ಲೇಖಕ: admin

 ಮಡಿಕೇರಿ ಆ.15 NEWS DESK : ವಿರಾಜಪೇಟೆ ಕಾವೇರಿ ಕಾಲೇಜಿನಲ್ಲಿ 78ನೇ ಸ್ವಾತಂತ್ರ್ಯ ಉತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ಜೈ ಭಾರತ್ ಸೇನ ತರಬೇತಿ ಸಂಸ್ಥೆಯ ಮುಖ್ಯಸ್ಥರು ಹಾಗೂ ನಿವೃತ್ತ ಸೇನಾನಿ ಕೆ.ಬಿ.ಲವ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ಸ್ವಾತಂತ್ರ್ಯಕ್ಕಾಗಿ ಹಲವಾರು ವೀರರು ಮಡಿದಿದ್ದಾರೆ. ಅವರ ತ್ಯಾಗ ಬಲಿದಾನ, ಹೋರಾಟದ ಪ್ರತಿಫಲವನ್ನು ನಾವಿಂದು ಅನುಭವಿಸುತ್ತಿದ್ದೇವೆ. ನಮ್ಮ ಹಿರಿಯರು ಹೋರಾಟದ ಬಲಿದಾನದಿಂದ ನಮ್ಮ ದೇಶವನ್ನು ಪರಕೀಯರ ದಾಸ್ಯದಿಂದ ಮುಕ್ತಗೊಳಿಸಿ ನಮ್ಮ ಕೈಗೆ ನೀಡಿದ್ದಾರೆ. ಈ ದೇಶವನ್ನು ಇನ್ನು ಉಳಿಸಿ ಬೆಳೆಸುವ ಜವಾಬ್ದಾರಿ ಯುವ ಜನತೆಯ ಮೇಲಿದೆ. ಆದ್ದರಿಂದ ಯುವ ಜನರು ಡ್ರಗ್ಸ್ ಹಾಗೂ ಮಾದಕ ವಸ್ತುಗಳಿಗೆ ದಾಸರಾಗದೆ ಮಾದಕ ವಸ್ತುಗಳ ಸೇವನೆಯಿಂದ ದೂರವಿರಬೇಕು. ಸದಾ ದೇಶ ರಕ್ಷಣೆ, ದೇಶ ಸೇವೆ ನಮ್ಮ ಗುರಿಯಾಗಬೇಕು. ಯುವ ಜನತೆ ಸೇನೆಗೆ ಸೇರಲು ದೇಶ ಸೇವೆ ಮಾಡಲು ಸದಾ ಉತ್ಸುಕರಾಗಿ ಸಿದ್ದರಾಗಿರಬೇಕು ಎಂದರು. ಪದವಿ ಕಾಲೇಜಿ ಪ್ರಾಂಶುಪಾಲ ಬೆನಡಿಕ್ಟ್ ಆರ್.ಸಲ್ದಾನ ಮಾತನಾಡಿ, ನಾವಿಂದು ಅನುಭವಿಸುತ್ತಿರುವ ಸ್ವಾತಂತ್ರ್ಯ…

Read More

ಮಡಿಕೇರಿ ಆ.15 NEWS DESK : ಕೊಡಗು ಗೌಡ ಸಮಾಜಗಳ ಒಕ್ಕೂಟದ ವತಿಯಿಂದ ಮಡಿಕೇರಿ ನಗರದಲ್ಲಿ 78ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಸ್ವಾತಂತ್ರ್ಯ ಹೋರಾಟಗಾರ ಸುಬೇದಾರ್ ಗುಡ್ಡೆಮನೆ ಅಪ್ಪಯ್ಯ ಗೌಡರ ಪ್ರತಿಮೆ ಎದುರು ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿಗಳ ಶೌರ್ಯ ಪ್ರಶಸ್ತಿ ವಿಜೇತರಾದ ಸಿಆರ್‌ಪಿಎಫ್ ನ ನಿವೃತ್ತ ಡಿಐಜಿಪಿ ಆಮೆ ಸೀತಾರಾಮ್ ಧ್ವಜಾರೋಹಣ ನೆರವೇರಿಸಿದರು. ನಂತರ ಮಾತನಾಡಿದ ಅವರು ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಹೋರಾಟಗಾರರ ತ್ಯಾಗ ಬಲಿದಾನವನ್ನು ಸರ್ವರೂ ಗೌರವಿಸಬೇಕು ಎಂದು. ಗೌಡ ಸಮಾಜಗಳ ಒಕ್ಕೂಟದ ಅಧ್ಯಕ್ಷ ಸೂರ್ತಲೆ ಆರ್.ಸೋಮಣ್ಣ ಹಾಗೂ ನಿವೃತ್ತ ಸೈನಿಕ ಚೆರಿಯಮನೆ ಜಿ.ವಿಜಯ ಅವರು ಸ್ವಾತಂತ್ರ್ಯೋತ್ಸವದ ಸಂದೇಶ ನೀಡಿದರು. ಇದಕ್ಕೂ ಮೊದಲು ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಹಾಗೂ ಬ್ರಿಟಿಷರಿಂದ ಗಲ್ಲಿಗೇರಿಸಲ್ಪಟ್ಟ ಸ್ವಾತಂತ್ರ್ಯ ಹೋರಾಟಗಾರ ಸುಬೇದಾರ್ ಗುಡ್ಡೆಮನೆ ಅಪ್ಪಯ್ಯ ಗೌಡರ ಪ್ರತಿಮೆಗಳಿಗೆ ಪ್ರಮುಖರು ಪುಷ್ಪ ನಮನ ಸಲ್ಲಿಸಿದರು. ಕೊಡಗು ಗೌಡ ಸಮಾಜ, ಕೊಡಗು ಗೌಡ ವಿದ್ಯಾ ಸಂಘ, ಕೊಡಗು ಗೌಡ ಮಹಿಳಾ ಒಕ್ಕೂಟ, ಕೊಡಗು ಗೌಡ ಯುವ ವೇದಿಕೆ, ಕೊಡಗು…

Read More

ಮಡಿಕೇರಿ ಆ.15 NEWS DESK : ಮಡಿಕೇರಿ ಮೂಡ ಕಚೇರಿಯಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ನಗರ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಿ.ವೈ.ರಾಜೇಶ್  ಧ್ವಜಾರೋಹಣ ನೆರವೇರಿಸಿದರು.ಈ ಸಂದರ್ಭ ಸದಸ್ಯರಾದ ಕಾನೆಹಿತ್ಲು ಮೊಣ್ಣಪ್ಪ, ಆರ್.ಪಿ.ಚಂದ್ರಶೇರ್, ಮಿನಾಜ್ ಪ್ರವೀಣ್, ಸುದಯ್ ನಾಣಯ್ಯ, ಪ್ರಮುಖರಾದ ಪ್ರಕಾಶ್ ಆಚಾರ್ಯ ಮತ್ತಿತರರು ಹಾಜರಿದ್ದರು.

Read More

ಕುಶಾಲನಗರ, ಆ.15 NEWS DESK : ರಾಷ್ಟ್ರ ಪ್ರೇಮದೊಂದಿಗೆ ದೇಶದ ಸಂಸ್ಕೃತಿ, ನಾಡು ನುಡಿ ಬೆಳೆಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಕೊಡಗು ವಿಶ್ವವಿದ್ಯಾಲಯ ಕನ್ನಡ ಉಪನ್ಯಾಸಕ ಡಾ.ಜಮೀರ್ ಅಹ್ಮದ್ ಹೇಳಿದರು. ಕುಶಾಲನಗರ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ಆಶ್ರಯದಲ್ಲಿ ಕುಶಾಲನಗರ ಸರಕಾರಿ ಮಾದರಿ ಪ್ರಾಥಮಿಕ ಶಾಲಾ ಆವರಣದಲ್ಲಿ ನಡೆದ 78ನೇ ಸ್ವಾತಂತ್ರ್ಯ ದಿನಾಚರಣೆ ಸಮಾರಂಭದಲ್ಲಿ ಮುಖ್ಯ ಭಾಷಣಕಾರರಾಗಿ ಪಾಲ್ಗೊಂಡು ಅವರು ಮಾತನಾಡಿದರು. ವರ್ಷದ ಎಲ್ಲಾ ದಿನಗಳಲ್ಲಿಯೂ ದೇಶಪ್ರೇಮ ಅಗತ್ಯ ಎಂದ ಅವರು, ಒಳಜಗಳ, ಅರಾಜಕತೆಯನ್ನು ಇತರರು ಲಾಭ ಪಡೆಯುವ ಆತಂಕ ಉಂಟಾಗಿದೆ. ಭಾರತೀಯ ಅಸ್ಮಿತೆಯನ್ನು ಜೀವಂತವಾಗಿಸಲು ಪ್ರತಿಯೊಬ್ಬರೂ ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದರು. ಬ್ರಿಟಿಷರು ಪಾಲಿಸಿದ್ದ ಒಡೆದು ಆಳುವ ನೀತಿ ಮತ್ತೆ ಮರುಕಳಿಸದಂತೆ ಎಚ್ಚರ ವಹಿಸಬೇಕು. ಇತಿಹಾಸವನ್ನು ತಿಳಿಯದವರು ಇತಿಹಾಸ ಸೃಷ್ಟಿ ಮಾಡಲು ಅಸಾಧ್ಯ ಎಂದು ಜಮೀರ್ ಅಹ್ಮದ್ ಹೇಳಿದರು. ಸ್ವಾತಂತ್ರ್ಯ ಕೇವಲ ದಿನಾಚರಣೆಗೆ ಸೀಮಿತ ಆಗಬಾರದು. ಪ್ರತಿಕ್ಷಣ ಸ್ವಾತಂತ್ರ್ಯದ ಬಗ್ಗೆ ಅಭಿಮಾನ ಹೊಂದಿರಬೇಕು ಎಂದು ಹೇಳಿದ ಜಮೀರ್ ಅಹ್ಮದ್ ಒಗ್ಗಟ್ಟು…

Read More

ಮೈಸೂರು ಆ.15 NEWS DESK : ಸಾಂಸ್ಕೃತಿಕ ನಗರಿ ಮೈಸೂರಿನಲ್ಲೂ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನ ಸಂಭ್ರಮದಿಂದ ಆಚರಣೆ ಮಾಡಲಾಯಿತು. ಮೈಸೂರು-ಕೊಡಗು ಕ್ಷೇತ್ರದ ಸಂಸದ ಯದುವೀರ್ ಒಡೆಯರ್ ರಾಜಮಾತೆ ಪ್ರಮೋದಾ ದೇವಿ, ಪತ್ನಿ ತ್ರಿಷಿಕಾ ಕುಮಾರಿ ಹಾಗೂ ಪುತ್ರ ಆದ್ಯವೀರ್ ನೊಂದಿಗೆ ಧ್ವಜಾರೋಹಣ ನೆರವೇರಿಸಿ ಸಂಭ್ರಮಿಸಿದರು.

Read More

ಮಡಿಕೇರಿ ಆ.15 NEWS DESK : ಕಾಟಕೇರಿಯ ಕೂರನಬಾಣೆಯಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಮದೆ ಗ್ರಾ.ಪಂ ಸದಸ್ಯೆ ಪಿ.ಎ.ಚಂದ್ರಾವತಿ ಹಾಗೂ ಬೆಟ್ಟಗೇರಿ ಗ್ರಾ.ಪಂ ಸದಸ್ಯೆ ಜಲಜಾಕ್ಷಿ ಧ್ವಜಾರೋಹಣ ನೆರವೇರಿ ದಿನದ ಮಹತ್ವ ತಿಳಿಸಿದರು. ಸ್ವಾತಂತ್ರ್ಯೋತ್ಸವವನ್ನು ಶ್ರದ್ಧಾಭಕ್ತಿಯಿಂದ ಆಚರಿಸಬೇಕು, ಸ್ವಾತಂತ್ರ್ಯಕ್ಕಾಗಿ ಬಲಿದಾನಗೈದ ಮಹನೀಯರನ್ನು ಪ್ರತಿನಿತ್ಯ ಸ್ಮರಿಸುವಂತಾಗಬೇಕು. ಅವರ ಆದರ್ಶಗಳನ್ನು ಪಾಲಿಸಬೇಕೆಂದು ಕರೆ ನೀಡಿದರು. ಈ ಸಂದರ್ಭ ಮದೆ ಗ್ರಾ.ಪಂ ಮಾಜಿ ಅಧ್ಯಕ್ಷೆ ಬಿ.ಸಿ.ಗಿರಿಜಾ, ಅಂಗನವಾಡಿ ಕಾರ್ಯಕರ್ತೆ ನಳಿನಿ ಹಾಗೂ ಶ್ರೀದೇವಿ, ಶ್ರೀ ಲಕ್ಷ್ಮಿ ಸ್ವಸಾಹ ಸಂಘದ ಪದಾಧಿಕಾರಿಗಳು, ಸ್ವಯಂ ಸೇವಾ ಸಂಘ ಮತ್ತು ಗ್ರಾಮಸ್ಥರು, ಪುಟಾಣಿ ಮಕ್ಕಳು ಹಾಜರಿದ್ದರು.

Read More

ಮಡಿಕೇರಿ ಆ.15 NEWS DESK : ರಾಜ್ಯ ಮಹಿಳಾ ಕಾಂಗ್ರೆಸ್ ನೂತನ ಅಧ್ಯಕ್ಷೆಯಾಗಿ ನೇಮಕಗೊಂಡ ಸೌಮ್ಯ ರೆಡ್ಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಾವೇರಿ ನಿವಾಸದಲ್ಲಿ ಭೇಟಿಯಾಗಿ ಧನ್ಯವಾದ ಅರ್ಪಿಸಿದರು. ಮುಖ್ಯಮಂತ್ರಿಗಳು ಶುಭ ಹಾರೈಸಿದರು.

Read More

ಮಡಿಕೇರಿ ಆ.15 NEWS DESK : ಭಾರತ ಸರ್ಕಾರ, ಯುವಜನ ವ್ಯವಹಾರ ಹಾಗೂ ಕ್ರೀಡಾ ಸಚಿವಲಯ ಸಹಯೋಗದಲ್ಲಿ ಮಡಿಕೇರಿಯ ನೆಹರು ಯುವ ಕೇಂದ್ರದಲ್ಲಿ 78ನೇ ಸ್ವಾತಂತ್ರ್ಯದಿನವನ್ನು ಆಚರಿಸಲಾಯಿತು. ಜಿಲ್ಲಾ ಯುವ ಒಕ್ಕೂಟ ಅಧ್ಯಕ್ಷ ಪಿ.ಪಿ.ಸುಕುಮಾರ್ ಧ್ವಜಾರೋಹಣ  ನೆರವೇರಿಸಿದರು. ಕಾರ್ಯಕ್ರಮದಲ್ಲಿ ಇಲಾಖೆಯ ಸಿಬ್ಬಂದಿಗಳಾದ ದೀಪ್ತಿ, ರಾಷ್ಟ್ರಿಯ ಸೇವಾ ಕಾರ್ಯಕರ್ತೆ ರಂಜಿತಾ ಹಾಗೂ ಸ್ಥಳೀಯ ಯುವಕ ಸಂಘದ ಸದಸ್ಯರು ಹಾಜರಿದ್ದರು.

Read More

ಮಡಿಕೇರಿ ಆ.15 NEWS DESK : ಸರ್ವೋದಯ ಸಮಿತಿಯಿಂದ 78ನೇ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಸರ್ವೋದಯ ಸಮಿತಿ ಅಧ್ಯಕ್ಷ  ಅಂಬೇಕಲ್ ಕುಶಾಲಪ್ಪ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭ ಸಮಿತಿ ಸದಸ್ಯರಾದ ಟಿ.ಪಿ.ರಮೇಶ್, ಪುಟ್ಟಯ ವಾಸು, ತೋರೆರ ಮುದ್ದಯ್ಯ, ರೇವತಿ ರಮೇಶ್, ಆರ್.ಪಿ.ಚಂದ್ರಶೇಖರ್, ಬೇಬಿ ಮ್ಯಾಥ್ಯು, ಸುರಯ್ಯ ಅಬ್ರಾರ್, ಮಿನಾಜ್ ಪ್ರವೀಣ್, ಬೊಳ್ಳಜಿರ ಬಿ.ಅಯ್ಯಪ್ಪ, ರಂಜಿತ್, ಕಾನೆಹಿತ್ಲು ಮೊಣ್ಣಪ್ಪ ಹಾಜರಿದ್ದರು.

Read More

ಮಡಿಕೇರಿ ಆ.15 NEWS DESK : ವಯೋಸಹಜ ಆರೋಗ್ಯ ಸಮಸ್ಯೆಯಿಂದ ಮಡಿಕೇರಿಯ ಜಿಲ್ಲಾಸ್ಪತ್ರೆಯ ತೀವ್ರ ನಿಖಾ ಘಟಕದಲ್ಲಿ ದಾಖಲಾಗಿರುವ ಕೊಡಗು ಜಿಲ್ಲಾ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಹಾಗೂ ಡಿಸಿಸಿ ಸಮಿತಿಯ ಗೌರವ ಕಾರ್ಯದರ್ಶಿ ವಿ.ಪಿ.ಸುರೇಶ್ ಅವರನ್ನು ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಭೇಟಿಯಾಗಿ ಯೋಗ ಕ್ಷೇಮವನ್ನು ವಿಚಾರಿಸಿ, ಶೀಘ್ರ ಗುಣಮುಖರಾಗುವಂತೆ ಹಾರೈಸಿದರು. ಈ ಸಂದರ್ಭ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ,  ಜಿಲ್ಲಾ ಗ್ಯಾರೆಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ  ಧರ್ಮಜ ಉತ್ತಪ್ಪ ಹಾಜರಿದ್ದರು. 

Read More