ಲೇಖಕ: admin

ಸುಂಟಿಕೊಪ್ಪ ಆ.19 NEWS DESK : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾನ್‍ಬೈಲ್ ಕಾರ್ಯಕ್ಷೇತ್ರ ಶ್ರೀ ತಲಕಾವೇರಿ ಜ್ಞಾನ ವಿಕಾಸ ಕೇಂದ್ರದ ವಾರ್ಷಿಕೋತ್ಸವವು ಸಂಭ್ರಮದಿಂದ ನಡೆಯಿತು. ಶ್ರೀ ರಾಮ ಮಂದಿರದ ಸಭಾಂಗಣದಲ್ಲಿ ನಡೆದ ವಾರ್ಷಿಕೋತ್ಸವ ಸಮಾರಂಭವನ್ನು ಮಡಿಕೇರಿ ತಾಲ್ಲೂಕು ಯೋಜನಾಧಿಕಾರಿ ಪುರುಷೋತ್ತಮ್ ಉದ್ಘಾಟಿಸಿ ಮಾತನಾಡಿ, ಸಮಾಜಕ್ಕೆ ಮಹಿಳೆಯರ ಕೊಡುಗೆಗಳ ಬಗ್ಗೆ ಅರಿವು ಮೂಡಿಸಿದರಲ್ಲದೆ ಮಹಿಳೆಯರಿಗೆ ಜ್ಞಾನವಿಕಾಸ ಕೇಂದ್ರದ ವತಿಯಿಂದ ಸಾಮಾಜಿಕ ಜಾಲತಾಣಗಳ ಮೂಲಕ ಹಲವಷ್ಟು ತರಬೇತಿಗಳನ್ನು ನೀಡಲಾಗುತ್ತಿದೆ. ಅದರ ಸದುಪಯೋಗವನ್ನು ಪಡೆದುಕೊಳ್ಳುವುದರಿಂದ ಜ್ಞಾನವನ್ನು ವೃದ್ಧಿಸಿಕೊಳ್ಳಬಹುದು. ಅಲ್ಲದೇ ಪ್ರತಿ ತಿಂಗಳು ಇತರೆ ವಿಚಾರಗಳ ಕುರಿತು ತರಬೇತಿಯನ್ನು ನೀಡುವುದ ಮೂಲಕ ಪ್ರತಿ ಸದಸ್ಯರಿಗೂ ಸಮಾಜದ ಮುಖ್ಯವಾಹಿನಿಗೆ ತರುವ ಕಾರ್ಯವನ್ನು ನಡೆಸಲಾಗುತ್ತಿದೆ ಎಂದು ಪುರುಷೋತ್ತಮ್ ಹೇಳಿದರು. ದಿನದ ಅಂಗವಾಗಿ ತಲಕಾವೇರಿ ಜ್ಞಾನವಿಕಾಸ ಸದಸ್ಯರಿಗೆ ಸಾಂಸ್ಕೃತಿಕ ಕಾರ್ಯಕ್ರಮ, ಆಟೋಟ ಸ್ಪರ್ಧೆಯನ್ನು ಏರ್ಪಡಿಸಲಾಗಿದ್ದು, ವಿಜೇತರಿಗೆ ಸಮನ್ವಯ ಅಧಿಕಾರಿ ಮಾಲಿನಿ, ಒಕ್ಕೂಟದ ಅಧ್ಯಕ್ಷರುಗಳಾದ ಖತ್ತೀಜ ಹಾಗೂ ಭವ್ಯ ಬಹುಮಾನಗಳನ್ನು ವಿತರಿಸಿದರು. ಸಮಾರಂಭದಲ್ಲಿ ಸಂಘದ ಸದಸ್ಯೆ ದೇವಕ್ಕಿ,ಭವ್ಯ ಹಾಜರಿದ್ದರು. ಸೇವಾ…

Read More

ಮಡಿಕೇರಿ ಆ.19 NEWS DESK : ದಿವಂಗತ ಲೆಫ್ಟಿನೆಂಟ್ ಜನರಲ್ ಕೋದಂಡ ಸೋಮಣ್ಣ ಒಮ್ಮೆ ಕಾಲೇಜು ವಿದ್ಯಾರ್ಥಿಗಳಿಗೆ ಸೇನೆಗೆ ಸೇರಲು ಕರೆ ಕೊಟ್ಟರು. ಸೇನೆಗೆ ಸೇರಿ ದೇಶಭಕ್ತಿ, ಶಿಸ್ತು ಹಾಗೂ ಹಾಕಿ ಆಡಿ ಬಹಳಷ್ಟು ಜನರು ತಮ್ಮ ಜೀವನವನ್ನು ರೂಪಿಸಿಕೊಂಡಿದ್ದಾರೆ ಎಂದು ನೋಡಿದರು. ಅಂತಹವರಲ್ಲಿ ಕರಿನೆರವಂಡ ದರಾ ತಮ್ಮಯ್ಯ ಕೂಡ ಒಬ್ಬರು. ಕರಿನೆರವಂಡ ಗಣಪತಿ ಹಾಗೂ ಪೊನ್ನವ್ವ (ತಾಮನೆ ಮಚ್ಚೆಟ್ಟೀರ) ದಂಪತಿಯರ ಪುತ್ರನಾಗಿ ತಮ್ಮಯ್ಯನವರು ಜುಲೈ 1, 1955 ರಂದು ವಿರಾಜಪೇಟೆಯ ಪಾಲಂಗಾಲದಲ್ಲಿ ಜನಿಸಿದರು. ವಿದ್ಯಾಭ್ಯಾಸ ::  ತಮ್ಮಯ್ಯನವರು ತಮ್ಮ ಪ್ರಾಥಮಿಕ ಶಿಕ್ಷಣವನ್ನು ಪಾಲಂಗಾಲ ಹಾಗೂ ಕರಡದಲ್ಲಿ ಮುಗಿಸಿ, ಪ್ರೌಢಶಿಕ್ಷಣವನ್ನು ಚೇಯಂಡಾಣೆಯಲ್ಲಿ ಪೂರ್ಣಗೊಳಿಸಿದರು. ಬಾಲ್ಯದಲ್ಲೇ ಹಾಕಿಯ ಬಗ್ಗೆ ಉತ್ಸಾಹವಿದ್ದ ಇವರು ಪ್ರೌಢಶಾಲೆಯಲ್ಲಿ ಪ್ರಥಮ ಬಾರಿಗೆ ನಾಪೋಕ್ಲಿನಲ್ಲಿ ಶಾಲಾ ಮಟ್ಟದಲ್ಲಿ ಪಂದ್ಯಾವಳಿ ಆಡುವ ಮೂಲಕ ತಮ್ಮ ಹಾಕಿ ಪಯಣಕ್ಕೆ ಮುನ್ನುಡಿ ಬರೆದರು. ಪಾಲಂಗಾಲದಿಂದ ಜಬ್ಬಲ್ ಪುರದವರೆಗೆ ಪಯಣ ::  1972ರಲ್ಲಿ ಮಧ್ಯಪ್ರದೇಶದ ಜಬ್ಬಲ್ ಪುರದಲ್ಲಿ ಸೈನ್ಯದ ಬಾಯ್ಸ್ ಮಿಲಿಟರಿಗೆ ಸೇರಿದರು.1974ರಲ್ಲಿ ನೆಹರು ಜೂನಿಯರ್…

Read More

ಬೆಂಗಳೂರು ಆ.19 NEWS DESK : ಬೆಂಗಳೂರಿನ ಚಿತ್ರಕಲಾ ಪರಿಷತ್ ನಲ್ಲಿ ಫೋಟೋ ಜರ್ನಲಿಸ್ಟ್ ಸಂಘ ಆಯೋಜಿಸಿದ್ದ ಫೋಟೋ ಎಕ್ಸಿಬಿಷನ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು  ಉದ್ಘಾಟಿಸಿದರು.

Read More

ಮಡಿಕೇರಿ ಆ.19 NEWS DESK : ಮೂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ತನಿಖೆಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮವನ್ನು ಖಂಡಿಸಿ ಹಾಗೂ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳೆರಡು ವಾಮಮಾರ್ಗದ ಮೂಲಕ ರಾಜಕಾರಣ ಮಾಡುತ್ತಿವೆ ಎಂದು ಆರೋಪಿಸಿ ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿ ಮಡಿಕೇರಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಿತು. ನಗರದ ಮುಖ್ಯ ಬೀದಿಗಳಲ್ಲಿ ಮೆರವಣಿಗೆ ನಡೆಸಿದ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಜನರಲ್ ತಿವ್ಮ್ಮಯ್ಯ ವೃತ್ತದಲ್ಲಿ ರಾಜ್ಯಪಾಲರು, ಕೇಂದ್ರ ಸರ್ಕಾರ, ಬಿಜೆಪಿ ಮತ್ತು ಜೆಡಿಎಸ್ ವಿರುದ್ಧ ಘೋಷಣೆಗಳನ್ನು ಕೂಗಿದರು. ಹಿಂದುಳಿದ ವರ್ಗಕ್ಕೆ ಸೇರಿದ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಅಧಿಕಾರದಲ್ಲಿ ಮುಂದುವರಿಯುವುದನ್ನು ಸಹಿಸದ ವಿರೋಧ ಪಕ್ಷಗಳು ರಾಜಕೀಯ ಷಡ್ಯಂತ್ರ ನಡೆಸುತ್ತಿವೆ. ಜನಾದೇಶದೊಂದಿಗೆ ಬಹುಮತ ಪಡೆದಿರುವ ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸಲು ಬಿಜೆಪಿ ಮಂದಿ ಮೊದಲಿನಿಂದಲೂ ಹವಣಿಸುತ್ತಿದ್ದಾರೆ. ರಾಜ್ಯಪಾಲರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ತನಿಖೆಗೆ ಅನುಮತಿ ನೀಡಿರುವ ಕ್ರಮ ಅಸಂವಿಧಾನಿಕ ಮತ್ತು ಇದು ಬಿಜೆಪಿಯ ಷಡ್ಯಂತ್ರದ ಒಂದು ಭಾಗ ಎಂದು ಎಂದು…

Read More

ಮಡಿಕೇರಿ ಆ.19 NEWS DESK : ಮಡಿಕೇರಿ ದಸರಾ ಸಾಂಸ್ಕೃತಿಕ ಸಮಿತಿ ವತಿಯಿಂದ ಅ.4 ರಿಂದ 12 ರವರೆಗೆ ನಗರದ ಗಾಂಧಿ ಮೈದಾವದಲ್ಲಿ ಆಯೋಜಿತ ದಸರಾ ಸಾಂಸ್ಕೃತಿಕ ಕಾಯ೯ಕ್ರಮಗಳಿಗೆ ಕಲಾವಿದರು, ಕಲಾತಂಡಗಳಿಂದ ಅಜಿ೯ ಆಹ್ವಾನಿಸಲಾಗಿದೆ. ಕಲಾವಿದರು, ಕಲಾತಂಡಗಳು ಸೆಪ್ಂಬರ್ 2 ರ ಒಳಗಾಗಿ madikeridasara@gmail,com ಗೆ ಅಜಿ೯,, ಮಾಹಿತಿಯನ್ನು ಮೇಲ್ ಮಾಡಬೇಕು. ನಿಗಧಿತ ದಿನಾಂಕದ ನಂತರ ಬಂದ ಅಜಿ೯ಗಳನ್ನು ಪರಿಶೀಲಿಸಲಾಗುವುದಿಲ್ಲ ಎಂದು ಮಡಿಕೇರಿ ದಸರಾ ಸಾಂಸ್ಕೖತಿಕ ಸಮಿತಿ ಅಧ್ಯಕ್ಷ ಅನಿಲ್ ಹೆಚ್.ಟಿ.ತಿಳಿಸಿದ್ದಾರೆ. ಮಹಿಳಾ ದಸರಾ, ಮಕ್ಕಳ ದಸರಾ, ಜಾನಪದ ದಸರಾಗಳಿಗೆ ಕಾಯ೯ಕ್ರಮ ನೀಡುವವರು ಅಜಿ೯ಯಲ್ಲಿ ಈ ಬಗ್ಗೆ ನಮೂದಿಸಬೇಕು. ಒಂದು ಕಲಾತಂಡಕ್ಕೆ ಒಂದು ಪ್ರದಶ೯ನಕ್ಕೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಸೋಲೋ ನೖತ್ಯ,  ಸೋಲೋ ಹಾಡಿಗೆ ಅವಕಾಶವಿಲ್ಲ, ನೃತ್ಯತಂಡದಲ್ಲಿ ಕನಿಷ್ಟ 4 ಮಂದಿ ಇರಬೇಕು, ಕಲಾವಿದರ ಆಯ್ಕೆಯ ಅಂತಿಮ ತೀಮಾ೯ನ ದಸರಾ ಸಾಂಸ್ಕೃತಿಕ ಸಮಿತಿಯದ್ದಾಗಿರುತ್ತದೆ. ಹೆಚ್ಚಿನ ಮಾಹಿತಿಗೆ ಸಂಪಕ೯ ಸಂಖ್ಯೆ  ತೆನ್ನೀರಾ ಮೈನಾ – 94491 56215, ಕುಡೆಕಲ್ ಸಂತೋಷ್ – 9972538584 ಸಂಪರ್ಕಿಸಬಹುದಾಗಿದೆ.

Read More

ಮಡಿಕೇರಿ ಆ.19 NEWS DESK : ಮಡಿಕೇರಿ ರೋಟರಿ ಮಿಸ್ಟಿ ಹಿಲ್ಸ್ ವತಿಯಿಂದ ವಿಶ್ವಛಾಯಾಗ್ರಹಣ ದಿನಾಚರಣೆ ಅಂಗವಾಗಿ ವನ್ಯಜೀವಿ ಛಾಯಾ ಪ್ರದಶ೯ನ ಆಯೋಜಿಸಲಾಗಿದೆ. ಮಡಿಕೇರಿಯ ರೋಟರಿ ಸಭಾಂಗಣದಲ್ಲಿ ಆ.20 ರಂದು ಸಂಜೆ 6.45 ಗಂಟೆಗೆ ಆಯೋಜಿತ ಕಾಯ೯ಕ್ರಮದಲ್ಲಿ ಹನಗೋಡು ಗ್ರಾಮದ ವನ್ಯಜೀವಿ ಛಾಯಾಗ್ರಾಹಕಿ ಛಾಯಾ ಸುನೀಲ್ ಅವರು ತೆಗೆದಿರುವ ವನ್ಯಜೀವಿ ಛಾಯಾಚಿತ್ರಗಳ ಪ್ರದಶ೯ನ ಇರುತ್ತದೆ. ರೋಟರಿ ಮಿಸ್ಟಿ ಹಿಲ್ಸ್ ಅಧ್ಯಕ್ಷ ಪೊನ್ನಚ್ಚನ ಮಧುಸೂದನ್, ಕಾಯ೯ದಶಿ೯ ಕಟ್ಟೆಮನೆ ಸೋನಜಿತ್, ಕ್ಲಬ್ ಸವೀ೯ಸ್ ನಿದೇ೯ಶಕಿ ಗಾನಾ ಪ್ರಶಾಂತ್, ಸಹಾಯಕ ಗವನ೯ರ್ ದೇವಣಿರ ಕಿರಣ್, ವಲಯ ಸೇನಾನಿ ಅನಿತಾಪೂವಯ್ಯ ಪಾಲ್ಗೊಳ್ಳಲಿದ್ದಾರೆ ಎಂದು ಕಾಯ೯ಕ್ರಮ ಸಂಚಾಲಕ ಅನಿಲ್ ಹೆಚ್.ಟಿ. ತಿಳಿಸಿದ್ದಾರೆ. ಸಾವ೯ಜನಿಕರೂ ಪಾಲ್ಗೊಂಡು ವನ್ಯಜೀವಿಯ ಅಪೂವ೯ ಛಾಯಾಚಿತ್ರಗಳನ್ನು ವೀಕ್ಷಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Read More

ಮಡಿಕೇರಿ ಆ.19 NEWS DESK : ಸರ್ಕಾರಿ ಬಸ್ ಸಂಪರ್ಕವೇ ಕಾಣದ ಗಾಳಿಬೀಡು ಗ್ರಾ.ಪಂ ವ್ಯಾಪ್ತಿಯ ಮುಟ್ಲು ಗ್ರಾಮಕ್ಕೆ ಬಸ್ ಬಂದಿದ್ದು, ಗ್ರಾಮಸ್ಥರು ಸಂಭ್ರಮದಿಂದ ಬಸ್​ಗೆ ಪೂಜೆ ಸಲ್ಲಿಸಿ ಬರಮಾಡಿಕೊಂಡಿದ್ದಾರೆ.  ಖಾಸಗಿ ಬಸ್ ಸಂಚರಿಸುತ್ತಿದ್ದ ಗ್ರಾಮದಲ್ಲಿ ಕಳೆದ ಕೆಲವು ವರ್ಷಗಳಿಂದ ಬಸ್ ಸಂಚಾರ ಸ್ಥಗಿತಗೊಂಡಿದ್ದು, ಗ್ರಾಮಕ್ಕೆ ಬಸ್ ಸಂಪರ್ಕ ಇಲ್ಲದೇ ಗ್ರಾಮಸ್ಥರು ನಿತ್ಯ ಪರದಾಡುವಂತಾಗಿತ್ತು. ವಯೋವೃದ್ದರೇ ಅಧಿಕವಿರುವ ಗ್ರಾಮಕ್ಕೆ ಸರ್ಕಾರಿ ಬಸ್ ಸೇವೆಗಾಗಿ ಗ್ರಾಮಸ್ಥರು ಹತ್ತಾರು ವರ್ಷಗಳಿಂದ ಕಛೇರಿಗಳಿಗೆ ಅಲೆದು ಬಸವಳಿದಿದ್ದರು. ಕೊಡಗು ತುರ್ತು ಸ್ಪಂದನ ಎಂಬ ಹೆಸರಿನ ವಾಟ್ಸಾಪ್ ಬಳಗದಲ್ಲಿ ತಮ್ಮ ನೋವು ತೋಡಿಕೊಂಡಾಗ, ಗುಂಪಿನ ಅಡ್ಮಿನ್  ಚಾಮೆರ ದಿನೇಶ್ ಬೆಳ್ಯಪ್ಪ, ಮಡಿಕೇರಿ ಶಾಸಕರ ಗಮನಕ್ಕೆ ತಂದು ಸಮಸ್ಯೆ ಬಗೆಹರಿಸುವಂತೆ ಕೋರಿದರು. ಸತತ ಪ್ರಯತ್ನದ ನಂತರ ಶಾಸಕರ ಸೂಚನೆಯ ಮೇರೆಗೆ ಸರ್ಕಾರಿ ಬಸ್ ಸೇವೆ ಪ್ರಾರಂಭವಾಗಿದ್ದು, ಗ್ರಾಮಸ್ಥರು ಪೂಜೆ ಸಲ್ಲಿಸಿ ಬರಮಾಡಿಕೊಂಡರು. ದೇಶಕ್ಕೆ ಸ್ವಾತಂತ್ರ್ಯ ಬಂದು 78 ವರ್ಷಗಳೇ ಕಳೆದರೂ, ಮುಟ್ಲು ಗ್ರಾಮಕ್ಕೆ ಇದೀಗ ಸ್ವಾತಂತ್ರ್ಯ ಬಂದಷ್ಟು ಖುಷಿಯಾಗಿದೆ ಎಂದು…

Read More

ನಾಪೋಕ್ಲು ಆ.19 NEWS DESK : ಶಿಕ್ಷಣ ಇಲಾಖೆಯ ವತಿಯಿಂದ ನಾಪೋಕ್ಲು ವಲಯ ಮಟ್ಟದ ಫ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗದ “ದ ರೋವ್’ (THE ROVE) ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯು ನಾಪೋಕ್ಲುವಿನ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯಿತು.   ಪ್ರಾಥಮಿಕ ಬಾಲಕಿಯರ ವಿಭಾಗದಲ್ಲಿ ಭಾಗಮಂಡಲ ಜ್ಞಾನೋದಯ ಶಾಲೆ ಫ್ರಥಮ, ನಾಪೋಕ್ಲು ಸೇಕ್ರೆಡ್ ಹಾರ್ಟ್ಸ್ ಶಾಲೆ ದ್ವಿತೀಯ, ಫ್ರಾಥಮಿಕ ಬಾಲಕರ ವಿಭಾಗದಲ್ಲಿ ನಾಪೋಕ್ಲು ಎಕ್ಸೆಲ್ ಶಾಲೆ ಫ್ರಥಮ, ಭಾಗಮಂಡಲ ಜ್ಞಾನೋದಯ ಶಾಲೆ ದ್ವಿತೀಯ.  ಫ್ರೌಢ ಶಾಲಾ ಬಾಲಕಿಯ ವಿಭಾಗದಲ್ಲಿ ರಾಮ ಟ್ರಸ್ಟ್ ಶಾಲೆ ಫ್ರಥಮ, ಸೇಕ್ರೆಡ್ ಹಾರ್ಟ್ಸ್ ದ್ವಿತೀಯ, ಬಾಲಕರ ವಿಭಾಗದಲ್ಲಿ ರಾಮ ಟ್ರಸ್ಟ್ ಫ್ರಥಮ, ಆಕ್ಸ್ ಪರ್ಡ್ ದ್ವಿತೀಯ ಸ್ಥಾನ ಪಡೆದುಕೊಂಡಿತು. ‘ರೋವ್’ ಸಂಸ್ಥೆಯ ಮಾಲೀಕರಾದ ಜಯ ದೇವಯ್ಯ ಉಚಿತವಾಗಿ ಪಂದ್ಯಾವಳಿ ನಡೆಸಲು ಅವಕಾಶ ನೀಡಿದ್ದಲ್ಲದೆ ಪಂದ್ಯಾವಳಿಯ ರನ್ನರ್ಸ್ ಹಾಗೂ ವಿನ್ನರ್ಸ್ ಗಳಿಗೆ ಟ್ರೋಫಿಗಳನ್ನು ನೀಡಿ ಪ್ರೋತ್ಸಾಹಿಸಿದರು.   ಪಂದ್ಯಾವಳಿಯ ಸಂಚಾಲಕರಾಗಿ ಸೇಕ್ರೆಡ್ ಹಾರ್ಟ್ಸ್ ಶಾಲೆ ಸುನಿಲ್ , ಮಾರ್ಗದರ್ಶಕರಾಗಿ ಖ್ಯಾತ ಬ್ಯಾಡ್ಮಿಂಟನ್ ಕೋಚ್ ರಘುರಾಜ್…

Read More

ನಾಪೋಕ್ಲು ಆ.19 NEWS DESK : ಭಾರತೀಯ ಅರಣ್ಯ ಸೇವೆ (ಐ.ಎಫ್.ಎಸ್) ಅಧಿಕಾರಿ ಮಡಿಕೇರಿ ತಾಲೂಕು ನಾಪೋಕ್ಲುವಿನ ಪಿ.ಎ.ಸೀಮಾ ನಾಗರಹೊಳೆ ಹುಲಿ ಸಂರಕ್ಷಿತಾರಣ್ಯದ ನಿರ್ದೇಶಕಿಯಾಗಿ ನೇಮಕಗೊಂಡಿದ್ದಾರೆ. ಸೀಮಾ ಅವರು ಈ ಹಿಂದೆ ಹುಣಸೂರು ವಿಭಾಗದ ಡಿ.ಸಿ.ಎಫ್ ಆಗಿ ಸೇವೆ ಸಲಿಸಿದ್ದರು. 2017ರ ಗುಂಪಿನ ಇವರು ಮೈಸೂರು, ಮಂಡ್ಯ ಹುಣಸೂರು, ಮಡಿಕೇರಿಯಲ್ಲಿ ಡಿ.ಸಿ.ಎಫ್ ಆಗಿ ಸೇವೆ ಸಲ್ಲಿಸಿದ್ದರು. ಕಳೆದ ಎರಡು ವರ್ಷಗಳ ಹಿಂದೆ ಆನೆಗಳ ಕಾರ್ಯಪಡೆಯ ಹೆಚ್ಚುವರಿ ಡಿ.ಸಿ.ಎಫ್ ಆಗಿ ಕಾರ್ಯನಿರ್ವಹಿಸಿ ಹುಣಸೂರು ಹಾಗೂ ಕೆ.ಆರ್ ನಗರದ ವಿಭಾಗದಲ್ಲಿ ಮಾನವ ಹಾಗೂ ಆನೆಗಳ ನಡುವೆ ಸಂಘರ್ಷವನ್ನು ತಡೆಗಟ್ಟುವಲ್ಲಿ ಯಶಸ್ವಿಯಾಗಿ ಪ್ರಶಂಸೆಗೆ ಒಳಗಾಗಿದ್ದರು. ಇವರು ಮೂಲತ: ನಾಪೋಕ್ಲು ಗ್ರಾಮದ ನಿವಾಸಿ ಪಾಡ್ಯಮಂಡ ಆನಂದ (ಸಾಬು) ಕಮಲ ದಂಪತಿಗಳ ಪುತ್ರಿ. ನಾಪೋಕ್ಲು ಶ್ರೀ ರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣವನ್ನು, ಪೊನ್ನಂಪೇಟೆ ಅರಣ್ಯ ವಿಶ್ವವಿದ್ಯಾನಿಲಯದಲ್ಲಿ ಉನ್ನತ ಶಿಕ್ಷಣವನ್ನು ಪೂರೈಸಿದ್ದು, ಮತ್ತೂರು ಗ್ರಾಮದ ಪುತ್ತಾಮನೆ ಡಾಕ್ಟರ್ ಅಶೋಕ್, ಶಾಂತಿ ಅವರ ಸೊಸೆ,…

Read More

ಮಡಿಕೇರಿ ಆ.18 NEWS DESK : ಕುಶಾಲನಗರ ಪೊಲೀಸ್ ಮತ್ತು ಕಂದಾಯ ಇಲಾಖೆ ನೇತೃತ್ವದಲ್ಲಿ ನಡೆದ ಸ್ವಾತಂತ್ರ್ಯೋತ್ಸವ ಕಪ್ 2024 ಕ್ರಿಕೆಟ್ ಪಂದ್ಯಾವಳಿಯಲ್ಲಿ ಕುಶಾಲನಗರ ತಾಲ್ಲೂಕು ಶಿಕ್ಷಣ ಇಲಾಖೆ ತಂಡ ಟ್ರೋಫಿಯನ್ನು ಗೆದ್ದುಕೊಂಡಿದೆ. ದ್ವಿತೀಯ ಟ್ರೋಪಿಯನ್ನು ಕುಶಾಲನಗರ ಡಿವೈಎಸ್‍ಪಿ ನೇತೃತ್ವದ ಪೊಲೀಸ್ ಇಲಾಖೆ ತಂಡ ಗಳಿಸಿದೆ. ಕುಶಾಲನಗರ ಪೊಲೀಸ್, ಶಿಕ್ಷಣ, ಪುರಸಭೆ, ವಕೀಲರ ತಂಡ, ಕಂದಾಯ ಇಲಾಖೆ ಮತ್ತು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಸೇರಿದಂತೆ ಒಟ್ಟು ಆರು ತಂಡಗಳು ಕುಶಾಲನಗರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮೈದಾನದಲ್ಲಿ ನಡೆದ ಕ್ರಿಕೆಟ್ ಪಂದ್ಯಾವಳಿಯಲ್ಲಿ ಪಾಲ್ಗೊಂಡವು. ನಂತರ ನಡೆದ ಸಮಾರೋಪ ಸಮಾರಂಭದಲ್ಲಿ ಸೋಮವಾರಪೇಟೆ ಉಪವಿಭಾಗದ ಉಪ ಪೊಲೀಸ್ ಅಧೀಕ್ಷಕ ಆರ್.ವಿ.ಗಂಗಾಧರಪ್ಪ ಮಾತನಾಡಿ, ಪ್ರತಿಯೊಬ್ಬರೂ ಕ್ರೀಡೆಗಳಲ್ಲಿ ಪಾಲ್ಗೊಳ್ಳುವ ಮೂಲಕ ಕ್ರೀಡಾಸ್ಫೂರ್ತಿ ಪ್ರದರ್ಶಿಸಬೇಕು. ಪಂದ್ಯಾಟದಲ್ಲಿ ಸೋಲು ಗೆಲುವು ಮುಖ್ಯವಲ್ಲ ಪಾಲ್ಗೊಳ್ಳುವುದು ಮುಖ್ಯ ಎಂದು ಹೇಳಿದರು. ಕಂದಾಯ ಇಲಾಖೆಯ ತಂಡದ ನಾಯಕರು ಹಾಗೂ ಕಂದಾಯ ಪರಿವೀಕ್ಷಕ ಹೆಚ್.ಎಸ್.ಸಂತೋಷ್ ಅವರು ಮಾತನಾಡಿ ಕೇವಲ ಎರಡು ದಿನಗಳ ಅಂತರದಲ್ಲಿ ಆರು…

Read More