತ್ತಿರುವ ಕೆಲವು ಆಟೋರಿಕ್ಷಾ ಮಾಲೀಕರು ತಮಗೆ ಬೇಕಾದಂತೆ ಆಟೋಗಳನ್ನು ವಿಸ್ಯಾಸಗೊಳಿಸಿಕೊಂಡಿದ್ದಾರೆ. ಅಂತಹುಗಳನ್ನು ತೆರವುಗೊಳಿಸುವಂತೆ ಸೂಚಿಸಿದರು. ವಾಹನ ಚಾಲನೆ ಮಾಡುವಾಗ ಚಾಲಕರು ಚಾಲನಾ ಪರವಾನಿಗೆ, ದಾಖಲಾತಿ ಹಾಗೂ ಸಮವಸ್ತ್ರ ಕಡ್ಡಾಯವಾಗಿ ಹೊಂದಿರಬೇಕು ಎಂದು ಸೂಚಿಸಿದರು. ಈ ಸಂದರ್ಭ ಸಾರಿಗೆ ಇಲಾಖೆ ಸಿಬ್ಬಂದಿ, ಆಟೋ ಚಾಲಕರ ಸಂಘದ ಅಧ್ಯಕ್ಷ ಸುನೀಲ್ ಇತರು ಹಾಜರಿದ್ದರು.
ಮಡಿಕೇರಿ ಆ.22 NEWS DESK : ಎಲ್ಲಾ ಸರ್ಕಾರಿ ನೌಕರರು ಹಾಗೂ ನಿವೃತ್ತ ಸರ್ಕಾರಿ ನೌಕರರಿಗಾಗಿ ಪರಿಷ್ಕೃತ 7ನೇ ವೇತನ ಜಾರಿಯ ಸಂದರ್ಭ ಉಂಟಾಗಿರುವ ವೇತನ ತಾರತಮ್ಯವನ್ನು ಸರ್ಕಾರ ತಕ್ಷಣ ಸರಿಪಡಿಸಬೇಕೆಂದು ಕರ್ನಾಟಕ ನಿವೃತ್ತ ನೌಕರರ ವೇದಿಕೆಯ ಕೊಡಗು ಜಿಲ್ಲಾ ಘಟಕ ಒತ್ತಾಯಿಸಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಜಿಲ್ಲಾಧ್ಯಕ್ಷ ಪಿ.ಎಸ್.ಜನಾರ್ಧನ್, 7ನೇ ವೇತನ ಜಾರಿ ಸ್ವಾಗತಾರ್ಹ ಕ್ರಮವಾಗಿದೆ. ಆದರೆ ನಿವೃತ್ತ ನೌಕರರಿಗೆ ಕೆಲವು ಸೌಲಭ್ಯಗಳು ಸಿಗದ ಪರಿಸ್ಥಿತಿ ನಿರ್ಮಾಣವಾಗಿದೆ. ಆದ್ದರಿಂದ ಸೇವೆಯಲ್ಲಿರುವ ನೌಕರರಿಗೆ ನೀಡುವ ಸೌಲಭ್ಯಗಳನ್ನೇ ನಿವೃತ್ತರಿಗೂ ನೀಡಬೇಕೆಂದು ಆಗ್ರಹಿಸಿದರು. ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ನಿದಧಿಪಡಿಸಲಾದ ಕಾಲ್ಪನಿಕ ವೇತನವನ್ನು ನಿವೃತ್ತಿ ವೇತನ, ಕುಟುಂಬ ನಿವೃತ್ತಿ ವೇತನದ ಪುನರ್ ನಿಗಧಿಯ ಆರ್ಥಿಕ ಲಾಭವು ನಿವೃತ್ತಿ ಹೊಂದಿದ ಸರ್ಕಾರಿ ನೌಕರನಿಗೆ ಅಥವಾ ಮರಣ ಹೊಂದಿದ ಸರ್ಕಾರಿ ನೌಕರನ ಪಲಾನುಭವಿಗಳಿಗೆ 2024 ಆ.1 ರಿಂದ ಲಭಿಸಬೇಕು. ಆದರೆ 2022 ಜು.1ರಿಂದ 2024 ಜು.31ರವರೆಗೆ ಅಂದರೆ ಕಳೆದ 25 ತಿಂಗಳ ಅವಧಿಯಲ್ಲಿ ನಿವೃತ್ತರಾದ, ನಿಧನ ಹೊಂದಿದ…
ಕುಶಾಲನಗರ, ಆ.22 NEWS DESK : ಮಕ್ಕಳ ಪ್ರತಿಭಾ ಕಾರಂಜಿ ಸಾಂಸ್ಕೃತಿಕ ಸ್ಪರ್ಧೆಯು ಮಕ್ಕಳ ಪ್ರತಿಭೆಯನ್ನು ಅನಾವರಣಗೊಳಿಸಲು ಒಂದು ವಿನೂತನ ಕಾರ್ಯಕ್ರಮವಾಗಿದ್ದು, ಇದು ಶೈಕ್ಷಣಿಕ ಬಲವರ್ಧನೆಗೆ ಸಹಕಾರಿಯಾಗಿದೆ ಎಂದು ಸೋಮವಾರಪೇಟೆ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಭಾಗ್ಯಮ್ಮ ಹೇಳಿದರು. ಶಾಲಾ ಶಿಕ್ಷಣ ಇಲಾಖೆಯ ಕೂಡಿಗೆ ಶೈಕ್ಷಣಿಕ ಕ್ಲಸ್ಟರ್ ಕೇಂದ್ರದ ವತಿಯಿಂದ ಕೂಡಿಗೆ ಸಮೀಪದ ಚಿಕ್ಕತ್ತೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಸ್.ಡಿ.ಎಂ.ಸಿ, ಎಸ್.ಎಲ್.ಎನ್.ಕಾಫಿ ಪ್ರೈವೇಟ್ ಲಿಮಿಟೆಡ್ ಹಾಗೂ ಸ್ಥಳೀಯ ಸಮುದಾಯದ ಸಹಭಾಗಿತ್ವದಲ್ಲಿ ಏರ್ಪಡಿಸಿದ್ದ ಕೂಡಿಗೆ ಕ್ಲಸ್ಟರ್ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಪ್ರತಿಭಾ ಕಾರಂಜಿ ಸಾಂಸ್ಕೃತಿಕ ಸ್ಪರ್ಧಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಹಾಗೂ ಪೋಷಕರನ್ನು ಉದ್ದೇಶಿಸಿ ಮಾತನಾಡಿದರು. ಪ್ರತಿಭಾ ಕಾರಂಜಿ ಸ್ಪರ್ಧೆಯು ಮಕ್ಕಳಲ್ಲಿ ಶಿಕ್ಷಣ, ಮನರಂಜನೆ ಹಾಗೂ ಅಭಿವೃದ್ಧಿಗೆ ಉತ್ತೇಜಿಸುವುದರೊಂದಿಗೆ ಮಕ್ಕಳಲ್ಲಿನ ಗುಪ್ತ ಪ್ರತಿಭೆಯನ್ನು ಹೊರತರುತ್ತದೆ. ವಿದ್ಯಾರ್ಥಿಗಳ ಕಲಿಕೆಗೆ ಹಾಗೂ ಹೊಸದಾದ ಜೀವನ ಕೌಶಲ್ಯವನ್ನು ಹೊಂದಲು ವೇದಿಕೆಯಾಗಿದೆ ಎಂದರು. ವಿದ್ಯಾರ್ಥಿಗಳಲ್ಲಿನ ಪ್ರತಿಭೆಯನ್ನು ಗುರುತಿಸಿ ಹೊರತರಲು ಉತ್ತಮ ಅವಕಾಶವನ್ನು ನೀಡುತ್ತದೆ ಎಂದು ಬಿಇಓ ಭಾಗ್ಯಮ್ಮ…
ಮಡಿಕೇರಿ ಆ.22 NEWS DESK : ಕುಶಾಲನಗರ ತಾಲ್ಲೂಕಿನ ಚೆಟ್ಟಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ 2023-24ನೇ ಸಾಲಿನಲ್ಲಿ ಒಟ್ಟು ರೂ.13074.44 ಲಕ್ಷಗಳ ವಹಿವಾಟು ನಡೆಸಿದ್ದು, ರೂ.54.08 ಲಕ್ಷ ನಿವ್ವಳ ಲಾಭ ಗಳಿಸಿದೆ ಎಂದು ಸಂಘದ ಅಧ್ಯಕ್ಷ ಬಲ್ಲಾರಂಡ ಮಣಿ ಉತ್ತಪ್ಪ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಸದಸ್ಯರಿಗೆ ಶೇ.15ರಷ್ಟು ಡಿವಿಡೆಂಡ್ ನೀಡುವ ಬಗ್ಗೆ ವಾರ್ಷಿಕ ಮಹಾಸಭೆಯ ಒಪ್ಪಿಗೆಗೆ ಮಂಡಿಸಲು ತೀರ್ಮಾನಿಸಲಾಗಿದೆ ಎಂದರು. ಸಂಘದಲ್ಲಿ ಎ ತರಗತಿಯ 1165 ಸದಸ್ಯರಿದ್ದು, ಸದಸ್ಯರಿಂದ ಪಾಲು ಬಂಡವಾಳ ರೂ.119.84 ಲಕ್ಷಗಳಷ್ಟಿದೆ. ಕ್ಷೇಮ ನಿಧಿ ಸೇರಿ ಇತರೆ ನಿಧಿಗಳು ರೂ 355.38 ಲಕ್ಷ ಹಾಗೂ ನಿರುಖು ಠೇವಣಿ ಸಂಚಯ ಠೇವಣಿ ಮತ್ತು ಇತರೆ ಠೇವಣಿ ಸೇರಿ ಒಟ್ಟು ರೂ 1698.87 ಲಕ್ಷಗಳಿದೆ. ಸಂಘದ ಬಂಡವಾಳವನ್ನು ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ ಪಾಲು ಹಣ, ಕ್ಷೇಮ ನಿಧಿ ಹಾಗೂ ನಿರುಖು ಠೇವಣಿ ಮತ್ತಿತರ ಸಹಕಾರ ಸಂಸ್ಥೆಯಲ್ಲಿ ಪಾಲು ಮತ್ತು ನಿರಖು ಠೇವಣಿ ರೂಪದಲ್ಲಿ…
ನಾಪೋಕ್ಲು ಆ.22 NEWS DESK : ಮಂಗಳೂರು ವಿಶ್ವವಿದ್ಯಾಲಯವು ಪದವಿ ತರಗತಿಗಳ ಫಲಿತಾಂಶ ಪ್ರಕಟಿಸಿದ್ದು,ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಅಂತಿಮ ಪದವಿಯ ಆರನೇ ಸೆಮಿಸ್ಟರ್ ನ ಬಿ. ಎ.ವಿಭಾಗದಲ್ಲಿ ಶೇ.100 ಮತ್ತು ಬಿ. ಕಾಂ.ವಿಭಾಗದಲ್ಲಿ ಶೇ. 85.71 ಪಡೆದಿರುತ್ತದೆ. ತರುಣ್ ಹೆಚ್ ಎನ್ ಅಂತಿಮ ಬಿ. ಕಾಂ ನಲ್ಲಿ ಶೇ.83, ರಕ್ಷಿತಾ ಬಿ ಪಿ ಅಂತಿಮ ಬಿ. ಕಾಂ ನಲ್ಲಿ ಶೇ. 80, ಜಸೀಲ ಎಂ.ಎಂ.ಅಂತಿಮ ಬಿ.ಕಾಂ ನಲ್ಲಿ ಶೇ. 77 ಅಂಕ ಗಳಿಸಿದ್ದಾರೆ. ಇರ್ಫಾನ್ ಎಂ ಐ ಅಂತಿಮ ಬಿ.ಎ ನಲ್ಲಿ ಶೇ.83, ಅಫ್ರೀನ ಎಂ ಐ ಅಂತಿಮ ಬಿ. ಎ ನಲ್ಲಿ ಶೇ.82.9 ಹಾಗೂ ಸಂಗೀತ ಎಂ ಅಂತಿಮ ಬಿ. ಎ ನಲ್ಲಿ ಶೇ.80 ಅಂಕ ಗಳಿಸಿ ಕಾಲೇಜಿಗೆ ಗೌರವವನ್ನು ತಂದಿದ್ದಾರೆ. ವರದಿ : ದುಗ್ಗಳ ಸದಾನಂದ.






