ಸೋಮವಾರಪೇಟೆ, NEWS DESK ಮಾ.18 : ಜಮೀನು ತೆರವು ಕಾರ್ಯಾಚರಣೆ ಸಂದರ್ಭ ಅರಣ್ಯಾಧಿಕಾರಿಗಳು ಹಾಗೂ ರೈತರ ನಡುವೆ ಮಾತಿನ ಚಕಮಕಿ ನಡೆದ ಘಟನೆ ಇಂದು ಮಸಗೊಡು ಗ್ರಾಮದಲ್ಲಿ ನಡೆದಿದೆ. ಮಸಗೋಡು ಗ್ರಾಮದಲ್ಲಿ 2.50 ಎಕರೆ ಜಾಗವನ್ನು ಅರಣ್ಯ ಇಲಾಖೆಯವರು ಜೆಸಿಬಿಯಿಂದ ತೆರವುಗೊಳಿಸಲು ಯತ್ನಿಸಿದಾಗ ರೈತ ಹೋರಾಟ ಸಮಿತಿ ಹಾಗೂ ರೈತ ಸಂಘದ ಪದಾಧಿಕಾರಿಗಳು ಸ್ಥಳಕ್ಕೆ ಧಾವಿಸಿ ಅರಣ್ಯ ಇಲಾಖೆಯವರಿಗೆ ಘೇರಾವು ಹಾಕಿದರು. ರೈತರ ಪ್ರತಿಭಟನೆಗೆ ಮಣಿದ ಅರಣ್ಯ ಇಲಾಖೆ ತೆರವು ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿತು. ಅರಣ್ಯ ಇಲಾಖೆಯ ಉನ್ನತ ಅಧಿಕಾರಿಗಳು ಸ್ಥಳಕ್ಕೆ ಬರುವವರೆಗೂ ಕದಲುವುದಿಲ್ಲವೆಂದು ರೈತರು ಸ್ಥಳದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.
ಲೇಖಕ: admin
ಬೆಂಗಳೂರು, ಮಾರ್ಚ್ 18, 2026: ಕರ್ನಾಟಕದ ಶೈಕ್ಷಣಿಕ ಇತಿಹಾಸದ ಪ್ರಮುಖ ಘಟ್ಟವಾದ ಎಸ್ಎಸ್ಎಲ್ಸಿ ಪರೀಕ್ಷೆಗಳು ಇಂದು ಬುಧವಾರದಿಂದ ಆರಂಭವಾಗಿವೆ. ಏಪ್ರಿಲ್ 2ರವರೆಗೆ ನಡೆಯಲಿರುವ ಈ ಪರೀಕ್ಷೆಗೆ ರಾಜ್ಯಾದ್ಯಂತ ಒಟ್ಟು 8,65,988 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದು, ಪರೀಕ್ಷಾ ಕೇಂದ್ರಗಳಲ್ಲಿ ಹಬ್ಬದ ಕಳೆ ಮತ್ತು ಬಿಗಿ ಭದ್ರತೆ ಮನೆಮಾಡಿದೆ. ಪರೀಕ್ಷಾರ್ಥಿಗಳ ವಿವರ ಮತ್ತು ವ್ಯವಸ್ಥೆ: ವಿದ್ಯಾರ್ಥಿಗಳ ಸಂಖ್ಯೆ: ಪರೀಕ್ಷೆ ಬರೆಯುತ್ತಿರುವವರ ಪೈಕಿ 4,44,172 ಬಾಲಕರು ಮತ್ತು 4,21,816 ಬಾಲಕಿಯರಿದ್ದಾರೆ. ಕೇಂದ್ರಗಳ ಸಂಖ್ಯೆ: ರಾಜ್ಯದಾದ್ಯಂತ ಒಟ್ಟು 2,871 ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಪ್ರಥಮ ಭಾಷೆ ಪರೀಕ್ಷೆ: ಇಂದು ಮೊದಲ ದಿನ ಕನ್ನಡ, ಇಂಗ್ಲಿಷ್, ಹಿಂದಿ ಸೇರಿದಂತೆ ವಿವಿಧ ಪ್ರಥಮ ಭಾಷೆಗಳ ಪರೀಕ್ಷೆಗಳು ನಡೆಯಲಿವೆ. ವಿದ್ಯಾರ್ಥಿಗಳಿಗೆ ಸರ್ಕಾರದ ಬಂಪರ್ ಕೊಡುಗೆ: ಪರೀಕ್ಷಾ ಕೇಂದ್ರಗಳಿಗೆ ಸಕಾಲದಲ್ಲಿ ತಲುಪಲು ಅನುಕೂಲವಾಗುವಂತೆ ರಾಜ್ಯ ಸರ್ಕಾರವು ಕೆಎಸ್ಆರ್ಟಿಸಿ ಮತ್ತು ಬಿಎಂಟಿಸಿ ಬಸ್ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಿದೆ. ವಿದ್ಯಾರ್ಥಿಗಳು ತಮ್ಮ ಪರೀಕ್ಷಾ ಪ್ರವೇಶ ಪತ್ರವನ್ನು (Hall Ticket) ತೋರಿಸಿ ಉಚಿತವಾಗಿ ಪ್ರಯಾಣಿಸಬಹುದಾಗಿದೆ. ಪ್ರಾಧಿಕಾರದ…
ಕೊಡಗು ಜಿಲ್ಲೆಯಲ್ಲಿನ ಮಾನವ ವನ್ಯಜೀವಿ ಸಂಘರ್ಷ ಕುರಿತು ಅರಣ್ಯ ಜೀವಶಾಸ್ತ್ರ ಮತ್ತು ಪರಿಸರ ಸಚಿವರಾದ ಈಶ್ವರ ಖಂಡ್ರೆ ರವರ ನೇತೃತ್ವದಲ್ಲಿ ಇಲಾಖಾ ಅಧಿಕಾರಿಗಳೊಂದಿಗೆ ಉನ್ನತ ಮಟ್ಟದ ಸಭೆಯಿತು. ಈ ಸಭೆಯಲ್ಲಿ ಇತ್ತೀಚಿನ ದಿನಗಳಲ್ಲಿ ಕೊಡಗು ಜಿಲ್ಲೆಯಲ್ಲಿ ಆನೆದಾಳಿ ಹಾಗೂ ವನ್ಯ ಜೀವಿಗಳಿಂದ ಸ್ಥಳೀಯ ನಿವಾಸಿಗಳು ಬಲಿಯಾದ ವಿಚಾರದ ಬಗ್ಗೆ ಗಂಭೀರ ಚರ್ಚೆ ನಡೆಸಲಾಯಿತು. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಸಭೆಯಲ್ಲಿ ಹಾಜರಿದ್ದ ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು. ಈ ಸಭೆಯಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್ ಪೊನ್ನಣ್ಣ, ಮಡಿಕೇರಿ ಶಾಸಕ ಡಾ.ಮಂತರ್ ಗೌಡ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.
ಮಡಿಕೇರಿ ಮಾ.17 NEWS DESK : ಸೋಮವಾರಪೇಟೆ ತಾಲ್ಲೂಕು ತ್ರೈಮಾಸಿಕ ಕೆಡಿಪಿ ಸಭೆಯು ಶಾಸಕರಾದ ಡಾ.ಮಂತರ್ ಗೌಡ ಅವರ ಅಧ್ಯಕ್ಷತೆಯಲ್ಲಿ ಏಪ್ರಿಲ್, 02 ರಂದು ಬೆಳಗ್ಗೆ 10.30 ಗಂಟೆಗೆ ಸೋಮವಾರಪೇಟೆ ತಾ.ಪಂ. ಸಭಾಂಗಣದಲ್ಲಿ ನಡೆಯಲಿದೆ ಎಂದು ಸೋಮವಾರಪೇಟೆ ತಾ.ಪಂ.ಇಒ ಪರಮೇಶ್ ಅವರು ತಿಳಿಸಿದ್ದಾರೆ.
ವಿರಾಜಪೇಟೆ ಮಾ.17 NEWS DESK : ವಿರಾಜಪೇಟೆ ಸಮೀಪದ ಪ್ರಕೃತಿಯ ಸೊಬಗಿನ ನಡುವೆ ‘ಮಳೆ ದೇವರು’ಎಂದು ಹೆಸರುವಾಸಿಯಾಗಿರುವ ಮಲೆ ಮಹದೇಶ್ವರ (ಈಶ್ವರನ) ದೇವಾಲಯ ವಾರ್ಷಿಕ ಉತ್ಸವವು ಮಾ.20ರ ವರೆಗೆ ನಡೆಯಲಿದೆ. ಮಾ.18 ರಂದು ಬೆಳಿಗ್ಗೆ 5 ಗಂಟೆಗೆ ಇರುಬೆಳಕು, ಮಧ್ಯಾಹ್ನ 12 ಗಂಟೆಗೆ ದೊಡ್ಡ ಹಬ್ಬ, ಎತ್ತು ಪೋರಾಟ, ತೆಂಗಿನಕಾಯಿ ಗುಂಡು ಹೊಡೆಯುವುದು ನಡೆಯಲಿದೆ. ಮಧ್ಯಾಹ್ನ 1 ಗಂಟೆಗೆ ಮಹಾಪೂಜೆ ಬಳಿಕ ಪ್ರಸಾದ ವಿನಿಯೋಗ, ಅನ್ನ ಸಂತರ್ಪಣೆ, 3 ಗಂಟೆಗೆ ದೇವರು ಹೊರಗೆ ಬರುವುದು, ಸಂಜೆ 6 ಗಂಟೆಗೆ ಪೇಟೆ ಮೆರವಣಿಗೆ ನಡೆಯಲಿದೆ. ಮಾ. 19 ರಂದು ಮಧ್ಯಾಹ್ನ 12 ಗಂಟೆಗೆ ಮಹಾಪೂಜೆಯ ಬಳಿಕ ಅನ್ನ ಸಂತರ್ಪಣೆ, ಬಸವನ ಕಟ್ಟೆಯಲ್ಲಿ ಪೂಜೆ, ಸಂಜೆ 6 ಗಂಟೆಗೆ ದೇವರ ಜಳಕ, ಅವಬೃತ ಸ್ನಾನ, ರಾತ್ರಿ 8 ಗಂಟೆಗೆ ದೇವರ ಪ್ರದಕ್ಷಿಣೆ ನೃತ್ಯ ನಡೆಯಲಿದೆ. ಮಾ. 20ರಂದು ಹಗಲು 11 ಗಂಟೆಗೆ ಕೊಡಿಮರ ಇಳಿಸುವುದು 12 ಗಂಟೆಗೆ ಮಹಾಪೂಜೆ ಬಳಿಕ ಪ್ರಸಾದ ವಿನಿಯೋಗ ಅನ್ನ…
ವಿರಾಜಪೇಟೆ ಮಾ.17 NEWS DESK : ಮೂರ್ನಾಡು ಗೌಡ ಮಹಿಳಾ ಒಕ್ಕೂಟ ವತಿಯಿಂದ ಮಾ.15 ರಂದು ಮಹಿಳಾ ದಿನಾಚರಣೆ ಹಾಗೂ ಒಕ್ಕೂಟದ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ. ಅಂದು ಬೆಳಿಗ್ಗೆ 9.30 ಗಂಟೆಗೆ ಮೂರ್ನಾಡಿನ ಪ್ರಕೃತಿ ಕಾಂಪ್ಲೆಕ್ಸ್ನಲ್ಲಿ ಕಾರ್ಯಕ್ರಮ ನಡೆಯಲಿದ್ದು, ಸಭಾ ಕಾರ್ಯಕ್ರಮಕ್ಕೂ ಮುನ್ನ ಮನರಂಜನಾ ಆಟಗಳು ನಡೆಯಲಿದೆ. 10.30 ಗಂಟೆಗೆ ಸಭಾ ಕಾರ್ಯಕ್ರಮ ನಡೆಯಲಿದ್ದು, ಕಾರ್ಯಕ್ರಮವನ್ನು ಹಾಕತ್ತೂರು ಶಾಲೆಯ ಮುಖ್ಯ ಶಿಕ್ಷಕರಾದ ತೆಕ್ಕಡೆ ಕುಮಾರಸ್ವಾಮಿ ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ಮೂರ್ನಾಡು ಗೌಡ ಮಹಿಳಾ ಒಕ್ಕೂಟದ ಅಧ್ಯಕ್ಷೆ ಕಲ್ಲುಮುಟ್ಲು ಜಶ್ಮಿ ಚಿಂತು ವಹಿಸಲಿದ್ದಾರೆ. ಜಂಬರ ಉದ್ಘಾಟನೆಯನ್ನು ಕವಿ ಹಾಗೂ ಸಾಹಿತಿ ಪೂಜಾರೀರ ಕೃಪಾ ದೇವರಾಜ್ ನೆರವೇರಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಮಹಿಳೆಯರಿಗಾಗಿ ವಿಶೇಷ ಸೀರೆ ಪ್ರದರ್ಶನ ಹಾಗೂ ಮಾರಾಟ ಮೇಳವನ್ನು ರಾಜ್ಯ ಕೃಷಿ ಪ್ರಶಸ್ತಿ ಪುರಸ್ಕೃತ ಕಟ್ಟೆಮನೆ ಪ್ರೇಮ ಗಣೇಶ್ ಉದ್ಘಾಟಿಸಲಿದ್ದಾರೆ. ಮಹಿಳೆಯರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಗೌಡ ಮಹಿಳಾ ಒಕ್ಕೂಟದ ಆಡಳಿತ ಮಂಡಳಿಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿರಾಜಪೇಟೆ ಮಾ.17 NEWS DESK : ವಿರಾಜಪೇಟೆಯ ಮೀನುಪೇಟೆಯಲ್ಲಿರುವ ಚೈತನ್ಯ ಮಠಪುರ ಶ್ರೀ ಮುತ್ತಪ್ಪ ದೇವಾಲಯದ ವತಿಯಿಂದ ವರ್ಷಂಪ್ರತಿ ನಡೆಸಿಕೊಂಡು ಬರುತ್ತಿರುವ 82ನೇ ವರ್ಷದ ಶ್ರೀ ಮುತ್ತಪ್ಪ ತೆರೆ ಮಹೋತ್ಸವಕ್ಕೆ ಚಾಲನೆ ದೊರೆಯಿತು. ಮಾ.19ರ ವರೆಗೆ ಮೂರು ದಿನಗಳ ಕಾಲ ಮಹೋತ್ಸವವು ನಡೆಯಲಿದೆ. ಗಣಪತಿ ಹೋಮದೊಂದಿಗೆ ತೆರೆ ಮಹೋತ್ಸವಕ್ಕೆ ಚಾಲನೆ ದೊರೆಯಿತು. ಬಳಿಕ ದೇವಾಲಯದ ಆವರಣದಲ್ಲಿರುವ ಧ್ವಜಸ್ಥಂಭದಲ್ಲಿ ಧ್ವಜಾರೋಹಣ ನೆರವೇರಿತು. ಸಂಜೆ ಶ್ರೀ ಮುತ್ತಪ್ಪ ದೇವರ ವೆಳ್ಳಾಟಂ ನಡೆಯಿತು. ಈ ಸಂದರ್ಭ ಶ್ರೀ ಮುತ್ತಪ್ಪ ದೇವಾಲಯದ ಆಡಳಿತ ಮಂಡಳಿಯ ಸದಸ್ಯರು, ಶ್ರೀ ಮುತ್ತಪ್ಪ ಮಲಯಾಳಿ ಸಂಘದ ಸದಸ್ಯರು ಸೇರಿದಂತೆ ಭಕ್ತಾಧಿಗಳು ಇದ್ದರು. ಮಾ.18 ರಂದು ಮಧ್ಯಾಹ್ನ 2 ಗಂಟೆಗೆ ದೇವರ ಮಲೆ ಇಳಿಸುವುದು, ಸಂಜೆ 5 ಗಂಟೆಗೆ ಶ್ರೀ ಮುತ್ತಪ್ಪ ವೆಳ್ಳಾಟ ನಡೆಯಲಿದೆ. ಸಂಜೆ 5.30 ಗಂಟೆಗೆ ಮೊದಕಲಶದೊಂದಿಗೆ ತಾಲಪೋಲಿ ಮೆರವಣಿಗೆ, ಕಾಳಿಂಗ ಕಲಾ ಸಮಿತಿಯವರ ಸಿಂಗಾರಿ ಮೇಳ ಹಾಗೂ ತತ್ವಮಸಿ ಸಹಸ್ರ ವೆಳಕಾಟ್ಟಂ ಚಂಡೆಮೇಳದೊಂದಿಗೆ, ಮಹಿಳೆಯರ ತಾಲಪ್ಪೊಲಿ ಮೆರವಣಿಗೆಯು ತೆಲುಗರ…
ಮಡಿಕೇರಿ ಮಾ.17 NEWS DESK : ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕು ಸೊಣ್ಣಹಳ್ಳಿಪುರದಲ್ಲಿರುವ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ನಿರುದ್ಯೋಗಿ ಪುರುಷ ಹಾಗೂ ಮಹಿಳೆಯರಿಗೆ 12 ದಿನಗಳ ಅವಧಿಯ ಉಚಿತ ಫಾಸ್ಟ್ ಫುಡ್ (ಚಾಟ್ಸ್ ಸೆಂಟರ್) ತಯಾರಿಕೆ ತರಬೇತಿ ಶಿಬಿರವನ್ನು ಏಪ್ರಿಲ್ 4 ರಿಂದ ಪ್ರಾರಂಭಿಸಲಾಗುತ್ತಿದೆ. ಈ ಶಿಬಿರದಲ್ಲಿ ಪಾನಿ ಪೂರಿ, ಬೇಲ್ ಪೂರಿ, ದಹಿ ಪೂರಿ, ಸೇವ್ ಪೂರಿ, ಚಾಟ್ ಮಸಾಲ, ಕಚೋರಿ, ಗೋಬಿ ಮಂಚೂರಿ, ಪ್ರೈಡ್ ರೈಸ್, ಸಮೋಸ ಇನ್ನಿತರೆ ಚಾಟ್ಸ್ಗಳ ತಯಾರಿಕೆಯ ಬಗ್ಗೆ ತರಬೇತಿ ನೀಡಲಾಗುವುದು. ಸ್ವಯಂ ಉದ್ಯೋಗಿಗಳಾಗಲು ಬಯಸುವ 18 ರಿಂದ 49 ವರ್ಷ ವಯಸ್ಸಿನ ಕರ್ನಾಟಕ ರಾಜ್ಯದ ಯಾವುದೇ ಜಿಲ್ಲೆಯ ನಿರುದ್ಯೋಗಿ ಪುರುಷ ಹಾಗೂ ಮಹಿಳೆಯರು ಈ ಶಿಬಿರದಲ್ಲಿ ಪಾಲ್ಗೊಳ್ಳಬಹುದಾಗಿದೆ. ಈ ಶಿಬಿರದ ಸಮಯದಲ್ಲಿ ತರಬೇತಿ, ಊಟ ಹಾಗೂ ವಸತಿ ಸೌಕರ್ಯಗಳು ಉಚಿತವಾಗಿ ಶಿಬಿರಾರ್ಥಿಗಳಿಗೆ ಕಲ್ಪಿಸಲಾಗುವುದು. ಗ್ರಾಮೀಣ ಭಾಗದ ಬಿಪಿಎಲ್ ಅಭ್ಯರ್ಥಿಗಳಿಗೆ ಮೊದಲ ಆದ್ಯತೆಯನ್ನು ನೀಡಲಾಗುವುದು. ಅಭ್ಯರ್ಥಿಗಳು ಸ್ಥಳೀಯ…
ಮಡಿಕೇರಿ ಮಾ.17 NEWS DESK : ಬಿಳಿಗೇರಿ ಮತ್ತು ಕಗ್ಗೋಡ್ಲು ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನಗಳ ಮಾರಾಟ ಹಾಗೂ ಕೋಟ್ಪಾ ಕಾಯ್ದೆ ಉಲ್ಲಂಘನೆ ಅಡಿಯಲ್ಲಿ 10 ಪ್ರಕರಣಗಳಿಗೆ ರೂ.1800 ಗಳ ದಂಡವನ್ನು ವಿಧಿಸಿ ನಿಯಮಗಳ ಕುರಿತು ಆರೋಗ್ಯ ಶಿಕ್ಷಣ ನೀಡಲಾಯಿತು. ಸಂಗ್ರಹಣೆಯಾದ ದಂಡವನ್ನು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಜಂಟಿ ಖಾತೆಗೆ ಜಮೆ ಮಾಡಲಾಯಿತು. ಅನಿರೀಕ್ಷಿತ ಭೇಟಿಯಲ್ಲಿ ತಾಲ್ಲೂಕು ಆರೋಗ್ಯಾಧಿಕಾರಿ ಕಚೇರಿಯ ಆರೋಗ್ಯ ಶಿಕ್ಷಣಾಧಿಕಾರಿ ಪಾಲಾಕ್ಷ ಮತ್ತು ಆರೋಗ್ಯ ನಿರೀಕ್ಷಣಾಧಿಕಾರಿ ಜಿ.ವಿ.ಶ್ರೀನಾಥ್ ಹಾಗೂ ಜಿಲ್ಲಾ ತಂಬಾಕು ಕೋಶದ ಮಂಜುನಾಥ್ ಹಾಗೂ ಪೊಲೀಸ್ ಇಲಾಖೆಯವರು ಭಾಗವಹಿಸಿದ್ದರು.
ಮಡಿಕೇರಿ ಮಾ.17 NEWS DESK : ಕೂಡಿಗೆ ಯೂನಿಯನ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ನಿರುದ್ಯೋಗಿ ಯುವತಿಯರಿಗೆ ಊಟ ವಸತಿಯೊಂದಿಗೆ ಸಂಪೂರ್ಣ ಉಚಿತವಾಗಿ ನೀಡಲಾಗುವ ಸ್ವ-ಉದ್ಯೋಗ ತರಬೇತಿಯನ್ನು ಪಡೆದುಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಅರ್ಜಿ ಸಲ್ಲಿಸಲು 18 ರಿಂದ 50 ವರ್ಷ ವಯೋಮಿತಿಯೊಳಗಿನ ಯುವತಿಯರಿಗೆ ಮಾತ್ರ ಅವಕಾಶ. ಆಸಕ್ತಿ ಉಳ್ಳವರು ಸಂಸ್ಥೆಯನ್ನು ನೇರವಾಗಿ ಅಥವಾ ಕರೆ ಮಾಡಿ ಮಾಹಿತಿ ಪಡೆಯಬಹುದು. ಬ್ಯೂಟಿ ಪಾರ್ಲರ್ ತರಬೇತಿ: 35 ದಿನಗಳು. ಪ್ರಾರಂಭ 01.04.2026 ರಿಂದ 05.05.2026 ರ ವರೆಗೆ., ಮಹಿಳೆಯರ ಹೊಲಿಗೆ ತರಬೇತಿ: 31 ದಿನಗಳು. ಪ್ರಾರಂಭ 06.05.2026 ರಿಂದ 05.06.2026 ರ ವರೆಗೆ., ಕಂಪ್ಯೂಟರ್ ಲೆಕ್ಕಪತ್ರ ನಿರ್ವಹಣೆ ತರಬೇತಿ 38 ದಿನಗಳು. ಪ್ರಾರಂಭ 13.05.2026 ರಿಂದ 19.06.2026ರ ವರೆಗೆ, ಅಣಬೆ ಬೇಸಾಯ ತರಬೇತಿ : 10 ದಿನಗಳು. ಪ್ರಾರಂಭ 27.05.2026 ರಿಂದ 05.06.2026 ರ ವರೆಗೆ ನಡೆಯಲಿದೆ. ಆಸಕ್ತರು ಹೆಚ್ಚಿನ ಮಾಹಿತಿಗೆ 9686406181, 9449402081, 8618471801, 9900142602 ನ್ನು ಸಂಪರ್ಕಿಸುವಂತೆ ಸಂಸ್ಥೆಯ ನಿರ್ದೇಶಕರಾದ ಪ್ರಕಾಶ್…






