ಲೇಖಕ: admin

ಮಡಿಕೇರಿ ಸೆ.4 NEWS DESK : ಶಿವಮೊಗ್ಗದಲ್ಲಿ ನಡೆದ ಶಿವಮೊಗ್ಗ ಓಪನ್ 5ನೇ ಅಂತರಾಷ್ಟ್ರೀಯ ಕರಾಟೆ ಚಾಂಪಿಯನ್‍ಶಿಪ್ ಪಂದ್ಯಾವಳಿಯಲ್ಲಿ ಹೋಲಿ ಮೌಂಟ್ ಶಾಲೆಯ 9ನೇ ತರಗತಿ ವಿದ್ಯಾರ್ಥಿ ಮೊಹಮ್ಮದ್ ಸಕ್ಲೇನ್ ಸಾಧನೆ ಮಾಡಿದ್ದಾನೆ. ಕುಮಟಿ ಹಾಗೂ ಕಟಾ ಎರಡೂ ವಿಭಾಗದಲ್ಲಿ ಪ್ರಥಮ ಪ್ರಶಸ್ತಿಗಳನ್ನು ಗೆಲ್ಲುವುದರ ಮೂಲಕ ಜಿಲ್ಲೆಗೆ ಹಾಗೂ ಭಾರತ ದೇಶಕ್ಕೆ ಕೀರ್ತಿ ತಂದಿದ್ದಾನೆ. ಕೊಡ್ಲಿಪೇಟೆಯ ಆಯೀಷಾ ಹಾಗೂ ಅಫ್ಸರ್ ದಂಪತಿ ಪುತ್ರನಾಗಿರುವ ಮೊಹಮ್ಮದ್ ಸಕ್ಲೇನ್ ಹಾಸನದ ಖ್ಯಾತ ಕರಾಟೆ ತರಬೇತುದಾರರಾಗಿರುವ ಆರೀಫ್ ಅವರ ಬಳಿ ತರಬೇತಿ ಪಡೆಯುತ್ತಿದ್ದಾನೆ. ಶಿವಮೊಗ್ಗದ ಪಿಇಎಸ್ ಕಾಲೇಜಿನ ಪ್ರೇರಣಾ ಸಭಾಂಗಣದಲ್ಲಿ ನಡೆದ ಈ ಪಂದ್ಯಾವಳಿಯಲ್ಲಿ ಶ್ರೀ ಲಂಕಾ, ನೇಪಾಳ ಸೇರಿದಂತೆ ದೇಶದ 13 ರಾಜ್ಯಗಳಿಂದ ಸುಮಾರು ಎರಡೂವರೆ ಸಾವಿರ ಕ್ರೀಡಾಪಟುಗಳು ಭಾಗವಹಿಸಿದ್ದು, ಅಮೆರಿಕದಿಂದ ಗ್ರಾಂಡ್ ಮಾಸ್ಟರ್ ಚೆರಿ ಎಫ್.ಮೌಲೆ, ಚಿತ್ರ ನಟ ಸುಮನ್ ತಲ್ವಾರ್ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಿದ್ದರು. ಎರಡು ವಿಭಾಗದಲ್ಲಿ ನಡೆದ ಸ್ಪರ್ಧೆಗೆ ಏಷ್ಯನ್ ತೀರ್ಪುಗಾರರು ಸೇರಿದಂತೆ ರಾಷ್ಟ್ರೀಯ ತೀರ್ಪುಗಾರರು ಆಗಮಿಸಿದ್ದರು.

Read More

ಮಡಿಕೇರಿ NEWS DESK ಸೆ.3 : ವಿಘ್ನ ವಿನಾಯಕನ ಪ್ರತಿಷ್ಠಾಪನೆ ಮತ್ತು ಆರಾಧನೆಗೆ ದಿನಗಣನೆ ಅರಂಭವಾಗಿದೆ. ಈಗಾಗಲೇ ವಿವಿಧ ಗಣೇಶೋತ್ಸವ ಸಮಿತಿಗಳು ಗಣೇಶ ಚತುರ್ಥಿಯ ಅರ್ಥಪೂರ್ಣ ಆಚರಣೆಗೆ ಸಿದ್ಧತೆ ಮಾಡಿಕೊಳ್ಳುತ್ತಿವೆ. ಪ್ರತಿ ವರ್ಷ ವಿಜ್ರಂಭಣೆಯ ಗಣೇಶೋತ್ಸವಕ್ಕೆ ಹೆಸರುವಾಸಿಯಾಗಿರುವ ಮಡಿಕೇರಿಯ ಪುಟಾಣಿ ನಗರದ ಶ್ರೀಉದ್ಭವ ವಿನಾಯಕ ಸೇವಾ ಸಮಿತಿ 31ನೇ ವರ್ಷದ ಗಣೇಶ ಹಬ್ಬವನ್ನು ಅದ್ದೂರಿಯಾಗಿ ಆಚರಿಸಲು ತಯಾರಿ ನಡೆಸಿದೆ. ಹಗಲಿರುಳು ಯುವಕರ ತಂಡ ಶ್ರಮಿಸುತ್ತಿದ್ದು, ಈಗಾಗಲೇ ಪುಟಾಣಿ ನಗರದಲ್ಲಿ ಆಕರ್ಷಕ ಸ್ವಾಗತ ದ್ವಾರವನ್ನು ಳವಡಿಸಿದ್ದಾರೆ. ಈ ಬಾರಿ ಏಳು ದಿನಗಳ ಕಾಲ ಗಣಪತಿ ಮೂರ್ತಿಗೆ ವಿಶೇಷ ಪೂಜೆ ನಡೆಯಲಿದೆ. ವಿವಿಧ ಭಕ್ತಿ ಪ್ರಧಾನ ಕಾರ್ಯಕ್ರಮಗಳನ್ನು ಆಯೋಜಿಸಲು ಸಮಿತಿ ನಿರ್ಧರಿಸಿದೆ. ಶಾಸಕ ಡಾ.ಮಂತರ್ ಗೌಡ ಹಾಗೂ ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಿ.ವೈ.ರಾಜೇಶ್ ಶ್ರೀಉದ್ಭವ ವಿನಾಯಕ ಸೇವಾ ಸಮಿತಿಗೆ ಸಂಪೂರ್ಣ ಸಹಕಾರ ನೀಡುತ್ತಿರುವುದು ವಿಶೇಷ.

Read More

ಹೊಲತಾಳು NEWS DESK ಸೆ.3 : ಕೊರಟಗೆರೆ ತಾಲ್ಲೂಕಿನ ಕುರಂಕೋಟೆ ಗ್ರಾ.ಪಂ ವ್ಯಾಪ್ತಿಯ ಹೊಲತಾಳು ಗ್ರಾಮದಲ್ಲಿ 4 ತಿಂಗಳ ಚಿರತೆ ಮರಿಯೊಂದು ಪತ್ತೆಯಾಗಿದೆ. ಇಂದು ಮುಂಜಾನೆ 5 ಗಂಟೆ ಸುಮಾರಿನಲ್ಲಿ ನಾಯಿಗಳು ಜೋರಾಗಿ ಬೊಗಳುತ್ತಿದ್ದಾಗ ಗ್ರಾಮಸ್ಥರು ಚಿರತೆ ಮರಿಯನ್ನು ಗಮನಿಸಿದ್ದಾರೆ. ಗ್ರಾಮಸ್ಥರಿಂದ ಮಾಹಿತಿ ದೊರೆತು ಸ್ಥಳಕ್ಕೆ ಬಂದ ಅರಣ್ಯ ಅಧಿಕಾರಿಗಳು ಚಿರತೆ ಮರಿಯನ್ನು ವಶಕ್ಕೆ ಪಡೆದರು. ನಂತರ ಆರೈಕೆ ನೀಡಿ ಅರಣ್ಯ ಪ್ರದೇಶದಲ್ಲಿ ತಾಯಿಯ ಬಳಿಗೆ ಬಿಡಲು ಕ್ರಮ ಕೈಗೊಂಡರು.

Read More

ಸೋಮವಾರಪೇಟೆ NEWS DESK ಸೆ.3 :ರೈತರ ಸಿ ಆ್ಯಂಡ್ ಡಿ ಭೂಮಿ ಮತ್ತು ಸರ್ಕಾರಿ ಜಾಗ ಒತ್ತುವರಿಯನ್ನು ತೆರವುಗೊಳಿಸಲು ಸರ್ಕಾರ ಮುಂದಾದರೆ, ಜನಪ್ರತಿನಿಧಿಗಳು ಪಕ್ಷಭೇದ ಮರೆತು ರೈತರ ಪರ ನಿಲ್ಲಬೇಕು ಎಂದು ಸೋಮವಾರಪೇಟೆ ತಾಲ್ಲೂಕು ರೈತ ಹೋರಾಟ ಸಮಿತಿ ಕೆ.ಬಿ.ಸುರೇಶ್ ಮನವಿ ಮಾಡಿದ್ದಾರೆ. ಶಾಂತಳ್ಳಿ ಹೋಬಳಿ ಸೇರಿದಂತೆ ಅನೇಕ ಗ್ರಾಮಗಳಲ್ಲಿ ಸಿ ಆ್ಯಂಡ್ ಡಿ ಭೂಮಿಯಲ್ಲೇ ಕೃಷಿ ಮಾಡಿದ್ದಾರೆ. ಕಾಳುಮೆಣಸು, ಕಾಫಿ ಬೆಳೆಯುತ್ತಿದ್ದಾರೆ. ಅದರಲ್ಲೆ ಬದುಕು ಕಟ್ಟಿಕೊಂಡಿದ್ದಾರೆ. ಈಗ ಆಸ್ತಿ ಕಳೆದುಕೊಂಡು ಹೆಚ್ಚಿನ ರೈತರು ಬೀದಿ ಪಾಲಾಗುವ ಆತಂಕ ಎದುರಿಸುವಂತಾಗಿದೆ. ಈ ಸಂದರ್ಭದಲ್ಲಿ ರಾಜಕಾರಣಿಗಳು ದಿನಕ್ಕೊಂದು ಹೇಳಿಕೆ ನೀಡುತ್ತ ರೈತರಲ್ಲಿ ಭಯ ಹುಟ್ಟಿಸುತ್ತಿದ್ದಾರೆ. ರೈತ ವಿರೋಧಿ ಹೇಳಿಕೆಯನ್ನು ನೀಡುವುದನ್ನು ಬಿಟ್ಟು, ರೈತಪರವಾದ ಹೇಳಿಕೆ ನೀಡಬೇಕೆಂದು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು. ಮೂರು ಎಕರೆಯಷ್ಟು ಒತ್ತುವರಿ ಭೂಮಿಯನ್ನು ತೆರವುಗೊಳಿಸುವುದಿಲ್ಲ ಎಂದು ಸರ್ಕಾರದ ಪ್ರತಿನಿಧಿಗಳು ಹೇಳುತ್ತಿದ್ದಾರೆ. ಕೂಡಲೆ ಮೂರು ಎಕರೆ ಒತ್ತುವರಿ ಭೂಮಿಗಾದರೂ ಹಕ್ಕುಪತ್ರ ಕೊಡುವಂತಾಗಲಿ ಎಂದು ಒತ್ತಾಯಿಸಿದರು. ಸೋಮವಾರಪೇಟೆ ತಾಲ್ಲೂಕಿನಲ್ಲಿ ಸಿ ಆ್ಯಂಡ್ ಡಿ…

Read More

ಚೆಟ್ಟಳ್ಳಿ NEWS DESK  ಸೆ.3 : ಕೊಡಗು ಜಿಲ್ಲೆಯಾದ್ಯಂತ ಕೈಲ್ ಪೊಳ್ದ್ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು. ಚೆಟ್ಟಳ್ಳಿಯ ಪುತ್ತರಿರ ಐನ್ ಮನೆಯಲ್ಲಿ ಕುಟುಂಬಸ್ಥರು ಹಬ್ಬದ ಸಂಭ್ರಮವನ್ನು ಹಂಚಿಕೊಂಡರು. ಕೊಡವರ ದೇವನೆಲೆಯಾದ ನೆಲ್ಲಕ್ಕಿ ನಡುಬಾಡೆಯಲ್ಲಿ ಕೋವಿ, ಒಡಿಕತ್ತಿ, ಗೆಜ್ಜೆತಂಡ, ತೋಕ್ ಪೂ, ಮೀದಿ, ನೀರಿಟ್ಟು, ವಿಶೇಷ ಪೂಜೆ ಸಲ್ಲಿಸಲಾಯಿತು. ಕುಟುಂಬದ ಹಿರಿಯರಾದ ವಾಯುಸೇನೆಯ ನಿವೃತ್ತ ಯೋಧ ಪುತ್ತರಿರ ಗಣೇಶ್ ಭೀಮಯ್ಯ ಅವರು ಪೂಜೆ ಸಲ್ಲಿಸಿ ಪ್ರಾರ್ಥಿಸಿದರು. ನಾಡಿಗೆ ಹಾಗೂ ಕುಟುಂಬಕ್ಕೆ ಒಳಿತಾಗಲಿ ಎಂದು ಶುಭ ಹಾರೈಸಿದರು. ಕೈಲ್ ಪೊಳ್ದ್ ಹಬ್ಬದ ವಿಶೇಷ ಭೋಜನದ ನಂತರ ಹಿರಿಯರು, ಕಿರಿಯರು, ಮಹಿಳೆಯರು, ಅಕ್ಕಪಕ್ಕದ ಗ್ರಾಮಸ್ಥರು ಊರುಮಂದ್ ನಲ್ಲಿ ತೆಂಗಿನಕಾಯಿಗೆ ಗುಂಡು ಹೊಡೆದು ಸಂಭ್ರಮಿಸಿದರು.

Read More

ಬೆಂಗಳೂರು NEWS DESK ಸೆ.3: ಅರಣ್ಯ ಒತ್ತುವರಿಯನ್ನು ಕಟ್ಟು ನಿಟ್ಟಾಗಿ ತಡೆಯಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಖಡಕ್ ಸೂಚನೆ ನೀಡಿದ್ದಾರೆ. ಅರಣ್ಯ ಇಲಾಖೆ ವತಿಯಿಂದ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಿದ್ದ ಮುಖ್ಯಮಂತ್ರಿಗಳ ಪದಕ ಪ್ರದಾನ ಸಮಾರಂಭದಲ್ಲಿ 2022, 2023 ನೇ ಸಾಲಿನ ಪದಕ ವಿತರಿಸಿ ಮಾತನಾಡಿದರು. ಅರಣ್ಯ ಸಂಪತ್ತಿನ ಸಂರಕ್ಷಣೆಯ ಮಹತ್ವ ಅರಿತಿದ್ದ ಇಂಧಿರಾಗಾಂಧಿಯವರು ಅರಣ್ಯ ಸಂರಕ್ಷಣಾ ಕಾಯ್ದೆ ಜಾರಿಗೆ ತಂದಿದ್ದಾರೆ. ಇದು ಅತ್ಯಂತ ನಿಷ್ಠುರವಾಗಿದೆ. ಅರಣ್ಯಾಧಿಕಾರಿಗಳೂ ಅಷ್ಟೇ ನಿಷ್ಠುರವಾಗಿ ಅರಣ್ಯ ಒತ್ತುವರಿ ತಡೆಯಬೇಕು ಎಂದರು. ಕಾಡು ಪ್ರಾಣಿಗಳಿಗೆ ಆಹಾರ, ಮೇವು ಮತ್ತು ನೀರು ಕಾಡಿನ  ಒಳಗೇ ಅಗತ್ಯವಿದ್ದಷ್ಟು ದೊರೆತರೆ ಅವು ಕಾಡಿನಿಂದ ಹೊರಗೆ ಬರುವುದಿಲ್ಲ. ಆಗ ಮಾನವ-ಪ್ರಾಣಿ ಸಂಘರ್ಷಕ್ಕೆ ತಡೆ ಬೀಳುತ್ತದೆ ಎಂದರು. ಮಹಾತ್ಮಗಾಂಧಿಯವರು ಪ್ರಕೃತಿ ಪ್ರಿಯರಾಗಿದ್ದರು. “ಪ್ರಕೃತಿ ಮನುಷ್ಯನ‌ ಅಗತ್ಯಗಳನ್ನು ಪೂರೈಸುತ್ತದೆ. ಆದರೆ ಮನುಷ್ಯನ ದುರಾಸೆಗಳನ್ನು ಪೂರೈಸಲು ಆಗುವುದಿಲ್ಲ” ಎಂದು ಮಹಾತ್ಮಗಾಂಧಿ ಹೇಳಿದ್ದಾರೆ. ಇವತ್ತಿನ ಪರಿಸರದ ಅನಾಹುತಗಳಿಗೆ ಮನುಷ್ಯನ ದುರಾಸೆಯೇ ಕಾರಣ ಎಂದರು. ಇಂದು ಪ್ರಶಸ್ತಿ ಸ್ವೀಕರಿಸಿದವರು ಉಳಿದವರಿಗೆ, ಸಮಾಜಕ್ಕೆ ಸ್ಪೂರ್ತಿಯಾಗಲಿ ಎಂದು…

Read More

ಮಡಿಕೇರಿ NEWS DESK ಸೆ.3 : ರಾಜ್ಯ ಸರ್ಕಾರ ಅರಣ್ಯ ಮತ್ತು ಕಂದಾಯ ಇಲಾಖೆಯ ಮೂಲಕ ಹೊರಡಿಸಿರುವ ಕೊಡಗಿನ ಜನರು ಹಾಗೂ ಬೆಳೆಗಾರರಿಗೆ ಮಾರಕವಾಗಬಲ್ಲ ಸುತ್ತೋಲೆಗಳನ್ನು ತಕ್ಷಣ ಹಿಂದಕ್ಕೆ ಪಡೆಯಬೇಕೆಂದು ಭಾರತೀಯ ಜನತಾ ಪಾರ್ಟಿಯ ಸೋಮವಾರಪೇಟೆ ಮಂಡಲದ ವಕ್ತಾರ ಬಲ್ಲಾರಂಡ ಕಂಠಿ ಕಾರ್ಯಪ್ಪ ಒತ್ತಾಯಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಸುತ್ತೋಲೆಗಳ ಮೂಲಕ ಕೊಡಗಿನ ಜನರಿಗೆ ಕಿರುಕುಳ ನೀಡುತ್ತಿದೆ ಎಂದು ಆರೋಪಿಸಿದ್ದಾರೆ. ರೈತರು ಕಳೆದ 30- 40 ವರ್ಷಗಳಿಂದ ಕೃಷಿ ಮಾಡಿ ಬದುಕು ಸಾಗಿಸುತ್ತಿರುವ ಸಿ ಮತ್ತು ಡಿ ಭೂಮಿಯನ್ನು ವಶಕ್ಕೆ ಪಡೆಯಲು ಸರ್ಕಾರ ಮುಂದಾಗಿದ್ದು, ಈಗಾಗಲೇ ಕಂದಾಯ ಇಲಾಖೆಯಿಂದ ಸರ್ವೆ ಕಾರ್ಯ ಆರಂಭಗೊಂಡಿದೆ. ಸಿ ಮತ್ತು ಡಿ ಭೂಮಿಯಲ್ಲಿ ಕೃಷಿ ಮಾಡುತ್ತಿರುವ ಕೊಡಗಿನ ರೈತರು ಕಂದಾಯ ಪಾವತಿಸುತ್ತಿರುವುದಲ್ಲದೆ ಹಕ್ಕುಪತ್ರವನ್ನು ಕೂಡ ಹೊಂದಿದ್ದಾರೆ. ಆದರೆ ಇದೀಗ ರಾಜ್ಯ ಸರ್ಕಾರದ ದಿಢೀರ್ ನಿರ್ಧಾರದಿಂದ ಕೃಷಿಕರು ಭೂಮಿ ಕಳೆದುಕೊಳ್ಳುವ ಭೀತಿಯನ್ನು ಎದುರಿಸುತ್ತಿದ್ದಾರೆ. ಬೆಳೆಗಾರರು ಕಾಫಿ…

Read More

ಸಿದ್ದಾಪುರ NEWS DESK ಸೆ.3 :  ಜಿಲ್ಲೆಯ ಮುಸ್ಲಿಂ ಸಮುದಾಯದ ಸಮಗ್ರ ಅಭಿವೃದ್ಧಿ, ಸುಧಾರಣೆ ಮತ್ತು ಸಮಸ್ಯೆಗಳ ಪರಿಹಾರಕ್ಕಾಗಿ ಸುನ್ನಿ ವಿಭಾಗದ ಎರಡು ಪಂಗಡಗಳ ಮುಖಂಡರುಗಳು ಒಗ್ಗೂಡಿ ಕೊಡಗು ಜಿಲ್ಲಾ ಮಟ್ಟದ ಸುನ್ನಿ ಸಮನ್ವಯ ಸಮಿತಿಯನ್ನು ರಚಿಸಿದ್ದಾರೆ. ನೆಲ್ಯಹುದಿಕೇರಿ ಕೋಪಿಯೋ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಸಮಸ್ತ ಕೊಡಗು ಜಂಮ್ಯತ್ತುಲ್ ಉಲಮ ಅಧ್ಯಕ್ಷ ಎಂ.ಎಂ.ಅಬ್ದುಲ್ಲಾ  ಫೈಝಿ ಉಸ್ತಾದ್ ಹಾಗೂ ಕೂರ್ಗ್ ಜಂಮ್ಯತ್ತುಲ್ ಉಲಮ ಪ್ರಧಾನ ಕಾರ್ಯದರ್ಶಿ ಅಶ್ರಫ್ ಅಹ್ಸನಿ ಉಸ್ತಾದ್ ಅವರ ನೇತೃತ್ವದಲ್ಲಿ ಉಪಾಧ್ಯಕ್ಷರುಗಳಾಗಿ ಕೆ.ಎ.ಯಾಕುಬ್ ಬಜೆಗುಂಡಿ, ಪಿ.ಎಂ.ಅಬ್ದುಲ್ ಲತೀಫ್ ಸುಂಟಿಕೊಪ್ಪ, ಸಂಚಾಲಕರುಗಳಾಗಿ ಹಫೀಲ್ ಸಹದಿ ತಣ್ಣೀರ್ ಹಳ್ಳ, ಉಮ್ಮರ್ ಪೈಝಿ ಸಿದ್ದಾಪುರ, ಪ್ರಚಾರ ಸಮಿತಿ  ಪ್ರತಿನಿಧಿಗಳಾಗಿ ಹನೀಫ್ ಸಖಾಫಿ ಕೊಂಡಂಗೇರಿ, ಸಿ.ಎಂ.ಹಮೀದ್ ಮೌಲವಿ ಸುಂಟಿಕೊಪ್ಪ ಸೇರಿದಂತೆ ಸುನ್ನತ್  ಜಮಾಆತ್ ನ  32 ಮುಖಂಡರುಗಳನ್ನು ಕಾರ್ಯಕಾರಿ ಸಮಿತಿಗೆ ಆಯ್ಕೆ ಮಾಡಲಾಯಿತು. ಶಾಫಿ, ಹನಫಿ ಪಂಗಡಗಳ 150ಜಮಾಆತ್ ಆಡಳಿತ ಮಂಡಳಿಯವರನ್ನು ಒಗ್ಗೂಡಿಸಿ ಮಹಲ್ ಸಂಗಮ ಕಾರ್ಯಕ್ರಮವನ್ನು ಅ.22 ರಂದು ಸುಂಟಿಕೊಪ್ಪದಲ್ಲಿ ಆಯೋಜಿಸಲು  ಸಭೆ ನಿರ್ಧರಿಸಿತು.

Read More

ಕುಶಾಲನಗರ ಸೆ.3 NEWS DESK : ಕೂಡುಮಂಗಳೂರು ಗ್ರಾಮ ಪಂಚಾಯಿತಿಯ ಬಸವೇಶ್ವರ ಬಡಾವಣೆಯಲ್ಲಿ ಪಂಚಾಯಿತಿ ವತಿಯಿಂದ ಕಾಂಕ್ರೀಟ್ ರಸ್ತೆ ನಿರ್ಮಾಣವಾಗಿದ್ದು, ವಾರ್ಡ್ ಸದಸ್ಯರಾದ ಕೆ.ಬಿ.ಶಂಶುದ್ಧೀನ್  ಕಾಮಗಾರಿ ಪರಿಶೀಲನೆ ನಡೆಸಿದರು. ನಂತರ ಮಾತನಾಡಿದ ಅವರು, 15ನೇ ಹಣಕಾಸಿನಲ್ಲಿ ಕಾಂಕ್ರೀಟ್ ರಸ್ತೆ ಕಾಮಗಾರಿ ನಡೆಸಲಾಗಿದ್ದು, ಮಣಿಮಾಲ ಕುಬೇರರವರ ಮನೆಯಿಂದ ಅಕ್ಕಮ್ಮ ಅವರ ಮನೆವೆರೆಗೆ ಕಾಂಕ್ರೀಟ್ ರಸ್ತೆ ನಿರ್ಮಿಸಲಾಗಿದೆ. ವಾರ್ಡ್ ನಂಬರ್ ಎರಡರಲ್ಲಿ ಸುಂದರನಗರ, ಬಸವೇಶ್ವರ ಬಡಾವಣೆ, ನವಗ್ರಾ ಹಾಗೂ ವಿನಾಯಕ ಬಡಾವಣೆ ಇದೆ. ವಾರ್ಡ್ ವ್ಯಾಪ್ತಿ ದೊಡ್ಡದಾಗಿದ್ದು, ಹಂತಹಂತವಾಗಿ ವಾರ್ಡನ್ನು ಅಭಿವೃದ್ಧಿಪಡಿಸಲಾಗುತ್ತಿದೆ ಎಂದರು. ಈ‌ ಸಂದರ್ಭ ಬಸವೇಶ್ವರ ಬಡಾವಣೆ ನಿವಾಸಿಗಳು ಇದ್ದರು.

Read More

ಮಡಿಕೇರಿ ಸೆ.2 NEWS DESK : ಅಲ್ಪಸಂಖ್ಯಾತರ ನಿರ್ದೇಶನಾಲಯ, ಬೆಂಗಳೂರು ವತಿಯಿಂದ 2024-25 ನೇ ಸಾಲಿನಲ್ಲಿ ಅಲ್ಪಸಂಖ್ಯಾತ ಮುಸ್ಲಿಂ, ಕ್ರಿಶ್ಚಿಯನ್, ಸಿಖ್, ಪಾರ್ಸಿ, ಜೈನ್, ಬೌದ್ಧ ಸಮುದಾಯದ ಕಾನೂನು ಪದವೀಧರರಿಗೆ ನುರಿತ ವಕೀಲರಿಂದ ತರಬೇತಿ ನೀಡಲು ಮಾಸಿಕ ರೂ.5 ಸಾವಿರಗಳ ತರಬೇತಿ ಭತ್ಯೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟೆಂಬರ್, 15 ರವರೆಗೆ ಅವಧಿ ವಿಸ್ತರಿಸಲಾಗಿದೆ. ಹೆಚ್ಚಿನ ಮಾಹಿತಿ ಪಡೆಯ ಬಯಸುವ ಅಭ್ಯರ್ಥಿಗಳು ಕಚೇರಿ ದೂರವಾಣಿ ಸಂಖ್ಯೆ: 08272-225528/220214 ಹಾಗೂ ಜಿಲ್ಲಾ ಅಲ್ಪಸಂಖ್ಯಾತರ ಇಲಾಖಾ ಕಚೇರಿಯನ್ನು ಹಾಗೂ ಇಲಾಖಾ ವೆಬ್‍ಸೈಟ್ www.dom.karnataka.gov.in  ನಿಂದ ಅಲ್ಪಸಂಖ್ಯಾತರ ಎಲ್ಲಾ ಅರ್ಹ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನ ಮತ್ತು ಇತರೆ ಸೌಲಭ್ಯಗಳ ಮಾಹಿತಿಯನ್ನು ಪಡೆದು ಸದುಪಯೋಗ ಪಡಿಸಿಕೊಳ್ಳುವಂತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಆರ್.ಕೃಷ್ಣಮೂರ್ತಿ ತಿಳಿಸಿದ್ದಾರೆ.

Read More