ಲೇಖಕ: admin

ಮಡಿಕೇರಿ ಆ.15 NEWS DESK : ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ವತಿಯಿಂದ 78ನೇ ಸ್ವಾತಂತ್ರ‍್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಮಡಿಕೇರಿ ನಗರದ ಜಿಲ್ಲಾ ಕ್ರೀಡಾಂಗಣ ಸಮೀಪದ ನಾಡ್ ಮಂದ್ ನಲ್ಲಿ  ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರು, ಅತ್ಯಂತ ಸಣ್ಣ ಕೊಡವ ಬುಡಕಟ್ಟು ಜನಾಂಗ ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ದೊಡ್ಡ ಸಂಖ್ಯೆಯಲ್ಲಿ ತೊಡಗಿಸಿಕೊಂಡಿರುವುದು ಹೆಮ್ಮೆಯ ವಿಚಾರ. ತ್ಯಾಗ ಮನೋಭಾವದ ದೇಶಭಕ್ತ ಕೊಡವ ವೀರರು ಈ ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ್ದಾರೆ ಎಂದರು. ಆಂತರಿಕ ರಾಜಕೀಯ ಸ್ವ-ನಿರ್ಣಯದ ಹಕ್ಕುಗಳು, ನಮ್ಮ ಸಂವಿಧಾನದ ಆರ್ಟಿಕಲ್ 244 R/ w 6 ಮತ್ತು 8 ನೇ ಶೆಡ್ಯೂಲ್ ಅಡಿಯಲ್ಲಿ ಕೊಡವಲ್ಯಾಂಡ್ ಭೂ-ರಾಜಕೀಯ ಸ್ವಾಯತ್ತತೆಗಾಗಿ ಕೊಡವ ಜನಾಂಗೀಯ ಪ್ರಪಂಚದ ಸಾಂಪ್ರದಾಯಿಕ ಮತ್ತು ಅವಿಭಾಜ್ಯ ತಾಯ್ನಾಡನ್ನು ಸ್ವಯಂ ಆಳ್ವಿಕೆಗೆ ಒಳಪಡಿಸಬೇಕು. ಕೊಡವ ಜನಾಂಗೀಯ ಪಂಗಡಕ್ಕೆ ಎಸ್‌ಟಿ ಟ್ಯಾಗ್ ನೀಡಬೇಕು. ನಮ್ಮ ಸಂವಿಧಾನದ 25 ಮತ್ತು 26 ನೇ ವಿಧಿಗಳ ಅಡಿಯಲ್ಲಿ ಸಿಖ್ ಜನಾಂಗದ “ಕಿರ್ಪಾನ್” ಗೆ…

Read More

ಭಾಗಮಂಡಲ NEWS DESK  ಆ.15 : ಮಡಿಕೇರಿ ತಾಲ್ಲೂಕಿನ ಭಾಗಮಂಡಲ ಪೊಲೀಸ್ ಠಾಣಾ ವ್ಯಾಪ್ತಿಯ ಸಣ್ಣಪುಲಿಕೋಟು ಗ್ರಾಮದ ಮನೆಯೊಂದರಲ್ಲಿ ಅಕ್ರಮವಾಗಿ ನಾಡ ಬಂದೂಕುಗಳನ್ನು ತಯಾರಿಸಿ ಮಾರಾಟ ಮಾಡುತ್ತಿದ್ದ ಆರೋಪಿ ಹಾಗೂ ಬಂದೂಕು ಖರೀದಿ ಮಾಡಿದ ವ್ಯಕ್ತಿಗಳನ್ನು ಕೊಡಗು ಪೊಲೀಸರು ಬಂಧಿಸಿದ್ದಾರೆ. ಸಣ್ಣಪುಲಿಕೋಟು ಗ್ರಾಮದ ಬಾಡಿಗೆ ಮನೆಯಲ್ಲಿ ವಾಸವಿದ್ದ ಕೇರಳ ರಾಜ್ಯ ಇಡುಕ್ಕಿ ಜಿಲ್ಲೆ ಮೂಲದ ಸುರೇಶ್ (52) ಎಂಬಾತನೇ ಬಂಧಿತ ಆರೋಪಿ. ಈತನ ಮನೆ ಮೇಲೆ ದಾಳಿ ಮಾಡಿದಾಗ ಅಕ್ರಮವಾಗಿ ನಾಡ ಬಂದೂಕು ತಯಾರಿಸಲು ಬಳಸುತ್ತಿದ್ದ ಸಾಮಾಗ್ರಿಗಳು, 02 ನಾಡ ಬಂದೂಕು(ಎಸ್.ಬಿ.ಬಿ.ಎಲ್) ಮತ್ತು 01 ನಾಡ ಪಿಸ್ತೂಲ್ ಪತ್ತೆಯಾಗಿದ್ದು, ಪೊಲೀಸರು ವಶ ಪಡಿಸಿಕೊಂಡಿದ್ದಾರೆ. ಸುರೇಶ್ ಅಕ್ರಮವಾಗಿ ತಯಾರಿಸಿರುವ ನಾಡ ಬಂದೂಕುಗಳನ್ನು ಖರೀದಿ ಮಾಡಿದ್ದ ಕರಿಕೆ ಚೆತ್ತುಕಾಯ ಗ್ರಾಮದ ಎನ್.ಜೆ.ಶಿವರಾಮ (45), ಪಿರಿಯಾಪಟ್ಟಣದ ಮಾಗಳಿ ಗ್ರಾಮದ ಎಸ್.ರವಿ (35) ಹಾಗೂ ಭಾಗಮಂಡಲ ದೊಡ್ಡಪುಲಿಕೋಟು ಗ್ರಾಮದ ಕೋಟಿ (55) ಅವರನ್ನು ಕೂಡ ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಇವರುಗಳ ಬಳಿ ಇದ್ದ ತಲಾ ಒಂದು…

Read More

ಮಡಿಕೇರಿ ಆ.15 NEWS DESK : ಕಳೆದ ಜೂನ್ ಮತ್ತು ಜುಲೈ ತಿಂಗಳಲ್ಲಿ ಸುರಿದ ಧಾರಾಕಾರ ಮಳೆಗೆ ಜಿಲ್ಲೆಯ ರಸ್ತೆಗಳು ಹಾಳಾಗಿದ್ದು, ತ್ವರಿತಗತಿಯಲ್ಲಿ ಗುಂಡಿ ಮುಚ್ಚುವಂತೆ ಲೋಕೋಪಯೋಗಿ, ಪಂಚಾಯತ್ ರಾಜ್, ನೀರಾವರಿ ಹಾಗೂ ಪೌರಾಡಳಿತ  ಇಲಾಖೆಯ ಎಂಜಿನಿಯರ್ ಗಳಿಗೆ  ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜುಸ್ಪಷ್ಟ ಸೂಚನೆ ನೀಡಿದ್ದಾರೆ.  ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳ ಜತೆ ಸಭೆ ನಡೆಸಿದ ಸಚಿವರು ಕೊಡಗು ಜಿಲ್ಲೆಯಲ್ಲಿ ಸುರಿದ ಹೆಚ್ಚಿನ ಮಳೆಗೆ ರಸ್ತೆಗಳು ಗುಂಡಿಮಯವಾಗಿದ್ದು, ಸಾರ್ವಜನಿಕರಿಂದ ದೂರುಗಳು ಬರುತ್ತಿದ್ದು, ಕೂಡಲೇ ರಸ್ತೆ ಗುಂಡಿ ಮುಚ್ಚುವಂತೆ ಎಂಜಿನಿಯರ್ ಗಳಿಗೆ ತಾಕೀತು ಮಾಡಿದರು. ಈ ಬಗ್ಗೆ ವಿಷಯ ಪ್ರಸ್ತಾಪಿಸಿದ ಶಾಸಕ ಡಾ.ಮಂತರ್ ಗೌಡ  ಶನಿವಾರಸಂತೆ-ಕೊಡ್ಲಿಪೇಟೆ, ಕೂಡಿಗೆ-ಸೋಮವಾರಪೇಟೆ ಮಾರ್ಗದ ರಸ್ತೆಗಳು ಸೇರಿದಂತೆ ಹಲವು ರಸ್ತೆಗಳು ಗುಂಡಿ ಬಿದ್ದಿದ್ದು, ಸಾರ್ವಜನಿಕರಿಂದ ದೂರುಗಳು ಬರುತ್ತಿವೆ. ಆದ್ದರಿಂದ ಕೂಡಲೇ ಗುಂಡಿ ಮುಚ್ಚಬೇಕು ಎಂದು ನಿರ್ದೇಶನ ನೀಡಿದರು.  ಈ ಕುರಿತು ಮಾತನಾಡಿದ ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ಶಾಸಕರಾದ ಎ.ಎಸ್.ಪೊನ್ನಣ್ಣ ಹೆಚ್ಚಿನ…

Read More

ಮಡಿಕೇರಿ ಆ.15 NEWS DESK : ಮಡಿಕೇರಿ ಯೂತ್ ಹಾಸ್ಟೆಲ್ ಅಸೋಸಿಯೇಷನ್ ​​ಆಫ್ ಇಂಡಿಯಾದ ಮಡಿಕೇರಿ ಘಟಕದ ವತಿಯಿಂದ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಘಟಕದ ಕಚೇರಿಯಲ್ಲಿ ಘಟಕದ ಅಧ್ಯಕ್ಷ ಅಯ್ಯಣ್ಣ ಧ್ವಜಾರೋಹಣ ನೆರವೇರಸಿ, ಶುಭಹಾರೈಸಿದರು. ನಂತರ ಸ್ವಾತಂತ್ರ್ಯ ಹೋರಾಟಗಾರರಿಗೆ ಗೌರವ ನಮನ ಸಲ್ಲಿಸಲಾಯಿತು. 

Read More

ಕೊಡ್ಲಿಪೇಟೆ ಆ.15 NEWSDESK : “ಸ್ವಾತಂತ್ರ್ಯ ಸರ್ವರಿಗೂ ಸಮಾನವಾಗಿರಲಿ ” ಎಂಬ ಧ್ಯೇಯ ವಾಕ್ಯದೊಂದಿಗೆ 78ನೇ ಸ್ವಾತಂತ್ರ್ಯೋತ್ಸವವನ್ನು ಕೊಡ್ಲಿಪೇಟೆ ಎಸ್.ಕೆ.ಎಸ್.ಎಸ್.ಎಫ್ ವತಿಯಿಂದ ಸಂಭ್ರಮಂದ ಆಚರಿಸಲಾಯಿತು. ಹ್ಯಾಂಡ್ ಪೋಸ್ಟ್ ನಲ್ಲಿರುವ ಶಾಖಾ ಕಚೇರಿಯ ಮುಂಭಾಗದಲ್ಲಿ ನಡೆದ ಕಾರ್ಯಕ್ರಮದಲ್ಲಿ  ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ವೀರರನ್ನು ಸ್ಮರಿಸಿ, ದೇಶದ ಸೌಹಾರ್ದತೆಯ ಉಳಿವಿಗಾಗಿ, ಜಾತ್ಯಾತೀತ ಬಲಿಷ್ಠ ಭಾರತದ ನಿರ್ಮಾಣಕ್ಕಾಗಿ ಎಲ್ಲರೂ ಕೈ ಜೋಡಿಸೋಣ ಎಂಬ ಸಂದೇಶ ಸಾರಿದರು. ಬೇಡಗೊಟ್ಟ ಗ್ರಾಮ ಪಂಚಾಯತಿ ಸದಸ್ಯರಾದ ಹನೀಫ್ ಮಾತನಾಡಿ ದಿನದ ಮಹತ್ವದ ಕುರಿತು ವಿವರಿಸಿದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ರೈಸ್ ಮಿಲ್  ಮಾಲೀಕ ಸೋಮಣ್ಣ, ಮಸ್ಜಿದುನ್ನೂರ್ ಖತೀಬ ಶಾಫಿ ಫೈಝಿ, ಜುಮಾ ಮಸೀದಿ ಅಧ್ಯಕ್ಷ ಸಿದ್ದೀಕ್ ಹಾಜಿ, ತಜಲ್ಲಿಯಾತ್ ಮದ್ರಸ ಮುಖ್ಯೋಪಾಧ್ಯಾಯ ರಝಾಕ್ ಫೈಝಿ, ಮದ್ರಸದ ಗುರುಗಳಾದ, ಸ್ವಾಲಿಹ್ ರಹ್ಮಾನಿ, ನಾಸರ್ ಸಅದಿ, ಎಸ್.ವೈ.ಎಸ್ ಶಾಖಾಧ್ಯಕ್ಷ ಇಬ್ರಾಹಿಂ ಕೆ.ಎ, ಎಸ್.ಕೆ.ಎಸ್.ಎಸ್.ಎಫ್ ಕೊಡಗು ಜಿಲ್ಲಾ ಕೋಶಾಧಿಕಾರಿ ಬಾಸಿತ್ ಹಾಜಿ, ಆಮಿಲಾ ಉಪಾಧ್ಯಕ್ಷ ಅಬ್ದುಲ್ ರಹಮಾನ್, ಎಸ್.ವೈ.ಎಸ್ ಕಾರ್ಯದರ್ಶಿ ಮುಹಮ್ಮದ್ ಅಲಿ, ಹಿರಿಯರಾದ…

Read More

ಮೈಸೂರು ಆ.15 NEWS DESK : ಮೈಸೂರು-ಕೊಡಗು ಲೋಕಸಭೆ ಸದಸ್ಯರಾದ ಯದುವೀರ್ ಕೃಷ್ಣ ದತ್ತ ಚಾಮರಾಜ ಒಡೆಯರ್  ಕೃಷ್ಣ ರಾಜ ಸಾಗರಕ್ಕೆ ಬಾಗಿನ ಅರ್ಪಿಸಿದರು.

Read More

ಮಡಿಕೇರಿ ಆ.15 NEWS DESK : ಪೊನ್ನಂಪೇಟೆ ತಾಲ್ಲೂಕು ನಿಟ್ಟೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಣ್ಣನ ಹಾಡಿಗೆ ತೆರಳುವ ಸೇತುವೆ ಕಳೆದ ವರ್ಷ ಸುರಿದ ಭಾರೀ ಮಳೆಗೆ ಹಾನಿಗೀಡಾಗಿತ್ತು. ಈ ವರ್ಷದ ಧಾರಾಕಾರ ಮಳೆಗೆ ಸೇತುವೆಯೇ ಇಲ್ಲದಾಗಿದೆ. ಪ್ರಸ್ತುತ ಹಾಡಿ ನಿವಾಸಿಗಳು ಹೊಳೆ ದಾಟಿ ಮನೆ ಸೇರಲು ವಿದ್ಯುತ್ ಕಂಬಗಳನ್ನು ಅವಲಂಬಿಸಿದ್ದಾರೆ. ಕಳೆದ ವರ್ಷ ಸೇತುವೆ ಮುರಿದಾಗ ಸ್ಥಳಕ್ಕೆ ಭೇಟಿ ನೀಡಿದ್ದ ಅಧಿಕಾರಿಗಳು ಹೊಸ ಸೇತುವೆ ನಿರ್ಮಾಣದ ಭರವಸೆ ನೀಡಿದ್ದರು. ಆದರೆ ಭರವಸೆ ಭರವಸೆಯಾಗಿಯೇ ಉಳಿದು ಹೋಗಿದೆ. ಈ ವರ್ಷವೂ ಅಧಿಕಾರಿಗಳು ಬಂದು ಹೋಗಿದ್ದಾರೆ, ಆದರೆ ಸೇತುವೆ ಮಾತ್ರ ಮರೀಚಿಕೆಯಾಗಿದೆ. ಹಾಡಿ ನಿವಾಸಿಗಳು ವಿದ್ಯುತ್ ಕಂಬಗಳನ್ನೇ ಕಾಲು ಸೇತುವೆಯನ್ನಾಗಿ ಮಾಡಿಕೊಂಡಿದ್ದಾರೆ. ಇಂದು 78ನೇ ಸ್ವಾತಂತ್ರ್ಯ ದಿನದ ಸಂಭ್ರಮದ ಹಿನ್ನೆಲೆ ಹಾಡಿ ನಿವಾಸಿಗಳು ರಾಷ್ಟ್ರಧ್ವಜದೊಂದಿಗೆ ಸಂಭ್ರಮಿಸಿದರು. “ಸೇತುವೆ ಇಲ್ಲದ ಹಾಡಿ ನೋಡಿ, ನಮ್ಮ ಪಾಡು ನೋಡಿ” ಎಂದು ಕ್ಯಾಮರಾಕ್ಕೆ ಫೋಸ್ ನೀಡಿ ಆಡಳಿತ ವ್ಯವಸ್ಥೆಯನ್ನು ಅಣಕಿಸಿದರು.

Read More

ಮಡಿಕೇರಿ ಆ.15 NEWS DESK : ನಾಪೋಕ್ಲುವಿನ ನಾಲ್ನಾಡ್ ಪ್ಲಾಂಟರ್ಸ್ ರಿಕ್ರಿಯೇಷನ್ ಅಸೋಸಿಯೇಷನ್ ವತಿಯಿಂದ 78ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಧ್ವಜಾರೋಹಣದ ನಂತರ 26 ವರ್ಷಗಳ ಕಾಲ ಸೇನೆಯಲ್ಲಿ ಸೇವೆ ಸಲ್ಲಿಸಿದ ನಿವೃತ್ತ ಯೋಧರಾದ ನಾಪೋಕ್ಲು ನಿವಾಸಿ ಜೆಸಿಒ ಕಂಗಂಡ ರೋಹನ್ ಈರಪ್ಪ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ನಾಪೋಕ್ಲುವಿನ ನಾಲ್ನಾಡ್ ಪ್ಲಾಂಟರ್ಸ್ ರಿಕ್ರಿಯೇಷನ್ ಅಸೋಸಿಯೇಷನ್ ನ ಕಚೇರಿ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಸೋಸಿಯೇಷನ್ ಅಧ್ಯಕ್ಷ ಬಾಚಮಂಡ ಪಿ.ಲವ ಚಿಣ್ಣಪ್ಪ, ಉಪಾಧ್ಯಕ್ಷರಾದ ಅರೆಯಡ ಎಂ.ರತ್ನ ಪೆಮ್ಮಯ್ಯ, ಕಾರ್ಯದರ್ಶಿ ಚಿಯಕಪೂವಂಡ ಎಂ.ಅಪ್ಪಚ್ಚು, ಜಂಟಿ ಕಾರ್ಯದರ್ಶಿ ಕೇಟೋಳಿರ ಎಸ್.ಹರೀಶ್ ಪೂವಯ್ಯ, ಖಜಾಂಚಿ ಕರವಂಡ ಪಿ.ಬೆಲ್ಲು ಬೆಳ್ಯಪ್ಪ, ನಾಪೋಕ್ಲು ಕೊಡವ ಸಮಾಜದ ಕಲ್ಚರಲ್ ಆಂಡ್ ಸ್ಪೋಟ್ರ್ಸ್ ಅಸೋಸಿಯೇಷನ್ ಅಧ್ಯಕ್ಷ ಬಿದ್ದಾಟಂಡ ಎಸ್.ತಮ್ಮಯ್ಯ, ಕೊಡವ ಸಮಾಜದ ಕಾರ್ಯದರ್ಶಿ ಕುಲ್ಲೇಟಿರ ಅಜಿತ್ ನಾಣಯ್ಯ, ಸೌಹಾರ್ದ ಕ್ರೆಡಿಟ್ ಸಹಕಾರ ಸಂಘದ ಅಧ್ಯಕ್ಷ ಅಪ್ಪಾರಂಡ ಸುಧೀರ್ ಹಾಗೂ ರಿಕ್ರಿಯೇಷನ್ ಅಸೋಸಿಯೇಷನ್ ನ ನಿರ್ದೇಶಕರು ಹಾಗೂ ಸದಸ್ಯರು ಉಪಸ್ಥಿತರಿದ್ದರು.  

Read More

ಕುಶಾಲನಗರ, ಆ.15 NEWS DESK : ಕೂಡುಮಂಗಳೂರು(ಕೂಡ್ಲೂರು)  ಸರ್ಕಾರಿ ಪ್ರೌಢಶಾಲೆಯಲ್ಲಿ ಎಸ್.ಡಿ.ಎಂ.ಸಿ., ವಿದ್ಯಾರ್ಥಿ ಸಂಘ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆ ಹಾಗೂ ಎನ್‌ಎಸ್‌ಎಸ್ ಘಟಕದ ವತಿಯಿಂದ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ರಾಷ್ಟ್ರಧ್ವಜಾರೋಹಣ ನೆರವೇರಿಸಿದ ಎಸ್.ಡಿ.ಎಂ.ಸಿ ಅಧ್ಯಕ್ಷ ಎ.ಎಂ.ಜವರಯ್ಯ ಮಾತನಾಡಿ, ಪ್ರತಿಯೊಬ್ಬರೂ ರಾಷ್ಟ್ರದ ಏಳ್ಗೆಗೆ ಪಣತೊಡಬೇಕು ಎಂದರು. ಶಾಲಾ ಮುಖ್ಯೋಪಾಧ್ಯಾಯ ಟಿ.ಜಿ.ಪ್ರೇಮಕುಮಾರ್ ಮಾತನಾಡಿ, ಸ್ವಾತಂತ್ರ್ಯ ಗಳಿಸಲು ಶ್ರಮಿಸಿದ ಯೋಧರನ್ನು ನಾವು ಗೌರವಿಸುದರೊಂದಿಗೆ ರಾಷ್ಟ್ರದ ಏಕತೆ, ಸಮಗ್ರತೆಗೆ ಎಲ್ಲರೂ ಶ್ರಮಿಸಬೇಕು ಎಂದರು. ವಿದ್ಯಾರ್ಥಿಗಳಿಗೆ‌ ಬಹುಮಾನ ವಿತರಿಸಿ ಮಾತನಾಡಿದ ಕೂಡ್ಲೂರು ಗ್ರಾಮ ದೇವಾಲಯ ಸಮಿತಿಯ ಕಾರ್ಯದರ್ಶಿ ಕೆ.ಎನ್.ಪವನ್ ಕುಮಾರ್, ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದು ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದರು. ಶಿಕ್ಷಕಿ ಎಸ್.ಎಂ.ಗೀತಾ, ಸ್ವಾತಂತ್ರ್ಯ ಚಳವಳಿಯ ಹೋರಾಟ ಹಾಗೂ ರಾಷ್ಟ್ರ ನಾಯಕರ ಕುರಿತು ತಿಳಿಸಿದರು. ಎಸ್.ಡಿ.ಎಂ.ಸಿ ಸದಸ್ಯರಾದ ಕೆ.ಎಸ್.ರಾಜಾಚಾರಿ,ಶೃತಿ, ಶ್ರೀನಿವಾಸಚಾರಿ, ಶಾಲೆಯ ಶಿಕ್ಷಕರಾದ‌ ಕೆ.ಗೋಪಾಲಕೃಷ್ಣ, ದಯಾನಂದ ಪ್ರಕಾಶ್, ಬಿ.ಡಿ.ರಮ್ಯ, ಬಿ.ಎನ್.ಸುಜಾತ,, ಅನ್ಸಿಲಾ ರೇಖಾ, ಎಸ್ ಎಂ ಗೀತಾ, ದೈಹಿಕ ಶಿಕ್ಷಣ ಶಿಕ್ಷಕಿ…

Read More

ವಿರಾಜಪೇಟೆ ಆ.15 NEWS DESK : ವಿರಾಜಪೇಟೆಯ ವಿದ್ಯಾನಗರ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ 78ನೇ ಸ್ವಾತಂತ್ರೋತ್ಸವವನ್ನು ಆಚರಿಸಲಾಯಿತು. ಸಂಘದ ಅಧ್ಯಕ್ಷ ಮುನೀರ್ ಧ್ವಜಾರೋಹಣ ನೆರವೇರಿಸಿದರು.  ವಿರಾಜಪೇಟೆ ಕೆ.ಇ.ಬಿ ಇಲಾಖೆಯ ಲೈನ್ ಮ್ಯಾನ್ ಸಿಬ್ಬಂದಿಗಳನ್ನು ಸಂಘದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭ ಸಂಘದ ಉಪಾಧ್ಯಕ್ಷ ಸಿ.ಬಿ.ಅಬ್ರಹಾಂ, ಕಾರ್ಯದರ್ಶಿ ನೌಶಾದ್, ಸದಸ್ಯರಾದ ಸೈಫುದಿನ್, ಮುಕ್ತಾರ್, ಕಬೀರ್, ನವಾಜ್, ಮಣಿ, ಲತೀಫ್ ಹಾಗೂ ಸಾರ್ವಜನಿಕರು ಹಾಜರಿದ್ದರು. 

Read More