ಮಡಿಕೇರಿ ಸೆ.5 NEWS DESK : ಭಾಗಮಂಡಲದ ಜ್ಞಾನೋದಯ ಆಂಗ್ಲ ಮಾಧ್ಯಮ ಶಾಲೆಯ (JEMS) ವಿದ್ಯಾರ್ಥಿಗಳು ನಾಪೋಕ್ಲು ವಲಯ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿ ಸಾಧನೆ ಮಾಡಿದ್ದಾರೆ. ಪ್ರಾಥಮಿಕ ಶಾಲಾ ವಿಭಾಗದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯ ಬಾಲಕಿಯರ ವಿಭಾಗದಲ್ಲಿ ಪ್ರಥಮ, ಬಾಲಕರ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ. ಚೆಸ್ ಪಂದ್ಯಾವಳಿಯಲ್ಲಿ ಎ.ಎನ್.ಬೃಂದಾ, ಕೆ. ಆರ್.ಬಿನೀಷ್, ಎ.ಎನ್.ಚಿರಾಗ್ ಚಂಗಪ್ಪ ವೀಜೆತಾರಾಗಿ ತಾಲ್ಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಭಾಗಮಂಡಲ ಕಾವೇರಿ ಜೂನಿಯರ್ ಕಾಲೇಜಿನಲ್ಲಿ ನಡೆದ ಪ್ರೌಢ ಶಾಲಾ ವಿಭಾಗ ಮಟ್ಟದ ಬಾಲಕರ ಹಾಕಿ ಪಂದ್ಯಾವಳಿಯಲ್ಲಿ ಪ್ರಥಮ, ಹ್ಯಾಂಡ್ ಬಾಲ್ ನಲ್ಲಿ ದ್ವಿತೀಯ ಹಾಗೂ ಶಟಲ್ ಬ್ಯಾಡ್ಮಿಂಟನ್ ನಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ. ಬಾಲಕಿಯರ ವಿಭಾಗದ ಖೋ -ಖೋ ಪಂದ್ಯಾವಳಿಯಲ್ಲಿ ದ್ವಿತೀಯ, ಶಟಲ್ ಬ್ಯಾಡ್ಮಿಂಟನ್ ನಲ್ಲಿ ದ್ವಿತೀಯ ಸ್ಥಾನವನ್ನು ತಮ್ಮದಾಗಿಸಿಕೊಂಡಿದ್ದಾರೆ. ಚೆಸ್ ಪಂದ್ಯಾವಳಿಯಲ್ಲಿ ಬಾಲಕಿಯರಾದ ಶಿರಿನ್ ಸೀತಮ್ಮ , ಶೀರ್ಷಾ, ವೈ.ಎಸ್.ಸ್ಪಂದನ, ಕೆ.ಪಿ.ನಿಧಿ ಮತ್ತು ಬಾಲಕರ ವಿಭಾಗದಲ್ಲಿ ಬಿ.ಯು.ಕುಶಾಲಪ್ಪ ವಿಜೇತರಾಗಿ ತಾಲ್ಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಅಥ್ಲೆಟಿಕ್ಸ್ ಬಾಲಕಿಯರ ವಿಭಾಗದಲ್ಲಿ…
ಲೇಖಕ: admin
NEWS DESK : : ಹಿಂದೂಗಳ ಹಬ್ಬಗಳಲ್ಲಿ ಶ್ರೀ ಗಣೇಶ ಚತುರ್ಥಿಗೆ ವಿಶೇಷ ಸ್ಥಾನವಿದೆ. ಶ್ರೀ ಗಣೇಶ ಚತುರ್ಥಿಯ ದಿನದಂದು ಮತ್ತು ಈ ಹಬ್ಬದ ಇತರ ದಿನಗಳಂದು ಶ್ರೀ ಗಣೇಶತತ್ತ್ವವು ಇತರ ದಿನಗಳ ತುಲನೆಯಲ್ಲಿ 1000 ಪಟ್ಟು ಹೆಚ್ಚು ಕಾರ್ಯರತವಾಗಿರುತ್ತದೆ. ಇಂತಹ ಸಮಯದಲ್ಲಿ ಶ್ರೀ ಗಣಪತಿಯ ಉಪಾಸನೆಯನ್ನು ಮಾಡುವುದರಿಂದ ಆಧ್ಯಾತ್ಮಿಕ ಸ್ತರದಲ್ಲಿ ಗಣೇಶತತ್ತ್ವದ ಹೆಚ್ಚು ಲಾಭವಾಗುತ್ತದೆ. ಶ್ರೀ ಗಣೇಶ ಚತುರ್ಥಿಯನ್ನು ಸೆ.7 ರಂದು ಆಚರಿಸಲಿದ್ದೇವೆ. ಗಣೇಶಭಕ್ತರಿಗೆ ವಿಘ್ನಹರ್ತಾ, ಸಿದ್ಧಿದಾತಾ ಮತ್ತು ಅಷ್ಟ ದಿಕ್ಕುಗಳ ಅಧಿಪತಿಯಾದ ಶ್ರೀ ಗಣೇಶನ ಭಾವಪೂರ್ಣ ಪೂಜೆಯನ್ನು ಮಾಡಿ ಅವನ ಆಶೀರ್ವಾದವನ್ನು ಪಡೆಯುವ ಹಂಬಲ ಸದಾ ಇರುತ್ತದೆ. ‘ಗಣೇಶಭಕ್ತರು ಗಣೇಶಪೂಜೆಯನ್ನು ಭಾವಪೂರ್ಣವಾಗಿ ಮಾಡುವಂತಾಗಲಿ, ಮತ್ತು ಅವರ ಮೇಲೆ ಗಣಪತಿಯ ಕೃಪೆಯಾಗಲಿ’ ಎಂಬ ಉದ್ದೇಶದಿಂದ ಶ್ರೀ ಗಣೇಶ ಚತುರ್ಥಿಯನ್ನು ಶಾಸ್ತ್ರೀಯವಾಗಿ ಹೇಗೆ ಆಚರಿಸಬೇಕು ಎಂಬ ಮಾರ್ಗದರ್ಶನವನ್ನು ಮುಂದಿನ ಲೇಖನದ ಮೂಲಕ ನೀಡಲಾಗಿದೆ. ಜೇಡಿಮಣ್ಣು ಅಥವಾ ಆವೆಮಣ್ಣಿನಿಂದ ಮೂರ್ತಿಯನ್ನು ತಯಾರಿಸಬೇಕು ಎಂಬ ಶಾಸ್ತ್ರವಿಧಿಯಿದೆ: ಪಾರ್ವತಿಯು ತಯಾರಿಸಿದ ಶ್ರೀ ಗಣೇಶನು ಮಹಾಗಣಪತಿಯ ಅವತಾರವಾಗಿದ್ದಾನೆ.…
ಮಡಿಕೇರಿ ಸೆ.5 NEWS DESK : 1965ರ ಭಾರತ-ಪಾಕಿಸ್ತಾನ ಯುದ್ಧದಲ್ಲಿ ವೀರ ಮರಣ ಹೊಂದಿದ ಮಹಾವೀರ ಚಕ್ರ (ಮರಣೋತ್ತರ) ಪುರಸ್ಕೃತ ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ಬಿ.ದೇವಯ್ಯ ಅವರ 59ನೇ ಪುಣ್ಯಸ್ಮರಣೆ ಸೆ.7 ರಂದು ಮಡಿಕೇರಿಯಲ್ಲಿ ನಡೆಯಲಿದೆ ಎಂದು ಕೊಡವ ಮಕ್ಕಡ ಕೂಟದ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಕೊಡವ ಮಕ್ಕಡ ಕೂಟ, ಅಜ್ಜಮಾಡ ಒಕ್ಕ (ಕುಟುಂಬಸ್ಥರ) ಹಾಗೂ ಸ್ವಾ.ಲೀ ಅಜ್ಜಮಾಡ ದೇವಯ್ಯ ಟ್ರಸ್ಟ್ನ ಸಹಯೋಗದಲ್ಲಿ ಬೆಳಗ್ಗೆ 11 ಗಂಟೆಗೆ ಸ್ವಾ.ಲೀ ಅಜ್ಜಮಾಡ ಬಿ.ದೇವಯ್ಯ ವೃತ್ತದಲ್ಲಿ ಪುಷ್ಪಾರ್ಚನೆ ಮಾಡುವ ಮೂಲಕ ಪುಣ್ಯಸ್ಮರಣೆಯನ್ನು ಆಚರಿಸಲಾಗುವುದು ಎಂದು ಹೇಳಿದ್ದಾರೆ. ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ, ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ, ವಿಧಾನ ಪರಿಷತ್ ಸದಸ್ಯ ಮಂಡೇಪಂಡ ಸುಜಾ ಕುಶಾಲಪ್ಪ, ಏರ್ ಮಾರ್ಷಲ್ ಕೊಡಂದೇರ ನಂದಾ ಕಾರ್ಯಪ್ಪ, ಮಾಜಿ ಸಚಿವ ಎಂ.ಪಿ.ಅಪ್ಪಚ್ಚು ರಂಜನ್, ಮಾಜಿ ಶಾಸಕ ಕೆ.ಜಿ.ಬೋಪಯ್ಯ, ವಿಧಾನ ಪರಿಷತ್ ಮಾಜಿ…
ಮಡಿಕೇರಿ ಸೆ.5 NEWS DESK : ಕೊಡಗು ಜಿಲ್ಲೆಯ ಅಮ್ಮತ್ತಿ ಒಂಟಿಯಂಗಡಿ ಹಚ್ಚಿನಾಡು ಗ್ರಾಮದ ಜಿಲ್ಲಂಡ ಸಿ.ತನು ಭಾರತೀಯ ಸೇನೆಯಲ್ಲಿ ಸುಬೇಧಾರ್ ಆಗಿ ಬಡ್ತಿ ಹೊಂದಿದ್ದಾರೆ. ಭಾರತೀಯ ಸೇನೆಯ ಎಎಂಸಿಯಲ್ಲಿ ಕಳೆದ 23 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ತನು, ದೆಹಲಿ, ಕೊಲ್ಕತ್ತಾ, ಜಮ್ಮು ಮಾತ್ರವಲ್ಲದೆ, ಶ್ರೀಲಂಕಾ ಹಾಗೂ ದಕ್ಷಿಣ ಆಫ್ರಿಕಾದಲ್ಲಿಯೂ ಕರ್ತವ್ಯ ನಿರ್ವಹಿಸಿದ್ದಾರೆ. ಇದೀಗ ಸುಬೇಧಾರ್ ಆಗಿ ಬಡ್ತಿ ಹೊಂದಿ ಮಹಾರಾಷ್ಟ್ರದ ಪುಣೆಯಲ್ಲಿ ಸೇವೆಯಲ್ಲಿದ್ದಾರೆ. ಜಿಲ್ಲಂಡ ಸಿ.ತನು ಅವರ ತಂದೆ ಹಚ್ಚಿನಾಡು ಗ್ರಾಮದ ಜಿಲ್ಲಂಡ ಸಿ.ಚಂಗಪ್ಪ, ತಾಯಿ ಸರೋಜ, ಪತ್ನಿ ಗಾಯತ್ರಿ, ಇಬ್ಬರು ಪುತ್ರರಾದ ಹರನ್ ಕಾಳಪ್ಪ ಹಾಗೂ ಸೋಹನ್ ಮಾದಪ್ಪ ಪ್ರಸ್ತುತ ಬೆಂಗಳೂರಿನಲ್ಲಿ ನೆಲೆಸಿದ್ದಾರೆ. ತನು ಅವರು ಕೊಡಗಿನ ನಟಿ, ನಿರ್ಮಾಪಕಿ, ನಿರ್ದೇಶಕಿ, ಬರಹಗಾರ್ತಿ ಈರಮಂಡ ಹರಿಣಿ ವಿಜಯ್ ಅವರ ಸಹೋದರರಾಗಿದ್ದಾರೆ.
ಮಡಿಕೇರಿ ಸೆ5 NEWS DESK : ಕನ್ನಡಿಗರಿಗೆ ಸದಭಿರುಚಿಯ ಮನರಂಜನೆ ನೀಡುತ್ತಾ ಬಂದಿರುವ ಕಲರ್ಸ್ ಕನ್ನಡ ವಾಹಿನಿಯು ಈಗ ಮತ್ತೊಂದು ಹೊಸ ಧಾರಾವಾಹಿಯನ್ನು ಹೊತ್ತು ತಂದಿದೆ. ರೂಪವೇ ಶಾಪವಾದ ಹುಡುಗಿಯೊಬ್ಬಳ ಕತೆಯನ್ನು ಮನಮುಟ್ಟುವಂತೆ ಹೇಳುವ ಈ ಹೊಸ ಧಾರಾವಾಹಿಯ ಹೆಸರು ‘ದೃಷ್ಟಿಬೊಟ್ಟು’. ಸೆಪ್ಟೆಂಬರ್ 9ರಿಂದ ಸೋಮವಾರದಿಂದ ಶನಿವಾರದವರೆಗೆ ಪ್ರತಿ ಸಂಜೆ ಆರೂವರೆಗೆ ಈ ಧಾರಾವಾಹಿ ಪ್ರಸಾರವಾಗಲಿದೆ. ಜನಪ್ರಿಯ ಕಿರುತೆರೆ ತಾರೆ ವಿಜಯ್ ಸೂರ್ಯ ಈ ಧಾರಾವಾಹಿಯ ಮೂಲಕ ಕಲರ್ಸ್ ಕನ್ನಡ ವಾಹಿನಿಗೆ ಮರಳಿರುವುದು ವಿಶೇಷ. ನಾಯಕಿಯ ಪಾತ್ರದಲ್ಲಿ ಅರ್ಪಿತಾ ಮೋಹಿತೆ ಎಂಬ ಹೊಸ ನಟಿ ಕಾಣಿಸಿಕೊಳ್ಳಲಿದ್ದಾರೆ. ಹಿರಿಯ ನಟಿ ಅಂಬಿಕಾ ಈ ಧಾರಾವಾಹಿ ಮೂಲಕ ಕಿರುತೆರೆಗೆ ಕಾಲಿಡುತ್ತಿದ್ದಾರೆ. ಜೊತೆಗೆ ದೀಪಶ್ರೀ, ರಾಘು ಶಿವಮೊಗ್ಗ, ಅಶೋಕ್ ಹೆಗ್ಡೆ ಸೇರಿದಂತೆ ಅನೇಕ ಕಿರಿ ಹಿರಿ ನಟನಟಿಯರು ನಿಮ್ಮ ಮನಸೂರೆಗೊಳ್ಳಲು ಕಾದಿದ್ದಾರೆ. ‘ಈ ಧಾರಾವಾಹಿಯ ಪ್ರತಿಯೊಂದು ಪಾತ್ರವೂ ವೀಕ್ಷಕರ ಮನಗೆಲ್ಲುವಂತಿದೆ’ ಎನ್ನುತ್ತಾರೆ ಕಲರ್ಸ್ ಕನ್ನಡದ ಬ್ಯುಸಿನೆಸ್ ಹೆಡ್ ಪ್ರಶಾಂತ್ ನಾಯಕ್. ಅತ್ಯಾಧುನಿಕ ಕ್ಯಾಮೆರಾಗಳನ್ನು ಬಳಸಿ ಚಿತ್ರೀಕರಣ…
ಮಡಿಕೇರಿ NEWS DESK ಸೆ.5 : ಲೀಟಲ್ ಫ್ಲವರ್ ಶಾಲೆಯಲ್ಲಿ ಲೇಖನಿ ಅಭಿಯಾನ ಕಾರ್ಯಕ್ರಮ ನಡೆಯಿತು. ಅಭಿಯಾನದ ಸಂಚಾಲಕಿ ವಾತ್ಸಲ್ಯ 7ನೇ ತರಗತಿ ವಿದ್ಯಾರ್ಥಿಗಳಿಗೆ ಲೇಖನಿ ಅಭಿಯಾನ 20 ಮಹತ್ವ ವನ್ನು ವಿವರಿಸಿದರು. ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯೋಪಾಧ್ಯಾಯರಾದ ಪಾರ್ವತಿ, ಶಿಕ್ಷಕಿ ಭಾರತಿ ಹಾಜರಿದ್ದರು.
ಪೊನ್ನಂಪೇಟೆ, ಸೆ.5 NEWS DESK : ಭಾರತೀಯ ಜನತಾ ಪಾರ್ಟಿಯ ವಿರಾಜಪೇಟೆ ಮಂಡಲ ವ್ಯಾಪ್ತಿಯ ಹಾತೂರು ಶಕ್ತಿ ಕೇಂದ್ರದ ಪ್ರಮುಖರಾಗಿ ಮುರುವಂಡ ಸವನ್ ಸೋಮಣ್ಣ ಹಾಗೂ ಪಡಿಕಲ್ ಯದುಕುಮಾರ್ ಆಯ್ಕೆಯಾಗಿದ್ದಾರೆ. ಹಾತೂರಿನಲ್ಲಿ ನಡೆದ ಪಕ್ಷದ ಶಕ್ತಿಕೇಂದ್ರದ ಪುನರ್ ರಚನಾ ಸಭೆಯಲ್ಲಿ ಈ ಆಯ್ಕೆ ಪ್ರಕ್ರಿಯೆ ನಡೆಯಿತು. ಸಭೆಯಲ್ಲಿ ಹಾತೂರು ಬಿಜೆಪಿ ಶಕ್ತಿ ಕೇಂದ್ರದ ಸಹ ಪ್ರಮುಖರಾಗಿ ತೀತಮಾಡ ತಿಮ್ಮಯ್ಯ ಹಾಗೂ ಕಾಡ್ಯಮಾಡ ವಿನೋದ್ ಅವರನ್ನು ಆಯ್ಕೆಗೊಳಿಸಲಾಯಿತು. ಸಭೆಯಲ್ಲಿ ವಿರಾಜಪೇಟೆ ಮಂಡಲ ಬಿಜೆಪಿ ಅಧ್ಯಕ್ಷ ಮಾಚಿಮಂಡ ಸುವಿನ್ ಗಣಪತಿ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಗುಮ್ಮಟ್ಟಿರ ಕಿಲನ್ ಗಣಪತಿ, ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಮುದ್ದಿಯಡ ಮಂಜು ಗಣಪತಿ, ಅಜಿತ್ ಕರುಂಬಯ್ಯ, ವಕ್ತಾರ ಚೆಪ್ಪುಡಿರ ರಾಕೇಶ್ ದೇವಯ್ಯ, ತಾಲೂಕು ಉಪಾಧ್ಯಕ್ಷ ಕಬೀರ್ ದಾಸ್, ಮಲ್ಲoಡ ಮಧು ಸೇರಿದಂತೆ ಪಕ್ಷದ ಹಿರಿಯರು, ಹಾತೂರು ಶಕ್ತಿ ಕೇಂದ್ರದ ಪದಾಧಿಕಾರಿಗಳು, ವಿವಿಧ ಬೂತ್ ಸಮಿತಿ ಸದಸ್ಯರು, ಜಿಲ್ಲಾ ಹಾಗೂ ತಾಲೂಕು ಸಮಿತಿ ಪ್ರಮುಖರು, ಪಕ್ಷದ ವಿವಿಧ ಮೋರ್ಚಾದ ಪದಾಧಿಕಾರಿಗಳು,…
ಮಡಿಕೇರಿ ಸೆ.5 NEWS DESK : ಶಿಕ್ಷಕರ ದಿನಾಚರಣೆಯ ಅಂಗವಾಗಿ ರೋಟರಿ ಮಡಿಕೇರಿ ವುಡ್ಸ್ ಸಂಸ್ಥೆ ವತಿಯಿಂದ ನಾಲ್ವರು ಶಿಕ್ಷಕರಿಗೆ ನೇಶನ್ ಬಿಲ್ಡರ್ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಭಾಗಮಂಡಲ ಕೆ.ವಿ.ಜಿ.ಐಟಿಐನ ಪದ್ಮಕುಮಾರ್ ರೈ, ನಾಪೋಕ್ಲು ಪಬ್ಲಿಕ್ ಶಾಲೆಯ ಉಷಾರಾಣಿ, ಪೆರಾಜೆ ಅಮೆಚೂರು ಪ್ರಾಥಮಿಕ ಶಾಲೆಯ ಲಾಲಿ ಮತ್ತು ಚೇರಂಬಾಣೆ ಅರುಣಾ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ರಾಮಕೃಷ್ಣ ಅವರಿಗೆ ನೇಶನ್ ಬಿಲ್ಡರ್ ಪ್ರಶಸ್ತಿ ಪ್ರದಾನ ಮಾಡಿ ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ರೋಟರಿ ಅಸಿಸ್ಟೆಂಟ್ ಗವರ್ನರ್, ದೇವಣಿರ ಕಿರಣ್, ನೆಶನ್ ಬಿಲ್ಡರ್ ಪ್ರಶಸ್ತಿಯ ಇತಿಹಾಸ ಮತ್ತು ಮಹತ್ವವನ್ನು ವಿವರಿಸಿದರು. ರೋಟರಿ ವುಡ್ಸ್ ಕ್ಲಬ್ ಈ ಕಾರ್ಯಕ್ರಮ ಮಾಡುತ್ತಿರುವುದಕ್ಕೆ ಸಂತಸ ವ್ಯಕ್ತಪಡಿಸಿದರು. ವಲಯ ಸೇನಾನಿ ಅನಿತಾ ಪೂವಯ್ಯ ಮಾತನಾಡಿ ವುಡ್ಸ್ ಸಂಸ್ಥೆಯ ಪ್ರಮುಖ ಕಾರ್ಯಕ್ರಮಗಳನ್ನು ಶ್ಲಾಘಿಸುವ ಜೊತೆಗೆ ಪ್ರಶಸ್ತಿಗೆ ಭಾಜನರಾದ ಶಿಕ್ಷಕರಿಗೆ ಅಭಿನಂದನೆಗಳನ್ನು ತಿಳಿಸಿದರು. ರೋಟರಿ ವುಡ್ಸ್ ಅಧ್ಯಕ್ಷ ಹರೀಶ್ ಕಿಗ್ಗಾಲ್ ಮಾತನಾಡಿ, ಅರ್ಹ ಶಿಕ್ಷಕರನ್ನು ಹುಡುಕಿ ರೋಟರಿ ವುಡ್ಸ್ ವತಿಯಿಂದ ಗೌರವಿಸಲಾಗಿದೆ ಎಂದರು. ಕಾರ್ಯಕ್ರಮದಲ್ಲಿ ಕ್ಲಬ್…
ಮಡಿಕೇರಿ NEWS DESK ಸೆ.5 : ಖ್ಯಾತ ನಿದೇರ್ಶಕ, ನಟ ರಕ್ಷಿತ್ ಶೆಟ್ಟಿ ಅವರ ಪರಂವಃ ಸ್ಟುಡಿಯೋಸ್ ನಿರ್ಮಾಣ ಮಾಡಿರುವ “ಇಬ್ಬನಿ ತಬ್ಬಿದ ಇಳೆಯಲಿ” ಚಿತ್ರ ರಾಜ್ಯಾದ್ಯಂತ ಇಂದು ಚಿತ್ರಮಂದಿರಗಳಲ್ಲಿ ತೆರೆ ಕಂಡು ಯಶಸ್ವೀ ಪ್ರದರ್ಶನ ಕಾಣುತ್ತಿದೆ. ಮಡಿಕೇರಿ ನಿವಾಸಿ, ನಿವೃತ್ತ ಸುಬೇದಾರ್ ಮೇಜರ್ ಪೂಜಾರೀರ ಬೆಳ್ಯಪ್ಪ ಹಾಗೂ ವೇದಾವತಿ ದಂಪತಿಯ ಪುತ್ರ ಪೂಜಾರೀರ ಬಿ.ಚಂದ್ರಜಿತ್ ಈ ಚಿತ್ರವನ್ನು ನಿರ್ದೇಶಿಸಿರುವುದು ವಿಶೇಷ. ಚಿತ್ರದ ಕಥೆ ಮತ್ತು ಹಾಡುಗಳನ್ನು ಇವರೇ ಬರೆದಿದ್ದು, ಈಗಾಗಲೇ “ಇಬ್ಬನಿ ತಬ್ಬಿದ ಇಳೆಯಲಿ” ಚಿತ್ರ ಸಿನಿ ವಿಮರ್ಶಕರ ಅಪಾರ ಮೆಚ್ಚುಗೆಗೆ ಪಾತ್ರವಾಗಿದೆ. “ಬ್ಲಾಗ್ ಬರವಣಿಗೆಯ ಕಾಲದಲ್ಲಿ ಒಂಬತ್ತು ವರ್ಷಗಳ ಹಿಂದೆ ಚಂದ್ರಜಿತ್ ನೀಡಿದ್ದ ಲಿಂಕ್ ಇಂದು ಸಿನಿಮಾವಾಗಿದೆ. ಆ ಬರಹ ತುಂಬಾ ವಿಶೇಷವಾಗಿತ್ತು. ಅದೇ ಬ್ಲಾಗ್ ಕಥೆ ಇಂದು ಸಿನಿಮಾವಾಗಿದೆ. ಈ ರೀತಿಯ ಕಥೆ ಇರುವ ಸಿನಿಮಾ ಈ ಹಿಂದೆ ಬಂದಿರಬಹುದು. ಆದರೆ, ಇಂತಹ ನಿರೂಪಣೆಯ ಚಿತ್ರ ಸ್ಯಾಂಡಲ್ವುಡ್ನಲ್ಲಿ ಬಂದಿಲ್ಲ ಎಂದು ರಕ್ಷಿತ್ ಶೆಟ್ಟಿ ಅವರು ಪೂಜಾರೀರ ಚಂದ್ರಜಿತ್…
ಮಡಿಕೇರಿ ಸೆ.5 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿ ಇವರ ಸಂಯುಕ್ತಾಶ್ರಯದಲ್ಲಿ ನಗರದ ಕೊಡಗು ಗೌಡ ಸಮಾಜದಲ್ಲಿ ಶಿಕ್ಷಕರ ದಿನಾಚರಣೆ ನಡೆಯಿತು. ಕಾರ್ಯಕ್ರಮವನ್ನು ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಅತ್ಯುತ್ತಮ ಶಿಕ್ಷಕರನ್ನು ಸನ್ಮಾನಿಸಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಈ ಸಂದರ್ಭ ಕೊಡಗು ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್, ಮೈಸೂರು ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯ ನಿವೃತ್ತ ಪ್ರಾಧ್ಯಾಪಕರಾದ ಪ್ರೊ.ನೀಲಗಿರಿ ಎಂ.ತಳವಾರ್, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಹೆಚ್ಚುವರಿ ಜಿಲ್ಲಾಧಿಕಾರಿ ಐಶ್ವರ್ಯ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಂದರ್ರಾಜ್, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಪಿ.ಕೆ.ಶ್ರೀನಿವಾಸ್, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸಹ ಕಾರ್ಯದರ್ಶಿ ಎಚ್.ಎಸ್.ಚೇತನ್ ಇತರರು ಪಾಲ್ಗೊಂಡಿದ್ದರು. ಪ್ರಶಸ್ತಿ ಪ್ರದಾನ :: ಕಿರಿಯ ಪ್ರಾಥಮಿಕ ಶಾಲಾ ವಿಭಾಗದ ಶಿಕ್ಷಕರ…






