ಲೇಖಕ: admin

ಮಡಿಕೇರಿ ಡಿ.26 NEWS DESK : ಕೊಡಗು ಕೆಂಬಟ್ಟಿ ಸಮಾಜದ 75ನೇ  ವರ್ಷಗಳ ಬೇಡಿಕೆಯನ್ನು ಈಡೇರಿಸುಲ್ಲಿ‌ ಪ್ರಾಮಾಣಿಕ ಪ್ರಯತ್ನ ಮಾಡಿದ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ಶಾಸಕರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ಅವರನ್ನು ಕೊಡಗು ಕೆಂಬಟ್ಟಿ ಸಮಾಜದ ವತಿಯಿಂದ ಗೌರವಿಸಲಾಯಿತು. ಕೊಡಗಿನ ಕೊಡವ ಭಾಷೆ ಮಾತನಾಡುವ ಕೆಂಬಟ್ಟಿ ಸಮುದಾಯವು ಆದಿಕರ್ನಾಟಕ ಎಂದು ಜಾತಿಪ್ರಮಾಣ ಪತ್ರ ಪಡೆಯುತ್ತಿದ್ದು. ಅವರ ಮೂಲ ಜಾತಿಯ ಹೆಸರಾದ ಕೆಂಬಟ್ಟಿ ಹೆಸರಿನಲ್ಲಿಯೇ ಜಾತಿ ಪ್ರಮಾಣ ಪತ್ರ ಪಡೆಯುವ ಬಗ್ಗೆ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿಸಿ, ಕೇಂದ್ರಕ್ಕೆ ಶಿಫಾರಸು ಮಾಡುವುದಾಗಿ ಭರವಸೆಯನ್ನು ನೀಡಿದರ ಸಲುವಾಗಿ ವಿಧಾನ ಸೌಧದ ಶಾಸಕರ ಕಛೇರಿಯಲ್ಲಿ ಕೊಡಗು ಕೆಂಬಟ್ಟಿ ಸಮಾಜದ ಪರವಾಗಿ ಸಮಾದ ಅಧ್ಯಕ್ಷ ಮೊಳ್ಳೆಕುಟ್ಟಂಡ ದಿನು ಬೋಜಪ್ಪ ನೇತೃತ್ವದಲ್ಲಿ ಸನ್ಮಾನಿಸಿ, ಗೌರವಿಸಲಾಯಿತು.

Read More

ಸುಂಟಿಕೊಪ್ಪ ಡಿ.26 NEWS DESK : ಸುಂಟಿಕೊಪ್ಪದ ಕೂರ್ಗ್ ಚೆಸ್ ಕ್ಲಬ್ ವತಿಯಿಂದ ಡಿ.31 ರಂದು ಸುಂಟಿಕೊಪ್ಪದಲ್ಲಿ ಜಿಲ್ಲಾ ಮಟ್ಟದ ಚೆಸ್ ಪಂದ್ಯಾವಳಿ ನಡೆಯಲಿದೆ. ಅಂದು ಬೆಳಿಗ್ಗೆ 9.30 ಗಂಟೆಗೆ ಶ್ರೀ ಗುಂಡುಗುಟ್ಟಿ ಮಂಜುನಾಥಯ್ಯ ಮೀನಾಕ್ಷಮ್ಮ ಕಲ್ಯಾಣ ಮಂಟಪದಲ್ಲಿ ಪಂದ್ಯಾವಳಿ ನಡೆಯಲಿದೆ. 7 ರಿಂದ 14 ವರ್ಷ ಪ್ರಾಯದ ಮಕ್ಕಳ ವಿಭಾಗದಲ್ಲಿ ಪ್ರಥಮ ಬಹುಮಾನ ರೂ. 3000, ದ್ವಿತೀಯ ಬಹುಮಾನ ರೂ. 2000, ತೃತೀಯ ಬಹುಮಾನ ರೂ.1000 ನಗದು ಬಹುಮಾನ ಹಾಗೂ ಐವರು ಸ್ಪರ್ಧೆಗಳಿಗೆ ಆಕರ್ಷಕ ಟ್ರೋಫಿ ನೀಡಲಾಗುವುದು. ಈ ವಿಭಾಗದ ನೋಂದಣಿ ಶುಲ್ಕ ರೂ. 300 ಆಗಿದೆ. 15 ವರ್ಷ ಮೇಲ್ಪಟ್ಟವರ ವಿಭಾಗದ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ರೂ.5000, ದ್ವಿತೀಯ ಬಹುಮಾನ ರೂ.3000, ತೃತೀಯ ಬಹುಮಾನ ರೂ.1500 ನಗದು ಬಹುಮಾನ ಹಾಗೂ ಐವರು ಸ್ಪರ್ಧಿಗಳಿಗೆ ಆಕರ್ಷಕ ಟ್ರೋಫಿ ಸಿಗಲಿದೆ. ಈ ವಿಭಾಗದ ನೋಂದಣಿ ಶುಲ್ಕ ರೂ. 500 ಆಗಿದ್ದು, ಮೊದಲು ಹೆಸರು ನೋಂದಾಯಿಸಿಕೊಳ್ಳುವ 100 ಸ್ಪರ್ಧಿಗಳಿಗೆ ಮಾತ್ರ ಅವಕಾಶ ನೀಡಲಾಗುವುದು.…

Read More

ಮಡಿಕೇರಿ ಡಿ.26 NEWS DESK : ಮೈಸೂರಿನಲ್ಲಿರುವ ಎಂ.ಸಿ.ಪಿ.ಸಿ.ಎಸ್ ಸಂಘದ ಆಡಳಿತ ಮಂಡಳಿಯ ಮಾಹಿತಿ ಇರುವ ವರದಿಯನ್ನು  ಬೆಂಗಳೂರಿನ ವಿಧಾನಸೌಧದ ಕಚೇರಿಯಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಸಂಘದ ಮತ್ತು ಅಧ್ಯಕ್ಷ ಎ.ಎಸ್.ಪೊನ್ನಣ್ಣ ಅವರಿಗೆ ನೀಡಲಾಯಿತು. ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರಿಂದ ವರದಿಯನ್ನು ಸ್ವೀಕರಿಸಿ ಅದನ್ನು ಕುಲಂಕುಶಲವಾಗಿ ಪರಿಶೀಲಿಸಲಾಗುವುದು ಎಂದು ಹೇಳಿದರು.

Read More

ಮಡಿಕೇರಿ ಡಿ.26 NEWS DESK : ಭಾರತ ಕಂಡ ಶ್ರೇಷ್ಠ ಪ್ರಧಾನಿ, ಅಜಾತಶತ್ರು, ಅಟಲ್ ಬಿಹಾರಿ ವಾಜಪೇಯಿ ಅವರ ಗೌರವಾರ್ಥ ಸುಶಾಸನ ದಿನ (ಉತ್ತಮ ಆಡಳಿತ ದಿನ)ದ ಅಂಗವಾಗಿ ಮೇಕೇರಿಯ ಸ್ವಾಗತ ಯುವಕ ಸಂಘ ಹಾಗೂ ವಿವಿಧ ಸಂಘ, ಸಂಸ್ಥೆಗಳ ಸಹಯೋಗದಲ್ಲಿ 14 ನೇ ವರ್ಷದ ಗ್ರಾಮೀಣ ಮಟ್ಟದ  ಸ್ವಯಂ ಪ್ರೇರಿತ ರಕ್ತದಾನ ಶಿಬಿರ ನಡೆಯಿತು. ಯುವಜನ ವ್ಯವಹಾರ ಹಾಗೂ ಕ್ರೀಡಾ ಸಚಿವಾಲಯ, ಮೈ ಭಾರತ್, ಜಿಲ್ಲಾ ಯುವ ಒಕ್ಕೂಟ, ಮಡಿಕೇರಿ ತಾಲ್ಲೂಕು ಯುವ ಒಕ್ಕೂಟ, ಕೊಡಗು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಡಿಕೇರಿ ಲಯನ್ಸ್ ಕ್ಲಬ್, ರೋಟರಿ ಕ್ಲಬ್ ಆಫ್ ಮಡಿಕೇರಿ ವುಡ್ಸ್, ಭಾರತೀಯ ರೆಡ್‍ಕ್ರಾಸ್ ಸಂಸ್ಥೆ, ರೋಟರಿ ಮಿಸ್ಟಿಹಿಲ್ಸ್, ಕಾರ್ಮಿಕ ಇಲಾಖೆ ಹಾಗೂ ಜಿಲ್ಲಾಸ್ಪತ್ರೆ ಮಡಿಕೇರಿ, ಮೇಕೇರಿ ಗ್ರಾಮ ಪಂಚಾಯಿತಿ ಮತ್ತು ಮಡಿಕೇರಿ ಎಸ್‍ಡಿಎಂಸಿ ಸಹಯೋಗದಲ್ಲಿ ಮೇಕೇರಿಯ ಸರ್ಕಾರಿ ಹಿರಿಯ ಪ್ರಾಥಾರ್ಮಿಕ ಶಾಲೆಯಲ್ಲಿ ನಡೆದ ಶಿಬಿರದಲ್ಲಿ  ಕೇಂದ್ರ ಸರಕಾರದ ಮೈಭಾರತ್, ಯುವಜನ ಸೇವೆ ಮತ್ತು ಕ್ರೀಡಾ ಇಲಾಖೆ,ಕೊಡಗು…

Read More

ಮಡಿಕೇರಿ ಡಿ.26 NEWS DESK : ಪಾಂಡಂಡ ಕುಟ್ಟಪ್ಪ ಅವರ ಕನಸಿನ ಕೂಸಾದ ಕೊಡವ ಕೌಟುಂಬಿಕ ಹಾಕಿ ಉತ್ಸವ ಬೆಳ್ಳಿ ಮಹೋತ್ಸವವನ್ನು ಆಚರಿಸಿಕೊಂಡ ಹಿನ್ನೆಲೆಯಲ್ಲಿ ಕೊಡವ ಹಾಕಿ ಅಕಾಡೆಮಿ ವತಿಯಿಂದ ಆಯೋಜನೆಗೊಂಡಿರುವ ‘ಲೆವಿಸ್ಟಾ ಕೊಡವ ಹಾಕಿ ಚಾಂಪಿಯನ್ಸ್ ಟ್ರೋಫಿ ಪಂದ್ಯಾವಳಿ’ ಮೂರ್ನಾಡಿನಲ್ಲಿ ಉದ್ಘಾಟನೆಗೊಂಡಿತು. ಕಳೆದ 25 ವರ್ಷಗಳ ಕಾಲ ನಡೆದ ಪಂದ್ಯಾವಳಿಯಲ್ಲಿ ಪ್ರಥಮ ಮತ್ತು ದ್ವಿತೀಯ ಸ್ಥಾನ ಪಡೆದ 13 ತಂಡಗಳ ನಡುವೆ ಟ್ರೋಫಿಗಾಗಿ ಐದು ದಿನಗಳ ಕಾಲ ಸೆಣಸಾಟ ನಡೆಯಲಿದೆ. ಹಾಕಿ ಕೂರ್ಗ್, ಎಂ.ಬಾಡಗ ಸ್ಪೋಟ್ರ್ಸ್ ರಿಕ್ರಿಯೇಷನ್ ಸಂಸ್ಥೆ ಮತ್ತು ಮೂರ್ನಾಡು ವಿದ್ಯಾಸಂಸ್ಥೆಯ ಸಹಕಾರದೊಂದಿಗೆ ಮೂರ್ನಾಡಿನ ಬಾಚೆಟ್ಟೀರ ಲಾಲು ಮುದ್ದಯ್ಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯಾವಳಿಯ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಏಕಲವ್ಯ ಪ್ರಶಸ್ತಿ ವಿಜೇತರಾದ ಒಲಂಪಿಯನ್ ಬೊಳ್ಳಂಡ ಪ್ರಮೀಳ ಅಯ್ಯಪ್ಪ ಅವರು ಪೋಷಕರು ತಮ್ಮ ಕನಸನ್ನು ಮಕ್ಕಳ ಮೇಲೆ ಹೇರದೆ, ಮಕ್ಕಳ ಕನಸನ್ನು ನನಸು ಮಾಡಲು ಮುಂದಾಗಬೇಕು ಮತ್ತು ಕ್ರೀಡಾಸಕ್ತಿಗೆ ಉತ್ತೇಜನ ನೀಡಬೇಕೆಂದು ಸಲಹೆ ನೀಡಿದರು. ಪ್ರಸ್ತುತ…

Read More

ಮಡಿಕೇರಿ ಡಿ.26 NEWS DESK : ಮಡಿಕೇರಿ ಹಾಗೂ ಕುಶಾಲನಗದಲ್ಲಿ ಕುಡಿಯುವ ನೀರಿನ ಪ್ಲಾಸ್ಟಿಕ್ ಬಾಟಲ್‍ಗಳ ನಿಷೇಧಿಸಿ ಹೊರಡಿಸಿರುವ ಆದೇಶ ಸಂಪೂರ್ಣವಾಗಿ ಸಾರ್ವಜನಿಕ ಹಿತಾಸಕ್ತಿಗೆ ವಿರುದ್ಧವಾಗಿದ್ದು, ತಕ್ಷಣ ಪುನರ್ ಪರಿಶೀಲನೆ ನಡೆಸಬೇಕೆಂದು ಕರ್ನಾಟಕ ಯುವ ರಕ್ಷಣಾ ವೇದಿಕೆ ಮನವಿ ಮಾಡಿದೆ. ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರಿಗೆ ಮನವಿ ಸಲ್ಲಿಸಿ, ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವೇದಿಕೆಯ ರಾಜ್ಯ ಕಾರ್ಯದರ್ಶಿ ಎಂ.ಎಂ.ದಾವೂದ್, ಕುಡಿಯುವ ನೀರಿನ ಪ್ಲಾಸ್ಟಿಕ್ ಬಾಟಲ್‍ಗಳ ನಿಷೇಧದಿಂದ ಜನಸಾಮಾನ್ಯರು ಮತ್ತು ವರ್ತಕರು ಅನುಭವಿಸುವ ತೊಂದರೆಗಳ ಬಗ್ಗೆ ಗಮನ ಸೆಳೆದರು.  ಪ್ರವಾಸಿಗರು, ವಿದ್ಯಾರ್ಥಿಗಳು, ಹಿರಿಯ ನಾಗರಿಕರು, ರೋಗಿಗಳು ಹಾಗೂ ಸಾರ್ವಜನಿಕರಿಗೆ ಕುಡಿಯುವ ನೀರು ಅಗತ್ಯವಾಗಿದೆ. ಈ ನಿಷೇಧದಿಂದಾಗಿ ಜನ ಸಾಮಾನ್ಯರು ಹಾಗೂ ವರ್ತಕರಿಗೆ ತೊಂದರೆಯಾಗಲಿದೆ. ಆರೋಗ್ಯಕ್ಕೆ ಹಾನಿಕಾರಕವೆಂದು ವೈಜ್ಞಾನಿಕವಾಗಿ ಸಾಬೀತಾಗಿರುವ ತಂಪು ಪಾನೀಯಗಳು ಅದೇ ಪ್ಲಾಸ್ಟಿಕ್ ಬಾಟಲಿನಲ್ಲಿ ನಿರ್ಬಂಧವಿಲ್ಲದೆ ಮಾರಾಟವಾಗುತ್ತಿದೆ. ಇದಕ್ಕೆ ಯಾವುದೇ ಬ್ಯಾನ್‍ಗಳಿಲ್ಲ. ಆದರೆ, ಮಾನವನ ಜೀವಕ್ಕೆ ಅಗತ್ಯವಾದ ಕುಡಿಯುವ ನೀರಿನ ಪ್ಲಾಸ್ಟಿಕ್ ಬಾಟಲ್‍ಗಳನ್ನೇ ನಿಷೇಧಿಸಿರುವುದು ಮಲತಾಯಿ ಧೋರಣೆ ಎಂದರು. ಜಿಲ್ಲೆಯ ನಾಗರಿಕರಾಗಿ,…

Read More

ಮಡಿಕೇರಿ ಡಿ.27 NEWS DESK : ಮಡಿಕೇರಿಯಿಂದ ಶಬರಿಮಲೆಗೆ ಮೂವರು ಮಾಲಾಧಾರಿಗಳು ಪಾದಯಾತ್ರೆಯನ್ನು ಹಮ್ಮಿಕೊಂಡಿದ್ದಾರೆ. ಮಾಲಾಧಾರಿಗಳಾದ ವೇಣು, ಅಪ್ಪಣ್ಣ ಹಾಗೂ ಸಂತೋಷ್ ಮಡಿಕೇರಿಯಿಂದ ಶಬರಿಮಲೆಗೆ ಪಾದಯಾತ್ರೆ ಆರಂಭಿಸಿದ್ದು,  ಸುಮಾರು 15 ದಿನಗಳು ಈ‌ ಪಾದಯಾತ್ರೆ ನಡೆಯಲಿದೆ.

Read More

ಮಡಿಕೇರಿ ಡಿ.26 NEWS DESK : 33/11 ಕೆ.ವಿ ಮೂರ್ನಾಡು ವಿದ್ಯುತ್ ವಿತರಣಾ ಉಪಕೇಂದ್ರದಿಂದ  ಹೊರಹೊಮ್ಮುವ ಈ2 ನಾಪೋಕ್ಲು ಹಾಗೂ ಈ5 ಹೊದ್ದೂರು ಫೀಡರ್‌ಗಳಲ್ಲಿ ದಿನಾಂಕ 27.12.2025ರಂದು ಬೆಳಿಗ್ಗೆ 10.00ರಿಂದ ಸಂಜೆ 5.00 ಗಂಟೆಯವರೆಗೆ ಕೊಡಗು ವಿದ್ಯುತ್ ಜಾಲದ ಬಲವರ್ಧನೆ ಕಾಮಗಾರಿ ಕೈಗೆತ್ತಿಕೊಳ್ಳುತ್ತಿರುವುದರಿಂದ ಸದರಿ ಮಾರ್ಗದಿಂದ ವಿದ್ಯುತ್ ಸರಬರಾಜಾಗುವ ಹೊದ್ದೂರು, ಕಬಡಗೇರಿ, ಕಕ್ಕಬ್ಬೆ, ಕೊಳಕೇರಿ, ಕುಂಜಿಲ, ಎಮ್ಮೆಮಾಡು, ನೆಲಜಿ, ಬಲ್ಲಮಾವಟಿ, ಪೆರೂರು, ನಾಪೋಕ್ಲು ಟೌನ್, ಕೊಟ್ಟಮುಡಿ, ಪಾಲೂರು, ಚೆರಿಯಪರಂಬು, ಹಳೆ ತಾಲೂಕು ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಈ ಮೇಲೆ ತಿಳಿಸಿರುವ ಸಮಯದಲ್ಲಿ ಹಾಗೂ ಸ್ಥಳದಲ್ಲಿ ವಿದ್ಯುತ್‌ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.

Read More

ಮಡಿಕೇರಿ ಡಿ.26 NEWS DESK :  ಪೊನ್ನಂಪೇಟೆ ವಿದ್ಯುತ್ ವಿತರಣಾ ಉಪಕೇಂದ್ರದಲ್ಲಿ 66/11 ಕೆ.ವಿ ನೂತನ ಬ್ರೇಕರ್‌ಗಳ ನಿರ್ವಾಹಣೆ ಕಾಮಗಾರಿಯನ್ನು ಕೈಗೆತ್ತಿಕೊಳ್ಳುತ್ತಿರುವುದರಿಂದ ಸದರಿ ಕೇಂದ್ರದಿಂದ ಹೊರಹೊಮ್ಮುವ F1-ನಲ್ಲೂರು, F2-ಬಾಳೆ, F4 ತಿತಿಮತಿ, F5-ಪಾಲಿಬೆಟ್ಟ, F6-ಬೇಗೂರು, F7-ಗೋಣಿಕೊಪ್ಪ, F8-ಪೊನ್ನಂಪೇಟೆ, F9-ಹಾತೂರು, F10-ಹೈಸೊಣ್ಣೂರು, ಫೀಡರ್‌ನಲ್ಲಿ ದಿನಾಂಕ 27.12.2025 ರಂದು ಬೆಳಿಗ್ಗೆ 10.00ರಿಂದ ಸಂಜೆ 4.00 ಗಂಟೆಯವರೆಗೆ ವಿದ್ಯುತ್ ಸರಬರಾಜಾಗುವ ಪೊನ್ನಂಪೇಟೆ, ಗೋಣಿಕೊಪ್ಪ, ತಿತಿಮತಿ, ಹಾತೂರು, ಅರುವತ್ತೋಕ್ಲು, ಕಿರುಗೂರು, ದೇವರಪುರ, ಮಾಯಮುಡಿ ಧನುಗಾಲ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಈ ಮೇಲೆ ತಿಳಿಸಿರುವ ಸಮಯದಲ್ಲಿ ಹಾಗೂ ಸ್ಥಳದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.

Read More

ಮಡಿಕೇರಿ ಡಿ.26 NEWS DESK : ರಸ್ತೆ ದುರಸ್ತಿಗೆ ಆಗ್ರಹಿಸಿ ಮರಗೋಡು ಆಟೋ ಚಾಲಕರು ಮತ್ತು ಮಾಲೀಕರ ಸಂಘ ಹಾಗೂ ಗ್ರಾಮಸ್ಥರು ರಸ್ತೆ ತಡೆ ಪ್ರತಿಭಟನೆ ನಡೆಸಿದರು. ಮರಗೋಡು ಮುಖ್ಯರಸ್ತೆಯಲ್ಲಿ ಜಮಾಯಿಸಿದ ಸಂಘದ ಪ್ರಮುಖರು ಹಾಗೂ ಗ್ರಾಮಸ್ಥರು, ಅಧಿಕಾರಿಗಳ ವಿರುದ್ಧ ಘೋಷಣೆಗಳನ್ನು ಕೂಗಿ, ರಸ್ತೆ ತಡೆದು ಅಸಮಾಧಾನ ವ್ಯಕ್ತಪಡಿಸಿದರು. ಪ್ರತಿಭಟನೆಯ ಹಿನ್ನೆಲೆ ಗ್ರಾಮದಲ್ಲಿನ ವ್ಯಾಪಾರಸ್ಥರು ಅಂಗಡಿ ಮುಂಗಟ್ಟುಗಳನ್ನು ಮುಚ್ಚಿ ಹೋರಾಟಕ್ಕೆ ಸಂಪೂರ್ಣ ಬೆಂಬಲ ಸೂಚಿಸಿದರು. ಹದಗೆಟ್ಟ ರಸ್ತೆಯಿಂದ ಸಾರ್ವಜನಿಕರು, ವಾಹನ ಸವಾರರು ಹಾಗೂ ವ್ಯಾಪಾರಿಗಳು ತೀವ್ರ ಸಂಕಷ್ಟ ಅನುಭವಿಸುತ್ತಿದ್ದು, ಸರ್ಕಾರ ಹಾಗೂ ಸಂಬಂಧಪಟ್ಟ ಇಲಾಖೆಗಳ ನಿರ್ಲಕ್ಷ್ಯವೇ ಈ ಸ್ಥಿತಿಗೆ ಕಾರಣ ಎಂದು ಗ್ರಾಮಸ್ಥರು ಅಸಮಧಾನ ವ್ಯಕ್ತಪಡಿಸಿದರು. ಮರಗೋಡು, ಹೊಸ್ಕೇರಿ, ಕಟ್ಟೆಮಾಡು, ಅರೆಕಾಡು ಮತ್ತು ಹುಲಿತಾಳ ಗ್ರಾಮಕ್ಕೆ ಸಂಪರ್ಕ ಕಲ್ಪಿಸವ ರಸ್ತೆ ಅವ್ಯವಸ್ಥೆಯಿಂದ ಕೂಡಿದ್ದು, ಈ ರಸ್ತೆಯಲ್ಲಿ ಪ್ರತಿನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತಿದೆ. ಗುಂಡಿಮಯ ರಸ್ತೆಯಿಂದಾಗಿ ವಾಹನಗಳ ಹಾಗೂ ಪಾದಚಾರಿಗಳ ಸಂಚಾರಕ್ಕೆ ಸಮಸ್ಯೆಯಾಗಿದೆ. ಕಳಪೆ ರಸ್ತೆಯಿಂದಾಗಿ ಕೆಎಸ್‍ಆರ್‍ಟಿಸಿ ಬಸ್ಸುಗಳು ಗ್ರಾಮಕ್ಕೆ ಬರಲು ಹಿಂದೇಟು…

Read More