ಮಡಿಕೇರಿ ಸೆ.3 NEWS DESK : ಪ್ರಸಕ್ತ (2024-25) ಶೈಕ್ಷಣಿಕ ವರ್ಷದಲ್ಲಿ ಉಡುಪಿ ಜಿಲ್ಲೆಯ ಬ್ರಹ್ಮಾವರದ ಕೃಷಿ ಡಿಪ್ಲೊಮಾ ಕೋರ್ಸ್ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 14 ರ ವರೆಗೆ ಕಾಲಾವಕಾಶ ಕಲ್ಪಿಸಲಾಗಿದೆ. ಅರ್ಜಿಯನ್ನು www.uahs.edu.in ವೆಬ್ಸೈಟ್ನಲ್ಲಿ ಎಲ್ಲಾ ಅಧಿಸೂಚನೆಗಳು ಶೀರ್ಷಿಕೆ ಅಡಿಯಲ್ಲಿ ಡೌನ್ಲೋಡ್ ಮಾಡಿ ಭರ್ತಿ ಮಾಡಿದ ಅರ್ಜಿಗಳನ್ನು ಸೆಪ್ಟೆಂಬರ್ 14 ರೊಳಗೆ ಸಲ್ಲಿಸಬಹುದಾಗಿದೆ. ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ತೇರ್ಗಡೆಯಾದ, ಕನಿಷ್ಠ ಶೇ.45 (ಕನಿಷ್ಠ ಶೇ.40 ಪ.ಜಾ ಮತ್ತು ಪ.ಪಂ/ಪ್ರವರ್ಗ-1) ಅಂಕಗಳೊಂದಿಗೆ ಉತ್ತಿರ್ಣರಾದ, 19 ವರ್ಷ ವಯಸ್ಸು ಮೀರದ ಆಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ರೈತರ ಹಾಗೂ ಕೃಷಿ ಕಾರ್ಮಿಕರ ಮಕ್ಕಳಿಗೆ ಶೇ.50 ರಷ್ಟು ಮೀಸಲಾತಿ ಇರುತ್ತದೆ. ಈ ಎರಡು ವರ್ಷದ ಡಿಪ್ಲೊಮಾ ಕೋರ್ಸ್ನಲ್ಲಿ ಕೃಷಿ, ತೋಟಗಾರಿಕೆ, ಪಶುಸಂಗೋಪನೆ, ಮೀನುಗಾರಿಕೆ, ಹೈನುವಿಜ್ಞಾನ, ರೇಷ್ಮೆ ಕೃಷಿ, ಜೇನುಕೃಷಿ ಹೀಗೆ ಕೃಷಿಗೆ ಸಂಬಂಧಿಸಿದ ಹಲವು ವಿಷಯಗಳ ಬಗ್ಗೆ ನುರಿತ ವಿಜ್ಞಾನಿಗಳಿಂದ ಭೋಧನೆ ಇರುತ್ತದೆ. ಹಾಗೆಯೇ ಕೃಷಿ ರಂಗದ ಪ್ರಾಯೋಗಿಕ ಪರಿಚಯ/ ಅನುಭವ ಆಧಾರಿತ…
ಲೇಖಕ: admin
ಮಡಿಕೇರಿ ಸೆ.3 NEWS DESK : ಪೋಷಣ್ ಮಸಾಚರಣೆ ಅಂಗವಾಗಿ ಅಂಗನವಾಡಿ ಫಲಾನುಭವಿಗಗಳಾದ ಹದಿಹರೆಯದ ಹೆಣ್ಣು ಮಕ್ಕಳಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಿತು. ಗಾಂಧಿನಗರ, ಶಾಸ್ತ್ರಿನಗರ, ಬಾಡಗ-1, ಬಾಡಗ-2, ಕೋಡಂಬೂರು, ಕಾಂತೂರು, ಕಿಗ್ಗಾಲು, ಐಕೊಳ 1, ಐಕೊಳ 2, ಐಕೊಳ 3 ಅಂಗನವಾಡಿಯಲ್ಲಿ ಆರೋಗ್ಯ ತಪಾಸಣೆ ಹಾಗೂ ರಕ್ತಹೀನತೆ ಪರೀಕ್ಷೆ ನಡೆಸಲಾಯಿತು. ಈ ಸಂದರ್ಭ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಫಲಾನುಭವಿಗಳು, ಮುರ್ನಾಡು ಪ್ರಾಥಮಿಕ ಆರೋಗ್ಯ ಕೇಂದ್ರದ ಡಾ ವಿಜಯಕುಮಾರ್, ಹಿರಿಯ ಆರೋಗ್ಯ ಮಹಿಳಾ ಕಾರ್ಯಕರ್ತೆ ಹೇಮಲತಾ, ಆರೋಗ್ಯ ಇಲಾಖೆಯ ಕಾಂಚನ, ಮೇಪಾಡಂಡ ಸವಿತಾ ಕೀರ್ತನ್, ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಶಿಶು ಅಭಿವೃದ್ಧಿ ಯೋಜನೆ ಮಡಿಕೇರಿ ಹಾಜರಿದ್ದರು.
ಸೋಮವಾರಪೇಟೆ ಸೆ.3 NEWS DESK : ವಿಶ್ವದಲ್ಲಿಯೇ ಶ್ರೇಷ್ಠ ಎನಿಸಿಕೊಂಡಿರುವ ಹಿಂದೂ ಸಂಸ್ಕಾರ ಪದ್ಧತಿಯನ್ನು ಹಿಂದುಗಳಾದ ನಾವುಗಳೇ ಅಗೌರವಿಸುತ್ತಿರುವುದು ನಮ್ಮ ದುರಂತ ಎಂದು ವಿರಕ್ತ ಮಠದ ಮಠಾಧೀಶರಾದ ಶ್ರೀ ನಿಶ್ಚಲ ನಿರಂಜನ ದೇಶಿಕೇಂದ್ರ ಮಹಾಸ್ವಾಮಿಗಳು ವಿಷಾದ ವ್ಯಕ್ತಪಡಿಸಿದರು. ಸೋಮವಾರಪೇಟೆ ಕೊಡವ ಸಮಾಜದಲ್ಲಿ ವಿಶ್ವ ಹಿಂದೂ ಪರಿಷದ್ ಸೋಮವಾರಪೇಟೆ ಪ್ರಖಂಡದ ವತಿಯಿಂದ ನಡೆದ ವಿಶ್ವ ಹಿಂದೂ ಪರಿಷದ್ನ ಸ್ಥಾಪನಾ ದಿನ ಹಾಗೂ ಷಷ್ಟಿ ಪೂರ್ತಿ ಕಾರ್ಯಕ್ರಮದಲ್ಲಿ ಅವರು ಆಶೀರ್ವಚನ ನೀಡಿದರು. ನಮ್ಮ ಧರ್ಮ ಮತ್ತು ಆಚರಣೆಗಳನ್ನು ನಮ್ಮವರೇ ತೆಗಳುವುದರಿಂದ ನಮ್ಮ ದೇಶದಲ್ಲಿಯೇ ಹಿಂದೂ ಧರ್ಮಕ್ಕೆ ಧಕ್ಕೆ ಬರುತ್ತಿದೆ. ಇಂತಹ ಕಾರ್ಯಗಳು ಮುಂದುವರಿಯುತ್ತಾ ಹೋದರೆ ಹಿಂದುತ್ವದ ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡುವ ಅನಿವಾರ್ಯತೆ ಬರಲಿದೆ. ಈ ವರೆಗೂ ರಾಷ್ಟ್ರೀಯ ಸ್ವಯಂ ಸೇವಕ ಸಂಘ, ವಿ.ಹಿಂ.ಪ. ಮಠ ಮಾನ್ಯಗಳು ಹಿಂದೂ ಧರ್ಮವನ್ನು ರಕ್ಷಿಸುತ್ತಾ ಬರುತ್ತಿದೆ. ಮುಂದೆ ನಮ್ಮಲ್ಲಿನ ನ್ಯೂನತೆಗಳನ್ನು ಸರಿಪಡಿಸಿಕೊಂಡು ಎಲ್ಲಾರೂ ಸಂಘಿಗಳಾಗುವ ಮೂಲಕ ಹಿಂದೂ ಧರ್ಮ ಹಾಗೂ ಸಂಸ್ಕಾರವನ್ನು ಗೌರವಿಸುವಂತಾಗಬೇಕೆಂದರು. ವಿ.ಹಿಂ.ಪ. ನ ಜಿಲ್ಲಾ ಬೌದ್ಧಿಕ್…
ಮಡಿಕೇರಿ ಸೆ.3 NEWS DESK : ಮಡಿಕೇರಿಯ ಕೊಡಗು ವಿದ್ಯಾಲಯದ ಟೈನಿ ಟಾಟ್ಸ್ ವಿದ್ಯಾಥಿ೯ಗಳು ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು ಸಂಭ್ರಮದಿಂದ ಆಚರಿಸಿದರು. ಮಡಿಕೇರಿಯ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ.ಕೋರನ ಸರಸ್ವತಿ ಪ್ರಕಾಶ್ ಕಾರ್ಯಕ್ರಮದ ಮಹತ್ವವನ್ನು ಪುಟಾಣಿ ಮಕ್ಕಳಿಗೆ ತಿಳಿಸಿದರು. ಪುಟಾಣಿ ಮಕ್ಕಳಿಂದ ನಡೆದ ನೃತ್ಯ ಪ್ರದರ್ಶನವು ನೆರೆದಿದ್ದ ಪೋಷಕರು ಮತ್ತು ಪ್ರೇಕ್ಷಕರ ಮನಸೂರೆಗೊಂಡಿತ್ತು. ಕೊಡಗು ವಿದ್ಯಾಲಯದ ಪ್ರಾಂಶುಪಾಲಾರದ ಕೆ.ಎಸ್.ಸುಮಿತ್ರ ಆಡಳಿತ ನಿರ್ವಹಣಾಧಿಕಾರಿ ಪಿ.ರವಿ, ಪೋಷಕರು ಮತ್ತು ಶಿಕ್ಷಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಮಡಿಕೇರಿ ಸೆ.3 NEWS DESK : ಬ್ರಾಹ್ಮಣ ವಿದ್ಯಾಭಿವೃದ್ಧಿ ನಿಧಿಯ ನೂತನ ಅಧ್ಯಕ್ಷರಾಗಿ ರಾಮಚಂದ್ರ ಮೂಗೂರ್ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ. ನಗರದ ಲಕ್ಷ್ಮೀ ನರಸಿಂಹ ಕಲ್ಯಾಣ ಮಂಟಪದಲ್ಲಿ ನಡೆದ ನಿಧಿಯ ವಾಷಿ೯ಕ ಮಹಾಸಭೆಯಲ್ಲಿ ನೂತನ ಆಡಳಿತ ಮಂಡಳಿಗೆ ನಿದೇ೯ಶಕರ ಆಯ್ಕೆ ನಡೆಯಿತು. ನಿಧಿಯ ಉಪಾಧ್ಯಕ್ಷರಾಗಿ ರಾಜಶೇಖರ್, ಕಾರ್ಯದರ್ಶಿಯಾಗಿ ಬಿ.ಕೆ.ಜಗದೀಶ್, ಸಹಕಾರ್ಯದರ್ಶಿಯಾಗಿ ಎ.ವಿ.ಮಂಜುನಾಥ್, ಖಜಾಂಚಿಯಾಗಿ ಜಿ.ಆರ್.ರವಿಶಂಕರ್ ಆಯ್ಕೆಯಾಗಿದ್ದಾರೆ.
ಮಡಿಕೇರಿ ಸೆ.3 NEWS DESK : ಚೇತನ ಫೌಂಡೇಷನ್ ಧಾರವಾಡದ ಅಂಗಸಂಸ್ಥೆಯಾದ ಕಾವ್ಯ ಶ್ರೀ ಚಾರಿಟೇಬಲ್ ಟ್ರಸ್ಟ್ ಸಹಯೋಗದಲ್ಲಿ ನಡೆದ ಆಶುಕವಿತೆ ಬರೆಯುವ ಸ್ಪರ್ಧೆಯಲ್ಲಿ ನಾಲಡಿ ಗ್ರಾಮದ ಪ್ರಿತುನ್ ಪೂವಣ್ಣ ಅಯ್ಯನೆರವಂಡ ಆಶುಕವಿತೆ ಬರೆದು ಬರೆಯುವ ಮೂಲಕ ವಿಶ್ವದಾಖಲೆಯ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಕೇವಲ 24 ನಿಮಿಷಗಳಲ್ಲಿ 224 ಮಂದಿ ಕವಿಗಳು ವಾಟ್ಸಾಪ್ ಮೂಲಕ ಏಕಕಾಲದಲ್ಲಿ ಆಶುಕವಿತೆ ಬರೆದು ವಿಶ್ವದಾಖಲೆ ನಿರ್ಮಿಸಿದ್ದಾರೆ. ಇತ್ತೀಚಿಗೆ ವರ್ಲ್ಡ್ ಪ್ರೆಸ್ ಬುಕ್ ಆಫ್ ರೆಕಾರ್ಡ್ ವತಿಯಿಂದ ಬೆಂಗಳೂರು ಕನ್ನಡ ಸಾಹಿತ್ಯ ಪರಿಷತ್ತಿನ ಕುವೆಂಪು ಸಭಾಂಗಣದಲ್ಲಿ ಆಯೋಜಿಸಿದ್ದ ವಂದೇ ಮಾತರಂ ಕಾರ್ಯಕ್ರಮದಲ್ಲಿ 224 ಕವಿಗಳಿಗೆ ಪ್ರಶಸ್ತಿ ವಿತರಿಸಲಾಯಿತು. ಪ್ರಿತುನ್ ಪೂವಣ್ಣ ಕಕ್ಕಬ್ಬೆ ನಾಲಡಿ ಗ್ರಾಮದ ಪೂವಯ್ಯ, ಪ್ರಭಾ ದಂಪತಿಯ ಪುತ್ರ.
ನಾಪೋಕ್ಲು ಸೆ.3 NEWS DESK : ಮೈಸೂರಿನ ಕೊಡಗು ಗೌಡ ಸಮಾಜದ ವತಿಯಿಂದ ಕೈಲು ಮುಹೂರ್ತ (ಕೈಲ್ ಪೊಳ್ದ್) ಪ್ರಯುಕ್ತ ಜನಾಂಗ ಬಂಧುಗಳಿಗೆ ಕ್ರೀಡಾಕೂಟ ನಡೆಯಿತು. ಮೈಸೂರಿನ ವಿಶ್ವ ವಿದ್ಯಾಲಯ ಕ್ರೀಡಾ ಮೈದಾನದಲ್ಲಿ ನಡೆದ ಕ್ರೀಡಾಕೂಟ ವನ್ನು ಕೊಡಗು ಗೌಡ ಸಮಾಜದ ಅಧ್ಯಕ್ಷ ಕೊಂಬಾರನ ಬಸಪ್ಪ ಬಲೂನು ಹಾರಿಬಿಡುವ ಮೂಲಕ ಉದ್ಘಾಟಿಸಿದರು. ನಂತರ ನಡೆದ ಕ್ರೀಡಾಕೂಟದಲ್ಲಿ 5 ವರ್ಷದ ಮಕ್ಕಳಿಂದ ಹಿಡಿದು 70 ವರ್ಷ ವಯಸ್ಸಿನ, ಪುರುಷ ಮತ್ತು ಮಹಿಳಾ ವಿಭಾಗದಲ್ಲಿ ತಲಾ ಎರಡು ಸ್ಪರ್ಧೆ ಗಳಂತೆ ಒಟ್ಟು 40 ಸ್ಪರ್ಧೆಗಳು ನಡೆದವು. ಇದರೊಂದಿಗೆ ಸಾಂಪ್ರದಾಯಿಕ ಕಾಯಿಗೆ ಕಲ್ಲು ಹೊಡೆಯುವ ಸ್ಪರ್ಧೆಯು ನಡೆಯಿತು. ಇದೆ ಕ್ರೀಡಾ ಕೂಟದ ಭಾಗವಾಗಿ ಪುರುಷರು ಮತ್ತು ಮಹಿಳೆಯರಿಗೆ ಶಟಲ್ ಬ್ಯಾಡ್ಮಿಂಟನ್ ಸ್ಪರ್ದೆ ಹಾಗೂ ಕ್ರಿಕೆಟ್ ಪಂದ್ಯಾಟ ಗಳು ನಡೆದವು. ಈ ಸಂದರ್ಭ ವೇದಿಕೆಯಲ್ಲಿ ಮೈಸೂರು ಕೊಡಗು ಗೌಡ ಸಮಾಜದ ಮಾಜಿ ಅಧ್ಯಕ್ಷ ತೋಟಂಬೈಲು ಮನೋಹರ್, ಕ್ರೀಡಾ ಸಂಚಾಲಕ ಕೊಂಬಾರಾನ ಸುಬ್ಬಯ್ಯ, ಮಾಜಿ ಸೈನಿಕರ ಸಂಘದ ಅಧ್ಯಕ್ಷ…
ಕೊಡ್ಲಿಪೇಟೆ ಸೆ.3 NEWS DESK : ಮನುಕುಲಕ್ಕೆ ನೈತಿಕತೆಯ ಪಾಠಮಾಡಿ ಸತ್ಯ-ಶುದ್ಧ ಸನ್ನಡತೆಯ ಸಾತ್ವಿಕ ಬದುಕಿನ ಸಂಸ್ಕಾರ ಅರುಹಿದ ಚೈತನ್ಯ ಶಕ್ತಿಯೇ ಶ್ರೀ ವೀರಭದ್ರ ದೇವರು. ಬದುಕಿನ ಶ್ರೇಷ್ಠ ನಡೆ-ನುಡಿಗೆ ಅಗತ್ಯವಾದ ಧರ್ಮ ಮಾರ್ಗದಲ್ಲಿ ಕೈಹಿಡಿದು ಮುನ್ನಡೆಸಿದ ಮಹಾನುಭಾವನೇ ಶ್ರೀ ವೀರಭದ್ರ ಎಂದು ಕಿರಿಕೊಡ್ಲಿ ಮಠಾಧ್ಯಕ್ಷ ಶ್ರೀ ಸದಾಶಿವ ಸ್ವಾಮೀಜಿ ಹೇಳಿದರು. ಕೊಡಗು ವೀರಶೈವ ಲಿಂಗಾಯತ ಸಂಘಟನಾ ವೇದಿಕೆ, ನೀರುಗುಂದ ಶ್ರೀ ವೀರಭದ್ರೇಶ್ವರ ದೇವಾಲಯ ಸಮಿತಿಯ ಸಹಯೋಗದೊಂದಿಗೆ ನಡೆದ ಶ್ರೀ ವೀರಭದ್ರೇಶ್ವರ ಸ್ವಾಮಿ ಜನ್ಮ ವರ್ಧಂತಿ ಆರನೇ ವರ್ಷದ ಮಹೋತ್ಸವ ಕಾರ್ಯಕ್ರಮಕ್ಕೆ ನೀರಗುಂದ ಶ್ರೀ ವೀರಭದ್ರೇಶ್ವರ ದೇವಾಲಯದಲ್ಲಿ ಚಾಲನೆ ನೀಡಿ ಆಶೀರ್ವಚನದಲ್ಲಿ ಮಾತನಾಡಿದ ಅವರು, ಭಾದ್ರಪದ ಮಾಸದ ಮೊದಲ ಮಂಗಳವಾರದಂದು ಪ್ರತೀ ವರ್ಷ ಶ್ರೀ ಸ್ವಾಮಿಯ ಜಯಂತಿ ಆಚರಿಸಲಾಗುತ್ತಿದೆ. ಮಾನವನ ಇಹದ ಬದುಕಿನ ಸ್ತರಗಳಲ್ಲಿ ಇರಬಹುದಾದ ಜನವಿರೋಧಿ ಕೃತ್ಯಗಳ ನಿವಾರಣೆಗೆ ಶ್ರೀ ವೀರಭದ್ರ ದೇವರ ಮಹಾಶಕ್ತಿ ಸಂಚಯವು ನಿರಂತರ ಪ್ರಭಾವ ಬೀರುತ್ತದೆ ಎಂದರು. ಸಾಕ್ಷಾತ್ ಶಿವನೇ ತೊಂದರೆಯಲ್ಲಿದ್ದಾಗ ರಕ್ಷಣೆಗೆ ಅವತರಿಸಿದ ದೈವ…
ಮಡಿಕೇರಿ ಸೆ.3 NEWS DESK : ಕಳೆದ ಎರಡು ದಿನಗಳು ಸುರಿದ ಮಳೆಯಿಂದಾಗಿ ಶನಿವಾರಸಂತೆಯ ಗೌಡಳ್ಳಿ ಗ್ರಾಮ ಪಂಚಾಯತಿಗೆ ಸೇರಿದ ರಾಮನಹಳ್ಳಿ ಗ್ರಾಮದ ಸುರೇಶ್ ಎಂಬುವರ ಮನೆ ಸಂಪೂರ್ಣವಾಗಿ ಹಾನಿಗೊಳಗಾಗಿದ್ದು, ದಿನಬಳಕೆಯ ವಸ್ತುಗಳು ಸಂಪೂರ್ಣವಾಗಿ ಹಾನಿಯಾಗಿದೆ. ಸರ್ಕಾರದಿಂದ ತಕ್ಷಣ ಪರಿಹಾರ ಕೊಡಬೇಕು ಹಾಗೂ ನೂತನ ಮನೆ ನಿರ್ಮಿಸಿಕೊಡಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆ ಮನವಿ ಮಾಡಿದೆ.
ನಾಪೋಕ್ಲು ಸೆ.3 NEWS DESK : ಭಗವತಿ ಯುವಕ ಸಂಘ ದ ವತಿಯಿಂದ ಸ್ಥಳೀಯ (ಕೆ ಪಿ ಎಸ್) ಸರ್ಕಾರಿ ಪ್ರಾಥಮಿಕ ಶಾಲಾ ಮಕ್ಕಳಿಗೆ ಸ್ಟೀಲ್ ಊಟದ ತಟ್ಟೆ ಹಾಗೂ ಲೋಟವನ್ನು ಕೊಡುಗೆಯಾಗಿ ವಿತರಿಸಲಾಯಿತು. ಈ ಕಾರ್ಯಕ್ರಮ ದಲ್ಲಿ ಕೆ ಪಿ ಎಸ್ ಶಾಲಾ ಉಪಾಧ್ಯಕ್ಷ ಎನ್. ಎಸ್. ಉದಯಶಂಕರ್, ಭಗವತಿ ಯುವಕ ಸಂಘ ದ ಅಧ್ಯಕ್ಷ ಕುಲ್ಲೇಟ್ಟಿರ ದೇವಿ ದೇವಯ್ಯ, ಕಾರ್ಯದರ್ಶಿ ಶಿವಚಾಳಿಯಂಡ ಕಿಶೋರ್ ಬೋಪಣ್ಣ, ಮಾಜಿ ಅಧ್ಯಕ್ಷ ಜಾಲಿ ಪೂವಪ್ಪ, ಗ್ರಾ.ಪಂ ಸದಸ್ಯ ಶಿವಚಾಳಿಯಂಡ ಜಗದೀಶ್, ಯುವಕ ಸಂಘ ದ ಸದಸ್ಯ ಬೊಪ್ಪಂಡ ವೀರನ್ ಶಾಲಾ ಶಿಕ್ಷಕರು ಹಾಗೂ ಸಿಬ್ಬಂದಿ ಹಾಜರಿದ್ದರು. ವರದಿ : ದುಗ್ಗಳ ಸದಾನಂದ.






