ಮಡಿಕೇರಿ ಮೇ 7 NEWS DESK : ಸುಂಟಿಕೊಪ್ಪದಲ್ಲಿ ಮೇ ಕೊನೆಯ ವಾರದಲ್ಲಿ ಆಯೋಜಿತವಾಗಿರುವ ಕೊಡಗು ಜಿಲ್ಲಾ 17ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಸಾಹಿತಿ, ಕವಿ, ಕತೆಗಾರ ಅಬ್ದುಲ್ ರಶೀದ್ ಆಯ್ಕೆಯಾಗಿದ್ದಾರೆ. ಕೊಡಗು ಪತ್ರಿಕಾ ಭವನ ಸಭಾಂಗಣದಲ್ಲಿ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಎಂ.ಪಿ ಕೇಶವ ಕಾಮತ್ ಅವರ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾ ಕಾರ್ಯಕಾರಿ ಮಂಡಳಿ ಸಭೆಯಲ್ಲಿ ಒಮ್ಮತದಿಂದ ಸರ್ವಾಧ್ಯಕ್ಷರ ಆಯ್ಕೆ ಮಾಡಲಾಯಿತು. ಕನ್ನಡ ಸಾಹಿತ್ಯ ಸಮ್ಮೇಳನವು ಸುಂಟಿಕೊಪ್ಪದಲ್ಲಿ ಮೇ.29 ಮತ್ತು 30 ರಂದು ನಡೆಯಲಿದೆ. ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆಯಾಗಿರುವ ಅಬ್ದುಲ್ ರಶೀದ್ ಅವರು ಕನ್ನಡದ ಬರಹಗಾರರು, ಕವಿ ಮತ್ತು ಅನುವಾದಕ. 2004ರಲ್ಲಿ ಅವರು ಜೀವಮಾನ ಸಾಧನೆಗಾಗಿ ಸಾಹಿತ್ಯ ಅಕಾಡೆಮಿಯ ಸುವರ್ಣ ಮಹೋತ್ಸವ ಪ್ರಶಸ್ತಿ ಪುರಸ್ಕøತರಾಗಿದ್ದಾರೆ. ಅಬ್ದುಲ್ ರಶೀದ್ ಅವರು ಆಲ್ ಇಂಡಿಯಾ ರೇಡಿಯೋದಲ್ಲಿ ಕಾರ್ಯಕ್ರಮ ಅಧಿಕಾರಿಯಾಗಿ ಕೆಲಸ ಮಾಡಿದ್ದಾರೆ. ಅವರು ಮೈಸೂರು ಆಕಾಶವಾಣಿಯಲ್ಲಿ ಕಾರ್ಯಕ್ರಮ ನಿರ್ದೇಶಕರಾಗಿದ್ದರು. ಇವರು ಕಳೆದ 2025ನೇ ಸಾಲಿನ ಫೆs.28ರಂದು ಮೈಸೂರು ಆಕಾಶವಾಣಿಯಿಂದ…
ಲೇಖಕ: admin
ಮಡಿಕೇರಿ ಮೇ 7 NEWS DESK : ಕರ್ನಾಟಕ, ಕೇರಳ ಹಾಗೂ ತಮಿಳುನಾಡು ರಾಜ್ಯಗಳನ್ನು ಒಳಗೊಂಡ ಗ್ರೀನ್ ಜಿಂಜರ್ ಡೀಲರ್ಸ್ ಅಸೋಸಿಯೇಷನ್ನ ಮಹಾ ಸಭೆ ಪೊನ್ನಂಪೇಟೆಯ ಖಾಸಗಿ ರೆಸಾರ್ಟ್ನಲ್ಲಿ ನಡೆಯಿತು. ಮಹಾಸಭೆಯನ್ನು ಉದ್ದೇಶಿಸಿ ಸಾಬು ಐಪು ಮಾತನಾಡಿದರು. ಅಸೋಸಿಯೇಷನ್ನ ಕೋಶಾಧಿಕಾರಿ ಮಸೂದ್ ಅವರು ಲೆಕ್ಕ ಪತ್ರ ಮಂಡಿಸಿದರು. ಸುಲೈಮಾನ್ ಸಿ.ಬಿ, ಜಾಕೋಬ್, ಮನು ಕೆ.ಜಿ.ಟಿ, ಅವರುಗಳು ಸಭೆಯನ್ನು ಉದ್ದೇಶಿಸಿ ಮಾತನಾಡಿ ಮುಂದಿನ ಕಾರ್ಯ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಿದರು. ಇದೇ ಸಂದರ್ಭ ನೂತನ ಸಾಲಿನ ಅಧ್ಯಕ್ಷರಾಗಿ ಸಾಬು ಐಪು, ಪ್ರಧಾನ ಕಾರ್ಯದರ್ಶಿಯಾಗಿ ಬಟ್ಟಕಾಳ0ಡ ರಾಜ, ಕೋಶಾಧಿಕಾರಿಯಾಗಿ ಜಾಯ್ ಪಿ.ವಿ.ಜೆ, ಉಪಾಧ್ಯಕ್ಷರಾಗಿ ಜೋಬಿ, ಮೊಹಮ್ಮದ್ ನಹೀಸ್, ಮನು ಕೆ.ಜಿ.ಟಿ, ಅವರುಗಳನ್ನು ಆಯ್ಕೆ ಮಾಡಲಾಯಿತು. ಕಾರ್ಯದರ್ಶಿಗಳಾಗಿ ಮಸೂದ್, ಜೇಕಬ್, ಬಾಲು ಕುಶಾಲನಗರ ಅವರುಗಳು ಆಯ್ಕೆಯಾದರು. ಚುನಾವಣಾ ಉಸ್ತುವಾರಿಯಾಗಿ ಕೇರಳ ವಯನಾಡ್ ಜಿಲ್ಲೆಯ ಗ್ರೀನ್ ಜಿಂಜರ್ ವ್ಯಾಪಾರಿಗಳ ಸಮನ್ವಯ ಸಮಿತಿಯ ಪ್ರಧಾನ ಕಾರ್ಯದರ್ಶಿ ಕೆ.ಉಸ್ಮಾನ್ ಕಾರ್ಯನಿರ್ವಹಿಸಿದರು.
ಮಡಿಕೇರಿ ಮೇ 7 NEWS DESK : ಹಾಕಿ ಕ್ರೀಡಾ ಪ್ರೇಮಿಗಳನ್ನು ತಿಂಗಳ ಕಾಲ ರಂಜಿಸಿದ ನಾಪೋಕ್ಲುವಿನ ಚೇನಂಡ ಕಪ್ ಹಾಕಿ ಉತ್ಸವದ ಹಂತದಲ್ಲಿಯೇ, “ಗೋಲಿಗೊಂದು ಗಿಡ” ಎನ್ನುವ ಚಿಂತನೆಯೊಂದಿಗೆ ಹಾಕಿ ಉತ್ಸವ ಆಯೋಜನಾ ಸಮಿತಿ ಸದ್ದುಗದ್ದಲವಿಲ್ಲದೆ ಜಿಲ್ಲೆಯ ವಿವಿಧೆಡೆಗಳಲ್ಲಿ 2200ಕ್ಕೂ ಹೆಚ್ಚಿನ ವೃಕ್ಷಾರೋಪಣ ಮಾಡುವ ಮೂಲಕ ಹಸಿರ ಪರಿಸರ ಸಂರಕ್ಷಣೆಗೆ ವಿಶಿಷ್ಟವಾದ ಕೊಡುಗೆಯನ್ನು ನೀಡಿದೆ. ಸುದ್ದಿಗೋಷ್ಠಿಯಲ್ಲಿ ಚೇನಂಡ ಕಪ್ ಹಾಕಿ ನಮ್ಮೆಯ ಆಯೋಜನಾ ಸಮಿತಿಯ ಪದಾಧಿಕಾರಿಗಳು ಉತ್ಸವದ ಯಶಸ್ವಿ ಆಯೋಜನೆಗೆ ಸಹಕರಿಸಿದ ಸರ್ವರಿಗೂ ಕೃತಜ್ಞತೆಗಳನ್ನು ಸಲ್ಲಿಸಿ ಮಾತನಾಡಿ, ಚೇನಂಡ ಕಪ್ ಹಾಕಿ ಉತ್ಸವದಲ್ಲಿ ಪ್ರದರ್ಶನ ಪಂದ್ಯಗಳನ್ನು ಒಳಗೊಂಡಂತೆ ಒಟ್ಟು 385 ಪಂದ್ಯಗಳು ನಡೆದು 1520 ಗೋಲುಗಳು ದಾಖಲಾಗಿದೆ. ಗೋಲಿಗೊಂದು ಗಿಡ ಎನ್ನುವ ನಮ್ಮ ಪರಿಕಲ್ಪನೆಯನ್ನು ಮೀರಿ ಹೆಚ್ಚಿನ ಪ್ರಮಾಣದ ಗಿಡಗಳನ್ನು ವಿವಿಧೆಡೆಗಳಲ್ಲಿ ನೆಟ್ಟು, ಅವುಗಳ ಬೆಳವಣಿಗೆಯತ್ತ ನಿಗಾ ವಹಿಸಲಾಗಿದೆಯೆಂದು ಮಾಹಿತಿಯನ್ನಿತ್ತರು. ಚೇನಂಡ ಕುಟುಂಬಸ್ಥರ ಗೋಮಾಳ ಜಾಗದಲ್ಲಿ ನೆಟ್ಟ ಗಿಡಗಳು ಚೆನ್ನಾಗಿ ಬೆಳೆಯುತ್ತಿರುವ ಬಗ್ಗೆ ಸಂತಸ ವ್ಯಕ್ತಪಡಿಸಿದ ಅವರು, ದಕ್ಷಿಣ ಕೊಡಗಿನ…
ಮಡಿಕೇರಿ NEWS DESK ಮೇ 7 : ಕೊಡಗು ಜಿಲ್ಲೆಯ ಏಳು ಭದ್ರಕಾಳಿ ನೆಲೆಯ ತಕ್ಕ ಮುಖ್ಯಸ್ಥರು ಪಾಡಿ ಶ್ರೀ ಇಗ್ಗುತ್ತಪ್ಪ ದೇವಾಲಯದಲ್ಲಿ ಮಳೆಗಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಕೊಡಗು ಜಿಲ್ಲೆಯಲ್ಲಿ ಮಳೆಯ ಕೊರತೆಯಿಂದ ತಾಪಮಾನ ಹೆಚ್ಚಾಗುತ್ತಿದೆ. ಕುಡಿಯುವ ನೀರಿನ ಕೊರತೆಯೂ ಎದುರಾಗುತ್ತಿದ್ದು, ಮಳೆ ಅನಿವಾರ್ಯವಾಗಿದೆ. ಸಕಲ ಜೀವಸಂಕುಲಕ್ಕೆ ನೀರಿನ ಅಗತ್ಯವಿದ್ದು, ಉತ್ತಮ ಮಳೆ ಬೆಳೆಯಾಗಲೆಂದು ಪ್ರಾರ್ಥಿಸಿದರು. ಕಾಟಕೇರಿ, ಗಾಳಿಬೀಡು, ಇಬ್ನಿವಳವಾಡಿ, ಮಕ್ಕಂದೂರ್, ಹಾಲೇರಿ, ಕೆದಕಲ್, ಮದೆನಾಡ್ ಸೇರಿದಂತೆ ಏಳು ಭದ್ರಕಾಳಿ ನೆಲೆಗಳ ಪ್ರಮುಖರು ಕೊಡವ ಸಾಂಪ್ರದಾಯಿಕ ಉಡುಪಿನಲ್ಲಿ ತೆರಳಿ ಪಾಡಿ ಶ್ರೀ ಇಗ್ಗುತ್ತಪ್ಪ ಸನ್ನಿಧಿಯಲ್ಲಿ ಬೈವಾಡ್ ಸೇವೆಯನ್ನು ಸಮರ್ಪಿಸಿದರು.
ಮಡಿಕೇರಿ ಮೇ 7 NEWS DESK : ಜೀವನದ ಉನ್ನತ ಹಂತಕ್ಕೇರಲು ಕಲಿಕೆ ಒಂದೇ ಗುರಿಯಾಗಬೇಕು. ಆ ನಿಟ್ಟಿನಲ್ಲಿ ಮಹಿಳೆಯರು ಹೊಸ ಕೌಶಲ್ಯ ಕಲಿಯುವ ಮೂಲಕ ವೃತ್ತಿ ಜೀವನದಲ್ಲಿ ಮತ್ತು ವೈಯಕ್ತಿಕ ಜೀವನದಲ್ಲಿ ಗೌರವ ಹಾಗೂ ಅವಕಾಶ ಗಿಟ್ಟಿಸಿಕೊಳ್ಳಬೇಕು ಎಂದು ಮಡಿಕೇರಿ ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ ಅವರು ಕರೆ ನೀಡಿದರು. ಬೆಂಗಳೂರಿನ ನಬಾರ್ಡ್ ಸಂಸ್ಥೆ ವತಿಯಿಂದ ಮೈಸೂರಿನ ಓಡಿಪಿ ಸಂಸ್ಥೆಯ ಸಹಯೋಗದಲ್ಲಿ ನಗರದ ದಾಸವಾಳ ರಸ್ತೆಯಲ್ಲಿರುವ ಬಸಪ್ಪ ಶಿಶುವಿಹಾರ ಸಭಾಂಗಣದಲ್ಲಿ ಒಂದು ತಿಂಗಳ ಕಾಲ ನಡೆಯಲಿರುವ ಕಿರು ಉದ್ಯಮಶೀಲತೆ ಅಭಿವೃದ್ಧಿ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಅವರು ಮಾತನಾಡಿದರು. ಸಂಘ-ಸಂಸ್ಥೆಗಳು ಮಹಿಳೆಯರ ಕೌಶಲ್ಯವನ್ನು ವೃದ್ಧಿಪಡಿಸಲು ಸಹಕಾರಿಯಾಗಿದೆ. ಸಾಧನೆಯ ಹಾದಿಯಲ್ಲಿ ಒತ್ತಡ ಸಹಜ. ಆದರೆ ಶಾಂತ ಮತ್ತು ನಗುಮುಖದ ಮನಸ್ಥಿತಿಯು ಆತಂಕವನ್ನು ಕಡಿಮೆಮಾಡಿ ಸರಿಯಾದ ನಿರ್ಧಾರ ತೆಗೆದುಕೊಳ್ಳಲು ಸಹಕರಿಸುತ್ತದೆ. ಅಲ್ಲದೇ ಮುಖದಲ್ಲಿನ ನಗು ನಮ್ಮಲ್ಲಿರುವ ಧನಾತ್ಮಕ ಚಿಂತನೆ ಮತ್ತು ಆತ್ಮವಿಶ್ವಾಸವನ್ನು ಹೆಚ್ಚಿಸಿ ಸಮಾಜದಲ್ಲಿ ಅಥವಾ ಕೆಲಸದ ಸ್ಥಳದಲ್ಲಿ ಗೌರವವನ್ನು ತಂದುಕೊಡುತ್ತದೆ. ಕಷ್ಟಗಳನ್ನು…
ಮಡಿಕೇರಿ ಮೇ 6 NEWS DESK : ಸಂತಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರವು ರಾಜ್ಯ ಮಟ್ಟದ ತತ್ವಪದ ವಿಮರ್ಶಾ ಲೇಖನ ಸ್ಪರ್ಧೆಯನ್ನು ಏರ್ಪಡಿಸಲು ಉದ್ದೇಶಿಸಿದೆ. 18 ರಿಂದ 40 ವರ್ಷ ವಯೋಮಿತಿಯುಳ್ಳವರು ಈ ಸ್ಪರ್ಧೆಯಲ್ಲಿ ಭಾಗವಹಿಸಬಹುದು. ಸ್ಪರ್ಧೆಗೆ ಅಧ್ಯಯನ ಕೇಂದ್ರವು ನೀಡಿರುವ ವಿಷಯಗಳಲ್ಲಿ ಯಾವುದಾದರು ಒಂದು ವಿಷಯವನ್ನು ಆಯ್ಕೆ ಮಾಡಿ ವಿಮರ್ಶಾ ಲೇಖನವನ್ನು ರಚಿಸಿ ಸ್ಪರ್ಧೆಗೆ ಆಹ್ವಾನ ನೀಡಿದ ದಿನಾಂಕದಿಂದ ಒಂದು ತಿಂಗಳ ಒಳಗೆ ಅಂದರೆ ಜೂನ್, 05 ರೊಳಗೆ ಭಾಗವಹಿಸುವ ಸ್ಪರ್ಧಿಯು ಅರ್ಜಿ ಮತ್ತು ವಿಮರ್ಶಾ ಲೇಖನವನ್ನು ಸಂತಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರ, ಕಲಾಗ್ರಾಮ, ಮಲ್ಲತ್ತಹಳ್ಳಿ, ಬೆಂಗಳೂರು-560056 ಈ ವಿಳಾಸಕ್ಕೆ ಕಳುಹಿಸಿಕೊಡಬೇಕು. ಅರ್ಜಿಯನ್ನು ಮತ್ತು ಲೇಖನವನ್ನು ಅಂಚೆ, ಕೊರಿಯರ್, ಇ-ಮೇಲ್ ಅಥವಾ ಖುದ್ದಾಗಿ ಸಲ್ಲಿಸಬಹುದು. ಅರ್ಜಿ ನಮೂನೆಯನ್ನು ವೆಬ್ಸೈಟ್ https://kanakadasaresearchcenter.karnataka.gov.in/ ನಲ್ಲಿ ಅಪ್ಲೋಡ್ ಮಾಡಲಾಗಿದ್ದು, ಅರ್ಜಿಯನ್ನು ವೆಬ್ಸೈಟ್ನಲ್ಲಿ ಡೌನ್ಲೋಡ್ ಮಾಡಿಕೊಳ್ಳಬಹುದು. ಹೆಚ್ಚಿನ ಮಾಹಿತಿಗೆ 9743545865 ನ್ನು ಸಂಪರ್ಕಿಸಬಹುದು ಎಂದು ಬೆಂಗಳೂರು ಸಂತಕವಿ ಕನಕದಾಸ ಮತ್ತು…
ಮಡಿಕೇರಿ ಮೇ 6 NEWS DESK : ಕನ್ನಡ ಸಾಹಿತ್ಯ ಪರಿಷತ್ತು ಕನ್ನಡ ಸಾಹಿತ್ಯಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಿರಂತರವಾಗಿ ಮಾಡುವ ಮೂಲಕ ಕನ್ನಡದ ಅಸ್ಮಿತೆಯನ್ನು ಉಳಿಸಿ ಬೆಳೆಸಿಕೊಂಡು ಬಂದಿದೆ ಎಂದು ಭಾಗಮಂಡಲದ ಕಾವೇರಿ ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕ ಬಿ.ಬಿ.ಶಿವಪ್ಪ ನುಡಿದರು. ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮಡಿಕೇರಿಯ ಪತ್ರಿಕಾ ಭವನದಲ್ಲಿ ಏರ್ಪಡಿಸಿದ 112ನೇ ಪರಿಷತ್ ಸಂಸ್ಥಾಪನ ದಿನದ ಮಹತ್ವದ ಕುರಿತು ಉಪನ್ಯಾಸ ನೀಡುತ್ತಿದ್ದರು. ಮುಂದುವರೆದ ಅವರು ಕನ್ನಡ ಸಾಹಿತ್ಯ ಪರಿಷತ್ ಎಂದೊಡನೆ ಕನ್ನಡಿಗರಲ್ಲಿ ರೋಮಾಂಚನವಾಗುತ್ತದೆ ಯಾವ ಉದ್ದೇಶದಿಂದ 112 ವರ್ಷಗಳ ಹಿಂದೆ ನಾಲ್ವಡಿ ಕೃಷ್ಣರಾಜ ಒಡೆಯರ್ ಮತ್ತು ಸರ್ ಎಂ ವಿಶ್ವೇಶ್ವರಯ್ಯ ಅವರ ಚಿಂತನೆಯಿಂದ ಕನ್ನಡ ಸಾಹಿತ್ಯ ಪರಿಷತ್ ಪ್ರಾರಂಭವಾಯಿತೋ ಆ ಉದ್ದೇಶ ಸಫಲವಾಗಿದೆ. ಕನ್ನಡ ನಾಡು-ನುಡಿ, ಆಚಾರ-ವಿಚಾರ, ಸಾಹಿತ್ಯ-ಸಂಸ್ಕೃತಿ ಉಳಿಸಿ ಬೆಳೆಸುವ ಕಾರ್ಯಕ್ರಮ ಕನ್ನಡ ಸಾಹಿತ್ಯ ಪರಿಷತ್ ಮಾಡಿಕೊಂಡು ಬರುತ್ತಿದೆ ಎಂದರು. ಯುವಜನರು ಹೆಚ್ಚು ಹೆಚ್ಚು ಸಾಹಿತ್ಯಿಕ ವಿಚಾರಗಳಲ್ಲಿ ತೊಡಗಿಸಿಕೊಳ್ಳಬೇಕು ಎಲ್ಲಿ ಹೆಚ್ಚು ಯುವಜನರು…
ಕುಶಾಲನಗರ ಮೇ 6 NEWS DESK : ಕೂಡಿಗೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಭುವನಗಿರಿಯಲ್ಲಿ ಕುಶಾಲನಗರ ರೋಟರಿ ವತಿಯಿಂದ ರೂ.20 ಲಕ್ಷ ವೆಚ್ಚದಲ್ಲಿ ಸ್ಥಾಪಿಸಿರುವ ಹಸಿ ಕಸವನ್ನು ಗೊಬ್ಬರವಾಗಿ ಪರಿವರ್ತಿಸುವ ಘಟಕಕ್ಕೆ ರೋಟರಿ 3181 ಜಿಲ್ಲಾ ರಾಜ್ಯಪಾಲ ಪಿ.ಕೆ.ರಾಮಕೃಷ್ಣ ಹಾಗೂ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರು ಚಾಲನೆ ನೀಡಿದರು. ನಂತರ ಮಾತನಾಡಿದ ಶಾಸಕರು, ಕಸ ವಿಲೇವಾರಿ ಜವಾಬ್ದಾರಿ ಬಹು ಮುಖ್ಯವಾಗಿದ್ದು, ಇದನ್ನು ಸಮರ್ಪಕವಾಗಿ ನಿರ್ವಹಿಸುವಂತೆ ಸಲಹೆ ನೀಡಿದರು. ಮುಂದಿನ ದಿನಗಳಲ್ಲಿ ಭುವನಗಿರಿ ಕಸ ವಿಲೇವಾರಿ ಘಟಕದ ಅಭಿವೃದ್ಧಿ ಗೆ ಪೂರಕವಾದ ಯೋಜನೆಗಳನ್ನು ಕೈಗೊಂಡು ಅಭಿವೃದ್ಧಿ ಪಡಿಸಲಾಗುವುದು ಎಂದು ತಿಳಿಸಿದರು. ಈ ಸಂದರ್ಭ ಕುಶಾಲನಗರ ಪುರಸಭೆ ಮುಖ್ಯಾಧಿಕಾರಿ ಗಿರೀಶ್, ಎಸ್.ಎಲ್.ಎನ್ ಸಂಸ್ಥೆಯ ಪ್ರಮುಖರಾದ ವೆಂಚಟಾಚಲಂ ಹಾಜರಿದ್ದು, ಯೋಜನೆ ಬಗ್ಗೆ ಮಾತಾನಾಡಿದರು. ಕುಶಾಲನಗರ ರೋಟರಿ ಸಂಸ್ಥೆಯ ಸುವರ್ಣ ಮಹೋತ್ಸವ ಅಂಗವಾಗಿ ಸ್ವಚ್ಚ ಕುಶಾಲನಗರ ಅಭಿಯಾನಕ್ಕೆ ಎಸ್.ಎಲ್.ಎನ್ ನ ಸಿಎಸ್ಆರ್ ಫಂಡ್ ಮೂಲಕ 15 ಲಕ್ಷ ವೆಚ್ಚದಲ್ಲಿ ಯಂತ್ರವನ್ನು ಕೊಡುಗೆ ನೀಡಲಾಗಿದೆ. ಕುಶಾಲನಗರ…
ಗೋಣಿಕೊಪ್ಪ ಮೇ 6 NEWS DESK : “ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್” ರಾಷ್ಟ್ರೀಯ ಕಾರ್ಯಕ್ರಮ ಸಂಯೋಜಕ ನಿರ್ದೇಶಕರಾಗಿ ಬಿ.ಎನ್ ಪ್ರಕಾಶ್ ಅವರನ್ನು ನೇಮಕ ಮಾಡಲಾಗಿದೆ. ಸೀನಿಯರ್ ಚೇಂಬರ್ ಇಂಟನ್ರ್ಯಾಷನಲ್ ರಾಷ್ಟ್ರೀಯ ಅಧ್ಯಕ್ಷ ವಾಸುದೇವನ್ ನೇಮಕಾತಿ ಆದೇಶವನ್ನು ನೀಡಿದ್ದಾರೆ. ಕೇರಳದ ಕ್ಯಾಲಿಕೆಟ್ ನಲ್ಲಿ ಪ್ಯಾರಾ ಮೌಂಟ್ ಟವರ್ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಆದೇಶವನ್ನು ರಾಷ್ಟ್ರೀಯ ಅಧ್ಯಕ್ಷರು ವಲಯ ಅಧ್ಯಕ್ಷರ ಸಮ್ಮುಖದಲ್ಲಿ ಈ ನೇಮಕಾತಿಯನ್ನು ಘೋಷಿಸಿದ್ದಾರೆ. ಬಿ.ಎನ್.ಪ್ರಕಾಶ್ ಅವರು ಗೋಣಿಕೊಪ್ಪ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ 2025-26ನೇ ಸಾಲಿನ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿ ಅತ್ಯುತ್ತಮ ಕಾರ್ಯಕ್ರಮಗಳನ್ನು ನೀಡಿದ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗೋಣಿಕೊಪ್ಪಲು ಗ್ರಾಮ ಪಂಚಾಯಿತಿಯ ಸದಸ್ಯರಾಗಿ, ಪೊನ್ನಂಪೇಟೆ ಇಂಡಿಯನ್ ರೆಡ್ಕ್ರಾಸ್ ಸೊಸೈಟಿಯ ಅಧ್ಯಕ್ಷರಾಗಿ, ಚೇಂಬರ್ ಆಫ್ಕಾಮರ್ಸ್ ನಿರ್ದೇಶಕರಾಗಿ, ಮಚೆರ್ಂಟ್ ಬ್ಯಾಂಕ್ ನಿರ್ದೇಶಕರಾಗಿ ಮತ್ತು ಇತರ ಪ್ರಮುಖವಾದ ಹಲವು ಸಂಘ ಸಂಸ್ಥೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ.
ಗೋಣಿಕೊಪ್ಪ ಮೇ 6 NEWS DESK : ಅಕ್ಷಯ ಚಾರಿಟೇಬಲ್ ಟ್ರಸ್ಟ್ ವತಿಯಿಂದ ರಕ್ತದಾನ ಮತ್ತು ಅಂಗಾಂಗ ದಾನ ಶಿಬಿರ ಗೋಣಿಕೊಪ್ಪ ಸಮುದಾಯ ಆರೋಗ್ಯ ಕೇಂದ್ರದಲ್ಲಿ ನಡೆಯಿತು. ಗೋಣಿಕೊಪ್ಪ ಗ್ರಾಮ ಪಂಚಾಯಿತಿ, ಗೋಣಿಕೊಪ್ಪ ಸಮುದಾಯ ಆರೋಗ್ಯ ಕೇಂದ್ರ, ಇಂಡಿಯನ್ರೆಡ್ಕ್ರಾಸ್ ಸೊಸೈಟಿ ಪೊನ್ನಂಪೇಟೆ, ಗೋಣಿಕೊಪ್ಪ ಸಮುದಾಯ ಆರೋಗ್ಯ ಕೇಂದ್ರದ ಸಂಯುಕ್ತಾಶ್ರಯದಲ್ಲಿ ಅಂಗಾಂಗ ದಾನ ಮತ್ತು ರಕ್ತದಾನ ಶಿಬಿರ ಆಯೋಜಿಸಲಾಯಿತು. ಅಕ್ಷಯ ಚಾರಿಟೇಬಲ್ ಟ್ರಸ್ಟ್ ಸ್ಥಾಪಕ ಅಧ್ಯಕ್ಷ ಕೆ.ಕೆ.ಸೋಮಯ್ಯ ಸಭಾಧ್ಯಕ್ಷತೆಯಲ್ಲಿ ಗೋಣಿಕೊಪ್ಪ ಗ್ರಾಮ ಪಂಚಾಯಿತಿ ಅಧ್ಯಕ್ಷ ಕುಲ್ಲಚಂಡ ಪ್ರಮೋದ್ ಗಣಪತಿ ಮತ್ತು ಪತ್ರಕರ್ತ, ಸಮಾಜ ಸೇವಕ ಜಗದೀಶ್ ಜೋಡಬೀಟಿ ಶಿಬಿರಕ್ಕೆ ಚಾಲನೆ ನೀಡಿದರು. ನಂತರ ಮಾತನಾಡಿದ ಕುಲ್ಲಚಂಡ ಪ್ರಮೋದ್ ಗಣಪತಿ, ರಕ್ತದಾನದ ಶ್ರೇಷ್ಠತೆಯನ್ನು ಸಮಾಜಕ್ಕೆ ತಿಳಿಸುವ ಮೂಲಕ ಯುವ ಸಮುದಾಯದಲ್ಲಿ ಪ್ರೇರಣೆಯನ್ನು ತುಂಬಬೇಕಾಗಿದೆ. ಈ ಹಿನ್ನೆಲೆಯಲ್ಲಿ ಅಕ್ಷಯ ಚಾರಿಟೇಬಲ್ ಟ್ರಸ್ಟ್ ಕಾರ್ಯೋನ್ಮುಖವಾಗಿ ಜನರಡೆಗೆ ರಕ್ತದಾನ ಶಿಬಿರವನ್ನು ಕೊಂಡೊಯ್ಯುತ್ತಿರುವುದು ಉತ್ತಮ ಬೆಳವಣಿಗೆ ಎಂದು ಹೇಳಿದರು. ಕಥೆಗಾರ, ಪತ್ರಕರ್ತ ಜಗದೀಶ್ ಜೋಡುಬೀಟಿ ಮಾತನಾಡಿ, ರಕ್ತದಾನ ಮತ್ತು ಅಂಗಾಂಗ…






