ಮಡಿಕೇರಿ ಸೆ.6 NEWS DESK : ಮಣಿಪುರ ಮೈತೆಯಿ ಅಸೋಸಿಯೇಷನ್ ಆಫ್ ಬೆಂಗಳೂರು ವತಿಯಿಂದ ಶಾಂತಿ ಮತ್ತು ಶಾಂತಿಯನ್ನು ಉತ್ತೇಜಿಸುವ ಗುರಿಯೊಂದಿಗೆ ಬೆಂಗಳೂರಿನ ದೊಡ್ಡಕನ್ನೆ ಹಳ್ಳಿ “ಸಿಲ್ವರ್ ಜ್ಯೂಬಿಲಿ ಟರ್ಫ್ ಪಾರ್ಕ್” ನಲ್ಲಿ ನಡೆದ ಫುಟ್ ಬಾಲ್ ಕ್ರೀಡಾಕೂಟದಲ್ಲಿ ಅಸೋಸಿಯೇಷನ್ ನ ಅಧ್ಯಕ್ಷ ಮೇಜರ್ ರಾಜ್ಕುಮಾರ್ ಜಲಜಿತ್ ಸಿಂಗ್ ಅವರ ಆಹ್ವಾನದ ಮೇರೆಗೆ ಮುಖ್ಯ ಅತಿಥಿಗಳಾಗಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ಅಧ್ಯಕ್ಷ ಎನ್.ಯು.ನಾಚಪ್ಪ ಅವರು ಪಾಲ್ಗೊಂಡರು. ಮಣಿಪುರದ ಆದಿಮಸಂಜಾತ ಮೈತೆಯಿ ಬುಡಕಟ್ಟು ಜನಾಂಗದ ಸಭೆಯಲ್ಲಿ ಉಪಸ್ಥಿತರಿದ್ದ ಅವರು ಮೈತೆಯಿ ಜನಾಂಗ ಹಾಗೂ ಕೊಡಗಿನ ಕೊಡವರು ಒಂದೇ ನೋವನ್ನು ಅನುಭವಿಸುತ್ತಿದ್ದಾರೆ ಎಂದರು. ಮಣಿಪುರದ ಆದಿಮಸಂಜಾತ ಮೈತೆಯಿ ಸಮುದಾಯವು ಕಳೆದ ಹಲವು ತಿಂಗಳುಗಳಿಂದ ತಮ್ಮ ಸ್ವಂತ ತಾಯ್ನಾಡಿನಲ್ಲಿ ಸಂಕಷ್ಟದಲ್ಲಿದೆ. ನೆರೆಯ ಮ್ಯಾನ್ಮಾರ್ನಿಂದ ಬಂದ ವಲಸಿಗರಿಂದ ಮೈತೆಯಿ ಸಮುದಾಯದ ಅಸ್ತಿತ್ವಕ್ಕೆ ಬೆದರಿಕೆ ಇದೆ. ವಲಸಿಗ ಕುಕಿಗಳು ಭೂಮಿಯನ್ನು ಕಸಿದುಕೊಳ್ಳಲು ಮತ್ತು ಆಕ್ರಮಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ಪವಿತ್ರ ಯಾತ್ರಾಸ್ಥಳ ನೊಂಗ್ ಮೈಚಿಂಗ್ಗೆ ಪ್ರವೇಶಿಸದಂತೆ ತಡೆದಿದ್ದಾರೆ. ಸ್ಥಳೀಯ ಮೈತೆಯಿಗಳನ್ನು…
ಲೇಖಕ: admin
ಮಡಿಕೇರಿ NEWS DESK ಸೆ.6 : ಚೇರಂಬಾಣೆಯ ಶ್ರೀ ಸಾರ್ವಜನಿಕ ಗಣೇಶೋತ್ಸವ ಸಮಿತಿ ಹಬ್ಬದ ಸಂಭ್ರಮದಲ್ಲಿದೆ. 25ನೇ ವರ್ಷದ ಗಣೇಶೋತ್ಸವವನ್ನು ಅದ್ದೂರಿಯಾಗಿ ಆಚರಿಸಲು ಸಮಿತಿ ನಿರ್ಧರಿಸಿದೆ. ಸೆ.7 ರಂದು ಬೆಳಿಗ್ಗೆ ಗಣಪತಿ ಹೋಮ ಮತ್ತು ವಿಶೇಷ ಪೂಜೆಯೊಂದಿಗೆ 10.30 ಗಂಟೆಗೆ ಗಣಪತಿಯ ಮೂರ್ತಿಯನ್ನು ಪ್ರತಿಷ್ಠಾಪಿಸಲಾಗುವುದು. ಏಳು ದಿನಗಳ ಕಾಲ ಗಣೇಶೋತ್ಸವವನ್ನು ಆಚರಿಸಲಿರುವ ಸಮಿತಿ, ಪ್ರತಿದಿನ ಮಧ್ಯಾಹ್ನ 12.30 ಗಂಟೆಗೆ ಮಹಾಪೂಜೆಯ ನಂತರ ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ ಮಾಡಲಿದೆ. ಸಂಜೆ 7.30 ಗಂಟೆಗೆ ಮಹಾಪೂಜೆ ನಡೆಯಲಿದ್ದು, ಪ್ರಸಾದ ಮತ್ತು ಫಲಹಾರ ನೀಡಲಾಗುವುದು. ಚೇರಂಬಾಣೆಯ ಮೇಲಿನಪೇಟೆ ಕೇಸರಿಮಯವಾಗಿದ್ದು, ಆಕರ್ಷಕ ಪ್ರವೇಶ ದ್ವಾರ ಸರ್ವ ಭಕ್ತರನ್ನು ಸ್ವಾಗತಿಸುತ್ತಿದೆ. ಸೆ.13ರಂದು ಸಂಜೆ 4ಗಂಟೆಗೆ ಗಣೇಶ ಮೂರ್ತಿಯನ್ನು ಭವ್ಯ ಮೆರವಣಿಗೆಯಲ್ಲಿ ಕೊಂಡೊಯ್ದು ಕೊಳಗದಾಳು ಗ್ರಾಮದ ಪಾಕ ಹೊಳೆಯಲ್ಲಿ ವಿಸರ್ಜನೆ ಮಾಡಲಾಗುವುದು. ಮೆರವಣಿಗೆಯಲ್ಲಿ ವಿಶೇಷ ಆಕರ್ಷಣೆಯಾಗಿ ಕೇರಳದ ಪುಕೋಡು ಬ್ಯಾಂಡ್ ಸೆಟ್ ಮತ್ತು ಕೊಡಗಿನ ಸಾಂಪ್ರದಾಯಿಕ ವಾಲಗ ಇರುತ್ತದೆ. ಮಂಗಳೂರಿನ ಶಾರದಾ ಎಲೆಕ್ಟಿçಕಲ್ಸ್ ಆಕರ್ಷಕ ಮಂಟಪಕ್ಕೆ ವಿದ್ಯುತ್ ದೀಪಗಳ…
ಪುತ್ತೂರು ಸೆ.6 NEWS DESK : ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯಲ್ಲಿ, ಇಂಡಿಯನ್ ಸೊಸೈಟಿ ಫಾರ್ ಟೆಕ್ನಿಕಲ್ ಎಜುಕೇಶನ್, ಸಹಯೋಗದಲ್ಲಿ ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಯಿತು. ಈ ಸಂದರ್ಭ ಮಾತನಾಡಿದ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ವಿಶ್ವಾಸ್ ಶೆಣೈ, ಶಿಕ್ಷಕರು ಜ್ಞಾನವನ್ನು ನೀಡುವುದರೊಂದಿಗೆ ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸುತ್ತಾರೆ. ಪಠ್ಯಪುಸ್ತಕಗಳನ್ನು ಮೀರಿದ ಮೌಲ್ಯಗಳನ್ನು ತುಂಬುತ್ತಾರೆ. ಇಂಜಿನಿಯರಿಂಗ್ ಕಾಲೇಜಿನಲ್ಲಿ ಶಿಕ್ಷಕರ ಪಾತ್ರವು ಇನ್ನಷ್ಟು ಹೆಚ್ಚಿನದ್ದಾಗಿದೆ. ನೈಜ ಪ್ರಪಂಚದ ಸಮಸ್ಯೆಗಳನ್ನು ಪರಿಹರಿಸಲು ಕೌಶಲ್ಯ ಮತ್ತು ಮನಸ್ಥಿತಿಯನ್ನು ಅಭಿವೃದ್ಧಿಪಡಿಸಲು ಶಿಕ್ಷಕರು ಸಹಾಯ ಮಾಡುತ್ತಾರೆ. ಶಿಕ್ಷಕರ ಸಮರ್ಪಣೆ, ತಾಳ್ಮೆ ಮತ್ತು ಬೆಂಬಲದಿಂದಾಗಿ ಸಂಸ್ಥೆ ಅಭಿವೃದ್ಧಿ ಹೊಂದಿದೆ ಎಂದರು. ಕಾಲೇಜಿನ ಪ್ರಾಂಶುಪಾಲ ಡಾ.ಮಹೇಶ್ ಪ್ರಸನ್ನ.ಕೆ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಎಲ್ಲಾ ವಿಭಾಗಗಳ ಮುಖ್ಯಸ್ಥರು, ಉಪನ್ಯಾಸಕರು ಪಾಲ್ಗೊಂಡಿದ್ದರು. ವಿದ್ಯಾರ್ಥಿಗಳಾದ ನೇಹಾ, ವಿದ್ಯಾರಣ್ಯ ಶರ್ಮ, ವರ್ಷಾ ನಾಯಕ್, ಸೀಮಾಲಹರಿ, ಸ್ಫೂರ್ತಿ ಲಕ್ಷ್ಮಿ, ಅಶ್ವಿನಿ ಪ್ರಾರ್ಥಿಸಿದರು. ಸ್ವಸ್ತಿಕ ಕಾರ್ಯಕ್ರಮ ನಿರ್ವಹಿಸಿದರು.
ಮಡಿಕೇರಿ ಸೆ.6 NEWS DESK : ಮಡಿಕೇರಿಯ ವಿಂಗ್ಸ್ ಆಫ್ ಪ್ಯಾಶನ್ ಡ್ಯಾನ್ಸ್ ಮತ್ತು ಫಿಟ್ನೆಸ್ ಸ್ಟುಡಿಯೋದಲ್ಲಿ ಮಹಿಳೆಯರಿಗಾಗಿ ಫಿಟ್ನೆಸ್ ಕ್ಲಾಸ್ ನಡೆಯುತ್ತಿದೆ. ಪ್ರತಿ ವಾರ ಸೋಮವಾರದಿಂದ ಶನಿವಾರದವರೆಗೆ ಬೆಳಗ್ಗೆ 5.30 ರಿಂದ 7 ಗಂಟೆಯವರೆಗೆ ಯೋಗ, ಜುಂಬಾ, ಭಾಂಗ್ರ ಹಿಟ್, ಕಾರ್ಡಿಯೋ ತರಬೇತಿ ನೀಡಲಾಗುತ್ತಿದೆ. ಆಸಕ್ತ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಇದರ ಲಾಭ ಪಡೆದುಕೊಳ್ಳುವಂತೆ ಸಂಸ್ಥೆಯ ಸಂಸ್ಥಾಪಕ ನಿರ್ದೇಶಕಿ ಹಾಗೂ ನೃತ್ಯ ಸಂಯೋಜಕಿ ಪ್ರೀತಾ ಕೃಷ್ಣ ಮನವಿ ಮಾಡಿದ್ದಾರೆ. ಹೆಚ್ಚಿನ ಮಾಹಿತಿಗೆ 96329 76833 ನ್ನು ಸಂಪರ್ಕಿಸಬಹುದಾಗಿದೆ. ಸಂಸ್ಥೆಯಲ್ಲಿ ತರಬೇತಿ ಪಡೆಯುತ್ತಿರುವ ಹಲವು ವಿದ್ಯಾರ್ಥಿಗಳು ಹಿಪ್ಹಾಪ್, ಸೆಮಿ ಕ್ಲಾಸಿಕಲ್, ಕಥಕ್, ಜಾನಪದ ಇತ್ಯಾದಿ ಚಟುವಟಿಕೆಗಳಲ್ಲಿ ರಾಷ್ಟ್ರೀಯ, ರಾಜ್ಯ ಮತ್ತು ಜಿಲ್ಲಾ ಮಟ್ಟದಲ್ಲಿ ಸ್ಪರ್ಧಿಸಿ ವಿಜೇತರಾರುವ ಮೂಲಕ ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ಡಿಕೆಡಿ ಮತ್ತು ಅನೇಕ ಟಿವಿ ಶೋಗಳಲ್ಲಿ ಕೂಡ ಭಾಗವಹಿಸಿ ಗಮನ ಸೆಳೆದಿದ್ದಾರೆ ಎಂದು ಪ್ರೀತಾ ಕೃಷ್ಣ ತಿಳಿಸಿದ್ದಾರೆ.
ನಾಪೋಕ್ಲು ಸೆ.9 NEWS DESK : ಶಿಕ್ಷಕ ಮತ್ತು ವಿದ್ಯಾರ್ಥಿಗಳ ನಡುವಿನ ಬಾಂಧವ್ಯ ಪ್ರಮುಖವಾದದ್ದು, ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸುವಲ್ಲಿ ಶಿಕ್ಷಕರ ಪಾತ್ರ ಬಹಳ ಮುಖ್ಯ ಎಂದು ನಿವೃತ್ತ ಪ್ರಾಂಶುಪಾಲ ಕಲ್ಯಾಟಂಡ ಪೂಣಚ್ಚ ಹೇಳಿದರು. ನಾಪೋಕ್ಲುವಿನ ಶ್ರೀ ರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ (ಶಿಕ್ಷಕರ ದಿನಾಚರಣೆ) ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಪ್ರಾಂಶುಪಾಲರಾದ ಬಿ.ಎಂ.ಶಾರದಾ ಡಾ.ರಾಧಾಕೃಷ್ಣನ್ ಅವರ ಜೀವನದ ಕುರಿತು ಹಾಗೂ ಶಿಕ್ಷಕಿ ಚಂದ್ರಕಲಾ ಗುರು ಎಂದರೆ ಯಾರು ಎಂಬ ಬಗ್ಗೆ ಮಾತನಾಡಿದರು. ವಿದ್ಯಾಸಂಸ್ಥೆಯ ಅಧ್ಯಕ್ಷ ಕಲಿಯಂಡ ಹ್ಯಾರಿ ಮಂದಣ್ಣ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಹಾಗೂ ಶಿಕ್ಷಕ ವೃಂದದವರಿಗೆ ವಿವಿಧ ಸ್ಪರ್ಧೆ ನಡೆಸಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ನಿರ್ದೇಶಕರಾದ ನಾಯಕಂಡ ದೀಪಕ್ ಚಂಗಪ್ಪ, ಬಿದ್ದಾಟಂಡ ಮುತ್ತಣ್ಣ, ಶಿಕ್ಷಕ ವೃಂದ ಹಾಜರಿದ್ದರು. ವಿದ್ಯಾರ್ಥಿನಿ ಬಿ.ಎನ್.ವಿಶಾಲಾಕ್ಷಿ ಸ್ವಾಗತಿಸಿದರು. ಕೃಪಾ ಡಿ.ಪಿ. ವಂದಿಸಿದರು. ವರದಿ : ದುಗ್ಗಳ ಸದಾನಂದ.
ಮಡಿಕೇರಿ ಸೆ.6 NEWS DESK : ಕರ್ನಾಟಕ ಲೋಕಾಯುಕ್ತ, ಮಡಿಕೇರಿಯ ಲೋಕಾಯುಕ್ತ ಅಧಿಕಾರಿಗಳು ಸೆಪ್ಟೆಂಬರ್, 11 ರಂದು ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಸೋಮವಾರಪೇಟೆ ತಾಲ್ಲೂಕು ಕೊಡ್ಲಿಪೇಟೆ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಕರ್ನಾಟಕ ಲೋಕಾಯುಕ್ತ ಕಾಯಿದೆಯಡಿ ದೂರು ಅರ್ಜಿ ವಿತರಿಸಿ, ಭರ್ತಿ ಮಾಡಿದ ಮತ್ತು ನೋಟರಿಯಿಂದ ಆಫಿಡೆವಿಟ್ ಮಾಡಿಸಿದ ಅರ್ಜಿ ಸ್ವೀಕರಿಸಲಿದ್ದಾರೆ. ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರೆ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ, ನೌಕರರ ವಿರುದ್ದ ಸಾರ್ವಜನಿಕರು ದೂರುಗಳನ್ನು ನಿಗದಿತ ಪತ್ರದಲ್ಲಿ ನೀಡಬಹುದು. ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಕೋರಿದೆ. ಹೆಚ್ಚಿನ ವಿವರಗಳಿಗೆ ಮಡಿಕೇರಿ ಲೋಕಾಯುಕ್ತ ಪೊಲೀಸ್ ಕಚೇರಿ, ಗೌಳಿಬೀದಿ ಮಡಿಕೇರಿ ದೂ.ಸಂ.08272-295297 ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ತಿಳಿಸಿದ್ದಾರೆ.
ಮಡಿಕೇರಿ ಸೆ.6 NEWS DESK : ರಾಜ್ಯವು ಕರ್ನಾಟಕವೆಂದು ನಾಮಕರಣಗೊಂಡು ಐದು ದಶಕಗಳು ಪೂರೈಸಿದ ಹಿನ್ನೆಲೆಯಲ್ಲಿ ‘ಕನ್ನಡ ಸುವರ್ಣ ಸಂಭ್ರಮ ರಥ’ಯಾತ್ರೆಯು ಕೊಡಗು ಜಿಲ್ಲೆಯ ಪೊನ್ನಂಪೇಟೆಗೆ ಸೆ.7 ರಂದು ಆಗಮಿಸಲಿದೆ. ಆ ನಿಟ್ಟಿನಲ್ಲಿ ಸೆ.7 ರಂದು ಬೆಳಗ್ಗೆ 9 ಗಂಟೆಗೆ ಪೊನ್ನಂಪೇಟೆ ತಾಲ್ಲೂಕಿನ ಆನೆಚೌಕುರಿನ ಗೇಟಿನ ಬಳಿ ‘ಕರ್ನಾಟಕ ಸಂಭ್ರಮ-50 ರ ಪ್ರಯುಕ್ತ ಜ್ಯೋತಿ ರಥಯಾತ್ರೆಯನ್ನು ಬರಮಾಡಿಕೊಳ್ಳಲಾಗುತ್ತದೆ. ಸೆ.8 ರಂದು ಪೊನ್ನಂಪೇಟೆಯಿಂದ ಹೊರಟು ವಿರಾಜಪೇಟೆ, ಸೆಪ್ಟೆಂಬರ್, 09 ರಂದು ವಿರಾಜಪೇಟೆಯಿಂದ ಮಡಿಕೇರಿಗೆ ಆಗಮಿಸಲಿದೆ. ಸೆಪ್ಟೆಂಬರ್, 10 ರಂದು ಮಡಿಕೇರಿಯಿಂದ ಸೋಮವಾರಪೇಟೆ ಮತ್ತು ಸೆಪ್ಟೆಂಬರ್, 11 ರಂದು ಸೋಮವಾರಪೇಟೆಯಿಂದ ಕುಶಾಲನಗರಕ್ಕೆ ತೆರಳಲಿದೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ತಿಳಿಸಿದ್ದಾರೆ.
ಮೂರ್ನಾಡು ಸೆ.6 NEWS DESK : ಮೂರ್ನಾಡಿನ ಸಹಕಾರ ಸ್ಪೋಟ್ರ್ಸ್ ಕ್ಲಬ್ ವತಿಯಿಂದ 100ನೇ ವರ್ಷದ ಕೈಲ್ ಮುಹೂರ್ತ (ಕೈಲ್ಪೊಳ್ದ್) ಹಬ್ಬದ ಶತಮಾನೋತ್ಸವ ಸಂಭ್ರಮದ ಆಟೋಟಗಳ ಕಾರ್ಯಕ್ರಮ ಯಶಸ್ವಿಯಾಗಿ ಜರುಗಿತು. ಮೂರ್ನಾಡು ವಿದ್ಯಾ ಸಂಸ್ಥೆಯ ಬಾಚೆಟ್ಟಿರ ಲಾಲು ಮುದ್ದಯ್ಯ ಕ್ರೀಡಾಂಗಣದಲ್ಲಿ ಕ್ಲಬ್ ವತಿಯಿಂದ ಆಯೋಜಿಸಲಾಗಿದ್ದ ಆಟೋಟಗಳ ಕಾರ್ಯಕ್ರಮಗಳನ್ನು ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸುಂದರ್ ರಾಜ್ ತೆಂಗಿನ ಕಾಯಿಗೆ ಗುಂಡು ಹೊಡೆಯುವ ಮೂಲಕ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಕೊಡಗು ಜಿಲ್ಲೆಯಲ್ಲಿ ಕೈಲ್ ಮುಹೂರ್ತ ಹಬ್ಬವನ್ನು ಬಹಳ ಸಂಭ್ರಮ ಸಡಗರದಿಂದ ಆಚರಿಸಲಾಗುತ್ತದೆ. ಹಬ್ಬದ ದಿನದಂದು ಎಲ್ಲರೂ ಒಟ್ಟಾಗಿ ಸೇರುವ ಹಾಗೂ ಕ್ರೀಡಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದು ಸಂತೋಷದ ವಿಷಯವಾಗಿದೆ ಎಂದು ಹೇಳಿದರು. ಜಿಲ್ಲಾ ಅಪರ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಮಾತನಾಡಿ ಕೊಡಗಿನ ಹಬ್ಬಗಳ ಆಚರಣೆಗಳು ವಿಶೇಷ, ವೈಶಿಷ್ಟ್ಯಗಳಿಂದ ಕೂಡಿದೆ. ಕ್ರೀಡೆಗೆ ಹೆಸರುವಾಸಿಯಾದ ಕೊಡಗು ಜಿಲ್ಲೆಯ ಜನತೆ ಗ್ರಾಮೀಣ ಮಟ್ಟದಲ್ಲಿ ಹಲವಾರು ಕ್ರೀಡೆಗಳನ್ನು ಆಯೋಜಿಸಿ ಭಾಗವಹಿಸುವುದು ಕೂಡ ವಿಶೇಷ ಎಂದು ಅಭಿಪ್ರಾಯಪಟ್ಟರು. ಪುರುಷರು, ಮಹಿಳೆಯರು, ಶಾಲಾ…
ಸಿದ್ದಾಪುರ ಆ.6 NEWS DESK : ವಿರಾಜಪೇಟೆ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಶಿಕ್ಷಕರ ದಿನಾಚರಣೆಯ ಅಂಗವಾಗಿ ನಿವೃತ್ತ ಶಿಕ್ಷಕರನ್ನು ಸನ್ಮಾನಿಸಲಾಯಿತು. ಸಿದ್ದಾಪುರ ಪ್ರೌಢಶಾಲೆಯಲ್ಲಿ ಹಲವು ವರ್ಷ ಸೇವೆ ಸಲ್ಲಸಿ, ನಿವೃತ್ತರಾಗಿರುವ ಕೃಷ್ಣವೇಣಿ ಮತ್ತು ವೇಣುಗೋಪಾಲ್ ದಂಪತಿಗಳನ್ನು ಸಂಘದ ವತಿಯಿಂದ ಸನ್ಮಾನಿ ಗೌರವಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ನಿವೃತ ಶಿಕ್ಷಕಿ ಕೃಷ್ಣವೇಣಿ, ಗುರುಶ್ರೇಷ್ಠರಾದ ಭಾರತರತ್ನ ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನವನ್ನು ಶಿಕ್ಷಕರ ದಿನವಾಗಿ ಆಚರಿಸುತ್ತಿದ್ದು, ತಮ್ಮ ಸೇವೆಯನ್ನು ಗುರುತಿಸಿ ಸನ್ಮಾನಿಸುತ್ತಿರುವುದು ನಿವೃತ ಬದುಕಿನಲ್ಲಿ ಸಂತೋಷ ತಂದಿದೆ ಎಂದರು. ಸಂಘದ ಅಧ್ಯಕ್ಷರಾದ ರೆಜಿತ್ ಕುಮಾರ್ ಗುಹ್ಯ ಮಾತನಾಡಿ, ಜೀವನದ ಅಮೂಲ್ಯವಾದ ಸಂಪತ್ತು ವಿದ್ಯೆ. ವಿದ್ಯಾರ್ಥಿ ಜೀವನದಲ್ಲಿ ನಮ್ಮ ತಪ್ಪುಗಳನ್ನು ತಿದ್ದಿ, ಉತ್ತಮ ಭವಿಷ್ಯದೆಡೆಗೆ ದಾರಿ ತೋರಿಸಿದ ಶಿಕ್ಷಕರನ್ನು ಗೌರವಿಸಬೇಕು. ನೂರಾರು ವಿದ್ಯಾರ್ಥಿಗಳ ಬದುಕನ್ನು ರೂಪಿಸಿದ ಶಿಕ್ಷಕರಿಗೆ ಗೌರವ ನೀಡಬೇಕು ಎಂದರು. ಈ ಸಂದರ್ಭ ವಿರಾಜಪೇಟೆ ತಾಲ್ಲೂಕು ಕಾರ್ಯನಿರತ ಪತ್ರಕರ್ತ ಸಂಘದ ಪ್ರಧಾನ ಕಾರ್ಯದರ್ಶಿ ಎ.ಎಸ್.ಮುಸ್ತಫ, ಉಪಾಧ್ಯಕ್ಷ ಪುತ್ತಂ ಪ್ರದೀಪ್, ಸದಸ್ಯರಾದ ಎ.ಎನ್.ವಾಸು,…
ಸುಂಟಿಕೊಪ್ಪ NEWS DESK ಸೆ.5 : ಕೊಡಗರಹಳ್ಳಿಯ ನಡಿಕೇರಿಯಂಡ ದಿ.ದೇವಯ್ಯ ಅವರ ಪತ್ನಿ ನಂಜಮ್ಮ ದೇವಯ್ಯ (105) ಅವರು ಗುರುವಾರ ಸಂಜೆ 4 ಗಂಟೆಗೆ ನಿಧನ ಹೊಂದಿದರು. ಮೃತರ ಅಂತ್ಯಕ್ರಿಯೆ ಶುಕ್ರವಾರ (ಸೆ.6) ಮಧ್ಯಾಹ್ನ 2 ಗಂಟೆಗೆ ಮೃತರ ಸ್ವಗೃಹದಲ್ಲಿ ನೇರವೇರಲಿದೆ. ಮೃತರು ನಾಲ್ವರು ಪುತ್ರಿಯರು ಹಾಗೂ ಓರ್ವ ಪುತ್ರನನ್ನು ಅಗಲಿದ್ದಾರೆ.






