ಸಿದ್ದಾಪುರ ಆ.21 NEWS DESK : ಸಿದ್ದಾಪುರ ಸಮೀಪದ ನೆಲ್ಲಿಹುದಿಕೇರಿ ನಿವಾಸಿ, ನಿವೃತ್ತ ಅಂಚೆ ನೌಕರ ರಾಮಚಂದ್ರ ಟಿ.ಪಿ (68) ಎಂಬುವವರು ಆ.19ರಿಂದ ಕಾಣೆಯಾಗಿದ್ದಾರೆ. ತೋಟಕ್ಕೆ ಗೊಬ್ಬರ ತರುವುದಾಗಿ ಹೇಳಿ ಹೋದವರು ಮತ್ತೆ ಮನೆಗೆ ಮರಳಲಿಲ್ಲವೆಂದು ರಾಮಚಂದ್ರ ಅವರ ಪುತ್ರಿ ಭವ್ಯ ಟಿ.ಆರ್ ದೂರಿನಲ್ಲಿ ತಿಳಿಸಿದ್ದಾರೆ. ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಇವರು ಪತ್ತೆಯಾದಲ್ಲಿ 9740697432 ಈ ಸಂಖ್ಯೆಗೆ ಮಾಹಿತಿ ನೀಡಬಹುದಾಗಿದೆ.
ಲೇಖಕ: admin
ಮಡಿಕೇರಿ NEWS DESK ಆ.21 : ವಿಶ್ವ ವಿಖ್ಯಾತ, ಐತಿಹಾಸಿಕ ಮೈಸೂರು ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳುತ್ತಿರುವ ಗಜಪಡೆಗೆ ನಾಗರಹೊಳೆ ಹೆಬ್ಬಾಗಿಲು ವೀರನಹೊಸಹಳ್ಳಿ ಗೇಟ್ ಬಳಿ ಸಾಂಪ್ರದಾಯಿಕವಾಗಿ ಬೀಳ್ಕೊಡಲಾಯಿತು. ಸಚಿವರುಗಳಾದ ಎಚ್.ಸಿ.ಮಹದೇವಪ್ಪ. ಕೆ.ವೆಂಕಟೇಶ್ ಹಾಗೂ ಈಶ್ವರ್ ಖಂಡ್ರೆ ಅವರ ಉಪಸ್ಥಿತಿಯಲ್ಲಿ ವೀರನಹೊಸಹಳ್ಳಿ ಗೇಟ್ ಎದುರಿನ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಗಜ ಪಯಣಕ್ಕೆ ಚಾಲನೆ ನೀಡಲಾಯಿತು. ನೆರೆದಿದ್ದ ಜನಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿಗಳು ದಸರಾ ಆನೆಗಳಿಗೆ ಬಾಳೆಹಣ್ಣು, ಕಬ್ಬು, ಬೆಲ್ಲ ತಿನ್ನಿಸುವ ಮೂಲಕ ಶುಭ ಕೋರಿದರು.
ಸುಂಟಿಕೊಪ್ಪ NEWS DESK ಆ.21 : ಅಪರಿಚಿತ ವಾಹನ ಡಿಕ್ಕಿಯಾಗಿ ವೃದ್ಧರೊಬ್ಬರು ಮೃತಪಟ್ಟಿರುವ ಘಟನೆ ಸುಂಟಿಕೊಪ್ಪ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಮಾದಾಪುರ ಸಮೀಪದ ಗರ್ವಾಲೆ ಗ್ರಾಮದ ನಿವಾಸಿ ಸುಬ್ಬು (82) ಎಂಬುವವರೇ ಮೃತ ದುರ್ದೈವಿ. ಮಂಗಳವಾರ ತಡರಾತ್ರಿ ನಡೆದುಕೊಂಡು ಹೋಗುತ್ತಿದ್ದಾಗ ಈ ಘಟನೆ ನಡೆದಿದ್ದು, ಸುಬ್ಬು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ. ಆದರೆ ಡಿಕ್ಕಿಯಾದ ವಾಹನ ಪತ್ತೆಯಾಗಿಲ್ಲ. ಘಟನಾ ಸ್ಥಳಕ್ಕೆ ಡಿವೈಎಸ್ಪಿ ಗಂಗಾಧರಪ್ಪ, ವೃತ್ತ ನಿರೀಕ್ಷಕ ರಾಜೇಶ್ ಕೋಟ್ಯಾನ್, ಠಾಣಾಧಿಕಾರಿ ಚಂದ್ರಶೇಖರ್ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಸೋಮವಾರಪೇಟೆ NEWS DESK ಆ.21 : ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸಾಮರಸ್ಯ ವೇದಿಕೆ ಸೋಮವಾರಪೇಟೆ ತಾಲ್ಲೂಕಿನ ಕಿಬ್ಬೆಟ್ಟ ಗ್ರಾಮದ ದಲಿತ ಕಾಲೋನಿಯಲ್ಲಿ ರಕ್ಷಾ ಬಂಧನ ಆಚರಿಸಿತು. ವೇದಿಕೆಯ ಪ್ರಮುಖರು ನಿವಾಸಿಗಳಿಗೆ ರಕ್ಷೆ ಕಟ್ಟಿ ಸಿಹಿ ಹಂಚಿದರು. ಸಾಮರಸ್ಯ ವೇದಿಕೆ ಕಾರ್ಯಕ್ರಮ ಕಾರ್ಯಕರ್ತರಾದ ಮಂಜುನಾಥ್ ವಿ.ಸಿ, ನಿಖಿಲ್, ಆನಂದ್ ಮತ್ತಿತರರು ಹಾಜರಿದ್ದರು.
ವಿರಾಜಪೇಟೆ NEWS DESK ಆ.21 : ನಾಟ್ಯ ಮಯೂರಿ ನೃತ್ಯ ಶಾಲೆ ಹಾಗೂ ಡಿವೈನ್ ಟೆಂಪಲ್ ಫೌಂಡೇಶನ್ ಬೆಂಗಳೂರು ಇದರ ಸಹಯೋಗದಲ್ಲಿ ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದ ನಯನ ಸಭಾಂಗಣದಲ್ಲಿ ನಡೆದ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ವಿರಾಜಪೇಟೆಯ ಭರತನಾಟ್ಯ ಕಲಾವಿದೆ ಬಿ. ಎನ್. ಲಾವಣ್ಯ ಬೋರ್ಕರ್ವ ಅವರಿಗೆ ನೃತ್ಯ ಸಾಧನೆಗಾಗಿ ರಾಷ್ಟ್ರಮಟ್ಟದ ಮಿನುಗುತಾರೆ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಲಾವಣ್ಯ ಬೋರ್ಕರ್ ವಿರಾಜಪೇಟೆಯ ಸೆಂಟ್ ಆನ್ಸ್ ಪದವಿ ಕಾಲೇಜಿನ ತೃತೀಯ ಬಿಬಿಎ ವಿದ್ಯಾರ್ಥಿನಿ ಹಾಗೂ ವಿರಾಜಪೇಟೆಯ ನಾಟ್ಯ ಮಯೂರಿ ನೃತ್ಯ ಶಾಲೆಯ ಪ್ರೇಮಾಂಜಲಿ ಆಚಾರ್ಯ ರವರ ಶಿಷ್ಯೆಯಾಗಿದ್ದಾರೆ. ಇವರು ಮೂಲತಃ ವಿರಾಜಪೇಟೆ ಸಮೀಪದ ಬೇಟೋಳಿ ರಾಮನಗರದ ಬಿ. ಜಿ.ನಟರಾಜ್ ಬೋರ್ಕರ್ ಹಾಗೂ ಸುನಂದ ದಂಪತಿಗಳ ಪುತ್ರಿ.
ನಾಪೋಕ್ಲು NEWS DESK ಆ.21 : ಹೊದ್ದೂರು ಗ್ರಾಮದ ನಿವಾಸಿ, ಸಮಾಜ ಸೇವಕ, ರಾಜಕಾರಣಿ ಕೂಡಂಡ ಪುರುಷೋತ್ತಮ(62) ಅವರು ಮಂಗಳವಾರ ನಿಧನರಾದರು. ಮೃತರು ಪತ್ನಿ ಹಾಗೂ ಪುತ್ರನನ್ನು ಅಗಲಿದ್ದಾರೆ.
ಮಡಿಕೇರಿ NEWS DESK ಆ.20 : ಮೂಡ ಪ್ರಕರಣ ಪ್ರಕರಣ ಮತ್ತು ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಗಂಭೀರ ಆರೋಪವನ್ನು ಎದುರಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ತನಿಖೆಗೆ ಸಹಕರಿಸಬೇಕೆಂದು ಕೊಡಗು ಜಿಲ್ಲಾ ಬಿಜೆಪಿ ಒತ್ತಾಯಿಸಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿಯ ಜಿಲ್ಲಾ ವಕ್ತಾರ ತಳೂರು ಕಿಶೋರ್ ಕುಮಾರ್, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಾತಿ ಹೆಸರಿನಲ್ಲಿ ಪ್ರತಿಭಟನೆಗೆ ಕುಮ್ಮಕ್ಕು ನೀಡುತ್ತಿರುವುದು ಅವರ ಘನತೆಗೆ ಶೋಭೆ ತರುವುದಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಈ ಹಿಂದೆ ಯಡಿಯೂರಪ್ಪ ಅವರ ಪ್ರಕರಣದಲ್ಲಿ ರಾಜ್ಯಪಾಲರು ಮಧ್ಯ ಪ್ರವೇಶ ಮಾಡಿದಾಗ ಸ್ವಾಗತ ಮಾಡಿದ್ದ ಸಿದ್ದರಾಮಯ್ಯ ಅವರು ಇದೀಗ ತಮ್ಮ ವಿಚಾರದಲ್ಲಿ ರಾಜ್ಯಪಾಲರು ತೆಗೆದುಕೊಂಡ ಕ್ರಮಕ್ಕೆ ವಿರೋಧ ವ್ಯಕ್ತಪಡಿಸುತ್ತಿರುವುದು ಯಾಕೆ ಎಂದು ಪ್ರಶ್ನಿಸಿದರು. ರಾಜ್ಯ ಕಾಂಗ್ರೆಸ್ ಸರ್ಕಾರ ಜನರ ವಿಶ್ವಾಸ ಕಳೆದುಕೊಂಡಿದೆ, ಆಡಳಿತ ಸಂಪೂರ್ಣ ವಿಫಲವಾಗಿದೆ. ಮಳೆಹಾನಿ ನಿರ್ವಹಣೆಗೆ ಈ ಹಿಂದೆ ಇದ್ದ ಬಿಜೆಪಿ ಸರ್ಕಾರ ಪ್ರತಿ ಪಂಚಾಯ್ತಿಗೆ 50 ಸಾವಿರದಿಂದ ಒಂದು ಲಕ್ಷದ…
ಮಡಿಕೇರಿ NEWS DESK ಆ.20 : ನಗರದ ಅಭಿವೃದ್ಧಿಯನ್ನು ಮರೆತಿರುವ ಮತ್ತು ಸಾರ್ವಜನಿಕರ ಕಡತಗಳನ್ನು ವಿಲೇವಾರಿ ಮಾಡದೆ ತೊಂದರೆ ನೀಡುತ್ತಿರುವ ನಗರಸಭೆ ವಿರುದ್ಧ ತೀವ್ರ ರೀತಿಯ ಹೋರಾಟ ರೂಪಿಸುವುದಾಗಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ಪ್ರಮುಖರು ಎಚ್ಚರಿಕೆ ನೀಡಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನಗರಸಭೆಯ ಎಸ್ಡಿಪಿಐ ಸದಸ್ಯರಾದ ಅಮಿನ್ ಮೊಹಿಸಿನ್ ಹಾಗೂ ಮನ್ಸೂರ್ ಆಲಿ ಪೌರಾಯುಕ್ತರ ನಿರ್ಲಕ್ಷö್ಯ ಮತ್ತು ಈ ಹಿಂದಿನ ಅಧ್ಯಕ್ಷರಾದ ಅನಿತಾ ಪೂವಯ್ಯ ಅವರ ಅಸಮರ್ಥ ಆಡಳಿತದಿಂದಾಗಿ ನಗರಸಭೆ ಸಮಸ್ಯೆಗಳಲ್ಲಿ ಸಿಲುಕಿಕೊಂಡಿದೆ ಎಂದು ಟೀಕಿಸಿದರು. ಮಡಿಕೇರಿ ನಗರಸಭೆಯ ಮೊದಲನೇ ಅವಧಿ ಪೂರ್ಣಗೊಳಿಸಿ ಮುಂದಿನ ಅವಧಿಗೆ ಅಧಿಕಾರ ಹಿಡಿಯಲು ಆಡಳಿತ ಪಕ್ಷ ಬಿಜೆಪಿ ರಾಜಕೀಯ ಕಸರತ್ತು ನಡೆಸುತ್ತಿದೆ. ನಗರ ಎಂದೂ ಕಂಡರಿಯದ ಹೀನಾಯ ಆಡಳಿತಕ್ಕೆ ಹಿಂದಿನ ಆಡಳಿತ ಮಂಡಳಿ ಸಾಕ್ಷಿಯಾಗಿತ್ತು. ಬಿ.ಜೆ.ಪಿಯ ಸ್ವಾರ್ಥ, ದ್ವೇಷ ಹಾಗೂ ಬಣ ರಾಜಕೀಯದಿಂದಾಗಿ ನಗರಸಭೆ ಅಭಿವೃದ್ಧಿ ಶೂನ್ಯವಾಗಿದೆ. ಅನಿತ ಪೂವಯ್ಯ ಅವರ ಇಚ್ಛಾಶಕ್ತಿಯ ಕೊರತೆಯಿಂದಾಗಿ ಯಾವುದೇ ವಿಶೇಷ ಅನುದಾನವನ್ನು ನಗರಸಭೆಗೆ ತರಲು…
ಮಡಿಕೇರಿ NEWS DESK ಆ.20 : ಹಿಂದುಳಿದ ಆಯೋಗ ಸ್ಥಾಪನೆ, ಭೂ ಸುಧಾರಣೆ ಕಾಯ್ದೆ, ಜನತಾ ನ್ಯಾಯಾಲಯ, ಜೀತ ವಿಮುಕ್ತಿ ಸೇರಿದಂತೆ ಹಲವು ಸಾಮಾಜಿಕ ಕಳಕಳಿಯ ಜನಪರ ಕಾರ್ಯಕ್ರಮಗಳನ್ನು ಜಾರಿ ತಂದ ಮಾಜಿ ಮುಖ್ಯಮಂತ್ರಿ, ಸಾಮಾಜಿಕ ನ್ಯಾಯದ ಹರಿಕಾರ ದಿ.ಡಿ.ದೇವರಾಜು ಅರಸು ಅವರು ಜನಮಾನಸದಲ್ಲಿ ಸದಾ ನೆಲೆಸಿರುತ್ತಾರೆ ಎಂದು ಜಿಲ್ಲಾಧಿಕಾರಿಗಳ ಕಾನೂನು ಸಲಹೆಗಾರ ಎ.ಲೋಕೇಶ್ ಕುಮಾರ್ ಅವರು ಶ್ಲಾಘಿಸಿದ್ದಾರೆ. ಅಹಿಂದ ಒಕ್ಕೂಟ ಮತ್ತು ಸಹಮತ ವೇದಿಕೆಯ ಜಂಟಿ ಆಶ್ರಯದಲ್ಲಿ ನಗರದ ಅಂಬೇಡ್ಕರ್ ಭವನದಲ್ಲಿ ನಡೆದ ಮಾಜಿ ಮುಖ್ಯಮಂತ್ರಿ ಸಾಮಾಜಿಕ ನ್ಯಾಯದ ಹರಿಕಾರ ದಿ.ಡಿ.ದೇವರಾಜು ಅರಸು ಅವರ 109ನೇ ಜನ್ಮದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ರಾಜ್ಯ ಕಂಡ ಹಲವು ಮುಖ್ಯಮಂತ್ರಿಗಳಲ್ಲಿ ದಿವಗಂತ ದೇವರಾಜ ಅರಸು ಅವರು ಶ್ರೇಷ್ಠ ಸಾಮಾಜಿಕ ಸುಧಾರಕರಾಗಿದ್ದರು. ಎರಡು ಬಾರಿ ಮುಖ್ಯಮಂತ್ರಿಯಾಗಿದ್ದ ಅವರ ಅಧಿಕಾರವಧಿಯಲ್ಲಿ ಸಮಾಜದಲ್ಲಿ ಅನೇಕ ಸುಧಾರಣೆಗಳನ್ನು ತಂದರು. “ಬಡತನ ನಿರ್ಮೂಲನೆ” ಅವರ ಮೊದಲ ಆದ್ಯತೆ. ಅಧಿಕಾರದಲ್ಲಿರುವಾಗ ಸಮಾಜಕ್ಕೆ ಒಳಿತು ಮಾಡುವ ದಿಸೆಯಲ್ಲಿ ಕಾರ್ಯ ನಿರ್ವಹಿಸಿದ ಅರಸು…
ಮಡಿಕೇರಿ NEWS DESK ಆ.20 : ಸರಕಾರ ಆದಿಮಸಂಜಾತ ಕೊಡವ ಬುಡಕಟ್ಟು ಜನಾಂಗಕ್ಕೆ ಕರಾಳ ಕಾನೂನು ಮತ್ತು ಕೊಡಗಿಗೆ ಮಾರಕವಾಗಿರುವ ಬಂಡವಾಳಶಾಹಿಗಳಿಗೆ ಪೂರಕ ಕಾನೂನನ್ನು ಜಾರಿಗೆ ತರುವ ಮೂಲಕ ಕೊಡವರನ್ನು ಶೋಷಣೆ ಮಾಡುತ್ತಿದೆ ಎಂದು ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ಅಧ್ಯಕ್ಷ ಎನ್.ಯು.ನಾಚಪ್ಪ ಆರೋಪಿಸಿದ್ದಾರೆ. ಸಿದ್ದಾಪುರದ ಕಾಫಿ ತೋಟಗಳು ಸೇರಿದಂತೆ ಕೊಡಗು ಜಿಲ್ಲೆಯ ವಿವಿಧೆಡೆ ನಡೆಯುತ್ತಿರುವ ಬೃಹತ್ ಭೂಪರಿವರ್ತನೆ ಮತ್ತು ಭೂವಿಲೇವಾರಿಯನ್ನು ಸ್ಥಗಿತಗೊಳಿಸಬೇಕೆಂದು ಒತ್ತಾಯಿಸಿ ಸಿಎನ್ಸಿ ವತಿಯಿಂದ ಕುಟ್ಟದಲ್ಲಿ ನಡೆದ ಜನಜಾಗೃತಿ ಮಾನವ ಸರಪಳಿ ಕಾರ್ಯಕ್ರಮದ ನೇತೃತ್ವ ವಹಿಸಿ ಅವರು ಮಾತನಾಡಿದರು. ಕೊಡವ ಲ್ಯಾಂಡ್ ಗೆ ಮಾರಕವಾಗಿರುವ ಭೂಮಾಫಿಯಾ, ರೆಸಾರ್ಟ್ ಮಾಫಿಯಾ, ವಿಲ್ಲಾ, ಟೌನ್ ಶಿಪ್, ಬೃಹತ್ ಭೂಪರಿವರ್ತನೆ ಮತ್ತು ಭೂವಿಲೇವಾರಿ ಮಾಫಿಯಾಗಳಂತಹ ಬಂಡವಾಳಶಾಹಿಗಳಿಗೆ ನೆರವಾಗಬಲ್ಲ ಕಾನೂನುಗಳನ್ನು ರೂಪಿಸಿ ಕೊಡವರಿಗೆ ಮಾತೃಭೂಮಿಯಲ್ಲಿ ನೆಲೆ ಇಲ್ಲದಂತೆ ಮಾಡುವ ಹುನ್ನಾರ ನಡೆದಿದೆ. ಇದಕ್ಕೆ ಕೊಡವ ವಿರೋಧಿಗಳ ಬೆಂಬಲವಿದೆ ಎಂದು ಆರೋಪಿಸಿದರು. ರಾಷ್ಟ್ರೀಯ ಹೆದ್ದಾರಿಯ ಕುಟ್ಟ ಸಮೀಪದ ಪೂಚೆಕಲ್ಲು ಗ್ರಾಮದಲ್ಲಿ ಜಲಗರ್ಭ ಮತ್ತು ಭೂಗರ್ಭ ಸ್ಫೋಟವಾಗಿದೆ.…






