ಲೇಖಕ: admin

ನಾಪೋಕ್ಲು ಆ.22 NEWS DESK : ನಾಪೋಕ್ಲು ವಲಯ ಮಟ್ಟದ ಪ್ರೌಢಶಾಲಾ ವಿಭಾಗದ ಕ್ರೀಡಾಕೂಟದ ಉದ್ಘಾಟನಾ ಸಮಾರಂಭವು ನರಿಯಂದಡ ಕೇಂದ್ರ ಪ್ರೌಢಶಾಲೆಯಲ್ಲಿ ಜರುಗಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಆಡಳಿತ ಮಂಡಳಿ ಅಧ್ಯಕ್ಷ ಚೇನಂಡ ಈ.ಗಿರೀಶ್ ಪೂಣಚ್ಚ ಕ್ರೀಡಾ ಧ್ವಜಾರೋಹಣವನ್ನು ನೆರವೇರಿಸಿ ಕ್ರೀಡಾಪಟುಗಳಿಗೆ ಶುಭ ಹಾರೈಸಿದರು. ಕಾರ್ಯದರ್ಶಿ ಬಿದ್ದಂಡ ಎಂ.ರಾಜೇಶ್ ಅಚ್ಚಯ್ಯ ಕ್ರೀಡಾ ಜ್ಯೋತಿಯನ್ನು ಬೆಳಗಿಸಿ ಮಾತನಾಡಿದರು. ಪ್ರತಿಜ್ಞಾವಿಧಿಯನ್ನು ವಿದ್ಯಾರ್ಥಿ ಕವನ್ ಕ್ರೀಡಾಪಟುಗಳಿಗೆ ಬೋಧಿಸಿದರು. ನರಿಯಂದಡ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪೆಮ್ಮಂಡ ಕೌಶಿ ಕಾವೇರಮ್ಮ ಕ್ರೀಡಾಪಟುಗಳ ಪಥ ಸಂಚಲನದಲ್ಲಿ ವಂದನೆ ಸ್ವೀಕರಿಸಿದರು. ಅತಿಥಿಗಳಾಗಿ ನರಿಯಂದಡ ಗ್ರಾ.ಪಂ ಉಪಾಧ್ಯಕ್ಷ ಕೋಡಿರ ವಿನೋದ್ ನಾಣಯ್ಯ, ಅಭಿವೃದ್ಧಿ ಅಧಿಕಾರಿ ಆಶಾ ಕುಮಾರಿ, ಸ್ಥಳದಾನಿ ಬೊವ್ವೇರಿಯಂಡ ಮತ್ತು ಬಟ್ಟಿಯಂಡ ಕುಟುಂಬದ ಅಧ್ಯಕ್ಷರು, ವಿವಿಧ ಶಾಲೆಗಳ ದೈಹಿಕ ಶಿಕ್ಷಣ ಶಿಕ್ಷಕರು, ವ್ಯವಸ್ಥಾಪಕರು, ಶಿಕ್ಷಕರು, ಸಿಬ್ಬಂದಿ ವರ್ಗ ಪಾಲ್ಗೊಂಡಿದ್ದರು. ಕ್ರೀಡಾಕೂಟದ ಉಸ್ತುವಾರಿಯನ್ನು ನರಿಯಂದಡ ಕೇಂದ್ರ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಬಿ.ಎಸ್.ಭವ್ಯ, ದೈಹಿಕ ಶಿಕ್ಷಣ ಶಿಕ್ಷಕ ಪಿ.ಬಿ.ಪೊನ್ನಪ್ಪ ಮತ್ತು ಸಹ ಶಿಕ್ಷಕರು ವಹಿಸಿದ್ದರು.…

Read More

ನಾಪೋಕ್ಲು ಆ.22 NEWS DESK : ಪ್ರತಿಯೊಬ್ಬ ಮನುಷ್ಯನಿಗೆ ದೃಷ್ಟಿ ಎಂಬುದು ಬಹಳ ಮುಖ್ಯ. ಕಣ್ಣಿನ ದೃಷ್ಟಿ ಕಳೆದುಕೊಂಡರೆ ಜೀವನ ಕಷ್ಟ ಸಾಧ್ಯ ಎಂದು ಶಹ್ಮ ಆಪ್ತಿಕಲ್ಸ್ ಕಣ್ಣಿನ ಕ್ಲಿನಿಕ್ ಮಾಲೀಕ ಸಂಶುದ್ದೀನ್ ಹೇಳಿದರು. ನಾಪೋಕ್ಲುವಿನ ಆಟೋ ಚಾಲಕರಿಗೆ ಶಹ್ಮ ಆಪ್ತಿಕಲ್ಸ್ ಕ್ಲಿನಿಕ್ ನಲ್ಲಿ ಆಯೋಜಿಸಿದ ಉಚಿತ ನೇತ್ರ ತಪಾಸಣೆ ಹಾಗೂ ಕನ್ನಡಕ ವಿತರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಪ್ರತಿನಿತ್ಯ ಜನರನ್ನು ಕರೆದೊಯ್ಯುವ ಆಟೋ ಚಾಲಕರಿಗೆ ಕಣ್ಣಿನ ಸಂರಕ್ಷಣೆ ಬಹಳ ಮುಖ್ಯ. ಈ ಹಿನ್ನೆಲೆಯಲ್ಲಿ ಶಹ್ಮ ಆಪ್ತಿಕಲ್ಸ್ ವತಿಯಿಂದ ಆಟೋ ಚಾಲಕರಿಗೆ ಉಚಿತ ನೇತ್ರ ತಪಾಸಣೆ ಮಾಡಿ ಅವಶ್ಯಕತೆಗೆ ಇದ್ದವರಿಗೆ ಕನ್ನಡಕ ನೀಡಲಾಗುವುದು ಎಂದರು. ನಾಪೋಕ್ಲು ಆಟೋ ಚಾಲಕರ ಸಂಘದ ಅಧ್ಯಕ್ಷ ಟಿ.ಕೆ.ಸುಕುಮಾರ್ ಮಾತನಾಡಿ, ಹಲವು ರೀತಿಯ ಕಣ್ಣಿನ ಸಮಸ್ಯೆ ಎದುರಿಸುತ್ತಿರುವ ಆಟೋ ಚಾಲಕರಿದ್ದಾರೆ.ಅವರ ನೆರವಿಗೆ ಕಾರ್ಯೋನ್ಮುಖವಾದ ಆಸ್ಪತ್ರೆಯ ಕಾರ್ಯ ಶ್ಲಾಘನೀಯ ಎಂದರು. ಕಾರ್ಯಕ್ರಮದಲ್ಲಿ ಶಹ್ಮ ಕ್ಲಿನಿಕ್ ಮಾಲೀಕ ಸಂಶುದ್ದೀನ್ ನಾಪೋಕ್ಲು ಆಟೋ ಚಾಲಕರ ಸಂಘದ ಅಧ್ಯಕ್ಷ ಟಿ.ಕೆ.ಸುಕುಮಾರ್ ಅವರ…

Read More

ಮಡಿಕೇರಿ ಆ.22 NEWS DESK : ಜಾತಿ, ದ್ವೇಷದ ಗೋಡೆಯನ್ನು ಒಡೆದು ಎಲ್ಲರಲ್ಲಿ ಭ್ರಾತೃತ್ವ ಮತ್ತು ಸಮಾನತೆಯ ಪರಿಕಲ್ಪನೆಯನ್ನು ಬಿತ್ತಿದ ಬ್ರಹ್ಮರ್ಷಿ ಶ್ರೀ ನಾರಾಯಣ ಗುರುಗಳ ಜೀವನ ಮತ್ತು ಹೋರಾಟ ಆದರ್ಶ ಪೂರ್ಣವಾದದ್ದು, ಎಲ್ಲರಲ್ಲೂ ಮಾನವೀಯತೆಯ ಸದಾಶಯವನ್ನು ಬೆಳೆಸುವಲ್ಲಿ ಗುರುವಿನ ಪಾತ್ರ ಮಹತ್ವದ್ದು ಎಂದು ಕನ್ನಡ ಸಾಹಿತ್ಯ ಪರಿಷತ್ತು ಮಾಜಿ ಅಧ್ಯಕ್ಷರಾದ ಬಿ.ಎಸ್.ಲೋಕೇಶ್ ಸಾಗರ್ ಹೇಳಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದೊಂದಿಗೆ ನಗರದ ಓಂಕಾರ ಸದನ ಸಭಾಂಗಣದಲ್ಲಿ ನಡೆದ ಬ್ರಹ್ಮರ್ಷಿ ಶ್ರೀ ನಾರಾಯಣ ಗುರು ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. 1856 ರಲ್ಲಿ ತಿರುವನಂತಪುರದ ಚೆಂಬಲಾಂತಿ ಎಂಬ ಹಳ್ಳಿಯಲ್ಲಿ ಕೆಳವರ್ಗದ ಮಧ್ಯಮ ಕುಟುಂಬದ ಈಳವ ಜಾತಿಯಲ್ಲಿ, ವಯಲ್‍ವರಂ ಮನೆಯ ಮಾದನ್ ಆಶಾನ್ ಮತ್ತು ಕುಟ್ಟಿಯಮ್ಮ ಎಂಬ ದಂಪತಿಗಳ ನಾಲ್ಕನೇ ಮಗನಾಗಿ ಜನಿಸಿದರು. ಶಂಕರಾಚಾರ್ಯರ ಅದ್ವೈತದ ಸಾರದಲ್ಲಿ ತಮ್ಮ ದಾರ್ಶನಿಕತೆಯನ್ನು ಪ್ರತಿಪಾದಿಸಿದ ನಾರಾಯಣ ಗುರುಗಳು, ಎಲ್ಲರನ್ನೂ ಒಂದಾಗಿ ಕಂಡರು. ಇರುವವನು ಒಬ್ಬನೇ ಪರಮಾತ್ಮ, ಒಂದೇ ತತ್ವ,…

Read More

ಮಡಿಕೇರಿ ಆ.22 NEWS DESK : ರಾಜ್ಯದ ಬಡವರು, ನಿರ್ಗತಿಕರು, ಅಲೆಮಾರಿಗಳನ್ನು ಗುರುತಿಸಿ ಮುಖ್ಯವಾಹಿನಿಗೆ ತರಲು ಶ್ರಮಿಸಿದ ಡಿ.ದೇವರಾಜ ಅರಸು ಅವರು ವಿನೂತನ ಹಾಗೂ ವಿಶಿಷ್ಟ ವ್ಯಕ್ತಿತ್ವವನ್ನು ಹೊಂದಿದ್ದರು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಹೇಳಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ನಗರದ ಗಾಂಧಿ ಭವನದಲ್ಲಿ ಮಂಗಳವಾರ ನಡೆದ ಪರಿವರ್ತನೆಯ ಹರಿಕಾರ ಹಾಗೂ ಮಾಜಿ ಮುಖ್ಯಮಂತ್ರಿ ದಿವಂಗತ ಡಿ.ದೇವರಾಜ ಅರಸು ಅವರ 109 ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಮೈಸೂರು ರಾಜ್ಯವನ್ನು ಕರ್ನಾಟಕ ರಾಜ್ಯವೆಂದು ಮರು ನಾಮಕರಣ ಮಾಡಿದರು. ಬಡವರ ಹಾಗೂ ದುರ್ಬಲರ ಬಗ್ಗೆ ಅಪಾರ ಕಾಳಜಿ ಹಾಗೂ ಕಳಕಳಿ ಹೊಂದಿದ್ದರು ಎಂದು ಆರ್.ಐಶ್ವರ್ಯ ತಿಳಿಸಿದರು. ವಿದ್ಯಾರ್ಥಿ ನಿಲಯಗಳ ಆರಂಭ, ಭಾಗ್ಯ ಜ್ಯೋತಿ, ಹಿಂದುಳಿದ ವರ್ಗಗಳಿಗೆ ಭೂಮಿ ಹಂಚಿಕೆ ಹೀಗೆ ಹಲವು ಕಾರ್ಯಕ್ರಮಗಳನ್ನು ಜಾರಿಗೊಳಿಸುವ ಮೂಲಕ ಸಮಾಜದಲ್ಲಿ ಬದಲಾವಣೆ ಮತ್ತು ಸುಧಾರಣೆಗೆ ಶ್ರಮಿಸಿದರು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಅವರು…

Read More

ಪುತ್ತೂರು ಆ.22 NEWS DESK : ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯಲ್ಲಿ ಪದವಿ ಪ್ರಧಾನ ಕಾರ್ಯಕ್ರಮ ಸಮಾವರ್ತನ ಸಮಾರಂಭವು ಆ.24 ರಂದು ಇಂಜಿನಿಯರಿಂಗ್ ಕಾಲೇಜಿನ ಆವರಣದಲ್ಲಿ ನಡೆಯಲಿದೆ. 2023-24ನೇ ಸಾಲಿನಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯವು ನಡೆಸಿದ ಇಂಜಿನಿಯರಿಂಗ್ ವಿಭಾಗಗಳ ಅಂತಿಮ ವರ್ಷದ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿ ಪದವೀಧರರಾದ ಅರ್ಹ ವಿದ್ಯಾರ್ಥಿಗಳಿಗೆ ಇಲ್ಲಿ ಪದವಿ ಪ್ರಧಾನ ಮಾಡಲಾಗುತ್ತದೆ. ಸಿವಿಲ್ ಇಂಜಿನಿಯರಿಂಗ್ ವಿಭಾಗದಲ್ಲಿ 3ನೇ ರ್ಯಾಂಕ್ ಗಳಿಸಿರುವ ಕೇಶವ ಪ್ರಜ್ವಲ್.ಪಿ ಹಾಗೂ 5ನೇ ರ್ಯಾಂಕ್ ಗಳಿಸಿರುವ ಕೆ.ಪಲ್ಲವಿ ಅವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಗುವುದು. ಪ್ರತಿ ವಿಭಾಗದಲ್ಲಿ ಶೈಕ್ಷಣಿಕವಾಗಿ ಉನ್ನತ ಸಾಧನೆಯನ್ನು ಮಾಡಿದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗೌರವಿಸುವ ಕಾರ್ಯಕ್ರಮವೂ ನಡೆಯುತ್ತದೆ. ಅಂದು ಬೆಳಿಗ್ಗೆ 10.30ಕ್ಕೆ ನಡೆಯುವ ಈ ಸಮಾರಂಭಕ್ಕೆ ಪುತ್ತೂರು ಲೋಕೋಪಯೋಗಿ ಇಲಾಖೆಯ ಸಹಾಯಕ ಇಂಜಿನಿಯರ್, ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಹಿರಿಯ ವಿದ್ಯಾರ್ಥಿ ಕನಿಷ್ಕ.ಎಸ್.ಚಂದ್ರ ಮುಖ್ಯ ಅತಿಥಿಗಳಾಗಿ ಆಗಮಿಸುತ್ತಾರೆ. ಕಾಲೇಜು ಆಡಳಿತ ಮಂಡಳಿಯ ನಿರ್ದೇಶಕ ರವಿಕೃಷ್ಣ.ಡಿ.ಕಲ್ಲಾಜೆ ಸಮಾರಂಭದ…

Read More

ಮಡಿಕೇರಿ ಆ.21 NEWS DESK : ಕರ್ನಾಟಕ ಸಾಂಸ್ಕೃತಿಕ ಹಾಗೂ ಸಾಹಿತ್ಯ ಪರಿಷತ್ತಿನ ಕೊಡಗು ಘಟಕದ ವತಿಯಿಂದ ಸೆ.22 ರಂದು ನಗರದಲ್ಲಿ ‘ಫ್ಯಾಷನ್ ಶೋ’ ಸೇರಿದಂತೆ ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ. ಪರಿಷತ್ತಿನ ಜಿಲ್ಲಾ ಅಧ್ಯಕ್ಷರಾದ ನಯನ ಹರಿಶ್ಚಂದ್ರ ಅವರು ನಗರದ ಪತ್ರಿಕಾ ಭವನದಲ್ಲಿ ಕಾರ್ಯಕ್ರಮದ ಕುರಿತು ವಿವರಗಳನ್ನು ನೀಡಿ, ನಗರದ ರಾಜಾಸೀಟು ಬಳಿಯ ಕುಬೇರ ಪಾರ್ಟಿ ಹಾಲ್‍ನಲ್ಲಿ ಅಂದು ಮಧ್ಯಾಹ್ನ 3 ರಿಂದ 8 ಗಂಟೆಯವರೆಗೆ ಫ್ಯಾಷನ್ ಶೋ ಒಳಗೊಂಡಂತೆ ವಿವಿಧ ಕಾರ್ಯಕ್ರಮಗಳು ನಡೆಯಲಿವೆ ಎಂದರು. ಕೊಡಗಿನ ಗ್ರಾಮೀಣ ಪ್ರತಿಭೆಗಳಿಗೆ ಚಲನಚಿತ್ರ ಮತ್ತು ಮಾಡೆಲಿಂಗ್ ಕ್ಷೇತ್ರದ ಬಗ್ಗೆ ಪರಿಚಯಿಸಿ, ಆ ಕ್ಷೇತ್ರದಲ್ಲಿ ಸಾಧನೆ ಮಾಡಲು ಪ್ರೇರೇಪಣೆ ನೀಡುವ ಹಿನ್ನೆಲೆಯಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಕಾರ್ಯಕ್ರಮದಲ್ಲಿ 4 ರಿಂದ 11 ವರ್ಷದ ಮಕ್ಕಳು ಮತ್ತು 12 ರಿಂದ 17 ವರ್ಷದ ವಿಭಾಗ, 18 ರಿಂದ 30 ವರ್ಷದೊಳಗಿನ ವಿಭಾಗ ಮತ್ತು 25 ರಿಂದ 55 ವರ್ಷದೊಳಗಿನ ವಿಭಾಗಗಳಲ್ಲಿ ಫ್ಯಾಷನ್…

Read More

ನಾಪೋಕ್ಲು ಆ.22 NEWS DESK : ವಿದ್ಯಾರ್ಥಿಗಳನ್ನು ಶೈಕ್ಷಣಿಕವಾಗಿ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಜಿಲ್ಲಾಮಟ್ಟದ ರಸಪ್ರಶ್ನೆ ಸ್ಪರ್ಧೆಯನ್ನು ನಡೆಸುವ ಸಲುವಾಗಿ ಕುಂಬಳದಾಳು ಗ್ರಾಮದ ದಾನಿ ನೆರವಂಡ ಮುತ್ತಪ್ಪ ಅವರು ಮೂರ್ನಾಡು ಪದವಿಪೂರ್ವ ಕಾಲೇಜಿಗೆ ಒಂದು ಲಕ್ಷ ರೂಪಾಯಿ ನೀಡಿ ಸಮಾಜಕ್ಕೆ ಮಾದರಿಯಾಗಿದ್ದಾರೆ. ವಿದ್ಯಾ ಸಂಸ್ಥೆಯ ಅಧ್ಯಕ್ಷ ಚೌರೀರ ಡಾ.ಜಗತ್ ತಿಮ್ಮಯ್ಯ ಅವರಿಗೆ ನೆರವಂಡ ಮುತ್ತಪ್ಪ ಒಂದು ಲಕ್ಷ ರೂಪಾಯಿ ಚೆಕ್ ಅನ್ನು ಹಸ್ತಾಂತರಿಸಿದರು. ಈ ಸಂದರ್ಭ ಮೂರ್ನಾಡು ವಿದ್ಯಾಸಂಸ್ಥೆಯ ಕಾರ್ಯದರ್ಶಿ, ಪೆಮ್ಮಡಿಯಂಡ ವೇಣು ಅಪ್ಪಣ್ಣ, ಮೂರ್ನಾಡು ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ದೇವಕ್ಕಿ, ಸಿಬ್ಬಂದಿ ವರ್ಗ ಹಾಜರಿದ್ದರು. ವರದಿ : ದುಗ್ಗಳ ಸದಾನಂದ. 

Read More

ಮಡಿಕೇರಿ ಆ.22 NEWS DESK : ಆಗಸ್ಟ್, 29 ರಂದು ರಾಷ್ಟ್ರೀಯ ಕ್ರೀಡಾ ದಿನಾಚರಣೆಯ ಅಂಗವಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ವಿವಿಧ ಕ್ರೀಡೆಗಳನ್ನು ಆಯೋಜಿಸಲಾಗಿದ್ದು, ಕೊಡಗಿನ ಕ್ರೀಡಾಪಟುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಕೋರಿದೆ. ಆಗಸ್ಟ್, 25 ರಂದು ಬೆಳಗ್ಗೆ 7 ಗಂಟೆಗೆ ಗುಡ್ಡಗಾಡು ಓಟವನ್ನು ಮಡಿಕೇರಿಯ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿದೆ. ಭಾಗವಹಿಸುವ ಕ್ರೀಡಾಪಟುಗಳಿಗೆ ಯಾವುದೇ ರೀತಿಯ ಪ್ರವೇಶ ಶುಲ್ಕ ಇರುವುದಿಲ್ಲ. 14 ವರ್ಷದೊಳಗಿನ ಬಾಲಕ ಹಾಗೂ ಬಾಲಕಿಯರಿಗೆ 1 ಕಿ.ಮೀ. ಓಟ ಆಗಸ್ಟ್, 25 ರಂದು ಬೆಳಗ್ಗೆ 9.30 ಗಂಟೆಗೆ ಮಡಿಕೇರಿಯ ಜನರಲ್ ತಿಮ್ಮಯ್ಯ ಜಿಲ್ಲಾ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯಲಿದೆ. 16 ವರ್ಷದೊಳಗಿನ ಬಾಲಕ ಹಾಗೂ ಬಾಲಕಿಯರಿಗೆ ಷಟಲ್ ಬ್ಯಾಡ್ಮಿಂಟನ್ ಸಿಂಗಲ್ಸ್/ಡಬಲ್ಸ್, 16 ವರ್ಷದೊಳಗಿನ ಬಾಲಕ ಹಾಗೂ ಬಾಲಕಿಯರಿಗೆ ಟೇಬಲ್ ಟೆನ್ನಿಸ್ ಸಿಂಗಲ್ಸ್ ಮತ್ತು ಡಬಲ್ಸ್. ಷಟಲ್ ಬ್ಯಾಡ್ಮಿಂಟನ್, ಆಟಗಾರರು ರಾಕೇಟ್‍ನ್ನು ತಾವೇ ತರಬೇಕು. ಭಾಗವಹಿಸುವ ಕ್ರೀಡಾಪಟುಗಳಿಗೆ ಯಾವುದೇ ರೀತಿಯ ಪ್ರವೇಶ ಶುಲ್ಕ ಇರುವುದಿಲ್ಲ.…

Read More

ಮಡಿಕೇರಿ ಆ.22 NEWS DESK : ಅಖಿಲ ಭಾರತೀಯ ಸಾಹಿತ್ಯ ಪರಿಷದ್ ವತಿಯಿಂದ ಮಡಿಕೇರಿಯ ಮಧುಕೃಪಾದಲ್ಲಿ  ಆ.25 ರಂದು ಜಿಲ್ಲೆಯ ಪದವಿ ಪೂರ್ವ ಮಕ್ಕಳಿಗೆ ಸ್ವಾತಂತ್ರ್ಯೋತ್ಸವದ ಪ್ರಯುಕ್ತ “ಭಾರತೀಯತೆಯ ಹಿರಿಮೆ-ಗರಿಮೆ” ವಿಷಯದಲ್ಲಿ ಪ್ರಬಂಧ ಸ್ಪರ್ಧೆ ನಡೆಯಲಿದೆ. ಅಂದು ಬೆಳಿಗ್ಗೆ 10 ಗಂಟೆಗೆ ಸ್ಪರ್ಧೆ ಆರಂಭವಾಗಲಿದ್ದು, ಸ್ಪರ್ಧಾರ್ಥಿಗಳು ಸಮಯಕ್ಕೆ ಸರಿಯಾಗಿ ಹಾಜರಿರಬೇಕು. ತೀರ್ಪುಗಾರರ ತೀರ್ಮಾನವೇ ಅಂತಿಮ. ನೋಂದಣಿ ಮತ್ತು ಹೆಚ್ಚಿನ ಮಾಹಿತಿಗಾಗಿ ಅ.ಭಾ.ಸಾ.ಪ ಜಿಲ್ಲಾ ಸಹ ಕಾರ್ಯದರ್ಶಿ ಚಂದನ್ ನಂದರಬೆಟ್ಟು 87626 32314 ಹಾಗೂ ಮಕ್ಕಳ ಪ್ರಕಾರ ಪ್ರಮುಖ್ ಹೇಮಂತ್ ಪಾರೇರ 97433 53597 ಅವರನ್ನು ಸಂಪರ್ಕಿಸುವಂತೆ ಕೋರಲಾಗಿದೆ.

Read More

ಮಡಿಕೇರಿ ಆ.22 NEWS DESK : ಕೇಂದ್ರ ಸರ್ಕಾರದ ಆಲಿಮ್ಕೋ ಸಂಸ್ಥೆಯಿಂದ ಅಡಿಪ್ ಯೋಜನೆಯಡಿ ವಿಕಲಚೇತನರಿಗೆ ಹಾಗೂ ರಾಷ್ಟ್ರೀಯ ವಯೋಶ್ರೀ ಯೋಜನೆಯಡಿ ಹಿರಿಯ ನಾಗರಿಕರಿಗೆ ವಿವಿಧ ಸಾಧನ ಸಲಕರಣೆ ನೀಡುವ ಸಂಬಂಧ ಮೌಲ್ಯಮಾಪನ ಶಿಬಿರ ಹಮ್ಮಿಕೊಳ್ಳಲಾಗಿದೆ. ಜಿಲ್ಲೆಯ ವಿಶೇಷಚೇತನರು ಹಾಗೂ ಹಿರಿಯ ನಾಗರಿಕರ ಮೌಲ್ಯಮಾಪನ ತಪಾಸಣಾ ಶಿಬಿರಕ್ಕೆ ಹಾಜರಾಗಲು ತಾಲ್ಲೂಕುವಾರು ದಿನಾಂಕ ನಿಗದಿಪಡಿಸಲಾಗಿದೆ. ಆಗಸ್ಟ್, 27 ರಂದು ಕುಶಾಲನಗರ ತಾಲ್ಲೂಕಿಗೆ ಕುಶಾಲನಗರ ರೋಟರಿ ಸಭಾಂಗಣ, ಆಗಸ್ಟ್, 28 ರಂದು ಸೋಮವಾರಪೇಟೆ ತಾಲ್ಲೂಕಿಗೆ ಸೋಮವಾರಪೇಟೆ ಚನ್ನಬಸಪ್ಪ ಸಭಾಂಗಣ, ಆಗಸ್ಟ್, 29 ರಂದು ವಿರಾಜಪೇಟೆ ಮತ್ತು ಪೊನ್ನಂಪೇಟೆ ತಾಲ್ಲೂಕಿಗೆ ಗೋಣಿಕೊಪ್ಪಲು ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಹಾಗೂ ಆಗಸ್ಟ್, 30 ಮತ್ತು 31 ರಂದು ಮಡಿಕೇರಿ ತಾಲ್ಲೂಕಿಗೆ ಮಡಿಕೇರಿಯ ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಸಭಾಂಗಣದಲ್ಲಿ ಸಾಧನ ಸಲಕರಣೆಗಳನ್ನು ನೀಡುವ ಸಂಬಂಧ ಮೌಲ್ಯಮಾಪನ ಶಿಬಿರ ನಡೆಯಲಿದೆ. ಈ ದಿನಾಂಕಗಳಂದು ಶಿಬಿರಗಳಲ್ಲಿ ಭಾಗವಹಿಸುವ ವಿಶೇಷಚೇತನರು ಯುಡಿಐಡಿ ಕಾರ್ಡ್, ಆಧಾರ್ ಕಾರ್ಡ್ ಜಾತಿ ಮತ್ತು ಆದಾಯ ಪ್ರಮಾಣ ಪತ್ರ…

Read More