ಮಡಿಕೇರಿ ಆ.16 NEWS DESK : ಸ್ವಾತಂತ್ರ್ಯ ದಿನಾಚರಣೆ ಕಂಡಕರೆ ಸರ್ಕಾರಿ ಹಿರಿಯ ಪ್ರಾಥಮ ಶಾಲೆಯ ವಿದ್ಯಾರ್ಥಿಗಳಿಗೆ ಕಂಡಕರೆ ಗಾಂಧಿ ಯುವಕ ಸಂಘದಿಂದ ಉಚಿತ ಸಮವಸ್ತ್ರ (ಟ್ರ್ಯಾಕ್ ಪ್ಯಾಂಟ್ ಮತ್ತು ಟೀ ಶರ್ಟ್) ದಿನಾಚರಣೆ ಮಾಡಲಾಯಿತು. ಶಾಲೆಯ ಪ್ರಭಾರ ಮುಖ್ಯ ಶಿಕ್ಷಕ ರತೀಶ್ ಸಮವಸ್ತ್ರ ವಿತರಣೆ ಮಾಡಿ ಮಾತನಾಡಿ, ಕಂಡಕರೆಯ ಗಾಂಧಿ ಯುವಕ ಸಂಘವು ಶಾಲೆಗೆ ನಿರಂತರವಾಗಿ ಸಹಕಾರ, ಬೆಂಬಲ ನೀಡುತ್ತಾ ಬಂದಿದೆ. ಇತ್ತೀಚೆಗಷ್ಟೇ ಶಾಲೆಯ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತವಾಗಿ ನೋಟ್ ಪುಸ್ತಕವನ್ನು ವಿತರಿಸಿದ್ದರು. ಅದಲ್ಲದೇ ಕಳೆದ ವರ್ಷ ಶಾಲೆಗೆ 25 ಕುರ್ಚಿಗಳನ್ನು ನೀಡಿದ್ದಾರೆ. ಟ್ರ್ಯಾಕ್ ಪ್ಯಾಂಟ್ ಮತ್ತು ಟೀ ಶರ್ಟ್ ಬಗ್ಗೆ ಗಾಂಧಿ ಯುವಕ ಸಂಘದ ಅಧ್ಯಕ್ಷ ಇಸ್ಮಾಯಿಲ್ ಕಂಡಕರೆ ಅವರೊಂದಿಗೆ ಕೇಳಿಕೊಂಡಾಗ ತಕ್ಷಣ ಸ್ಪಂದಿಸಿ, ಇದೀಗ 50 ಸಾವಿರ ಬೆಲೆ ಬಾಳುವ ಉತ್ತಮ ಗುಣಮಟ್ಟದ ಟೀ ಶರ್ಟ್ ನೀಡಿದ್ದಾರೆ ಎಂದರು. ಸರ್ಕಾರಿ ಶಾಲೆಯ ಉಳಿವಿಗೆ ಗಾಂಧಿ ಯುವಕ ಸಂಘವು ಪ್ರಯತ್ನಿಸುತ್ತಿರುವುದು ಶ್ಲಾಘನೀಯ ಕೆಲಸವಾಗಿದೆ ಎಂದರು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ…
ಲೇಖಕ: admin
ವಿರಾಜಪೇಟೆ ಆ.16 NEWS DESK : ಶ್ರೀ ಅರಮೇರಿಯ ಎಸ್ಎಂಎಸ್ ವಿದ್ಯಾಪೀಠದ ವಿದ್ಯಾರ್ಥಿಗಳ ಕೆಸರುಗದ್ದೆ ಕ್ರೀಡಾಕೂಟ ಸಂಭ್ರಮದಿಂದ ನಡೆಯಿತು. ಕಳಂಚೇರಿ ಮಠದ ಗದ್ದೆಯಲ್ಲಿ ವಾಡಿಕೆಯಂತೆ ಈ ಬಾರಿಯೂ ಕೂಡ ಕೆಸರುಗದ್ದೆ ಕ್ರೀಡಾಕೂಟದಲ್ಲಿ ಮಕ್ಕಳು ಅತ್ಯುತ್ಸಾಹದಿಂದ ಪಾಲ್ಗೊಂಡಿದ್ದರು. ಪ್ರಗತಿಪರ ರೈತ, ಉದ್ಯಮಿ ಉದಿಯಂಡ ಚಂಗಪ್ಪಕ್ರೀಡೋತ್ಸವಕ್ಕೆ ಚಾಲನೆ ನೀಡಿದರು. ಕೃ ಷಿ ಭೂಮಿಯೊಡನೆ ತಮಗಿರುವ ಸಂಬಂಧ, ಕೃಷಿಯಿಂದ ರೈತ ಎದುರಿಸುವ ಸವಾಲುಗಳನ್ನು ವಿವರಿಸಿದ ಅವರು, ಅನ್ನದ ಒಂದೊಂದು ಅಗುಳು ಕೂಡ ಎಷ್ಟೊಂದು ಮುಖ್ಯವಾಗಿದೆ ಎಂದು ವಿದ್ಯಾರ್ಥಿಗಳಿಗೆ ತಿಳಿಸಿದರು. ವಿದ್ಯಾರ್ಥಿಗಳಿಗೆ ಕ್ರೀಡೆ ಯಂತಹ ಸಹಪಠ್ಯದಲ್ಲಿ ತೊಡಗಿಸಿಕೊಳ್ಳಲು ಅವಕಾಶ ಕಲ್ಪಿಸಿರುವುದನ್ನು ಶ್ಲಾಘಿಸಿದರು. ಕಾರ್ಯಕ್ರಮದಲ್ಲಿ ಕಳಂಚೇರಿ ಮಠದ ಪೀಠಾಧಿಪತಿ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮೀಜಿಗಳು ಹೆಸರುಗದ್ದೆ ಕ್ರೀಡಾಕೂಟ ಕೇವಲ ಮನಸ್ಸಿನ ಮನರಂಜನೆಗಾಗಿ ಮಾತ್ರವಲ್ಲ, ಮಣ್ಣಿನಿಂದ ಹೇಗೆ ನಮ್ಮ ಬದುಕನ್ನು ಕಟ್ಟಿಕೊಳ್ಳಬೇಕೆಂಬುದನ್ನು ಇಂದಿನ ಮಕ್ಕಳು ಆಲೋಚನೆ ಮಾಡಬೇಕಿದೆ ಎಂದರು. ವಿದ್ಯಾರ್ಥಿಗಳು ಮಣ್ಣಿನ ಮೇಲೆ ಪ್ರೀತಿಯನ್ನು ಬೆಳೆಸಿಕೊಂಡರೆ ಕೆಸರುಗದ್ದೆಯಂತಹ ಕ್ರೀಡೋತ್ಸವಕ್ಕೆ ಮೌಲ್ಯ ಬರುತ್ತದೆ. ಕೆಸರುಗದ್ದೆಯ ಮಣ್ಣಿನ ಸುಗಂಧದ ಸೊಗಡು ಬೇರೆ ಯಾವುದರಿಂದಲೂ…
ಮಡಿಕೇರಿ ಆ.16 NEWS DESK : ಕೆದಮುಳ್ಳೂರು ಗ್ರಾ.ಪಂ ವ್ಯಾಪ್ತಿಯಲ್ಲಿರುವ ಕಲ್ಲುಮೊಟ್ಟೆ ಕ್ರಿಶ್ಚಿಯನ್ ಕಾಲೋನಿ ಅಂಗನವಾಡಿಯಲ್ಲಿ 78 ನೇ ಸ್ವಾತಂತ್ರ್ಯೋತ್ಸವ ಆಚರಿಸಲಾಯಿತು. ಕೆದಮುಳ್ಳೂರು ಗ್ರಾ.ಪಂ ಸದಸ್ಯೆ ವೀಣಾ ವಿಮಲ ಧ್ವಜಾರೋಹಣ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಅಂಗನವಾಡಿ ಕಾರ್ಯಕರ್ತೆ ಕೆ.ಎಂ.ಉಷಾ ಸುರೇಶ್, ಸಹಾಯಕಿ ರೊಶಿನಿ ವಿಲ್ಮಾ, ಆಶಾ ಕಾರ್ಯಕರ್ತೆ ಸವಿತಾ ಸುಬ್ರಮಣಿ, ಮಕ್ಕಳು ಹಾಗೂ ಪೋಷಕರು ಹಾಜರಿದ್ದರು.
ನೆಲ್ಲೂರು (ಆಂಧ್ರಪ್ರದೇಶ) ಆ.16 NEWS DESK : ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ((ISRO) ಶುಕ್ರವಾರ ಆಂಧ್ರಪ್ರದೇಶದ ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಭೂಮಿಯ ವೀಕ್ಷಣಾ ಉಪಗ್ರಹ-8 (EOS-8) ನ್ನು ಉಡಾವಣೆ ಮಾಡಿದೆ. ಈ ಬಗ್ಗೆ ಎಕ್ಸ್ ಪೋಸ್ಟ್ ನಲ್ಲಿ “ಎಸ್ ಎಸ್ ಎಲ್ ವಿ ಯ ಮೂರನೇ ಅಭಿವೃದ್ಧಿ ವಾಹಕ ಹಾರಾಟ ಯಶಸ್ವಿಯಾಗಿದೆ. SSLV-D3 ನಿಖರವಾಗಿ EOS-08 ನ್ನು ಕಕ್ಷೆಗೆ ಸೇರಿಸಿತು. ಇದು ISRO/DOS ನ SSLV ಅಭಿವೃದ್ಧಿ ಯೋಜನೆ ಯಶಸ್ವಿಯಾಗಿ ಪೂರ್ಣಗೊಂಡಿದೆ. ತಂತ್ರಜ್ಞಾನ ವರ್ಗಾವಣೆಯೊಂದಿಗೆ, ಭಾರತೀಯ ಉದ್ಯಮ ಮತ್ತು ಎನ್ ಎಸ್ ಐಎಲ್ ಇಂಡಿಯಾ ಈಗ ಎಸ್ ಎಸ್ ಎಲ್ ವಿಯನ್ನು ವಾಣಿಜ್ಯ ಕಾರ್ಯಾಚರಣೆಗಳಿಗಾಗಿ ಉತ್ಪಾದಿಸುತ್ತದೆ ಎಂದಿದ್ದಾರೆ.
ಮಡಿಕೇರಿ ಆ.16 NEWS DESK : ಜಿಲ್ಲೆಯ ಡಿಸಿಆರ್ಬಿ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿರುವ ಹೆಡ್ಕಾನ್ಸ್ಟೇಬಲ್ ಸಿ.ಕೆ.ರಾಜೇಶ್ ಅವರಿಗೆ ಮುಖ್ಯಮಂತ್ರಿ ಪದಕ ಲಭಿಸಿದೆ. ಭಾಗಮಂಡಲ ಸಮೀಪದ ತಣ್ಣಿಮಾನಿ ಗ್ರಾಮದ ಕರಿಯಚ್ಚನ್ ಮತ್ತು ತೆರೆಸಾ ದಂಪತಿಯ ಪುತ್ರರಾದ ಇವರು, 2002ರಲ್ಲಿ ಪೊಲೀಸ್ ಇಲಾಖೆಗೆ ಸೇರಿದ್ದು, ಸಿಡಿಆರ್ ಘಟಕದಲ್ಲಿ ತೋರಿರುವ ತಾಂತ್ರಿಕ ಪರಿಣತಿಯನ್ನು ಆಧರಿಸಿ ಇವರಿಗೆ ಪದಕ ಘೋಷಿಸಲಾಗಿದೆ
ಮಡಿಕೇರಿ ಆ.16 NEWS DESK : ಕೊಡಗು ಜಿಲ್ಲಾ ಕಾರ್ಯಾಲಯ ಮಧುಕೃಪಾದಲ್ಲಿ 78 ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಜಿಲ್ಲಾ ಕಾರ್ಯವಾಹ ರವಿ ಕುಶಾಲಪ್ಪ “ಶತಾಬ್ದಿಯ ಹೊಸ್ತಿಲಲ್ಲಿ ಆರ್.ಎಸ್.ಎಸ್. ಇದ್ದು, “ಸಾಮಾಜಿಕ ಪರಿವರ್ತನೆಗಾಗಿ ಪಂಚಕಾರ್ಯಗಳು” ಎಂಬ ಅಭಿಯಾನವನ್ನು ಕೈಗೊಂಡಿದೆ ಎಂದರು. ಪರಿಸರ ಸಂರಕ್ಷಣೆ, ಕುಟುಂಬ ಪ್ರಬೋಧನ್, ಸಾಮಾಜಿಕ ಸಾಮರಸ್ಯ, ಸ್ವದೇಶಿ ಜೀವನಶೈಲಿ, ನಾಗರಿಕ ಶಿಷ್ಟಾಚಾರದ ಮೂಲಕ ಸದೃಢ ಸಮಾಜವನ್ನು ನಿರ್ಮಿಸುವ ಕಾರ್ಯ ನಿರಂತರವಾಗಿ ಆಗುತ್ತಿದೆ. ಇಡೀ ಸಮಾಜವನ್ನು ಒಟ್ಟಿಗೆ ಕೊಂಡೊಯ್ಯುವ ಮೂಲಕ ಸದೃಢ ಸಮಾಜವನ್ನು ನಿರ್ಮಿಸುವ ಸಂಘದ ಧ್ಯೇಯದಂತೆ ಪ್ರಯತ್ನಗಳಾಗುತ್ತಿವೆ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ವಿಭಾಗ ಪ್ರಚಾರಕರು, ಜಿಲ್ಲಾ ಪ್ರಚಾರಕರು, ಕಾರ್ಯಕರ್ತರು ಹಾಗೂ ಸ್ವಯಂ ಸೇವಕರು ಹಾಜರಿದ್ದರು.
ಸುಂಟಿಕೊಪ್ಪ ಆ.16 NEWS DESK : ಗರಗಂದೂರು, ಮೊರಾರ್ಜಿ ದೇಸಾಯಿ ವಸತಿ ವಿಜ್ಞಾನ ಪಿಯು ಕಾಲೇಜಿನಲ್ಲಿ 78ನೇ ಸ್ವಾತಂತ್ರ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಸುಂಟಿಕೊಪ್ಪ ಜೆಸಿಐ ಸಂಸ್ಥೆಯ ಅಧ್ಯಕ್ಷ ಸಂಪತ್ ಕುಮಾರ್ ಧ್ವಜಾರೋಹಣ ನೆರವೇರಿಸಿದರು. ಸಮಾರಂಭದಲ್ಲಿ ಕಾಲೇಜಿನ ಪ್ರಾಂಶುಪಾಲ ಮಹೇಂದ್ರ, ಉಪನ್ಯಾಸಕ ಪಾಪಣ್ಣ, ಜೆಸಿಐ ಸಂಸ್ಥೆಯ ಡೆನಿಸ್ ಡಿಸೋಜಾ, ಫೆಲ್ಸಿ ಡಿಸೋಜಾ, ಹರೀಶ್, ವಸಂತ ಕುಮಾರ್ ಇತರರು ಇದ್ದರು.
ಸುಂಟಿಕೊಪ್ಪ,ಆ.16 NEWS DESK : ಸ್ವಾತಂತ್ರ್ಯ ದಿನಚಾರಣೆಯನ್ನು ಒಂದು ದಿನದ ಕಾರ್ಯಕ್ರಮಕ್ಕೆ ಸೀಮಿತಗೊಳಿಸದೆ ಪ್ರತಿನಿತ್ಯ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವಂತಾಗಬೇಕೆಂದು ಸುಂಟಿಕೊಪ್ಪ ಗ್ರೇಡ್ ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ವಿ.ಜಿ.ಲೋಕೇಶ್ ಕರೆ ನೀಡಿದ್ದಾರೆ. ಸಂತಮೇರಿ ಶಾಲಾ ಆವರಣದಲ್ಲಿ ನಡೆದ 78ನೇ ಸ್ವಾತಂತ್ರ್ಯೋತ್ಸವ ಸಮಾರಂಭದಲ್ಲಿ ಮುಖ್ಯ ಭಾಷಣಕಾರರಾಗಿ ಆಗಮಿಸಿ ಅವರು ಮಾತನಾಡಿದರು. ಭಾರತ ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಮಹಾತ್ಮಗಾಂಧಿ, ಜವಹಾರ್ಲಾಲ್ ನೆಹರು, ಭಗತ್ ಸಿಂಗ್ ಸೇರಿದಂತೆ ಅನೇಕ ಮಂದಿ ತ್ಯಾಗ ಬಲಿದಾನವನ್ನು ಮಾಡಿದ್ದಾರೆ. ಭಾರತ ದೇಶವು ವಿಶ್ವದಲ್ಲೇ ಒಂದು ಅಪರೂಪ. ಆದರೆ ಅದ್ಭುತ ಹಬ,್ಬ ಹರಿದಿನಗಳು, ಜಾತ್ರೆಗಳು, ಜಾತಿ ಜನಾಂಗಗಳು ನೆಲೆಸಿರುವ ದೇಶವಾಗಿದ್ದು, ಬ್ರಿಟಿಷರ ದಬ್ಬಳಿಕೆಯಿಂದ ಹೊರ ಬಂದು ಸ್ವಾತಂತ್ರ್ಯ ಸಂಭ್ರಮದಲ್ಲಿದ್ದು, ಉಳಿಸಿಕೊಂಡು ಬೆಳೆಸಿಕೊಂಡು ಹೋಗಬೇಕೆಂದು ಕರೆ ನೀಡಿದರು. ಸಂತ ಮೇರಿ ಆಂಗ್ಲ ಮಾದ್ಯಮ ಶಾಲೆಯ ವ್ಯವಸ್ಥಾಪಕ ವಂ.ಫಾ.ವಿಜಯಕುಮಾರ್ ಮಾತನಾಡಿ, ಭಾರತ ದೇಶವು ಸರ್ವಜನಾಂಗದ ಶಾಂತಿಯ ಎಂಬ ಖ್ಯಾತಿಗೆ ಪಾತ್ರವಾಗಿದ್ದು, ಭಾರತ ದೇಶದ ಭವ್ಯ ಪರಂಪರೆ, ಇತಿಹಾಸ, ಪದ್ಧತಿ, ಇಲ್ಲಿಯ ಜನ ಜೀವನದ ಪ್ರತಿಯೊಂದನ್ನು ಪ್ರೀತಿಸಿ,…
ನಾಪೋಕ್ಲು ಆ.16 NEWS DESK : ಮೈಸೂರು ಕೊಡಗು ಗೌಡ ಸಮಾಜ ವತಿಯಿಂದ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಸಮಾಜದ ಭವನದ ಆವರಣದಲ್ಲಿ ಸಮಾಜದ ಅಧ್ಯಕ್ಷ ಕೊಂಬಾರನ ಬಸಪ್ಪ ಧ್ವಜಾರೋಹಣ ನೆರವೇರಿಸಿ ಸ್ವಾತಂತ್ರ್ಯ ದಿನದ ಮಹತ್ವವನ್ನು ಮತ್ತು ಸ್ವಾತಂತ್ರ್ಯಕ್ಕೋಸ್ಕರ ಹೋರಾಡಿದ ಗುಡ್ಡೆಮನೆಯ ಅಪ್ಪಯ್ಯ ಗೌಡ, ಕೆದಂಬಾಡಿ ರಾಮಯ್ಯ ಗೌಡ ಮತ್ತು ಇತರ ಮಹನೀಯರನ್ನು ಸ್ಮರಿಸಿದರು. ಸಮಾರಂಭದಲ್ಲಿ ಸಮಾಜದ ನಿಕಟ ಪೂರ್ವ ಅಧ್ಯಕ್ಷ ತೋಟಂಬೈಲು ಮನೋಹರ್ ಮಾತನಾಡಿ, ಸ್ವಾತಂತ್ರ್ಯ ದಿನದ ಮಹತ್ವವನ್ನು ವಿವರಿಸಿದರು. ಕೊಡಗು ಮತ್ತು ದಕ್ಷಣ ಕನ್ನಡ ಜಿಲ್ಲಾ ಗೌಡ ಮಹಿಳಾ ಸಮಾಜದ ವತಿಯಿಂದ ದೇಶಭಕ್ತಿ ಗೀತೆಯನ್ನು ಪ್ರಸ್ತುತ ಪಡಿಸಿದರು. ಸಮಾಜದ ಕಾರ್ಯದರ್ಶಿ ಪೊನ್ನೆಟಿ ನಂದ ಸ್ವಾಗತಿಸಿದರು. ಸಹ ಕಾರ್ಯದರ್ಶಿ ನಡುಮನೆ ಚಂಗಪ್ಪ ವಂದಿಸಿದರು. ವರದಿ : ದುಗ್ಗಳ ಸದಾನಂದ
ಮಡಿಕೇರಿ ಆ.15 NEWS DESK : ಕೊಡಗು ಸೇರಿದಂತೆ ಪಶ್ಚಿಮ ಘಟ್ಟಗಳ ಭೂಕುಸಿತಗಳ ಅಧ್ಯಯನ ಮತ್ತು ತಡೆಗೆ ಮಡಿಕೇರಿ ಶಾಸಕ ಡಾ. ಮಂತರ್ ಗೌಡ ಅವರು ಮಾಡಿದ ನಿರಂತರ ಮನವಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಂದಿಸಿ ರೂ.100 ಕೋಟಿ ಅನುದಾನ ಬಿಡುಗಡೆ ಮಾಡಿದ್ದಾರೆ. ಪಶ್ಚಿಮಘಟ್ಟದಲ್ಲಿ ನಿರಂತರ ಭೂಕುಸಿತ ಸಂಭವಿಸುತ್ತಿರುವ ಕುರಿತು ಡಾ.ಮಂತರ್ ಗೌಡ ಅವರು ರಾಜ್ಯ ಸರ್ಕಾರದ ಗಮನ ಸೆಳೆದಿದ್ದರು. ಇದನ್ನು ಗಂಭೀರವಾಗಿ ಪರಿಗಣಿಸಿದ ಮುಖ್ಯಮಂತ್ರಿಗಳು ಸ್ವಾತಂತ್ರ್ಯೋತ್ಸವದ ದಿನವಾದ ಇಂದು ಪಶ್ಚಿಮಘಟ್ಟದ ಭೂಕುಸಿತದ ಅಧ್ಯಯನ ಹಾಗೂ ತಡೆ ಕಾರ್ಯಕ್ರಮಗಳಿಗೆ 100 ಕೋಟಿ ರೂ. ಅನುದಾನವನ್ನು ಘೋಷಿಸಿದ್ದಾರೆ. ಪಶ್ಚಿಮ ಘಟ್ಟದಲ್ಲಿ ಭೂಕುಸಿತವನ್ನು ತಡೆಯಲು ಜಿಯೋಲಾಜಿಕಲ್ ಸರ್ವೆ ಆಫ್ ಇಂಡಿಯಾ ಮತ್ತಿತರ ಸಂಸ್ಥೆಗಳೊಂದಿಗೆ ಸೇರಿಕೊಂಡು ವೈಜ್ಞಾನಿಕ ಅಧ್ಯಯನ ಮಾಡುವ ಅಗತ್ಯತೆಯನ್ನು ಶಾಸಕ ಡಾ.ಮಂತರ್ ಗೌಡ ಮನವರಿಕೆ ಮಾಡಿಕೊಟ್ಟಿದ್ದರು.






