ಲೇಖಕ: admin

ಮಡಿಕೇರಿ ಡಿ.27 NEWS DESK : 2026 ರ ಹೊಸ ವರ್ಷದ ಆಚರಣೆಗೆ ಜಿಲ್ಲೆಗೆ ವಿವಿಧ ಕಡೆಗಳಿಂದ ದೇಶಿಯ ಹಾಗೂ ವಿದೇಶಿಯ ಪ್ರವಾಸಿಗರು/ ಸಾರ್ವಜನಿಕರು ಜಿಲ್ಲೆಗೆ ಆಗಮಿಸಲಿದ್ದು, ಪ್ರವಾಸಿಗರು ತಂಗುವ ಹೋಂ-ಸ್ಟೇ, ರೆಸಾರ್ಟ್, ಹೋಟೆಲ್-ಲಾಡ್ಜ್‍ಗಳಲ್ಲಿ ನಿಯಮಗಳನ್ನು ಕಡ್ಡಾಯವಾಗಿ ಜಿಲ್ಲೆಯ ಎಲ್ಲಾ ರೆಸಾರ್ಟ್, ಹೋಟೆಲ್, ಹೋಂ-ಸ್ಟೇ ಮಾಲೀಕರು ಕ್ರಮವಹಿಸುವುದು. ಅತಿಥಿಗಳು ಬಂದಾಗ ರಿಜಿಸ್ಟರ್ ಪುಸ್ತಕದಲ್ಲ್ಲಿ ಆಗಮಿಸಿರುವ ಎಲ್ಲ ಪ್ರವಾಸಿಗರ ಹೆಸರು, ಆಧಾರ್ ಕಾರ್ಡ್, ಪೂರ್ಣ ವಿಳಾಸ, ಮೊಬೈಲ್ ಸಂಖ್ಯೆ, ವಾಹನ ಸಂಖ್ಯೆ ಪಡೆಯುವುದು ಹಾಗೂ ವಿದೇಶಿಯರು ಬಂದಾಗ ಅವರ ವೀಸ ಪಾಸ್‍ಪೋರ್ಟ್/ ವಿಮಾನ ಟಿಕೆಟ್ ಪರಿಶೀಲಿಸಿ ರಿಜಿಸ್ಟರ್‍ನಲ್ಲಿ ಕಡ್ಡಾಯವಾಗಿ ನಮೂದಿಸತಕ್ಕದ್ದು.ಜಿಲ್ಲೆಯ ಪ್ರವಾಸಿ ತಾಣಗಳ ಬಗ್ಗೆ ಸಂಪೂರ್ಣ ಮಾಹಿತಿ ಹಾಗೂ ಮಾರ್ಗ ನಕ್ಷೆಯನ್ನು ತಿಳಿಸುವುದು. ಪ್ರವಾಸಿ ತಾಣಗಳು ತೆರೆಯುವ ಹಾಗೂ ಮುಚ್ಚುವ ವೇಳೆಯನ್ನು ಪ್ರವಾಸಿಗರಿಗೆ ತಿಳಿಸುವುದು. ಕಡ್ಡಾಯವಾಗಿ ಮಾಲೀಕರು ಸದರಿ ಕಟ್ಟಡದಲ್ಲಿ ವಾಸವಿರತಕ್ಕದ್ದು ಹಾಗೂ ಪ್ರವಾಸಿಗರ ಜೊತೆ ಅವರ ಪ್ರವಾಸ ಕುರಿತು ಚರ್ಚಿಸಿ ಸೂಕ್ತ ಮಾರ್ಗದರ್ಶನ ನೀಡುವುದು ಹಾಗೂ ಸ್ಥಳೀಯ ಪದ್ಧತಿಗಳು ಮತ್ತು ಕಾನೂನುಗಳ…

Read More

ಮಡಿಕೇರಿ ಡಿ.27 NEWS DESK : ಕೇಂದ್ರ ಮತ್ತು ರಾಜ್ಯ ಸರ್ಕಾರದ ಪುರಸ್ಕøತವಾದ ಸೂಕ್ಷ್ಮ ಸಣ್ಣ ಮತ್ತು ಮಧ್ಯಮ ಉದ್ಯಮಗಳ ಕಾರ್ಯಕ್ಷಮತೆ ಹೆಚ್ಚಿಸುವುದು ಹಾಗೂ ವೇಗಗೊಳಿಸುವುದು(ರ್ಯಾಂಪ್) ಯೋಜನೆಯಡಿ ಜಿಲ್ಲೆಯ ಕೈಗಾರಿಕಾ ಅಭಿವೃದ್ಧಿಗೆ ಪಾಲುದಾರರಾದ ವಿವಿಧ ಇಲಾಖಾ ಅಧಿಕಾರಿಗಳಿಗೆ ಹಾಗೂ ಕೈಗಾರಿಕಾ ಸಂಘ- ಸಂಸ್ಥೆಗಳಿಗೆ know your msme eco system ಕಾರ್ಯಾಗಾರವು ಡಿ.30 ರಂದು ಬೆಳಗ್ಗೆ 10 ಗಂಟೆಗೆ ನಗರದ ಹೋಟೆಲ್ ರಾಜ್‍ದರ್ಶನ್ ಪಾರ್ಟಿ ಹಾಲ್‍ನಲ್ಲ್ಲಿ ನಡೆಯಲಿದೆ ಎಂದು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.

Read More

ಮಡಿಕೇರಿ ಡಿ.27 NEWS DESK : ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದ ಮೇರೆಗೆ ಎಲ್ಲಾ ನ್ಯಾಯಾಲಯಗಳಲ್ಲಿರುವ ರಾಜಿಯಾಗುವಂತಹ ಬಾಕಿ ಪ್ರಕರಣಗಳನ್ನು ಮಧ್ಯಸ್ಥಿಕೆಗಾರಿಕೆಯ ಮೂಲಕ ಇತ್ಯರ್ಥಪಡಿಸಲು ಮುಖ್ಯ ನ್ಯಾಯಮೂರ್ತಿಗಳು ಸರ್ವೋಚ್ಚ ನ್ಯಾಯಾಲಯರವರು ದೇಶಾದಾದ್ಯಂತ ಜ.2 ರಿಂದ 90 ದಿನಗಳ ವಿಶೇಷ ಮಧ್ಯಸ್ಥಗಾರಿಕಾ ಅಭಿಯಾನ 2.0 ಮಧ್ಯಸ್ಥಿಕೆ ರಾಷ್ಟ್ರಕ್ಕಾಗಿ 90 ದಿನಗಳ ಮಧ್ಯಸ್ಥಿಕೆ ಎಂಬ ಅಭಿಯಾನಕ್ಕೆ ಚಾಲನೆ ನೀಡಿರುತ್ತಾರೆ. ಅದರಂತೆ ಜಿಲ್ಲೆಯ ನ್ಯಾಯಾಲದಯಲ್ಲಿರುವ ರಾಜಿಯಾಗುವಂತಹ ಪ್ರಕರಣಗಳನ್ನು ಮಧ್ಯಸ್ಥಿಕೆಯ ಮೂಲಕ ಇತ್ಯರ್ಥಪಡಿಸುತ್ತಿದ್ದು. ಕಕ್ಷಿದಾರರು ಈ 90 ದಿನಗಳ ವಿಶೇóಷ ಅಭಿಯಾನದ ಸದುಪಯೋಗ ಪಡಿಸಿಕೊಳ್ಳುವಂತೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರು, ಪ್ರಭಾರ ಸದಸ್ಯ ಕಾರ್ಯದರ್ಶಿ ಅವರು ತಿಳಿಸಿದ್ದಾರೆ.

Read More

ವಿರಾಜಪೇಟೆ ಡಿ.26 NEWS DESK  :  ಕೊಡಗಿನಲ್ಲಿ ಸುದೀರ್ಘವಾಗಿ ಒಂದು ವರ್ಷದ ಅವಧಿಗೆ 2025 ನವೆಂಬರ್ ನಿಂದ 2026 ನವೆಂಬರ್ ವರೆಗೆ ಕೊಡಗಿನ ವಿವಿಧ ಭಾಗಗಳಲ್ಲಿ ನಾಲ್ಕು ಸಾರ್ವಜನಿಕ ಕಾರ್ಯಕ್ರಮ ಹಾಗೂ 15 ಪದವಿ ಕಾಲೇಜುಗಳಲ್ಲಿ ನುಡಿ ಉತ್ಸವ ಕಾರ್ಯಕ್ರಮ ಜರುಗಲಿದೆ ಎಂದು ಕೊಡಗು ಜಿಲ್ಲಾ ದಸಾಪ ದ ಅಧ್ಯಕ್ಷ ಹಾಗೂ ನುಡಿ ಉತ್ಸವ ಸಮಿತಿಯ ಅಧ್ಯಕ್ಷರಾದ ಅರ್ಜುನ್ ಮೌರ್ಯ ಮಾಹಿತಿ ನೀಡಿದರು. ವಿರಾಜಪೇಟೆಯ ಪ್ರವಾಸಿ ಮಂದಿರದಲ್ಲಿ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ನುಡಿ ನಡೆ ಯುವಜನರ ಕಡೆ ಎಂಬ ಧ್ಯೇಯ ವಾಕ್ಯದೊಂದಿಗೆ ನುಡಿ ಗೀತಗಾಯನ, ನುಡಿ ಸಾಹಿತ್ಯ ಲಹರಿ, ನುಡಿ ನೃತ್ಯ ಸಂಭ್ರಮ, ನುಡಿ ಸಂಸ್ಕೃತಿ ಗಳಂತಹ ಸ್ಪರ್ಧೆಗಳೊಂದಿಗೆ ಪದವಿ ಹಂತದ ವಿದ್ಯಾರ್ಥಿಗಳಿಗೆ ವಿಶೇಷ ಉಪನ್ಯಾಸ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ. ಇದರ ಮುಖ್ಯ ಉದ್ದೇಶ ಕರ್ನಾಟಕದ ಗಡಿ ಜಿಲ್ಲೆಗಳಲ್ಲಿ ಕುಂಠಿತವಾಗುತ್ತಿರುವ ಭಾಷೆಯ ಬಳಕೆ, ಭಾಷಾಭಿಮಾನ, ಸಾಹಿತ್ಯ ಅಭಿಮಾನಗಳನ್ನು ಯುವ ಜನರಲ್ಲಿ ಬೆಳೆಸುವುದರೊಂದಿಗೆ ಶ್ರೀಮಂತವಾದ ಕನ್ನಡ ನಾಡು ನುಡಿ, ಸಂಸ್ಕೃತಿ ಸಾಹಿತ್ಯ, ಪರಂಪರೆಯನ್ನು ವಿದ್ಯಾರ್ಥಿಗಳಿಗೆ…

Read More

ಮಡಿಕೇರಿ ಡಿ.27 NEWS DESK : ಮಡಿಕೇರಿ ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಕ್ಕೆ ಸಮಾಜದ ನಿರ್ದೇಶಕರಾದ ಕಾಳಚಂಡ ಅಪ್ಪಣ್ಣ ಅವರನ್ನು ಮಡಿಕೇರಿ ಕೊಡವ ಸಮಾಜದ ವತಿಯಿಂದ  ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಕೊಡವ ಸಮಾಜದ ಅಧ್ಯಕ್ಷರಾದ ಮಂಡುವಂಡ ಪಿ.ಮುತ್ತಪ್ಪ,  ಉಪಾದ್ಯಕ್ಷರಾದ ಕೇಕಡ ವಿಜು ದೇವಯ್ಯ, ಗೌರವ ಕಾರ್ಯದರ್ಶಿ ಬೊಪ್ಪಂಡ ಸರಳ ಕರುಂಬಯ್ಯ, ಜಂಟಿಕಾರ್ಯದರ್ಶಿ ನಂದಿನೆರವಂಡ ದಿನೇಶ್, ನಿರ್ದೇಶಕರಾದ ಶಾಂತೆಯಂಡ ವಿಶಾಲ್ ಕಾರ್ಯಪ್ಪ, ಮಂಡೀರ‌ ಸದಾಮುದ್ದಪ್ಪ, ಕಾಳಚಂಡ ಅಪ್ಪಣ್ಣ, ಮೂವೆರ ಜಯರಾಂ,  ಪುತ್ತರಿರ ಕರುಣ್ ಕಾಳಯ್ಯ, ನಂದಿನೆವಂಡ ರವಿ ಬಸಪ್ಪ, ಕನ್ನಂಡ‌ ಕವಿತ ಕಾವೇರಮ್ಮ,  ಕಾಂಡೇರ‌ ಲಲ್ಲು ,  ಪಾಲೆಯಂಡ ರೂಪ, ಪುಲ್ಲೆರ ವಸಂತ್  ಹಾಗೂ ವ್ಯವಸ್ಥಾಪಕಿ ಭೋಜಮ್ಮ ಹಾಜರಿದ್ದರು.

Read More

 ನಾಪೋಕ್ಲು ಡಿ.27 NEWS DESK : ಭಾಗಮಂಡಲದಲ್ಲಿ ಶ್ರೀ ಅಯ್ಯಪ್ಪ ಸ್ವಾಮಿಯ 43ನೇ ವರ್ಷದ  ಮಂಡಲ ಪೂಜೆಯು ಶ್ರದ್ಧಾಭಕ್ತಿಯಿಂದ ನೆರವೇರಿತು. ವರ್ಷಂಪ್ರತಿ  ಆಚರಿಸಿಕೊಂಡು ಬರುವಂತೆ  ಈ ವರ್ಷವು ಶ್ರೀ ಅಯ್ಯಪ್ಪ ಸ್ವಾಮಿಯ  ಮಂಡಲ ಪೂಜೆಯ ಶೋಭಾ ಯಾತ್ರೆ, ಸಿಂಗಾರಿ ಮೇಳ ಸೇರಿದಂತೆ ವಿವಿಧ ಪೂಜಾ ವಿಧಿ ವಿಧಾನಗಳು ಜೊತೆ ಅದ್ದೂರಿಯಿಂದ ಜರುಗಿತು. ಗುರುಸ್ವಾಮಿಗಳಾದ  ಸಿ.ಆರ್ ಜಯನ್ ಮತ್ತು  ಹೆಚ್.ಎಸ್.ವಸಂತ್ ಅವರ ನೇತೃತ್ವದಲ್ಲಿ ಭಾಗಮಂಡಲದ ತಲಕಾವೇರಿ ರಸ್ತೆಯ ಬದಿಯಲ್ಲಿರುವ  ಅಯ್ಯಪ್ಪ ಬನದಲ್ಲಿ ಪೂಜೆ ಪ್ರಾರಂಭಿಸಿ ನಂತರ ಸಿಂಗಾರಿ ಮೇಳದೊಂದಿಗೆ ಶ್ರೀ ಅಯ್ಯಪ್ಪ ಸ್ವಾಮಿಯ ಶೋಭಾ ಯಾತ್ರೆಯು ಭಾಗಮಂಡಲದ ಮುಖ್ಯರಸ್ತೆಯಲ್ಲಿ ಸಾಗಿ ಬಂದು ಶ್ರೀ ಭಗಂಡೇಶ್ವರ ದೇವಾಲಯದ ಮುಂಭಾಗದಲ್ಲಿ ಮಂಡಲ ಪೂಜಾ ನೆರವೇರಿತು,ಈ ಸಂದರ್ಭ ಭಕ್ತಾದಿಗಳೆಲ್ಲರೂ ಶ್ರೀ ಅಯ್ಯಪ್ಪ ಸ್ವಾಮಿಯ ಕೃಪೆಗೆ ಪಾತ್ರರಾಗಿ ಪ್ರಸಾದ ವಿತರಣೆ ಮತ್ತು ಅನ್ನದಾನದಲ್ಲಿ ಪಾಲ್ಗೊಂಡರು. ಮಂಡಲ ಪೂಜೆಯಲ್ಲಿ ಭಾಗಮಂಡಲ,  ಕರಿಕೆ ಅಯ್ಯಂಗೇರಿ, ದೊಡ್ಡಪುಲಿಕೊಟ್ಟು, ನಾಪೋಕ್ಲು, ಬೆಟ್ಟಗೇರಿ, ಚೆರಂಬಾಣೆ  ಅಕ್ಕಪಕ್ಕದ ಊರುಗಳಿಂದ ಅಯ್ಯಪ್ಪ ಸ್ವಾಮಿ ಮಾಲಾದಾರಿಗಳು ಮತ್ತು ಭಕ್ತಾದಿಗಳು ಭಾಗವಹಿಸಿದರು.…

Read More

ಮಡಿಕೇರಿ ಡಿ.27 NEWS DESK : ಸ್ವಾತಂತ್ರ್ಯ ಹೋರಾಟಗಾರ ದಿ.ಪೂಜಾರಿರ ರಾಮಪ್ಪ ಟ್ರಸ್ಟ್ ಮೇಕೇರಿ ಹಾಗೂ ಅರ್ವತೋಕ್ಲು ಗ್ರಾಮಸ್ಥರ ಸಹಯೋಗದೊಂದಿಗೆ ಡಿ.28 ರಂದು ಮೇಕೇರಿ-ಅರ್ವತೊಕ್ಲು ಸಂಪರ್ಕ ರಸ್ತೆಗೆ ಪೂಜಾರಿರ ರಾಮಪ್ಪ ರಸ್ತೆ ನಾಮಕರಣ ಸಮಾರಂಭ ನಡೆಯಲಿದೆ. ಅಂದು ಬೆಳಿಗ್ಗೆ 9 ಗಂಟೆಗೆ ಮೇಕೇರಿ ಶಾಲಾ ಮೈದಾನದಲ್ಲಿ ನಡೆಯಲಿರುವ ಸಮಾರಂಭವನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಮೇಕೇರಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಪೂಜಾರಿರ ರಕ್ಷಿತ್ ಉತ್ತಪ್ಪ ವಹಿಸಿಲಿದ್ದಾರೆ. ಮುಖ್ಯ ಅತಿಥಿಗಳಾಗಿ ವಿಧಾನಸಭಾ ಮಾಜಿ ಅಧ್ಯಕ್ಷ ಕೆ.ಜಿ.ಬೋಪಯ್ಯ, ಪೂಜಾರಿರ ಕುಟುಂಬದ ಪಟ್ಟೆದಾರ ಪೂಜಾರಿರ ಪೂವಯ್ಯ, ಸರ್ವೋದಯ ಸಮಿತಿ ಅಧ್ಯಕ್ಷ ಅಂಬೆಕಲ್ಲು ಕುಶಾಲಪ್ಪ ಪಾಲ್ಗೊಳ್ಳಲಿದ್ದು, ಜಿಲ್ಲಾ ಕಾಂಗ್ರೆಸ್ ಸಮಿತಿ ಸದಸ್ಯ ಭೀಷ್ಮ ಮಾದಪ್ಪ, ರಾಜೀವ ಗಾಂಧಿ ಪಂಚಾಯತ್ ರಾಜ್ ಸಂಘಟನೆ ಜಿಲ್ಲಾಧ್ಯಕ್ಷ ತೆನ್ನೀರ ಮೈನಾ, ಮಾಜಿ ಸೈನಿಕ ಪೂಜಾರಿರ ಬೆಳಿಯಪ್ಪ, ರಾಮಪ್ಪ ಸಮಿತಿ ಗೌರವಾಧ್ಯಕ್ಷ ಪೂಜಾರಿರ ಮಾದಪ್ಪ ಉಪಸ್ಥಿತರಿರಲಿದ್ದಾರೆ.

Read More

ಮಡಿಕೇರಿ ಡಿ.27 NEWS DESK : ಹಲವು ದಶಕಗಳಿಂದ ಸಮಸ್ಯೆಯಾಗಿ ಉಳಿದಿದ್ದ ಕೊಡಗಿನ ಜಮ್ಮಾ ಭೂಮಿಗೆ  ಶಾಶ್ವತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಕರ್ನಾಟಕ ಭೂ ಕಂದಾಯ ಕಾಯ್ದೆಗೆ ತಿದ್ದುಪಡಿ ವಿದೇಯಕವನ್ನು ಸದನದಲ್ಲಿ ಮಂಡಿಸಿ ಕಾಯ್ದೆ ರೂಪಕ್ಕೆ ಜಾರಿಗೊಳಿಸುವಲ್ಲಿ ಶ್ರಮಿಸಿದ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್‍ಗೌಡ ಅವರನ್ನು ಶುಕ್ರವಾರ ಅಭಿನಂದಿಸಲಾಯಿತು.  ನಗರದ ಲಯನ್ಸ್ ಸಂಸ್ಥೆ ಸಭಾಂಗಣದಲ್ಲಿ ನಡೆದ ಅಭಿನಂದನಾ ಸಮಾರಂಭದಲ್ಲಿ ಶಾಸಕರಾದ ಡಾ.ಮಂತರ್ ಗೌಡ ಅವರಿಗೆ ಜಿಲ್ಲೆಯ ವಿವಿಧ ಸಂಘಟನೆಗಳು ಹಾಗೂ ಅಭಿಮಾನಿಗಳು ಶಾಲೂ, ಫಲ ತಾಂಬೂಲ, ನೀಡಿ ಗೌರವಿಸಿ, ಸನ್ಮಾನಿಸಿದರು.   ಸನ್ಮಾನ ಸ್ವೀಕರಿಸಿ ಮಾತನಾಡಿದ ಡಾ.ಮಂತರ್ ಗೌಡ ಅವರು ಕೊಡಗು ಜಿಲ್ಲೆಯ ಕೃಷಿಕರಲ್ಲಿ ನೂರಾರು ವರ್ಷಗಳಲ್ಲಿ ಕಾಡಿದ್ದ ಜಮ್ಮಾ ಬಾಣೆ ಸಮಸ್ಯೆಯನ್ನು ಒಂದು ತಾರ್ಕಿಕ ಹಂತಕ್ಕೆ ಕೊಂಡೊಯ್ಯುವಲ್ಲಿ ಪ್ರಯತ್ನಿಸಲಾಗಿದೆ ಎಂದು ಹೇಳಿದರು.  ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರನ್ನು ಸದಾ ಸ್ಮರಿಸಬೇಕು. ಆ ನಿಟ್ಟಿನಲ್ಲಿ ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ ಅವರ ನಿರಂತರ ಪ್ರಯತ್ನ ಹಾಗೂ ಕಂದಾಯ ಸಚಿವರ…

Read More

ಮಡಿಕೇರಿ ಡಿ.26 NEWS DESK  : ‘ಲೆವಿಸ್ಟಾ ಕೊಡವ ಹಾಕಿ ಚಾಂಪಿಯನ್ಸ್ ಟ್ರೋಫಿ ಪಂದ್ಯಾವಳಿ’ಯ ಮೊದಲ ದಿನದ ಹಣಾಹಣಿಯಲ್ಲಿ ಮಂಡೇಪಂಡ ತಂಡ ಪರದಂಡ ತಂಡದ ವಿರುದ್ಧ 2-1 ಗೋಲುಗಳ ಅಂತರದಲ್ಲಿ ಗೆಲವು ಸಾಧಿಸಿತು. ಮಂಡೇಪಂಡ ಪರ ಚಂದನ್ ಕಾರ್ಯಪ್ಪ ಹಾಗೂ ಚಂಗಪ್ಪ ಎಂ.ಪಿ ತಲಾ ಒಂದು ಗೋಲು ಬಾರಿಸಿದರು. ಪರದಂಡ ಪರ ರಂಜನ್ ಅಯ್ಯಪ್ಪ ಗೋಲು ದಾಖಲಿಸಿದರು. ಚೆಪ್ಪುಡಿರ ಮತ್ತು ಪಳಂಗಂಡ ನಡುವಿನ ಪಂದ್ಯ ಯಾವುದೇ ಗೋಲು ದಾಖಲಾಗದೆ ಡ್ರಾದಲ್ಲಿ ಅಂತ್ಯಗೊಂಡಿತು. ನೆಲ್ಲಮಕ್ಕಡ ಮತ್ತು ಮಾಚಮಾಡ ನಡುವಿನ ಪಂದ್ಯದಲ್ಲಿ  ನೆಲ್ಲಮಕ್ಕಡ ತಂಡ 6-0 ಗೋಲುಗಳ ಅಂತರದಲ್ಲಿ ಭರ್ಜರಿ ಗೆಲುವು ದಾಖಲಿಸಿತು. ನೆಲ್ಲಮಕ್ಕಡ ಪೂವಣ್ಣ ಹಾಗೂ ಅಯ್ಯಪ್ಪ ತಲಾ ಎರಡು ಗೋಲು ಬಾರಿಸಿದರು. ತಿಮ್ಮಯ್ಯ ಹಾಗೂ ಸಚಿನ್ ತಲಾ ಒಂದು ಗೋಲು ದಾಖಲಿಸಿದರು.   ತಲಾ ಒಂದು ಗೋಲು ದಾಖಲಾಗುವ ಮೂಲಕ ಕಲಿಯಂಡ ಮತ್ತು ಕುಪ್ಪಂಡ ನಡುವಿನ ಪಂದ್ಯ ಡ್ರಾ ಗೊಂಡಿತು. ಕಲಿಯಂಡ ಪರ ಚಿರಂತ್ ಹಾಗೂ ಕುಪ್ಪಂಡ ಪರ ಸೋಮಯ್ಯ ಗೋಲು ಬಾರಿಸಿದರು.

Read More

ಸುಂಟಿಕೊಪ್ಪ ಡಿ.26 NEWS DESK : ಬೆಂಗಳೂರು ಮತ್ತು ತುಮಕೂರಿನಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಫುಟ್ಬಾಲ್ ಪಂದ್ಯಾವಳಿಗೆ ಕೊಡಗು ತಂಡವನ್ನು ಆಯ್ಕೆಗೊಳಿಸುವ ಪ್ರಕ್ರಿಯೆ ಡಿ.28 ರಂದು ನಡೆಯಲಿದೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಜಿಲ್ಲಾ ಫುಟ್ಬಾಲ್ ಸಂಸ್ಥೆಯ ಕಾರ್ಯದರ್ಶಿ ಪಿ.ಎ.ನಾಗೇಶ್ ಅವರು ಆಯ್ಕೆ ಪ್ರಕ್ರಿಯೆಯು ಆಮ್ಮತ್ತಿಯ ಪ್ರೌಢಶಾಲಾ ಮೈದಾನದಲ್ಲಿ ನಡೆಯಲಿದೆ. ಆಯ್ಕೆ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವ ಆಟಗಾರರು ಪೂರ್ಣ ಫುಟ್ಬಾಲ್ ಕಿಟ್, ಆಧಾರ್ ಮೂಲಪ್ರತಿ, ಬ್ಯಾಂಕ್ ಪಾಸ್ ಪುಸ್ತಕ, ಒಂದು ಪಾಸ್‍ಪೋರ್ಟ್ ಸೈಜಿನ ಭಾವಚಿತ್ರವನ್ನು ಹೊಂದಿಕೊಂಡು ಭಾನುವಾರ ಬೆಳಿಗ್ಗೆ 10 ಗಂಟೆಗೆ ಹಾಜರಾಗಬೇಕೆಂದು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ 9481058256 ಇವರನ್ನು ಸಂರ್ಕಿಸುವಂತೆ ಕೋರಿದೆ.

Read More