ಸುಂಟಿಕೊಪ್ಪ NEWS DESK ಸೆ.5 : ಸುಂಟಿಕೊಪ್ಪ ಸರಕಾರಿ ಪದವಿಪೂರ್ವ ಕಾಲೇಜ್ ನಲ್ಲಿ ಶಿಕ್ಷಕರ ದಿನಾಚರಣೆ ಸಮಾರಂಭ ಅರ್ಥಪೂರ್ಣವಾಗಿ ಜರುಗಿತು. ವಿದ್ಯಾರ್ಥಿಗಳು ಗುರುಗಳನ್ನು ಗೌರವಿಸಬೇಕು, ಗುರುಗಳು ಹಾಕಿಕೊಟ್ಟ ಮಾರ್ಗದಲ್ಲಿ ಮುನ್ನಡೆಯಬೇಕು ಎಂದು ಪ್ರಮುಖರಾದ ಶ್ರೀಲತಾ ಕಿವಿಮಾತು ಹೇಳಿದರು. ಸರ್ವಪಲ್ಲಿ ಡಾ.ರಾಧಕೃಷ್ಣ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು. ವಿದ್ಯಾರ್ಥಿಗಳು ಉಪನ್ಯಾಸಕರಿಗಾಗಿ ವಿವಿಧ ಕ್ರೀಡಾ ಚಟುವಟಿಕೆಗಳನ್ನು ಏರ್ಪಡಿಸಿ ಗಮನ ಸೆಳೆದರು. ಅಲ್ಲದೆ ವಿದ್ಯಾರ್ಥಿಗಳಿಂದ ಆಕರ್ಷಕ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ವಿಜೇತರಿಗೆ ಬಹುಮಾನ ವಿತರಿಸಲಾಯಿತು.
ಲೇಖಕ: admin
ಮೂರ್ನಾಡು NEWS DESK ಸೆ.5 : ದಾನಿಗಳ ಸಹಕಾರದಿಂದ ಮೂರ್ನಾಡಿನಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಸುಸಜ್ಜಿತ ಹಿಂದೂ ರುದ್ರಭೂಮಿಗೆ ಹಿಂದೂ ಮಲೆಯಾಳಿ ಸಂಘ ಸ್ಟçಕ್ಚರ್ ನ್ನು ಕೊಡುಗೆಯಾಗಿ ನೀಡಿದೆ. ಸುಮಾರು 40 ಸಾವಿರ ರೂ. ಮೌಲ್ಯದ ಸ್ಟ್ರಕ್ಚರ್ ನ್ನು ನೀಡುವ ಮೂಲಕ ಮೃತದೇಹಗಳನ್ನು ಸುಲಭವಾಗಿ ಸಾಗಾಟ ಮಾಡಲು ಸಹಕರಿಸಿದೆ. ಸ್ಟ್ರಕ್ಚರ್ ಹಸ್ತಾಂತರದ ಸಂದರ್ಭ ಹಿಂದೂ ಮಲೆಯಾಳಿ ಸಂಘ ಹಾಗೂ ಮೂರ್ನಾಡು ಹಿಂದೂ ರುದ್ರಭೂಮಿ ಸಮಿತಿಯ ಪದಾಧಿಕಾರಿಗಳು ಹಾಜರಿದ್ದರು.
ಮಡಿಕೇರಿ ಸೆ.5 NEWS DESK : ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ವತಿಯಿಂದ ಪಶು ವೈದ್ಯಕೀಯ ಉಚಿತ ತುರ್ತು ಚಿಕಿತ್ಸೆಗಾಗಿ ಟೋಲ್ ಫ್ರೀ ಸಹಾಯವಾಣಿ ಸಂಖ್ಯೆ 1962 ನ್ನು ಸಂಪರ್ಕಿಸಬಹುದಾಗಿದೆ. ಈ ಸಂಬಂಧ ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಪಶುಪಾಲನಾ ಇಲಾಖೆಯ ಉಪ ನಿರ್ದೇಶಕರಾದ ಲಿಂಗರಾಜು ದೊಡ್ಡಮನಿ ಭಿತ್ತಿಪತ್ರವನ್ನು ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಬಿಡುಗಡೆ ಮಾಡಿದರು.
ಮಡಿಕೇರಿ ಸೆ.5 NEWS DESK : ಶಿಕ್ಷಕರು ಮಕ್ಕಳ ಹೃದಯದಲ್ಲಿ ಸದಾ ಇರುತ್ತಾರೆ. ಮಕ್ಕಳ ಮನಸ್ಸಿನಿಂದ ಶಿಕ್ಷಕರನ್ನು ತೆಗೆಯಲು ಸಾಧ್ಯವಿಲ್ಲ. ಆ ದಿಸೆಯಲ್ಲಿ ಶಿಕ್ಷಕರೇ ದೇವರು ಎಂದು ಶಾಸಕ ಡಾ.ಮಂತರ್ ಗೌಡ ಪ್ರತಿಪಾದಿಸಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿ ಸಂಯುಕ್ತಾಶ್ರಯದಲ್ಲಿ ನಗರದ ಕೊಡಗು ಗೌಡ ಸಮಾಜದ ಮುಖ್ಯ ಸಭಾಂಗಣದಲ್ಲಿ ನಡೆದ ಶಿಕ್ಷಕರ ದಿನಾಚರಣೆ ಹಾಗೂ ಜಿಲ್ಲಾ ಅತ್ಯುತ್ತಮ ಶಿಕ್ಷಕರ ಪ್ರಶಸ್ತಿ ಪ್ರದಾನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಶಿಕ್ಷಕರು ಮಕ್ಕಳಲ್ಲಿ ಹೆಚ್ಚಿನ ಪ್ರಭಾವ ಬೀರುತ್ತಾರೆ. ಶಿಕ್ಷಕರ ಪ್ರತಿಯೊಂದು ಗುಣವು ಮಕ್ಕಳ ಮೇಲೆ ಪರಿಣಾಮ ಬೀರುತ್ತದೆ. ಶಿಕ್ಷಕರ ಮಾರ್ಗದರ್ಶನ ಸದಾ ಸ್ಮರಣೀಯವಾಗಿದೆ ಎಂದು ಡಾ.ಮಂತರ್ ಗೌಡ ಹೇಳಿದರು. ಕೊಡಗು ಜಿಲ್ಲೆ ಎಸ್ಎಸ್ಎಲ್ಸಿ ಪರೀಕ್ಷಾ ಫಲಿತಾಂಶದಲ್ಲಿ ನಾಲ್ಕನೇ ಸ್ಥಾನ ಪಡೆದಿರುವುದು ಹಾಗೂ ಗುಣಮಟ್ಟದ ಶಿಕ್ಷಣದಲ್ಲಿ ಪ್ರಥಮ ಸ್ಥಾನ ಪಡೆದಿರುವುದು ಶ್ಲಾಘನೀಯ ಕಾರ್ಯವಾಗಿದೆ ಎಂದು ಶಾಸಕರು ಮೆಚ್ಚುಗೆ ವ್ಯಕ್ತಪಡಿಸಿದರು. ಶಿಕ್ಷಕರು ವಿದ್ಯಾರ್ಥಿಗಳಲ್ಲಿ…
ಮಡಿಕೇರಿ ಸೆ.5 NEWS DESK : ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯು ಕೊಡವ ಸಂಸ್ಕೃತಿ ಹಾಗೂ ಚರಿತ್ರೆಗಳ ಸಂಶೋಧನೆ-ಅಧ್ಯಯನದ ದಿಸೆಯಲ್ಲಿ ಕಾರ್ಯಯೋಜನೆ ರೂಪಿಸಿದೆ. ಈ ದಿಸೆಯಲ್ಲಿ ಕೊಡವ ಭಾಷೆ-ಸಾಹಿತ್ಯ, ಸಂಸ್ಕೃತಿ, ಆಚಾರ-ವಿಚಾರ, ಪದ್ಧತಿ-ಪರಂಪರೆಗಳ ಹಾಗೂ ಕೊಡವ-ಕೊಡಗಿನ ಸಂಬಂಧಿತ ಚರಿತ್ರೆಗಳ ಬಗ್ಗೆ ಆಳವಾದ ಸಂಶೋಧನೆಗೆ ಅಕಾಡೆಮಿಯ ಕಾರ್ಯಸೂಚಿಯನ್ವಯ ಅರ್ಹ-ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತರು ಕಾರ್ಯನಿರ್ವಹಿಸಲು ಬಯಸಿದ್ದಲ್ಲಿ ಹೆಚ್ಚಿನ ವಿವರಗಳಿಗೆ ಅಧ್ಯಕ್ಷರು, ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ, ಜೂನಿಯರ್ ಕಾಲೇಜು ರಸ್ತೆ, ಸ್ಕೌಟ್ಸ್ ಮತ್ತು ಗೈಡ್ಸ್ ಭವನ, ಮ್ಯಾನ್ಸ್ ಕಾಪೌಂಡ್ ಹತ್ತಿರ ಮಡಿಕೇರಿ. ಇವರಿಗೆ ಪತ್ರ ಬರೆಯುವಂತೆ ತಿಳಿಸಲಾಗಿದೆ ಎಂದು ಅಧ್ಯಕ್ಷರಾದ ಅಜ್ಜಿನಿಕಂಡ ಸಿ. ಮಹೇಶ್ ನಾಚಯ್ಯ ತಿಳಿಸಿದ್ದಾರೆ.
ನಾಪೋಕ್ಲು ಸೆ.5 NEWS DESK : ಮೈಸೂರು ದೇವಧನ್ ಫೌಂಡೇಶನ್ ಹಾಗೂ ಶ್ರೀ ರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯ ಇಂಟರಾಕ್ಟ್ ಸಂಘ ಸಹಯೋಗದಲ್ಲಿ ವಿದ್ಯಾರ್ಥಿಗಳಿಗೆ ವಿಚಾರ ಸಂಕಿರಣ ನಡೆಯಿತು. ಫೌಂಡೇಶನ್ ನ ಪ್ರಮುಖರಾದ ಬಲ್ಲಚಂಡ ಧನ್ಯ ಪೊನ್ನಮ್ಮ, ಕೋಟೆರ ದೇವಯ್ಯ ಹಾಗೂ ತಂಡದಿಂದ ವಿದ್ಯಾರ್ಥಿಗಳಿಗೆ ಏಕಾಗ್ರತೆ, ಖಿನ್ನತೆ ಹಾಗೂ ಆಕ್ರಮಣಕಾರಿ ವರ್ತನೆಯ ಬಗ್ಗೆ ಮಾಹಿತಿ ನೀಡಿ ವಿದ್ಯಾರ್ಥಿಗಳು ಯಾವುದೇ ಸಂದರ್ಭದಲ್ಲಿ ಖಿನ್ನತೆಗೆ ಒಳಗಾಗಬಾರದು. ಉತ್ತಮ ಗುಣ ನಡತೆಗಳನ್ನು ರೂಪಿಸಿಕೊಳ್ಳಬೇಕು. ಮುಂದಿನ ಭವಿಷ್ಯವನ್ನು ರೂಪಿಸಿಕೊಳ್ಳಲು ಈಗಿನಿಂದಲೇ ಯೋಜನೆ ಹಾಕಿಕೊಳ್ಳಬೇಕು ಎಂದ ಮಾರ್ಗದರ್ಶನ ನೀಡಿದರು. ಈ ಸಂದರ್ಭ ಸಂಘದ ಸಂಚಾಲಕಿ ಕೆ.ಎಸ್. ಶೋಭ, ಸ್ಮಿತಾ , ಸಂಘದ ಸದಸ್ಯರು, ವಿದ್ಯಾರ್ಥಿಗಳು ಶಿಕ್ಷಕರು ಪಾಲ್ಗೊಂಡಿದ್ದರು.
ಮಡಿಕೇರಿ ಸೆ.5 NEWS DESK : ಗೋಣಿಕೊಪ್ಪನ ಜಿ.ಹೆಚ್.ಎಸ್ ಶಾಲೆಯಲ್ಲಿ ಲೇಖನಿ ಅಭಿಯಾನ ನಡೆಯಿತು. ಅಭಿಯಾನದ ಸಂಚಾಲಕಿ ವಾತ್ಸಲ್ಯ ಅಭಿಯಾದ 20 ಮಹತ್ವಗಳನ್ನು ವಿವರಿಸಿ ಲೇಖನಿ ತಯಾರಿಸುವ ವಿಧಾನಗಳನ್ನು ತಿಳಿಸಿಕೊಟ್ಟರು. ಈ ಸಂದರ್ಭ ಶಾಲೆಯ ಮುಖ್ಯೋಪಾಧ್ಯಾಯರಾದ ರತೀಶ್ ರೈ, ಶಿಕ್ಷಕಿಯರಾದ ಸಾಬೀನಾ ಬಾನು, ಲವೀನ್, ರಶ್ಮಿ, ಹಂನ್ಸಿರ ಹಾಜರಿದ್ದರು.
ಬೆಂಗಳೂರು ಸೆ.5 NEWS DESK : “ಭಾರತ ರತ್ನ ಡಾ.ಸರ್ವೆಪಲ್ಲಿ ರಾಧಾಕೃಷ್ಣನ್ ಜನ್ಮದಿನದ ಅಂಗವಾಗಿ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಮತ್ತು ರಾಜ್ಯ ಪ್ರಶಸ್ತಿ ಪ್ರದಾನ ಸಮಾರಂಭ”ವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ರೈತರು – ಶಿಕ್ಷಕರು – ಸೈನಿಕರು ದೇಶದ ನಿರ್ಮಾತೃಗಳು. ದೇಶದ ಎರಡನೇ ರಾಷ್ಟ್ರಪತಿಗಳಾಗಿದ್ದ ರಾಧಾಕೃಷ್ಣನ್ ಅವರು ಶ್ರೇಷ್ಠ ಶಿಕ್ಷಕರಾಗಲು ಸಾಧ್ಯವಾಗಿದೆ ಅಂದರೆ, ಇದೇ ಸಾಧ್ಯತೆ ಎಲ್ಲಾ ಶಿಕ್ಷಕರಿಗೂ ಇದ್ದೇ ಇರುತ್ತದೆ. ಹೀಗಾಗಿ ಪ್ರತಿಯೊಬ್ಬ ಶಿಕ್ಷಕರೂ ರಾಧಾಕೃಷ್ಣನ್ ಅವರ ಮಾರ್ಗದಲ್ಲಿ ನಡೆಯಲು ಪ್ರಯತ್ನಿಸಬೇಕು. ಪ್ರತಿಯೊಬ್ಬ ವಿದ್ಯಾರ್ಥಿಯ ವ್ಯಕ್ತಿತ್ವವನ್ನು ರೂಪಿಸುವ ಮೂಲಕ ದೇಶದ ವ್ಯಕ್ತಿತ್ವವನ್ನು ರೂಪಿಸುವವರು ನಮ್ಮ ಶಿಕ್ಷಕರು. ಇದು ಶಿಕ್ಷಕರ ಮೂಲಭೂತ ಜವಾಬ್ದಾರಿಯಾಗಿದೆ ಎಂದರು. ಆಕಸ್ಮಿಕವಾಗಿ ಶಿಕ್ಷಕ ವೃತ್ತಿಗೆ ಬಂದವರಿಗಿಂತ ಶಿಕ್ಷಕ ವೃತ್ತಿಯನ್ನು ಆಯ್ಕೆ ಮಾಡಿಕೊಂಡವರೇ ಅತಿ ಹೆಚ್ಚಾಗಿದ್ದಾರೆ. ಹೀಗೆ ಈ ವೃತ್ತಿಯನ್ನು ಆಯ್ಕೆ ಮಾಡಿಕೊಂಡವರ ಬಗ್ಗೆ ನನಗೆ ಹೆಮ್ಮೆ ಎನಿಸುತ್ತದೆ. ವಿದ್ಯಾರ್ಥಿಗಳು ಸ್ವತಂತ್ರವಾಗಿ ಯೋಚಿಸುವಂತೆ ರೂಪಿಸುವುದೇ ಶಿಕ್ಷಕರ ಜವಾಬ್ದಾರಿ. ವೈಜ್ಞಾನಿಕತೆ ಮತ್ತು ವೈಚಾರಿಕತೆಯನ್ನು ವಿದ್ಯಾರ್ಥಿಗಳು…
ಬೆಂಗಳೂರು ಸೆ.5 NEWS DESK : ಹಿರಿಯ ಸಾಮಾಜಿಕ ಕಾರ್ಯಕರ್ತೆ ವಿಜಯಮ್ಮ, ನಟ ಚೇತನ್ ನೇತೃತ್ವದ ಫೈರ್ ನಿಯೋಗದವರು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ, ಮಲಯಾಳಂ ಸಿನೆಮಾ ರಂಗದಲ್ಲಿ ನಟಿಯರ ಮೇಲಿನ ಲೈಂಗಿಕ ದೌರ್ಜನ್ಯ ಕುರಿತ ತನಿಖೆಗಾಗಿ ಸಮಿತಿ ರಚನೆ ಮಾಡಿದಂತೆ, ರಾಜ್ಯ ಸರ್ಕಾರವು ಸಮಿತಿ ರಚಿಸಿ, ಕನ್ನಡ ಚಿತ್ರರಂಗದಲ್ಲಿ ನಟಿಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳ ಸಮಗ್ರ ತನಿಖೆ ಮಾಡುವಂತೆ ಮನವಿ ಸಲ್ಲಿಸಿದರು.
ನಾಪೋಕ್ಲು ಸೆ.5 NEWS DESK : ನಾಪೋಕ್ಲು ಗ್ರಾಮ ಪಂಚಾಯಿತಿಗೆ ಒಳಪಟ್ಟ ಚೆರಿಯಪರಂಬು-ಕಲ್ಲುಮೊಟ್ಟೆ ಸಂಪರ್ಕ ರಸ್ತೆ ದುರಸ್ತಿಗೆ ಚಾಲನೆ ದೊರೆಯಿತು. ಚೆರಿಯಪರಂಬು- ಕಲ್ಲು ಮೊಟ್ಟೆಯ ಸಂಪರ್ಕ ರಸ್ತೆಯು ಹಲವು ವರ್ಷಗಳಿಂದ ಹದಗೆಟ್ಟಿತ್ತು.ಇದರಿಂದ ಸಾರ್ವಜನಿಕರು, ವಿದ್ಯಾರ್ಥಿಗಳು, ವಾಹನ ಚಾಲಕರು, ಆಟೋ ಚಾಲಕರು ಸಂಕಷ್ಟ ಅನುಭವಿಸುವಂತಾಗಿದ್ದು, ಈ ಬಗ್ಗೆ ಅರಿತ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ರಸ್ತೆ ದುರಸ್ತಿಗೆ ರೂ.10 ಲಕ್ಷ ಅನುದಾನ ಮಂಜೂರು ಮಾಡಿದ್ದು, ಕಾಂಕ್ರೀಟ್ ರಸ್ತೆ ನಿರ್ಮಾಣ ಕಾಮಗಾರಿ ಆರಂಭಗೊಂಡಿದೆ. ಈ ಸಂದರ್ಭ ನಾಪೋಕ್ಲು ಬ್ಲಾಕ್ ಅಧ್ಯಕ್ಷ ಕೆ.ಎ.ಇಸ್ಮಾಯಿಲ್, ನಾಪೋಕ್ಲು ವಲಯ ಅಧ್ಯಕ್ಷ ಮಾಚೇಟಿರ ಕುಶು ಕುಶಾಲಪ್ಪ, ಪಂಚಾಯಿತಿ ಸದಸ್ಯರಾದ ಟಿ.ಎ.ಮಹಮ್ಮದ್, ಕಾಂಗ್ರೆಸ್ ಮುಖಂಡರಾದ ಟಿ.ಎ.ಉಂಬಾಯಿ, ಪಿ.ಯು.ರಜಾಕ್, ಹನಿಫಾ, ಸೌಕತ್ ಝುಬೇರ್, ಹಜೀಜ್, ಫಿರು ಸಾಹೇಬ್, ಫಯಾಜ್, ಹಾಗೂ ಗ್ರಾಮಸ್ಥರು ಹಾಜರಿದ್ದರು. ವರದಿ : ದುಗ್ಗಳ ಸದಾನಂದ.






